Author: AIN Author

ಚಿಕ್ಕಮಗಳೂರು;- ಗಣೇಶ ಪೂಜೆಗೆ ವಿರೋಧ ಸರಿಯಲ್ಲ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಗಣಪತಿ ಪೂಜೆ, ಪ್ರಾರ್ಥನೆ ಮೌಢ್ಯದ ಆಚರಣೆ ಎಂಬ ಹೇಳಿಕೆ, ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರಿಗೆ ಶೋಭೆ ತರುವುದಿಲ್ಲ’ ಎಂದರು. ಪಂಡಿತಾರಾಧ್ಯರ ಬಗ್ಗೆ ಅಪಾರ ಗೌರವವಿದೆ. ನಾಟಕ, ಉತ್ಸವದ ಮೂಲಕ ಸಾಮಾಜಿಕವಾಗಿ ದೊಡ್ಡ ಕ್ರಾಂತಿ ಮಾಡಿದ ಮಠ ಅದು. ಅವರು ಈ ರೀತಿಯ ಸಣ್ಣ ಹೇಳಿಕೆ ನೀಡಿರುವುದು ಸರಿಯಲ್ಲ’ ಎಂದು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ‘ಶುಭ ಕಾರ್ಯಗಳಲ್ಲಿ ಮೊದಲಿಗೆ ಗಣೇಶನ ಪೂಜೆ ಮಾಡಿದರೆ ಒಳ್ಳೆಯದು ಎಂದು ಜನ ನಂಬಿದ್ದಾರೆ. ಗಣೇಶನ ತಂದೆ ಶಿವನ ಪೂಜೆ ಮಾಡುತ್ತೀರಾ. ಗಣೇಶ ಏಕೆ ಬೇಡ, ನಿಮ್ಮ ತರ್ಕ ಏನು’ ಎಂದು ಪ್ರಶ್ನಿಸಿದರು. ವಚನಗಳನ್ನು ಹೇಳಬೇಕು, ಉಳಿಸಬೇಕು ಎಂಬುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಗಣೇಶನ ಪೂಜೆ ವಿರೋಧಿಸುವುದು ಸಂವಿ ಧಾನ ವಿರೋಧಿಯಾಗುತ್ತದೆ. ಈ ಹೇಳಿಕೆಯನ್ನು ಶ್ರೀಗಳು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು. ‘ರಾಜ್ಯದಲ್ಲಿರುವುದು ಹಿಂದೂ ಗಳನ್ನು ದ್ವೇಷಿಸುವ ಸರ್ಕಾರ. ಹುಲಿ ಉಗುರು ವಿಚಾರದಲ್ಲಿ…

Read More

ಬೆಂಗಳೂರು;- ಉಪಾಹಾರ ಸಭೆಯಲ್ಲಿ ಸಿ.ಎಂ ವಿಚಾರ ನಾನೇ ಪ್ರಸ್ತಾಪ ಮಾಡಿದ್ದೆ ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಸಭೆ ಚುನಾವಣೆ ಬಗ್ಗೆಯೂ ಕೆಲವು ನಿರ್ದೇಶನ ನೀಡಿದ್ದೇನೆ‌’ ಎಂದು ಹೇಳಿದರು. ‘ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಶಾಸಕರ ಬೆಂಬಲ ಕೊಡುತ್ತೇವೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿರುವುದು ವ್ಯಂಗ್ಯವಾಗಿಯೇ ಹೊರತು, ಅದರಲ್ಲಿ ಬೇರೇನೂ ಇಲ್ಲ. ವ್ಯಂಗ್ಯವಾಗಿ ಹೇಳಿದ್ದಾರೆ ಎಂದು ಖುದ್ದು ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರೆ. ಮೊದಲು ಅವರು ಎನ್‌ಡಿಎ ಬಿಟ್ಟು ಹೊರಬರಲಿ ಎಂದೂ ಹೇಳಿದ್ದಾರೆ’ ಎಂದು ಪ್ರತಿಕ್ರಿಯಿಸಿದರು. ಕುಮಾರಸ್ವಾಮಿಗೆ ವ್ಯಂಗ್ಯವಾಗಿ ಹೇಳುವುದೂ ಬರುತ್ತದೆಯಲ್ಲಾ ಎನ್ನುವುದೇ ಖುಷಿ ನನಗೆ’ ಎಂದು ನಗುತ್ತಾ ಹೇಳಿದರು. ‘ಬಿಜೆಪಿ ಮತ್ತು ಜೆಡಿಎಸ್‌ನವರು ರಾಜಕೀಯವಾಗಿ ಹತಾಶರಾಗಿದ್ದಾರೆ. ಆದ್ದರಿಂದಲೇ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಇಲ್ಲಸಲ್ಲದ್ದನ್ನು ಮಾತನಾಡುತ್ತಿದ್ದಾರೆ‌’ ಎಂದು ಟೀಕಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಅವರು ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಅವರ ಪತಿ ಊರಿನಲ್ಲಿದ್ದರು ಎಂದು ತಿಳಿದುಬಂದಿದೆ. ಕಾರಣ ಗೊತ್ತಾಗಿಲ್ಲ. ತನಿಖೆ ನಡೆಯುತ್ತಿದೆ’…

Read More

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಏರಿಲಿತದ ಹಾವು ಏಣಿ ಆಟ ಶುರುವಾಗಿದೆ. ಇಸ್ರೇಲ್ ಯುದ್ಧ, ಅಂತರಾಷ್ಟ್ರೀಯ ಟ್ರೆಂಡ್‌ ಬದಲಾವಣೆ ಹಿನ್ನೆಲೆ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಾಗುತ್ತಿದ್ದು ಇಂದು ಚಿನ್ನದ ದರದಲ್ಲಿ ಸ್ಥಿರತೆ ಕಂಡುಬಂದಿದೆ. ಇಂದಿನ ಚಿನ್ನ-ಬೆಳ್ಳಿಯ ದರ ಎಷ್ಟಿದೆ ಎಂದು ಇಲ್ಲಿ ತಿಳಿದುಕೊಳ್ಳೋಣ. ಇಂದು  ಚಿನ್ನದ ದರ ಹೀಗಿದೆ. ದೇಶದಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆಯು 5,650 ರೂಪಾಯಿ ಇದೆ. 1 ಗ್ರಾಂ 24 ಕ್ಯಾರೆಟ್ ಚಿನ್ನ ಅಥವಾ 999 ಗೋಲ್ಡ್‌ ಬೆಲೆ 6,164 ರೂಪಾಯಿ ಇದೆ. ದೇಶದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 56,500 ಆಗಿದೆ. 24 ಕ್ಯಾರೆಟ್ 10 ಗ್ರಾಂ ನ ಬೆಲೆ, 61,640 ಆಗಿದೆ. ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಕಂಡುಬಂದಿದ್ದು, ಶನಿವಾರದಿಂದ ಭಾನುವಾರಕ್ಕೆ ವೀಕೆಂಡ್‌ನಲ್ಲಿ ಸ್ಥಿರತೆ ಕಂಡುಬಂದಿದೆ. ಬೆಂಗಳೂರಲ್ಲಿ ಚಿನ್ನದ ದರ ಇನ್ನು ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಲ್ಲಿಯೂ ಚಿನ್ನದ ಬೆಲೆಯಲ್ಲಿ…

Read More

ಬೆಂಗಳೂರು: ಟೀಮ್ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಇಂಗ್ಲೆಂಡ್ ತಂಡದ ಆಲ್ ರೌಂಡರ್ ಹಾಗೂ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮುಕ್ತ ಕಂಠದಿಂದ ಪ್ರಶಂಸಿಸಿದ್ದು, 2023ರ ವಿಶ್ವಕಪ್ ಟೂರ್ನಿಯ ಅಂತ್ಯಕ್ಕೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆಯುವವರ ಸಾಲಿನಲ್ಲಿ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ, ಪಾಕಿಸ್ತಾನದ ಶಾಹಿನ್ ಶಾ ಅಫ್ರಿದಿ ನಿಂತಿದ್ದರೂ, ಇಂಗ್ಲೆಂಡ್ ತಂಡದ ಆಲ್ ರೌಂಡರ್ ಬೆನ್ ಸ್ಟೋಕ್ಸ್, ಟೀಮ್ ಇಂಡಿಯಾದ ಹಿರಿಯ ಬೌಲರ್ ಮೊಹಮ್ಮದ್ ಶಮಿಯನ್ನು ಅತಿ ಹೆಚ್ಚು ವಿಕೆಟ್ ಪಡೆಯುವ ಬೌಲರ್ ಆಗಿ ಆಯ್ಕೆ ಮಾಡಿದ್ದಾರೆ. ಮೊಹಮ್ಮದ್ ಶಮಿ ಅವರು ಪ್ರಸಕ್ತ ವಿಶ್ವಕಪ್ ಟೂರ್ನಿಯ ಬೌಲರ್ ಆಗಿದ್ದಾರೆ. ನನ್ನ ಪ್ರಕಾರ ಅವರು ವಿಶ್ವಕಪ್ ಟೂರ್ನಿಯ ಎಲ್ಲ ಪಂದ್ಯಗಳನ್ನು ಆಡುತ್ತಾರೆ ಎಂದು ನನಗೆ ಅನಿಸುತ್ತಿಲ್ಲ.ಆದರೆ ತನಗೆ ಸಿಕ್ಕ ಪ್ರತಿಯೊಂದು ಪಂದ್ಯದಲ್ಲೂ ಅತ್ಯಮೋಘ ಪ್ರದರ್ಶನ ತೋರುವ ಮೂಲಕ ವಿಕೆಟ್…

Read More

ಸೋಫಿಯಾ: 2024 ಕ್ಕೆ ಭಯಾನಕ ಹವಾಮಾನ ಘಟನೆಗಳು ಹಾಗೂ ಭಯೋತ್ಪಾದಕ ದಾಳಿಗಳಲ್ಲಿ ಏರಿಕೆಯಾಗಲಿದೆ ಎಂದು ಬಾಬಾ ವಂಗಾ (Baba Vanga) ಅವರು ಭವಿಷ್ಯ ನುಡಿದಿದ್ದಾರೆ. ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೂ ಕರೆಯಲ್ಪಡುವ ಬಾಬಾ ವಂಗಾ ಅವರು, 9/11 ಭಯೋತ್ಪಾದಕ ದಾಳಿಗಳು, ರಾಜಕುಮಾರಿ ಡಯಾನಾ ಸಾವು, ಚೆರ್ನೋಬಿಲ್ ದುರಂತ ಮತ್ತು ಬ್ರೆಕ್ಸಿಟ್‌ನಂತಹ ಪ್ರಮುಖ ವಿಶ್ವ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದರು. 2024 ರಲ್ಲಿ ಅವರು ಏಳು ಭವಿಷ್ಯವಾಣಿಗಳನ್ನು ನುಡಿದಿದ್ದಾರೆ. ಮುಂದಿನ ವರ್ಷ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೇಲೆ ಸಹ ದೇಶವಾಸಿಯಿಂದ ಹತ್ಯೆಯ ಪ್ರಯತ್ನ ನಡೆಯಬಹುದು. ಯುರೋಪ್‌ನಲ್ಲಿ ಹೆಚ್ಚಿದ ಭಯೋತ್ಪಾದಕ ದಾಳಿಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮುಂದಿನ ವರ್ಷ “ದೊಡ್ಡ ದೇಶ” ಜೈವಿಕ ಶಸ್ತ್ರಾಸ್ತ್ರ ಪರೀಕ್ಷೆಗಳು ಅಥವಾ ದಾಳಿಗಳನ್ನು ನಡೆಸುತ್ತದೆ ಎಂದು ಭವಿಷ್ಯ ಹೇಳಿದ್ದಾರೆ. https://ainlivenews.com/suprem-ray-healing-center-reiki/#google_vignette ಮುಂದಿನ ವರ್ಷ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ದೊಡ್ಡ ಆರ್ಥಿಕ ಬಿಕ್ಕಟ್ಟು ಉಂಟಾಗಲಿದೆ. ಹೆಚ್ಚುತ್ತಿರುವ ಸಾಲದ ಮಟ್ಟಗಳು ಮತ್ತು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಂತಹ ಅಂಶಗಳು ಇದಕ್ಕೆ…

Read More

ಅತ್ಯಂತ ಆರೋಗ್ಯಕರವೂ, ನಿತ್ಯ ಸೇವನೆಗೆ ಯೋಗ್ಯವಾದುದೂ, ಧಾತುಪುಷ್ಟಿಕರವೂ ಆಗಿರುವ ಎಳ್ಳು ಮತ್ತು ಎಳ್ಳೆಣ್ಣೆಯ ಬಗ್ಗೆ ಇಂದು ತಿಳಿದುಕೊಳ್ಳೋಣ. ಎಳ್ಳನ್ನು ಹಲವು ವಿಧಗಳಲ್ಲಿ ಬಳಸಬಹುದು. ಎಳ್ಳುಂಡೆಯ ಮೂಲಕ, ಚಟ್ನಿಯಲ್ಲಿ, ಚಟ್ನಿಪುಡಿಯಲ್ಲಿ, ಫೂ›ಟ್ ಸಲಾಡ್​ಗಳ ಮೇಲೆ ಹೀಗೆ ಹಲವು ವಿಧಗಳಲ್ಲಿ ಇದನ್ನು ನಾವು ಸೇವಿಸಬಹುದು. ಇದರಿಂದ ಕೂದಲಿನ ಆರೋಗ್ಯ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಏಕೆಂದರೆ ಇದು ಮೂಳೆಯನ್ನು ಪೋಷಿಸುತ್ತದೆ. ಹಾಗಾಗಿ ನಮ್ಮ ಸಂಧಿಗಳ ಬಲವನ್ನು ಹೆಚ್ಚಿಸಲು ಇದು ಸಹಾಯ ಮಾಡುತ್ತದೆ. ಇದಕ್ಕೆ ದಂತ್ಯ ಎಂದು ಕೂಡ ಕರೆದಿದ್ದಾರೆ. ಅಂದರೆ ಆರೋಗ್ಯಯುತ ಹಲ್ಲು ತಯಾರಾಗಲು ಇದು ಸಹಾಯಕ ಎಂದರ್ಥ. ಹಾಗಾಗಿ ಚಿಕ್ಕ ಮಕ್ಕಳಿಗೆ ಹಲ್ಲು ಬೆಳೆಯುವ ಸಮಯದಲ್ಲಿ ಎಳ್ಳುಂಡೆ ಮಾಡಿ ತಿನ್ನಲು ಕೊಡಬಹುದು. ಅಷ್ಟೇ ಅಲ್ಲದೇ ಇದು ಮಿದುಳಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಆಬಾಲವೃದ್ಧರಾಧಿಯಾಗಿ ಎಲ್ಲರೂ ತಮ್ಮ ಮಾನಸಿಕ ಆರೋಗ್ಯವನ್ನು, ನೆನಪಿನ ಶಕ್ತಿಯನ್ನು, ಒಟ್ಟಾರೆ ಮನೋಬಲವನ್ನು ಹೆಚ್ಚಿಸಿಕೊಳ್ಳಲು ನಿತ್ಯವೂ ಎಳ್ಳನ್ನು ಸೇವಿಸಬೇಕು. ಎಳ್ಳನ್ನು ನಿಯಮಿತವಾಗಿ ಸೇವಿಸುವುದರಿಂದ ಜಠರಾಗ್ನಿ ಕೂಡ ವರ್ಧಿಸುತ್ತದೆ. ಹಾಗಾಗಿ ಎಷ್ಟೋ ರೋಗಗಳನ್ನು ಬರದಂತೆ…

Read More

ಮಾಜಿ ಚಾಂಪಿಯನ್ ಶ್ರೀಲಂಕಾ ಹಾಗೂ ಈಗಾಗಲೆ ಸೆಮೀಸ್ ಆಸೆ ಕೈಚೆಲ್ಲಿರುವ ಬಾಂಗ್ಲಾದೇಶ ತಂಡಗಳು ಸೋಮವಾರ ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. 2025ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲು ಶಕೀಬ್ ಅಲ್ ಹಸನ್ ಪಡೆಗೆ ಈ ಪಂದ್ಯ ಮಹತ್ವದ್ದಾಗಿದೆ. ವಾಯು ಮಾಲಿನ್ಯದಿಂದಾಗಿ ಲಂಕಾ ತಂಡದ ಆಟಗಾರರು ಅಭ್ಯಾಸಕ್ಕೆ ಕ್ರೀಡಾಂಗಣಕ್ಕೆ ತೆರಳದೆ, ಹೋಟೆಲ್‌ನಲ್ಲೇ ಉಳಿಯಲು ನಿರ್ಧರಿಸಿದ್ದಾರೆ. ಬುಧವಾರ ದೆಹಲಿಗೆ ಆಗಮಿಸಿದ ಬಳಿಕ ಮೊದಲ ಎರಡು ದಿನ ಅಭ್ಯಾಸದಿಂದ ದೂರ ಉಳಿದಿದ್ದ ಬಾಂಗ್ಲಾದೇಶ ಆಟಗಾರರು ಭಾನುವಾರ ಮುಖಗವಸು ಧರಿಸಿ ತಯಾರಿ ನಡೆಸಿದ್ದಾರೆ. ಅಸ್ತಮ ಸಮಸ್ಯೆ ಹೊಂದಿರುವ ಆಟಗಾರರು ಅಭ್ಯಾಸದಿಂದ ದೂರ ಉಳಿದಿದ್ದಾರೆ. ದೆಹಲಿ ವಾಯು ಮಾಲಿನ್ಯದ ಸೂಚ್ಯಂಕ 400ರ ಗಡಿ ದಾಟಿದ್ದು, ಭಾನುವಾರ 457ಕ್ಕೆ ತಲುಪಿದೆ. ಐಸಿಸಿ ನೀತಿ ಸಂಹಿತೆ ಆರ್ಟಿಕಲ್ 2.8ರ ಪ್ರಕಾರ ಪಂದ್ಯದ ವೇಳೆ ಹಮಾಮಾನ ವೈಪರೀತ್ಯ ಅಥವಾ ಕ್ರೀಡಾಂಗಣದ ಗುಣಮಟ್ಟ, ಬೆಳಕಿನ ಕೊರತೆ ಅಥವಾ ಭಯದ ವಾತಾವರಣ ಸಂದರ್ಭದಲ್ಲಿ ಪಂದ್ಯವನ್ನು ರದ್ದುಗೊಳಿಸುವ ಬಗ್ಗೆ ಮ್ಯಾಚ್ ರೆಫ್ರಿ ಸಲಹೆ ಬಳಿಕ…

Read More

ಬೆಂಗಳೂರು;- ಮರಳು ಸಮಸ್ಯೆ ಪರಿಹರಿಸಲು ಸರ್ಕಾರದಿಂದ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದರು ಮಂಗಳೂರು ನಗರ ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಮರಳು ಸಮಸ್ಯೆ ಬಗ್ಗೆ ಮಾಡಿರುವ ಆರೋಪಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸಚಿವರು, ಶಾಸಕರಾದ ವೇದವ್ಯಾಸ್ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿರುವುದಲ್ಲ. ಕಳೆದ 4 ವರ್ಷಗಳಿಂದ ನಿಮ್ಮದೇ ʻಡಬಲ್ ಇಂಜಿನ್ʼ ಸರ್ಕಾರವಿತ್ತು. ಶಾಸಕರು, ಸಚಿವರು, ಸಂಸದರು ಬಿಜೆಪಿಯವರೇ ಆಗಿದ್ದರು. ನಿಮ್ಮ ಅವಧಿಯಲ್ಲೇ ನಿಮಗೆ ಮರಳು ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಜನರ ಮುಂದೆ ನೂರು ಬಾರಿ ಸುಳ್ಳು ಹೇಳಿ, ಅದೇ ಸತ್ಯ ಎಂಬಂತೆ ಬಿಂಬಿಸುವ ಚಾಳಿ ನಿಮ್ಮದು. ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರದೃಷ್ಠಿಯ ಒಂದೂ…

Read More

ಕೆಲವರು ಮೈ ತುಂಬಾ ಬೆವರುತ್ತದೆ, ಮತ್ತೆ ಕೆಲವರದ್ದು ಅಷ್ಟು ಬೆವರುವುದಿಲ್ಲ, ಇನ್ನು ಕೆಲವರಿಗೆ ಮೈಯೇನೂ ಅಷ್ಟು ಬೆವರುವುದಿಲ್ಲ, ಆದರೆ ಪಾದಗಳು ತುಂಬಾ ಬೆವರುತ್ತಿರುತ್ತದೆ. ಅಂಥವರಿಗೆ ಪಾದಗಳ ದುರ್ವಾಸನೆ ತಪ್ಪಿದ್ದಲ್ಲ. ಈ ಪಾದಗಳ ದುರ್ವಾಸನೆ ಬೀರಲಾರಂಭಿಸಿದರೆ ನಮ್ಮ ಪಕ್ಕ ಕೂರಲು ಸ್ನೇಹಿತರು ಹಿಂಜರಿಯುತ್ತಾರೆ, ಇನ್ನು ಶೂ ಬಿಚ್ಚುವಾಗ ಬರುವ ದುರ್ವಾಸನೆಗೆ ಅಕ್ಕ-ಪಕ್ಕದವರು ಮೂಗು ಮುಚ್ಚಿಕೊಳ್ಳುತ್ತಾರೆ, ಇದರಿಂದ ಮುಜುಗರ ತಪ್ಪಿದ್ದಲ್ಲ. ಬ್ಲ್ಯಾಕ್ ಟೀ ಎಲ್ಲರ ಮನೆಯಲ್ಲಿ ಟೀ ಪುಡಿ ಇದ್ದೇ ಇರುತ್ತದೆ. ಬರೀ ನೀರಿಗೆ 1 ಚಮಚ ಟೀ ಪುಡಿ ಹಾಕಿ ಡಿಕಾಷನ್ ತಯಾರಿಸಿ. ನಂತರ ಆ ಡಿಕಾಷನ್ ಅನ್ನು ಅರ್ಧ ಬಕೆಟ್‌ ಉಗುರು ಬೆಚ್ಚಗಿನನೀರಿಗೆ ಸುರಿದು ಅದರಲ್ಲಿ 10 ನಿಮಿಷ ಪಾದಗಳನ್ನುಇಟ್ಟು ಪೇಪರ್‌ ಓದುತ್ತಾ ಅಥವಾ ನಿಮ್ಮಿಷ್ಟ ಸಂಗೀತ ಕೇಳುತ್ತಾ ಆರಾಮವಾಗಿ ಇರಿ. ನಂತರ ಕಾಲುಗಳನ್ನು ತೊಳೆದು ಒಣಗಿದ ಟವಲ್‌ನಿಂದ ಒರೆಸಿ. ಈ ರೀತಿ ಮಾಡುತ್ತಾ ಬಂದರೆ ಕೆಲವೇ ತಿಂಗಳಿನಲ್ಲಿ ಪಾದ ದುರ್ವಾಸನೆ ಬೀರುವ ಸಮಸ್ಯೆ ಇಲ್ಲವಾಗುವುದು. ಈ ರೀತಿ ಒಂದು ದಿನ…

Read More

ನವದೆಹಲಿ: ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಿಂದಾಗಿ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದೆ. ಇದೀಗ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನಗಳಲ್ಲಿ (Air India Flight) ಸಿಖ್ಖರು ಪ್ರಯಾಣಿಸದಂತೆ ಎಚ್ಚರಿಕೆ ನೀಡಿದ್ದಾನೆ. ಗುರುಪತ್ವಂತ್ ಪನ್ನುನ್‌ನ ಹೊಸ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ನವೆಂಬರ್ 19 ರಂದು ನಿಮ್ಮ ಜೀವಕ್ಕೆ ಅಪಾಯವಿದೆ. ಏರ್ ಇಂಡಿಯಾ ವಿಮಾನಗಳಲ್ಲಿ ಸಿಖ್ ಸಮುದಾಯದ ಜನರು ಪ್ರಯಾಣಿಸಬೇಡಿ ಎಂದು ಎಚ್ಚರಿಕೆ ನೀಡಿದ್ದು, https://ainlivenews.com/suprem-ray-healing-center-reiki/#google_vignette  ಇದು ಏರ್ ಇಂಡಿಯಾ ವಿಮಾನಗಳ ಮೇಲೆ ದಾಳಿಯನ್ನು ಸೂಚಿಸುತ್ತದೆ. ವೈರಲ್ ಆಗಿರುವ ವೀಡಿಯೋದಲ್ಲಿ, ನಾವು ಸಿಖ್ ಜನರನ್ನು ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದ ಮೂಲಕ ಪ್ರಯಾಣಿಸಬೇಡಿ ಎಂದು ಕೇಳಿಕೊಳ್ಳುತ್ತೇವೆ. ಅಂದು ಜಾಗತಿಕ ದಿಗ್ಬಂಧನ ಇರುತ್ತದೆ. ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ…

Read More