ಶಿವಮೊಗ್ಗ:- ಮೂಕ ಪ್ರಾಣಿ ಮೇಲೆ ಇತ್ತೀಚೆಗೆ ಕ್ರೌರ್ಯ ಹೆಚ್ಚಾಗುತ್ತಿದೆ. ನಾಯಿ ಕೊಂದು ಆಟೋಗೆ ಕಟ್ಟಿ ವ್ಯಕ್ತಿ ಎಳೆದೊಯ್ದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಕೆಂಚನಾಲ ಗ್ರಾಮದ ರೈಲ್ವೇ ನಿಲ್ದಾಣದ ಬಳಿಯಲ್ಲಿ ಜರುಗಿದೆ. https://ainlivenews.com/srirangapatna-bandh-today-farmers-fought-against-waqf/ ಆಟೋ ಚಾಲಕ ವಾಜೀದ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸದ್ಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.ಕೆಂಚನಾಲ ರೈಲ್ವೆ ನಿಲ್ದಾಣದ ಬಳಿಯಲ್ಲಿ ಅದರಷ್ಟಕ್ಕೆ ಮಲಗಿದ್ದ ನಾಯಿಯ ಮೇಲೆ ಆರೋಪಿ ವಾಜೀದ್ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕುತ್ತಾನೆ. ಆಗ ನಾಯಿ ಕಿರುಚುತ್ತಾ ಅಲ್ಲೇ ಕುಸಿದು ಬೀಳುತ್ತದೆ. ಅಷ್ಟಕ್ಕೇ ಸುಮ್ಮನಾಗದ ಆರೋಪಿ ಮತ್ತೊಮ್ಮೆ ಅದೇ ಕಲ್ಲನ್ನು ಎತ್ತಿ ತಲೆ ಮೇಲೆ ಹಾಕಿದ್ದಾನೆ. ಇದರಿಂದ ಅರ್ಧ ಜೀವವಾದ ನಾಯಿ ಅಲ್ಲೇ ನರಳಾಡುತ್ತಿರುತ್ತದೆ. ಅಲ್ಲಿಂದ ಸ್ವಲ್ಪ ದೂರಕ್ಕೆ ಹೋದ ಆರೋಪಿ ಮತ್ತೊಮ್ಮೆ ಹಿಂದಿರುಗಿ ಬಂದು ಇನ್ನಷ್ಟೂ ಕ್ರೂರವಾಗಿ ಅದೇ ಕಲ್ಲನ್ನು ಮತ್ತೆ ನಾಯಿಯ ತಲೆ ಮೇಲೆ ಹಾಕಿದ ರಭಸಕ್ಕೆ ನಾಯಿ ಸ್ಥಳದಲ್ಲಿಯೇ ಪ್ರಾಣಬಿಟ್ಟಿದೆ.
Author: AIN Author
ಮಂಡ್ಯ:- ವಕ್ಫ್ ವಿರುದ್ಧ ಸಮರ ಸಾರಿರುವ ಇಲ್ಲಿನ ರೈತರು ಶ್ರೀರಂಗಪಟ್ಟಣ ಬಂದ್ಗೆ ವಿವಿಧ ಸಂಘಟನೆಗಳಿಂದ ಕರೆ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬಂದ್ ಆಚರಣೆ ಮಾಡಲಾಗುತ್ತಿದ್ದು, ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. https://ainlivenews.com/ainkannada-ainlivenews-allindianews-kannadanews-kannada-karnataka-kannadatrolls-kannadasongs-bangalore-kgf/ ವಿಶ್ವ ಹಿಂದೂ ಪರಿಷತ್, ಭಜರಂಗದಳ, ದಲಿತ ಸಂಘಟನೆಗಳು, ಕನ್ನಡಪರ, ರೈತ ಸಂಘಟನೆಗಳು ಸೇರಿ ಹಲವು ಸಂಘಟನೆಗಳಿಂದ ಕರೆ ನೀಡಲಾಗಿದೆ. 50ಕ್ಕೂ ಹೆಚ್ಚು ರೈತರ ಆರ್ಟಿಸಿಗಳಲ್ಲಿ ವಕ್ಫ್ ಹೆಸರು ಉಲ್ಲೇಖಿಸಲಾಗಿದೆ. ರೈತರ ಭೂಮಿ, ಪುರಾತತ್ವ ಇಲಾಖೆಯ ಕಟ್ಟಡಗಳು, ಕೋಟೆ, ಸಾರ್ವಜನಿಕ ಪಾರ್ಕ್ಗಳು ಸಾಲದ ಕಾಲಂನಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ ಭೂ ದಾಖಲೆಗಳಲ್ಲಿ ವಕ್ಫ್ ಹೆಸರು ತೆಗೆಯುವಂತೆ ಆಗ್ರಹಿಸಿ ಬಂದ್ಗೆ ಕರೆ ನೀಡಲಾಗಿದೆ. ವಕ್ಫ್ ವಿವಾದ ಜಿಲ್ಲೆಯ ರೈತರನ್ನ ಬಿಟ್ಟುಬಿಡದೇ ಕಾಡುತ್ತಿದೆ. ಅದರಲ್ಲೂ ಕೋಟೆನಗರಿ ಶ್ರೀರಂಗಪಟ್ಟಣ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಆತಂಕವನ್ನೇ ಸೃಷ್ಠಿ ಮಾಡಿದೆ. ಆರ್ಟಿಸಿಯಲ್ಲಿ ಸ್ವಾಧೀನದಾರರ ಕಲಂ ನಲ್ಲಿ ರೈತರ ಹೆಸರಿದ್ದರೂ ಋಣ ಕಲಂನಲ್ಲಿ ವಕ್ಫ್ ಹೆಸರು ನಮೂದಿಸಲಾಗಿದೆ. 2014-15…
ಬೆಂಗಳೂರು:- ಯತ್ನಾಳ್ ಓರ್ವ ಕಾಂಗ್ರೆಸ್ ಏಜೆಂಟ್ ಎಂದು ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ ಈ ಸಂಬಂಧ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಗೋಮುಖ ವ್ಯಾಘ್ರ. ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. https://ainlivenews.com/a-model-wedding-in-vijaypur-cereal-welfare-festival-attracts-attention/ ಈ ಹಿಂದೆ ಯತ್ನಾಳ್ರನ್ನ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಬಳಿಕ ಜೆಡಿಎಸ್ಗೆ ಹೋಗಿದ್ದರು. ಯಡಿಯೂರಪ್ಪನವರ ಕಾಲು ಹಿಡಿದು ಮತ್ತೆ ಬಿಜೆಪಿಗೆ ಸೇರಿಕೊಂಡಿದ್ದರು. ಈಗ ಅವರ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ ಎಂದು ಕಿಡಿಕಾರಿದ್ದಾರೆ. ರಾಷ್ಟ್ರೀಯ ನಾಯಕರ ಆಶೀರ್ವಾದ, ರಾಜ್ಯ ನಾಯಕರ ಸಹಕಾರದಿಂದ ಸೈಕಲ್, ಬಸ್ನಲ್ಲಿ ಓಡಾಡಿ ಬಿಎಸ್ಯಡಿಯೂರಪ್ಪ ಪಕ್ಷ ಸಂಘಟನೆ ಮಾಡಿದ್ದಾರೆ. ಯಡಿಯೂರಪ್ಪ ರಾಜಕಾರಣಕ್ಕೆ ಬಂದಾಗ ನೀನು ಕಣ್ಣು ಬಿಟ್ಟಿದ್ದೇನಪ್ಪ? ಬಿಎಸ್ವೈರಂತೆ ವಿಜಯೇಂದ್ರ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿಲ್ವಾ? ಉಪ ಚುನಾವಣೆಯಲ್ಲಿ ವಿಜ ಯೇಂದ್ರ ಸಾಮರ್ಥ್ಯ ತೋರಿಸಿಲ್ವಾ ಎಂದು ಪ್ರಶ್ನಿಸಿದ್ದಾರೆ.
ಸೋಮವಾರದ ರಾಶಿ ಭವಿಷ್ಯ 20 ಜನವರಿ 2025 ಸೂರ್ಯೋದಯ – 6:53 ಬೆ. ಸೂರ್ಯಾಸ್ತ – 6:01 ಸಂ. ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಹೇಮಂತ್ ಋತು, ಪುಷ್ಯ ಮಾಸ, ತಿಥಿ – ಷಷ್ಠಿ ನಕ್ಷತ್ರ – ಹಸ್ತ ಯೋಗ – ಸುಕರ್ಮ ಕರಣ – ವಣಿಜ 9:59 ರಾಹು ಕಾಲ – 07:30 ದಿಂದ 09:00 ವರೆಗೆ ಯಮಗಂಡ – 10:30 ದಿಂದ 12:00 ವರೆಗೆ ಗುಳಿಕ ಕಾಲ – 01:30 ದಿಂದ 03:00 ವರೆಗೆ ಬ್ರಹ್ಮ ಮುಹೂರ್ತ – 5:17 ಬೆ ದಿಂದ 6:05 ಬೆ ವರೆಗೆ ಅಮೃತ ಕಾಲ – 1:44 ಮ ದಿಂದ 3:32 ಮ ವರೆಗೆ ಅಭಿಜಿತ್ ಮುಹುರ್ತ – 12:04 ಮ ದಿಂದ 12:49 ಮ ವರೆಗೆ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc…
ವಿಜಯಪುರ:- ವಿಜಯಪುರ ಜಿಲ್ಲೆಯಲ್ಲಿ ಮಾದರಿ ಮದುವೆಯೊಂದು ನಡೆದಿದೆ. ಜಿಲ್ಲೆಯ ತಿಕೋಟಾ ಪಟ್ಟಣದ ನಿವೃತ್ತ ಶಿಕ್ಷಕ ಹಾಗೂ ಸಾವಯವ ಕೃಷಿಕ ಸಿದ್ದಪ್ಪ ಭೂಸಗೊಂಡ ಅವರ ಅಮೀತ ಹಾಗೂ ಅಮೃತ್ ಅವರ ವಿವಾಹ ಕಾರ್ಯಕ್ರಮ ವಿಶೇಷವಾಗಿತ್ತು. ಇಲ್ಲಿ ಇತರೆ ಮದುವೆಗಳಂತೆ ಯಾವುದೆ ಆಡಂಭರವಿರಲಿಲ್ಲ. ಬದಲಾಗಿ, ಸಾವಯವ ಕೃಷಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು. https://ainlivenews.com/this-is-the-best-medicine-for-diabetes-if-you-cook-it-and-eat-it-its-benefits-are-enough/ ನಗರದ ಜಿಕೆ ಪಾಟೀಲ್ ಸಭಾ ಭವನದಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಬಂದ ಸಾವಿರಾರು ಜನರಿಗೆ ಸಾವಯವ ಕೃಷಿ, ಆಹಾರ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಚಿಂತನಾ ಗೋಷ್ಠಿಗಳನ್ನು ನಡೆಸಲಾಯಿತು. ಇಂಡಿಯ ಪರಮ ಪೂಜ್ಯ ಡಾ. ಸ್ವರೂಪಾನಾಂದ ಸ್ವಾಮೀಜಿ, ಹೈದರಾಬಾದ್ನ ಭಾರತೀಯ ಸಿರಿಧಾನ್ಯ ಸಂಶೋಧನಾ ಕೇಂದ್ರ ಸಂಶೋಧಕ ಡಾ. ಬಿ ಸಿ ಸಂಗಪ್ಪ, ಕೃಷಿ ಮಹಾವಿದ್ಯಾಲಯ ವಿಜಯಪುರದ ಸಹ ವಿಸ್ತರಣಾ ನಿರ್ದೇಶಕರಾದ ಡಾ. ರವೀಂದ್ರ ಬೆಳ್ಳಿ ಅವರು ಕೃಷಿ, ಸಾವಯವ ಕೃಷಿ ಹಾಗೂ ಸಿರಿಧಾನ್ಯಗಳ ಬಳಕೆ ಆಹಾರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮಹಿಳಾ ವಿವಿಯ ಪತ್ರಿಕೋದ್ಯಮ ವಿಭಾಗದ…
ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತದೆ. ಇರಿಸಲು ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ. https://ainlivenews.com/the-car-caught-fire-the-groom-who-went-to-distribute-the-invitation-to-the-wedding-died/ ಸಾಸಿವೆ ಸೊಪ್ಪಿನಲ್ಲಿ ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ ಮತ್ತು ಇತರ ಅನೇಕ ಜೀವಸತ್ವಗಳಿವೆ. ಇದು ನಿಮ್ಮನ್ನು ದೀರ್ಘಕಾಲ ಆರೋಗ್ಯವಾಗಿರಿಸುತ್ತದೆ. ಇವುಗಳಲ್ಲಿ ನಾರಿನಂಶ, ಕಬ್ಬಿಣ ಮತ್ತು ಫೋಲಿಕ್ ಆಮ್ಲ ಅಧಿಕವಾಗಿದೆ. ಇವುಗಳಲ್ಲಿರುವ ವಿಟಮಿನ್ ಕೆ ಹೃದಯದ ಸಮಸ್ಯೆಗಳನ್ನು ತಡೆಯುತ್ತದೆ. ಇದು ನಮ್ಮ ದೇಹದ ಮೂಳೆಗಳನ್ನು ಗಟ್ಟಿಗೊಳಿಸುತ್ತದೆ. ಸಾಸಿವೆ ಸೊಪ್ಪಿನಲ್ಲಿ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಎಂಬ ಉತ್ಕರ್ಷಣ ನಿರೋಧಕಗಳಿವೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್ ಕಣ್ಣಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಇದು ಕಣ್ಣಿನ ಸಮಸ್ಯೆಗಳನ್ನು ಸಹ ಸುಲಭವಾಗಿ ನಿವಾರಿಸುತ್ತದೆ. ಸಾಸಿವೆ ಕರಿಬೇವು ದೇಹಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಇದಲ್ಲದೆ, ಈ ಎಲೆಗಳು ಕ್ಯಾಲೊರಿಗಳನ್ನು ಹೊಂದಿರುವುದಿಲ್ಲ. ಇದು ಖನಿಜಗಳು, ವಿಟಮಿನ್ ಎ,…
ನವದೆಹಲಿ:- ಘಾಜಿಪುರದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ಮದುವೆಗೆ ಆಮಂತ್ರಣ ಹಂಚಲು ತೆರಳಿದ್ದ ವರನ ಕಾರಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಸುಟ್ಟು ಕರಕಲಾಗಿ, ವರ ಸಾವನ್ನಪ್ಪಿದ ಘಟನೆ ಜರುಗಿದೆ. https://ainlivenews.com/ed-real-estate-confiscation-case-in-muda-case-what-did-minister-parameshwar-say/ ಅನಿಲ್ ಮೃತ ವರ ಎಂದು ಗುರುತಿಸಲಾಗಿದೆ. ಅನಿಲ್ ಶನಿವಾರ ಮಧ್ಯಾಹ್ನ ಆಮಂತ್ರಣ ಪತ್ರಿಕೆ ಹಂಚಲು ಹೊರಗೆ ಹೋಗಿದ್ದ ಸಂದರ್ಭ ಘಟನೆ ಸಂಭವಿಸಿದೆ. ಸಂಜೆಯಾದರೂ ವಾಪಸ್ ಬಾರದ್ದನ್ನು ಕಂಡು ಕರೆ ಮಾಡಿದೆವು. ಆದರೆ ಅವರ ಮೊಬೈಲ್ ಸ್ವಿಚ್ಆಫ್ ಆಗಿತ್ತು. ರಾತ್ರಿ 11:30ರ ಸುಮಾರಿಗೆ ಅನಿಲ್ಗೆ ಅಪಘಾತವಾಗಿದ್ದು, ಆಸ್ಪತ್ರೆಯಲ್ಲಿದ್ದಾರೆ ಎಂದು ಪೊಲೀಸರು ಕರೆ ಮಾಡಿದ್ದರು ಎಂದು ಅನಿಲ್ ಅಣ್ಣ ಸುಮಿತ್ ತಿಳಿಸಿದ್ದಾರೆ.
ಬೆಂಗಳೂರು:- ಮುಡಾ ಪ್ರಕರಣದಲ್ಲಿ ಇಡಿ ಬಹು ಕೋಟಿ ರೂಪಾಯಿ ಮೌಲ್ಯದ ಸೈಟ್ ಗಳ ಮುಟ್ಟುಗೋಲು ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainlivenews.com/cylinder-explosion-in-maha-kumbh-mela-of-prayagraj-tents-caught-fire/ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇ.ಡಿ.ಯವರು ಮುಟ್ಟುಗೋಲು ವಿಚಾರ ನೋಡಿದ್ದೇನೆ. ಅದರಲ್ಲಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ಹೇಳಿಲ್ಲ. ಸಿದ್ದರಾಮಯ್ಯ ಅವರ ರಾಜೀನಾಮೆಗೆ ಹಿಂದೆಯೂ ಬಿಜೆಪಿ ಒತ್ತಾಯ ಮಾಡಿದ್ರು. ಈಗಲೂ ಒತ್ತಾಯ ಮಾಡಿದ್ದಾರೆ ಅಷ್ಟೇ, ಇದೇನು ಮೊದಲಲ್ಲ. ದಾಖಲಾತಿ ಇಟ್ಕೊಂಡು ಮಾತಾಡಬೇಕು. ಇ.ಡಿ ಎಲ್ಲಿಯೂ ಸಿದ್ದರಾಮಯ್ಯ ಇನ್ ಫ್ಲೂಯೆನ್ಸ್ ಮಾಡಿ ಸೈಟ್ ಕೊಡಿಸಿದ್ದಾರೆ ಅಂತಾ ಎಲ್ಲೂ ಹೇಳಿಲ್ಲ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ವಿಚಾರವಾಗಿ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ದರೋಡೆ ಇವೆಲ್ಲಾ ಆಗೋದು ಗೊತ್ತಾದ್ರೆ ತಡಿಯಬಹುದು. ಅಲ್ಲಿ ಆರ್ಮ್ಸ್ ಗಾರ್ಡ್ ಇರಲಿಲ್ಲ. ಸೆಕ್ಯೂರಿಟಿ ಇರಲಿಲ್ಲ.ಇದನ್ನೂ ನೋಡಬೇಕಾಗುತ್ತದೆ. ಸಂದರ್ಭ ಬಂದಾಗ ನಾನು ಅಂಕಿ-ಅಂಶ ಕೊಡ್ತೇನೆ. ಬಿಜೆಪಿಯವರ ಆಡಳಿತ ಅವಧಿಯಲ್ಲಿ ಎಷ್ಟು ರೇಪ್, ದರೋಡೆ ಆಗಿವೆ ಅಂತ. ವಿರೋಧ ಪಕ್ಷದವರ ಆರೋಪಗಳಿಗೆ…
ಉತ್ತರ ಪ್ರದೇಶ:- ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸಿಲಿಂಡರ್ಗಳು ಸ್ಫೋಟಗೊಂಡು 25ಕ್ಕೂ ಹೆಚ್ಚು ಟೆಂಟ್ ಗಳು ಹೊತ್ತಿ ಉರಿದಿರುವ ಘಟನೆ ಜರುಗಿದೆ. https://ainlivenews.com/olympics-medal-winner-manubhakar-shocked-grandmother-uncle-died-in-a-road-accident/ ಸದ್ಯ ಯಾವುದೇ ಸಾವು ನೋವು ಸಂಭವಿಸಿಲ್ಲ. ವಿವೇಕಾನಂದ ಸೇವಾ ಸಮಿತಿಗೆ ಸೇರಿದ 25ಕ್ಕೂ ಹೆಚ್ಚು ಟೆಂಟ್ಗಳಿಗೆ ಬೆಂಕಿ ಹತ್ತಿಕೊಂಡಿದೆ. ಟೆಂಟ್ಗಳಲ್ಲಿ ಇಟ್ಟಿದ್ದ ಸಿಲಿಂಡರ್ಗಳು ಒಂದೊಂದಾಗಿ ಸ್ಫೋಟಗೊಳ್ಳುತ್ತಿರುವುದರಿಂದ ಬೆಂಕಿ ತೀವ್ರತೆ ಹೆಚ್ಚಾಗುತ್ತಿದೆ. ಬೆಂಕಿ ಅವಘಡದಿಂದಾಗಿ ಮಹಾ ಕುಂಭಮೇಳ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಟೆಂಟ್ನಲ್ಲಿ ಇರುವವರನ್ನು ಅಧಿಕಾರಿಗಳು ದೂರ ಕಳಿಸುತ್ತಿದ್ದಾರೆ. ಸದ್ಯ ಸ್ಥಳಕ್ಕಾಗಮಿಸಿದ 50ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಆರಂಭವಾಗಿದೆ.
ಚಂಡೀಗಡ:- ಒಲಿಂಪಿಕ್ಸ್ ಪದಕ ವಿಜೇತೆ ಮನುಭಾಕರ್ ಗೆ ಆಘಾತ ಎದುರಾಗಿದ್ದು, ರಸ್ತೆ ಅಪಘಾತದಲ್ಲಿ ಅಜ್ಜಿ, ಚಿಕ್ಕಪ್ಪ ಸಾವನ್ನಪ್ಪಿದ್ದಾರೆ. https://ainlivenews.com/manganiasis-was-detected-in-two-people-in-chikkamagalur/ ಸ್ಕೂಟರ್ ಹಾಗೂ ಬ್ರೆಝಾ ಕಾರಿನ ನಡುವೆ ಡಿಕ್ಕಿಯಾಗಿ ಒಲಿಂಪಿಕ್ಸ್ ಪದಕ ವಿಜೇತೆ ಮನುಭಾಕರ್ ಅವರ ಅಜ್ಜಿ ಹಾಗೂ ಚಿಕ್ಕಪ್ಪ ಸಾವನ್ನಪ್ಪಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಕಾರು ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ರಭಸಕ್ಕೆ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಎರಡು ದಿನಗಳ ಹಿಂದೆಯಷ್ಟೇ ಮನು ಭಾಕರ್ ರಾಷ್ಟ್ರಪತಿಗಳಿಂದ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ್ದರು. ಇನ್ನೂ ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ