Author: AIN Author

2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೋಲಿಲ್ಲದ ಸರದಾರನಂತೆ ಸೆಮಿಫೈನಲ್ ಹಂತ ತಲುಪಿದೆ. ವಿಶ್ವಕಪ್ ವಿಜೇತ ನಾಯಕ ರಿಕಿ ಪಾಂಟಿಂಗ್ ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ 3 ಆಟಗಾರರನ್ನು ಆಯ್ಕೆ ಮಾಡಿದ್ದು, ಟೀಮ್ ಇಂಡಿಯಾ ಪರ ಅದ್ಭುತ ಪ್ರದರ್ಶನ ತೋರುತ್ತಿರುವ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ವೇಗಿ ಮೊಹಮ್ಮದ್ ಶಮಿ ಅವರನ್ನು ನಿರ್ಲಕ್ಷಿಸಿದ್ದಾರೆ. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ , ಪ್ರಸಕ್ತ ವಿಶ್ವಕಪ್ ಟೂರ್ನಿಯ ಅತ್ಯುತ್ತಮ ಆಟಗಾರರನ್ನಾಗಿ ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟರ್ ಕ್ವಿಂಟನ್ ಡಿಕಾಕ್, ಆಲ್ ರೌಂಡರ್ ಮಾರ್ಕೊ ಯನ್ಸನ್‌ ಹಾಗೂ ಆಸ್ಟ್ರೇಲಿಯಾದ ಸ್ಪಿನ್ನರ್ ಆಡಮ್ ಝಾಂಪರ ಹೆಸರನ್ನು ಸೂಚಿಸಿದ್ದಾರೆ ಮತ್ತು ಅದಕ್ಕೆ ಸೂಕ್ತ ಕಾರಣವನ್ನು ನೀಡಿದ್ದಾರೆ. ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಆಡಮ್ ಝಂಪಾ ಅವರ ವಿಕೆಟ್ ಸಾಧನೆಯನ್ನು ಹಿಂದಿಕ್ಕುವುದು ಅತ್ಯಂತ ಕಠಿಣ ‌ಸಂಗತಿ ಆಗಿದೆ. ಆರಂಭಿಕ 2 ಪಂದ್ಯಗಳಲ್ಲಿ ವಿಕೆಟ್ ಪಡೆಯದೆ ನಿರಾಸೆ ಅನುಭವಿಸಿದ್ದರು. ಆದರೆ ನಂತರ ಬಲವಾಗಿ ಕಮ್ ಬ್ಯಾಕ್ ಮಾಡಿರುವ ಅವರು…

Read More

ಹರ್ಯಾಣ: ಐವತ್ತಕ್ಕೂ  ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಹರ್ಯಾಣದ ಜಿಂದ್ ಜಿಲ್ಲೆಯಲ್ಲಿ ನಡೆದಿದೆ. ಹರ್ಯಾಣ ರಾಜ್ಯ ಮಹಿಳಾ ಆಯೋಗವು ಪೊಲೀಸರಿಗೆ ಅಲ್ಟಿಮೇಟಮ್ ನೀಡಿದ ನಂತರ ಬಂಧಿಸಲಾಗಿದೆ. ಶಾಲೆಯ ಕೆಲವು ವಿದ್ಯಾರ್ಥಿನಿಯರ ಸೆಪ್ಟೆಂಬರ್ 14 ರಂದು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಅಕ್ಟೋಬರ್ 30 ರಂದು ಮಾತ್ರ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆಯೋಗ ಹೇಳಿದೆ. ಈ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಕೂಡ ರಚಿಸಲಾಗಿದೆ. ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಆಡಳಿತ ಮತ್ತು ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ ಶಿಕ್ಷಣ ಇಲಾಖೆ ಆರೋಪಿಯನ್ನು ಅಕ್ಟೋಬರ್ 27ರಂದು ಅಮಾನತುಗೊಳಿಸಿದ್ದು ಮಾತ್ರ ಮುಂದಿನ ಕ್ರಮ ಕೈಗೊಂಡಿಲ್ಲ.‌ ಹರ್ಯಾಣದ ಮಹಿಳಾ ಆಯೋಗವು ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ್ದು, ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 55 ವರ್ಷದ ಪ್ರಾಂಶುಪಾಲರನ್ನು ಬಂಧಿಸಲಾಗಿದೆ. ನಾವು ವಿದ್ಯಾರ್ಥಿನಿಯರಿಂದ ಪ್ರಾಂಶುಪಾಲರ…

Read More

ಹುಬ್ಬಳ್ಳಿ: ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟ ಕಾರಣ ಬರ ತಾಂಡವವಾಡುತ್ತಿದೆ. ಜಿಲ್ಲೆಯಲ್ಲಿ 2.20 ಲಕ್ಷ ಹೆಕ್ಟೇರ್‌ ಬೆಳೆ ನಷ್ಟವಾಗಿದೆ. ಇತಹ ಸಂದಿಗ್ಧ ಪರಿಸ್ಥಿಯಲ್ಲಿ ಸರ್ಕಾರ ರೈತರ ಜೊತೆ ನಿಲ್ಲಬೇಕಿತ್ತು. ಗುಳೆ ಹೋಗದ ಹಾಗೆ, ದನ–ಕರುಗಳನ್ನು ಮಾರಾಟ ಮಾಡದ ಹಾಗೆ ತಡೆಯಬೇಕಿತ್ತು. ಗೋ ಶಾಲೆಗಳನ್ನು ಆರಂಭಿಸಿ ಮೇವು ಹಂಚಿಕೆ ಮಾಡಬೇಕಿತ್ತು. ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು. ಅದರ ಬದಲು ರಾಜಕೀಯ ಮಾಡುತ್ತ ಕಾಲ ಹರಣ ಮಾಡುತ್ತಿದೆ. ಹುಬ್ಬಳ್ಳಿ ತಾಲೂಕಿನಲ್ಲಿ ಬಿಜೆಪಿ ವತಿಯಿಂದ ಬರ ಪರಿಶೀಲನೆ ನಡೆಸಿದ ಬಳಿಕ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ ಮಾತುಗಳಿವು. ಛಬ್ಬಿ, ಅಂಚಟಗೇರಿ ಗ್ರಾಮಗಳಲ್ಲಿ ಬರ ಅಧ್ಯಯನ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 68 ಹಳ್ಳಿಗಳು ಮಲಪ್ರಭಾ ಬಲದಂಡೆಯ ಕಾಲುವೆ ನೀರು ಆಶ್ರಯಿಸಿವೆ. ಮುನವಳ್ಳಿ ಅಣೆಕಟ್ಟೆಯಲ್ಲಿರುವ ನೀರನ್ನು ಕಾಲುವೆಗಳಿಗೆ ಹರಿಸಿ, ಹಳ್ಳಿಗಳ ಕೆರೆ, ಕಟ್ಟೆಗಳನ್ನು ತುಂಬಿಸಲು ಮುಂದಾಗಬಹುದಿತ್ತು. ಬೇಜವಾಬ್ದಾರಿ ಸರ್ಕಾರ ಮುಂದಾಲೋಚನೆಯಿಲ್ಲದೆ ಕಾರ್ಯ ನಿರ್ವಹಿಸುತ್ತಿದೆ ಎಂದರು. https://ainlivenews.com/suprem-ray-healing-center-reiki/ ಬಿಜೆಪಿ ಬರ ಅಧ್ಯಯನ ತಂಡ ರಾಜ್ಯದಾದ್ಯಂತ…

Read More

ಚಿಕ್ಕಮಗಳೂರು;- ವಯೋಸಹಜ ಅನಾರೋಗ್ಯದಿಂದ ಮಾಜಿ ಸಚಿವ, ಡಿ.ಬಿ.ಚಂದ್ರೇಗೌಡ ಇಂದು ಮುಂಜಾನೆ 12.20 ಕ್ಕೆ ನಿಧನ ಹೊಂದಿದ್ದಾರೆ. ಚಿಕ್ಕಮಗಳೂರು ‌ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿಗಳಲ್ಲಿ ಒಬ್ಬರಾಗಿದ್ದ ಡಿ.ಬಿ.ಚಂದ್ರೇಗೌಡರು ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ ಈ ನಾಲ್ಕೂ ಸದನಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅಪರೂಪದ ಸಾಧನೆ ಮಾಡಿದ್ದರು. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪಟೇಲ್ ಬೈರೇಗೌಡ ಶ್ರೀಮತಿ ಪುಟ್ಟಮ್ಮನವರ ಪುತ್ರರಾಗಿ 1936 ರ ಆಗಸ್ಟ್ 26ರಂದು ಜನಿಸಿದ್ದ ಡಿ.ಬಿ.ಚಂದ್ರೇಗೌಡರು ಕಾನೂನು ಪದವಿ ಪಡೆದು ವಕೀಲಿ ವೃತ್ತಿಯಲ್ಲಿ ನಿರತರಾಗಿದ್ದರು. ರಾಜಕೀಯವಾಗಿ ಕಾಂಗ್ರೇಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಡಿ.ಬಿ. ಚಂದ್ರೇಗೌಡರು 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು, 1977 ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ…

Read More

ನೆನ್ನೆಯಿಂದ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಕುರಿತಂತೆ ಅನೇಕ ಕಲಾವಿದರು ಮತ್ತು ರಶ್ಮಿಕಾ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು. ಈಗ ಸ್ವತಃ ರಶ್ಮಿಕಾ ಮಂದಣ್ಣ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯಿಂದಾಗಿ ನನಗೆ ತುಂಬಾ ನೋವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇಂಥದ್ದೊಂದು ಸಂಗತಿಯನ್ನು ಹಂಚಿಕೊಳ್ಳಲು ತುಂಬಾ ನೋವಾಗುತ್ತೆ. ಆದರೂ, ಇಂತಹ ಡೀಪ್‍ ಫೇಕ್ (DeepFake) ವಿಡಿಯೋ ಬಗ್ಗೆ ಮಾತನಾಡಲೇಬೇಕಿದೆ. ಪ್ರಮಾಣಿಕವಾಗಿ ಹೇಳೋದಾದರೆ, ತಂತ್ರಜ್ಞಾನವನ್ನು ದುರುಪಯೋಗವು ಅತ್ಯಂತ ಭಯಾನಕವಾಗಿದೆ. ನಾನು ಮಹಿಳೆಯಾಗಿ ಮತ್ತು ನಟಿಯಾಗಿ ನನ್ನನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎನ್ನುವುದರ ಅರಿವಿದೆ. ನನ್ನ ಕುಟುಂಬ ಮತ್ತು ಸ್ನೇಹಿತರು ಹಾಗೂ ಹಿತೈಷಿಗಳು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಆದರೆ, ನಾನು ಶಾಲೆ ಅಥವಾ ಕಾಲೇಜಿನಲ್ಲಿ ಇದ್ದಾಗ ಈ ರೀತಿ ಆಗಿದ್ದರೆ ಅದನ್ನು ಹೇಗೆ ನಿಭಾಯಿಸುತ್ತಿದ್ದೆ ಎಂದು ಊಹಿಸಲೂ ಅಸಾಧ್ಯ. ಡೀಪ್ ಫೇಕ್ ಮಾಡುವವರು ಇತರರ ಮೇಲೆ ಪ್ರಭಾವ ಬೀರುವುದಕ್ಕಿಂತ ಮುಂಚೆ…

Read More

ಪ್ರಸ್ತುತ ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೈ ಕೊಟ್ಟು ರಾಜ್ಯದ ರೈತರು ನಷ್ಟ ಅನುಭವಿಸಿದ್ದಾರೆ. ಈಗಾಗಲೇ ಮುಂಗಾರು ಹಂಗಾಮಿನ ಬೆಳೆ ವಿಮೆ ಅರ್ಜಿಗಳು ವಿಲೇವಾರಿ ಹಂತದಲ್ಲಿದ್ದು, ಇನ್ನು ಕೆಲವು ತಿಂಗಳ ಒಳಗಾಗಿ ಮಧ್ಯಂತರ ಬೆಳೆ ವಿಮೆ ರೈತರ ಖಾತೆಗೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಸಧ್ಯ ಎರಡನೇ ಹಂಗಾಮಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮು ಆರಂಭವಾಗಿದ್ದು, ಆಯ್ದ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಸಂರಕ್ಷಣೆ ಪೋರ್ಟಲ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಕುರಿತು ಕೃಷಿ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ. ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಬೇಕು ಎಂದು ಹೇಳಿದ್ದಾರೆ. ಈ ಯೋಜನೆಯಡಿ ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಜೋಳ, ಕಡಲೆ ಹಾಗೂ ಬೇಸಿಗೆ ಹಂಗಾಮಿನ…

Read More

ಬೆಂಗಳೂರು;- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ನಿನ್ನೆ ಸಂಜೆಯಿಂದ ಭಾರೀ ಮಳೆಯಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಗೆ ನಿವಾಸಿಗಳು ಹೈರಾಣಾಗಿದ್ದಾರೆ. ಅನೇಕ ಕಡೆ ಮಳೆ ನೀರು ಮನೆಗಳಿಗೆ ನುಗ್ಗಿದೆ, ಮರಗಳು ಧರೆಗೆ ಉರುಳಿವೆ. ಇನ್ನು ಯಲಹಂಕ-ಜಕ್ಕೂರು ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಯಲಹಂಕ-ಜಕ್ಕೂರು ಪ್ರದೇಶದಲ್ಲಿ 113.50 ಮಿಲಿ ಮೀಟರ್ ಮಳೆಯಾಗಿದೆ. ಕಳೆದ ಎರಡೂ ಮೂರು ದಿನದಿಂದ ವಾತಾವರಣದಲ್ಲಿ ಬದಲಾವಣೆ ಹಾಗೂ ಬೆಳಿಗ್ಗೆಯಿಂದ ನೆತ್ತಿ ಸುಡುವ ಬಿಸಿಲಿನಿಂದ ಬಸವಳಿದಿದ್ದ ಸಿಲಿಕಾನ್ ಸಿಟಿಗೆ ಇದ್ದಕ್ಕಿಂತೆ ಮಳೆರಾಯ ತಂಪೆರೆದಿದ್ದ. ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುವ ಹೊತ್ತಲ್ಲಿ, ಇದ್ದಕ್ಕಿದ್ದಂತೆ ಮಳೆರಾಯ ಎಂಟ್ರಿಯಾಗಿದ್ದು ಅರ್ಧ ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಳೆ ಅಲ್ಲಲ್ಲಿ ಟ್ರಾಫಿಕ್ ಜಾಂ ಆಗುವಂತೆ ಮಾಡಿತ್ತು. ರಸ್ತೆಗಳೆಲ್ಲ ನದಿಗಳಂತಾಗಿದ್ದವು. ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ ಧಾರಾಕಾರ ಮಳೆಯಿಂದ ಮರಗಳು ಧರೆಗುರುಳಿವೆ. ನಗರದ ಏಳು ವಲಯಗಳ ಪೈಕಿ…

Read More

ನಮ್ಮ ದೈನಂದಿನ ಜೀವನದಲ್ಲಿ ಗ್ಯಾಸ್ ಸಿಲಿಂಡರ್‌ಗಳು ಪ್ರಮುಖ ಭಾಗವಾಗಿದೆ. ಗ್ಯಾಸ್ ಬಳಕೆ ಎಲ್ಲರೂ ಮಾಡಿರುತ್ತೇವೆ. ಆದರೆ, ಗ್ಯಾಸ್ ಸಿಲಿಂಡರ್‌ ಸರಿಯಾಗಿ ಗಮನಿಸಿದರೆ ನಿಮೆಗೆ ಅಚ್ಚರಿಯ ವಿಷಯ ತಿಳಿಯುತ್ತೆ. ಅದನ್ನು ತಿಳಿಯಲು ತಪ್ಪದೇ ಈ ಸುದ್ದಿ ಓದಿ. ಗ್ಯಾಸ್ ಸಿಲಿಂಡರ್ ಉಪಯುಕ್ತವಾಗಿದ್ದರೂ ಸಹ, ಇದಕ್ಕೆ ಸಂಬಂಧಿಸಿದ ಅಪಾಯಗಳು ತಪ್ಪಿದ್ದಲ್ಲ. ಇನ್ನು ನೀವು ಸಿಲಿಂಡರ್ ಅನ್ನು ಎಚ್ಚರಿಕೆಯಿಂದ ನೋಡಿದರೆ ಗ್ಯಾಸ್ ಸಿಲಿಂಡರ್‌ ಗಳ ಮೇಲೆ ಸಂಖ್ಯೆಗಳು ಇರುತ್ತದೆ. ನೀವು ಎಂದಾದರೂ ನೋಡಿದ್ದೀರಾ? ಅದರ ಮೇಲ್ಭಾಗದಲ್ಲಿ ನೀವು ಕೆಲವು ಕೋಡ್ ಅನ್ನು ನೋಡಿರುತ್ತೀರಿ. ಇದು ಏನನ್ನು ಸೂಚಿಸುತ್ತದೆ ನಿಮಗೆ ಗೊತ್ತಾ? A, B, C, D ಅಕ್ಷರಗಳು ಈ ಸಂಕೇತಗಳ ಆರಂಭದಲ್ಲಿ ಬರೆಯಲಾದ A, B, C, D ಅಕ್ಷರಗಳು ವರ್ಷದ 12 ತಿಂಗಳುಗಳಿಗೆ ಸಂಬಂಧಿಸಿದ 4೪ ಗುಂಪುಗಳಲ್ಲಿವೆ. ಇಲ್ಲಿ A ಅಕ್ಷರವನ್ನು ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಬಳಸಿದರೆ, B ಅಕ್ಷರಗಳನ್ನು ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳಲ್ಲಿ ಬಳಸಲಾಗುತ್ತದೆ. ಅದೇ ರೀತಿ,…

Read More

ಮುಂಬೈ: ಭಾರತ ಪ್ರಸಕ್ತ ವರ್ಲ್ಡ್​ಕಪ್​ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಾಗಿ ಮುನ್ನುಗ್ಗಿದ್ದು, ಸೆಮೀಸ್​ ಪ್ರವೇಶಿಸಿದೆ. ಇನ್ನೂ ಒಂದು ಪಂದ್ಯ ಇದೆ ಆದ್ರೂ, ಭಾರತ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಖಾತ್ರಿಪಡಿಸಿಕೊಂಡಿದೆ. ಬಾರತದ ಎದುರು ಸೆಮೀಸ್​ನಲ್ಲಿ ಎದುರುಗೊಳ್ಳುವ ತಂಡ ಯಾವುದು ಎಂಬುದು ಇನ್ನೂ ಕುತೂಹಲಕ್ಕೆ ಕಾರಣವಾಗಿದೆ. ಮೊದಲ ಸ್ಥಾನದಲ್ಲಿ ಮುಂದುವರಿದಿರುವ ಬಾರತ ಅಂಕಪಟ್ಟಿಯ 4ನೇ ತಂಡದ ವಿರುದ್ದ ಸೆಮೀಸ್​ ಕಾದಾಡಲಿದೆ. ಆದರೇ, 4ನೇ ಸ್ಥಾನಕ್ಕೆ ಯಾರು ಬರುತ್ತಾರೆ ಅನ್ನೋ ಲೆಕ್ಕಾಚಾರ ಇನ್ನೂ ಹಲವು ಪಂದ್ಯಗಳಲ್ಲಿ ನಿರ್ಧಾರವಾಗಲಿದೆ. ನ್ಯೂಜಿಲೆಂಡ್​, ಅಥವಾ ಅಫ್ಘಾನಿಸ್ತಾನ​ ಭಾರತದ ಎದುರಾಳಿ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸದ್ಯ ನವೆಂಬರ್​ 15ರಂದು ಭಾರತ ತನ್ನ ಸೆಮೀಸ್ ಆಡಲಿದೆ. ಆ ಸ್ಥಾನಕ್ಕೆ ಪಾಕ್​ ಬಂದದ್ದೇ ಆದಲ್ಲಿ, ಪಂದ್ಯದ ದಿನ ಮತ್ತು ಸ್ಥಳ ಬದಲಾವಣೆ ಆಗಲಿದೆ. ಪಾಕ್​ 4ನೇ ಸ್ಥಾನಕ್ಕೆ ಬಂದರೆ, ಭಾರತ 16ರಂದು ಈಡನ್​ ಗಾರ್ಡನ್​ನಲ್ಲಿ ಪಂದ್ಯ ಆಡಲಿದೆ. ಇದಕ್ಕೆ ಬಿಸಿಸಿಐ ಮತ್ತು ಪಿಸಿಬಿಯ ನಡುವಿನ ಒಪ್ಪಂದವೇ ಕಾರಣವಾಗಿದೆ. ಅಂಕಪಟ್ಟಿ 2 ಮತ್ತು 3ನೇ ಸ್ಥಾನಕ್ಕೆ…

Read More

ಬೆಂಗಳೂರು;- ರಾಜ್ಯದ ವಿವಿಧೆಡೆ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ ಹಾಗೂ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

Read More