ಸೋಫಿಯಾ: 2024 ಕ್ಕೆ ಭಯಾನಕ ಹವಾಮಾನ ಘಟನೆಗಳು ಹಾಗೂ ಭಯೋತ್ಪಾದಕ ದಾಳಿಗಳಲ್ಲಿ ಏರಿಕೆಯಾಗಲಿದೆ ಎಂದು ಬಾಬಾ ವಂಗಾ (Baba Vanga) ಅವರು ಭವಿಷ್ಯ ನುಡಿದಿದ್ದಾರೆ. ಬಾಲ್ಕನ್ಸ್ನ ನಾಸ್ಟ್ರಾಡಾಮಸ್ ಎಂದೂ ಕರೆಯಲ್ಪಡುವ ಬಾಬಾ ವಂಗಾ ಅವರು, 9/11 ಭಯೋತ್ಪಾದಕ ದಾಳಿಗಳು, ರಾಜಕುಮಾರಿ ಡಯಾನಾ ಸಾವು, ಚೆರ್ನೋಬಿಲ್ ದುರಂತ ಮತ್ತು ಬ್ರೆಕ್ಸಿಟ್ನಂತಹ ಪ್ರಮುಖ ವಿಶ್ವ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದರು. 2024 ರಲ್ಲಿ ಅವರು ಏಳು ಭವಿಷ್ಯವಾಣಿಗಳನ್ನು ನುಡಿದಿದ್ದಾರೆ. ಮುಂದಿನ ವರ್ಷ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೇಲೆ ಸಹ ದೇಶವಾಸಿಯಿಂದ ಹತ್ಯೆಯ ಪ್ರಯತ್ನ ನಡೆಯಬಹುದು. ಯುರೋಪ್ನಲ್ಲಿ ಹೆಚ್ಚಿದ ಭಯೋತ್ಪಾದಕ ದಾಳಿಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮುಂದಿನ ವರ್ಷ “ದೊಡ್ಡ ದೇಶ” ಜೈವಿಕ ಶಸ್ತ್ರಾಸ್ತ್ರ ಪರೀಕ್ಷೆಗಳು ಅಥವಾ ದಾಳಿಗಳನ್ನು ನಡೆಸುತ್ತದೆ ಎಂದು ಭವಿಷ್ಯ ಹೇಳಿದ್ದಾರೆ. https://ainlivenews.com/suprem-ray-healing-center-reiki/#google_vignette ಮುಂದಿನ ವರ್ಷ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ದೊಡ್ಡ ಆರ್ಥಿಕ ಬಿಕ್ಕಟ್ಟು ಉಂಟಾಗಲಿದೆ. ಹೆಚ್ಚುತ್ತಿರುವ ಸಾಲದ ಮಟ್ಟಗಳು ಮತ್ತು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಂತಹ ಅಂಶಗಳು ಇದಕ್ಕೆ…
Author: AIN Author
ಅತ್ಯಂತ ಆರೋಗ್ಯಕರವೂ, ನಿತ್ಯ ಸೇವನೆಗೆ ಯೋಗ್ಯವಾದುದೂ, ಧಾತುಪುಷ್ಟಿಕರವೂ ಆಗಿರುವ ಎಳ್ಳು ಮತ್ತು ಎಳ್ಳೆಣ್ಣೆಯ ಬಗ್ಗೆ ಇಂದು ತಿಳಿದುಕೊಳ್ಳೋಣ. ಎಳ್ಳನ್ನು ಹಲವು ವಿಧಗಳಲ್ಲಿ ಬಳಸಬಹುದು. ಎಳ್ಳುಂಡೆಯ ಮೂಲಕ, ಚಟ್ನಿಯಲ್ಲಿ, ಚಟ್ನಿಪುಡಿಯಲ್ಲಿ, ಫೂ›ಟ್ ಸಲಾಡ್ಗಳ ಮೇಲೆ ಹೀಗೆ ಹಲವು ವಿಧಗಳಲ್ಲಿ ಇದನ್ನು ನಾವು ಸೇವಿಸಬಹುದು. ಇದರಿಂದ ಕೂದಲಿನ ಆರೋಗ್ಯ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಏಕೆಂದರೆ ಇದು ಮೂಳೆಯನ್ನು ಪೋಷಿಸುತ್ತದೆ. ಹಾಗಾಗಿ ನಮ್ಮ ಸಂಧಿಗಳ ಬಲವನ್ನು ಹೆಚ್ಚಿಸಲು ಇದು ಸಹಾಯ ಮಾಡುತ್ತದೆ. ಇದಕ್ಕೆ ದಂತ್ಯ ಎಂದು ಕೂಡ ಕರೆದಿದ್ದಾರೆ. ಅಂದರೆ ಆರೋಗ್ಯಯುತ ಹಲ್ಲು ತಯಾರಾಗಲು ಇದು ಸಹಾಯಕ ಎಂದರ್ಥ. ಹಾಗಾಗಿ ಚಿಕ್ಕ ಮಕ್ಕಳಿಗೆ ಹಲ್ಲು ಬೆಳೆಯುವ ಸಮಯದಲ್ಲಿ ಎಳ್ಳುಂಡೆ ಮಾಡಿ ತಿನ್ನಲು ಕೊಡಬಹುದು. ಅಷ್ಟೇ ಅಲ್ಲದೇ ಇದು ಮಿದುಳಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಆಬಾಲವೃದ್ಧರಾಧಿಯಾಗಿ ಎಲ್ಲರೂ ತಮ್ಮ ಮಾನಸಿಕ ಆರೋಗ್ಯವನ್ನು, ನೆನಪಿನ ಶಕ್ತಿಯನ್ನು, ಒಟ್ಟಾರೆ ಮನೋಬಲವನ್ನು ಹೆಚ್ಚಿಸಿಕೊಳ್ಳಲು ನಿತ್ಯವೂ ಎಳ್ಳನ್ನು ಸೇವಿಸಬೇಕು. ಎಳ್ಳನ್ನು ನಿಯಮಿತವಾಗಿ ಸೇವಿಸುವುದರಿಂದ ಜಠರಾಗ್ನಿ ಕೂಡ ವರ್ಧಿಸುತ್ತದೆ. ಹಾಗಾಗಿ ಎಷ್ಟೋ ರೋಗಗಳನ್ನು ಬರದಂತೆ…
ಮಾಜಿ ಚಾಂಪಿಯನ್ ಶ್ರೀಲಂಕಾ ಹಾಗೂ ಈಗಾಗಲೆ ಸೆಮೀಸ್ ಆಸೆ ಕೈಚೆಲ್ಲಿರುವ ಬಾಂಗ್ಲಾದೇಶ ತಂಡಗಳು ಸೋಮವಾರ ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. 2025ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲು ಶಕೀಬ್ ಅಲ್ ಹಸನ್ ಪಡೆಗೆ ಈ ಪಂದ್ಯ ಮಹತ್ವದ್ದಾಗಿದೆ. ವಾಯು ಮಾಲಿನ್ಯದಿಂದಾಗಿ ಲಂಕಾ ತಂಡದ ಆಟಗಾರರು ಅಭ್ಯಾಸಕ್ಕೆ ಕ್ರೀಡಾಂಗಣಕ್ಕೆ ತೆರಳದೆ, ಹೋಟೆಲ್ನಲ್ಲೇ ಉಳಿಯಲು ನಿರ್ಧರಿಸಿದ್ದಾರೆ. ಬುಧವಾರ ದೆಹಲಿಗೆ ಆಗಮಿಸಿದ ಬಳಿಕ ಮೊದಲ ಎರಡು ದಿನ ಅಭ್ಯಾಸದಿಂದ ದೂರ ಉಳಿದಿದ್ದ ಬಾಂಗ್ಲಾದೇಶ ಆಟಗಾರರು ಭಾನುವಾರ ಮುಖಗವಸು ಧರಿಸಿ ತಯಾರಿ ನಡೆಸಿದ್ದಾರೆ. ಅಸ್ತಮ ಸಮಸ್ಯೆ ಹೊಂದಿರುವ ಆಟಗಾರರು ಅಭ್ಯಾಸದಿಂದ ದೂರ ಉಳಿದಿದ್ದಾರೆ. ದೆಹಲಿ ವಾಯು ಮಾಲಿನ್ಯದ ಸೂಚ್ಯಂಕ 400ರ ಗಡಿ ದಾಟಿದ್ದು, ಭಾನುವಾರ 457ಕ್ಕೆ ತಲುಪಿದೆ. ಐಸಿಸಿ ನೀತಿ ಸಂಹಿತೆ ಆರ್ಟಿಕಲ್ 2.8ರ ಪ್ರಕಾರ ಪಂದ್ಯದ ವೇಳೆ ಹಮಾಮಾನ ವೈಪರೀತ್ಯ ಅಥವಾ ಕ್ರೀಡಾಂಗಣದ ಗುಣಮಟ್ಟ, ಬೆಳಕಿನ ಕೊರತೆ ಅಥವಾ ಭಯದ ವಾತಾವರಣ ಸಂದರ್ಭದಲ್ಲಿ ಪಂದ್ಯವನ್ನು ರದ್ದುಗೊಳಿಸುವ ಬಗ್ಗೆ ಮ್ಯಾಚ್ ರೆಫ್ರಿ ಸಲಹೆ ಬಳಿಕ…
ಬೆಂಗಳೂರು;- ಮರಳು ಸಮಸ್ಯೆ ಪರಿಹರಿಸಲು ಸರ್ಕಾರದಿಂದ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದರು ಮಂಗಳೂರು ನಗರ ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಮರಳು ಸಮಸ್ಯೆ ಬಗ್ಗೆ ಮಾಡಿರುವ ಆರೋಪಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಚಿವರು, ಶಾಸಕರಾದ ವೇದವ್ಯಾಸ್ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿರುವುದಲ್ಲ. ಕಳೆದ 4 ವರ್ಷಗಳಿಂದ ನಿಮ್ಮದೇ ʻಡಬಲ್ ಇಂಜಿನ್ʼ ಸರ್ಕಾರವಿತ್ತು. ಶಾಸಕರು, ಸಚಿವರು, ಸಂಸದರು ಬಿಜೆಪಿಯವರೇ ಆಗಿದ್ದರು. ನಿಮ್ಮ ಅವಧಿಯಲ್ಲೇ ನಿಮಗೆ ಮರಳು ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಜನರ ಮುಂದೆ ನೂರು ಬಾರಿ ಸುಳ್ಳು ಹೇಳಿ, ಅದೇ ಸತ್ಯ ಎಂಬಂತೆ ಬಿಂಬಿಸುವ ಚಾಳಿ ನಿಮ್ಮದು. ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರದೃಷ್ಠಿಯ ಒಂದೂ…
ಕೆಲವರು ಮೈ ತುಂಬಾ ಬೆವರುತ್ತದೆ, ಮತ್ತೆ ಕೆಲವರದ್ದು ಅಷ್ಟು ಬೆವರುವುದಿಲ್ಲ, ಇನ್ನು ಕೆಲವರಿಗೆ ಮೈಯೇನೂ ಅಷ್ಟು ಬೆವರುವುದಿಲ್ಲ, ಆದರೆ ಪಾದಗಳು ತುಂಬಾ ಬೆವರುತ್ತಿರುತ್ತದೆ. ಅಂಥವರಿಗೆ ಪಾದಗಳ ದುರ್ವಾಸನೆ ತಪ್ಪಿದ್ದಲ್ಲ. ಈ ಪಾದಗಳ ದುರ್ವಾಸನೆ ಬೀರಲಾರಂಭಿಸಿದರೆ ನಮ್ಮ ಪಕ್ಕ ಕೂರಲು ಸ್ನೇಹಿತರು ಹಿಂಜರಿಯುತ್ತಾರೆ, ಇನ್ನು ಶೂ ಬಿಚ್ಚುವಾಗ ಬರುವ ದುರ್ವಾಸನೆಗೆ ಅಕ್ಕ-ಪಕ್ಕದವರು ಮೂಗು ಮುಚ್ಚಿಕೊಳ್ಳುತ್ತಾರೆ, ಇದರಿಂದ ಮುಜುಗರ ತಪ್ಪಿದ್ದಲ್ಲ. ಬ್ಲ್ಯಾಕ್ ಟೀ ಎಲ್ಲರ ಮನೆಯಲ್ಲಿ ಟೀ ಪುಡಿ ಇದ್ದೇ ಇರುತ್ತದೆ. ಬರೀ ನೀರಿಗೆ 1 ಚಮಚ ಟೀ ಪುಡಿ ಹಾಕಿ ಡಿಕಾಷನ್ ತಯಾರಿಸಿ. ನಂತರ ಆ ಡಿಕಾಷನ್ ಅನ್ನು ಅರ್ಧ ಬಕೆಟ್ ಉಗುರು ಬೆಚ್ಚಗಿನನೀರಿಗೆ ಸುರಿದು ಅದರಲ್ಲಿ 10 ನಿಮಿಷ ಪಾದಗಳನ್ನುಇಟ್ಟು ಪೇಪರ್ ಓದುತ್ತಾ ಅಥವಾ ನಿಮ್ಮಿಷ್ಟ ಸಂಗೀತ ಕೇಳುತ್ತಾ ಆರಾಮವಾಗಿ ಇರಿ. ನಂತರ ಕಾಲುಗಳನ್ನು ತೊಳೆದು ಒಣಗಿದ ಟವಲ್ನಿಂದ ಒರೆಸಿ. ಈ ರೀತಿ ಮಾಡುತ್ತಾ ಬಂದರೆ ಕೆಲವೇ ತಿಂಗಳಿನಲ್ಲಿ ಪಾದ ದುರ್ವಾಸನೆ ಬೀರುವ ಸಮಸ್ಯೆ ಇಲ್ಲವಾಗುವುದು. ಈ ರೀತಿ ಒಂದು ದಿನ…
ನವದೆಹಲಿ: ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಿಂದಾಗಿ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದೆ. ಇದೀಗ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನಗಳಲ್ಲಿ (Air India Flight) ಸಿಖ್ಖರು ಪ್ರಯಾಣಿಸದಂತೆ ಎಚ್ಚರಿಕೆ ನೀಡಿದ್ದಾನೆ. ಗುರುಪತ್ವಂತ್ ಪನ್ನುನ್ನ ಹೊಸ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ನವೆಂಬರ್ 19 ರಂದು ನಿಮ್ಮ ಜೀವಕ್ಕೆ ಅಪಾಯವಿದೆ. ಏರ್ ಇಂಡಿಯಾ ವಿಮಾನಗಳಲ್ಲಿ ಸಿಖ್ ಸಮುದಾಯದ ಜನರು ಪ್ರಯಾಣಿಸಬೇಡಿ ಎಂದು ಎಚ್ಚರಿಕೆ ನೀಡಿದ್ದು, https://ainlivenews.com/suprem-ray-healing-center-reiki/#google_vignette ಇದು ಏರ್ ಇಂಡಿಯಾ ವಿಮಾನಗಳ ಮೇಲೆ ದಾಳಿಯನ್ನು ಸೂಚಿಸುತ್ತದೆ. ವೈರಲ್ ಆಗಿರುವ ವೀಡಿಯೋದಲ್ಲಿ, ನಾವು ಸಿಖ್ ಜನರನ್ನು ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದ ಮೂಲಕ ಪ್ರಯಾಣಿಸಬೇಡಿ ಎಂದು ಕೇಳಿಕೊಳ್ಳುತ್ತೇವೆ. ಅಂದು ಜಾಗತಿಕ ದಿಗ್ಬಂಧನ ಇರುತ್ತದೆ. ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ…
ಹುಬ್ಬಳ್ಳಿ: ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಸಂಬಂಧಿ, ಕುಂದಗೋಳ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಎಸ್.ಐ. ಚಿಕ್ಕನಗೌಡರ ಅವರು ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದರು. ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಜಗದೀಶ ಶೆಟ್ಟರ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಸದಾಶಿವನಗರದಲ್ಲಿರುವ ಶಿವಕುಮಾರ್ ಅವರ ನಿವಾಸದಲ್ಲಿ ಅವರ ‘ಕೈ’ ಹಿಡಿದರು. ಅವರ ಜೊತೆ, ಶಿಗ್ಗಾವಿ ಬಿಜೆಪಿಯ ಕೆಲವು ಮುಖಂಡರೂ ಕಾಂಗ್ರೆಸ್ ಸೇರಿದರು. ಚಿಕ್ಕನಗೌಡರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಬಿಜೆಪಿಯಿಂದ ಟಿಕೆಟ್ ಸಿಗದೆ ಕಾಂಗ್ರೆಸ್ ಸೇರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ ಜಗದೀಶ ಶೆಟ್ಟರ್ ಅವರು ಚಿಕ್ಕನಗೌಡರ ಅವರನ್ನು ಕಾಂಗ್ರೆಸ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಬೆಳಿಗ್ಗೆ ಭೇಟಿ ಮಾಡಿದ್ದ ಚಿಕ್ಕನಗೌಡರ, ಕಾಂಗ್ರೆಸ್ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದರು. ಕಾಂಗ್ರೆಸ್ ವರಿಷ್ಠರ ಸೂಚನೆಯಂತೆ ಬಿಜೆಪಿ, ಜೆಡಿಎಸ್ನ ಹಲವು ಮುಖಂಡರನ್ನು ಜಗದೀಶ ಶೆಟ್ಟರ್ ಅವರು…
ಹುಬ್ಬಳ್ಳಿ; ಮಂಗಳಕರ ಪುಷ್ಯ ನಕ್ಷತ್ರದ ದಿನದ ನಿಮಿತ್ತ, ಮಕ್ಕಳ ಸಮಗ್ರ ಆರೋಗ್ಯವನ್ನು ಪ್ರತಿರಕ್ಷಿಸುವ ಮತ್ತು ಬಲಪಡಿಸುವ ಮಹದುದ್ದೇಶದಿಂದ, ಕರ್ನಾಟಕದ ಮೊದಲ ಪತಂಜಲಿ ವೆಲ್ನೆಸ್ ಹುಬ್ಬಳ್ಳಿ ಸಂಸ್ಥೆಯವತಿಯಿಂದ, ಇವರ ಸ್ವಾಸ್ಥ್ಯ ಕೇಂದ್ರ ಮುಕುಂದದಲ್ಲಿ ಉಚಿತ ಸ್ವರ್ಣ ಬಿಂದು ಶಿಬಿರವನ್ನು ಆಯೋಜಿಸಲಾಗಿತ್ತು. ಸ್ವರ್ಣ ಬಿಂದು ಪ್ರಾಶನ ಇದು ಮಕ್ಕಳ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯದೊಂದಿಗೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಹೆಚ್ಚಿಸಲು ಹುಟ್ಟಿನಿಂದ 14 ವರ್ಷದವರೆಗಿನ ಮಕ್ಕಳಿಗೆ ಪ್ರತಿರಕ್ಷಣೆ ನೀಡುವ ಒಂದು ಆಯುರ್ವೇದ ವಿಧಾನವಾಗಿದೆ. ವಿಶ್ವಚೇತನ – ಪತಂಜಲಿ ವೆಲ್ನೆಸ್ ಹುಬ್ಬಳ್ಳಿ ಈ ಶುಭ ದಿನದಂದು ಈ ಉಚಿತ ರೋಗನಿರೋಧಕ ಶಿಬಿರದ ಮೂಲಕ ಗಮನಾರ್ಹ ವ್ಯವಸ್ಥೆ ಕಲ್ಪಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ತನ್ನದೇ ಆದ ಸೇವೆ ನೀಡುತ್ತಿದೆ. ವಿಶ್ವಚೇತನ ಯೋಗ ಸಂಶೋಧನಾ ಕೇಂದ್ರ ಹುಬ್ಬಳ್ಳಿಯ ಅಧ್ಯಕ್ಷರಾದ ರಮೇಶ ಬಾಫನಾ ಶಿಬಿರವನ್ನು ಉದ್ಘಾಟಿಸಿ ಹುಬ್ಬಳ್ಳಿ ಮತ್ತು ಧಾರವಾಡದಾದ್ಯಂತ 300 ಕ್ಕೂ ಹೆಚ್ಚು ಶಿಶುಗಳು ಮತ್ತು ಮಕ್ಕಳಿಗೆ ಸ್ವರ್ಣಬಿಂದು ಲಸಿಕೆಯ ಪ್ರಯೋಜನವಾಗುವಂತೆ ಮಾಡಿದರು. ವೆಲನೆಸ್ ಕೇಂದ್ರದ…
ಹಾವೇರಿ;- ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಅಧಿಕಾರ ಹಂಚಿಕೆ ವಿಚಾರ ಜನರ ಸಮಸ್ಯೆಯಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜನರ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಮಾತನಾಡೋಣಾ. ಅಧಿಕಾರ ಹಂಚಿಕೆ, ಬಣ ರಾಜಕೀಯ ಪಕ್ಷ ನೋಡಿಕೊಳ್ಳುತ್ತೆ. ಹೈಕಮಾಂಡ್ ತಾಕೀತು ಮಾಡಿದ ನಂತರ, ಕೆಲವರು ಬಣ ರಾಜಕಾರಣ ಮಾತನಾಡುತ್ತಿರುವ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನಂತೂ ಈ ರೀತಿಯ ಪ್ರಶ್ನೆಗಳಿಗೆ ಉತ್ತರಿಸಬಾರದು ಎಂಬ ತೀರ್ಮಾನ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ 45 ಲಕ್ಷ ಕಾರ್ಡ್ಗಳನ್ನ ವಿತರಿಸಿದೆ. ಡಿ ಕೆ ಶಿವಕುಮಾರ್ ವಿರುದ್ಧ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಅವರನ್ನೇ ಕೇಳಿಕೊಳ್ಳಿ ಎಂದು ಲಾಡ್ ಜಾರಿಕೊಂಡರು. ಇನ್ನು ಮೂರ್ನಾಲ್ಕು ತಿಂಗಳಲ್ಲಿ ನಕಲಿ ಕಾರ್ಮಿಕ ಕಾರ್ಡ್ಗಳನ್ನು ತಡೆಹಿಡಿಯುತ್ತೇವೆ ಎಂದು ಅವರು ಹೇಳಿದರು. ಕಾರ್ಮಿಕ ಇಲಾಖೆಯ ಯೋಜನೆಗಳ ಬಗ್ಗೆ ಕಾರ್ಮಿಕರಿಗೆ ಜಾಗೃತಿ ಇದೆ. ಸುಮಾರು…
ಇಸ್ಲಾಮಾಬಾದ್: ಪಂಜಾಬ್ ಪ್ರಾಂತ್ಯದ ಪಾಕಿಸ್ತಾನದ ವಾಯುಪಡೆ ತರಬೇತಿ (Pakistan Air Force Base) ನೆಲೆಯ ಮೇಲೆ ದಾಳಿ ನಡೆಸಿದ್ದ 9 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ಮುಂಜಾನೆ ಒಂಬತ್ತು ಶಸ್ತ್ರಸಜ್ಜಿತ ಭಯೋತ್ಪಾದಕರು ದಾಳಿ ನಡೆಸಿದ್ದರು. ಅವರೆಲ್ಲರನ್ನೂ ನರಕಕ್ಕೆ ಕಳುಹಿಸಲಾಗಿದೆ ಎಂದು ಪಾಕ್ ಸೇನೆ ಹೇಳಿದೆ. ದೇಶದಲ್ಲಿ ಮೂರು ಪ್ರತ್ಯೇಕ ಭಯೋತ್ಪಾದಕ ದಾಳಿಗಳಲ್ಲಿ 17 ಸೈನಿಕರು ಸಾವಿಗೀಡಾಗಿದ್ದಾರೆ. ಪಾಕಿಸ್ತಾನದ ವಾಯುಪಡೆಯ ಮಿಯಾನ್ವಾಲಿ ತರಬೇತಿ ವಾಯುನೆಲೆಯ ಮೇಲೆ ಒಂಬತ್ತು ಭಯೋತ್ಪಾದಕರು ದಾಳಿ ನಡೆಸಿದ್ದರು. ದಾಳಿಯ ಸಮಯದಲ್ಲಿ ಕಾರ್ಯನಿರ್ವಹಿಸದ ಮೂರು ವಿಮಾನಗಳಿಗೆ ಹಾನಿಯಾಗಿತ್ತು. https://ainlivenews.com/suprem-ray-healing-center-reiki/#google_vignette ಪಿಎಎಫ್ ತರಬೇತಿ ಏರ್ಬೇಸ್ ಮಿಯಾನ್ವಾಲಿಯಲ್ಲಿ ಕೂಂಬಿಂಗ್ ಮತ್ತು ಕ್ಲಿಯರೆನ್ಸ್ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲಾಗಿದೆ. ಎಲ್ಲಾ ಒಂಬತ್ತು ಭಯೋತ್ಪಾದಕರನ್ನು ನರಕಕ್ಕೆ ಕಳುಹಿಸಲಾಗಿದೆ ಎಂದು ಮಿಲಿಟರಿ ದೃಢಪಡಿಸಿದೆ. ತೆಹ್ರೀಕ್-ಇ-ಜಿಹಾದ್ ಪಾಕಿಸ್ತಾನ್ (ಟಿಜೆಪಿ). ಇದು ಹೊಸದಾಗಿ ರೂಪುಗೊಂಡಿರುವ ಭಯೋತ್ಪಾದಕ ಗುಂಪು. ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನದ (ಟಿಟಿಪಿ) ಅಂಗಸಂಸ್ಥೆಯಾಗಿದ್ದು, ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ದಾಳಿಯನ್ನು ಖಂಡಿಸಿದ ಹಂಗಾಮಿ ಪ್ರಧಾನಿ ಅನ್ವಾರುಲ್ ಹಕ್ ಕಾಕರ್, ನಮ್ಮ ಭದ್ರತಾ ವ್ಯವಸ್ಥೆಯನ್ನು ದುರ್ಬಲಗೊಳಿಸುವ…