ಬೆಂಗಳೂರು:- ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಪೈಕಿ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಇದರಡಿಯಲ್ಲಿ ಪ್ರತಿ ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಾಕಲಾಗುತ್ತದೆ. https://ainlivenews.com/kolar-e-khata-campaign-in-the-municipal-council-kottur-manjunath/ ಆದರೆ ಮೂರ್ನಾಲ್ಕು ತಿಂಗಳಿಂದ ಗೃಹಲಕ್ಷ್ಮೀ’ ಹಣದ ಬರದ ಹಿನ್ನೆಲೆ ಮಹಿಳೆಯರು ಕಂಗಾಲಾಗಿದ್ದಾರೆ. ಇದೀಗ ಮತ್ತೆ ಇಡೀ ರಾಜ್ಯದ ಮಹಿಳೆಯರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಕಳೆದ 3 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದ್ ಆಗಿದೆ. 2,000 ರೂಪಾಯಿ ಹಣ ಬಾರದೆ ಇರೋ ಕಾರಣ ನಾರಿಯರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. 3 ತಿಂಗಳಿಂದ ಬ್ಯಾಂಕ್ಗೆ ಅಲೆದರೂ ಹಣ ಮಾತ್ರ ಜಮೆಯಾಗಿಲ್ಲ. ಹಣಬಾರದಕ್ಕೆ ಹಲವು ಜಿಲ್ಲೆಯ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ. ಮನೆ ಬಾಡಿಗೆ, ಆಸ್ಪತ್ರೆ, ಇತರೆ ಖರ್ಚಿಗಾಗಿ ಬಳಕೆಯಾಗ್ತಿದ್ದ ಹಣ ಈಗ ಬಾರದಿದ್ದಕ್ಕೆ ಮಹಿಳೆಯರು ಕಂಗಾಲಾಗಿದ್ದಾರೆ. ಹೀಗಾಗಿ ರಾಜ್ಯದ ಮಹಿಳೆಯರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಹಣ ಕೊಡ್ತಿದ್ದೇವೆ ಅಂತ ಸರ್ಕಾರದ ಸಬೂಬು,…
Author: AIN Author
ಬೆಂಗಳೂರು:- ರಾಜಧಾನಿ ಜನರು ಇನ್ಮುಂದೆ ಸ್ವಲ್ಪ ಎಚ್ಚರದಿಂದ ಇರಬೇಕು. ಸುಖಾ ಸುಮ್ಮನೇ ನೀರು ವ್ಯರ್ಥ ಮಾಡುವ ಜನರಿಗೆ ಬಿಸಿ ಮುಟ್ಟಿಸಲು ಜಲಮಂಡಳಿ ಮುಂದಾಗಿದೆ. https://ainlivenews.com/gas-cylinder-blast-burned-tea-shop/ ಇನ್ಮುಂದೆ ಬೆಂಗಳೂರು ನಗರದಲ್ಲಿ ನೀರು ವೇಸ್ಟ್ ಮಾಡಿದ್ರೆ ಸ್ಥಳದಲ್ಲೇ ದಂಡ ಬೀಳುತ್ತೆ. ಮಹಾನಗರ ಪಾಲಿಕೆಯಲ್ಲಿ ಕುಡಿಯುವ ನೀರನ್ನು ವ್ಯರ್ಥ ಮಾಡೋರಿಗೆ ದಂಡ ಹಾಕಲಾಗುವುದು ಎಂದು ಜಲಮಂಡಳಿ ನಗರದ ಜನತೆಗೆ ಎಚ್ಚರಿಕೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೇಸಿಗೆಗೆ ಮುನ್ನವೇ ಜಲಮಂಡಳಿ ಎಚ್ಚೆತ್ತುಕೊಂಡಿದೆ. ಕಳೆದ ಬಾರಿಯಂತೆ ಈ ಬಾರಿಯೂ ನೀರು ವ್ಯರ್ಥ ಮಾಡಿದ್ರೆ 5,000 ರೂ. ದಂಡ ವಿಧಿಸೋದಕ್ಕೆ ಮುಂದಾಗಿದೆ. ಕಳೆದ ಬಾರಿ ಉಂಟಾದ ನೀರಿನ ಅಭಾವ, ಈ ಬಾರಿ ಆಗದಂತೆ ಜಲಮಂಡಳಿ ನೀರು ಉಳಿತಾಯಕ್ಕೆ ಮುಂದಾಗಿದೆ. ಈ ಬಾರಿಯೂ ನೀರು ಪೋಲು ಮಾಡಿದ್ರೆ ದಂಡಾಸ್ತ್ರಕ್ಕೆ ಮುಂದಾಗಿದೆ. ಕಾರು, ಬೈಕ್, ಮನೆಯಂಗಳ, ಇತರೆ ಕೆಲಸಗಳಿಗೆ ನೀರು ವ್ಯರ್ಥ ಮಾಡಿದ್ರೆ ಆಯಾ ವಲಯದ ಜಲಮಂಡಳಿ ಇಂಜಿನಿಯರ್ಸ್ 5 ಸಾವಿರ ರೂ. ದಂಡ ವಿಧಿಸಲಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು…
ಐಪಿಎಲ್ 2025 ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕರಾಗಿ ರಜತ್ ಪಾಟಿದಾರ್ ಅವರನ್ನು ನೇಮಿಸಲಾಗಿದೆ, ಇದು ಅವರ ವೃತ್ತಿಜೀವನದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. https://ainlivenews.com/nirani-sugars-company-fired-45-employees/ 2021 ರಲ್ಲಿ ಐಪಿಎಲ್ ವೃತ್ತಿಜೀವನವನ್ನು ಪ್ರಾರಂಭಿಸಿದ 31 ವರ್ಷದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಈಗ ಪ್ರಮುಖ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಆರ್ಸಿಬಿ ಹಿಂದಿನ ನಾಯಕ ರಜತ್ ಅವರನ್ನು ಕೊಂಡಾಡಿದ್ದಾರೆ. ಅಧಿಕೃತವಾಗಿ ನಾನು ಜವಾಬ್ದಾರಿಯನ್ನು ನಿಮಗೆ ಹಸ್ತಾಂತರಿಸುತ್ತಿದ್ದೇನೆ. ಆರ್ಸಿಬಿಗೆ ನಾಯಕನಾಗಿರುವುದು ನಿಜಕ್ಕೂ ವಿಶೇಷ. ಕ್ಯಾಪ್ಟನ್ ಆಗಲು ನಿಮಗೆ ಒಳ್ಳೆಯ ಅವಕಾಶ ಸಿಕ್ಕಿದೆ. ನಾಯಕತ್ವದ ನೊಗ ಹೊರುತ್ತಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ. ಇನ್ನೊಂದು ಮುಖ್ಯ ವಿಚಾರ ಏನೆಂದರೆ ಚೆನ್ನಾಗಿ ಆಡೋದನ್ನ ಮರೆಯದಿರಿ. ಸಿಕ್ಸರ್ಗಳನ್ನು ಬಾರಿಸುತ್ತಲೇ ಇರಿ ಎಂದು ಶುಭ ಹಾರೈಸಿದ್ದಾರೆ. 2022 ರಿಂದ ಫಾಫ್ ಆರ್ಸಿಬಿ ನಾಯಕರಾಗಿ ಜವಾಬ್ದಾರಿ ತೆಗೆದುಕೊಂಡಿದ್ದರು. ಮೂರು ವರ್ಷಗಳ ಕಾಲ ತಂಡವನ್ನು ಮುನ್ನಡೆಸಿದ್ದ ಡುಪ್ಲೆಸಿಸ್, ಆರ್ಸಿಬಿಯ ಟ್ರೋಫಿ ಬರ ನೀಗಿಸುವಲ್ಲಿ ವಿಫಲರಾಗಿದ್ದರು. ಅದೇ ಕಾರಣಕ್ಕೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಡುಪ್ಲೆಸಿಸ್ ಅವರನ್ನು ಆರ್ಸಿಬಿ…
ಬೆಂಗಳೂರು:- ಎಣ್ಣೆ, ಡ್ರಗ್ ಗೆ ದಾಸನಾಗಿದ್ದ ಮಗನಿಗೆ ಬುದ್ದಿ ಹೇಳಿದ ತಂದೆ ಎದೆಗೆ ಇರಿದು ಮಗನೆ ಕೊಲೆ ಮಾಡಿರೋ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ನಡೆದಿದೆ. ತಿಗಳರಪಾಳ್ಯದ ಕೆರೆ ಮುನೇಶ್ವರ ದೇವಸ್ಥಾನದ ಬಳಿ ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ. https://ainlivenews.com/gas-cylinder-blast-burned-tea-shop/ ನಿವೃತ್ತ ಸೈನಿಕರಾಗಿದ್ದ ಚನ್ನಬಸವಯ್ಯ (61) ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡ್ತಿದ್ರು. ಮಗ ಅಮಿತ್ (21) ಕೆಲಸ ಕಾರ್ಯ ಇಲ್ಲದ ಎಣ್ಣೆ, ಡ್ರಗ್ಸ್ ಅಂತ ನಶೆಗೆ ದಾಸನಾಗಿ ತಿರುಗಾಡ್ತಿದ್ದ. ಪ್ರತಿ ದಿನ ಇದೇ ವಿಚಾರಕ್ಕೆ ಅಪ್ಪ ಮಗನ ನಡುವೆ ಗಲಾಟೆ ನಡೆಯುತ್ತಿತ್ತು. ಇಂದು ಸಹ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಅಪ್ಪ ಚನ್ನಬಸವಯ್ಯ ಮಗನಿಗೆ ಈ ಚಟದಿಂದ ಮುಕ್ತಿಹೊಂದಿ ಒಳ್ಳೆ ಬಟ್ಟೆ ಹಾಕೊಂಡು ಕೆಲಸ ಮಾಡು ಅಂತ ಬುದ್ದಿ ಹೇಳಿದ್ದಕ್ಕೆ ಅಪ್ಪನ ಮೇಲೆ ಸಿಟ್ಟಿಗೆದ್ದ ಮಗ ಅಮಿತ್ ತಂದೆ ಚನ್ನಬಸವಯ್ಯ ಎದೆಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಮನೆಯವರು ಚನ್ನಬಸವಯ್ಯರನ್ನ ಆಸ್ಪತ್ರೆಗೆ ಸೇರಿಸೋ ಕೆಲಸ ಮಾಡಿದ್ರು…
ಪ್ರಪಂಚದಲ್ಲಿ ಅತಿ ಆರೋಗ್ಯಕರ ಆಹಾರಗಳಲ್ಲಿ ಬಾದಾಮಿ ಪ್ರಮುಖ ಸ್ಥಾನ ಪಡೆದಿದ್ದು, ಇದರಲ್ಲಿ ಅದ್ಭುತ ಆರೋಗ್ಯಕರ ಪ್ರಯೋಜನಗಳಿವೆ. ಬಾದಾಮಿ ಪೋಷಕಾಂಶವುಳ್ಳ ಪದಾರ್ಥವಾಗಿದ್ದು, ಬಾದಾಮಿಯಿಂದ ನಮ್ಮ ಚರ್ಮ, ಕೂಡಲು ಹಾಗೂ ಆರೋಗ್ಯಕ್ಕೆ ಹಲವು ಪ್ರಯೋಜನಕಾರಿ ಅಂಶಗಳಿವೆ. https://ainlivenews.com/nirani-sugars-company-fired-45-employees/ ಬಾದಮಿಯನ್ನು ನಿಯಮಿತಾಗಿ ಸೇವನೆ ಮಾಡುವುದರಿಂದ ಹೃದಯವನ್ನು ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಜೊತೆಗೆ ಇದು ರೋಗ ನಿರೋಧಕಶಕ್ತಿಯನ್ನು ಬಲಪಡಿಸುವ ಮೂಲಕ ದೇಹವನ್ನು ವಿವಿಧ ರೋಗಗಳಿಂದ ರಕ್ಷಿಸುತ್ತದೆ. ಈ ರೀತಿ ಮಾನವನಿಗೆ ಇದರಿಂದ ಹೆಚ್ಚು ಪ್ರಯೋಜನ ಇರುವುದರಿಂದ ಇದಕ್ಕೆ ವಿಶ್ವದಾದ್ಯಂತ ಬೇಡಿಕೆ ಹೆಚ್ಚು. ಸಾಮಾನ್ಯವಾಗಿ ಭಾರತದಲ್ಲಿ ಬಾದಾಮಿಯನ್ನು ವಿವಿಧ ರುಚಿಕರ ಸಿಹಿ ತಿಂಡಿಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಈ ಬಾದಾಮಿ ಬೆಳೆಯುವ ಮರವು ಮಧ್ಯಪ್ರಾಚ್ಯ ಹಾಗೂ ದಕ್ಷಿಣ ಏಷ್ಯಾ ಪ್ರದೇಶದ ಒಂದು ಸಸ್ಯವಾಗಿದೆ. ಇದು ಸುಮಾರು 30 ಅಡಿ ಎತ್ತರಕ್ಕೆ ಸಮನಾಗಿ ಹರಡಿಕೊಂಡು ಬೆಳೆಯುವ ಮರ. ಪ್ರಪಂಚದಲ್ಲಿ ಬೆಳೆಯಲಾಗುವ ಬಾದಾಮಿಗಳಲ್ಲಿ ಶೇ 80ರಷ್ಟು ಬಾದಾಮಿಯನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬೆಳೆಯಲಾಗುತ್ತದೆ. ಒಬ್ಬ ವ್ಯಕ್ತಿಯು ದಿನಕ್ಕೆ 30 ರಿಂದ 50…
ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತದೆ. ಇರಿಸಲು ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ. https://ainlivenews.com/gas-cylinder-blast-burned-tea-shop/ ಆಹಾರಗಳು ನಮ್ಮ ಆರೋಗ್ಯದ ನೇರ ಅಂಶವಾಗಿದೆ. ನಮ್ಮ ದಿನನಿತ್ಯದ ಆಹಾರದಲ್ಲಿ ನಿಯಮಿತವಾಗಿ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿದರೆ, ದೇಹಕ್ಕೆ ಅಗತ್ಯವಿರುವ ಹೆಚ್ಚಿನ ಪೋಷಕಾಂಶಗಳು ಸುಲಭವಾಗಿ ಸಿಗುತ್ತವೆ.. ಮಧುಮೇಹಿಗಳಿಗೆ ಆ ಹಣ್ಣು ತಿನ್ನಬಾರದು ಈ ಹಣ್ಣು ತಿನ್ನಬಾರದು ಎಂದು ಗೊಂದಲಗಳನ್ನು ಸೃಷ್ಟಿಸುವ ಬದಲಿಗೆ ಈ ಸ್ಟಾರ್ ಪ್ರೂಟ್ನ್ನು ತಿನ್ನಲು ಕೊಡಿ ಏಕೆಂದರೇ ಈ ಹಣ್ಣು ದಿವೌಷಧಿ ಎಂದರೇ ತಪ್ಪಾಗುವುದಿಲ್ಲ.. ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಈ ಸ್ಟಾರ್ ಹಣ್ಣಿನ ಚರ್ಮವನ್ನು ಸಹ ತಿನ್ನಬಹುದು. ರುಚಿಯಲ್ಲಿ ಸ್ವಲ್ಪ ಕಹಿಯಾಗಿದ್ದರೂ ಅನೇಕ ರೋಗಗಳನ್ನು ತಡೆಯುವ ಶಕ್ತಿ ಹೊಂದಿದೆ. ಮಧುಮೇಹಿಗಳಿಗೆ ಉತ್ತಮವಾದ ಹಣ್ಣು ಕೆಲವು ಪೌಷ್ಟಿಕಾಂಶ-ದಟ್ಟವಾದ ಅಂಶಗಳನ್ನು ಒಳಗೊಂಡಿರುವುದಿಲ್ಲ.…
ಬಲ್ಗೇರಿಯಾದ ಇವರ ಬಗ್ಗೆ ನಮ್ಮಲ್ಲಿ ಅನೇಕರಿಗೆ ತಿಳಿದಿರಬೇಕು. 12 ವರ್ಷಗಳ ಕಾಲ ಸಾಮಾನ್ಯ ಜೀವನವನ್ನು ನಡೆಸಿದ ನಂತರ, ಅವರು ಭವಿಷ್ಯ ನುಡಿಯುವಲ್ಲಿ ಪರಿಣಿತರಾದರು ಮತ್ತು ಬಾಬಾ ವಂಗಾ ಎಂದು ಪ್ರಸಿದ್ಧರಾದರು. ಬಲ್ಗೇರಿಯಾದ ಭವಿಷ್ಯವಾದಿ ಬಾಬಾ ವಂಗಾ ಅವರ ಹೆಚ್ಚಿನ ಭವಿಷ್ಯವಾಣಿಗಳು ನಿಜವಾಗಿವೆ. https://ainlivenews.com/gas-cylinder-blast-burned-tea-shop/ ಬಾಬಾ ವಂಗಾ ಅವರು ಬಲ್ಗೇರಿಯಾದ ದೃಷ್ಟಿಹೀನ ಮಹಿಳೆ. ಅವಳು 1911 ರಲ್ಲಿ ಜನಿಸಿದಳು, ಮತ್ತು 12 ವರ್ಷಗಳ ಸಾಮಾನ್ಯ ಮನುಷ್ಯನ ಜೀವನವನ್ನು ನಡೆಸಿದ ನಂತರ, ಅವಳು ಪ್ರವಾದಿಯಾದಳು. ಹಾಗೆಯೇ ಅವರು 1996 ರಲ್ಲಿ ನಿಧನರಾದರು. ಆದರೆ ಜನರು ಅವರ ಭವಿಷ್ಯವಾಣಿಗಳು ನಿಜವಾಗುವುದನ್ನು ನೋಡಿದರು. ಇನ್ನೂ ಬಾಬಾ ವಂಗಾ ಅವರ ಭವಿಷ್ಯದ ಪ್ರಕಾರ, ಮೇಷ, ಕುಂಭ, ವೃಷಭ, ಕರ್ಕ ಮತ್ತು ಸಿಂಹ ರಾಶಿಯವರು 2025 ರಲ್ಲಿ ಅಪಾರ ಸಂಪತ್ತನ್ನು ಗಳಿಸುತ್ತಾರೆ. ಈ ರಾಶಿಚಕ್ರ ಚಿಹ್ನೆಗಳು ಕಠಿಣ ಪರಿಶ್ರಮ, ಸೃಜನಶೀಲತೆ ಮತ್ತು ಬುದ್ಧಿವಂತಿಕೆಯ ಮೂಲಕ ಆರ್ಥಿಕ ಯಶಸ್ಸನ್ನು ಸಾಧಿಸುತ್ತವೆ ಬಲ್ಗೇರಿಯಾದ ಆಧ್ಯಾತ್ಮಿಕ ಪ್ರವಾದಿ ಬಾಬಾ ವಂಗಾ (1911-1996) ತನ್ನ ಭವಿಷ್ಯವಾಣಿಗಳಿಂದ…
ಬೆಂಗಳೂರು:- ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಪೈಕಿ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಇದರಡಿಯಲ್ಲಿ ಪ್ರತಿ ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಾಕಲಾಗುತ್ತಿದೆ. https://ainlivenews.com/nirani-sugars-company-fired-45-employees/ ಇನ್ನೂ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ. ಪುರುಷರ ಮೇಲೀನ ಮಹಿಳೆಯರ ಅವಲಂಬನೆ ಕಮ್ಮಿ ಆಗುತ್ತಿದೆ. ಗ್ರಾಮೀಣ ಭಾಗದ ಆರ್ಥಿಕತೆ ವೃದ್ಧಿಸುತ್ತಿದೆ ಎಂಬಿತ್ಯಾದಿ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಇವೆಲ್ಲದರ ನಡುವೆ ಅಪಾತ್ರರಿಗೂ ಗೃಹಲಕ್ಷ್ಮೀ ಯೋಜನೆ ಹಣ ಹೋಗುತ್ತಿದೆ ಎನ್ನುವ ಟೀಕೆಗಳೂ ಕೇಳಿಬರುತ್ತಿದ್ದು ಅಂಥವರನ್ನು ಗುರುತಿಸಿ ಕೈಬಿಡುವ ಕೆಲಸ ನಡೆಯುತ್ತಿದೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಈಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಅಷ್ಟು ಮಾತ್ರವಲ್ಲ ವಿದೇಶಗಳಲ್ಲೂ ಕೂಡ ವ್ಯಾಪಕವಾದ ಮೆಚ್ಚುಗೆ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಈ ಯೋಜನೆ ನಿಜಕ್ಕೂ ಅರ್ಹರಿಗೆ ಸಿಗಬೇಕು ಎನ್ನುವುದು ಸರ್ಕಾರದ ನಿಲುವು ಇದೇ ದೃಷ್ಟಿಯಿಂದ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅಂಥವರನ್ನು ಯೋಜನೆಯಿಂದ ಕೈಬಿಡುವ ಕೆಲಸ ಶುರುವಾಗಿದೆ ಎನ್ನಲಾಗುತ್ತಿದೆ.…
ಬೆಂಗಳೂರು:- ಕ್ಯೂಆರ್ ಸಿಸ್ಟಮ್ ಮೂಲಕ ಟಿಕೆಟ್ ಪೇಮೆಂಟ್ ನೀಡುವ ವ್ಯವಸ್ಥೆ ಜಾರಿ ಮಾಡಿದೆ. ಈ ಕ್ಯೂಆರ್ ಕೋಡ್ ಸಿಸ್ಟಮ್ಗೆ ಬಿಎಂಟಿಸಿ ಪ್ರಯಾಣಿಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. https://ainlivenews.com/the-governments-treasury-is-completely-empty-by-guarantee-n-ravikumar/ ಒಂದು ದಿನಕ್ಕೆ ಕ್ಯೂಆರ್ ಕೋಡ್ ಮೂಲಕ ಬಿಎಂಟಿಸಿಗೆ ಒಂದು ಕೋಟಿ ರೂ. ಆದಾಯ ಗಳಿಸುತ್ತಿದೆ. ಆನ್ಲೈನ್ ಕ್ಯೂಆರ್ ಕೋಡ್ ಮೂಲಕ ಬಿಎಂಟಿಸಿ ಫೆಬ್ರವರಿ 1-16ರವರೆಗೆ 16 ಕೋಟಿ ರೂ. ಆದಾಯ ಪಡೆದಿದೆ. ಕೋವಿಡ್ ನಂತರ 2021ರಿಂದ ಬಿಎಂಟಿಸಿ ಬಸ್ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ ಮಾಡಿದ್ದು, ವಾಯುವಜ್ರ ಹಾಗೂ ವಜ್ರ ಬಸ್ಗಳ ಪ್ರಯಾಣಿಕರು ಹೆಚ್ಚು ಡಿಜಿಟಲ್ ಪೇಮೆಂಟ್ ಬಳಸುತ್ತಿದ್ದಾರೆ. 2024ರಲ್ಲಿ ಕ್ಯೂಆರ್ ಕೋಡ್ನಿಂದ 100 ಕೋಟಿ ರೂ. ಆದಾಯ ಬಂದಿದೆ. ಈ ಬಗ್ಗೆ ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ ರೆಡ್ಡಿ ಮಾತನಾಡಿ, ಇತ್ತೀಚೆಗೆ ಜನವರಿ 5ರಿಂದ ಬಸ್ ದರ ಏರಿಕೆಯಾದಾಗಿನಿಂದ ಚಿಲ್ಲರೆ ಸಮಸ್ಯೆ ತಪ್ಪಿಸಲು ಹೆಚ್ಚು ಜನ ಡಿಜಿಟಲ್ ಪೇಮೆಂಟ್ ಗೆ ಮೊರೆ ಹೋಗಿದ್ದಾರೆ. ಇದ್ರಿಂದ ಕಂಡಕ್ಟರ್ & ಪ್ರಯಾಣಿಕರು ಇಬ್ಬರೂ ನಿರಾಳವಾಗಿದ್ದಾರೆ.ಕ್ಯೂ…
ಬೆಂಗಳೂರು:- ಗ್ಯಾರಂಟಿಯಿಂದ ಸರಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ ಎಂದು ಎನ್ ರವಿಕುಮಾರ್ ಹೇಳಿದ್ದಾರೆ. https://ainlivenews.com/emergency-works-power-cut-in-these-areas-of-bangalore-today/ ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ. ಈಗ ಹಾಲಿನ ದರವನ್ನು ಪ್ರತಿ ಲೀಟರಿಗೆ 5 ರೂ. ಹೆಚ್ಚಿಸುವುದಾಗಿ ಸರಕಾರ ಹೇಳುತ್ತಿದೆ. ಯಾವಾಗ ಮಾಡುತ್ತಾರೋ ಗೊತ್ತಿಲ್ಲ; ಕೇಂದ್ರದಿಂದ 5 ಕೆಜಿ ಅಕ್ಕಿ ಸಿಗುತ್ತಿದೆ. ಆದರೆ, ರಾಜ್ಯ ಸರಕಾರದ 5 ಕೆಜಿ ಪಡಿತರ ಅಕ್ಕಿ ಸಂಬಂಧ ಫಲಾನುಭವಿಯ ಖಾತೆಗೆ ಹಣ ವರ್ಗಾಯಿಸಿಲ್ಲ ಎಂದು ಮಾಹಿತಿ ಇರುವುದಾಗಿ ತಿಳಿಸಿದರು. ಹೈಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಶಿಕ್ಷಕರಾಗಿ ದುಡಿಯುವವರಿಗೆ ಐದಾರು ತಿಂಗಳಿಂದ ವೇತನ ಕೊಡುತ್ತಿಲ್ಲ; ಮೆಟ್ರೋ ದರ ಹೆಚ್ಚಿಸಿದ್ದು, ಹಾಲು, ವಿದ್ಯುತ್ ದರ ಏರಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಎರಡನೇ ಅವಧಿಯ ಆಡಳಿತ ಸಂಪೂರ್ಣವಾಗಿ ನೆಲಕಚ್ಚಿ ಹೋಗಿದೆ ಎಂದು ಟೀಕಿಸಿದರು. ಗ್ಯಾರಂಟಿ ಸರಿಯಾಗಿ ಅನುಷ್ಠಾನಗೊಳಿಸುತ್ತಿಲ್ಲ; ಈ ಸರಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ರವಿಕುಮಾರ್ ಆರೋಪಿಸಿದರು.