Author: AIN Author

ದಾವಣಗೆರೆ: ಸ್ವಯಂಕೃತ ಅಪರಾಧದಿಂದ ಸರ್ಕಾರ ಪತನವಾಗತ್ತೆ. ನಾವು ಯಾವುದೇ ಆಪರೇಷನ್ ಕಮಲ ಮಾಡಲ್ಲ. ಆಡಳಿತ ವೈಫಲ್ಯದಿಂದ ಕಾಂಗ್ರೆಸ್ ಶಾಸಕರೇ ರಾಜೀನಾಮೆ ನೀಡುತ್ತಾರೆ ಎಂದು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ದಲ್ಲಿ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಚುನಾವಣೆ ಮುಂಚೆ ಘೋಷಣೆಗಳನ್ನ ಮಾಡಿದ್ದರು. ಆದ್ರೆ, ಯಾವುದು ಸರಿಯಾಗಿ ಜಾರಿ ಮಾಡಲಿಲ್ಲ ಇದರಿಂದ ಮಹಿಳೆಯರು ಸೇರಿ ಎಲ್ಲರು ಬೇಸತ್ತು ಹೋಗಿದ್ದಾರೆ. https://ainlivenews.com/residents-own-property-in-bangalore-heres-the-good-news/ ಇನ್ನೂ ಸಚಿವ ಜಮೀರ್ ಅಹ್ಮದ್ ವಿರುದ್ದ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ, ಜಮೀರ್ ಅಹ್ಮದ್ ಒಬ್ಬ ಹುಚ್ಚ ಆತ ಹುಚ್ಚನಂತೆ ಮಾತನಾಡುತ್ತಾನೆ. ಪುಲ್ವಾಮ ಘಟನೆ ಮತ್ತು ನರೇಂದ್ರ ಮೋದಿ ಆಡಳಿತವನ್ನ ಬ್ರಿಟಿಷ್ ರಿಗೆ ಹೋಲಿಕೆ ಮಾಡುತ್ತಾರೆ. ಶಾಸಕ ಬಾಲಕೃಷ್ಣ ಗೆ ನಾಚಿಕೆ ಆಗಬೇಕು, ರಾಜ್ಯದ ಜನರ ಕ್ಷಮೆ ಕೇಳಬೇಕು. ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಅಂತಾರೆ, ಕೆಲ ಶಾಸಕರು ಇಂಥವರೇ ಸಿಎಂ ಆಗಬೇಕೆಂದು ಹೇಳುತ್ತಿದ್ದಾರೆ. ಶಕ್ತಿ ಯೋಜನೆಗೆ…

Read More

‘ಕಾಟೇರ’ ಬರ್ತಾ ಇದಾನೆ ಕಂಡ್ರೋ.. ಇನ್ನೇನು ಬೇಕು? Happy New Year ಗಿಫ್ಟ್ ಸಿಕ್ತಲ್ಲ. ಕಾಟೇರಮ್ಮನ ಮಗನಾಗಿ ದುಷ್ಟರ ಸಂಹಾರಕ್ಕಾಗಿ ‘ಕಾಟೇರ’ ಸಿದ್ಧವಾಗಿದ್ದಾನೆ. ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ ಅವರು ನಟಿಸಿರುವ ಸ್ಯಾಂಡಲ್​ವುಡ್​ನ ಬಹುನಿರೀಕ್ಷಿತ ‘ಕಾಟೇರ’ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಕಾಟೇರದಲ್ಲಿ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ಖಡಕ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ‘ಡಿ ಬಾಸ್’ ತಮ್ಮ ಅಭಿಮಾನಿಗಳಿಗೆ ಹಬ್ಬದೂಟ ಉಣಬಡಿಸಲು ಮುಂದಾಗಿದ್ದಾರೆ. ಈ ಸಿನಿಮಾ ಡಿಸೆಂಬರ್ 29ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ. ಈ ಸಿನಿಮಾದಲ್ಲಿ ಕನಸಿನ ರಾಣಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ರಾಬರ್ಟ್ ನಿರ್ದೇಶಕ ತರುಣ್ ಸುಧೀರ್ ಕಾಟೇರವನ್ನು ನಿರ್ದೇಶಿಸಿದ್ದಾರೆ. ಇನ್ನೂ ಧೀರ ರಾಕ್​ಲೈನ್ ವೆಂಕಟೇಶ್ ಅವರು ಕಾಟೇರಗೆ ಬಂಡವಾಳ ಹೂಡಿದ್ದಾರೆ. ಬಿಗ್ಗೆಸ್ಟ್ ಬ್ಲಾಕ್ ಬಸ್ಟರ್ ಆಗುತ್ತಾ ಕಾಟೇರ ಈ ವರ್ಷ ಸ್ಯಾಂಡಲ್ ವುಡ್​ಗೆ ಅಷ್ಟೇನು ಆಶಾದಾಯಕವಾಗಿರಲಿಲ್ಲ. ಯಾವ ಸಿನಿಮಾ ಬಿಗ್ಗೆಸ್ಟ್ ಬ್ಲಾಕ್ ಬಸ್ಟರ್ ಅನಿಸ್ಕೊಂಡಿರಲ್ಲ. ವರ್ಷದ ಕೊನೆಯಲ್ಲಿ ಕಾಟೇರ ಮೂಲಕ…

Read More

ಬೆಂಗಳೂರು: ಬೆಡ್ ಸಿಗದೇ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ ಸಂಬಂಧ  ಇಂದು ಕುಟುಂಬದವರು ಹಾಗೂ ಆಂಬುಲೆನ್ಸ್ ಚಾಲಕರಿಂದ   ಆಸ್ಪತ್ರೆಯ ಆವರಣದಲ್ಲಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಪ್ರತಿಭಟನೆ  ನಡೆಸುತ್ತಿದ್ದಾರೆ. ಬಡವರ ಮಕ್ಕಳಿಗೆ ಒಂದು ನ್ಯಾಯ… VIP ಗಳಿಗೆ ಆಸ್ಪತ್ರೆಯಲ್ಲಿ ಬೇರೆಯದ್ದೇ ನ್ಯಾಯ ದೊಡ್ಡ ದೊಡ್ಡವರು ಕಾಲ್ ಮಾಡಿದ್ರೆ ಬೆಡ್ ಸಿಗುತ್ತೆ, ಟ್ರೀಟ್ಮೆಂಟ್ ಮಾಡ್ತಾರೆ ಬಡವರು ದೂರದೂರಿನಿಂದ ಬಂದ್ರೂ ಆಸ್ಪತ್ರೆಯ ಗೇಟ್ ಒಳಗೂ ಬಿಡಲ್ಲ ಪ್ರಥಮ ಚಿಕಿತ್ಸೆಯೂ ಕೊಡಲ್ಲ ಎಂದು ಮಗುವಿನ ಕುಟುಂಬಸ್ಥರ ಅಳಲು. ಹಾಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಇಲ್ಲ ಅಂತಾನೇ ಬಣ್ಣ ಬಣ್ಣದ ಕಾಗೆ ಹಾರಿಸ್ತಾರೆ ಅಂತ ಆಂಬ್ಯುಲೆನ್ಸ್ ಚಾಲಕರು ಕಿಡಿ ಕಾರಿದ್ದಾರೆ. ಸದ್ಯ ಸ್ಥಳೀಯ ಪೊಲೀಸರಿಗೆ ಎಂಎಲ್ ಸಿ ರಿಪೋರ್ಟ್ ಕಳಿಸಿದ ನಿಮ್ಹಾನ್ಸ್ ವೈದ್ಯರು  ಸಿದ್ದಾಪುರ ಪೊಲೀಸರಿಗೆ ಎಂಎಲ್ ಸಿ ರಿಪೋರ್ಟ್ ರವಾನೆ ಸಿದ್ದಾಪುರ ಪೊಲೀಸರಿಂದ ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಠಾಣೆಗೆ ರಿಪೋರ್ಟ್ ರವಾನೆ. ಈಗಲೇ ಎಂಎಲ್ ಸಿ ರಿಪೋರ್ಟ್ ನ್ನ ಗೋಣಿ ಬೀಡು ಪೊಲೀಸ್ ಠಾಣೆಗೆ…

Read More

ಹೈದರಾಬಾದ್‌: ನಿಮಗೆ ಈಗಾಗಲೇ 50 ವರ್ಷ ದಾಟಿದೆ. ಬಹುಶಃ ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್ (AIMIM) ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ವ್ಯಂಗ್ಯವಾಡಿದ್ದಾರೆ. ಓವೈಸಿ ಅವರು ಪ್ರಧಾನಿ ಮೋದಿ (Modi) ಅವರ ಮಾಜಿ ಸ್ನೇಹಿತ ಎನ್ನುವ ರಾಹುಲ್‌ ಗಾಂಧಿ (Rahul Gandhi) ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ನಾವು ಯಾರ ನಿರ್ಧಾರಗಳನ್ನು ಪ್ರಶ್ನೆ ಮಾಡುವುದಿಲ್ಲ, ಯಾರ ಜೀವನದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ, https://ainlivenews.com/residents-own-property-in-bangalore-heres-the-good-news/ ಯಾರಿಗೂ ತೊಂದರೆ ಕೊಡುವುದಿಲ್ಲ. ನೀವೂ ಸಹ ನಿಮ್ಮನ್ನು ಚುಡಾಯಿಸಿದವರನ್ನು ಬಿಡಬೇಡಿ ಎಂದು ಹೇಳಿದ್ದಾರೆ. ಇತ್ತೀಚೆಗೆ ತೆಲಂಗಾಣದಲ್ಲಿ ಚುನಾವಣಾ ಭಾಗವಾಗಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್‌ ಗಾಂಧಿ ಮಾತನಾಡಿದ್ದರು. ಈ ವೇಳೆ ಆಡಳಿತರೂಢ ಭಾರತ್‌ ರಾಷ್ಟ್ರ ಸಮಿತಿ (BRS) ಸರ್ಕಾರವನ್ನು ಭ್ರಷ್ಟ ಸರ್ಕಾರ ಎಂದು ಕಿಡಿ ಕಾರಿದ್ದರು. ಅಲ್ಲದೇ ಪ್ರಧಾನಿ ಮೋದಿಗೆ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್‌ ರಾವ್‌ ಮತ್ತು ಓವೈಸಿ ಇಬ್ಬರು ಸ್ನೇಹಿತರಿದ್ದಾರೆ ಎಂದು ನುಡಿದಿದ್ದರು. ಇದಕ್ಕೆ ಓವೈಸಿ ಪ್ರತಿಕ್ರಿಯಿಸಿದ್ದಾರೆ.

Read More

ಬೆಂಗಳೂರು: ಸರ್ಕಾರದಿಂದ ಅರ್ಚಕರ ಕುಟುಂಬಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ಮುಜರಾಯಿ ಇಲಾಖೆಯ ‘ಸಿ’ ಗ್ರೇಡ್‌ ದೇವಾಲಯಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಅನಾರೋಗ್ಯಪೀಡಿತರಾಗಿ ಸೇವೆ ಸಲ್ಲಿಸಲಾಗದಿದ್ದರೆ ಅವರ ಮಕ್ಕಳನ್ನೇ ಈ ಹುದ್ದೆಗೆ ನೇಮಕಾತಿ ಮಾಡಲು ಸರಕಾರ ಆದೇಶ ಹೊರಡಿಸಿದೆ. https://ainlivenews.com/262-new-ambulances-in-the-state-today/ ರಾಜ್ಯದಲ್ಲಿ 34 ಸಾವಿರಕ್ಕೂ ಅಧಿಕ ‘ಸಿ’ ಗ್ರೇಡ್‌ ದೇವಾಲಯಗಳಿವೆ. ಇಲ್ಲಿಈವರೆಗೆ ಪೂಜಾ ಕೈಂಕರ್ಯದಲ್ಲಿ ತೊಡಗಿದ್ದ ಅರ್ಚಕರು ನಿಧನರಾದರೆ ಮಾತ್ರ ಅಂಥವರ ಮಕ್ಕಳನ್ನು ಅನುಕಂಪದ ಆಧಾರದ ಮೇಲೆ ಅರ್ಚಕರ ಹುದ್ದೆಗೆ ನೇಮಕ ಮಾಡಲಾಗುತ್ತಿತ್ತು. ಆದರೆ, ಇನ್ನು ಮುಂದೆ ನಿಧನರಾಗದಿದ್ದರೂ, ಅನಾರೋಗ್ಯಕ್ಕೆ ತುತ್ತಾದರೆ, ಇಲ್ಲವೇ ವಯೋಸಹಜ ಸಮಸ್ಯೆಗಳಿಂದ ಅರ್ಚಕ ವೃತ್ತಿ ಮಾಡಲಾಗದಿದ್ದರೆ ಅಂತಹವರ ಮಕ್ಕಳನ್ನು ದೇವಾಲಯಗಳಲ್ಲಿಅರ್ಚಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸರಕಾರ ಆದೇಶ ಹೊರಡಿಸಿದೆ.

Read More

ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.ಪಹಣಿ ಪತ್ರ ಮಾಡಿಕೊಡಲು ಲಂಚಕ್ಕೆ ಕೈಯೊಡ್ದಿದ್ದ ಎಸ್ ಡಿಸಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ.ಮಂಜುನಾಥ್ ಅಂಗಡಿ ಲೋಕಾಯುಕ್ತ(Lokayukta) ಬಲೆಗೆ ಬಿದ್ದ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್ ಡಿಸಿ(SDC),ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್‌.ಕೆ. ಗ್ರಾಮದ ರವಿ ಅಜ್ಜಿ ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು. https://ainlivenews.com/residents-own-property-in-bangalore-heres-the-good-news/ ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಈ ಸಂಬಂಧ ರವಿ ಅಜ್ಜಿ ಬೆಳಗಾವಿ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ,ಈ ವೇಳೆ ಮಂಜುನಾಥ್​​ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ SP ಹಣಮಂತರಾಯ, DYSP ಬಿ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ PSI ಅನ್ನಪೂರ್ಣ ಹುಲಗೂರ ನೇತೃತ್ವದ ತಂಡ ದಾಳಿ ನಡೆಸಿತ್ತು.

Read More

ಬೆಂಗಳೂರು: ಲೋಕಾಯುಕ್ತರಿಗೆ ಆಸ್ತಿ ವಿವರ ಸಲ್ಲಿಸದ ಹಿನ್ನೆಲೆಯಲ್ಲಿ  ಸಾರ್ವಜನಿಕ ಪ್ರಕಟಣೆ ಹೊರಡಿಸಿದ ಲೋಕಾಯುಕ್ತ ಜೂನ್ 30ರೊಳಗೆ ಪ್ರತಿ ವರ್ಷ ಎಲ್ಲ ಜನಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸಬೇಕು 2022-23 ನೇ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದ ಶಾಸಕರ ಮಾಹಿತಿ ಪ್ರಕಟ ಪಡಿಸಿದ ಲೋಕಾಯುಕ್ತ ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆ.ಸಿ ನಾರಾಯಣಗೌಡ, ಎಸ್. ಅಂಗಾರ ಆಸ್ತಿ ವಿವರ ಸಲ್ಲಿಸದೇ ಲೋಪ ಈ ಬಾರಿ ರಹೀಂಖಾನ್, ಕೆ.ಎನ್ ರಾಜಣ್ಣ, ಜಮೀರ್ ಅಹಮ್ಮದ್ ಖಾನ್, ರಾಮಲಿಂಗ ರೆಡ್ಡಿ, ಕೆ.ಎಚ್ ಮುನಿಯಪ್ಪರಿಂದಲೂ ಆಸ್ತಿ ವಿವರ ಸಲ್ಲಿಸದೇ ಲೋಪ ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಈ ಬಾರಿಯ ವಿಧಾನಸಭೆ ಅವಧಿಯ 51 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ 21 ಮಂದಿ ವಿಧಾನ ಪರಿಷತ್ ಸದಸ್ಯರಿಂದಲೂ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ ಜೂನ್ 30ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿರುವ ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ…

Read More

ಬೆಂಗಳೂರು:  ಹಸುಗೂಸುಗಳು ಮಾರಾಟ ಜಾಲದ ಬಂಧನ ಪ್ರಕರಣ ಸಿಸಿಬಿ ಪೊಲೀಸರಿಂದ ಎಂಟು ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿದ್ದು ಆರೋಪಿಗಳು ಭಯಾನಕ ಸ್ಪೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ವಿಚಾರಣೆ ವೇಳೆ 6 ವರ್ಷಗಳಲ್ಲಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟದ ಬಗ್ಗೆ ಬಾಯಿಬಿಟ್ಟಿರೋ ಆರೋಪಿಗಳು ಅದರಲ್ಲಿ ಕರ್ನಾಟಕದಲ್ಲಿ ಕೇವಲ 50-60 ಮಕ್ಕಳನ್ನು ಮಾರಾಟ ಮಾಡಿದ್ದು ಉಳಿದ ಮಕ್ಕಳನ್ನು ತಮಿಳುನಾಡಿನಲ್ಲಿ ಮಾರಾಟ‌ https://ainlivenews.com/feticide-is-not-a-good-development-hd-kumaraswamy/ ಸದ್ಯ ಕರ್ನಾಟಕದಲ್ಲಿ ಮಾರಾಟ ಆಗಿರೋ ಮಕ್ಕಳ ಬಗ್ಗೆ ಮಾಹಿತಿ ಕಲೆಹಾಕ್ತಾ ಇರೋ ಸಿಸಿಬಿ ಹತ್ತು ಮಕ್ಕಳ ಬಗ್ಗೆ ಮಾತ್ರ ಸಿಸಿಬಿಗೆ ಮಾಹಿತಿ ಸಿಕ್ಕಿದ್ದು ಉಳಿದ ಮಕ್ಕಳನ್ನು ಯಾರಿಗೆ ಕೊಟ್ಟಿದ್ದಾರೆ ಅಂತ ತನಿಖೆ ಕರ್ನಾಟಕದ ಗ್ಯಾಂಗ್ ಲೀಡರ್ ಮಹಾಲಕ್ಷ್ಮೀ ಕಥೆಯೇ ಒಂದು ರೀತಿ ರೋಚಕವಾಗಿದ್ದು ಮನೆ ಕೆಲಸ ಮಾಡಿಕೊಂಡಿದ್ದಾಕೆ‌ ಇವತ್ತು ಕೋಟ್ಯಾಧಿಪತಿ ಆಗಿದ್ದೇ ಆಶ್ಚರ್ಯ 2017 ರಿಂದಲೂ ಈ ದಂಧೆಯನ್ನು ಮಾಡ್ತಾ ಇರೋ ಮಹಾಲಕ್ಷ್ಮೀ ಬಾಡಿಗೆ ಮನೆಯಲ್ಲಿ ಇದ್ದಾಕೆ ಇವತ್ತು ಸ್ವಂತ ಮನೆ, ಕಾರು ಜೊತೆಗೆ ಮೈತುಂಬಾ ಚಿನ್ನಾಭರಣ ಮಾಡಿಸಿದ್ದಾಳೆ2015 ರಿಂದ 2017 ರವರೆಗೂ…

Read More

ಹಾಸನ: ಮದುವೆಯಾಗಲು ನಿರಾಕರಿಸಿದಳೆಂದು ದುರುಳರು ಶಾಲಾ ಶಿಕ್ಷಕಿಯನ್ನೇ ಅಪಹರಿಸಿರುವ ಘಟನೆ ಹಾಸನ ಜಿಲ್ಲೆಯ ಬಿಟ್ಟಗೌಡನಹಳ್ಳಿಯ ಬಳಿ ಇಂದು ಬೆಳಗ್ಗೆ ನಡೆದಿದೆ. ಅರ್ಪಿತಾ, ಅಪಹರಣಕ್ಕೊಳಗಾದ ಶಿಕ್ಷಕಿ. ಶಿಕ್ಷಕಿ ಕೆಲಸ ಮಾಡುತ್ತಿದ್ದ ಶಾಲೆ ಮುಂಭಾಗ ಅಪಹರಿಸಿರೋ ದುರುಳರು. ಇನ್ನೋವಾ ಕಾರಿನಲ್ಲಿ ಬಂದು ಅಪಹರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿಕ್ಷಕಿ ಪ್ರತಿರೋಧ ತೋರಿದರೂ ಬಿಡದ ಕಿರಾತಕರು. ಕಳೆದ 15 ದಿನಗಳ ಹಿಂದೆ ಅರ್ಪಿತಾಳ ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಮಾಡಲು ಮನೆಗೆ ಬಂದಿದ್ದ ರಾಮು ಎಂಬ ವ್ಯಕ್ತಿ ಮತ್ತವನ ಪೋಷಕರು. https://ainlivenews.com/residents-own-property-in-bangalore-heres-the-good-news/ ಇವರು ಅರ್ಪಿತಾ ಸಂಬಂಧಿ ಎಂದು ಹೇಳಲಾಗಿದೆ. ಮದುವೆ ಪ್ರಸ್ತಾಪ ಮಾಡಿದಾಗ, ಅರ್ಪಿತಾ ಹಾಗೂ ಮನೆಯವರು ಒಪ್ಪಿಗೆ ನೀಡಿಲ್ಲ. ಮದುವೆಗೆ ಒಪ್ಪಲಿಲ್ಲವೆಂದು ಅಪಹರಣಕ್ಕೆ ಸಂಚು ರೂಪಿಸಿದ್ದ ಕಿರಾತಕರು. ಇಂದು ಬೆಳಗ್ಗೆ ಎಂದಿನಂತೆ ಶಿಕ್ಷಕಿ ಅರ್ಪಿತಾ ಶಾಲೆಗೆ ಹೊರಟ ಸಂದರ್ಭದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ದುರುಳರು. ಕಾರಿನಲ್ಲಿ ಅಪಹರಿಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್ ಹೆಸರನ್ನ ನಕಲಿಸಿ ಬಟ್ಟೆ ಮಾರುತ್ತಿದ್ದ ಗೋಡೌನ್ ಮೇಲೆ ಬೆಳ್ಳಂ ಬೆಳಗ್ಗೆ  ಸಿಸಿಬಿ ದಾಳಿ ನಡೆಸಿದೆ. ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ದಾಳಿ ವೇಳೆ  ಬರೋಬ್ಬರಿ1.5ಕೋಟಿ ಮೌಲ್ಯದ ಬಟ್ಟೆಗಳು ಜಪ್ತಿ ಮಾಡಿರುವ ಸಿಸಿಬಿ ಟೀಂ. ಅರ್ಮನಿ, ಬರ್ಬರಿ, ಗ್ಯಾಂಟ್ ಸೇರಿದಂತೆ ಪ್ರತಿಷ್ಠಿತ ಬ್ರಾಂಡ್ ಗಳ ಬಟ್ಟೆ ಎಂದು ಅಕ್ರಮ ಮಾರಾಟ ಮಾಡುತ್ತಿದ್ದ ಟೀಂ  ಪಟೆಲ್ ಎಕ್ಸ್ಪೋರ್ಟ್ ಹಾಗೂ ಆರ್ ಬಿ ಫ್ಯಾಷನ್ ಗೋಡೌನ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಬೇರೆ ಬೇರೆ ಕಡೆಯೂ ಇದೇ ರೀತಿ ಫೇಕ್ ಬ್ರಾಂಡ್ ಗೋಡೌನ್ ಹೊಂದಿರೋದು ಬೆಳಕಿಗೆ ಬಂದಿದ್ದು ಎಸ್ ಆರ್ ನಗರ, ಮಾಗಡಿ ರೋಡ್, ಬೇಗೂರು ಸೇರಿದಂತೆಹಲವು ಠಾಣಾ ವ್ಯಾಪ್ತಿಯಲ್ಲಿ ನಕಲಿ ಬ್ರಾಂಡ್ ಬಟ್ಟೆಯ ಗೋಡೌನ್ ಇರೋದು ಬೆಳಕಿಗೆ.. ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿರೋ ಸಿಸಿಬಿ ಟೀಂ

Read More