Author: AIN Author

ಮಂಗಳೂರು;- ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ವಿಶೇಷ ಮನವಿ ಮಾಡಲಾಗಿದೆ. ವಿಜಯಪುರ-ಮಂಗಳೂರು ರೈಲಿನ ವೇಳಾಪಟ್ಟಿ ಪರಿಷ್ಕರಣೆ ಮಾಡಬೇಕು ಮತ್ತು ಈ ರೈಲನ್ನು ಮಂಗಳೂರು ಸೆಂಟ್ರಲ್‌ ತನಕ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಮುಂದಿಟ್ಟುಕೊಂಡು ಆನ್‌ಲೈನ್ ಸಹಿ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿದೆ. ಆನ್‌ಲೈನ್ ಸಹಿ ಅಭಿಯಾನಕ್ಕೆ ಬೆಂಬಲ ನೀಡುವಂತೆ ಕುಕ್ಕೆ ಸುಬ್ರಮಣ್ಯ ಮತ್ತು ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ಮನವಿ ಮಾಡಲಾಗಿದೆ. ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಲಾಗಿದೆ, ಸಹಿ ಮಾಡಲು ಲಿಂಕ್ ಸಹ ನೀಡಲಾಗಿದೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಜಯಪುರ, ಗದಗ, ಬಾಗಲಕೋಟೆ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಸೇರಿ ನೆರೆ ಜಿಲ್ಲೆಗಳ ಭಾಗಗಳಿಂದ ರೈಲಿನಲ್ಲಿ ಬರುವ ಭಕ್ತಾದಿಗಳ ಬಳಿ ನಮ್ಮದೊಂದು ಮನವಿ ಎಂದು ತಿಳಿಸಲಾಗಿದೆ.

Read More

ಬಿಗ್ ಬಾಸ್ ಮನೆಯಿಂದ ರಕ್ಷಕ್ ಬುಲೆಟ್ ಔಟ್ ಆಗಿದ್ದಾರೆ. ಸದಾ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದ ಯುವ ನಟ ರಕ್ಷಕ್‌ಗೆ ದೊಡ್ಮನೆಯ ಆಟ ಅಂತ್ಯವಾಗಿದೆ. ಸ್ನೇಕ್ ಶ್ಯಾಮ್, ಗೌರೀಶ್ ಬಳಿಕ ರಕ್ಷಕ್ ಬುಲೆಟ್ ದೊಡ್ಮನೆಯ ಆಟಕ್ಕೆ ವಿದಾಯ ಹೇಳಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ 2ನೇ ವಾರದ ಕ್ಯಾಪ್ಟನ್ ಆಗಿ ಗಮನ ಸೆಳೆದಿದ್ದರು. ಮನೆಯ ಉತ್ತಮ ಆಟಗಾರ ಎಂದು ಕೂಡ ಗುರುತಿಸಿಕೊಂಡಿದ್ದರು. ಇತ್ತೀಚೆಗೆ ಡ್ರೋನ್ ಪ್ರತಾಪ್ (Drone Prathap) ಗೂಬೆ ಎಂದಿದ್ದಕ್ಕೆ ಕಿಚ್ಚ (Sudeep) ರಕ್ಷಕ್‌ಗೆ ಖಡಕ್ ಕ್ಲಾಸ್ ಕೂಡ ತೆಗೆದುಕೊಂಡಿದ್ದರು. ಟಾಸ್ಕ್, ಪಂಚಿಂಗ್ ಡೈಲಾಗ್ ಹೇಳೋದ್ರಲ್ಲಿ ರಕ್ಷಕ್ ಸದಾ ಮುಂದಿದ್ದರು. ರಕ್ಷಕ್ ಮನರಂಜನೆ ಕೂಡ ಫ್ಯಾನ್ಸ್‌ಗೆ ಖುಷಿಕೊಟ್ಟಿತ್ತು. ರಕ್ಷಕ್ ಬುಲೆಟ್ ಎಲಿಮಿನೇಟ್ ಆಗಿರೋದು ಅವರ ಫ್ಯಾನ್ಸ್ ಬೇಸರಯುಂಟು ಮಾಡಿದೆ. ಆದರೆ ಮುಂಬರುವ ಸಿನಿಮಾಗಳಲ್ಲಿ ನಟನೆಯ ಮೂಲಕ ರಕ್ಷಕ್ ಮೋಡಿ ಮಾಡಲಿ ಎಂಬುದೇ ಅಭಿಮಾನಿಗಳ ಆಶಯವಾಗಿದೆ.

Read More

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆ ಮುಂಚೆಯೇ ಬಿದ್ದು ಹೋಗುತ್ತದೆ ಎಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು. ಬಾಗಲಕೋಟೆ ಜಿಲ್ಲೆಯಲ್ಲಿ ಮಾತನಾಡಿದ ಅವರು, ” ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಸಿಎಂ ಸ್ಥಾನ ವಿವಾದವನ್ನು ಅವರು ಮೊದಲು ಸರಿ ಮಾಡಿಕೊಳ್ಳಲಿ, ಸರ್ಕಾರ ಪತನ ಬಗ್ಗೆ ನಾವು ಕಾಯುತ್ತಿಲ್ಲ. ಬಿಜೆಪಿ ಪಕ್ಷವು ರೈತರ ಪರವಾಗಿದೆ, ರೈತರಿಗೆ ಸರ್ಕಾರ ನ್ಯಾಯ ಕೊಡದೇ ಇದ್ದಲ್ಲಿ ಹೋರಾಟ ಮಾಡಿ ನ್ಯಾಯ ಒದಗಿಸುವ ಕೆಲಸ ಬಿಜೆಪಿ ಪಕ್ಷ ಮಾಡುತ್ತದೆ ” ಎಂದರು. ಆಪರೇಷನ್ ಹಸ್ತದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದರು. ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಬರ ಇದ್ದರೂ ರೈತರ ಕಣ್ಣೀರು ಒರೆಸುವ ಬದಲು ತಮ್ಮ ಶಾಸಕರ, ಸಚಿವರ ಕಣ್ಣೀರು ಒರೆಸುತ್ತಿದ್ದಾರೆ. ರೈತರ ಶಾಪ ಸರ್ಕಾರಕ್ಕೆ ತಟ್ಟುತ್ತದೆ ಸರ್ಕಾರ ಪತನವಾಗುತ್ತದೆ ಎಂದು ತಿಳಿಸಿದ ಕಟೀಲ್, https://ainlivenews.com/suprem-ray-healing-center-reiki/#google_vignette ರಾಜ್ಯದಲ್ಲಿ ಭೀಕರ ಬರಗಾಲದಿಂದ ಮುಖ್ಯಮಂತ್ರಿ ಅವರು ರೈತರೊಂದಿಗೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚೆ ಮಾಡುವ ರೈತರ ಸಮಸ್ಯೆ ಬಗೆ ಹರಿಸಬೇಕಾಗಿತ್ತು. ಆದರೆ…

Read More

ಡಿ.ಜೆ ಚಕ್ರವರ್ತಿ (ಚಕ್ರವರ್ತಿ ಚಂದ್ರಚೂಡ) ನಿರ್ದೇಶನದಲ್ಲಿ ಮೂಡಿ ಬರಲಿರುವ ಹುಲಿ ನಾಯಕ ಸಿನಿಮಾದ ಮೋಷನ್ ಪೋಸ್ಟರ್  (Motion poster) ರಿಲೀಸ್ ಆಗಿದೆ. ಬಿಡುಗಡೆಯಾದ ಪೋಸ್ಟರ್ ನಲ್ಲಿ ಹತ್ತು ಹಲವು ಕೌತುಕದ ವಿಷಯಗಳು ತುಂಬಿವೆ. ವೀರ ಸಂಗೊಳ್ಳಿ ರಾಯಣ್ಣನ ಗಿಗಿ ಪದವನ್ನು ಬಳಸಿಕೊಂಡು ಅನ್ಯಾಯಕ್ಕೊಳಗಾದವರ ನ್ಯಾಯ ಕೇಳುತ್ತಿದ್ದಾರೆ ನಿರ್ದೇಶಕ. ಟ್ಯಾಗ್ ಲೈನ್ ಆಗಿ ಜಸ್ಟಿಸ್ ಫಾರ್ ಸೌಮ್ಯ ಎಂದು ಹೆಸರಿಟ್ಟಿದ್ದಾರೆ. ಹೀಗಾಗಿ ಈ ಸಿನಿಮಾದಲ್ಲಿ ಏನೆಲ್ಲ ವಿಷಯಗಳು ಇರಲಿವೆ ಎನ್ನುವುದು ಸದ್ಯಕ್ಕಿರುವ ಕ್ಯೂರಿಯಾಸಿಟಿ. ಹುಲಿ ನಾಯಕ ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. ಜನವರಿಯಿಂದ ಚಿತ್ರೀಕರಣಕ್ಕೆ ನಿರ್ದೇಶಕರು ಪ್ಲ್ಯಾನ್ ಮಾಡಿದ್ದು, ಅದಕ್ಕೂ ಮುನ್ನ ತಮ್ಮ ಚಿತ್ರದ ನಾಯಕನಿಗೆ ಭರ್ಜರಿ ತಯಾರಿಯನ್ನೂ ಮಾಡಿಸುತ್ತಿದ್ದಾರೆ ಚಕ್ರವರ್ತಿ. ಸಿನಿಮಾ ಶುರುವಾಗುವ ಮುನ್ನವೇ ಆಡಿಯೋ ರೈಟ್ಸ್ ಭರ್ಜರಿ ಮೊತ್ತಕ್ಕೆ ಸೇಲ್ ಆಗಿದ್ದು, ಚಿತ್ರದ ಬಗ್ಗೆ ಈಗಿನಿಂದಲೇ ಹೈಪ್ ಕ್ರಿಯೇಟ್ ಆಗುತ್ತಿದೆ. ವರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು ರಿಯಲ್ ಸ್ಟಾರ್ ಉಪೇಂದ್ರ (Upendra) ತುಂಬು ಪ್ರೀತಿಯಿಂದ ಮಯೂರ ಮೋಶನ್…

Read More

ಬೆಂಗಳೂರು;- ರಾಜಧಾನಿ ಬೆಂಗಳೂರು ನಗರದಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿ ಮತ್ತೆ ಆತಂಕ ಸೃಷ್ಟಿ ಮಾಡಿದೆ. ನೈಸ್ ರಸ್ತೆ ಸಮೀಪದ ಚಿಕ್ಕತೋಗೂರು ಬಳಿ ಚಿರತೆ ಪ್ರತ್ಯಕ್ಷವಾಗಿದೆ. ನಿನ್ನೆ ನ4 ರ ಸಂಜೆ 7.40ರ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಶನಿವಾರ ಸಂಜೆ ಚಿರತೆ ಮನೆ ಕಂಪೌಂಡ್​​ ಒಳಗೆ ನುಗ್ಗಿದ್ದು, ಬಾಗಿಲು ಬಳಿ ಬಂದ ಚಿರತೆ ಕಂಡು ಬಾಲಕ ಕಿರುಚಾಡಿದ್ದಾನೆ. ಬಾಲಕನ ಕಿರುಚಾಟಕ್ಕೆ ಚಿರತೆ ಓಡಿ ಹೋಗಿದೆ ಎಂದು ತಿಳಿದು ಬಂದಿದೆ. ಕೆ.ಆರ್.ಪುರಂ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪರಿಶೀಲನೆ ನಡೆಸಿ ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶನಿವಾರ ಮಳೆ ಬಂದ ಹಿನ್ನೆಲೆಯಲ್ಲಿ ಹೆಜ್ಜೆ ಗುರುತು ಪತ್ತೆಯಾಗಿದೆ.

Read More

ಬೆಂಗಳೂರು;- ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗೋರಿಗೆ KSRTC ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಅನಕೂಲಕ್ಕಾಗಿ ಬೆಂಗಳೂರಿನಿಂದ ಎಲ್ಲಾ ಜಿಲ್ಲೆಗಳಿಗೂ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ 10ರಿಂದ ಎರಡು ಸಾವಿರ ಹೆಚ್ಚುವರಿ ಬಸ್‌ಗಳ ಸಂಚರಿಸಲಿವೆ. ಕಳೆದ ವಾರ ದಸರಾ ಹಿನ್ನೆಲೆ ಹೆಚ್ಚುವರಿ ಬಸ್‌ಗಳನ್ನ ಬಿಡಲಾಗಿತ್ತು. ಅದರಿಂದ ಸಾರಿಗೆ ಇಲಾಖೆಗೆ ಕೋಟಿ ಕೋಟಿ ಆದಾಯ ಹರಿದು ಬಂದಿತ್ತು. ಇದೀಗ ಮತ್ತೆ ಹಬ್ಬಕ್ಕೆ ಹೆಚ್ಚುವರಿ ಬಸ್‌ಗಳನ್ನ ಬಿಟ್ಟು ಲಾಭ ಪಡೆಯೋಕೆ ಸಾರಿಗೆ ಇಲಾಖೆ ಮುಂದಾಗಿದೆ. ಹೆಚ್ಚುವರಿ ಬಸ್ ಬಿಡೋದಾಗಿ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. 12.11.2023 ರಂದು ನರಕ ಚತುರ್ದಶಿ ಹಾಗೂ ದಿನಾಂಕ: 14.11.2023 ರಂದು ಬಲಿಪಾಡ್ಯಮಿ ಹಬ್ಬ ಇದೆ.ಹೀಗಾಗಿ ಎಡದು ದಿನ ಮುಂಚೆನೇ ಪ್ರಯಾಣಿಕರು ಊರುಗಳಿಗೆ ತೆರಳುತ್ತಾರೆ.ಇದೆ 10ನೇ ತಾರೀಕಿನಿಂದ ಬಸ್ ಗಳು ಬಿಡಲಾಗುತ್ತೆ.ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 14.11.2023 ಹಾಗೂ 15.11.2023 ರಂದು ವಿಶೇಷ ವಾಹನಗಳನ್ನು ಬಿಡಲಾಗುತ್ತೆ. ಮುಂಗಡ ಟಿಕೆಟ್ ಬುಕಿಂಗ್ ವ್ಯವಸ್ಥೆ ಕೂಡ…

Read More

ಹಿಂದಿನ ಕಾಲದಿಂದಲೂ ಭಾರತೀಯ ಅಡುಗೆಗಳಲ್ಲಿ ಅಷ್ಟೇ ಏಕೆ ಇಡೀ ವಿಶ್ವದ ತುಂಬೆಲ್ಲಾ ಅಡುಗೆಗಳಲ್ಲಿ ಒಗ್ಗರಣೆಯ ಜೊತೆಗೆ ತನ್ನ ಸ್ನೇಹಿತ ಬೆಳ್ಳುಳ್ಳಿಯ ಜೊತೆಗೆ ರುಚಿಯ ಸಾಮ್ರಾಜ್ಯದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಭಾರತದ ಏಕೈಕ ತರಕಾರಿ ಈ ಶುಂಠಿ. ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ಈಗಲೂ ಸಹ ತಲೆನೋವು ಬಂದರೆ ಶುಂಠಿ ಚಹಾ ಕೇಳುವುದು ರೂಢಿಯಲ್ಲಿದೆ. ಇದಕ್ಕೆ ಕಾರಣ ಶುಂಠಿಯಲ್ಲಿರುವ ಅದ್ಭುತ ಮತ್ತು ಚಮತ್ಕಾರಿ ಗುಣಲಕ್ಷಣಗಳು. ಮನುಷ್ಯ ಶುಂಠಿಯನ್ನು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದಾನೆ ಎಂದರೆ ಇಂದಿಗೂ ಸಹ ಬೆಳಗಿನ ಸಮಯದಲ್ಲಿ ಪತ್ರಿಕೆಗಳನ್ನು ತಿರುವಿ ಹಾಕುವ ಮೊದಲು ಶುಂಠಿ ಚಹಾ ಕುಡಿದರೆ ಮಾತ್ರ ಅಂದಿನ ಎಲ್ಲಾ ಕೆಲಸಗಳು ಸರಾಗವಾಗಿ ನಡೆಯುತ್ತವೆ ಎಂಬ ನಂಬಿಕೆ ಹೊಂದಿರುವಷ್ಟು.ಅಂತಹವರಿಗೆ ಈಗಲೂ ಶುಂಠಿ ಚಹಾ ಕೂಡಿಯೇ ಹೋದರೆ ಏನನ್ನೂ ಕಳೆದುಕೊಂಡ ಭಾವನೆ. ಶುಂಠಿ ಟೀ ತನ್ನ ಘಮಗುಡುವ ಪರಿಮಳದೊಂದಿಗೆ ಕುಡಿಯಲು ಸಹ ನಾಲಿಗೆಗೆ ರುಚಿ ಕೊಡುತ್ತದೆ. ಇನ್ನು ಆರೋಗ್ಯದ ವಿಷಯಕ್ಕೆ ಸಂಬಂಧ ಪಟ್ಟರಂತೂ, ಇದರಲ್ಲಿ ಬಹಳಷ್ಟು ಖನಿಜಾಂಶಗಳು ಸೇರಿರುವುದರಿಂದ ಬೆಳಗಿನ…

Read More

ರಕ್ಷಿತ್ ಶೆಟ್ಟಿ (Rakshit Shetty) ನಟಿಸಿ, ಹೇಮಂತ್ ರಾವ್ (Hemanth Rao) ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradacheyallo) ಸೈಡ್ ಬಿ ಚಿತ್ರದ ಟ್ರೈಲರ್ (Trailer) ಇಂದು ರಿಲೀಸ್ ಆಗಿದೆ. ಕಥಾ ನಾಯಕ ಮನುವಿನ ಸಾಕಷ್ಟು ತಮುಲಗಳನ್ನು ಈ ಟ್ರೈಲರ್ ನಲ್ಲಿ ತೋರಿಸಲು ಪ್ರಯತ್ನಿಸಿದ್ದಾರೆ ನಿರ್ದೇಶಕರು. ‘ಜೈಲಿಂದ ನೀ ಬರೋದನ್ನೆ ಕಾಯ್ತಿದ್ದೀನಿ.. ಮತ್ತೆ ಹಾಡೋಕೆ ಶುರು ಮಾಡ್ತೀನಿ’.. ‘ಮತ್ತೆ ಸಿಗೋದು ಬೇಡ ಆಯ್ತಾ’ ಎಂದು ನಾಯಕಿ ಹೇಳುವ ಮಾತುಗಳು ಸಿನಿಮಾದ ಕಥೆಯನ್ನು ಕುತೂಹಲದಿಂದ ನೋಡುವಂತೆ ಮಾಡುತ್ತವೆ. ಇಡೀ ಟ್ರೈಲರ್ ನಲ್ಲಿ ರಕ್ಷಿತ್ ಶೆಟ್ಟಿ ಆವರಿಸಿಕೊಂಡಿದ್ದಾರೆ. ರುಕ್ಮಿಣಿ, ಚೈತ್ರಾ ಆಚಾರ್ಯ, ಗೋಪಾಲ ಕೃಷ್ಣ ದೇಶಪಾಂಡೆ, ಅಚ್ಯುತ್ ಕುಮಾರ್ ಆಗಾಗ್ಗೆ ಝಲಕ್ ನಲ್ಲಿ ಬಂದು ಹೊಸ ರೀತಿಯ ಕೌತುಕಕ್ಕೆ ಕಾರಣವಾಗುತ್ತಾರೆ. ಟ್ರೈಲರ್ ಕಾನ್ಸೆಪ್ಟ್ ಸಖತ್ತಾಗಿದೆ. ಮನು ಏನಾಗುತ್ತಾನೆ ಎನ್ನುವ ಕ್ಯೂರಿಯಾಸಿಟಿ ಮೂಡಿಸುತ್ತದೆ. ರಕ್ಷಿತ್ ಅಭಿಮಾನಿಗಳಿಗಂತೂ ಟ್ರೈಲರ್ ಸಖತ್ ಹಿಡಿಸಲಿದೆ. ನವೆಂಬರ್ 17ಕ್ಕೆ ರಿಲೀಸ್ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ…

Read More

ಬೆಂಗಳೂರು ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು & ನಾಳೆ ಭಾರೀ ಮಳೆ ನಿರೀಕ್ಷಲಾಗಿದೆ ಎಂದು ಭಾರತೀಯ ಹವಮಾನ ಇಲಾಖೆಗೆ ಮಾಹಿತಿ ಮಾಹಿತಿ ನೀಡಿದೆ. ಸೋಮವಾರ ಹಾಗೂ ಮಂಗಳವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಇಂದು ಸೋಮವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಯಲ್ಲೋ ಅಲರ್ಟ್‌ ಕೂಡ ಘೋಷಿಸಲಾಗಿದೆ. ಭಾನುವಾರ ಕೂಡ ಕರ್ನಾಟಕದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ. ಗುಡುಗು, ಮಿಂಚು ಸಹಿತ ಮಳೆಯೂ ಕೆಲವು ಕಡೆ ಆಗಿದೆ ಭಾನುವಾರ ಕೂಡ ಕರ್ನಾಟಕದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ. ಗುಡುಗು, ಮಿಂಚು ಸಹಿತ ಮಳೆಯೂ ಕೆಲವು ಕಡೆ ಆಗಿದೆ.

Read More

ಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ. ಬೆಳ್ಳುಳ್ಳಿ ಸಾಕಷ್ಟು ಆರೋಗ್ಯಕಾರಿ ಪ್ರಯೋಜನಗಳನ್ನು ಹೊಂದಿದೆ. ಆದರೆ ನಿಮಗೆ ಗೊತ್ತಾ ಕೆಲವರು ಬೆಳ್ಳುಳ್ಳಿ ತಿನ್ನುವಾಗ ಯೋಚಿಸಿ ತಿನ್ನಬೇಕು. ಇಲ್ಲವಾದರೆ ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ತುರಿಕೆ, ಹುಣ್ಣು, ಮೊಡವೆ, ದದ್ದು, ಕೆಂಪು ದದ್ದು ಮುಂತಾದ ಚರ್ಮ ಸಂಬಂಧಿ ಸಮಸ್ಯೆಗಳಿರುವವರು ಬೆಳ್ಳುಳ್ಳಿಯನ್ನು ಎಚ್ಚರಿಕೆಯಿಂದ ಸೇವಿಸಬೇಕು. ಏಕೆಂದರೆ ಅಂತಹವರಿಗೆ ಬೆಳ್ಳುಳ್ಳಿ ಅಲರ್ಜಿಯಾಗಿರಬಹುದು. ಗ್ಯಾಸ್ಟ್ರಿಕ್‌ ಸಮಸ್ಯೆ ಇರುವವರು ಬೆಳ್ಳುಳ್ಳಿ ತಿನ್ನಬಾರದು ಎಂದು ವೈದ್ಯರು ಸೂಚಿಸುತ್ತಾರೆ. ಯಾಕೆಂದರೆ ಅಂತಹವರು ಬೆಳ್ಳುಳ್ಳಿ ಸೇವಿಸಿದರೆ ಎದೆಯುರಿ, ವಾಕರಿಕೆಯಂತ ಸಮಸ್ಯೆಗಳು ಉಂಟಾಗುತ್ತದೆ. ಅತಿಸಾರದ ಸಮಸ್ಯೆ ಇದ್ದರೂ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದನ್ನು ತಪ್ಪಿಸಬೇಕು. ಕೆಲವರ ಜೀರ್ಣಾಂಗ ವ್ಯವಸ್ಥೆಯು ದುರ್ಬಲಗೊಳ್ಳುತ್ತದೆ, ಇದರಿಂದಾಗಿ ಅವರು ಲೂಸ್‌ಮೋಷನ್‌ನಂತಹ ಸಮಸ್ಯೆಗಳನ್ನು ಎದುರಿಸುತ್ತಾರೆ. ಗರ್ಭಾವಸ್ಥೆಯಲ್ಲಿಯೂ ಸಹ, ಮಹಿಳೆಯರು ವೈದ್ಯರ ಸಲಹೆ ಮೇರೆಗೆ ಬೆಳ್ಳುಳ್ಳಿ ಸೇವಿಸಬೇಕು. ಬೆಳ್ಳುಳ್ಳಿಯ ಪರಿಣಾಮವು ಬಿಸಿಯಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ದೇಹದಲ್ಲಿ ಶಾಖ ಹೆಚ್ಚಾಗುತ್ತದೆ ಮತ್ತು ಮಹಿಳೆಯರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

Read More