ಬೆಂಗಳೂರು:- ಕುಡಿದು ಕಾರು ಚಾಲನೆ ಮಾಡಿದ ಪರಿಣಾಮ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಕಾಲೇಜು ವಿಧ್ಯಾರ್ಥಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬನ್ನೇರುಘಟ್ಟ ಸಮೀಪದ ರಾಗಿಹಳ್ಳಿ ಬಳಿ ನಡೆದಿದೆ. https://ainlivenews.com/government-campaigning-due-to-lack-of-development-internal-strife-and-infighting-chalavadi-narayanaswamy/ ಮೃತ ವಿದ್ಯಾರ್ಥಿಗಳನ್ನು ಕೇರಳ ಮೂಲದ ಸಹಾಹುಕ್ (28) ಮತ್ತು ಅರ್ಶು (23) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ದೇವ ನಾರಾಯಣ (23) ಮತ್ತು ಸಾಹಿಲ್ (23) ಎಂದು ಗುರುತಿಸಲಾಗಿದೆ. ನಾಲ್ವರು ಗೊಟ್ಟಿಗೆರೆಯ ಕಾಲೇಜೊಂದರ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ ಸಿಫ್ಟ್ ಕಾರಿನಲ್ಲಿ ಅತಿವೇಗವಾಗಿ ಬಂದು ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರ ಛಿದ್ರವಾಗಿದೆ. ನಾಲ್ವರು ಕಳೆದ ರಾತ್ರಿ ಪಾರ್ಟಿ ಮಾಡಿ ಕಂಠಪೂರ್ತಿ ಮದ್ಯ ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದೆ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Author: AIN Author
ಬೆಂಗಳೂರು/ನವದೆಹಲಿ:- 500 ರೂಪಾಯಿ ನೋಟಿನ ಬಗ್ಗೆ ಅನೇಕರಿಗೆ ಇನ್ನೂ ಅನುಮಾನಗಳಿವೆ. ಇತ್ತೀಚಿಗೆ 500ರ ನೋಟುಗಳ ಮೇಲೆ ನಕ್ಷತ್ರ ಚಿಹ್ನೆ ಕಂಡು ಬರುವುದರಿಂದ ಸಾಕಷ್ಟು ಜನರು ಈ ನೋಟನ್ನು ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಯಾಕೆಂದರೆ ಈ ನೋಟು ನಕಲಿಯೋ ಅಸಲಿಯೋ ಎಂಬ ಅನುಮಾನ ಸಾಕಷ್ಟು ಜನರಲ್ಲಿದೆ. ಸರ್ಕಾರ ಅದೆಷ್ಟೇ ಪ್ರಯತ್ನ ಪಟ್ಟರೂ ಕಳ್ಳ ನೋಟು ದಂಧೆ ಮಾತ್ರ ಇನ್ನು ಕೂಡಾ ನಿಂತಿಲ್ಲ. ವಂಚಕರು ತಮ್ಮ ಹೊಸ ಹೊಸ ಮಾರ್ಗಗಳನ್ನು ಅನುಸರಿಸಿಕೊಂಡು ತಮ್ಮ ಕೈ ಚಳಕ ತೋರಿಸುತ್ತಲೇ ಇದ್ದಾರೆ. https://ainlivenews.com/big-shock-for-housewives-these-women-are-still-not-getting-their-grihalakshmi-money/ 500 ರೂಪಾಯಿ ನೋಟು ಪ್ರಸ್ತುತ ದೇಶದ ಅತೀ ದೊಡ್ಡ ಕರೆನ್ಸಿ ನೋಟಾಗಿದೆ. ಈ ಹಿಂದೆ ದೇಶದಲ್ಲಿ 1000 ಮತ್ತು 2000 ರೂಪಾಯಿ ನೋಟುಗಳು ಚಲಾವಣೆಯಲ್ಲಿತ್ತು. ಆದರೆ, ಸರ್ಕಾರ ಕ್ರಮೇಣ 2016ರಲ್ಲಿ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹಿಂಪಡೆದುಕೊಂಡಿತ್ತು. ಕ್ರಮೇಣ 2000 ರೂಪಾಯಿ ನೋಟುಗಳನ್ನು ಜಾರಿಗೆ ತಂದಿತ್ತು, ಆದ್ರೆ ಅವುಗಳನ್ನು ಕೂಡ ಹೆಚ್ಚು ದಿನ ಉಳಿಸದೆ ವಾಪಾಸ್ ಪಡೆದುಕೊಂಡಿತು ಆಗಾಗ ಕೇಂದ್ರ ಸರ್ಕಾರ, ಆರ್ಬಿಐ…
ಕೊಪ್ಪಳ:- ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದ ಅಂಗನವಾಡಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗು ಸಾವನ್ನಪ್ಪಿದೆ. ಅಲಿಯಾ ಮಹ್ಮದ್ ರಿಯಾಜ್ ಮೃತ ಬಾಲಕಿ. ಮುಂಜಾನೆ ಉಪಹಾರ ಸೇವಿಸಿದ್ದ ಬಾಲಕಿ ಚಟುವಟಿಕೆಯಿಂದಲೇ ಇದ್ದಳು. ಅಂಗನವಾಡಿಯಲ್ಲಿ ಎಲ್ಲ ಮಕ್ಕಳಂತೆ ಆಟವಾಡಿಕೊಂಡಿದ್ದಳು. https://ainlivenews.com/crime-news-two-youths-found-dead-suspiciously-in-anekal/ ಆದರೆ, ಮಧ್ಯಾಹ್ನ ಆಟವಾಡುತ್ತಿದ್ದಾಗ ದಿಢೀರನೆ ಕುಸಿದು ಬಿದ್ದಿದ್ದಾಳೆ. ಪೀಟ್ಸ್ ಬಂದವರಂತೆ ಆಡಿದ್ದಾಳೆ. ಬಾಲಕಿಯನ್ನು ನೋಡಿ ಅಂಗನವಾಡಿ ಸಹಾಯಕಿ ಓಡಿ ಬಂದಿದ್ದಾಳೆ. ಕೂಡಲೇ ಪಾಲಕರಿಗೆ ಮಾಹಿತಿ ನೀಡಲಾಗಿದೆ. ಕೂಡಲೆ ಬಾಲಕಿಯನ್ನು ಸಮೀಪದ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಆದರೆ, ಆಸ್ಪತ್ರೆಗೆ ಹೋಗುವ ಮುನ್ನವೇ ಬಾಲಕಿ ಮೃತಪಟ್ಟಿದ್ದಳು.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿ 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ಸೋಮವಾರ ವಡೋದರಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಲೀಗ್ ನ 4ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದು ಬೀಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿ 8 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಸೋತರೂ ಫಸ್ಟ್ ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್ಸಿಬಿ 141 ರನ್ ಗಳಿಸಿ ಸಾಧಾರಣ ಗುರಿ ನೀಡಿತ್ತು. ಡೆಲ್ಲಿ ನೀಡಿದ 142 ರನ್ಗಳ ಗುರಿ ಬೆನ್ನತ್ತಿದ ಆರ್ಸಿಬಿ ಇನ್ನೂ 3.4 ಬಾಲ್ ಇರುವಂತೆಯೇ ಗೆದ್ದು ಬೀಗಿದೆ. ಬೆಂಗಳೂರು ತಂಡದ ಪರ ಓಪನಿಂಗ್ ಮಾಡಿದ ಕ್ಯಾಪ್ಟನ್ ಸ್ಮೃತಿ ಮಂದಾನ ಅಬ್ಬರಿಸಿದರು. ತಾನು ಎದುರಿಸಿದ 47 ಬಾಲ್ನಲ್ಲಿ 3 ಭರ್ಜರಿ ಸಿಕ್ಸರ್, 40 ಫೋರ್ ಸಮೇತ 81 ರನ್ ಚಚ್ಚಿದರು. ಸ್ಮೃತಿ ಮಂದಾನಗೆ ಸಾಥ್ ನೀಡಿದ ಮತ್ತೋರ್ವ ಓಪನಿಂಗ್ ಬ್ಯಾಟರ್ ಡೇನಿಯಲ್ ವೈಟ್ ಕೂಡ ಸಿಡಿದರು. 33 ಬಾಲ್ನಲ್ಲಿ 7 ಫೋರ್ ಸಮೇತ 42…
ಬೆಂಗಳೂರು:-ಬೆಂಗಳೂರು ಹೊರವಲಯ ಆನೇಕಲ್ ನಲ್ಲಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜರುಗಿದೆ. https://ainlivenews.com/woman-hangs-herself-after-killing-her-5-year-old-daughter/ ದಿವಾನ್ ಅಫ್ರೀದಿ ಅಲಿ, ಅಶ್ರಫ್ ಅಲಿ ಮೃತರು. ಯಾರಂಡಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಿದ್ದರು. ಇಬ್ಬರು ಸಿರಿಂಜ್ ಮೂಲಕ ಡ್ರಗ್ಸ್ ಇಂಜೆಕ್ಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಓರ್ವ ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಬೆಂಗಳೂರು:- ನಮ್ಮ ಮೆಟ್ರೋ ಪ್ರಯಾಣಿಕರಿಗೆ BMRCL ಬಿಗ್ ಅಪ್ಡೇಟ್ ಕೊಟ್ಟಿದೆ. MG ರೋಡ್ನಿಂದ ಶಿವಾಜಿನಗರ ಮೆಟ್ರೋ ಸ್ಟೇಷನ್ವರೆಗಿನ ಸುರಂಗ ಮಾರ್ಗದಲ್ಲಿ ನಿನ್ನೆ ಪರಿಶೀಲನೆ ನಡೆದಿದೆ. ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಸುರಂಗ ಮಾರ್ಗ ಶೀಘ್ರದಲ್ಲೇ ಆರಂಭವಾಗುವ ಬಗ್ಗೆ ಮಹತ್ವದ ಮಾಹಿತಿ ನೀಡಿದೆ. https://ainlivenews.com/nirani-sugars-company-fired-45-employees/ ಹೀಗಾಗಿ ಬೆಂಗಳೂರು ಜನರಿಗೆ ಮತ್ತೊಂದು ಗುಡ್ನ್ಯೂಸ್ ಸಿಕ್ಕಂತಾಗಿದೆ. ಬಹು ನಿರೀಕ್ಷೆಯ ನಮ್ಮ ಮೆಟ್ರೋದ ಪಿಂಕ್ ಲೈನ್ ಓಪನ್ ಆಗಲಿದೆ. ಎಂಜಿ ರೋಡ್ನಿಂದ ಶಿವಾಜಿನಗರ ಮೆಟ್ರೋ ಸ್ಟೇಷನ್ವರೆಗೆ ಸುರಂಗ ಮಾರ್ಗದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಇಂದು ಟಿಬಿಎಂ ಮಷಿನ್ ಸುರಂಗ ಕೊರೆದು ಹೊರ ಬಂದಿದೆ. ಅಂಡರ್ ಗ್ರೌಂಡ್ ಮೆಟ್ರೋ ಕಾಮಗಾರಿಗಾಗಿ 9 ಟಿಬಿಎಂ ಮೆಷಿನ್ಗಳನ್ನು ಭೂಮಿಗಿಳಿಸಲಾಗಿತ್ತು. ಅದರಲ್ಲಿ ಈಗಾಗಲೇ 8 ಟಿಬಿಎಂ ಮೆಷಿನ್ ಸುರಂಗ ಕೊರೆದು ಹೊರಗೆ ಬಂದಿವೆ. ಉಳಿದಿರುವ ಒಂದು ಟಿಬಿಎಂ ಮೆಷಿನ್ ಹೊರ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗವನ್ನು ಹೊಂದಿರುವ ಪಿಂಕ್ ಲೈನ್ ಯೋಜನೆ ಇದೆ.…
ಬೆಂಗಳೂರು:- ಬೆಂಗಳೂರಿನ ನಾಗಸಂದ್ರದ ರಾಮಯ್ಯ ಲೇಔಟ್ನಲ್ಲಿರುವ ಮನೆಯಲ್ಲಿ ಮಹಿಳೆಯೊಬ್ಬರು ತನ್ನ 5 ವರ್ಷದ ಮಗಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://ainlivenews.com/good-news-for-hitman-fans-hardik-out-rohit-sharma-back-as-mi-captain/ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿದ್ದ ಮಹಿಳೆ, ಮಗಳು ರೋಷಿಣಿಯನ್ನು ಕೊಲೆ ಮಾಡಿ ಸೀಲಿಂಗ್ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆ ಡೆತ್ನೋಟ್ ಕೂಡ ಬರೆದಿಟ್ಟಿದ್ದು, ಪತಿಯ ಅನೈತಿಕ ಸಂಬಂಧದ ಬಗ್ಗೆ ಉಲ್ಲೇಖಿಸಿದ್ದಾರೆ. ಶ್ರುತಿಯ ಪತಿಯನ್ನು ವಶಕ್ಕೆ ಪಡೆದು ಬಾಗಲಗುಂಟೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು/ನವದೆಹಲಿ:- ಫಾಸ್ಟ್ಟ್ಯಾಗ್ನ ಹೊಸ ನಿಯಮ ಹೀಗಾಗಲೇ ಜಾರಿ ಆಗಿದೆ. ಕಡಿಮೆ ಬ್ಯಾಲೆನ್ಸ್, ಪಾವತಿ ವಿಳಂಬ ಅಥವಾ ಫಾಸ್ಟ್ಟ್ಯಾಗ್ ಅನ್ನು ಕಪ್ಪುಪಟ್ಟಿ ಅಥವಾ ಬ್ಲ್ಯಾಕ್ ಲಿಸ್ಟ್ಗೆ ಸೇರಿಸಿದರೆ ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ. ಫಾಸ್ಟ್ಟ್ಯಾಗ್ನಲ್ಲಿನ ಸಮಸ್ಯೆಗಳಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದೀರ್ಘ ಸರತಿ ಸಾಲುಗಳನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ. ಸರ್ಕಾರ ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ, ವಾಹನವು ಟೋಲ್ ದಾಟುವ ಮೊದಲು 60 ನಿಮಿಷಗಳಿಗಿಂತ ಹೆಚ್ಚು ಕಾಲ ಮತ್ತು ಟೋಲ್ ದಾಟಿದ ನಂತರ 10 ನಿಮಿಷಗಳ ಕಾಲ ಫಾಸ್ಟ್ಟ್ಯಾಗ್ ನಿಷ್ಕ್ರಿಯವಾಗಿದ್ದರೆ, ವಹಿವಾಟನ್ನು ತಿರಸ್ಕರಿಸಲಾಗುತ್ತದೆ. ಇದು ದೋಷ ಕೋಡ್ 176 ಅಡಿಯಲ್ಲಿ ಬರಲಿದೆ. https://ainlivenews.com/nirani-sugars-company-fired-45-employees/ ಹೌದು, ಫೆಬ್ರವರಿ 17 ರಿಂದ ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ ಫಾಸ್ಟ್ಟ್ಯಾಗ್ ಬ್ಯಾಲನ್ಸ್ ವಿಚಾರದಲ್ಲಿ ಹಲವು ನಿಯಮಗಳನ್ನು ಬದಲಾಯಿಸಿದೆ. ಫಾಸ್ಟ್ಟ್ಯಾಗ್ ಟ್ರಾಂಜಕ್ಷನ್ನಲ್ಲಿ ಯಾವುದೇ ರೀತಿಯ ರೀತಿಯ ಮೋಸದ ಚಟುವಟಿಕೆಗಳು ಆಗದಂತೆ ತಡೆಯಲು ಈ ಒಂದು ಬಲಾವಣೆಗಳನ್ನು ಮಾಡಲಾಗಿದೆ. 60 ನಿಮಿಷದ ಟಾರ್ಗೆಟ್: ನೀವು ಟೋಲ್ ಪ್ಲಾಜಾ ತಲುಪುವ…
ಮನುಷ್ಯರಲ್ಲಿ ಹಲವು ಗುಣಗಳು ಇರುತ್ತವೆ. ಪ್ರತಿಯೊಬ್ಬರಿಗೂ ಯಾವುದೋ ಒಂದು ಅಭ್ಯಾಸ/ ದುರಭ್ಯಾಸ ಇರುತ್ತದೆ. ಕೆಲವರು ಉಗುರು ಕಚ್ಚುತ್ತಾ ಇರುತ್ತಾರೆ, ಇಲ್ಲಾಂದ್ರೆ ಯಾರದ್ದೋ ಕಿವಿ ಕಚ್ಚುತ್ತಾ ಇರುತ್ತಾರೆ, ಮತ್ತೆ ಕೆಲವರು ಬೆಳರುಗಳಿಂದ ನಟಿಕೆ ಮುರಿಯುತ್ತಿರುತ್ತಾರೆ. ಇಂತಹವುಗಳಲ್ಲಿ ಒಂದು.. ಕಾಲು ಅಲ್ಲಾಡಿಸುವುದು! ತುಂಬಾ ಜನರಿಗೆ ಇಂತಹ ಅಭ್ಯಾಸ ಇರುತ್ತದೆ. ವಿಶೇಷವಾಗಿ ಕುರ್ಚಿಯಲ್ಲಿ ಕುಳಿತಿರುವ ಸಮಯದಲ್ಲಿ ಹೆಚ್ಚಾಗಿ ಮಾಡುತ್ತಾ ಇರುತ್ತಾರೆ. ಕುಳಿತಾಗಲಷ್ಟೇ ಅಲ್ಲ, ಮಲಗಿರುವ ಸಮಯದಲ್ಲೂ ಕಾಲುಗಳನ್ನು ಆಡಿಸುವ ಚಟ ಅನೇಕರಿಗೆ ಇರುತ್ತದೆ. https://ainlivenews.com/nirani-sugars-company-fired-45-employees/ ಹಾಗೆಲ್ಲಾ ಕಾಲು ಅಲ್ಲಾಡಿಸಬೇಡಿ ಎಂದು ಎಚ್ಚರಿಸುವ ದೊಡ್ಡವರೂ ಸೈಲೆಂಟಾಗಿ ಕಾಲು ತೂಗುತ್ತಾ ಇರುತ್ತಾರೆ! ಈ ಅಭ್ಯಾಸವೇ ಅಂತಹುದು. ಕೆಲವರು ಕುಳಿತಾಗ, ಮಲಗಿದಾಗ ತಮ್ಮ ಕಾಲುಗಳನ್ನು ತೂಗಾಡಿಸುತ್ತಿರುವುದನ್ನು ಗಮನಿಸಿರಬಹುದು. ಕೆಲವರು ತಮ್ಮ ಪಾದಗಳನ್ನು ನಿಧಾನವಾಗಿ ಅಲುಗಾಡಿಸುತ್ತಾರೆ. ಇಂದಿಗೂ ಕೆಲವರು ತಮ್ಮ ಪಾದಗಳನ್ನು ಜೋರಾಗಿ ಅಲುಗಾಡಿಸುತ್ತಾರೆ. ಅವರನ್ನು ಸೂಕ್ಷ್ಮವಾಗಿ ಗಮನಿಸಿದರೆ ಸಂತೋಷದಲ್ಲಿ ಕೈ ಬೀಸುತ್ತಿರುವಂತೆ ಕಾಣುತ್ತದೆ. ಅಸಲಿಗೆ ಇದರ ಹಿಂದೆ ಬಲವಾದ ಕಾರಣಗಳಿವೆ. ಈ ರೋಗಲಕ್ಷಣವು ಯುವಜನರಲ್ಲಿ ವಿಶೇಷವಾಗಿ ಕಂಡುಬರುತ್ತದೆ. ಇದಕ್ಕೆ ಮುಖ್ಯ…
ಐಪಿಎಲ್ 2024 ರ ಆರಂಭದ ಮೊದಲು, ಮುಂಬೈ ಇಂಡಿಯನ್ಸ್ ತಂಡವು ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ನೇಮಿಸಿತ್ತು. ಈ ನಿರ್ಧಾರವು ಆಗ ಭಾರೀ ಟೀಕೆಗೆ ಗುರಿಯಾಗಿತ್ತು. https://ainlivenews.com/kolar-e-khata-campaign-in-the-municipal-council-kottur-manjunath/ ಏಕೆಂದರೆ ಐದು ಬಾರಿ ಚಾಂಪಿಯನ್ ಪಟ್ಟವನ್ನು ಗೆದ್ದ ತಂಡವು ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಆದರೆ, ಮಾರ್ಚ್ 22 ರಿಂದ ಆರಂಭವಾಗಲಿರುವ ಹೊಸ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾರ್ದಿಕ್ ಬದಲಿಗೆ ರೋಹಿತ್ ಶರ್ಮಾ ಮತ್ತೆ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ಎದುರಾಗಿದ್ದು, CSK ವಿರುದ್ಧದ ಪಂದ್ಯಕ್ಕೆ ನಿಷೇಧ ಮಾಡಲಾಗಿದೆ. ಮಾರ್ಚ್ 22 ರಿಂದ ಶುರುವಾಗಲಿರುವ IPL 2025ರ ಟೂರ್ನಿಯ ಮೊದಲ ಪಂದ್ಯದಲ್ಲಿ KKR ಮತ್ತು RCB ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 23 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಲಿದೆ. ಆದರೆ…