Author: AIN Author

ನೆನ್ನೆಯಿಂದ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಕುರಿತಂತೆ ಅನೇಕ ಕಲಾವಿದರು ಮತ್ತು ರಶ್ಮಿಕಾ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು. ಈಗ ಸ್ವತಃ ರಶ್ಮಿಕಾ ಮಂದಣ್ಣ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯಿಂದಾಗಿ ನನಗೆ ತುಂಬಾ ನೋವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇಂಥದ್ದೊಂದು ಸಂಗತಿಯನ್ನು ಹಂಚಿಕೊಳ್ಳಲು ತುಂಬಾ ನೋವಾಗುತ್ತೆ. ಆದರೂ, ಇಂತಹ ಡೀಪ್‍ ಫೇಕ್ (DeepFake) ವಿಡಿಯೋ ಬಗ್ಗೆ ಮಾತನಾಡಲೇಬೇಕಿದೆ. ಪ್ರಮಾಣಿಕವಾಗಿ ಹೇಳೋದಾದರೆ, ತಂತ್ರಜ್ಞಾನವನ್ನು ದುರುಪಯೋಗವು ಅತ್ಯಂತ ಭಯಾನಕವಾಗಿದೆ. ನಾನು ಮಹಿಳೆಯಾಗಿ ಮತ್ತು ನಟಿಯಾಗಿ ನನ್ನನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎನ್ನುವುದರ ಅರಿವಿದೆ. ನನ್ನ ಕುಟುಂಬ ಮತ್ತು ಸ್ನೇಹಿತರು ಹಾಗೂ ಹಿತೈಷಿಗಳು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಆದರೆ, ನಾನು ಶಾಲೆ ಅಥವಾ ಕಾಲೇಜಿನಲ್ಲಿ ಇದ್ದಾಗ ಈ ರೀತಿ ಆಗಿದ್ದರೆ ಅದನ್ನು ಹೇಗೆ ನಿಭಾಯಿಸುತ್ತಿದ್ದೆ ಎಂದು ಊಹಿಸಲೂ ಅಸಾಧ್ಯ. ಡೀಪ್ ಫೇಕ್ ಮಾಡುವವರು ಇತರರ ಮೇಲೆ ಪ್ರಭಾವ ಬೀರುವುದಕ್ಕಿಂತ ಮುಂಚೆ…

Read More

ಪ್ರಸ್ತುತ ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೈ ಕೊಟ್ಟು ರಾಜ್ಯದ ರೈತರು ನಷ್ಟ ಅನುಭವಿಸಿದ್ದಾರೆ. ಈಗಾಗಲೇ ಮುಂಗಾರು ಹಂಗಾಮಿನ ಬೆಳೆ ವಿಮೆ ಅರ್ಜಿಗಳು ವಿಲೇವಾರಿ ಹಂತದಲ್ಲಿದ್ದು, ಇನ್ನು ಕೆಲವು ತಿಂಗಳ ಒಳಗಾಗಿ ಮಧ್ಯಂತರ ಬೆಳೆ ವಿಮೆ ರೈತರ ಖಾತೆಗೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಸಧ್ಯ ಎರಡನೇ ಹಂಗಾಮಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮು ಆರಂಭವಾಗಿದ್ದು, ಆಯ್ದ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಸಂರಕ್ಷಣೆ ಪೋರ್ಟಲ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಕುರಿತು ಕೃಷಿ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ. ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಬೇಕು ಎಂದು ಹೇಳಿದ್ದಾರೆ. ಈ ಯೋಜನೆಯಡಿ ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಜೋಳ, ಕಡಲೆ ಹಾಗೂ ಬೇಸಿಗೆ ಹಂಗಾಮಿನ…

Read More

ಬೆಂಗಳೂರು;- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ನಿನ್ನೆ ಸಂಜೆಯಿಂದ ಭಾರೀ ಮಳೆಯಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಗೆ ನಿವಾಸಿಗಳು ಹೈರಾಣಾಗಿದ್ದಾರೆ. ಅನೇಕ ಕಡೆ ಮಳೆ ನೀರು ಮನೆಗಳಿಗೆ ನುಗ್ಗಿದೆ, ಮರಗಳು ಧರೆಗೆ ಉರುಳಿವೆ. ಇನ್ನು ಯಲಹಂಕ-ಜಕ್ಕೂರು ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಯಲಹಂಕ-ಜಕ್ಕೂರು ಪ್ರದೇಶದಲ್ಲಿ 113.50 ಮಿಲಿ ಮೀಟರ್ ಮಳೆಯಾಗಿದೆ. ಕಳೆದ ಎರಡೂ ಮೂರು ದಿನದಿಂದ ವಾತಾವರಣದಲ್ಲಿ ಬದಲಾವಣೆ ಹಾಗೂ ಬೆಳಿಗ್ಗೆಯಿಂದ ನೆತ್ತಿ ಸುಡುವ ಬಿಸಿಲಿನಿಂದ ಬಸವಳಿದಿದ್ದ ಸಿಲಿಕಾನ್ ಸಿಟಿಗೆ ಇದ್ದಕ್ಕಿಂತೆ ಮಳೆರಾಯ ತಂಪೆರೆದಿದ್ದ. ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುವ ಹೊತ್ತಲ್ಲಿ, ಇದ್ದಕ್ಕಿದ್ದಂತೆ ಮಳೆರಾಯ ಎಂಟ್ರಿಯಾಗಿದ್ದು ಅರ್ಧ ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಳೆ ಅಲ್ಲಲ್ಲಿ ಟ್ರಾಫಿಕ್ ಜಾಂ ಆಗುವಂತೆ ಮಾಡಿತ್ತು. ರಸ್ತೆಗಳೆಲ್ಲ ನದಿಗಳಂತಾಗಿದ್ದವು. ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ ಧಾರಾಕಾರ ಮಳೆಯಿಂದ ಮರಗಳು ಧರೆಗುರುಳಿವೆ. ನಗರದ ಏಳು ವಲಯಗಳ ಪೈಕಿ…

Read More

ನಮ್ಮ ದೈನಂದಿನ ಜೀವನದಲ್ಲಿ ಗ್ಯಾಸ್ ಸಿಲಿಂಡರ್‌ಗಳು ಪ್ರಮುಖ ಭಾಗವಾಗಿದೆ. ಗ್ಯಾಸ್ ಬಳಕೆ ಎಲ್ಲರೂ ಮಾಡಿರುತ್ತೇವೆ. ಆದರೆ, ಗ್ಯಾಸ್ ಸಿಲಿಂಡರ್‌ ಸರಿಯಾಗಿ ಗಮನಿಸಿದರೆ ನಿಮೆಗೆ ಅಚ್ಚರಿಯ ವಿಷಯ ತಿಳಿಯುತ್ತೆ. ಅದನ್ನು ತಿಳಿಯಲು ತಪ್ಪದೇ ಈ ಸುದ್ದಿ ಓದಿ. ಗ್ಯಾಸ್ ಸಿಲಿಂಡರ್ ಉಪಯುಕ್ತವಾಗಿದ್ದರೂ ಸಹ, ಇದಕ್ಕೆ ಸಂಬಂಧಿಸಿದ ಅಪಾಯಗಳು ತಪ್ಪಿದ್ದಲ್ಲ. ಇನ್ನು ನೀವು ಸಿಲಿಂಡರ್ ಅನ್ನು ಎಚ್ಚರಿಕೆಯಿಂದ ನೋಡಿದರೆ ಗ್ಯಾಸ್ ಸಿಲಿಂಡರ್‌ ಗಳ ಮೇಲೆ ಸಂಖ್ಯೆಗಳು ಇರುತ್ತದೆ. ನೀವು ಎಂದಾದರೂ ನೋಡಿದ್ದೀರಾ? ಅದರ ಮೇಲ್ಭಾಗದಲ್ಲಿ ನೀವು ಕೆಲವು ಕೋಡ್ ಅನ್ನು ನೋಡಿರುತ್ತೀರಿ. ಇದು ಏನನ್ನು ಸೂಚಿಸುತ್ತದೆ ನಿಮಗೆ ಗೊತ್ತಾ? A, B, C, D ಅಕ್ಷರಗಳು ಈ ಸಂಕೇತಗಳ ಆರಂಭದಲ್ಲಿ ಬರೆಯಲಾದ A, B, C, D ಅಕ್ಷರಗಳು ವರ್ಷದ 12 ತಿಂಗಳುಗಳಿಗೆ ಸಂಬಂಧಿಸಿದ 4೪ ಗುಂಪುಗಳಲ್ಲಿವೆ. ಇಲ್ಲಿ A ಅಕ್ಷರವನ್ನು ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಬಳಸಿದರೆ, B ಅಕ್ಷರಗಳನ್ನು ಏಪ್ರಿಲ್, ಮೇ ಮತ್ತು ಜೂನ್ ತಿಂಗಳುಗಳಲ್ಲಿ ಬಳಸಲಾಗುತ್ತದೆ. ಅದೇ ರೀತಿ,…

Read More

ಮುಂಬೈ: ಭಾರತ ಪ್ರಸಕ್ತ ವರ್ಲ್ಡ್​ಕಪ್​ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಾಗಿ ಮುನ್ನುಗ್ಗಿದ್ದು, ಸೆಮೀಸ್​ ಪ್ರವೇಶಿಸಿದೆ. ಇನ್ನೂ ಒಂದು ಪಂದ್ಯ ಇದೆ ಆದ್ರೂ, ಭಾರತ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಖಾತ್ರಿಪಡಿಸಿಕೊಂಡಿದೆ. ಬಾರತದ ಎದುರು ಸೆಮೀಸ್​ನಲ್ಲಿ ಎದುರುಗೊಳ್ಳುವ ತಂಡ ಯಾವುದು ಎಂಬುದು ಇನ್ನೂ ಕುತೂಹಲಕ್ಕೆ ಕಾರಣವಾಗಿದೆ. ಮೊದಲ ಸ್ಥಾನದಲ್ಲಿ ಮುಂದುವರಿದಿರುವ ಬಾರತ ಅಂಕಪಟ್ಟಿಯ 4ನೇ ತಂಡದ ವಿರುದ್ದ ಸೆಮೀಸ್​ ಕಾದಾಡಲಿದೆ. ಆದರೇ, 4ನೇ ಸ್ಥಾನಕ್ಕೆ ಯಾರು ಬರುತ್ತಾರೆ ಅನ್ನೋ ಲೆಕ್ಕಾಚಾರ ಇನ್ನೂ ಹಲವು ಪಂದ್ಯಗಳಲ್ಲಿ ನಿರ್ಧಾರವಾಗಲಿದೆ. ನ್ಯೂಜಿಲೆಂಡ್​, ಅಥವಾ ಅಫ್ಘಾನಿಸ್ತಾನ​ ಭಾರತದ ಎದುರಾಳಿ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸದ್ಯ ನವೆಂಬರ್​ 15ರಂದು ಭಾರತ ತನ್ನ ಸೆಮೀಸ್ ಆಡಲಿದೆ. ಆ ಸ್ಥಾನಕ್ಕೆ ಪಾಕ್​ ಬಂದದ್ದೇ ಆದಲ್ಲಿ, ಪಂದ್ಯದ ದಿನ ಮತ್ತು ಸ್ಥಳ ಬದಲಾವಣೆ ಆಗಲಿದೆ. ಪಾಕ್​ 4ನೇ ಸ್ಥಾನಕ್ಕೆ ಬಂದರೆ, ಭಾರತ 16ರಂದು ಈಡನ್​ ಗಾರ್ಡನ್​ನಲ್ಲಿ ಪಂದ್ಯ ಆಡಲಿದೆ. ಇದಕ್ಕೆ ಬಿಸಿಸಿಐ ಮತ್ತು ಪಿಸಿಬಿಯ ನಡುವಿನ ಒಪ್ಪಂದವೇ ಕಾರಣವಾಗಿದೆ. ಅಂಕಪಟ್ಟಿ 2 ಮತ್ತು 3ನೇ ಸ್ಥಾನಕ್ಕೆ…

Read More

ಬೆಂಗಳೂರು;- ರಾಜ್ಯದ ವಿವಿಧೆಡೆ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ ಹಾಗೂ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

Read More

ಅಮೇರಿಕಾ: ಹಮಾಸ್ ಮತ್ತು ರಷ್ಯಾ ಎರಡೂ ದೇಶಗಳೂ ಪ್ರಜಾಪ್ರಭುತ್ವವನ್ನು “ನಿರ್ಮೂಲನೆ” ಮಾಡಲು ಹೊರಟಿವೆ, ಅಮೇರಿಕಾ, ಉಕ್ರೇನ್ ಮತ್ತು ಇಸ್ರೇಲ್‌ಗೆ ನೆರವನ್ನು ನೀಡಿ ಎಂದು ಯುಎಸ್ ಅಧ್ಯಕ್ಷ ಜೋ ಬೈಡೆನ್ ಓವಲ್ ಕಚೇರಿಯಿಂದ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾವೋದ್ರಿಕ್ತ ಭಾಷಣದಲ್ಲಿ‌ ಕೋರಿದ್ದಾರೆ. ಹಮಾಸ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ “ಬೆದರಿಕೆಗಳನ್ನು ಪ್ರತಿನಿಧಿಸುತ್ತಾರೆ. ಇವರಿಬ್ಬರೂ ನೆರೆಯ ದೇಶಗಳ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ನಾಶಮಾಡಲು ಹೊರಟಿದ್ದಾರೆ” ಎಂದು ಬಿಡೆನ್  ತಮ್ಮ ಭಾಷಣದಲ್ಲಿ ಹೇಳಿದ್ದಾರೆ. “ಒಂದು ದೊಡ್ಡ ರಾಷ್ಟ್ರವಾಗಿ ನಮ್ಮ ಜವಾಬ್ದಾರಿಯಂತೆ ಕ್ಷುಲ್ಲಕ ಪಕ್ಷಪಾತದ, ದ್ವೇಷದ ರಾಜಕಾರಣವನ್ನು ನಾವು ಎಂದಿಗೂ ಸುಮ್ಮನೆ ಬಿಡಲಾರೆವು. ನಾವು ಹಮಾಸ್‌ನಂತಹ ಭಯೋತ್ಪಾದಕರು ಮತ್ತು ಪುಟಿನ್‌ನಂತಹ ನಿರಂಕುಶಾಧಿಕಾರಿಗಳನ್ನು ಗೆಲ್ಲಲು ಬಿಡುವುದಿಲ್ಲ,” ಎಂದು ಬಿಡೆನ್ ರಾಷ್ಟ್ರವನ್ನು ಉದ್ದೇಶಿಸಿ ಹೇಳಿದ್ದಾರೆ. https://ainlivenews.com/suprem-ray-healing-center-reiki/ ಉಕ್ರೇನ್ ಮತ್ತು ಇಸ್ರೇಲ್‌ಗೆ ಸಹಾಯವಾಗಿ ಬೃಹತ್ ಹಣಕಾಸಿನ ನಿಧಿಯನ್ನು ಅನುಮೋದಿಸಲು ಶುಕ್ರವಾರ ಕಾಂಗ್ರೆಸ್‌ಗೆ ಮನವಿ ಮಾಡುವುದಾಗಿ ಹೇಳಿರುವ ಬಿಡೆನ್, “ಇದು ಜಾಗತಿಕ ನಾಯಕನಾಗಿ ನಾನು ಯುನೈಟೆಡ್ ಸ್ಟೇಟ್ಸ್‌ನ ಭವಿಷ್ಯಕ್ಕಾಗಿ ಮಾಡುವ ಹೂಡಿಕೆಯಾಗಿದೆ” ಎಂದು ತಿಳಿಸಿದ್ದಾರೆ. “ಇದು ಅನೇಕ…

Read More

ಆಸ್ಟ್ರೇಲಿಯಾ ತಂಡ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಂಗಳವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಅಘಾನಿಸ್ತಾನ ತಂಡದ ಸವಾಲು ಎದುರಿಸಲಿದೆ. ಆರಂಭಿಕ 2 ಪಂದ್ಯಗಳ ಸೋಲಿನ ಬಳಿಕ ಜಯದ ಹಳಿಗೆ ಮರಳಿರುವ ಆಸ್ಟ್ರೇಲಿಯಾ ಆಡಿರುವ 7 ಪಂದ್ಯಗಳಲ್ಲಿ 10 ಅಂಕ ಕಲೆಹಾಕಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಇನ್ನೊಂದು ಜಯದೊಂದಿಗೆ ಅಧಿಕೃತವಾಗಿ ಉಪಾಂತ್ಯಕ್ಕೆ ಲಗ್ಗೆಯಿಡಲಿದೆ. ಇತ್ತ ಅಘಾನಿಸ್ತಾನ ತಂಡ ಇಷ್ಟೇ ಪಂದ್ಯಗಳನ್ನಾಡಿ 4ರಲ್ಲಿ ಗೆಲುವು ದಾಖಲಿಸಿ 8 ಅಂಕದೊಂದಿಗೆ ಆರನೇ ಸ್ಥಾನದಲ್ಲಿದೆ. ಮಿಚೆಲ್ ಮಾರ್ಷ್ ಆಗಮನ ಆಸೀಸ್ ತಂಡದ ಬಲ ಹೆಚ್ಚಿಸಿದೆ. ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್ ಭರ್ಜರಿ ಾರ್ಮ್‌ನಲಿದ್ದು, ಬ್ಯಾಟಿಂಗ್ ಸ್ನೇಹಿ ವಾಂಖೆಡೆಯಲ್ಲಿ ರನ್ ಹೊಳೆ ಹರಿಸುವ ನಿರೀಕ್ಷೆಯಲ್ಲಿದೆ. ಆದರೆ ಮಧ್ಯಮ ಸರದಿಯ ಬ್ಯಾಟರ್‌ಗಳು ಟೂರ್ನಿಯಲ್ಲಿ ಇದುವರೆಗೂ ಪರಿಣಾಮಕಾರಿ ಪ್ರದರ್ಶನ ನೀಡುವಲ್ಲಿ ಎಡವಿದ್ದಾರೆ. ಸ್ಟೀವನ್ ಸ್ಮಿತ್ ಅಸ್ಥಿರ ಪ್ರದರ್ಶನ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಬೌಲಿಂಗ್‌ನಲ್ಲಿ ಸ್ಪಿನ್ನರ್ ಆಡಂ ಜಂಪಾ 19 ವಿಕೆಟ್ ಉರುಳಿಸಿ ಟೂರ್ನಿಯ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿದ್ದಾರೆ. ಬ್ಯಾಟರ್‌ಗಳ ಜತೆಗೆ…

Read More

ಬೆಂಗಳೂರು;- ಕೇಂದ್ರದ ಕಡೆ ಕೈ ತೋರುವ ಬದಲು ತಮ್ಮ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದರು ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಗಮನಿಸಿದ್ದೇನೆ. ನಾನೂ ಕೂಡ ಟ್ವೀಟ್ ಮಾಡಿ ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ಕೇಂದ್ರ ಸರ್ಕಾರದಿಂದ ಹಣ ಪಡೆಯುವ ಕೆಲಸ ಆಗಬೇಕು. ಸಿದ್ದರಾಮಯ್ಯನವರು ದೇವೇಗೌಡರು ಪ್ರಧಾನಿ ಜೊತೆ ಚೆನ್ನಾಗಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲಿ ಅಂತ ಹೇಳಿದ್ದಾರೆ. ಕೇಂದ್ರ ಸರ್ಕಾರದ ಜೊತೆ ರಾಜ್ಯದ ಪರವಾಗಿ ನಾವು ಧ್ವನಿ ಎತ್ತುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಮುಖ್ಯಮಂತ್ರಿಗಳ ಬ್ರೇಕ್‌ ಫಾಸ್ಟ್ ಮೀಟಿಂಗ್‌ ನಲ್ಲಿ ಜೆಡಿಎಸ್ – ಬಿಜೆಪಿಯವರನ್ನು ಕಾಂಗ್ರೆಸ್‌ ಗೆ ಕರೆತರುವ ಬಗ್ಗೆ ಚರ್ಚೆ ನಡೆದಿದೆ. ಅವರು ನಾಡಿನ ಜನರ ಬಗ್ಗೆ ಚರ್ಚೆ ಮಾಡಲು ಸಭೆ ಮಾಡುವುದಿಲ್ಲ. ಕೇವಲ ಲೋಕಸಭಾ ಚುನಾವಣೆ ಗೆಲ್ಲಲು ಮೀಟಿಂಗ್‌ ಮಾಡುತ್ತಿದ್ದಾರೆ. ಅವರಿಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಬೇಕಿಲ್ಲ ಎಂದು ಕಿಡಿಕಾರಿದರು. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ನಮ್ಮ ಬೆಂಬಲವಿದೆ…

Read More

ಬೆಂಗಳೂರು;- ಪತಿ ನೀಡಿದ ರಾಜೀನಾಮೆ ಪತ್ನಿ ಹಿಂಪಡೆಯಲಾಗದು ಎಂದು ಬೆಂಗಳೂರಿನ ಹೈಕೋರ್ಟ್ ಹೇಳಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಡಿ ವೆಂಕಟೇಶ್‌ ಎಂಬುವರು ಹೈಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್​ ದೀಕ್ಷಿತ್​ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ , ಸ್ವತಃ ನೌಕರನೇ ಉದ್ಯೋಗದಲ್ಲಿ ಇರಲು ಸಿದ್ಧರಿಲ್ಲದೇ ರಾಜೀನಾಮೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಆತನ ಪತ್ನಿ ಅಥವಾ ಮಕ್ಕಳು ಉದ್ಯೋಗಿ ಸೇವೆಯಲ್ಲಿ ಮುಂದುವರೆಯಲು ಹೇಗೆ ಕಾರಣವಾಗುತ್ತಾರೆ. ಇದು ಬಾಯಾರಿಕೆಯಿಲ್ಲದಿದ್ದರೂ ಇಷ್ಟವಿಲ್ಲದ ಕುದುರೆಯನ್ನು ನೀರು ಕುಡಿಯಲು ನದಿಗೆ ಎಳೆದಂತಾಗುತ್ತದೆ. ರಾಜೀನಾಮೆಯು ಉದ್ಯೋಗಿಯ ಸ್ವಯಂಪ್ರೇರಿತ ಕ್ರಿಯೆಯಾಗಿದೆ. ಅದನ್ನು ಸಲ್ಲಿಸುವ ಮೂಲಕ ಆತ ಸೇವೆಯನ್ನು ತೊರೆಯಲು ಪ್ರಯತ್ನಿಸುತ್ತಾನೆ. ಹೀಗಾಗಿ, ಉದ್ಯೋಗದಾತ ಸಂಸ್ಥೆಯು ಅಂಗೀಕರಿಸುವ ಮೊದಲೇ ರಾಜೀನಾಮೆಯನ್ನು ಸ್ವತಃ ಉದ್ಯೋಗಿ ಹಿಂಪಡೆಯಬೇಕು. ಅದನ್ನು ಹೊರತುಪಡಿಸಿ ಪತ್ನಿ ಮತ್ತು ಮಕ್ಕಳು ಉದ್ಯೋಗಿಯ ಪರವಾಗಿ ರಾಜೀನಾಮೆ ಹಿಂಪಡೆಯಲು ಅವಕಾಶವಿಲ್ಲ ಎಂದು ಪೀಠ ಹೇಳಿದೆ.

Read More