Author: AIN Author

ಚೆನ್ನೈ;- ಸನಾತನ ಧರ್ಮವನ್ನು ನಾನು ಕೊನೆಯವರೆಗೂ ವಿರೋಧಿಸುತ್ತಲೇ ಇರುತ್ತೇನೆ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ತಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಎಂದಿದ್ದರು. ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಕಾನೂನು ಪರಿಣಾಮ ಎದುರಿಸಲು ಸಿದ್ಧ ಎಂದು ಹೇಳಿದ್ದರು. ನಾನೇನೂ ತಪ್ಪಾಗಿ ಹೇಳಿಲ್ಲ. ನಾನು ಹೇಳಿದ್ದು ಸರಿ, ಅದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. ನನ್ನ ಹೇಳಿಕೆಯನ್ನು ಬದಲಾಯಿಸುವುದಿಲ್ಲ. ನನ್ನ ಸಿದ್ಧಾಂತವನ್ನು ಮಾತನಾಡಿದ್ದೇನೆ. ಅಂಬೇಡ್ಕರ್, ಪೆರಿಯಾರ್ ಹೇಳಿದ್ದಕ್ಕಿಂತ ಹೆಚ್ಚಾಗಿ ಮಾತನಾಡಿಲ್ಲ. ನಾನು ಎಂಎಲ್‌ಎ ಆಗಬಹುದು, ಮಂತ್ರಿಯಾಗಬಹುದು ಅಥವಾ ಯುವ ಘಟಕದ ಕಾರ್ಯದರ್ಶಿಯಾಗಿ ನಾಳೆ ನಾನು ಇರಬಹುದು. ಆದರೆ ಮನುಷ್ಯನಾಗಿರುವುದು ಹೆಚ್ಚು ಮುಖ್ಯ ಎಂದು ತಿಳಿಸಿದ್ದಾರೆ. ನಾವು ಹಲವಾರು ವರ್ಷಗಳಿಂದ ಸನಾತನದ ಬಗ್ಗೆ ಮಾತನಾಡುತ್ತಿದ್ದೇವೆ. ಇದು ನೂರಾರು ವರ್ಷಗಳ ಸಮಸ್ಯೆಯಾಗಿದೆ. ನಾವು ಇದನ್ನು ಕೊನೆವರೆಗೂ ವಿರೋಧಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Read More

ಮಂಡ್ಯ- ನಾಲೆಗೆ ಕಾರು ಉರುಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಘಡಕ್ಕೆ ಕಾರಣ ಬಹಿರಂಗವಾಗಿದೆ. ಕಾರಿನಲ್ಲಿದ್ದ ಓರ್ವನ‌ ಮೊಬೈಲ್ ರಿಂಗ್ ಆಗ್ತಿತ್ತು. ಮೊಬೈಲ್ ನಲ್ಲಿ ಓರ್ವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಐವರು ಬೇರೆ ಬೇರೆ ಕಡೆಯವರು. ತಿಪಟೂರು, ಚನ್ನರಾಯಪಟ್ಟಣ, ಭದ್ರಾವತಿ, ಶಿವಮೊಗ್ಗದವರು ಎನ್ನಲಾಗ್ತಿದೆ. ಕಾರಿನಲ್ಲಿ ಊಟ, ಬಾಳೆ ಹಣ್ಣು ಕೂಡ ಪತ್ತೆಯಾಗಿದೆ. ಕಾರಿನಲ್ಲಿ ಊಟ ಕೊಂಡೋಗುತ್ತಿದ್ದದ್ದು ಪತ್ತೆಯಾಗಿದೆ. ಪಕ್ಕದಲ್ಲೆ ಹೊಸ ಸೇತುವೆ ನಿರ್ಮಾಣ ಆಗ್ತಿದೆ. ಘಟನೆ ನಡೆದಿರುವ ಸ್ಥಳದಲ್ಲಿ ಸೂಚನಾ ಫಲಕ, ತಡೆಗೋಡೆ ಇಲ್ಲದಿರುವುದು ಘಟನೆಗೆ ಕಾರಣ ಎನ್ನಲಾಗಿದೆ. ತಡೆಗೋಡೆ ಮತ್ತು ಸೂಚನ ಫಲಕ ಅಳವಡಿಕೆಗೆ ತಾಕೀತು ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಗೆ ಅಧಿಕಾರಿಗಳ ಸಭೆ ಕರೆದಿದ್ದೇನೆ. ಘಟನಾ ಸ್ಥಳದಲ್ಲಿಯೆ ಖುದ್ದು ಪರಿಶೀಲನೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಧ್ಯಮಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾಹಿತಿ ನೀಡಿದ್ದಾರೆ.

Read More

ಧಾರವಾಡ;- ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ 55ನೇ ಹುಟ್ಟ ಹಬ್ಬ ಹಿನ್ನೆಲೆ ವಿನಯ ಕುಲಕರ್ಣಿ ಅಭಿಮಾನಿಗಳಿಂದ ಅದ್ದೂರಿ ಕಾರ್ಯಕ್ರಮ ಜರುಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಹೊರವಲಯದಲ್ಲಿ ಕಾರ್ಯಕ್ರಮ ವೇದಿಕೆ ಕಡೆ ಅಭಿಮಾನಿಗಳು ಹರಿದು ಬರುತ್ತಿದ್ದಾರೆ. ಬೃಹತ್ ಸೇಬು ಹಾರ ಹಾಕಿ ಸ್ವಾಗತ ಮಾಡಲು ಅಭಿಮಾನಿಗಳಂದ ಸಿದ್ಧತೆ ನಡೆದಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ತವನಪ್ಪ ಅಷ್ಟಗಿ ಸೇರಿ ಹಲವು ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಧಾರವಾಡ ಜಿಲ್ಲಾ ಪ್ರವೇಶಕ್ಕೆ ನ್ಯಾಯಾಲಯ ನಿರ್ಬಂಧ ಹಿನ್ನೆಲೆ ಅಭಿಮಾನಿಗಳಿಂದ ಕಿತ್ತೂರಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

Read More

ಮಂಡ್ಯ;- ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಮಂಡ್ಯದ ಪಾಂಡವಪುರದ ಬನಘಟ್ಟದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ನಡೆದಿದೆ. ಕಾರಿನಲ್ಲಿ ನಾಲ್ವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಿಯಂತ್ರಣ ತಪ್ಪಿ ವಿಸಿ‌ ನಾಲೆಗೆ ಶಿಫ್ಟ್ ಕಾರು ಬಿದ್ದಿದೆ. ಇಂದುಸಂಜೆ 4.45ರ ವೇಳೆಯಲ್ಲಿ ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ವಿಸಿ ನಾಲೆಗೆ ಇಳಿದು ಪರಿಶೀಲನೆ ಮಾಡಿದ್ದಾರೆ. ನಿನ್ನೆಯಷ್ಟೆ ಕೆಆರ್‌ಎಸ್ ಡ್ಯಾಂನಿಂದ ವಿಸಿ ನಾಲೆಗೆ ನೀರು ಬಿಡಲಾಗಿತ್ತು. ಇದೀಗ ತುಂಬಿದ ಕಾಲುವೆಗೆ ಕಾರು ಬಿದ್ದಿದ್ದು, ಅವಘಡ ಸಂಭವಿಸಿದೆ.

Read More

ಧಾರವಾಡ;- ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಹಿನ್ನೆಲೆ ಮಲಪ್ರಭಾ ಜಲಾಶಯದಿಂದ 1 ಟಿಎಂಸಿ ನೀರು ಬಿಡುಗಡೆ ಆಗಿದೆ. ಈ ಸಂಬಂಧ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು, ಇಂದಿನಿಂದ 9 ದಿನಗಳ ಕಾಲ ಈ ನೀರು ಹರಿಯಲಿದೆ. ಈಗಾಗಲೇ ಹಿಂದೆ 81 ಕೆರೆ ತುಂಬಿಸಿದ್ದೇವು. ಅದರಲ್ಲಿ ಸುಮಾರು 50 ಕೆರೆಗಳಲ್ಲಿ ಅರ್ಧದಷ್ಟು ನೀರಿದೆ.ಅಲ್ಲಿ ಹೆಚ್ಚಿನ ಸಮಸ್ಯೆ ಇಲ್ಲ. ಆದರೆ 32 ಕೆರೆಗಳು ಅರ್ಧಕ್ಕಿಂತ ಕಡಿಮೆ ನೀರು ಹೊಂದಿವೆ. ಅಂತಹುಗಳಿಗೆ ಈಗ ತುಂಬಿಸಿಕೊಳ್ಳಲು ಆದ್ಯತೆ ನೀಡಲಾಗಿದೆ. ಕುಂದಗೋಳ, ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಗ್ರಾಮೀಣಕ್ಕೆ ನೀರು ಸಮಸ್ಯೆ ಬಗೆಹರೆಯಲಿದೆ. ಇದರಿಂದ ಮುಂದಿನ 5-6 ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಮಲಪ್ರಭಾ ಜಲಾಶಯದಲ್ಲಿ 15 ಟಿಎಂಸಿ ನೀರು ಇದೆ ಅಂತಾ ಮಾಹಿತಿ ಇದೆ. ಈ ಸಲ ಕೃಷಿಗಾಗಿ ನೀರು ಬಿಡಲು ಆಗುವುದಿಲ್ಲ. ಕುಡಿಯುವ ನೀರಿಗಾಗಿ ಮಾತ್ರ 1 ಟಿಎಂಸಿ ನೀರು ಬಿಡುತ್ತಿದ್ದಾರೆ. ಕುಡಿಯುವ ನೀರಿಗೆ ಮಾತ್ರ ಆದ್ಯತೆ ಇದೆ. ಆದರೆ ಕಾಲುವೆ…

Read More

ಮಂಡ್ಯ :- ಗೃಹ ಜ್ಯೋತಿ ಯೋಜನೆಯಡಿ ಬರುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಯಡಿಯಲ್ಲಿ ಬಿಲ್ ಕಟ್ಟಲಾರದೆ ಬಾಕಿ ಉಳಿಸಿಕೊಂಡಿದ್ದ ಬಡ ಫಲಾನುಭವಿಗಳ 380 ಕೋಟಿ ವಿದ್ಯುತ್ ಬಿಲ್ ಮನ್ನಾ ಮಾಡಿರುವ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಕಾರ್ಯದರ್ಶಿ ಕೆ.ಕಬ್ಬಾಳಯ್ಯ ಸ್ವಾಗತಿಸಿದ್ದಾರೆ. 2013-18 ರ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಯಡಿಯಲ್ಲಿ ವಿದ್ಯುತ್ ಬಿಲ್ ಅನ್ನು ಮನ್ನಾ ಮಾಡಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ವಿದ್ಯುತ್ ಬಿಲ್ ಅನ್ನು ಭರಿಸಲಾಗದೆ ನೈಜ ಬಡ ಕುಟುಂಬಗಳಿಗೆ ಅವರಿಂದ ಕಟ್ಟಲಾರದಷ್ಟು ವಿದ್ಯುತ್ ಬಿಲ್ಲು ಹೊರೆಯಾಗಿತ್ತು. ಅತ್ಯಂತ ಬಡ ಕುಟುಂಬದ ಪ್ರತಿ ಮನೆಗೆ 60 ರಿಂದ 70 ಸಾವಿರ ಅಧಿಕ ಬಿಲ್ಲು ಬಂದಿದ್ದು, ಕೆಲವು ಮನೆಗಳ ಮೀಟರ್ ಅನ್ನು ಕಿತ್ತುಹಾಕಿದ ಪರಿಣಾಮ ಕಗ್ಗತ್ತಲೆಯಲ್ಲಿ ಬದುಕು ಸವೆಸುತ್ತಿದ್ದರು. ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಉಚಿತ ವಿದ್ಯುತ್ ಪಡೆಯಬೇಕಾದರೆ…

Read More

ಕಲಬುರ್ಗಿ;- FDA ಅಕ್ರಮ ಉನ್ನತ ತನಿಖೆ ಗೃಹ ಸಚಿವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹತ್ತು ದಿನಗಳ ಹಿಂದೆ ನಡೆದ ಎಫ್ ಡಿಎ ನೇಮಕಾತಿ ಪರೀಕ್ಷೆ ಅಕ್ರಮ ಕುರಿತಾಗಿ ಸರ್ಕಾರ ಮುಂಜಾಗ್ರತೆ ಕೈಗೊಂಡಿದ್ದರಿಂದಲೇ ಅಕ್ರಮ ನಡೆಯುವಾಗಲೇ ಬಯಲಿಗೆಳೆಯಲಾಗಿದೆ. ಆದರೂ ಪ್ರಕರಣದಲ್ಲಿ ಎಲ್ಲರ ಪಾತ್ರ ಬಯಲಿಗೆ ಬರುವಂತಾಗಲು ಯಾವ ಹಂತದ ತನಿಖೆ ನಡೆಸಬೇಕು ಎಂಬುದನ್ನು ಗೃಹ ಸಚಿವರು ನಿರ್ಧರಿಸುತ್ತಾರೆ. ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ. ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ. ಬಿಜೆಪಿಯವರು ಆರೋಪಿಸಿದಂತೆ ಯಾರನ್ನೂ ರಕ್ಷಿಸುತ್ತಿಲ್ಲ. ಪಿಎಸ್‌ಐ ಹಗರಣದಲ್ಲಿ ಆಗಿನ ಬಿಜೆಪಿ ಸರ್ಕಾರ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಆದರೆ ತಮ್ಮ ಸರ್ಕಾರ ಯಾರನ್ನು ರಕ್ಷಿಸುತ್ತಿಲ್ಲ. ಎಲ್ಲ ಆಯಾಮಗಳಿಂದ ಸಮಗ್ರ ತನಿಖೆ ನಡೆಸಲಾಗುವುದು ಎಂದರು.

Read More

ಬೆಂಗಳೂರು;- ರಾಜಧಾನಿ ಬೆಂಗಳೂರಿನಲ್ಲಿ‌ ವರುಣನ ಆರ್ಭಟ ಮುಂದುವರಿದಿದೆ. ಮೆಜೆಸ್ಟಿಕ್ ಸೇರಿ ಸುತ್ತಮುತ್ತ ಜೋರು ಮಳೆ ಸುರಿಯುತ್ತಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ಹತ್ತು ನಿಮಿಷ ಸುರಿದ ಮಳೆಗೆ ಸ್ವಿಮ್ಮಿಂಗ್ ರಸ್ತೆಗಳೆಲ್ಲಾ ಫುಲ್ ಆಗಿವೆ. ಶೇಷಾದ್ರಿಪುರ ರಸ್ತೆಯಲ್ಲಿ ಮಳೆ ನಿಂತಿದ್ದು, ಮಳೆ‌ನೀರಿಗೆ ಸವಾರರು ಚಾಲಕರು ಹೈರಾಣಾಗಿದ್ದಾರೆ.

Read More

ಬೆಂಗಳೂರು;- ಭಾರೀ ಮಳೆಯಿಂದ ತುಂಬಿದ್ದ ರಾಜಕಾಲುವೆ ನೀರನ್ನು ಯಲಹಂಕ ಸಂಚಾರಿ ಪೊಲೀಸರು ನೀರು ಕ್ಲಿಯರ್ ಮಾಡಿದ್ದಾರೆ. ಯಲಹಂಕ ಸಂಚಾರಿ ಪೊಲೀಸರ ಸಮಯಪ್ರಜ್ಞೆಗೆ ಜನರಿಂದ ಅಭಿನಂಧನೆ ವ್ಯಕ್ತವಾಗಿದೆ. ಕಳೆದ ರಾತ್ರಿ 10ಗಂಟೆಯಿಂದ ಯಲಹಂಕ ಕೆರೆ ಕೋಡಿ ಬಿದ್ದಿದ್ದು, ಯಲಹಂಕ ಕೆರೆ ಕೋಡಿ ಬಿದ್ದ ಪರಿಣಾಮ ತಗ್ಗು ಪ್ರದೇಶ ಕೋಗಿಲು ಸರ್ಕಲ್‌ ಜಲಾವೃತವಾಗಿದೆ. ಕೋಗಿಲು ಸರ್ಕಲ್ ಜಲಾವೃತ ಹಿನ್ನಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ಯಲಹಂಕ ಸಂಚಾರಿ ಪೊಲೀಸರು ಬಿಬಿಎಂಪಿ ಕೆಲಸ ಮಾಡಿದ್ದಾರೆ. ಚರಂಡಿ ಸ್ಲ್ಯಾಬ್ ಗಳ ನ್ನು ತೆಗೆದು ನೀರು ಹರಿದುಕೊಂಡು ಹೋಗಲು‌ ಕ್ರಮ ಕೈಗೊಂಡಿದ್ದಾರೆ. ಬಿಬಿಎಂಪಿ ಸಿಬ್ಬಂದಿ ಜೊತೆ ತಾವೇ ಕುದ್ದು ತಗ್ಗುಪ್ರದೇಶದ ನೀರು‌ ಕ್ಲಿಯರ್ ಅಗಲು ಕ್ರಮ ಕೈಗೊಂಡಿದ್ದಾರೆ.

Read More

ಚಿಕ್ಕೋಡಿ:  ಚರಂಡಿಯಲ್ಲೂ ದುಡ್ಡು ತಿಂತಾರಾ? ಜನ … ಎಂಥಾ ಕರ್ಮ ನೋಡಿ ಆಶ್ಚರ್ಯ ಅನಿಸಿದರೂ ಇದು ನಿಜ . ಹೌದು,,, ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಚರಂಡಿ ವ್ಯವಸ್ಥೆಯಲ್ಲಿ ಕಳಪೆ ಗುಣಮಟ್ಟತೆ ಕಂಡು ಬಂದಿದೆ. ಗ್ರಾಮದ ಪ್ರಮುಖ ಬೀದಿಯಲ್ಲಿ…. ಇಲಾಖೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚರಂಡಿ ಕಾಮಗಾರಿಯಲ್ಲಿ ಕಳಪೆ ಸಾಮಗ್ರಿ ಹಾಗೂ ಯೋಜನೆ ಆಧಾರದನ್ವಯ ಕಾಮಗಾರಿ ನಡೆಯುತ್ತಿಲ್ಲ ಎಂದು ಸ್ಥಳೀಯರು.. ಇಲಾಖೆ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸ್ಥಳೀಯರೆ ಹೇಳುವ ಹಾಗೆ ದೃಶ್ಯದಲ್ಲಿ ಗಮನಿಸಬಹುದು ಚರಂಡಿಯ ಎರಡು ಬದಿ ಪ್ಲೇಟ್ ಅಳವಡಿಸಿ ಕಾಂಕ್ರಿಟ್ ವೆವಸ್ಥೆ ಕಲ್ಪಿಸುವ ಬದಲು ಮನಸೊ ಇಚ್ಛೆಯಂತೆ ತಾರಾತುರಿಯಲ್ಲಿ ನಡೆಸಿರೊ ಕಾಮಗಾರಿಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ ಕೂಡಲೆ ಸ್ಥಳೀಯ ಅಧಿಕಾರಿಗಳು ಇಂಥಹ ಕಳಪೆ ಕಾಮಗಾರಿ ನಿಲ್ಲಿಸಿ ವೆವಸ್ಥಿತ ಚರಂಡಿಗೆ ವೆವಸ್ಥೆ ನಿರ್ಮಾಣ ಮಾಡಿ ಕೊಡುವಂತೆ ಸ್ಥಳೀಯರು ಅಗ್ರಹಿಸಿದ್ದಾರೆ.

Read More