ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ (BMTC) ಬಸ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಬಸ್ ಅಪಘಾತ (Bus Accident) ತಡೆಯಲು ಬಿಎಂಟಿಸಿ ಹೊಸ ಟೆಕ್ನಾಲಜಿಯ ಮೊರೆ ಹೋಗಿದೆ. ಇತ್ತೀಚೆಗೆ ಮಹಿಳಾ ಸುರಕ್ಷತೆಗಾಗಿ ಸಿಸಿಟಿವಿ, ಪ್ಯಾನಿಕ್ ಬಟನ್ ಅಳವಡಿಸುವ ಕ್ರಮಕ್ಕೆ ಮುಂದಾಗಿದ್ದ ಬಿಎಂಟಿಸಿ ಈಗ ಬಸ್ಗಳಲ್ಲಿ ಅಡಾಸ್ (ADAS) ಅಂದ್ರೆ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ ಅಳವಡಿಕೆ ಮಾಡುತ್ತಿದೆ ಅತ್ಯಾಧುನಿಕ ಟೆಕ್ನಾಲಜಿ ಒಳಗೊಂಡಿರುವ ಈ ಡಿವೈಸ್ ಮುಂಭಾಗದಲ್ಲಿ ಬರುವ ವಾಹನಗಳ ಅಲರ್ಟ್ ಮಾಡುವ ಜೊತೆಗೆ, ಡ್ರೈವರ್ ಅನ್ನು ಸಹ ಮಾನಿಟರ್ ಮಾಡುತ್ತೆ. ಡ್ರೈವರ್ ವಿಭಾಗದಲ್ಲಿ ಅಳವಡಿಸಲಾಗಿರುವ ಐ ವಾಚ್ ಇತರೇ ವಾಹನಗಳ ನಡುವೆ ಅಂತರ ಎಷ್ಟಿದೆ ಎಂಬುದನ್ನ ರೆಡ್ ಸಿಗ್ನಲ್ ಮೂಲಕ ಅಳವಡಿಕೆ ಮಾಡಿದ್ರೆ, ಡ್ರೈವರ್ ಮಾನಿಟರಿಂಗ್ ಸಿಸ್ಟಮ್ ಚಾಲಕ ಮೊಬೈಲ್ನಲ್ಲಿ ಮಾತನಾಡುತ್ತಿದ್ದರೆ ಅಥವಾ ನಿದ್ರೆಗೆ ಜಾರಿದರೆ ತಕ್ಷಣವೇ ಸಿಗ್ನಲ್ ಮೂಲಕ ಎಚ್ಚರಿಕೆ ನೀಡುತ್ತದೆ. ಇತ್ತೀಚೆಗೆ ಮಾಲ್, ಮೆಟ್ರೋದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ಕಿರುಕುಳದಿಂದ ಎಚ್ಚೆತ್ತ…
Author: AIN Author
ಬೇಸಿಗೆಯಲ್ಲಿ ಸೋರೆಕಾಯಿ ಸೇವಿಸುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಗಳನ್ನು ನೀಡುತ್ತದೆ. ತೂಕವನ್ನು ಕಡಿಮೆ ಮಾಡುವುದರಿಂದ, ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಗೆ ಸೋರೆಕಾಯಿ ಪರಿಹಾರ ನೀಡಲಿದೆ. ಇದಲ್ಲದೇ ಬೇಸಿಗೆ ಕಾಲದಲ್ಲಿ ಸೋರೆಕಾಯಿಯನ್ನು ಸೇವಿಸುವುದರಿಂದ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಬಹುದು. ಎದೆಯುರಿ, ದೇಹದಲ್ಲಿ ನೀರಿನ ಕೊರತೆ, ಶಾಖದಿಂದ ತಲೆಸುತ್ತು, ಉಸಿರಾಟದ ತೊಂದರೆ ಇಂತಹ ಹಲವು ಸಮಸ್ಯೆಗಳಿಂದ ಸೋರೆಕಾಯಿ ಕಾಪಾಡುತ್ತದೆ. ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ: ಸೋರೆಕಾಯಿ ತಿನ್ನುವುದರಿಂದ ಹೃದಯಾಘಾತದ ಅಪಾಯವೂ ಕಡಿಮೆಯಾಗುತ್ತದೆ ಎಂದು ನಿಮಗೆ ತಿಳಿದಿದೆಯೇ? ಇದನ್ನು ಸೇವಿಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಸಮತೋಲನದಲ್ಲಿರುತ್ತದೆ. ಇದಲ್ಲದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬಿಳಿ ಕೂದಲಿನ ಸಮಸ್ಯೆಗೆ ಪರಿಹಾರ ಕೂದಲು ಅಕಾಲಿಕವಾಗಿ ಬಿಳಿಯಾಗುವ ಸಮಸ್ಯೆಯಲ್ಲೂ ನೀವು ಪ್ರಯೋಜನವನ್ನು ಪಡೆಯಬಹುದು. ನಿತ್ಯ ಒಂದು ಲೋಟ ಸೋರೆಕಾಯಿ ಜ್ಯೂಸ್ ಕುಡಿದರೆ ಕೂದಲು ಬೆಳೆಯುವುದರ ಜೊತೆಗೆ ಅದು ಬಿಳಿಯಾಗುವುದನ್ನು ತಡೆಯಬಹುದು ಎಂದು ಹೇಳಲಾಗುತ್ತದೆ. ತೂಕವನ್ನು ಕಡಿಮೆ ಮಾಡುವಲ್ಲಿ ಪ್ರಯೋಜನಕಾರಿ: ಸೋರೆಕಾಯಿ ತೂಕವನ್ನು ಕಡಿಮೆ ಮಾಡಲು ಸಹ ತುಂಬಾ ಪ್ರಯೋಜನಕಾರಿಯಾಗಿದೆ. ಬಾಟಲ್ ಸೋರೆಕಾಯಿಯಲ್ಲಿ ವಿಟಮಿನ್-ಸಿ, ಸೋಡಿಯಂ,…
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಮೂಲಕ ನವೆಂಬರ್ 2023 ರ ಮೂಲಕ ಆಹ್ವಾನಿಸಿದೆ. ಸುರತ್ಕಲ್ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 02-Dec-2023 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. NIT ಕರ್ನಾಟಕ ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ) ಹುದ್ದೆಗಳ ಸಂಖ್ಯೆ: 02 ಉದ್ಯೋಗ ಸ್ಥಳ: ಸುರತ್ಕಲ್ – ಕರ್ನಾಟಕ ಹುದ್ದೆಯ ಹೆಸರು: ವೈದ್ಯಕೀಯ ಅಧಿಕಾರಿ ವೇತನ: ರೂ.56100/- ಪ್ರತಿ ತಿಂಗಳು NIT ಕರ್ನಾಟಕ ನೇಮಕಾತಿ 2023 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ: NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು MBBS, M.D, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ…
ಸೂರ್ಯೋದಯ: 06.26 AM, ಸೂರ್ಯಾಸ್ತ : 05.51 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಚೌತಿ 03:31 PM ತನಕ ನಂತರ ಪಂಚಮಿ ನಕ್ಷತ್ರ: ಇವತ್ತು ಪುನರ್ವಸು 04:40 PM ತನಕ ನಂತರ ಪುಷ್ಯ ಯೋಗ: ಇವತ್ತು ಶುಕ್ಲ 08:04 PM ತನಕ ನಂತರ ಬ್ರಹ್ಮ ಕರಣ: ಇವತ್ತು ಬವ 02:53 AM ತನಕ ನಂತರ ಬಾಲವ 03:31 PM ತನಕ ನಂತರ ಕೌಲವ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ:03:00 ನಿಂದ 04:30 ವರೆಗೂ ಗುಳಿಕ ಕಾಲ:07:30 ನಿಂದ 09:00 ವರೆಗೂ ಅಮೃತಕಾಲ: 02.06 PM to 03.49 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:42 ನಿಂದ ಮ.12:26 ವರೆಗೂ ಮೇಷ ರಾಶಿ: ಇವರ ಅರ್ಥವಿಲ್ಲದ ದಾಂಪತ್ಯ, ಚಲನಚಿತ್ರ ನಿರ್ಮಾಪಕರಿಗೆ ಆರ್ಥಿಕ ತೊಂದರೆ ಕಾಡಲಿದೆ, ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳು ಎಚ್ಚರಿಕೆಯಿಂದ ನಿರ್ವಹಿಸಿ, ಕಾಂಡಿಮೆಂಟ್ಸ್…
ಬೆಂಗಳೂರು:- ನಿಗಮ ಮಂಡಳಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರಿಗೆ ಸ್ಥಾನ ಸಿಗಲಿ ಎಂದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹೊಸಬರಿಗೆ ನಿಗಮ-ಮಂಡಳಿಯಲ್ಲಿ ಅವಕಾಶ ಇಲ್ಲವೇ ಇಲ್ಲ. ಮೂರ್ನಾಲ್ಕು ಬಾರಿ ಗೆದ್ದವರಿಗೆ ಅವಕಾಶ ನೀಡಲು ಪಕ್ಷ ಬದ್ಧವಾಗಿದೆ. ನಮ್ಮ ಜಿಲ್ಲೆಯಲ್ಲೂ ಎರಡ್ಮೂರು ಹಿರಿಯ ಶಾಸಕರಿದ್ದಾರೆ. ಅವರಿಗೆ ನಿಗಮ – ಮಂಡಳಿಯಲ್ಲಿ ಅವಕಾಶ ಕೊಟ್ಟೇ ಕೊಡುತ್ತಾರೆ. ಸದನ ಪ್ರಾರಂಭವಾಗುವುದಕ್ಕೆ ಮೊದಲೇ ನೇಮಕವಾದರೆ ಉತ್ತಮ. ಹಿರಿಯರಿಗೆ ಕೊಟ್ಟರೆ ಭಿನ್ನಮತಕ್ಕೆ ಅವಕಾಶವಿರುವುದಿಲ್ಲ ಎಂದು ಹೇಳಿದರು. ನಾನು ಕೂಡ ಕಾರ್ಯಕರ್ತರ ಪರವಾಗಿ ಒತ್ತಾಯ ಮಾಡಿದ್ದೇನೆ. ಕಾರ್ಯಕರ್ತರೇ ಪಕ್ಷ ಸಂಘಟನೆಗೆ ಮುಖ್ಯ ಪಾತ್ರ ವಹಿಸುತ್ತಾರೆ. ಯಾವತ್ತೂ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಬೆಳಗಾವಿಯಲ್ಲಿ ಚರ್ಚೆಯಾಗಿಲ್ಲ. ಈ ಬಾರಿಯಾದರೂ ಅವಕಾಶ ಸಿಗುತ್ತದೋ ಎಂದು ಕಾದು ನೋಡಬೇಕು ಎಂದರು.
ಬೆಂಗಳೂರು:- 2024ರಿಂದ ರಾಜ್ಯ ಶಿಕ್ಷಣ ನೀತಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಪ್ರಯತ್ನ ಖಂಡನೀಯ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜಕೀಯ ದುರುದ್ದೇಶಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆದು, 2024ರಿಂದ ರಾಜ್ಯ ಶಿಕ್ಷಣ ನೀತಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಪ್ರಯತ್ನ ಖಂಡನೀಯ ಎನ್ಇಪಿ ನಾಗಪುರ ಶಿಕ್ಷಣ, ಉತ್ತರ ಭಾರತದ ಶಿಕ್ಷಣ ನೀತಿಯಲ್ಲ. ಕಾಂಗ್ರೆಸ್ನ ರಾಜಕೀಯ ಪ್ರೇರಿತ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ ಎಂದರು. ಪಠ್ಯಕ್ರಮ ಮತ್ತು ಶಿಕ್ಷಣ ನೀತಿ ಪ್ರತ್ಯೇಕ. ಇದರ ಪರಿಜ್ಞಾನ ಇಲ್ಲಿನ ಸಿಎಂ, ಶಿಕ್ಷಣ ಸಚಿವರಿಗೆ ಇದೆಯೇ? ಕಲಿಯುವಿಕೆ ಮತ್ತು ಕಲಿಸುವುದು ಇದು ರಾಷ್ಟ್ರೀಯ ಶಿಕ್ಷಣ ನೀತಿ ಎಂದರು. ಹಳೆಯ ನೀತಿಯಲ್ಲಿ ಇದ್ದ ನ್ಯೂನತೆಗಳನ್ನು ಹೋಗಲಾಡಿಸಿ 34 ವರ್ಷಗಳ ಬಳಿಕ ಹೊಸ ನೀತಿ ತರಲಾಗಿದೆ. ಸಮಾನತೆ, ಗುಣಮಟ್ಟದ ಶಿಕ್ಷಣ ಕೊಡಬೇಕಿದೆ. ಇದಕ್ಕಾಗಿ 3ನೇ ರಾಷ್ಟ್ರೀಯ ಶಿಕ್ಷಣ ನೀತಿ ತರಲಾಗಿದೆ. ರಾಜ್ಯ ಶಿಕ್ಷಣ ನೀತಿಯ ಕಚೇರಿ ಎಲ್ಲಿದೆ? ಈ ಸರ್ಕಾರ ರಚಿಸಿದ ಸಮಿತಿಯಲ್ಲಿ…
ಚನ್ನಪಟ್ಟಣ:- DCM ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ ಎಂದು ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹೈಕೋರ್ಟ್ ಅವರಿಗೆ ರಿಲೀಫ್ ಕೊಟ್ಟಿಲ್ಲ. ಅವರೇ ತೆಗೆದುಕೊಂಡಿದ್ದಾರೆ. ಇನ್ನೂ ಸ್ವಲ್ಪ ದಿನ ಇದನ್ನು ಮುಂದಕ್ಕೆ ಎಳೆಯಬೇಕಲ್ಲ ಎಂದರು. ಬಹುಶಃ ಗ್ಯಾರಂಟಿ ಕಾರ್ಯಕ್ರಮದ ಮೂಲಕವೇ ದೇಶದಲ್ಲಿ ಅಧಿಕಾರಕ್ಕೆ ಬರುತ್ತೇವೆ. ಆಗ, ಎಲ್ಲಾ ಪ್ರಕರಣಗಳನ್ನು ಮುಚ್ಚಿ ಹಾಕಬಹುದು ಎಂದು ಐದಾರು ತಿಂಗಳು ಮುಂದೂಡುತ್ತಿದ್ದಾರೆ. ಇದೆಲ್ಲಾ ತಂತ್ರಗಾರಿಕೆ ಅಷ್ಟೇ. ಮುಂದೆ ಏನೇನಾಗುತ್ತದೊ ನೋಡೊಣ’ ಎಂದರು. ನಾನು ವಕೀಲನಾಗಿರುವುದಕ್ಕೆ ಪ್ರಕರಣ ವಾಪಸ್ ತೆಗೆದುಕೊಂಡಿದ್ದು’ ಎಂಬ ಸಿ.ಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರು ದೊಡ್ಡ ವಕೀಲರು ಅಂತ ನನಗೆ ಗೊತ್ತುಗೆ. ಇವರೊಬ್ಬರೇ ಕಾನೂನು ತಿಳಿದುಕೊಂಡಿದ್ದಾರೆ ತಾನೇ. ಅದಕ್ಕೆ ಅರ್ಕಾವತಿ ಡಿನೋಟಿಫಿಕೇಷನ್ ತೆಗೆದು ರಿಡೂ ಮಾಡಿದ್ರಿ. ಕೆಂಪಣ್ಣನ ಆಯೋಗ ಮಾಡಿ ಉಳಿದುಕೊಂಡ್ರಲ್ಲ. ಆ ರೀತಿಯ ವಕೀಲರು ಇವರು’ ಎಂದು ವಾಗ್ದಾಳಿ ನಡೆಸಿದರು. ಜನಸಾಮಾನ್ಯರಿಗೆ ಒಂದು ನ್ಯಾಯ, ಇವರಿಗೊಂದು ನ್ಯಾಯ. ಅಂತಹ ವಕೀಲಿಕೆಯಲ್ಲಿ ಇವರು ಬುದ್ದಿವಂತರಿದ್ದಾರೆ.…
ಗಂಗಾವತಿ:- BJP ಸರಕಾರ ನನ್ನ ವಿರುದ್ಧದ ಸುಳ್ಳು ಕೇಸ್ಗಳನ್ನು ವಾಪಸ್ ಪಡೆಯಲಿಲ್ಲ ಎಂದು ಗಾಲಿ ಜನಾರ್ಧನ್ ರೆಡ್ಡಿ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿಗೆ ಸಂಪೂರ್ಣ ಬಹುಮತವಿಲ್ಲದಿದ್ದರೂ ಕಷ್ಟಪಟ್ಟು ಅಧಿಕಾರ ಕೊಡಿಸಿದೆ. ನನ್ನ ಸಂಕಷ್ಟ ಕಾಲದಲ್ಲಿ ಬಿಜೆಪಿ ಹೈಕಮಾಂಡ್ ನನ್ನ ನೆರವಿಗೆ ಬರಲಿಲ್ಲ. ಕೇಸ್ಗಳನ್ನು ವಾಪಸ್ ಪಡೆಯಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರ ಬೆನ್ನಿಗೆ ನಿಂತು ಬಹುತೇಕ ಕೇಸ್ಗಳನ್ನು ವಾಪಸ್ ಮಾಡಿಸುತ್ತಿದೆ ಎಂದರು. ರಾಜಕೀಯ ಸ್ವಾರ್ಥ ಹಾಗೂ ಮುಖ್ಯಮಂತ್ರಿಯಾಗುವ ಆಸೆಯಿಂದ ಸಿದ್ದರಾಮಯ್ಯ ಬಳ್ಳಾರಿಗೆ ಪಾದಯಾತ್ರೆ ಮಾಡಿ ಅಧಿಕಾರ ಪಡೆದಿದ್ದಾರೆ. ಅವರಿಗೂ ಗೊತ್ತು, ನಾನು ಏನೂ ತಪ್ಪು ಮಾಡಿಲ್ಲ ಎಂದು. ನಾನು ಸೋನಿಯಾ ಗಾಂಧಿಯವರಿಗೆ ತಲೆ ಬಾಗಿಸಲಿಲ್ಲ ಎಂಬ ಕಾರಣಕ್ಕೆ ಏನೂ ತಪ್ಪು ಮಾಡದಿದ್ದರೂ ಜೈಲಿಗೆ ಹೋಗಬೇಕಾಯಿತು. ನಂತರ ನನ್ನಿಂದ ಉಪಕಾರ ಪಡೆದು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರ ಬಂದ ಬಿಜೆಪಿ , ವ್ಯಕ್ತಿಗಳು ಹಾಗೂ ಹೈಕಮಾಂಡ್ ನನ್ನ ವಿರುದ್ಧ…
ಹುಬ್ಬಳ್ಳಿ; ಸನ್ಮಾನ ಕಾರ್ಯಕ್ರಮಗಳು ಇನ್ನಷ್ಟು ಜವಾಬ್ದಾರಿ ಹೆಚ್ಚು ಮಾಡುತ್ತಿವೆ ಎಂದು ಸಾಮಾಜಿಕ ಕಾರ್ಯಕರ್ತ ರಮೇಶ ಮಹದೇಪ್ಪನವರ ಅಭಿಪ್ರಾಯಪಟ್ಟರು. ನಗರದ ಕಮರಿ ಪೇಟೆಯಲ್ಲಿ ಕಾಟಿಗಾರ ಹಾಗೂ ಎಸ್, ಎಸ್, ಕೆ, ಸಮಾಜದ ಮುಖಂಡರಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತರಾದ ಅವರು ಆತ್ಮೀಯವಾಗಿ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ನಾರಾಯಣ ಕಾಟಿಗಾರ್, ಅನಿಲ್ ಶಿರಾಳಕರ್, ರೋಹಿತ್ ಕಾಟಿಗಾರ್, ಕಾರ್ತಿಕ್ ಕಾಟಿಗರ್, ಅಮೃತ್ ಬಾಂಡಗೆ, ಮೈಲಾರ ಹಬೀಬ್, ಪ್ರಶಾಂತ ದೊಂಗಡೆ, ಫಕೀರಪ್ಪ ಗುಲಗಂಜಿ, ಸಂತೋಷ್ ವರ್ಣೇಕರ್, ರಂಗನಾಥ್ ಸೋಲಂಕಿ, ದೀಪಕ್ ಜಟಾರ್ಕರ್, ಪ್ರಶಾಂತ್ ಕಲಬುರ್ಗಿ, ಸಿರಿದಂತೆ ಇನ್ನೂ ಅನೇಕ ಎಸ್ ಎಸ್ ಕೆ ಸಮಾಜದವರು ಉಪಸ್ಥಿತರಿದ್ದರು.
ಬೆಂಗಳೂರು:- ಬರ ಪರಿಹಾರ ಸಂಬಂಧ ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ. ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ…