Author: AIN Author

ಜೈಪುರ: ನಿಯಂತ್ರಣ ತಪ್ಪಿದ ಬಸ್‌ವೊಂದು ರೈಲು ಹಳಿಯ (Railway Track) ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು ಬೆಳ್ಳಂಬೆಳಗ್ಗೆ ರಾಜಸ್ಥಾನದ ದೌಸಾ (Rajasthan Dausa) ಜಿಲ್ಲೆಯಲ್ಲಿ ನಡೆದಿದೆ. ಮಧ್ಯರಾತ್ರಿ 2:15ಕ್ಕೆ ಮೇಲ್ಸೇತುವೆಯಿಂದ ದೌಸಾದ ರೈಲ್ವೆ ಹಳಿ ಮೇಲೆ ಬಸ್‌ ಬಿದ್ದು, ದುರಂತ ಸಂಭವಿಸಿದೆ. 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹರಿದ್ವಾರದಿಂದ (Haridwar) ಉದಯಪುರಕ್ಕೆ ತೆರಳುತ್ತಿತ್ತು. https://ainlivenews.com/suprem-ray-healing-center-reiki/ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹೆಚ್ಚುವರಿ ತನಿಖೆ ನಡೆಸಲಾಗುತ್ತಿದೆ ಎಂದು ದೌಸಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜ್‌ಕುಮಾರ್ ಕಸ್ವಾ ತಿಳಿಸಿದ್ದಾರೆ. ಸಂಬಂಧಪಟ್ಟ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: 49 ಶತಕಗಳ ಮೂಲಕ ಸಚಿನ್ (Sachin) ದಾಖಲೆ ಸರಿಗಟ್ಟಿರುವ ಕೊಹ್ಲಿ (Virat Kohli) ತಮ್ಮ 35ನೇ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸಿಕೊಂಡರು. 49 ಶತಕ ಬಾರಿಸಿದ್ದೇನೋ ಸರಿ, ಆದು ಯಾವ ತಂಡದ ವಿರುದ್ಧ ಎಂದು ಗೊತ್ತಾಗಬೇಕಲ್ಲ. ಅದಕ್ಕೆ ಈ ಎಲ್ಲ ಅಂಕಿ ಅಂಶಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ. ಶತಕ ಬಾರಿಸುವುದೆಂದರೆ ಸಚಿನ್ ಹಾಗೂ ಕೊಹ್ಲಿಗೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ಎಂದರೆ ಅಚ್ಚುಮೆಚ್ಚು. ಸಚಿನ್ ಆಸ್ಟ್ರೇಲಿಯಾ ವಿರುದ್ಧ 9 ಶತಕ ದಾಖಲಿಸಿದ್ದರೆ, ಕೊಹ್ಲಿ 8 ಶತಕ ದಾಖಲಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಇಬ್ಬರೂ ತಲಾ 5 ಶತಕ ದಾಖಲಿಸಿದ್ದಾರೆ. ಆ `49 ಶತಕ’ಗಳು ಯಾರ ವಿರುದ್ಧ..? ಆಸ್ಟ್ರೇಲಿಯಾ ವಿರುದ್ಧ ಸಚಿನ್ 9, ಕೊಹ್ಲಿ 8 ಶತಕ ಬಾಂಗ್ಲಾದೇಶದ ವಿರುದ್ಧ ಸಚಿನ್ 1, ವಿರಾಟ್ ಕೊಹ್ಲಿ 5 ಶತಕ ಇಂಗ್ಲೆಂಡ್ ವಿರುದ್ಧ ಸಚಿನ್ 2, ವಿರಾಟ್ 3 ಶತಕ ನ್ಯೂಜಿಲೆಂಡ್ ವಿರುದ್ಧ ಸಚಿನ್ ಹಾಗೂ ವಿರಾಟ್ ತಲಾ 5 ಶತಕ ಪಾಕಿಸ್ತಾನ ವಿರುದ್ಧ ಸಚಿನ್ 5…

Read More

ಮುಂಬೈ: ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಜಯದ ಓಟಕ್ಕೆ ತಡೆಯೇ ಇಲ್ಲದಂತೆ ಬಲಿಷ್ಠ ತಂಡಗಳನ್ನ ಬಗ್ಗುಬಡಿದು ಟೀಂ ಇಂಡಿಯಾ ಮುನ್ನುಗ್ಗುತ್ತಿದೆ. ಈ ನಡುವೆ ಪಾಕ್‌ ಮಾಜಿ ವೇಗಿ ಶೋಯೆಬ್‌ ಅಖ್ತರ್‌ (Shoaib Akhtar) ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾರನ್ನ (Rohit Sharma) ಹೊಗಳಿದ್ದಾರೆ. ದಕ್ಷಿಣ ಆಫ್ರಿಕಾ (South Africa) ಪಂದ್ಯದ ವಿರುದ್ಧ ರೋಹಿತ್‌ ಶರ್ಮಾ ನಾಯಕತ್ವದ ಬಗ್ಗೆ ಮಾತನಾಡಿರುವ ಅಖ್ತರ್‌, ರೋಹಿತ್‌ ಮನಸ್ಸು ಮಾಡಿದ್ರೆ ಇದೇ ವಿಶ್ವಕಪ್‌ನಲ್ಲಿ 5 ಶತಕಗಳನ್ನ ಸಿಡಿಸಬಹುದಿತ್ತು. ಆದ್ರೆ ಅವರು ತಂಡಕ್ಕಾಗಿ ಆಡುತ್ತಾರೆ. ಆದ್ದರಿಂದಲೇ 5 ಶತಕಗಳನ್ನು ಕಳೆದುಕೊಂಡಿದ್ದಾರೆ, ಅವರು ನಿಸ್ವಾರ್ಥ ವ್ಯಕ್ತಿ ಎಂದು ಶ್ಲಾಘಿಸಿದ್ದಾರೆ. ಏಕದಿನ ಕ್ರಿಕೆಟ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ (Virat Kohli) ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಕ್ರಿಕೆಟ್‌ ದೇವರು ಸಚಿನ್‌ ಶತಕಗಳ ದಾಖಲೆಯನ್ನ ಸರಿಗಟ್ಟಿದ್ದಾರೆ. ಆದ್ರೆ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್‌ ಮಾಡಿದ್ದರಿಂದ ನೆಟ್ಟಿಗರು ಸೆಲ್ಫಿಶ್‌ ಎಂಬ ಹಣೆಪಟ್ಟಿ ಕಟ್ಟಿದ್ದಾರೆ. ಈ ಬೆನ್ನಲ್ಲೇ ರೋಹಿತ್‌ ಕುರಿತು ಮಾತನಾಡಿದ್ದಾರೆ. ಪ್ರಸಕ್ತ ಟೂರ್ನಿಯಲ್ಲಿ ಹಿಟ್‌ಮ್ಯಾನ್ ಅಫ್ಘಾನಿಸ್ತಾನ…

Read More

ಬೈರುತ್‌: ಒಂದಲ್ಲ ಒಂದುದಿನ ಸೋವಿಯತ್‌ ಒಕ್ಕೂಟದಂತೆ (USSR) ಅಮೆರಿಕ ಕೂಡ ನಾಶವಾಗುತ್ತದೆ ಎಂದು ಹಮಾಸ್‌ ಹಿರಿಯ ಅಧಿಕಾರಿ ಅಲಿ ಬರಾಕಾ (Ali Baraka) ಎಚ್ಚರಿಕೆ ನೀಡಿದ್ದಾರೆ. ಲೆಬನಾನ್‌ ಯುಟ್ಯೂಬ್‌ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಲಿ ಬರಾಕಾ, ಅಮೆರಿಕದ (America) ಎಲ್ಲಾ ಶತ್ರುಗಳು ಸಮಾಲೋಚನೆ ನಡೆಸುತ್ತಿದ್ದಾರೆ ಮತ್ತು ಹತ್ತಿರವಾಗುತ್ತಿದ್ದಾರೆ. ಅವರೆಲ್ಲರೂ ಒಟ್ಟಿಗೇ ಒಂದು ದಿನ ಯುದ್ಧ ಮಾಡಬಹುದು. ಆಗ ಅಮೆರಿಕ ಶಕ್ತಿಯುತ ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೇ ವೇಳೆ ಉತ್ತರ ಕೊರಿಯಾದ (North Korea) ಸಾಮರ್ಥ್ಯವನ್ನು ಶ್ಲಾಘಿಸಿರುವ ಬರಾಕಾ, ನಮಗೆ ತಿಳಿದಿರುವಂತೆ ವಿಶ್ವದಲ್ಲಿ ಅಮೆರಿಕವನ್ನು ಹೊಡೆದುರುಳಿಸುವ ಸಾಮರ್ಥ್ಯ ಇರುವುದು ಉತ್ತರ ಕೊರಿಯಾಕ್ಕೆ. ಶೀಘ್ರದಲ್ಲೇ ಇಸ್ರೇಲ್‌ ಹಮಾಸ್‌ ಯುದ್ಧದ (Israel Hamas War) ನಡುವೆ ಉತ್ತರ ಕೊರಿಯಾ ಮಧ್ಯಪ್ರವೇಶಿಸುವ ದಿನ ಬರಬಹುದು. ಇರಾನ್‌ ಅಮೆರಿಕವನ್ನು ಹೊಡೆಯುವ ಸಾಮರ್ಥ್ಯ ಹೊಂದಿಲ್ಲ. ಒಂದು ವೇಳೆ ಇರಾನ್‌ ಯುದ್ಧದ ನಡುವೆ ಮಧ್ಯಪ್ರವೇಶಿಸಿದರೆ, ಅದು ಝಿಯೋನಿಸ್ಟ್ ಘಟಕ ಮತ್ತು ಈ ಪ್ರದೇಶದಲ್ಲಿನ ಅಮೆರಿಕಾದ ನೆಲೆಗಳನ್ನು ಹೊಡೆಯಬಹುದ ಅಷ್ಟೇ ಎಂದು…

Read More

ಬೆಂಗಳೂರು;- ರಾಜಧಾನಿ ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸುವಂತೆ ಸಚಿವ ಈಶ್ವರ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚನೆ ನೀಡಿದ್ದಾರೆ. ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು…

Read More

ಜಮಖಂಡಿ : ನಾಯಕತ್ವ ಬದಲಾವಣೆ, ಸಂಪುಟ ಪುನರಚನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಐದು ವರ್ಷ ನಮ್ಮದೇ ಸರ್ಕಾರ, ನಾನೇ ಸಿಎಂ ಎಂದು ಹೇಳಿರುವುದು ಸತ್ಯವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ತಾಲ್ಲೂಕಿನ ಕಂಕಣವಾಡಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ರೈತರು ನಿರ್ಮಿಸಿರುವ ಶ್ರೀ ಸಿದ್ದೇಶ್ವರ ತೂಗು ಸೇತುವೆ ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ.  ಅವರನ್ನು ಬದಲಿಸುವ ಚರ್ಚೆ ಇಲ್ಲ. ಅವರು ಹೇಳಿರುವದು ಸರಿಯಾಗಿದೆ. ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕೆಂದರೆ ಅದನ್ನು ಶಾಸಕಾಂಗ ಪಕ್ಷದಲ್ಲಿ ಮಾಡಬೇಕಾಗುತ್ತದೆ. https://ainlivenews.com/suprem-ray-healing-center-reiki/#google_vignette ಅದನ್ನು ಹೈಕಮಾಂಡ್‌ ನೋಡಿಕೊಳ್ಳುತ್ತದೆ. ಈ ಕುರಿತು ಯಾರಿಗೂ ಅಸಮಾಧಾನ ಇಲ್ಲ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ, ಅರುಣಕುಮಾರ ಶಹಾ, ಈಶ್ವರ ಕರಬಸನವರ, ಮುತ್ತಣ್ಣ ಹಿಪ್ಪರಗಿ, ಪರಗೌಡ ಬಿರಾದಾರ, ಅಶೋಕ ಕಿವಡಿ, ಅಬೂಬಕರ ಕುಡಚಿ, ಇತರರು ಇದ್ದರು.

Read More

ಬೆಂಗಳೂರು;- ರಾಜ್ಯ ಸರ್ಕಾರ ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಇನ್ನು ಮುಂದೆ ನಿಗದಿತ ಅವಧಿಯೊಳಗೆ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆ. ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಮಾಸಿಕವಾಗಿ ಪಾವತಿ ಮಾಡುವ ಗೃಹ ಲಕ್ಷ್ಮಿ, ಅನ್ನ ಭಾಗ್ಯ ಮತ್ತ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಹಂತ ಹಂತವಾಗಿ ಪಾವತಿ ಮಾಡಲು ವೇಳಾಪಟ್ಟಿ ಸಿದ್ದ ಪಡಿಸಿ ನಿಗದಿತ ಸಮಯಕ್ಕೆ ತಲುಪಿಸುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಪಾವತಿ ಮಾಡುವ ಸಲುವಾಗಿ ಡಿ.ಡಿ.ಓ, ಡಿ.ಬಿ.ಟಿ ಸಲ್ ಮತ್ತು ಖಜಾನೆಗಳಿಗೆ ಯಾವುದೇ ರೀತಿಯ ತಾಂತ್ರಿಕ /ಆಡಳಿತಾತ್ಮಕ ಸಮಸ್ಯೆ ಎದುರಾದರೆ ಬಗೆಹರಿಸಲು ಸೂಚಿಸಲಾಗಿದೆ.ಅದೇ ರೀತಿ, ಪ್ರತಿ ಹಂತದಲ್ಲೂ ಸಮನ್ವಯೀಕರಣ ಸುಲಭಗೊಳಿಸಲು ತಿಳಿಸಲಾಗಿದೆ. ಈ ಕುರಿತು ಖಜಾನೆ ಆಯುಕ್ತರ ಪ್ರಸ್ತಾವನೆ ಮಾಡಲಾಗಿದ್ದು, ಸರ್ಕಾರದ ಎಲ್ಲಾ ಇಲಾಖೆಗಳ ಫಲಾನುಭವಿ ಆಧಾರಿತ ಕಲ್ಯಾಣ ಹಾಗೂ ಸಬ್ಸಿಡಿ ಸ್ಟ್ರೀಂಗಳ ಪಾವತಿಗಳನ್ನು ನೇರ ವರ್ಗಾವಣೆ ಮಾಡುವ ವ್ಯವಸ್ಥೆ ಮೂಲಕ ಫಲಾನುಭವಿಗಳ ಆಧಾರ್…

Read More

ಬಾಗಲಕೋಟೆ : ವಿಜಯಪುರದ ಶಾಸಕ ಯತ್ನಾಳ ಮತ್ತೆ ನನ್ನ ನಡುವಿನ ಸಂಬಂಧ ಸರಿ ಇಲ್ಲ, ಎಂಬುದು ಸುಳ್ಳು. ನಾವೇನು ಜಗಳವಾಡಿಲ್ಲ. ಮಾಧ್ಯಮದ ಎದುರಿಗೆ ಮಾತ್ರ ನಾವೊಂದು ಅವರೊಂದು ಹೇಳಿಕೆ ಕೊಡುತ್ತೇವೆ. ಆದರೆ, ವೈಯಕ್ತಿಕವಾಗಿ ನಾವು ಚೆನ್ನಾಗಿಯೇ ಇದ್ದೇವೆ ಎಂದು ಸಂಸದ ರಮೇಶ ಜಿಗಜಿಣಗಿ ಸ್ಪಷ್ಟಪಡಿಸಿದರು. ಬಾಗಲಕೋಟೆ ಜಿಲ್ಲೆ ಅನಗವಾಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಅನುಗುಣವಾಗಿ ನಾವು ಸಾಂದರ್ಭಿಕವಾಗಿ ಏನೋ ಒಂದು ಹೇಳಿಕೆ ಕೊಟ್ಟಿರುತ್ತೇವೆ.  ಅದನ್ನೇ ತಪ್ಪಾಗಿ ಭಾವಿಸಿದರೆ ಏನು ಮಾಡಲು ಸಾಧ್ಯ. ನಮ್ಮಿಬ್ಬರ ಮನಸು ಒಂದೇ ಇದೆ. ನನಗೆ ಯತ್ನಾಳ ಸಹಾಯ ಮಾಡಿದ್ದಾರೆ. ನಾನು ಸಹ ಅವರಿಗೆ ಸಹಾಯ ಮಾಡಿದ್ದೇನೆ. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. https://ainlivenews.com/suprem-ray-healing-center-reiki/#google_vignette ಮಾಧ್ಯಮದವರೇ ಸೃಷ್ಟಿಸಿದ ಭಿನ್ನಾಭಿಪ್ರಾಯ ಇದು ಎಂದು ಹೇಳಿದರು. ವಿಜಯಪುರದಿಂದ ಲೋಕಸಭೆ ಚುನಾವಣೆಗೆ ಸ್ಫರ್ಧೆ ಮಾಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಮನೆಯಲ್ಲಿ ಮೊಮ್ಮಕ್ಕಳನ್ನು ಆಡಿಸುತ್ತ ಕಾಲಕಳೆಯುತ್ತೇನೆ ಎಂದರು.

Read More

ಬೆಂಗಳೂರು;- ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಪ್ರತಿಭಟನೆ ದಿಡೀರ್ ಮುಂದೂಡಿಕೆ ಆಗಿದೆ. ಈ ಸಂಬಂಧ ಸಂಘದ ರಾಜ್ಯಾಧ್ಯಕ್ಷ ಟಿ ಕೃಷ್ಣಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ವೈಫಲ್ಯದ ವಿರುದ್ಧ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನ. 7ಕ್ಕೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿತ್ತು. 10 ಕೆಜಿ ಅಕ್ಕಿ ಮತ್ತು ಪಡಿತರ ಅಂಗಡಿ ಮಾಲಿಕರಿಗೆ ಕಮಿಷನ್ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಆದರೆ ಇದೀಗ ಪ್ರತಿಭಟನೆ ಮುಂದೂಡಲಾಗಿದ್ದು, ನ. 9 ಕ್ಕೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದರು. ಇದೇ ವೇಳೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ. ಟಿ ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಡಿತರ ವಿತರಕರಿಗೆ ಎತ್ತುವಳಿ ಮಾಡದಂತೆ ಕರೆ ನೀಡಲಾಗಿದ್ದು, ಪ್ರತಿಭಟನೆ ಸ್ಥಳಕ್ಕೆ ಸಚಿವರೆ ಆಗಮಿಸಿ ಸರ್ಕಾರದ ನಿರ್ಧಾರ ಪ್ರಕಟಿಸಲಿ ಎಂದು ಸಂಘದ ರಾಜ್ಯಾಧ್ಯಕ್ಷ ಟಿ ಕೃಷ್ಣಪ್ಪ. ಆಗ್ರಹಿಸಿದ್ದಾರೆ.

Read More

ಗೋಕಾಕ : ಅನಾರೋಗ್ಯದ ಕಾರಣದಿಂದಾಗಿ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಉಪಹಾರ ಸಭೆಗೆ ಹೋಗಿಲ್ಲ. ಸಭೆಗೆ ಬರಲು ನನಗೂ ಆಹ್ವಾನ ನೀಡಿದ್ದರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತಮ್ಮ ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 4 ದಿನಗಳಿಂದ ನನಗೆ ಆರೋಗ್ಯ ಸರಿಯಲ್ಲ. ಆದ್ದರಿಂದ ವಿಶ್ರಾಂತಿ ಪಡೆಯುತ್ತಿದ್ದೇನೆ. ನನಗೆ ಆರೋಗ್ಯವೇ ಮೊದಲು. ಆಮೇಲೆ ರಾಜಕಾರಣ ಎಂದರು. ಸಭೆಯಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ. ಐದು ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಸರ್ಕಾರ ಆಡಳಿತ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. https://ainlivenews.com/suprem-ray-healing-center-reiki/#google_vignette  ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಬದಲಾವಣೆ ಆಗುತ್ತದೆ ಎಂದ ಸಹೋದರ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಹೇಳಿಕೆ ಈ ಮೂಲಕ ಅವರು ಟಾಂಗ್ ನೀಡಿದರು. ಸದ್ಯದಲ್ಲೇ ಡಿಕೆಶಿ ಮಾಜಿ ಮಂತ್ರಿ ಆಗುತ್ತಾರೆ ಎನ್ನುವ ರಮೇಶ…

Read More