Author: AIN Author

ಬೆಂಗಳೂರು;- ಇಂದು ಚಿನ್ನದ ಬೆಲೆ ಸ್ಥಿರವಾಗಿದ್ದು, ಬೆಳ್ಳಿ ದರ ತುಸು ಏರಿಕೆ ಕಂಡಿದೆ. ನಿನ್ನೆಯ ದರವೇ ಇಂದು ಕೂಡ ಮುಂದುವರಿದಿದೆ. ಕಳೆದ ವಾರ ಕೆಜಿಯ ಮೇಲೆ 1000 ರೂ ಇಳಿಕೆಯಾಗಿದ್ದ ಚಿನ್ನದ ದರ ಈ ವಾರ ತುಸು ಏರಿಕೆಯಾಗಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಚಿನ್ನ, ಬೆಳ್ಳಿ ಖರೀದಿ ಮಾಡುವ ಗ್ರಾಹಕರಿಗೆ ಚಿನ್ನದ ಬೆಲೆ ಖುಷಿ ನೀಡಿದರೆ, ಬೆಳ್ಳಿ ಬೆಲೆ ಬೇಸರ ತರಿಸುವಂತಿದೆ. ಇಂದು ದೇಶದ ವಿವಿಧ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ದರ ಎಷ್ಟಿದೆ ಎಂಬುದನ್ನು ತಿಳಿಯೋಣ. 22 ಕ್ಯಾರೆಟ್‌ ಚಿನ್ನದ ದರ ಇಂದು ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನದ ದರ ಇಂದು 5,650 ರೂ. ಆಗಿದೆ. 8 ಗ್ರಾಂ ಚಿನ್ನದ ಬೆಲೆ 45,200 ರೂ ಇದೆ. ಇಂದು 10 ಗ್ರಾಂ ಚಿನ್ನದ ದರ 56,500 ರೂ. ಇದೆ. ನೂರು ಗ್ರಾಂ ಚಿನ್ನಕ್ಕೆ 5,65,000 ರೂ. ಇದೆ. 24 ಕ್ಯಾರೆಟ್‌ ಚಿನ್ನದ ದರ ಇಂದು ಒಂದು ಗ್ರಾಂ 24 ಕ್ಯಾರೆಟ್‌…

Read More

ಪಶುಸಂಗೋಪನೆ ಅಥವಾ ಹೈನುಗಾರಿಕೆ ಮಾಡುವಂತಹ ರೈತರಿಗೆ ಗೊತ್ತಿರಲೇಬೇಕಾದ ಕೆಲವು ಪ್ರಮುಖ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ. ಇವುಗಳ ಸದುಪಯೋಗ ನೀವು ಪಡೆದುಕೊಂಡಿದ್ದೀರಾ? 1. ರಾಷ್ಟ್ರೀಯ ಗೋಕುಲ ಮಿಷನ್ (RASHTRIYA GOKUL MISSION) : ರಾಷ್ಟ್ರೀಯ ಗೋಕುಲ್ ಮಿಷನ್ (RGM) ಅನ್ನು ಡಿಸೆಂಬರ್ 2014 ರಿಂದ ಸ್ಥಳೀಯ ಗೋವಿನ ತಳಿಗಳ ಅಭಿವೃದ್ಧಿ ಮತ್ತು ಸಂರಕ್ಷಣೆಗಾಗಿ ಜಾರಿಗೆ ತರಲಾಗುತ್ತಿದೆ. ಹಾಲಿನ ಉತ್ಪಾದನೆ ಮತ್ತು ಉತ್ಪಾದನೆಯನ್ನು ಹೆಚ್ಚಿಸಲು ಹಾಲಿನ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಮತ್ತು ಹೈನುಗಾರಿಕೆಯನ್ನು ಗ್ರಾಮೀಣ ರೈತರಿಗೆ ಹೆಚ್ಚು ಲಾಭದಾಯಕವಾಗಿಸಲು ಈ ಯೋಜನೆ ಮುಖ್ಯವಾಗಿದೆ. 2. ಡೈರಿ ಅಭಿವೃದ್ಧಿಗಾಗಿ ರಾಷ್ಟ್ರೀಯ ಕಾರ್ಯಕ್ರಮ: (NATIONAL PROGRAMME FOR DAIRY DEVELOPMENT) : ಗುಣಮಟ್ಟದ ಹಾಲು ಉತ್ಪಾದನೆ, ಸಂಗ್ರಹಣೆ, ಸಂಸ್ಕರಣೆ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರುಕಟ್ಟೆಗೆ ಮೂಲಸೌಕರ್ಯಗಳನ್ನು ಸೃಷ್ಟಿಸುವ/ಬಲಪಡಿಸುವ ಉದ್ದೇಶದಿಂದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ಫೆಬ್ರವರಿ 2014 ರಿಂದ ದೇಶಾದ್ಯಂತ “ಡೈರಿ ಅಭಿವೃದ್ಧಿಗಾಗಿ ರಾಷ್ಟ್ರೀಯ ಕಾರ್ಯಕ್ರಮ” (NPDD) ಜಾರಿಗೊಳಿಸುತ್ತಿದೆ. ರಾಜ್ಯ ಅನುಷ್ಠಾನ ಸಂಸ್ಥೆ (SIA) ಮೂಲಕ ಈಗ,…

Read More

ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಬ್ಯಾಲೆನ್ಸ್ ತಪ್ಪಿದೆ. ಹೀಗಾಗಲೇ ಅವರಲ್ಲೇ ಒಳಜಗಳ ಶುರುವಾಗಿವೆ. ಕಾಂಗ್ರೆಸ್ ನಾಯಕರಿಗೆ ರೈತರ ಏಳಿಗೆ, ರಾಜ್ಯದ ಜನರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಕೃಷಿ ಸಚಿವ ಬಿಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿ ಸಿ ಪಾಟೀಲ್, ಸಿದ್ದರಾಮಯ್ಯ ಮೊದಲು ಐದು ವರ್ಷ ಸಿಎಂ ನಾನೆ ಅಂತಾರೆ, ಆಮೇಲೆ ಮಾಧ್ಯಮಗಳನ್ನು ದೂಷಿಸುತ್ತಿದ್ದಾರೆ. ಯಾಕೆ ಇಷ್ಟೊಂದು ಸುಳ್ಳು ಹೇಳುತ್ತಿದ್ದಾರೋ ಗೊತ್ತಿಲ್ಲ. ಇಂದು ಹೇಳಿಕೆ ಕೊಟ್ಟು ನಾಳೆ ವಾಪಸ್ ಪಡೆಯುತ್ತಿದ್ದಾರೆ. ಮಾರನೆ ದಿನ ಎಲ್ಲರೂ ಬಾಯಿ ಬಾಯಿ ಅಂತಾರೆ. ಅವರಲ್ಲೆ ಗೊಂದಲಗಳಿವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್‌ ನಲ್ಲಿ ಸಿಎಂ ಬದಲಾವಣೆ ಬಗ್ಗೆ ನಡೆಯುತ್ತಿರುವ ಮುಖಂಡರ ನಾನಾ ಹೇಳಿಕೆಗಳು ಹಾಗೂ ಸಿಎಂ ಸಿದ್ದರಾಮಯ್ಯ ಅವರು, ಮುಂದಿನ 5 ವರ್ಷ ನಾನೇ ಸಿಎಂ ಎಂದು ಹೇಳಿದ ಹೇಳಿಕೆಯನ್ನು ಬಿಸಿ ಪಾಟೀಲ್ ವ್ಯಂಗ್ಯ ಮಾಡಿದರು. https://ainlivenews.com/suprem-ray-healing-center-reiki/#google_vignette ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಾಲ್ಕು ಸಾವಿರಕ್ಕೂ…

Read More

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ಸಿಂಪಲ್ ಸುನಿ ಹಾಗೂ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಒಂದು ಸರಳ ಪ್ರೇಮ ಕಥೆ. ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಶೂಟಿಂಗ್ (Shooting) ಕಂಪ್ಲೀಟ್ ಆಗಿದೆ. ಮೈಸೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ಮುಗಿಸಿ ಚಿತ್ರತಂಡ ಕುಂಬಳಕಾಯಿ ಹೊಡೆದಿದೆ. ವಿಶೇಷ ಅಂದರೆ ವಿನಯ್ ಸಿನಿಮಾದಲ್ಲಿ ಅಪ್ಪ ರಾಘಣ್ಣ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರೀಕರಣ ಮುಗಿಸಿ ಮಾಧ್ಯಮದವರೊಂದಿಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನಿರ್ದೇಶಕ ಸುನಿ (Simple Suni) ಮಾತನಾಡಿ, ಟೈಟಲ್ ಹೇಳುವಂತೆ ಇದೊಂದು ಸರಳ ಪ್ರೇಮಕಥೆ. ಸಂಗೀತ ನಿರ್ದೇಶಕನ ಪ್ರೇಮಕಥೆಯಾಗಿರುವುದರಿಂದ ಸಂಗೀತಮಯ ಜರ್ನಿ. ಅಂದರೆ ನಮ್ಮ ಆಲ್ಬಂ ತೆಗೆದುಕೊಂಡು ಹಾಕಿಕೊಂಡರೆ ಮೈಸೂರಿನಿಂದ ಬೆಂಗಳೂರು ತಲುಪುತ್ತೀರಾ. ಒಟ್ಟು ಸಿನಿಮಾದಲ್ಲಿ 11 ಸಾಂಗ್ ಗಳು ಇವೆ. ಎಲ್ಲಾ ಪ್ರಕಾರದ ಸಂಗೀತಗಳು ಹಾಡಿನಲ್ಲಿದೆ. ಖುಷಿ ವಿಷಯ ಏನಂದರೆ ಮೊದಲ ದಿನ ವಿನಯ್ ಸರ್ ಚಿತ್ರೀಕರಣ ಮಾಡಿದೆ. ಕೊನೆಯ…

Read More

ಅಮರಾವತಿ: ದಲಿತ ಯುವಕನ (Dalit Youth) ಮೇಲೆ ಆರು ಜನರ ಗ್ಯಾಂಗ್‌ವೊಂದು ಹಲ್ಲೆ ನಡೆಸಿದ್ದು, ನೀರು ಕೇಳಿದಾಗ ಮೂತ್ರ ವಿಸರ್ಜಿಸಿರುವ (Urinate) ಅಮಾನವೀಯ ಕೃತ್ಯ ಆಂಧ್ರಪ್ರದೇಶದ (Andhra Pradesh) ಎನ್‌ಟಿಆರ್ (NTR) ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಜಾಮೀನು ರಹಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲಾ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ದಲಿತ ಯುವಕನನ್ನು ಆರು ಮಂದಿ ಆರೋಪಿಗಳು ಸೇರಿಕೊಂಡು ಸತತ ನಾಲ್ಕು ಗಂಟೆಗಳ ಕಾಲ ಥಳಿಸಿದ್ದು, ನೀರು ಕೇಳಿದಾಗ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://ainlivenews.com/suprem-ray-healing-center-reiki/#google_vignette ಘಟನೆ ಮುನ್ನೆಲೆಗೆ ಬಂದ ನಂತರ, ತೆಲುಗು ದೇಶಂ ಪಕ್ಷದ (TDP) ಪರಿಶಿಷ್ಟ ಜಾತಿ (SC) ಸೆಲ್ ಪ್ರತಿಭಟನೆ ಯನ್ನು ನಡೆಸಿದ್ದು, ರಸ್ತೆಗಳನ್ನು ನಿರ್ಬಂಧಿಸಿದೆ. ಟಿಡಿಪಿ ಎಸ್ಸಿ ಸೆಲ್ ಅಧ್ಯಕ್ಷ ಎಂಎಂಎಸ್ ರಾಜು ನೇತೃತ್ವದಲ್ಲಿ ಕಂಚಿಕಚೆರ್ಲಾ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದು, ಹೆದ್ದಾರಿಯ ಇಕ್ಕೆಲಗಳಲ್ಲಿ ಪ್ರತಿಭಟನಾ ಧರಣಿ ನಡೆಸಲಾಗಿದೆ.

Read More

ಚಿಕ್ಕಮಗಳೂರು;- ಗಣೇಶ ಪೂಜೆಗೆ ವಿರೋಧ ಸರಿಯಲ್ಲ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಗಣಪತಿ ಪೂಜೆ, ಪ್ರಾರ್ಥನೆ ಮೌಢ್ಯದ ಆಚರಣೆ ಎಂಬ ಹೇಳಿಕೆ, ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರಿಗೆ ಶೋಭೆ ತರುವುದಿಲ್ಲ’ ಎಂದರು. ಪಂಡಿತಾರಾಧ್ಯರ ಬಗ್ಗೆ ಅಪಾರ ಗೌರವವಿದೆ. ನಾಟಕ, ಉತ್ಸವದ ಮೂಲಕ ಸಾಮಾಜಿಕವಾಗಿ ದೊಡ್ಡ ಕ್ರಾಂತಿ ಮಾಡಿದ ಮಠ ಅದು. ಅವರು ಈ ರೀತಿಯ ಸಣ್ಣ ಹೇಳಿಕೆ ನೀಡಿರುವುದು ಸರಿಯಲ್ಲ’ ಎಂದು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ‘ಶುಭ ಕಾರ್ಯಗಳಲ್ಲಿ ಮೊದಲಿಗೆ ಗಣೇಶನ ಪೂಜೆ ಮಾಡಿದರೆ ಒಳ್ಳೆಯದು ಎಂದು ಜನ ನಂಬಿದ್ದಾರೆ. ಗಣೇಶನ ತಂದೆ ಶಿವನ ಪೂಜೆ ಮಾಡುತ್ತೀರಾ. ಗಣೇಶ ಏಕೆ ಬೇಡ, ನಿಮ್ಮ ತರ್ಕ ಏನು’ ಎಂದು ಪ್ರಶ್ನಿಸಿದರು. ವಚನಗಳನ್ನು ಹೇಳಬೇಕು, ಉಳಿಸಬೇಕು ಎಂಬುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಗಣೇಶನ ಪೂಜೆ ವಿರೋಧಿಸುವುದು ಸಂವಿ ಧಾನ ವಿರೋಧಿಯಾಗುತ್ತದೆ. ಈ ಹೇಳಿಕೆಯನ್ನು ಶ್ರೀಗಳು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು. ‘ರಾಜ್ಯದಲ್ಲಿರುವುದು ಹಿಂದೂ ಗಳನ್ನು ದ್ವೇಷಿಸುವ ಸರ್ಕಾರ. ಹುಲಿ ಉಗುರು ವಿಚಾರದಲ್ಲಿ…

Read More

ಬೆಂಗಳೂರು;- ಉಪಾಹಾರ ಸಭೆಯಲ್ಲಿ ಸಿ.ಎಂ ವಿಚಾರ ನಾನೇ ಪ್ರಸ್ತಾಪ ಮಾಡಿದ್ದೆ ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಸಭೆ ಚುನಾವಣೆ ಬಗ್ಗೆಯೂ ಕೆಲವು ನಿರ್ದೇಶನ ನೀಡಿದ್ದೇನೆ‌’ ಎಂದು ಹೇಳಿದರು. ‘ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಶಾಸಕರ ಬೆಂಬಲ ಕೊಡುತ್ತೇವೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿರುವುದು ವ್ಯಂಗ್ಯವಾಗಿಯೇ ಹೊರತು, ಅದರಲ್ಲಿ ಬೇರೇನೂ ಇಲ್ಲ. ವ್ಯಂಗ್ಯವಾಗಿ ಹೇಳಿದ್ದಾರೆ ಎಂದು ಖುದ್ದು ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರೆ. ಮೊದಲು ಅವರು ಎನ್‌ಡಿಎ ಬಿಟ್ಟು ಹೊರಬರಲಿ ಎಂದೂ ಹೇಳಿದ್ದಾರೆ’ ಎಂದು ಪ್ರತಿಕ್ರಿಯಿಸಿದರು. ಕುಮಾರಸ್ವಾಮಿಗೆ ವ್ಯಂಗ್ಯವಾಗಿ ಹೇಳುವುದೂ ಬರುತ್ತದೆಯಲ್ಲಾ ಎನ್ನುವುದೇ ಖುಷಿ ನನಗೆ’ ಎಂದು ನಗುತ್ತಾ ಹೇಳಿದರು. ‘ಬಿಜೆಪಿ ಮತ್ತು ಜೆಡಿಎಸ್‌ನವರು ರಾಜಕೀಯವಾಗಿ ಹತಾಶರಾಗಿದ್ದಾರೆ. ಆದ್ದರಿಂದಲೇ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಇಲ್ಲಸಲ್ಲದ್ದನ್ನು ಮಾತನಾಡುತ್ತಿದ್ದಾರೆ‌’ ಎಂದು ಟೀಕಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಅವರು ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಅವರ ಪತಿ ಊರಿನಲ್ಲಿದ್ದರು ಎಂದು ತಿಳಿದುಬಂದಿದೆ. ಕಾರಣ ಗೊತ್ತಾಗಿಲ್ಲ. ತನಿಖೆ ನಡೆಯುತ್ತಿದೆ’…

Read More

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಏರಿಲಿತದ ಹಾವು ಏಣಿ ಆಟ ಶುರುವಾಗಿದೆ. ಇಸ್ರೇಲ್ ಯುದ್ಧ, ಅಂತರಾಷ್ಟ್ರೀಯ ಟ್ರೆಂಡ್‌ ಬದಲಾವಣೆ ಹಿನ್ನೆಲೆ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಾಗುತ್ತಿದ್ದು ಇಂದು ಚಿನ್ನದ ದರದಲ್ಲಿ ಸ್ಥಿರತೆ ಕಂಡುಬಂದಿದೆ. ಇಂದಿನ ಚಿನ್ನ-ಬೆಳ್ಳಿಯ ದರ ಎಷ್ಟಿದೆ ಎಂದು ಇಲ್ಲಿ ತಿಳಿದುಕೊಳ್ಳೋಣ. ಇಂದು  ಚಿನ್ನದ ದರ ಹೀಗಿದೆ. ದೇಶದಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆಯು 5,650 ರೂಪಾಯಿ ಇದೆ. 1 ಗ್ರಾಂ 24 ಕ್ಯಾರೆಟ್ ಚಿನ್ನ ಅಥವಾ 999 ಗೋಲ್ಡ್‌ ಬೆಲೆ 6,164 ರೂಪಾಯಿ ಇದೆ. ದೇಶದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 56,500 ಆಗಿದೆ. 24 ಕ್ಯಾರೆಟ್ 10 ಗ್ರಾಂ ನ ಬೆಲೆ, 61,640 ಆಗಿದೆ. ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಕಂಡುಬಂದಿದ್ದು, ಶನಿವಾರದಿಂದ ಭಾನುವಾರಕ್ಕೆ ವೀಕೆಂಡ್‌ನಲ್ಲಿ ಸ್ಥಿರತೆ ಕಂಡುಬಂದಿದೆ. ಬೆಂಗಳೂರಲ್ಲಿ ಚಿನ್ನದ ದರ ಇನ್ನು ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಲ್ಲಿಯೂ ಚಿನ್ನದ ಬೆಲೆಯಲ್ಲಿ…

Read More

ಬೆಂಗಳೂರು: ಟೀಮ್ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಇಂಗ್ಲೆಂಡ್ ತಂಡದ ಆಲ್ ರೌಂಡರ್ ಹಾಗೂ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮುಕ್ತ ಕಂಠದಿಂದ ಪ್ರಶಂಸಿಸಿದ್ದು, 2023ರ ವಿಶ್ವಕಪ್ ಟೂರ್ನಿಯ ಅಂತ್ಯಕ್ಕೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆಯುವವರ ಸಾಲಿನಲ್ಲಿ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ, ಪಾಕಿಸ್ತಾನದ ಶಾಹಿನ್ ಶಾ ಅಫ್ರಿದಿ ನಿಂತಿದ್ದರೂ, ಇಂಗ್ಲೆಂಡ್ ತಂಡದ ಆಲ್ ರೌಂಡರ್ ಬೆನ್ ಸ್ಟೋಕ್ಸ್, ಟೀಮ್ ಇಂಡಿಯಾದ ಹಿರಿಯ ಬೌಲರ್ ಮೊಹಮ್ಮದ್ ಶಮಿಯನ್ನು ಅತಿ ಹೆಚ್ಚು ವಿಕೆಟ್ ಪಡೆಯುವ ಬೌಲರ್ ಆಗಿ ಆಯ್ಕೆ ಮಾಡಿದ್ದಾರೆ. ಮೊಹಮ್ಮದ್ ಶಮಿ ಅವರು ಪ್ರಸಕ್ತ ವಿಶ್ವಕಪ್ ಟೂರ್ನಿಯ ಬೌಲರ್ ಆಗಿದ್ದಾರೆ. ನನ್ನ ಪ್ರಕಾರ ಅವರು ವಿಶ್ವಕಪ್ ಟೂರ್ನಿಯ ಎಲ್ಲ ಪಂದ್ಯಗಳನ್ನು ಆಡುತ್ತಾರೆ ಎಂದು ನನಗೆ ಅನಿಸುತ್ತಿಲ್ಲ.ಆದರೆ ತನಗೆ ಸಿಕ್ಕ ಪ್ರತಿಯೊಂದು ಪಂದ್ಯದಲ್ಲೂ ಅತ್ಯಮೋಘ ಪ್ರದರ್ಶನ ತೋರುವ ಮೂಲಕ ವಿಕೆಟ್…

Read More

ಸೋಫಿಯಾ: 2024 ಕ್ಕೆ ಭಯಾನಕ ಹವಾಮಾನ ಘಟನೆಗಳು ಹಾಗೂ ಭಯೋತ್ಪಾದಕ ದಾಳಿಗಳಲ್ಲಿ ಏರಿಕೆಯಾಗಲಿದೆ ಎಂದು ಬಾಬಾ ವಂಗಾ (Baba Vanga) ಅವರು ಭವಿಷ್ಯ ನುಡಿದಿದ್ದಾರೆ. ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೂ ಕರೆಯಲ್ಪಡುವ ಬಾಬಾ ವಂಗಾ ಅವರು, 9/11 ಭಯೋತ್ಪಾದಕ ದಾಳಿಗಳು, ರಾಜಕುಮಾರಿ ಡಯಾನಾ ಸಾವು, ಚೆರ್ನೋಬಿಲ್ ದುರಂತ ಮತ್ತು ಬ್ರೆಕ್ಸಿಟ್‌ನಂತಹ ಪ್ರಮುಖ ವಿಶ್ವ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದರು. 2024 ರಲ್ಲಿ ಅವರು ಏಳು ಭವಿಷ್ಯವಾಣಿಗಳನ್ನು ನುಡಿದಿದ್ದಾರೆ. ಮುಂದಿನ ವರ್ಷ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೇಲೆ ಸಹ ದೇಶವಾಸಿಯಿಂದ ಹತ್ಯೆಯ ಪ್ರಯತ್ನ ನಡೆಯಬಹುದು. ಯುರೋಪ್‌ನಲ್ಲಿ ಹೆಚ್ಚಿದ ಭಯೋತ್ಪಾದಕ ದಾಳಿಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮುಂದಿನ ವರ್ಷ “ದೊಡ್ಡ ದೇಶ” ಜೈವಿಕ ಶಸ್ತ್ರಾಸ್ತ್ರ ಪರೀಕ್ಷೆಗಳು ಅಥವಾ ದಾಳಿಗಳನ್ನು ನಡೆಸುತ್ತದೆ ಎಂದು ಭವಿಷ್ಯ ಹೇಳಿದ್ದಾರೆ. https://ainlivenews.com/suprem-ray-healing-center-reiki/#google_vignette ಮುಂದಿನ ವರ್ಷ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ದೊಡ್ಡ ಆರ್ಥಿಕ ಬಿಕ್ಕಟ್ಟು ಉಂಟಾಗಲಿದೆ. ಹೆಚ್ಚುತ್ತಿರುವ ಸಾಲದ ಮಟ್ಟಗಳು ಮತ್ತು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಂತಹ ಅಂಶಗಳು ಇದಕ್ಕೆ…

Read More