Author: AIN Author

ಪಾದಗಳು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇಡೀ ದೇಹದ ಭಾರವನ್ನು ಹೊತ್ತು ನಡೆಯುವ ಕೆಲಸ ಪಾದಗಳದ್ದು. ಹೀಗಿರುವಾಗ ಪಾದಗಳ ಆರೈಕೆಯನ್ನು ಮಾಡಿಕೊಳ್ಳಲೇಬೇಕು. ಕೆಲವೊಮ್ಮೆ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪಾದಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಇನ್ನು ಕೆಲವೊಮ್ಮೆ ಹೆಚ್ಚು ನಡೆದರೆ, ದೇಹದ ತೂಕ ಅತಿಯಾಗಿದ್ದರೆ ಪಾದದ ಮೇಲೆ ಭಾರ ಬಿದ್ದಾಗ ನೋವು ಉಂಟಾಗುತ್ತದೆ. ಇದಕ್ಕೆ ಮನೆಯಲ್ಲೇ ಒಂದಷ್ಟು ಪರಿಹಾರಗಳನ್ನು ಕಂಡುಕೊಳ್ಳಬಹುದು. ಪಾದಗಳ ನೋವಿಗೆ ಏನೆಲ್ಲಾ ಮದ್ದು ಮಾಡಬಹುದು ಎನ್ನುವ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ. ಸಾಸಿವೆ ಬೀಜಗಳು ಸಾಸಿವೆ ಬೀಜಗಳನ್ನು ಎಣ್ಣೆ ತಯಾರಿಸಲು ಮತ್ತು ಟೆಂಪರಿಂಗ್‌ಗೆ ಮಸಾಲೆಗಳಾಗಿ ಬಳಸಲಾಗುತ್ತದೆ. ಆದರೆ ಸಾಸಿವೆ ಬೀಜಗಳು ಪಾದದ ನೋವನ್ನು ನಿವಾರಿಸುತ್ತದೆ. ಈ ಬೀಜವನ್ನು ಸಣ್ಣ ಬಟ್ಟಲಿನಲ್ಲಿ ಪುಡಿಮಾಡಿ. ಅವುಗಳನ್ನು ಬಕೆಟ್ ಬಿಸಿ ನೀರಿನಲ್ಲಿ ಬೆರೆಸಿ. ನಿಮ್ಮ ಪಾದಗಳನ್ನು ಈ ನೀರಿನಲ್ಲಿ 15 ನಿಮಿಷಗಳ ಕಾಲ ಇರಿಸಿ. ಹೀಗೆ ಮಾಡುವುದರಿಂದ ನೀವು ಪಾದದ ನೋವಿನಿಂದ ಪರಿಹಾರ ಪಡೆಯಬಹುದು. ಬಿಸಿ ನೀರಿನ ಶಾಖ ಪಾದಗಳು ನೋಯುತ್ತಿದ್ದರೆ ಬಿಸಿ ನೀರಿನ…

Read More

ವಾಟ್ಸ್​ಆಪ್​(WhatsApp) ಬಳಕೆದಾರರಿಗೆ ಇದು ಗುಡ್​ ನ್ಯೂಸ್. ವಾಟ್ಸ್​ಆಪ್​(WhatsApp)ನಲ್ಲಿ ಮತ್ತೊಂದು ಹೊಸ ಫೀಚರ್(ವೈಶಿಷ್ಟ್ಯ) ಲಭ್ಯವಿದೆ. ಇನ್ನುಮುಂದೆ ಬಳಕೆದಾರರು ಒಂದೇ ಮೊಬೈಲ್​(ಫೋನ್)ನಲ್ಲಿ ಎರಡು ವಾಟ್ಸ್​ಆಪ್​ ಅಕೌಂಟ್​ಗಳನ್ನು ಬಳಸಲು ಸಾಧ್ಯವಾಗಲಿದೆ. ವಾಟ್ಸ್​ಆಪ್​ ಖಾತೆಯಲ್ಲಿನ ಕ್ಯೂಆರ್​(QR) ಕೋಡ್​ ಆಯ್ಕೆಯಲ್ಲಿ ಬಾಣದ ಐಕಾನ್​ ಸಹಾಯದಿಂದ ಬಳಕೆದಾರರು ಇನ್ನೊಂದು ಅಕೌಂಟ್​(ಖಾತೆ) ಅನ್ನು ಸೇರಿಸಬಹುದಾಗಿದೆ. ಇವರಿಗೆ ಮಾತ್ರ ಹೊಸ ಫೀಚರ್ ಪ್ರಸ್ತುತ ಈ ಫೀಚರ್ ವಾಟ್ಸ್​ಆಪ್​(WhatsApp) ಬೀಟಾ ಬಳಕೆದಾರರಿಗೆ ಮಾತ್ರ ಲಭ್ಯವಿರಲಿದೆ. ಶೀಘ್ರದಲ್ಲಿಯೇ ಎಲ್ಲಾ ಬಳಕೆದಾರರಿಗೂ ಈ ಫೀಚರ್ ಲಭ್ಯವಾಗಲಿದೆ. ಜನಪ್ರಿಯ ಮೆಸೇಜಿಂಗ್ ಆಪ್ ಇಂದು ವಿವಿಧ ಕ್ಷೇತ್ರಗಳಲ್ಲಿ ಬಳಕೆಯಾಗುತ್ತಿದೆ. ವಾಟ್ಸ್​ಆಪ್ ಸಂವಹನ ನಿರೀಕ್ಷೆಗೂ ಮೀರಿ ನಿಂತಿದೆ. ಬಳಕೆದಾರರಿಗೆ ಹೊಸ ಹೊಸ ಫೀಚರ್​ಗಳನ್ನು ಪರಿಚಯಿಸುತ್ತಿದೆ.

Read More

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ…

Read More

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಇಂದು ನಮ್ಮ ಜೀವನದ ಬಹು ಮುಖ್ಯವಾದ ಮನೆಯ ಮತ್ತು ಅಂಗಡಿಯ ವಾಸ್ತುಶಾಸ್ತ್ರದ, ಈ ಕೆಳಕಂಡಂತೆ ಕೆಲವು ಸಲಹೆಗಳನ್ನು ನೀಡುತ್ತೇನೆ. ಇಲ್ಲಿ ನೀವು ವಾಸ್ತು ನಿಯಮ ಪಾಲಿಸಿದರೆ,ನೆಮ್ಮದಿಯಿಂದ ಸುಖ ಜೀವನ ನಡೆಸಬಹುದು. ಅದಕ್ಕಿದೆ ಒಂದಿಷ್ಟು ಸಲಹೆ. —-ಯಾವುದೇ ನಿವೇಶನ ಇರಲಿ ಅದರ ನೈಋತ್ಯ ಭಾಗದಲ್ಲಿ ಮನೆಯನ್ನು ಕಟ್ಟಬೇಕು. —-…

Read More

ಸೂರ್ಯೋದಯ: 06.15 AM, ಸೂರ್ಯಾಸ್ತ : 05.51 ಪಿಎಂ ಶ್ರೀ ಶೋಭಾಕೃತ ನಾಮ ಸಂವತ್ಸರ ಶಕ ಸಂವತ, ಶರತ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ ತಿಥಿ: ಇವತ್ತು ದಶಮಿ 08:23 AM ತನಕ ನಂತರ ಏಕಾದಶಿ ನಕ್ಷತ್ರ: ಇವತ್ತು ಪುಬ್ಬಾ 07:19 PM ತನಕ ನಂತರ ಉತ್ತರ ಫಾಲ್ಗುಣಿ ಯೋಗ: ಇವತ್ತು ಇಂದ್ರ 04:11 PM ತನಕ ನಂತರ ವೈಧೃತಿ ಕರಣ: ಇವತ್ತು ವಿಷ್ಟಿ 08:23 AM ತನಕ ನಂತರ ಬವ 09:34 PM ತನಕ ನಂತರ ಬಾಲವ ರಾಹು ಕಾಲ: 12:00 ನಿಂದ 01:30 ವರೆಗೂ ಯಮಗಂಡ: 07:30 ನಿಂದ 09:00 ವರೆಗೂ ಗುಳಿಕ ಕಾಲ: 10:30 ನಿಂದ12:00 ವರೆಗೂ ಅಮೃತಕಾಲ: 12.09 PM to 01.56 PM ಅಭಿಜಿತ್ ಮುಹುರ್ತ: 0: ನಿಂದ 0: ವರೆಗೂ ಮೇಷ : ಸಂಗಾತಿ ನಡೆಸುವ ವ್ಯವಹಾರಗಳಲ್ಲಿ ಧನ ಲಾಭ, ಆಸ್ತಿಗೆ ಸಂಬಂಧಿಸಿದ ದಾಖಲಾತಿಗಳು ಪಡೆಯುವಿರಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಗಾರರಿಗೆ…

Read More

ಲಿಸ್ಬನ್;- ಭ್ರಷ್ಟಾಚಾರ ಆರೋಪ ಹಿನ್ನೆಲೆ PM ಹುದ್ದೆಗೆ ಪೋರ್ಚುಗಲ್ ಪ್ರಧಾನಿ ರಾಜೀನಾಮೆ ನೀಡಿದ್ದಾರೆ. ಭ್ರಷ್ಟಾಚಾರ ತನಿಖೆಯ ಭಾಗವಾಗಿ ಪ್ರಧಾನಿ ಕೋಸ್ಟಾ ಅವರ ಅಧಿಕೃತ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು. ದಾಳಿ ವೇಳೆ ಪೋರ್ಚುಗೀಸ್ ಪ್ರಧಾನ ಮಂತ್ರಿ ಕೋಸ್ಟಾ ಅವರ ಉನ್ನತ ಸಹಾಯಕರ ಬಂಧನದ ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ರಾಷ್ಟ್ರೀಯ ದೂರದರ್ಶನದ ಭಾಷಣ ವೇಳೆ ತಾವು ತಮ್ಮ ರಾಜೀನಾಮೆ ಪತ್ರವನ್ನು ಅಧ್ಯಕ್ಷರಿಗೆ ಸಲ್ಲಿಸಿದ್ದೇನೆ. ನಾನು ನ್ಯಾಯಾಂಗ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಂಬುತ್ತೇನೆ. ನನ್ನ ಆತ್ಮಸಾಕ್ಷಿಯು ಯಾವುದೇ ಕಾನೂನುಬಾಹಿರ ಅಥವಾ ಖಂಡನೆಗೆ ಒಳಗಾದ ಕೃತ್ಯದಿಂದ ಸ್ಪಷ್ಟವಾಗಿದೆ. ಪೋರ್ಚುಗೀಸ್ ಜನರ ಕಣ್ಣಲ್ಲಿ ಕಣ್ಣಿಟ್ಟು ಹೇಳಲು ಬಯಸುತ್ತೇನೆ ಎಂದರು.

Read More

ಕೊರಟಗೆರೆ;- ರೈತರ ಬದುಕು ಆತಂಕದ ಸ್ಥಿತಿಗೆ ತಲುಪಿದೆ ಎಂದು ಸರಕಾರದ ವಿರುದ್ಧ ಯಡಿಯೂರಪ್ಪ ಕಿಡಿಕಾರಿದ್ದಾರೆ. ತಾಲ್ಲೂಕಿನ ಬೋಡಬಂಡೇನಹಳ್ಳಿ ಗ್ರಾಮದ ಹತ್ತಿರದ ರೈತರ ಜಮೀನುಗಳಲ್ಲಿ ಬರ ವಿಕ್ಷಣೆ ಮಾಡಿ ಮಾತನಾಡಿ, ರಾಜ್ಯದಲ್ಲಿ ಬರ ನಿರ್ವಹಣೆ ಮಾಡುವಲ್ಲಿ ಮತ್ತು ರೈತರ ಕಷ್ಟಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದೆ ರೈತರ ಬದುಕು ಆತಂಕ ಸ್ಥಿತಿ ತಲುಪಿದೆ, ಈ ಭಾಗದಲ್ಲಿ ಮುಸುಕಿನ ಜೋಳ, ಮೆಕ್ಕೆ ಜೋಳ, ರಾಗಿ, ನೆಲಕಡಲೇ, ತೊಗರಿ ಸೇರಿದಂತೆ ಎಲ್ಲಾ ಬೆಳೆಗಳು ಸಂಪೂರ್ಣ ಹಾಳಾಗಿದ್ದು ರೈತರು ಬೆಳೆ ಕಳೆದುಕೊಂಡು ಮೇವು ದೊರೆಯದೆ ಸಂಕಷ್ಟ ಸ್ಥಿತಿಯಲ್ಲಿ ಇದ್ದಾರೆ, ಅದರೆ ಇಲ್ಲಿಯವರೆಗೆ ರಾಜ್ಯ ಸರ್ಕಾರದ ಯಾವುದೇ ಮಂತ್ರಿಗಳು ರೈತರ ಜಮೀನಿಗೆ ಬಂದು ಸ್ಥಳ ಪರಿಶೀಲನೆ ಮಾಡಿಲ್ಲ, ಬರ ಪರಿಹಾರ ನೀಡುವಲ್ಲಿ ವಿಫಲರಾಗಿದ್ದಾರೆ, ಮಂತ್ರಿಗಳು ಜನರು ಕೊಟ್ಟ ಅರ್ಜಿಯನ್ನು ತೆಗೆದುಕೊಂಡು ಹೋಗಿ ಅದಕ್ಕೆ ಯಾವುದೇ ಉತ್ತರವಾಗಲಿ ನೀಡುತ್ತಿಲ್ಲ ಪರಿಹಾರ ಒದಗುಸುತ್ತಿಲ್ಲ, ಇದರೊಂದಿಗೆ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿರುವ ರಾಜ್ಯ ಸರ್ಕಾರವು ಕೂಡಲೇ ರೈತರ…

Read More

ಗದಗ;- ಬರ ಪರಿಹಾರಕ್ಕೆ ಜಮೀನಿನ ಮಾಹಿತಿ ಒದಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಬರ ಪರಿಹಾರ ಪಡೆಯಲು ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಬೇಕು. ರೈತರು ತಮ್ಮ ಹೆಸರು, ಬ್ಯಾಂಕ್‌ ಖಾತೆ ವಿವರಗಳನ್ನು ಈಗಾಗಲೇ ದಾಖಲು ಮಾಡಿದ್ದಾರೆ. ಆದರೆ, ಒಬ್ಬ ರೈತನ ಬಳಿ ಎಷ್ಟು ಎಕರೆ ಜಮೀನು ಇದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸರ್ಕಾರ ಬರ ಪರಿಹಾರ ಪಾವತಿಸುವಾಗ ರೈತರು ಫ್ರೂಟ್ಸ್‌ ತಂತ್ರಾಂಶದಲ್ಲಿ ಎರಡು ಎಕರೆ ನಮೂದಿಸಿದ್ದರೆ ಪರಿಹಾರ ಅಷ್ಟಕ್ಕೆ ಮಾತ್ರ ಸಿಗಲಿದೆ. ಒಬ್ಬ ರೈತನಿಗೆ ಐದು ಎಕರೆ ಜಮೀನು ಇದ್ದು, ಸಂಪೂರ್ಣ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಿದ್ದರೆ ಐದು ಎಕರೆಗೂ ಪರಿಹಾರ ಸಿಗಲಿದೆ. ಆದಕಾರಣ, ಎಲ್ಲ ರೈತರು ಕೃಷಿ ಇಲಾಖೆಗೆ ತೆರಳಿ ತಮ್ಮ ಜಮೀನಿನ ಮಾಹಿತಿಯನ್ನು ನವೆಂಬರ್‌ ಅಂತ್ಯದ ಒಳಗೆ ನಮೂದಿಸಬೇಕು’ ಎಂದು ತಿಳಿಸಿದರು.

Read More

ಚೆನ್ನೈ;- ಸನಾತನ ಧರ್ಮವನ್ನು ನಾನು ಕೊನೆಯವರೆಗೂ ವಿರೋಧಿಸುತ್ತಲೇ ಇರುತ್ತೇನೆ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ತಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಎಂದಿದ್ದರು. ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಕಾನೂನು ಪರಿಣಾಮ ಎದುರಿಸಲು ಸಿದ್ಧ ಎಂದು ಹೇಳಿದ್ದರು. ನಾನೇನೂ ತಪ್ಪಾಗಿ ಹೇಳಿಲ್ಲ. ನಾನು ಹೇಳಿದ್ದು ಸರಿ, ಅದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. ನನ್ನ ಹೇಳಿಕೆಯನ್ನು ಬದಲಾಯಿಸುವುದಿಲ್ಲ. ನನ್ನ ಸಿದ್ಧಾಂತವನ್ನು ಮಾತನಾಡಿದ್ದೇನೆ. ಅಂಬೇಡ್ಕರ್, ಪೆರಿಯಾರ್ ಹೇಳಿದ್ದಕ್ಕಿಂತ ಹೆಚ್ಚಾಗಿ ಮಾತನಾಡಿಲ್ಲ. ನಾನು ಎಂಎಲ್‌ಎ ಆಗಬಹುದು, ಮಂತ್ರಿಯಾಗಬಹುದು ಅಥವಾ ಯುವ ಘಟಕದ ಕಾರ್ಯದರ್ಶಿಯಾಗಿ ನಾಳೆ ನಾನು ಇರಬಹುದು. ಆದರೆ ಮನುಷ್ಯನಾಗಿರುವುದು ಹೆಚ್ಚು ಮುಖ್ಯ ಎಂದು ತಿಳಿಸಿದ್ದಾರೆ. ನಾವು ಹಲವಾರು ವರ್ಷಗಳಿಂದ ಸನಾತನದ ಬಗ್ಗೆ ಮಾತನಾಡುತ್ತಿದ್ದೇವೆ. ಇದು ನೂರಾರು ವರ್ಷಗಳ ಸಮಸ್ಯೆಯಾಗಿದೆ. ನಾವು ಇದನ್ನು ಕೊನೆವರೆಗೂ ವಿರೋಧಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Read More

ಮಂಡ್ಯ- ನಾಲೆಗೆ ಕಾರು ಉರುಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಘಡಕ್ಕೆ ಕಾರಣ ಬಹಿರಂಗವಾಗಿದೆ. ಕಾರಿನಲ್ಲಿದ್ದ ಓರ್ವನ‌ ಮೊಬೈಲ್ ರಿಂಗ್ ಆಗ್ತಿತ್ತು. ಮೊಬೈಲ್ ನಲ್ಲಿ ಓರ್ವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಐವರು ಬೇರೆ ಬೇರೆ ಕಡೆಯವರು. ತಿಪಟೂರು, ಚನ್ನರಾಯಪಟ್ಟಣ, ಭದ್ರಾವತಿ, ಶಿವಮೊಗ್ಗದವರು ಎನ್ನಲಾಗ್ತಿದೆ. ಕಾರಿನಲ್ಲಿ ಊಟ, ಬಾಳೆ ಹಣ್ಣು ಕೂಡ ಪತ್ತೆಯಾಗಿದೆ. ಕಾರಿನಲ್ಲಿ ಊಟ ಕೊಂಡೋಗುತ್ತಿದ್ದದ್ದು ಪತ್ತೆಯಾಗಿದೆ. ಪಕ್ಕದಲ್ಲೆ ಹೊಸ ಸೇತುವೆ ನಿರ್ಮಾಣ ಆಗ್ತಿದೆ. ಘಟನೆ ನಡೆದಿರುವ ಸ್ಥಳದಲ್ಲಿ ಸೂಚನಾ ಫಲಕ, ತಡೆಗೋಡೆ ಇಲ್ಲದಿರುವುದು ಘಟನೆಗೆ ಕಾರಣ ಎನ್ನಲಾಗಿದೆ. ತಡೆಗೋಡೆ ಮತ್ತು ಸೂಚನ ಫಲಕ ಅಳವಡಿಕೆಗೆ ತಾಕೀತು ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಗೆ ಅಧಿಕಾರಿಗಳ ಸಭೆ ಕರೆದಿದ್ದೇನೆ. ಘಟನಾ ಸ್ಥಳದಲ್ಲಿಯೆ ಖುದ್ದು ಪರಿಶೀಲನೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಧ್ಯಮಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾಹಿತಿ ನೀಡಿದ್ದಾರೆ.

Read More