Author: AIN Author

ಧಾರವಾಡ: ಭಾರತ ದೇಶ ಗೋಮಾಂಸವನ್ನು ರಫ್ತು ಮಾಡುವುದರಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಬ್ರೆಜಿಲ್ ನಂತರದ ಸ್ಥಾನದಲ್ಲಿ ಭಾರತ ಇದೆ. ಯುಪಿ, ಎಂಪಿ, ಛತ್ತಿಸಗಡ, ಮಹಾರಾಷ್ಟ್ರ ಹಾಗೂ ಕರ್ನಾಟಕ ಸೇರಿ ಎರಡನೇ ಸ್ಥಾನದಲ್ಲಿವೆ. ಇದರ ಶ್ರೇಯಸ್ಸು ನರೇಂದ್ರ ಮೋದಿ ಅವರಿಗೆ ಸಲ್ಲಬೇಕು. ಗೋವುಗಳನ್ನು ಕಸಾಯಿಖಾನೆಗೆ ಕಳುಹಿಸುವುದು ಬೇಡ ಎಂತಾದರೆ ದೇಶದಾದ್ಯಂತ ಗೋಶಾಲೆ ತೆರೆಯಲಿ. ಗೋಮಾಂಸ ರಫ್ತು ಮಾಡುವುದನ್ನು ಬ್ಯಾನ್ ಮಾಡಲಿ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಕೃಷಿ ವಿಶ್ವವಿದ್ಯಾಲಯ ಕೆಲವೊಂದಿಷ್ಟು ಜಾನುವಾರುಗಳನ್ನು ಹರಾಜು ಮಾಡುತ್ತಿರುವುದಕ್ಕೆ ಬಜರಂಗದಳ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಮಾತನಾಡಿದ ಅವರು, ಗೋವಾ ಮತ್ತು ಮಣಿಪುರದಲ್ಲಿ ಗೋಮಾಂಸಕ್ಕೆ ಅವಕಾಶ ಕೊಟ್ಟಿದ್ದಾರೆ. ಚುನಾವಣೆ ಬಂದಿರುವ ಕಾರಣ ಏನೇನೋ ವಿಚಾರ ತರುತ್ತಿದ್ದಾರೆ ಎಂದರು. ಬಿಹಾರದಲ್ಲಿ ಒಂದು ವಾರದಲ್ಲಿ 8.5 ಲಕ್ಷ ಶೌಚಾಲಯ ಕಟ್ಟಿಸಿದ್ದೇವೆ ಎಂದು ಬಿಜೆಪಿಯವರು ಹೇಳಿದ್ದಾರೆ. ಇದನ್ನು ನಂಬಲು ಸಾಧ್ಯವೇ? ಇರದೇ ಇರುವು ರೈಲ್ವೆ ನಿಲ್ದಾಣಗಳ ಪ್ರಸ್ತಾಪ ಮಾಡಿದ್ದಾರೆ. ರಾಣಿ, ದುರ್ಗಾ, ದೇವಿ ಸ್ಟೇಷನ್ ಅಂತೆಲ್ಲಾ ಹೇಳಿದ್ದಾರೆ.…

Read More

ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದಲ್ಲಿ ಅಧಿಕಾರಿಗಳಿಗೆ, ಜನಸಾಮಾನ್ಯರಿಗೆ ರಕ್ಷಣೆ ಇಲ್ಲ. ರಾಜ್ಯದ ಹಿರಿಯ ಅಧಿಕಾರಿನ್ನು ಮನೆಗೆ ನುಗ್ಗಿ ಹತ್ಯೆ ಮಾಡಿದ್ದಾರೆ ಅಂದರೆ ಇವರ ಉದ್ಧಟತನ ಎಷ್ಟಿದೆ ಅಂತ ಗೊತ್ತಾಗುತ್ತಿದೆ. ಈ ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಹತ್ಯೆ (Prathima Murder Case) ವಿಚಾರದ ಕುರಿತು ಮಾತನಾಡಿದ ಅವರು, ಇಂತಹ ವಾತಾವರಣ ನಿರ್ಮಾಣ ಆದರೆ ಯಾವ ಅಧಿಕಾರಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯ? ಸಮಾಜಘಾತುಕ ಶಕ್ತಿಗಳಿಗೆ ಯಾವುದೇ ಲಂಗುಲಗಾಮು ಇಲ್ಲದಂತಾಗಿದೆ. ಇದರಲ್ಲಿ ಗೃಹ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ಯಾವಯಾವ ಭಾಗದಲ್ಲಿ ಏನೇನು ನಡೆಯುತ್ತದೆ ಎಂದು ಪೊಲೀಸ್ ಇಲಾಖೆಗೆ ಮಾಹಿತಿ ಇರುತ್ತದೆ. ಆದರೂ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ಕಿಡಿಕಾರಿದರು.

Read More

ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿ, ಸಾಯಿ ವಿಘ್ನೇಶ್ ಹಾಡಿರುವ “ನನ್ನ ಹುಡುಗಿ” ಎಂಬ ಹಾಡು ನಾಯಕ ಮಿಲಿಂದ್ ಹುಟ್ಟುಹಬ್ಬದಂದು A2 music ಮೂಲಕ ಬಿಡುಗಡೆಯಾಗಿ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು. ಹಲವು ವಿಶೇಷಗಳನ್ನು ಹೊಂದಿರುವ “ಅನ್ ಲಾಕ್ ರಾಘವ” ಚಿತ್ರದ ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಪ್ರಥಮಪ್ರತಿ ಬರಲಿದೆ. ನಾಯಕ ಮಿಲಿಂದ್ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಹಾಡಿನ ಚಿತ್ರೀಕರಣ ಚಿತ್ರದುರ್ಗದಲ್ಲಿ ಎರಡು ದಿನಗಳ ಕಾಲ ನಡೆದಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ‌. ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿತ್ತು. ಮಿಲಿಂದ್ ಹುಟ್ಟುಹಬ್ಬದಂದು ಬಿಡುಗಡೆಯಾಗಿದೆ. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದ ಎಲ್ಲಾ ಹಾಡುಗಳು ಚೆನ್ನಾಗಿದೆ. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ…

Read More

ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ. ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಎಸ್ಕೇಪ್ ಆಗಿ ಇವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಅನುಮಾನದ ಹಿನ್ನೆಲೆಯಲ್ಲಿ ಪ್ರತಿಮಾ ಅವರು ಕಾರು ಡ್ರೈವರ್ ಆಗಿದ್ದ ಕಿರಣ್ ನನ್ನು (Kiran) ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವನು ಹತ್ಯೆ ನಡೆಸಿದ್ದನ್ನು ಅಂಗೀಕರಿಸಿದ್ದಾನೆ ಎಂದು ಹೇಳಿದರು. ವೃತ್ತಿಪರ ಕಾರಣಕ್ಕಾಗಿ ಪ್ರತಿಮಾ ಕೊಲೆ ನಡೆದಿದೆ ಎಂದ ರಾಹುಲ್ ಕುಮಾರ್, ಕಿರಣ್ ಸ್ವಭಾವ ಮತ್ತು ಅಧಿಕೃತ ಮಾಹಿತಿಯನ್ನು ಬೇರೆಯವರಿಗೆ ನೀಡುತ್ತಿ​ದ್ದ ಹಿನ್ನೆಲೆಯಲ್ಲಿ ಅಧಿಕಾರಿಯು ಗುತ್ತಿಗೆ ಆಧಾರದ ಮೇಲೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ನನ್ನು ಸುಮಾರು 2 ತಿಂಗಳ ಹಿಂದೆ ಕೆಲಸದಿಂದ ತೆಗೆದುಹಾಕಿದ್ದರು. ಕೆಲಸ ಹೋದ ಕಾರಣ ಕಿರಣ್ ಹೆಂಡತಿ ಅವನನ್ನು ತೊರೆದು ತವರು ಮನೆಗೆ ಹೋಗಿದ್ದಳು, ಹೀಗೆ, ಹತಾಶೆಯ ಮಡುವಿನಲ್ಲಿದ್ದ ಅವನು ಪ್ರತಿಮಾ ಅವರನ್ನು ಕಚೇರಿಯಲ್ಲಿ ಕಂಡು ಮಾತಾಡಿ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಮನವಿ…

Read More

ಬೆಂಗಳೂರು: ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಬಾಕಿ ಇರುವುದರಿಂದ ಗೃಹಜ್ಯೋತಿಯಡಿ (Gruha Jyothi Scheme) ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದರು. ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ 18 ಯೂನಿಟ್‍ಗಳ ಮಿತಿಯಿತ್ತು. ಅದನ್ನು 40 ಯೂನಿಟ್‍ಗಳಿಗೆ ನಮ್ಮ ಸರ್ಕಾರವೇ ಹಿಂದೆ ಹೆಚ್ಚಳ ಮಾಡಿತ್ತು. ಈ ಗೃಹಜ್ಯೋತಿ ಬಂದ ನಂತರ ಭಾಗ್ಯಜ್ಯೋತಿ (Bhagya Jyoti Scheme), ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳನ್ನ ಗೃಹಜ್ಯೋತಿ ಯೋಜನೆಯಡಿ ಸೇರಿಸಿ, 58 ಯೂನಿಟ್‍ವರಗೆ ಉಚಿತವಾಗಿ ವಿದ್ಯುತ್ ನೀಡಲು ತೀರ್ಮಾನಿಸಿದೆ ಎಂದು ಹೇಳಿದರು. ರಾಜ್ಯದಲ್ಲಿ ವಿದ್ಯುತ್‌ ಕೊರತೆಯಿದೆ ಎಂದು ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ಕಾಲ ಹರಿಸಲು ಮೊದಲೇ ಘೋಷಣೆ ಮಾಡಿದ್ದೆವು. ಕೆಲವು ಜನ ಸತತವಾಗಿ ಮೂರು ಫೇಸ್‍ನಲ್ಲಿ 5 ಗಂಟೆ ವಿದ್ಯುತ್…

Read More

ದಾವಣಗೆರೆ: ಬಿಜೆಪಿಯವರು ಬರ ಅಧ್ಯಯನ ಪ್ರವಾಸ ಮಾಡುವುದನ್ನ ಬಿಟ್ಟು ‌ಪ್ರಧಾನಿ ನರೇಂದ್ರ ಮೋದಿ ಬಳಿ ಹೋಗಲಿ, ರಾಜ್ಯದ ಕಷ್ಟದ ಬಗ್ಗೆ ಹೇಳಲಿ. ಅಗತ್ಯ ಇರುವ ಅನುದಾನ ತರಲಿ ಎಂದು ದಾವಣಗೆರೆಯಲ್ಲಿ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಹೇಳಿದರು. https://ainlivenews.com/suprem-ray-healing-center-reiki/ ಬಿಜೆಪಿಯವರಿಗೆ ಮಾಡಲು‌‌ ಕೆಲಸ ಇಲ್ಲ.‌ ಇದೇ ಕಾರಣ ಬರ ಅಧ್ಯಯನ‌ ಸೇರಿದಂತೆ ಹತ್ತಾರು ಪ್ರವಾಸ ಮಾಡುತ್ತಿದ್ದಾರೆ. ಅವರಿಗೆ ದೈರ್ಯ ಇದ್ರೆ ಪ್ರಧಾನಿ ಬಳಿ ಹೋಗಿ ಮಂಡಿಯೂರಿ ಕುಳಿತುಕೊಳ್ಳುವುದನ್ನ ಬಿಟ್ಟು, ಧೈರ್ಯದಿಂದ ಮಾತಾಡಿ ಅನುದಾನ ತರಲಿ ಎಂದರು.

Read More

ಬೆಂಗಳೂರು: ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ಬೆಂಗಳೂರು ಸೇರಿದಂತೆ ವಿವಿಧ‌ ಜಿಲ್ಲೆಯಲ್ಲಿ  ಗುಡುಗು ಸಹಿ ಧಾರಾಕಾರ ಮಳೆಯಾಗಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಹಾಗೆ ಬೈಕ್ ಸವಾರರು ಅಲ್ಲಲ್ಲಿ ಫ್ಲೈಓವರ್ ಕೆಳಗೆ ಆಶ್ರಯ ಪಡೆದಿದ್ದಾರೆ. ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೋರಮಂಗಲ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ಮಾರತ್ಹಳ್ಳಿ, ಕಾಡುಗೋಡಿ, ವೈಟ್ ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ. ನಗರದಲ್ಲಿ ಬಿಸಲಿನ ತಾಪಮಾನ ಏರಿಕೆ ಹಿನ್ನೆಲೆ ಬೇಸತ್ತಿದ್ದ ಜನರು ಬೆಂಗಳೂರಿನಲ್ಲಿ ಮಳೆ ಕಂಡು ಸಂತಸಗೊಂಡಿದ್ದಾರೆ. ಆದರೆ ಜೋರಾಗಿ ಸುರಿಯುತ್ತಿರುವ ಗಾಳಿ ಮಳೆಗೆ ವಾಹನ ಸವಾರರು ಅಸ್ತವ್ಯಸ್ತರಾಗಿದ್ದಾರೆ.

Read More

ಬೆಂಗಳೂರು : ಪರೀಕ್ಷೆಗಾಗಿ ತಾಳಿ ತೆಗೆಸಿದವರು ನೀವು.. ತಾಳಿ ತೆಗೆಯೋದು ವಿಧವೆ ಮಾತ್ರ.. ನಿಮಗೆ ನಾಚಿಕೆ ಆಗಲ್ವಾ? ಇದು ಯಾವ ಸಂಸ್ಕೃತಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ತವರೂರು ಕಲಬುರ್ಗಿಯಲ್ಲಿ ನಡೆದ ಘಟನೆ ವಿರುದ್ಧ ಬಿಜೆಪಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಮನೆಯಲ್ಲಿ ತಾಳಿ ತೆಗೆಸುತ್ತೀರಾ? ನಿಮ್ಮ ಮನೆಯಲ್ಲಿ ಹೀಗೆ ಮಾಡೋಕೆ ಆಗತ್ತಾ? ತಾಳಿ, ಉಂಗುರ ತೆಗೆಸಿದದವರ ಮೇಲೆ ಕ್ರಮ ಆಗಬೇಕು. ನಾಚಿಕೆ ಆಗಬೇಕು ಈ ಸರ್ಕಾರಕ್ಕೆ. ತಾಳಿ ತೆಗೆಸಿದ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ಹೆಣ್ಣುಮಕ್ಕಳಿಗೆ ಅವಮಾನ ಮಾಡ್ತೀರಾ? ಎಂದು ವಾಗ್ದಾಳಿ ನಡೆಸಿದರು. ಕೇಂದ್ರ ಯೋಜನೆಗಳಿಗೆ ಹಣ ನೀಡಲಿದೆ. ನಾವು ಎಲ್ಲೂ ಅನುದಾನ ನಿಲ್ಲಿಸಿಲ್ಲ. ರಾಜ್ಯ, ಕೇಂದ್ರದ ಷೇರಿನ ಹಣ ಕೊಡ್ತಿದ್ದೇವೆ. ವಿದ್ಯಾರ್ಥಿ ವೇತನದ ಸಮಸ್ಯೆಯಿಲ್ಲ. ಸ್ಕ್ಯೂಟಿನಿ ಮಾಡುವುದು ವಿಳಂಬವಾಗ್ತಿದೆ. 395 ಕೋಟಿ ರೂಪಾಯಿ ಹಣವನ್ನ ಇದಕ್ಕೆ ನೀಡಲಾಗ್ತಿದೆ ಎಂದು ಹೇಳಿದರು.

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್​ ಸರ್ಕಾರ ದಿವಾಳಿಯಾಗುವುದು ಖಚಿತ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೆ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿಎಂ ಕುರ್ಚಿ ಉಳಿಸಿಕೊಳ್ಳುವುದೇ ದೊಡ್ಡ ತಲೆನೋವಾಗಿದೆ ಎಂದು ಕುಟುಕಿದ್ದಾರೆ. ಹೈ ಬಿಪಿ, ಹೈ ಶುಗರ್ ಕಾರಣದಿಂದ ಡಿ.ಕೆ ಶಿವಕುಮಾರ್ ಜಾಮೀನು ಪಡೆದು ಹೊರಗಿದ್ದಾರೆ. ಆರೋಗ್ಯ ಸರಿಹೋದ ಬಳಿಕ ಮತ್ತೆ ತಿಹಾರ್ ಜೈಲಿಗೆ ಹೋಗುತ್ತಾರೆ. ಆ ನಿಟ್ಟಿನಲ್ಲಿ ವಕೀಲರ ತಂಡ ದೆಹಲಿಗೆ ಹೋಗಿದೆ. ವಕೀಲರ ತಂಡ ಯಾವ ಫ್ಲೈಟ್‌ನಲ್ಲಿ ಹೋಗಿದ್ದಾರೆ ಎಂಬುದನ್ನು ಡಿಸಿಎಂ ಹೇಳಬೇಕು ಎಂದು ಯತ್ನಾಳ್ ಹೊಸ ಬಾಂಬ್ ಸಿಡಿದ್ದಾರೆ.

Read More

ಬೆಂಗಳೂರು: ಹಬ್ಬ ಬಂತು ಅಂದರೆ ಖಾಸಗಿ ಬಸ್ಗಳಿಂದ ಹಗಲು ದರೋಡೆ ಶುರುವಾಗುತ್ತೆ. ಸಾಲು ಸಾಲು ರಜೆ ಅಂತ ಗೊತ್ತಾದ್ರೆ ಎರಡ್ಮೂರು ಪಟ್ಟು ದರ ಏರಿಕೆ ಮಾಡಿ, ಜನರಿಂದ ಸುಲಿಗೆ ಶುರುವಾಗುತ್ತೆ. ದೀಪಾವಳಿಗೆ ಅಂತ ಮನೆ ಕಡೆ ಹೊಗಲು ಸಿದ್ದವಾಗಿರೋರಿಗೆ ಶಾಕ್ ಎದುರಾಗಿದೆ.. ಪ್ರವೈಟ್ ಬಸ್ನಲ್ಲಿ ಟಿಕೆಟ್ ಬುಕ್ ಮಾಡಲು ಹೋದವರು ಡಬಲ್, ತ್ರಿಬಲ್ ರೇಟ್ ಕೊಡಬೇಕಿದೆ. ಹಬ್ಬ, ಸಾಲು ಸಾಲು ರಜೆ ಬಂದ್ರೆ ಸಾಕು ಖಾಸಗಿ ಬಸ್ ಗಳ ಸುಲಿಗೆ ಶುರುವಾಗುತ್ತೆ. ಕಣ್ಣುಮುಂದೆ ಸಿಕ್ಕಾಪಟ್ಟೆ ಪ್ರಯಾಣಿಕರಿಂದ ಸುಲಿಗೆ ನಡೆಯುತ್ತಿದ್ರೂ ಸಾರಿಗೆ ಇಲಾಖೆ ಮಾತ್ರ ತಲೆನೇಕೆಡಿಸಿಕೊಳ್ಳಲ್ಲ.ಪ್ರತಿ ಹಬ್ಬ ಹರಿದಿನದ ವೇಳೆ ಹೆಸರಿಗೆ ಮಾತ್ರ ಖಾಸಗಿ ಬಸ್ ಗಳ ಮೇಲೆ ದಾಳಿ ಮಾಡೋ ಇಲಾಖೆ ಶಾಶ್ವತವಾಗಿ ಏರಿಕೆಗೆ ಕಡಿವಾಣ ಹಾಕಲು ಪ್ರಯತ್ನ ನಡೆಯುತ್ತಿಲ್ಲ.ಇದೀಗ ದೀಪಾವಳಿ ಬರುತ್ತಿದ್ದು, ಇದನ್ನ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಮಾಲೀಕರು ಯರಬಿರ್ರಿ ಟಿಕೆಟ್ ದರವನ್ನ ಹೆಚ್ಚಸಿದ್ದಾರೆ. .ಹೌದು ದೀಪಾವಳಿ ಹೀಗೆ ಹಬ್ಬಗಳ ಸೀಜನ್ ಬಂತು ಅಂದರೆ ಖಾಸಗಿ ಬಸ್…

Read More