Author: AIN Author

ಬೆಂಗಳೂರು: ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಕಡೆ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ, ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣಾ ಮಳೆ ಗುಡುಗು ಸಹಿತ ಸುರಿಯಬಹುದು. ಅದರಲ್ಲೂ ಕರಾವಳಿ ಭಾಗದ ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗುವ ಸೂಚನೆಯಿದೆ. ಇದಲ್ಲದೇ ಉತ್ತರ ಒಳನಾಡಿನ ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಭಾರೀ ಮಳೆಯಾಗಬಹುದು. ಅದೇ ರೀತಿ ದಕ್ಷಿಣಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಸೋಮವಾರದಂತೆಯೇ ಬುಧವಾರವೂ ಭಾರೀ ಮಳೆಯ ಮುನ್ಸೂಚನೆ ಕಂಡು ಬಂದಿದ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಬಹುದು. ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಯಲ್ಲಿ ಹಗುರ ಮಳೆಯಾಗಬಹುದು., ಕೆಲವೊಮ್ಮೆ ಗುಡುಗು ಸಹಿತ ಮಳೆಯೂ ಆಗಬಹಹುದು. ದಕ್ಷಿಣ ಒಳನಾಡಿನ ಜಿಲ್ಲೆಗಳಾದ…

Read More

ಅಂಕಾರಾ: ಹಮಾಸ್ ಉಗ್ರರನ್ನು (Hamas Terrorist) ಸರ್ವನಾಶ ಮಾಡುವ ಗುರಿಯೊಂದಿಗೆ ಮುನ್ನುಗ್ಗುತ್ತಿರುವ ಇಸ್ರೇಲ್ (Israel) ಗಾಜಾ ಮೇಲೆ ಭೀಕರ ದಾಳಿಯನ್ನು ಮುಂದುವರೆಸಿದೆ. ಈ ಹೊತ್ತಲ್ಲಿಯೇ ಮಹತ್ವದ ಬೆಳವಣಿಗೆ ನಡೆದಿದ್ದು ಗಾಜಾ ನಗರವನ್ನು ಎರಡಾಗಿ ವಿಭಜಿಸಿರುವುದಾಗಿ (Split Gaza in Two) ಇಸ್ರೇಲ್ ಸೇನೆ ಘೋಷಿಸಿದೆ. https://twitter.com/IDF/status/1721118911486115987?ref_src=twsrc%5Etfw%7Ctwcamp%5Etweetembed%7Ctwterm%5E1721118911486115987%7Ctwgr%5E7562b0938e405cbb6308e3c7a60fd0d9762e2339%7Ctwcon%5Es1_&ref_url=https%3A%2F%2Fpublictv.in%2Fisrael-hamas-war-israeli-military-says-it-split-gaza-in-two-both-sides-cut-off-from-one-another%2F ಇದು ಅತ್ಯಂತ ಪ್ರಮುಖ ಘಟ್ಟ. ನಾವು ಇನ್ನಷ್ಟು ಜೋರಾಗಿ ದಾಳಿ ಮಾಡಲಿದ್ದೇವೆ ಎಂದು ಪ್ರಕಟಿಸಿದೆ. ಈಗಾಗಲೇ ದಕ್ಷಿಣ ಗಾಜಾ ಪ್ರಾಂತ್ಯವನ್ನು ತಲುಪಿರುವ ಐಡಿಎಫ್ (IDF) ಮುಂದಿನ 48 ಗಂಟೆಯಲ್ಲಿ ಉತ್ತರ ದಿಕ್ಕಿನಿಂದಲೂ ಗಾಜಾವನ್ನು ಪ್ರವೇಶಿಸುವ ಸಾಧ್ಯತೆಯಿದೆ. ನಾವು ಗೆಲ್ಲುವವರೆಗೂ ಯುದ್ಧ ನಿಲ್ಲಿಸುವುದಿಲ್ಲ ಎಂದು ಎಂದು ಇಸ್ರೇಲ್ ಪ್ರಧಾನಿ ನೆತನ್ಯಾಹು ಘೋಷಿಸಿದ್ದಾರೆ. https://ainlivenews.com/supreme-ray-healing-centre-reiki-treatment/ ಮಾಧ್ಯಮಗಳ ಜೊತೆ ಮಾತನಾಡಿದ ರಿಯರ್‌ ಅಡ್ಮಿರಲ್‌ ಡೆನಿಯಲ್‌ ಹಗರಿ, ಇಸ್ರೇಲ್ ಸೇನೆಯು ಗಾಜಾ ನಗರವನ್ನು ಸುತ್ತುವರೆದಿದೆ. ಮುತ್ತಿಗೆ ಹಾಕಿದ ನಂತರ ಉತ್ತರ ಗಾಜಾ ಮತ್ತು ದಕ್ಷಿಣ ಗಾಜಾ ಎಂದು ವಿಭಜಿಸಲಾಗಿದೆ. ಎರಡು ನಗರಗಳ ಮಧ್ಯೆ ಸಂಪರ್ಕ ಕಡಿತ ಮಾಡಲಾಗಿದೆ. ಹಮಾಸ್‌ ವಿರುದ್ಧದ ಯುದ್ಧದಲ್ಲಿ…

Read More

ಬೀದರ್ ;- ಮತ್ತೊಮ್ಮೆ ಮೋದಿ ಗೆದ್ದರೆ ಪ್ರಜಾಪ್ರಭುತ್ವ ಉಳಿಯಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯವರು ನಕಲಿ ರಾಷ್ಟ್ರವಾದಿಗಳಾಗಿದ್ದು, ಇಂಥವರಿಗೆ ಎಲ್ಲರೂ ಸೇರಿಕೊಂಡು ಸೋಲಿಸಬೇಕಾಗಿದೆ ಎಂದರು. ಕೋಮುವಾದಿ ಬಿಜೆಪಿ ಪಕ್ಷವನ್ನು ಬುಡ ಸಮೇತ ಕಿತ್ತು ಹಾಕಬೇಕು. ಬೀದರ್ ಜಿಲ್ಲೆಯಲ್ಲಿ ನಾವಿಬ್ಬರೂ ಶಾಸಕರಾಗಿ ಗೆದ್ದು ಸಚಿವರಾಗಿದ್ದೇವೆ. ರಾಜ್ಯದಲ್ಲಿ ನಮ್ಮ ಸರ್ಕಾರ ಜನರಿಗೆ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದೆ. ಈಗ ನಮ್ಮ ಯೋಜನೆಗಳು ಜನರಿಗೆ ತಿಳಿ ಹೇಳುವ ಕೆಲಸ ಮಾಡಬೇಕಾಗಿದೆ ಎಂದರು. ನಮ್ಮ ಸರ್ಕಾರದ ಶಕ್ತಿ, ಗೃಹಲಕ್ಷ್ಮಿ, ಉಚಿತ ವಿದ್ಯುತ್‌, ಅನ್ನ ಭಾಗ್ಯ ಹೀಗೆ ವಿವಿಧ ಯೋಜನೆಗಳಡಿ ಜಿಲ್ಲೆಗೆ ಸುಮಾರು 1400 ಕೋಟಿ ರು. ಅವರವರ ಖಾತೆಗೆ ನೇರವಾಗಿ ಸೇರುತ್ತಿದೆ. ಬರುವ ಜನವರಿಯಲ್ಲಿ ನಿರುದ್ಯೋಗ ಪದವೀಧರರಿಗೆ ಕೂಡ ಸೌಲಭ್ಯ ನೀಡುತ್ತೇವೆ ಎಂದ ಅವರು, ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾಗಿದ್ದರಿಂದ ಮಧ್ಯಪ್ರದೇಶ, ರಾಜಸ್ಥಾನದಲ್ಲಿನ ಕಾಂಗ್ರೆಸ್‌ ಪಕ್ಷದ ಮುಖಂಡರಿಗೆ ಹುಮ್ಮಸ್ಸು ಬಂದಿದೆ ಎಂದರು. ಲೋಕಸಭೆಯ ಚುನಾವಣೆಯಲ್ಲಿ…

Read More

ಬೆಂಗಳೂರು;- 25 ಸಾಧಕರಿಗೆ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿ ಲಭಿಸಿದೆ. ಇಂಟರಾಕ್ಟೀವ್ ಫೋರಮ್ ಆನ್ ಇಂಡಿಯನ್ ಎಕಾನಮಿಯಿಂದ ವಿಜ್ಞಾನಿ ಡಾ. ಸಿ.ಎನ್.ಆರ್.ರಾವ್, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಮತ್ತು ವಿಆರ್​ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಸೇರಿ ವಿವಿಧ ಕ್ಷೇತ್ರಗಳ 25 ಸಾಧಕರಿಗೆ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾರತ್ತಹಳ್ಳಿಯ ಹೊರ ವರ್ತಲ ರಸ್ತೆಯಲ್ಲಿರುವ ಖಾಸಗಿ ಹೋಟೆಲ್​ನಲ್ಲಿ ಮಂಗಳವಾರ ಕಲೆ, ವಿಜ್ಞಾನ, ತಂತ್ರಜ್ಞಾನ, ರಾಜಕೀಯ, ಸಿನಿಮಾ, ಸಮಾಜ ಸೇವೆ ಸೇರಿ ವಿವಿಧ ಕ್ಷೇತ್ರಗಳ ಸಾಧಕರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳೂ ಆಗಿರುವ ಪ್ರಶಸ್ತಿ ಆಯ್ಕೆ ಸಮಿತಿ ಉಪಾಧ್ಯಕ್ಷ ಕೆ.ಜಿ. ಬಾಲಕೃಷ್ಣನ್ ಮತ್ತು ವೇದಿಕೆ ಅಧ್ಯಕ್ಷ ನ್ಯಾ. ಜ್ಞಾನ್ ಸುಧಾ ಮಿಶ್ರಾ ಅವರು ಗಣ್ಯರನ್ನು ಸನ್ಮಾನಿಸಿದರು. ಪ್ರಶಸ್ತಿ ಪ್ರದಾನದ ಬಳಿಕ ಮಾತನಾಡಿದ ರಾಜ್ಯಪಾಲರು, ‘ಸರ್ವೆ ಭವಂತು ಸುಖಿನಃ ಸರ್ವೆ ಸಂತು ನಿರಾಮಯಾಃ’ ಎಂಬ…

Read More

ಸಾಮಾನ್ಯವಾಗಿ ಜ್ವರ, ವಸಡಿನ ಸಮಸ್ಯೆ, ಹೊಟ್ಟೆ ಕೆಟ್ಟಾಗ ಏನು ರುಚಿಸುವುದಿಲ್ಲ. ನಾಲಿಗೆಗೆ ರುಚಿಯೇ ತಿಳಿಯುವುದಿಲ್ಲ. ಏನು ತಿಂದರೂ ಸಪ್ಪೆ ಅನುಭವವಾಗುತ್ತದೆ. ಇದನ್ನು ನಾಲಿಗೆ ಕೆಡುವುದು ಎನ್ನುತ್ತಾರೆ. ಇತ್ತೀಚಿನ ದಿನಗಳಲ್ಲಿ ರುಚಿ ಇಲ್ಲದಿರುವುದನ್ನು ರೋಗದ ಲಕ್ಷಣವೆಂದೂ ಹೇಳುತ್ತಾರೆ. ಆದರೆ ಬಹುತೇಕ ಸಂದರ್ಭಗಳಲ್ಲಿ ವೈರಲ್‌ ಜ್ವರದ ನಂತರ, ಹಲ್ಲಿನ ಸಮಸ್ಯೆಗಳಿದ್ದರೆ ನಾಲಿಗೆಗೆ ಆಹಾರ ರುಚಿಸುವುದಿಲ್ಲ. ಇದಕ್ಕೆ ಗಾಬರಿಪಡುವ ಅಗತ್ಯವಿಲ್ಲ ಮನೆಮದ್ದಿನಿಂದ ನಾಲಿಗೆಯ ರುಚಿಯನ್ನು ಸರಿಪಡಿಸಬಹುದು. ಶುಂಠಿಯ ಜ್ಯೂಸ್‌ ನಾಲಿಗೆ ರುಚಿಯನ್ನು ಕಳೆದುಕೊಂಡಿದೆ, ಏನೂ ಆಹಾರ ರುಚಿಸುತ್ತಿಲ್ಲ ಎನ್ನುವ ಸಮಸ್ಯೆಗೆ ಶುಂಠಿ ಸಹಾಯ ಮಾಡುತ್ತದೆ. ಶುಂಠಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರಿಪಡಿಸುತ್ತದೆ. ಇದರಿಂದ ನಾಲಿಗೆಯೂ ಆರೋಗ್ಯವಾಗಿರುತ್ತದೆ. ಹೀಗೆ ಮಾಡಿ ಶುಂಠಿಯನ್ನು ಜಜ್ಜಿ ಅದರ ರಸವನ್ನು ತೆಗೆದುಕೊಳ್ಳಿ. ಅರ್ಧ ಚಮಚ ಶುಂಠಿ ರಸಕ್ಕೆ ಚಿಟಿಕೆ ಉಪ್ಪನ್ನು ಸೇರಿಸಿ ಸೇವಿಸಿ. ಅಥವಾ ಶುಂಠಿಯನ್ನು ಹಾಗೆಯೇ ಜಗಿಯಬಹುದು. ಇದರಿಂದ ನಾಲಿಗೆ ರುಚಿಯೂ ಸರಿಯಾಗುತ್ತದೆ. ಹೊಟ್ಟೆಯ ಸಮಸ್ಯೆ ಇದ್ದರೆ ಅದು ಕೂಡ ಶಮನವಾಗುತ್ತದೆ. ಕಾಳು ಮೆಣಸಿನ ಪುಡಿ ಅತ್ಯುತ್ತಮ ಮಸಾಲೆ ಪದಾರ್ಥಗಳಲ್ಲಿ ಕಾಳು…

Read More

ಮುಂಬೈ: ಆ್ಯಪ್ ಮೂಲಕ ಲೈವ್‌ ಸೆಕ್ಸ್‌ ಶೋ (Live Sex Show) ನಡೆಸುತ್ತಿದ್ದ ಇಬ್ಬರು ನಟಿ ಮತ್ತು ಓರ್ವ ಯುವಕನನ್ನು ಮುಂಬೈ ಪೊಲೀಸರು (Mumbi Police) ಬಂಧಿಸಿದ್ದಾರೆ. ಗೂಗಲ್‌ ಪ್ಲೇ ಸ್ಟೋರಲ್ಲಿ ಲಭ್ಯವಿದ್ದ Pihu Official App ಹೆಸರಿನ ಮೂಲಕ ಮೂವರು ಈ ದಂಧೆ ನಡೆಸುತ್ತಿದ್ದರು. ಈ ಲೈವ್‌ ಶೋಗೆ ಗ್ರಾಹಕರಿಂದ 1 ಸಾವಿರ ರೂ. ನಿಂದ ಆರಂಭವಾಗಿ 10 ಸಾವಿರ ರೂ. ಶುಲ್ಕ ವಿಧಿಸುತ್ತಿದ್ದರು. https://ainlivenews.com/supreme-ray-healing-centre-reiki-treatment/ ಖಚಿತ ಮಾಹಿತಿ ಆಧಾರದಲ್ಲಿ ವೆರ್ಸೋವಾ ಪೊಲೀಸರು ವರ್ಸೋವಾದಲ್ಲಿದ್ದ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ನಂತರ ತನಿಶಾ ರಾಜೇಶ್ ಕನೋಜಿಯಾ(20), ತಮನ್ನಾ ಆರಿಫ್ ಖಾನ್ (34) ರುದ್ರ ನಾರಾಯಣ ರಾವುತ್(27) ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ (IT) ಕಾಯ್ದೆಯ ಸಂಬಂಧಿಸಿದ ಸೆಕ್ಷನ್‌ ಆಡಿ ಕೇಸ್‌ ದಾಖಲಾಗಿದೆ. ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವುದು, ಕಂಪ್ಯೂಟರ್ ಸಾಧನಗಳ ಮೂಲಕ ಅಶ್ಲೀಲತೆಯಲ್ಲಿ ಭಾಗವಹಿಸಿದ ಆರೋಪ ಇವರ ಮೇಲಿದೆ.

Read More

ಇಂಗ್ಲೆಂಡ್ ತಂಡ ತನ್ನ 8ನೇ ಲೀಗ್ ಪಂದ್ಯದಲ್ಲಿ ಬುಧವಾರ ನೆದರ್ಲೆಂಡ್ ತಂಡವನ್ನು ಎದುರಿಸಲಿದೆ. ಟೂರ್ನಿಯಲ್ಲಿ ಕಳಪೆ ನಿರ್ವಹಣೆಯೊಂದಿಗೆ ಆಡಿರುವ 7 ಪಂದ್ಯಗಳಲ್ಲಿ ಕೇವಲ 1ರಲ್ಲಿ ಗೆದ್ದು, 6ರಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಅರ್ಹತೆಯಿಂದಲೂ ವಂಚಿತವಾಗುವ ಭೀತಿಯಲ್ಲಿದೆ. ಇನ್ನು ನೆದರ್ಲೆಂಡ್ ಕೂಡ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 2 ಗೆಲುವು, 5ರಲ್ಲಿ ಸೋಲು ಅನುಭವಿಸಿದ್ದು, ಅಂಕಪಟ್ಟಿಯಲ್ಲಿ ಆಂಗ್ಲರಿಗಿಂತ ತುಸು ಮೇಲೆ ಅಂದರೆ, 9ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆದ್ದರೆ ಡಚ್ಚರಿಗೂ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯುವ ಅವಕಾಶವಿರಲಿದೆ. ಇದೇ ಮೊದಲ ಬಾರಿಗೆ ವಿಶ್ವಕಪ್ ಆವೃತ್ತಿಯೊಂದರಲ್ಲಿ 6 ಪಂದ್ಯಗಳಲ್ಲಿ ಸೋಲುಂಡಿರುವ ಕ್ರಿಕೆಟ್ ಜನಕರು, ಉಳಿದಿರುವ 2 ಪಂದ್ಯಗಳಲ್ಲಿ ಚೇತೋಹಾರಿ ನಿರ್ವಹಣೆ ಮೂಲಕ ಟೂರ್ನಿಗೆ ವಿದಾಯ ಹೇಳುವ ಹಂಬಲದಲ್ಲಿದ್ದಾರೆ. ಟೂರ್ನಿಯಲ್ಲಿ ಬ್ಯಾಟರ್‌ಗಳ ವೈಲ್ಯ ಆಂಗ್ಲರಿಗೆ ಪ್ರಮುಖ ಹಿನ್ನಡೆಯಾಗಿದೆ. ಜಾನಿ ಬೇರ್‌ಸ್ಟೋ, ಡೇವಿಡ್ ಮಲಾನ್ ನಿರೀಕ್ಷಿತ ಆರಂಭ ಒದಗಿಸುವಲ್ಲಿ ಎಡವಿದರೆ, ಅನುಭವಿ ಜೋ ರೂಟ್ ಅಸ್ಥಿರ ನಿರ್ವಹಣೆ…

Read More

ಹುಬ್ಬಳ್ಳಿ : ಸಮೀಪದ ಕುಂದಗೋಳ ತಾಲ್ಲೂಕಿನ ಗುಡಿಗೇರಿಯ ಪೊಲೀಸ್‌ ಠಾಣೆಯ ಎಎಸ್‌ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಅವರು ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ಧಾರೆ. ‘ಸೋಮವಾರ ರಾತ್ರಿ ಪಾಳಿ ಕಾರ್ಯನಿರ್ವಹಿಸಿ ಹೋಗಿದ್ದ ಅವರು ವಸತಿ ಗೃಹದ ಆವರಣದ ಬಳಿ ದೇಗುಲ ಭಾಗದಲ್ಲಿ ಮಲಗಿದ್ಧಾರೆ. ಮಂಗಳವಾರ ಮಧ್ಯಾಹ್ನ ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ನಂತರ ಮಂಗ ತಡರಾತ್ರಿವರೆಗೂ ಅವರನ್ನು ಲಕ್ಷ್ಮೇಶ್ವರ ಆಸ್ಪತ್ರೆ ಒಯ್ಯಲಾಯಿತು ಅವರು ಮೃತಪಟ್ಟಿದ್ದರು’ ಎಂದು ಪೊಲೀಸರು ತಿಳಿಸಿದ್ಧಾರೆ. ‘ಎಎಸ್‌ಐ ಬಸವರಾಜ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಅವರು ಕೆಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು ಎಂದು ಅವರ ಜತೆಗಿದ್ದವರು ಎಂದು ತಿಳಿದು ಬಂದಿದೆ . ಬಸವರಾಜ ಅವರು ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಶಾಂತಗಿರಿ ಗ್ರಾಮದವರು. ಅವರಿಗೆ ಪತ್ನಿ.ಮೂವರು ಮಕ್ಕಳು ಇದ್ಧಾರೆ.

Read More

ವಾಷಿಂಗ್ಟನ್: 2020 ರಲ್ಲಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಂದಿದ್ದ (Murder) ಭಾರತೀಯ ವ್ಯಕ್ತಿಗೆ (Indian) ಫ್ಲೋರಿಡಾದ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು (Life Sentence) ವಿಧಿಸಿದೆ.  ವರದಿಗಳ ಪ್ರಕಾರ ದೋಷಿ ಫಿಲಿಪ್ ಮ್ಯಾಥ್ಯೂ ತನ್ನ ಪತ್ನಿ ಮೆರಿನ್ ಜಾಯ್‌ಗೆ 2020ರಲ್ಲಿ 17 ಬಾರಿ ಚಾಕುವಿನಿಂದ ಇರಿದು ಮಾತ್ರವಲ್ಲದೇ ಆಕೆಯ ಕಾರನ್ನು ತೆಗೆದುಕೊಂಡು ಆಕೆಯ ದೇಹದ ಮೇಲೆ ಹರಿಸಿ, ಸ್ಥಳದಿಂದ ಪರಿಯಾಗಿದ್ದ. ದಂಪತಿ ಮೂಲತಃ ಕೇರಳದವರು. ಕೇರಳದ (Kerala) ಕೊಟ್ಟಾಯಂ ಮೂಲದ ಮೆರಿನ್ ಜಾಯ್ ಅಮೆರಿಕದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ಹೊರಗಡೆ ಆಕೆಯ ಪತಿ ಮ್ಯಾಥ್ಯೂ ಬರ್ಬರವಾಗಿ ಹತ್ಯೆ ಮಾಡಿದ್ದ. ಘಟನೆ ಬಳಿಕ ಜಾಯ್‌ನ ಸಹೋದ್ಯೋಗಿಯೊಬ್ಬರು ವ್ಯಕ್ತಿಯೊಬ್ಬ ಆಕೆಯ ದೇಹದ ಮೇಲೆ ಕಾರನ್ನು ಓಡಿಸಿದ್ದನ್ನು ನೋಡಿದ್ದಾಗಿ ತಿಳಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆಕೆಗೆ ಪದೇ ಪದೇ ಅಳಲು ಮಾತ್ರವೇ ಸಾಧ್ಯವಾಗುತ್ತಿತ್ತು. ಈ ವೇಳೆ ಆಕೆ ತನಗೆ ಒಂದು ಮಗುವಿದೆ ಎಂದು ಹೇಳಿದ್ದಾಗಿ ತಿಳಿಸಿದ್ದರು. https://ainlivenews.com/supreme-ray-healing-centre-reiki-treatment/ ಜಾಯ್ ಸಾವನ್ನಪ್ಪುವುದಕ್ಕೂ ಮುನ್ನ ಪತಿಯ ಬಗ್ಗೆ ಹೇಳಿದ್ದಳು. ಇದರಿಂದ…

Read More

ಕಲಬುರ್ಗಿ;- ಕಾರ್ಮಿಕರ ಕಾರ್ಡ್‌ಗೆ ಹೊಸ ನಿಯಮ ಜಾರಿಗೆ ತರಲಾಗುತ್ತದೆ ಎಂದು ಸಚಿವ ಸಂತೋಷ ಲಾಡ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಶೇ 70ರಷ್ಟು ಕಾರ್ಮಿಕ ಕಾರ್ಡ್‌ಗಳು ನಕಲಿ ಕಾರ್ಡ್‌ಗಳಾಗಿ‌ದ್ದು, ನಕಲಿ ಹಾವಳಿ ತಡೆಗೆ ಹೊಸ ನಿಯಮಗಳನ್ನು ತರಲಾಗುವುದು. ಕಳೆದ ಮೂರು ವರ್ಷಗಳಲ್ಲಿ 39 ಲಕ್ಷ ಕಾರ್ಡ್‌ಗಳು ಏರಿಕೆಯಾಗಿವೆ. ಒಟ್ಟು 45 ಲಕ್ಷ ಕಾರ್ಮಿಕ ಕಾರ್ಡ್‌ಗಳಿದ್ದು, ಹಾವೇರಿ ಜಿಲ್ಲೆಯಲ್ಲೇ 3 ಲಕ್ಷ ಕಾರ್ಡ್‌ಗಳಿವೆ. ಹೀಗಾಗಿ, ನಕಲಿ ಕಾರ್ಡ್‌ಗಳನ್ನು ಸ್ವಚ್ಛ ಮಾಡಬೇಕಿದೆ’ ಎಂದರು. ‘ಶುದ್ಧತೆಯನ್ನು ರಾತ್ರೋರಾತ್ರಿ ಮಾಡಲು ಆಗುವುದಿಲ್ಲ. ಇದಕ್ಕೆ ಕಾಲಾವಕಾಶ ಬೇಕಾಗುತ್ತದೆ. ಹೊಸ ಅರ್ಜಿ, ನವೀಕರಣಕ್ಕಾಗಿ ಹೊಸ ನಿಯಮಗಳನ್ನು ಹಾಕುತ್ತೇವೆ. ಇದಕ್ಕೆ ಕಾರ್ಮಿಕ ಸಂಘಟನೆಗಳು ಸಹಕರಿಸಬೇಕು. ಕೆಲವು ದಿನಗಳಲ್ಲಿ ಕಾರ್ಮಿಕರ ಮಕ್ಕಳ 6 ಲಕ್ಷ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಪಾವತಿ ಮಾಡಲಾಗುವುದು’ ಎಂದು ಹೇಳಿದರು.

Read More