Author: AIN Author

ಬೆಂಗಳೂರು: ಅತ್ಯಾಧುನಿತ ತಂತ್ರ ಹೊಂದಿರೋ ಸುಮಾರು 262 ಹೊಸ ಆ್ಯಂಬುಲೆನ್ಸ್‌ಗಳು ಇಂದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಲಿವೆ. https://ainlivenews.com/residents-own-property-in-bangalore-heres-the-good-news/ ಆಧುನಿಕ ತಂತ್ರಜ್ಞಾನ ಹೊಂದಿರುವ ಆ್ಯಂಬುಲೆನ್ಸ್‌ಗಳನ್ನ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಜೊತೆಗೆ 120 ಕೋಟಿ ವೆಚ್ಚದ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಆರೋಗ್ಯ ಇಲಾಖೆ ಪಾಳಯ ಸೇರಿರುವ 157 ಬೇಸಿಕ್ ಲೈಫ್ ಸಪೋರ್ಟ್ 108 ಆಂಬ್ಯುಲೆನ್ಸ್‌ಗಳು. ಹೊಸ 262 ಆ್ಯಂಬುಲೆನ್ಸ್ ಸೇರ್ಪಡೆಯೊಂದಿಗೆ ರಾಜ್ಯದಲ್ಲಿ ಒಟ್ಟು 715 ಆ್ಯಂಬುಲೆನ್ಸ್‌ಗಳು ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸಲಿವೆ. ಸದ್ಯ ಲೋಕಾರ್ಪಣೆ ಆಗಲು ವಿಧಾನಸೌಧದ ಮುಂಭಾಗದಲ್ಲಿ ಸಜ್ಜಾಗಿ‌ ನಿಂತಿವೆ.

Read More

ಧಾರವಾಡ: ಬೆಳಗಾವಿ ಸುವರ್ಣಸೌಧದ ಪಕ್ಕ ಶಾಸಕರ ಭವನ ಕಟ್ಟಿಸುವ ಬದಲಿಗೆ ತಾಜ್‌ನಂತಹ ಹೋಟೆಲ್‌ಗೆ ಒಪ್ಪಂದದ ಮೇರೆಗೆ ಅನುಮತಿ ನೀಡಿದರೆ ಸೂಕ್ತವಾಗುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಸುವರ್ಣಸೌಧದ ಪಕ್ಕ 20 ಎಕರೆ ಜಮೀನು ಇದೆ. ಶಾಸಕರ ಭವನವನ್ನು ಅಲ್ಲಿಯೇ ಮಾಡಬೇಕು ಎಂಬ ಚರ್ಚೆ ನಡೆದಿದೆ. ಅಲ್ಲಿ ಶಾಸಕರ ಭವನ ಮಾಡಿದರೆ ಅಧಿವೇಶನ ಸಮಯ ಹೊರುತುಪಡಿಸಿ ಉಳಿದ ಸಮಯದಲ್ಲಿ ಅದು ಖಾಲಿ ಉಳಿಯುತ್ತದೆ. ಅದಕ್ಕಾಗಿ ತಾಜ್‌ನಂತಹ ದೊಡ್ಡ ಹೋಟೆಲ್‌ವರನ್ನು ಮಾತನಾಡಿಸಿ ಒಪ್ಪಂದದ ಮೇಲೆ ಅವರಿಗೆ ಕೊಡಬಹುದು. ಶಾಸಕರಿಗಾಗಿ ಅಲ್ಲಿ 10 ರೂಮ್‌ಗಳನ್ನು ಕಾಯಂ ಆಗಿ ಇಡಬೇಕು. ಉಳಿದ ರೂಮ್ ಅವರು ಉಪಯೋಗಿಸಬಹುದು. https://ainlivenews.com/residents-own-property-in-bangalore-heres-the-good-news/  ಅಧಿವೇಶನದ ವೇಳೆ ಮಾತ್ರ ಎಲ್ಲ ರೂಮ್‌ಗಳನ್ನು ಶಾಸಕರಿಗೆ ನೀಡುವ ಚರ್ಚೆ ಮಾಡಬೇಕು ಎಂದರು. ಸರ್ಕಾರದ ಮುಂದೆ ಈ ಪ್ರಸ್ತಾವನೆ ಇಟ್ಟಿದ್ದೇವೆ. ಸರ್ಕಾರ ಆ ಬಗ್ಗೆ ಕ್ರಮ ಕೈಗೊಳ್ಳಲಿ. ಅದನ್ನು ಮಾಡಿದರೆ ಒಳ್ಳೆಯದಾಗುತ್ತದೆ. ಅಧಿವೇಶನದ ಸಮಯದಲ್ಲಿ ವಸತಿಗಾಗಿಯೇ 4 ಕೋಟಿ ಖರ್ಚಾಗುತ್ತಿದೆ. ತಾಜ್ ನಂತಹ…

Read More

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನತಾ ದರ್ಶನವನ್ನು ಜನಸ್ಪಂದನಾ ಎಂದಿದ್ದಾರೆ. ಸಿಎಂ ಅವರ ಜನ ಸ್ಪಂದನವನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ಬರಲು ಹೇಳಿ ನಾಡಿನ ಜನತೆಯ ಸಮಸ್ಯೆ ಆಲಿಸಿದ್ದಾರೆ. ಈಗಲಾದರೂ ಇವರಿಗೆ ರಾಜ್ಯದ ಜನತೆಯ ಗ್ರೌಂಡ್ ರಿಯಾಲಿಟಿ ಅರ್ಥವಾಗಿದೆ ಎಂದುಕೊಂಡಿದ್ದೇನೆ. ವಿವಿಧ ಸಮಸ್ಯೆಗಳು ಜನಸ್ಪಂದನದಲ್ಲಿ ಅರ್ಥವಾಗಿರಬಹುದು. https://ainlivenews.com/residents-own-property-in-bangalore-heres-the-good-news/  ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ. ಈ ವಿಷಯದಲ್ಲಿ ನಾನು ಎಲ್ಲವನ್ನು ಟೀಕಿಸುವುದಿಲ್ಲ ಎಂದಿದ್ದಾರೆ. ಮುಂದಿನ 3 ತಿಂಗಳಲ್ಲಿ ಮತ್ತೆ ಜನಸ್ಪಂದನಾ ಮಾಡುತ್ತೇನೆ ಎಂದಿದ್ದಾರೆ. ಅಧಿಕಾರಿಗಳಿಗೆ 3 ತಿಂಗಳ ಗಡುವು ನೀಡಿದ್ದಾರೆ. ಈಗ ಅವರಿಗೆ ಅರ್ಥ ಆಗಿರಬಹುದು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು. ನಾನು ಜನತಾ ದರ್ಶನ ಮಾಡಿದಾಗ ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೆ ಮಾಡಿದ್ದೆ. ಅಂದು ಇದ್ದ ಸಮಸ್ಯೆಗಳು ಈಗಲೂ ಮುಂದುವರಿದಿವೆ ಎಂದು ತಿಳಿಸಿದರು. 

Read More

ಬೆಂಗಳೂರು: ಈಗಾಗಲೇ ಮದುವೆ ಸೀಜನ್ಸ್ ಆರಂಭವಾಗಿದ್ದು, ಸಾಕಷ್ಟು ಮದುವೆಗಳು ನಡೆಯುತ್ತಿವೆ. ಆದರೆ ಈ ಸಮಯದಲ್ಲೇ ಜನರಿಗೆ ಗೋಲ್ಡ್ ಶಾಕ್ ಎದುರಾಗಿದೆ. ಅದು ಸಹ ಇತಿಹಾಸದಲ್ಲೇ ಪ್ರಥಮ ಬಾರಿಗೆ ಗರಿಷ್ಠ ಬೆಲೆಗೆ ಚಿನ್ನ (Gold) ಏರಿಕೆಯಾಗಿದೆ. ಚಿನ್ನ ಕಷ್ಟಕಾಲದ ಆಪದ್ಬಾಂಧವ. ಮಹಿಳೆಯರ ಪಾಲಿಗೆ ಫೇವರೆಟ್. ಆದರೆ ಈ ಚಿನ್ನವನ್ನು ಕೊಳ್ಳುವ ಹಾಗಿಲ್ಲ, ಮುಟ್ಟುವ ಹಾಗಿಲ್ಲ ಎನ್ನುವಂತಾಗಿದೆ. ಬಡವರು ಹಾಗೂ ಮಧ್ಯಮ ವರ್ಗದ ಜನರ ಪಾಲಿಕೆ ಗಗನ ಕುಸುಮವಾಗಿದೆ. ಅದರಲ್ಲೂ ಬಂಗಾರ 65,000 ರೂ.ಗಳ ಗಡಿ ದಾಟಿದ್ದು, ಬೆಳ್ಳಿ 78,000 ರೂ. ದಾಟಿದೆ. ಬುಧವಾರದ ಚಿನ್ನ, ಬೆಳ್ಳಿಯ ದರವನ್ನು ನೋಡುವುದಾದರೆ, 10 ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆ 65,000 ರೂ., 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 58,500 ರೂ., ಒಂದು ಕೆಜಿ ಬೆಳ್ಳಿಗೆ 78,500 ಸಾವಿರ ರೂ. ಇತ್ತು. ಗುರುವಾರವೂ ಈ ದರ ಮುಂದುವರಿದಿದೆ. ಈಗ ಮದುವೆ ಸೀಜನ್ ಆಗಿರುವುದರಿಂದ ಚಿನ್ನಕ್ಕೆ ಬೇಡಿಕೆಯಿದೆ. ಮುಂದೆ ಕ್ರಿಸ್ಮಸ್, ಹೊಸ ವರ್ಷ ಪ್ರಾರಂಭವಾಗುವುದರಿಂದ…

Read More

ಉಡುಪಿ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ. https://ainlivenews.com/the-drunk-driver-stopped-the-truck-on-the-railway-tracks-what-happened-next/  ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದನು. ಲಂಚ ನೀಡಲು ಒಪ್ಪದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.

Read More

ಸ್ಯಾಂಡಲ್​ವುಡ್ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ದಿಢೀರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಮಂಡ್ಯ ರಮೇಶ್ ದಾಖಲಾಗಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ರಾಜರಾಜೇಶ್ವರಿ ನಗರದಲ್ಲಿ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಶೂಟಿಂಗ್ ಮಾಡುತ್ತಿದ್ದಾಗ ಮಂಡ್ಯ ರಮೇಶ್ ಕಾಲು ಜಾರಿ ಬಿದ್ದರು. ಹೀಗಾಗಿ. ಕಾಲಿಗೆ ಚಿಕಿತ್ಸೆ ಕೊಡಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮಂಡ್ಯ ರಮೇಶ್ ಪತ್ನಿ ಸರೋಜಾ ಹೆಗಡೆ ಮಾಹಿತಿ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ನಾಳೆ ಆಸ್ಪತ್ರೆಯಿಂದ ಮಂಡ್ಯ ರಮೇಶ್​ ಡಿಸ್ಚಾರ್ಜ್​​ ಆಗಲಿದ್ದಾರೆ. ಸದ್ಯ ಮಂಡ್ಯ ರಮೇಶ್​ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖದ ಹಂತದಲ್ಲಿದ್ದಾರೆ ಎಂದು ಹೇಳಿದ್ದಾರೆ.

Read More

ಹೈದರಾಬಾದ್‌: ಜಿದ್ದಾಜಿದ್ದಿ ಕಣವಾಗಿರುವ ತೆಲಂಗಾಣ ರಾಜ್ಯದಲ್ಲಿಂದು ಮತದಾನ (Telangana Assembly Election 2023) ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ ವರೆಗೆ ಮತದಾನಕ್ಕೆ ಅವಕಾಶ ಸಿಗಲಿದೆ. 119 ವಿಧಾನಸಭಾ ಕ್ಷೇತ್ರಗಳಲ್ಲಿರುವ 32.6 ದಶಲಕ್ಷ ಮತದಾರರು 2,290 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi), https://ainlivenews.com/the-drunk-driver-stopped-the-truck-on-the-railway-tracks-what-happened-next/  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್‌ ಸೇರಿ ಹಲವು ಪ್ರಭಾವಿ ನಾಯಕರು ಅಬ್ಬರದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ಮಿಜೋರಾಂಗಳಲ್ಲಿ ಈಗಾಗಲೇ ನ.7ರಿಂದ ನವೆಂಬರ್ 25ರ ಒಳಗೆ ಮತದಾನ ಮುಕ್ತಾಯವಾಗಿದೆ. ತೆಲಂಗಾಣದಲ್ಲಿಂದು ಮತದಾನ ನಡೆಯಲಿದ್ದು, ಈ ಮೂಲಕ ಪಂಚರಾಜ್ಯ ಚುನಾವಣೆಗೆ (Five State Election) ತೆರೆ ಬೀಳಲಿದೆ. ಡಿಸೆಂಬರ್‌ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Read More

ಹೈದರಾಬಾದ್‌: ಜಿದ್ದಾಜಿದ್ದಿ ಕಣವಾಗಿರುವ ತೆಲಂಗಾಣ ರಾಜ್ಯದಲ್ಲಿಂದು ಮತದಾನ (Telangana Assembly Election 2023) ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭಗೊಂಡಿದ್ದು, ಜನರು ತಮ್ಮ ಹಕ್ಕು ಚಲಾಯಿಸಲು ಉತ್ಸಾಹ ತೋರಿದ್ದಾರೆ. ಈ ನಡುವೆ ತೆಲುಗು ಚಿತ್ರರಂಗದ ಖ್ಯಾತ ನಟರಾದ ಅಲ್ಲು ಅರ್ಜುನ್‌ (Allu Arjun), ಜೂನಿಯರ್‌ ಎನ್‌ಟಿಆರ್‌ (Jr NTR) ಹಾಗೂ ಚಿರಂಜೀವಿ (Chiranjeevi) ಹೈದರಾಬಾದ್‌ನಲ್ಲಿ ತಮ್ಮ ಕುಟುಂಬಗಳೊಂದಿಗೆ ಬಂದು ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ್ದಾರೆ. ಅಲ್ಲು ಅರ್ಜುನ್‌ ತಾವೊಬ್ಬರೇ ಮತಗಟ್ಟೆಗೆ ಬಂದು ವೋಟ್‌ ಮಾಡಿದರು. ಜೂನಿಯರ್‌ ಎನ್‌ಟಿಆರ್‌ ಲಕ್ಷ್ಮಿ ಪ್ರಣತಿ, ತಾಯಿ ಶಾಲಿನಿ ನಂದಮೂರಿ ಅವರೊಂದಿಗೆ ಬಂದು ವೋಟ್‌ ಮಾಡಿದ್ರು. ಇನ್ನೂ ಮೆಗಾಸ್ಟಾರ್‌ ಚಿರಂಜೀವಿ ಸಹ ತಮ್ಮ ಕುಟುಂಬ ಸಮೇತರಾಗಿ ಬಂದು ವೋಟ್‌ ಮಾಡಿ ತನ್ಮ ಹಕ್ಕು ಚಲಾಯಿಸಿದರು. ಜೊತೆಗೆ ಪ್ರತಿಯೊಬ್ಬರು ಬಂದು ವೋಟ್‌ ಮಾಡುವಂತೆ ಮನವಿ ಮಾಡಿದರು. ಸದ್ಯ ಸ್ಟಾರ್ಸ್‌ಗಳು ವೋಟ್‌ ಮಾಡಿರುವ ಫೋಟೋ ವೀಡಿಯೋ ಜಾಲತಾಣದಲ್ಲಿ ಸಖತ್‌ ಸದ್ದು…

Read More

ಅಮೆರಿಕನ್ ಬಿಲಿಯನೇರ್ ಬಿಲ್ ಗೇಟ್ಸ್(Bill Gate) ಬ್ರಸೆಲ್ಸ್‌ನ ಒಳಚರಂಡಿ ವಸ್ತುಸಂಗ್ರಹಾಲಯಕ್ಕೆ (Sewer Museum in Brussels) ಭೇಟಿ ನೀಡಲು ಒಳಚರಂಡಿಗೆ ಇಳಿದರು. ಗೇಟ್ಸ್ ಅವರು Instagram ನಲ್ಲಿ ಹಂಚಿಕೊಂಡ ವಿಡಿಯೊವು ಅವರು ಒಳಚರಂಡಿಗೆ ಇಳಿದು ಬ್ರಸೆಲ್ಸ್ ನ ಒಳಚರಂಡಿ ವ್ಯವಸ್ಥೆಯ ಗುಪ್ತ ಇತಿಹಾಸವನ್ನು ಅನ್ವೇಷಿಸುವುದನ್ನು ತೋರಿಸಿದೆ. ನಗರದ ನೀರಿನ ತ್ಯಾಜ್ಯ ವ್ಯವಸ್ಥೆಯ ಸಂಕೀರ್ಣ ಕಾರ್ಯನಿರ್ವಹಣೆಯನ್ನು ಅರ್ಥಮಾಡಿಕೊಳ್ಳಲು ಅವರು ವಿಜ್ಞಾನಿಗಳೊಂದಿಗೆ ಭೇಟಿಯಾಗುವುದನ್ನು ವಿಡಿಯೊ ತೋರಿಸಿದೆ. ಒಳಚರಂಡಿ ಮತ್ತು ಸಂಸ್ಕರಣಾ ಘಟಕಗಳ 200 ಮೈಲಿ ಜಾಲವು ನಗರದ ತ್ಯಾಜ್ಯವನ್ನು ಸಂಸ್ಕರಿಸುತ್ತದೆ. https://ainlivenews.com/do-you-know-which-are-the-most-visited-websites-by-indians/ ‘ಈ ವರ್ಷದ #WorldToiletDay ಗಾಗಿ ನಾನು ಬ್ರಸೆಲ್ಸ್‌ನ ಒಳಚರಂಡಿ ವ್ಯವಸ್ಥೆಯ ಗುಪ್ತ ಇತಿಹಾಸವನ್ನು-ಮತ್ತು ಜಾಗತಿಕ ಆರೋಗ್ಯದಲ್ಲಿ ತ್ಯಾಜ್ಯನೀರಿನ ಪಾತ್ರವನ್ನು ಅನ್ವೇಷಿಸಿದ್ದೇನೆ,’ ಎಂದು ವಿಡಿಯೊಗೆ ಶೀರ್ಷಿಕೆ ನೀಡಲಾಗಿದೆ. ನಾನು ಬ್ರಸೆಲ್ಸ್‌ನ ಭೂಗತ ವಸ್ತುಸಂಗ್ರಹಾಲಯದಲ್ಲಿ ಎಲ್ಲವನ್ನೂ ಅನುಭವಿಸಿದೆ. ನಗರದ ತ್ಯಾಜ್ಯನೀರಿನ ವ್ಯವಸ್ಥೆಯ ಇತಿಹಾಸವನ್ನು ದಾಖಲಿಸುವುದಾಗಿದೆ. 1800 ರ ದಶಕದಲ್ಲಿ ನಗರದ ಸೆನ್ನೆ ನದಿಗೆ ಒಳಚರಂಡಿಯನ್ನು ಸುರಿಯಲಾಯಿತು. ಅದು ಭಯಾನಕ ಕಾಲರಾ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಯಿತು.…

Read More

ಮೈಸೂರು:- ಮೈಸೂರಿನ ಬನ್ನಿಮಂಟಪದಲ್ಲಿ ಮೊಬೈಲ್ ಬಳಸುವ ವಿಚಾರಕ್ಕೆ ಶುರುವಾದ ಜಗಳ ಕೊನೆಗೆ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ಜರುಗಿದೆ. ಮೊಬೈಲ್ ಬಳಸುವ ವಿಚಾರದಲ್ಲಿ ತಂದೆ ಮಗನ ನಡುವೆ ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನಿಂದ ತಂದೆ ಅಸ್ಲಂಪಾಷ, ತನ್ನ ಮಗ ಉಮೇಜ್‌ಗೆ ಚಾಕುವಿನಿಂದ ಇರಿದಿದ್ದಾಣೆ. ಪರಿಣಾಮ ಉಮೇಜ್‌ ಮೃತಪಟ್ಟಿದ್ದಾನೆ. ಈ ಬಗ್ಗೆ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಸ್ಲಂಪಾಷನನ್ನು ಬಂಧಿಸಿದ್ದಾರೆ.

Read More