Author: AIN Author

ಗದಗ;- ತನ್ನದೇ ತಳಿಯ ಹಾವನ್ನೇ ನಾಗರಹಾವು ನುಂಗಿದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಅನ್ನದಾನೀಶ್ವರ ಪ್ರೌಢಶಾಲೆ ಆವರಣದಲ್ಲಿ ಈ ದೃಶ್ಯ ಕಂಡು ಬಂದಿದೆ. https://ainlivenews.com/supreme-ray-healing-centre-reiki-treatment/ ತನ್ನದೇ ತಳಿಯ ನಾಗರಹಾವನ್ನ ಮತ್ತೊಂದು ನಾಗರಹಾವು ನುಂಗಿ ಹಾಕಿದೆ. ಹಸಿವು ತಾಳಲಾರದೇ ಈ ರೀತಿ ಒಂದನ್ನೊಂದು ಕೊಂದು ಸರ್ಪಗಳು ತಿಂದಿವೆ ಎಂದು ಉರಗತಜ್ಞರು ಮಾಹಿತಿ ನೀಡಿದ್ದಾರೆ. ಸದ್ಯ ಹಾವು ನುಂಗುವ ದೃಶ್ಯ ಸ್ಥಳಿಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

Read More

ಹುಬ್ಬಳ್ಳಿ;- ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು ,ಅಧಿಕಾರಕ್ಕಾಗಿ ಸರ್ಕಾರ ಬೀಳಿಸುವುದು ಬಿಜೆಪಿಯವರ ಪ್ರವೃತ್ತಿ. ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು. ಕರ್ನಾಟಕದ ಅಭಿವೃದ್ಧಿ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದಲ್ಲಿ ಮಾತನಾಡುತ್ತಾರೆ. ಕಳೆದ 10 ವರ್ಷಗಳಲ್ಲಿ ಅವರು ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ? ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಷ್ಟು ಅಭಿವೃದ್ಧಿ ಮಾಡಿದೆ ಎಂಬುದು ಜನರಿಗೆ ಗೊತ್ತಿದೆ ಎಂದು ವ್ಯಂಗ್ಯವಾಡಿದರು. ಬಿಜೆಪಿಯವರು ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದರು. ಕಳೆದ ಬಾರಿ 16 ಶಾಸಕರನ್ನು ಆಪರೇಷನ್‌ ಕಮಲ ಮಾಡಿ ನಮ್ಮ ಸರ್ಕಾರ ಬೀಳಿಸಿದರು. ಸರ್ಕಾರ ಬೀಳಿಸುವ ಪ್ರವೃತ್ತಿ ಇರುವವರು ಅಧಿಕಾರಕ್ಕೆ ಕಚ್ಚಾಡುತ್ತಾರೆ ಎಂದು ನಮಗೆ ತಿಳಿ ಹೇಳಲು ಬರುತ್ತಿದ್ದಾರೆ. ಈವರೆಗೂ ಅವರಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಆಗುತ್ತಿಲ್ಲ. ಸಿಎಂ ಕುರ್ಚಿ ಖಾಲಿ…

Read More

ಮಂಡ್ಯ;- ನಗರದಲ್ಲಿ ರಾತ್ರಿ ಸುರಿದ ಧಾರಕಾರ ಮಳೆಗೆ ವಿಶ್ವೇಶ್ವರಯ್ಯ ನಾಲಾ ಸುರಂಗ ಭೂ ಕುಸಿತ ಉಂಟಾಗಿದೆ. ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಘಟನೆ ಜರುಗಿದೆ. ಘಟನೆಯಿಂದ ರೈತರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಮಧ್ಯ ಭಾಗದಲ್ಲಿ ಸುರಂಗ ಹಾದು ಹೋಗಿದ್ದು, ಏಕಾಏಕಿ ನೂರು ಅಡಿ ಸುರಂಗ ಕುಸಿದಿದೆ. ರಾಜಣ್ಣ ಎಂಬುವವರ ಮನೆಯ ಹಿಂದೆ ಸುರಂಗ ಕುಸಿದಿದೆ. ಏಕಾಏಕಿ ಸುರಂಗ ಕುಸಿದ ಹಿನ್ನೆಲೆ ಮನೆ ಗೋಡೆ ಕುಸಿತವಾಗಿದೆ. ಮಂಡ್ಯದಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆ ಸುರಿದ ಹಿನ್ನೆಲೆ ಅವಘಡ ಸಂಭವಿಸಿದೆ. ಹುಲಿಕೆರೆ ಬಳಿಯಿಂದ ವಿ.ಸಿ ನಾಲೆಗೆ ನಿರ್ಮಿಸಿರುವ ಸುರಂಗ ಮಾರ್ಗ ಇದಾಗಿದ್ದು, ಏಷ್ಯಾದ ಮೊದಲ ಸುರಂಗ ಮಾರ್ಗವೆಂದೆ ಹುಲಿಕೆರೆ ಬುಗ ಸುರಂಗ ಮಾರ್ಗ ಪ್ರಸಿದ್ದಿಯಾಗಿತ್ತು. ಮದ್ದೂರು ಮಳವಳ್ಳಿ ತಾಲೂಕಿಗೆ ಈ ಸುರಂಗ ಮಾರ್ಗದ‌ ಮೂಲಕ ಹಾದು ಹೋಗಿರುವ ವಿಸಿ ನಾಲೆ ಎನ್ನಲಾಗಿದ್ದು, ವಿಸಿ ನಾಲೆಯ ಸುರಂಗ ಮಾರ್ಗದ ಭೂ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ.

Read More

ಬೆಂಗಳೂರು: ಈ ಬಾರಿಯ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ (Virat Kohli) ತಮ್ಮ ಬ್ಯಾಟಿಂಗ್ ಮೂಲಕ ಮಿಂಚುತ್ತಿದ್ದಾರೆ. ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ, ಸಚಿನ್ (Sachin Tendulkar) 49 ಶತಕದ ದಾಖಲೆಯನ್ನು ಸರಿಗಟ್ಟಿದ್ದಾರೆ. ಸಚಿನ್ ಹಾಗೂ ಕೊಹ್ಲಿ ಶತಕಗಳನ್ನು ಎಲ್ಲೆಲ್ಲಿ ಬಾರಿಸಿದರು ಅನ್ನೋ ಕುತೂಹಲ ನಿಮಗಿದ್ದರೆ ಮುಂದೆ ಓದಿ. ಭಾರತದಲ್ಲಿ ನಡೆದ ಪಂದ್ಯಗಳಲ್ಲಿ ಸಚಿನ್ 20 ಶತಕ ದಾಖಲಿಸಿದರೆ ಕೊಹ್ಲಿ 23 ಶತಕ ದಾಖಲಿಸಿದ್ದಾರೆ. ವಿದೇಶದಲ್ಲಿ ನಡೆದ ಪಂದ್ಯಗಳಲ್ಲಿ ಸಚಿನ್ 12 ಶತಕ ಬಾರಿಸಿದರೆ, ಕೊಹ್ಲಿ 21 ಶತಕ ಬಾರಿಸಿದ್ದಾರೆ. ತಟಸ್ಥ ಕೇಂದ್ರಗಳಲ್ಲಿ ನಡೆದ ಪಂದ್ಯಗಳಲ್ಲಿ ಸಚಿನ್ 17 ಸೆಂಚುರಿ ಗಳಿಸಿದ್ದು, ಕೊಹ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ದಾಖಲೆಯನ್ನು ಒಟ್ಟು 12 ರಾಷ್ಟ್ರಗಳಲ್ಲಿ ಮಾಡಿದ್ದರೆ, ಕೊಹ್ಲಿ 9 ರಾಷ್ಟ್ರಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಸಚಿನ್ 34 ಕ್ರೀಡಾಂಗಣದಲ್ಲಿ 49 ಶತಕ ದಾಖಲಿಸಿದ್ದರೆ, ಕೊಹ್ಲಿ 32 ಕ್ರೀಡಾಂಗಣದಲ್ಲಿ…

Read More

ನವದೆಹಲಿ: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅವರದ್ದು ಎನ್ನಲಾದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗಷ್ಟೇ ವೈರಲ್‌ ಆಗಿದ್ದು, ಬಿಸಿ ಬಿಸಿ ಚರ್ಚೆಯಲ್ಲಿದೆ. ವೀಡಿಯೋದಲ್ಲಿ ರಶ್ಮಿಕಾ ಅವರ ಎದೆ ಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ಆದರೀಗ ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂಬ ಸತ್ಯ ಬಯಲಾಗಿದೆ. ಸೋಶಿಯಲ್‌ ಮೀಡಿಯಾ ಬಳಕೆದಾರರೊಬ್ಬರು ಮೂಲ ವೀಡಿಯೋವನ್ನ ಪತ್ತೆ ಮಾಡಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ವಾಸ್ತವಾಂಶ ಬಯಲಾದ ಬಳಿಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ (Rajeev Chandrasekha) ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ದೇಶದ ಐಟಿ ನಿಯಮಗಳನ್ನು ಉಲ್ಲಂಘಿಸುವ ಯಾವುದೇ ವೀಡಿಯೋ ಮತ್ತು ಇತರ ವಿಷಯಗಳನ್ನು ತೆಗೆದುಹಾಕುವಂತೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. https://twitter.com/Rajeev_GoI/status/1721398000701063460?ref_src=twsrc%5Etfw%7Ctwcamp%5Etweetembed%7Ctwterm%5E1721398000701063460%7Ctwgr%5Ea0ba7d42a06d2809b40d516cc13daa815e333cc3%7Ctwcon%5Es1_&ref_url=https%3A%2F%2Fpublictv.in%2Funion-minister-rajeev-chandrasekhar-reacts-strongly-to-deepfake-video-targeting-rashmika-mandanna%2F ಇದರೊಂದಿಗೆ ತಮ್ಮ ಪೋಸ್ಟ್‌ನಲ್ಲಿ, ಯಾವುದೇ ವೇದಿಕೆಯಲ್ಲಿ ತಪ್ಪು ಮಾಹಿತಿ ಪೋಸ್ಟ್‌ ಮಾಡಿದ್ರೆ, ಅದನ್ನ 36 ಗಂಟೆಗಳ ಒಳಗೆ ತೆಗೆದುಹಾಕಬೇಕು. ಇಲ್ಲದಿದ್ದರೇ ನೊಂದ ವ್ಯಕ್ತಿ ಪ್ರಕರಣವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಎಂದು ಎಚ್ಚರಿಸಿದ್ದಾರೆ. ನರೇಂದ್ರ ಮೋದಿಜೀ ಅವರ ಸರ್ಕಾರವೂ ಇಂಟರ್ನೆಟ್‌…

Read More

ಸೌತ್‌ನ ಸೂಪರ್ ಸ್ಟಾರ್ ಚಿಯಾನ್ ವಿಕ್ರಮ್‌ಗೆ ವಯಸ್ಸು 58 ವರ್ಷ ಆಗಿದ್ರೂ ಚಿರಯುವಕನಂತೆಯೇ ಇದ್ದಾರೆ. ಸಿನಿಮಾದಿಂದ ಸಿನಿಮಾಗೆ ಹೊಸ ಬದಲಾವಣೆಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹೀಗಿರುವಾಗ ಚಿಯಾನ್ ತಮ್ಮ ಸಂಭಾವನೆ ದುಪ್ಪಟ್ಟು ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ. ಪೊನ್ನಿಯನ್ ಸೆಲ್ವನ್ 2’ ಸಕ್ಸಸ್ ಬಳಿಕ ಚಿಯಾನ್ ಮತ್ತೆ ತಮ್ಮ ಸಂಭಾವನೆಯನ್ನ ಡಬಲ್‌ ಮಾಡಿಕೊಂಡಿದ್ದಾರೆ. ಒಂದು ಸಿನಿಮಾಗೆ ಚಿಯಾನ್ 25 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಿದ್ದರು. ಈಗ ಏಕಾಏಕಿ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ. ಮುಂಬರುವ ಚಿಯಾನ್‌ 62ನೇ ಚಿತ್ರಕ್ಕೆ 50 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ನಿರ್ಮಾಪಕ ಅರುಣ್‌ ಕುಮಾರ್‌ ನಿರ್ಮಾಣದ ಚಿತ್ರಕ್ಕೆ 50 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದೇ ಚಿಯಾನ್‌ ಬಗ್ಗೆ ಗುಸು ಗುಸು ಶುರುವಾಗಿದೆ. ಮಣಿರತ್ನಂ ನಿರ್ದೇಶನದ ‘ಪೊನ್ನಿಯನ್ ಸೆಲ್ವನ್ 2’ ಚಿತ್ರದ ಯಶಸ್ಸಿನ ಬಳಿಕ ತಂಗಳನ್ ಚಿತ್ರ ಮತ್ತು ಚಿಯಾನ್‌ 62ನೇ ಸಿನಿಮಾದತ್ತ ಗಮನ ನೀಡುತ್ತಿದ್ದಾರೆ. ಹೀಗಿರುವಾಗ ‘ತಂಗಳನ್‌’ ತನ್ನ ಪಾತ್ರಕ್ಕಾಗಿ ಮತ್ತೆ ಲುಕ್ ಬದಲಿಸಿಕೊಂಡಿದ್ದಾರೆ. ಹೊಸ ಶೇಡ್‌ನಲ್ಲಿ…

Read More

ಕೋಲ್ಕತ್ತಾ: ಕ್ರಿಕೆಟ್ (Cricket) ದಂತಕತೆ ಸಚಿನ್ ತೆಂಡೂಲ್ಕರ್ (Sachin Tendulkar) ನನ್ನ ಹೀರೋ, ಎಂದಿಗೂ ನಾನು ಅವರಿಗೆ ಸಮನಲ್ಲ ಎಂದು ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ಹೇಳಿದ್ದಾರೆ. ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ 49ನೇ ಶತಕವನ್ನು ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ಬಳಿಕ ಈ ರೀತಿ ಹೇಳಿಕೊಂಡಿದ್ದಾರೆ. ನಾನು ತೆಂಡೂಲ್ಕರ್ ಬ್ಯಾಟಿಂಗ್ ನೋಡುತ್ತಾ ಬೆಳೆದಿದ್ದೇನೆ. ಅವರ ಬ್ಯಾಟಿಂಗ್ ಶೈಲಿ ಅತ್ಯುತ್ತಮವಾದದ್ದು. ನಾನು ಆ ಮಟ್ಟಕ್ಕೆ ಏರಲು ಸಾಧ್ಯವಿಲ್ಲ. ಏನೇ ಆದರೂ ಸಚಿನ್ ನನ್ನ ನಾಯಕರಾಗಿರುತ್ತಾರೆ ಎಂದು ಕೊಹ್ಲಿ ಹೇಳಿದ್ದಾರೆ. ನಾನು ಎಲ್ಲಿಂದ ಬಂದಿದ್ದೇನೆ ಎಂದು ನನಗೆ ತಿಳಿದಿದೆ ಮತ್ತು ಇಲ್ಲಿ ನಿಂತು ಸಚಿನ್ ಅವರಿಂದ ಮೆಚ್ಚುಗೆಯನ್ನು ಪಡೆಯುವುದು ನನಗೆ ತುಂಬಾ ಖುಷಿಕೊಟ್ಟಿದೆ ಎಂದಿದ್ದಾರೆ.

Read More

ಮಂಡ್ಯ;- ರಾಜ್ಯದಲ್ಲಿ ಮಳೆ ಕೈ ಕೊಟ್ಟ ಹಿನ್ನೆಲೆ, ನಾಲೆ ಬತ್ತಿ ಹೋಗಿದೆ. ನೀರಿನ ಸಮಸ್ಯೆಗೆ ಸಕ್ಕರೆನಾಡಿನ ರೈತರು ಕಂಗಾಲಾಗಿದ್ದಾರೆ. ನೀರಿಲ್ಲದೆ ಬೆಳೆ ಉಳಿಸಿಕೊಳ್ಳಲು ರೈತರಿಂದ ಹರಸಾಹಸ ನಡೆಯುತ್ತಿದ್ದು, ಬೆಳೆದ ಭತ್ತದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೂಲಕ ಗದ್ದೆಗೆ ನೀರು ಹಾಯಿಸಲಾಗುತ್ತಿದೆ. ಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಅನ್ನದಾತರು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ. KRS ಡ್ಯಾಂ ಅಚ್ಚುಕಟ್ಟು ಪ್ರದೇಶದ ಕಡೇ ಭಾಗ ಕೊಪ್ಪ ಹೋಬಳಿ. ಡ್ಯಾಂನಿಂದ ನಾಲೆಗೆ ನೀರು ಬಿಟ್ಟರೂ ಕೊಪ್ಪ ಹೋಬಳಿ ತಲುಪಬೇಕಾದರೆ 10ರಿಂದ12 ದಿನ ಬೇಕು. ನೀರು ತಲುಪಿ ಎರಡ್ಮೂರು ದಿನದಲ್ಲೇ ನಾಲೆಗಳಿಗೆ ನೀರು ಸ್ಥಗಿತವಾಗಿದೆ. ಕಟ್ಟು ಪದ್ಧತಿಯಂತೆ 15 ದಿನಗಳಿಗೆ ಅಧಿಕಾರಿಗಳು ನೀರು ನಿಲ್ಲಿಸಿದ್ದಾರೆ. ಮತ್ತೊಂದೆಡೆ ಮಳೆಯೂ ಕೈಕೊಟ್ಟಿರೋದ್ರಿಂದ ಬೆಳೆ ಒಣಗುತ್ತಿದೆ. ಸಾಲಸೂಲ ಮಾಡಿ ಬೆಳೆದ ಬೇಳೆಗೆ ಟ್ಯಾಂಕರ್ ನಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಮಹರ್ನಾವಮಿ ದೊಡ್ಡಿ,ಗುಡಿದೊಡ್ಡಿ ಗ್ರಾಮದಲ್ಲಿ ಟ್ಯಾಂಕರ್ ಮೂಲಕ ಬೆಳೆಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಹೋಬಳಿ…

Read More

ಜೈಲರ್ ಸಿನಿಮಾದ ಯಶಸ್ಸಿನ ನಂತರ ತಮಿಳಿನಲ್ಲಿ ಶಿವರಾಜ್ ಕುಮಾರ್ (Shivaraj Kumar) ಬೇಡಿಕೆ ಹೆಚ್ಚಾಗಿದೆ. ಜೈಲರ್ ಸಿನಿಮಾದ ಜೊತೆ ಜೊತೆಗೆ ಕ್ಯಾಪ್ಟನ್ ಮಿಲ್ಲರ್ ಸಿನಿಮಾದಲ್ಲಿ ಶಿವಣ್ಣ ನಟಿಸಿದ್ದರು. ಇದೀಗ ಕಮಲ್ ಹಾಸನ್ ನಟನೆಯ ಹೊಸ ಸಿನಿಮಾದಲ್ಲೂ ಶಿವರಾಜ್ ಕುಮಾರ್ ಪಾತ್ರ ಮಾಡಲಿದ್ದಾರಂತೆ. ಈಗಾಗಲೇ ಶಿವಣ್ಣ ಜೊತೆ ಮಾತುಕತೆ ಕೂಡ ನಡೆದಿದೆ ಎನ್ನುವ ಸುದ್ದಿಯಿದೆ. ಶಿವರಾಜ್ ಕುಮಾರ್ ಒಪ್ಪಿಕೊಂಡಿದ್ದಾರೆ ಎನ್ನಲಾದ ಸಿನಿಮಾ ವಿಶೇಷವಾಗಿದೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.…

Read More

ನವದೆಹಲಿ : ವಿರೋಧ ಪಕ್ಷಗಳ ನಾಯಕರ ಐಫೋನ್‌ಗೆ ಹ್ಯಾಕಿಂಗ್ (iPhone Hack) ಸಂದೇಶ ಬಂದಿರುವ ತಾಂತ್ರಿಕ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಕೆಲವು ಏಜೆನ್ಸಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಹೇಳಿದ್ದಾರೆ. ವಿಪಕ್ಷಗಳ ಆರೋಪದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವು ಸಂಸದರು ಆಪಲ್‌ನಿಂದ ಎಚ್ಚರಿಕೆ ಸಂದೇಶ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಷಯದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಆ್ಯಪಲ್‌ (Apple) ಭಾರತದಲ್ಲಿ ಮಾತ್ರ ಇಂತಹ ಸಂದೇಶ ಕಳುಹಿಸಿಲ್ಲ ಬದಲಿಗೆ ಸುಮಾರು 150 ದೇಶಗಳ ಜನರಿಗೆ ಎಚ್ಚರಿಕೆ ಸೂಚನೆಗಳನ್ನು ಕಳುಹಿಸಿದೆ. ಈ ನಡುವೆ ಐಫೋನ್ ಹ್ಯಾಕ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಆ್ಯಪಲ್ ಸ್ಪಷ್ಟೀಕರಣವನ್ನು ನೀಡಿದೆ ಎಂದರು. ಸರ್ಕಾರದ ವಿರುದ್ಧ ಆರೋಪ ಮಾಡಿದ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದ ವೈಷ್ಣವ್, ದೇಶದ ಪ್ರಗತಿಯನ್ನು ನೋಡಲು ಬಯಸದ ಜನರು ಇಂತಹ ರಾಜಕೀಯದಲ್ಲಿ ತೊಡಗಿದ್ದಾರೆ.…

Read More