ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್ ಶೆಟ್ಟಿ (Rishabh Shetty) ನಿರ್ದೇಶಿಸಿ ನಟಿಸಿರುವ ‘ಕಾಂತಾರ’ (Kantara) ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಶಸ್ತಿಗೆ ಭಾಜನವಾಗಿದೆ. ಈ ಪ್ರಶಸ್ತಿಯನ್ನು (Award) ರಿಷಬ್ ಶೆಟ್ಟಿ, ತಮ್ಮ ನೆಚ್ಚಿನ ನಟ, ನಿರ್ದೇಶಕ ಶಂಕರ್ ನಾಗ್ (Shankar Nag) ಅವರಿಗೆ ಅರ್ಪಿಸಿದ್ದಾರೆ. ಈ ಪ್ರಶಸ್ತಿಯು ಹಿಂದೆ ಶಂಕರ್ ನಾಗ್ ಅವರಿಗೆ ಸಂದಿತ್ತು. ಈ ಬಾರಿ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ 15 ಚಿತ್ರಗಳು ಕಣದಲ್ಲಿದ್ದವು. ಈ ಪೈಕಿ ಭಾರತದಿಂದ ‘ಕಾಂತಾರ’ ಸೇರಿದಂತೆ ಒಟ್ಟು ಮೂರು ಚಿತ್ರಗಳು ಸ್ಪರ್ಧೆಯಲ್ಲಿದ್ದವು. ಈ ವಿಭಾಗದಲ್ಲಿ “ಕಾಂತಾರ” ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ…
Author: AIN Author
ಕಲಬುರಗಿ: ಬಸ್-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯ ಕಟ್ಟಿ ಸಂಗಾವಿ ಬಳಿ ಅಪಘಾತ ನಡೆದಿದೆ. ಶಶಿಕುಮಾರ್ (21), ಪ್ರಜ್ವಲ್ (22) ಮೃತ ದುರ್ದೈವಿಗಳಾಗಿದ್ದು,. ಸ್ನೇಹಿತರೊಬ್ಬರ ಬರ್ತ್ ಡೇ ಪಾರ್ಟಿಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಸಾರಿಗೆ ಬಸ್ಗೆ ಬೈಕ್ಗೆ ಮುಖಾಮುಖಿ ಡಿಕ್ಕಿಯಾಗಿದೆ. https://ainlivenews.com/do-you-know-which-are-the-most-visited-websites-by-indians/ ಗಂಭೀರ ಗಾಯಗೊಂಡಿದ್ದ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಜೇವರ್ಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಜೇವರ್ಗಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಮೈಸೂರು: ಕೆಲ ದಿನಗಳ ಹಿಂದೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವ್ಯಾಪ್ತಿಯಲ್ಲಿ 50 ವರ್ಷದ ಮಹಿಳೆಯನ್ನು ಕೊಂದಿದ್ದ ಹುಲಿ ಇಂದು ಮಂಗಳವಾರ ನಸುಕಿನ ಜಾವ 1.40ರ ಸುಮಾರಿಗೆ ಸೆರೆ ಸಿಕ್ಕಿದೆ. ಸೆರೆಸಿಕ್ಕ ಹತ್ತು ವರ್ಷದ ಗಂಡು ಹುಲಿ ಆರೋಗ್ಯವಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಮೈಸೂರು ಸಮೀಪದ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. https://ainlivenews.com/do-you-know-which-are-the-most-visited-websites-by-indians/ ನವೆಂಬರ್ 24 ರಂದು ಮಹಿಳೆಯನ್ನು ಕೊಂದಿದ್ದ ಹುಲಿ ಎರಡು ಜಾನುವಾರುಗಳನ್ನು ಕೊಂದಿತ್ತು. ಬೋನಿನೊಳಗೆ ಕಾದು ಕುಳಿತಿದ್ದ ಅರಣ್ಯ ಸಿಬ್ಬಂದಿ ಸಮಾಧಾನಪಡಿಸಿ ಹಸುವನ್ನು ತಿನ್ನಲು ಬಂದಾಗ ಸೆರೆ ಹಿಡಿದಿದ್ದಾರೆ. ಬಿಟಿಆರ್ ಕ್ಷೇತ್ರ ನಿರ್ದೇಶಕ ಡಾ.ಪಿ.ರಮೇಶ್ ಕುಮಾರ್, ಎಸಿಎಫ್ ಪರಮೇಶ್ ಕಾರ್ಯಾಚರಣೆ ವೇಳೆ ಹಾಜರಿದ್ದರು.
ಬೆಂಗಳೂರು: ಶಾಸಕ ಬಿಆರ್ ಪಾಟೀಲ್ (MLA BR Patil) ಸೂಕ್ಷ್ಮ ಸ್ವಭಾವದವರು. ಹೀಗಾಗಿ ಎಮೋಷನಲ್ ಆಗಿ ಈ ರೀತಿ ಪತ್ರ ಬರೆದಿರಬಹುದು ಎಂದು ಅಂತ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಶಾಸಕ ಬಿ.ಆರ್ ಪಾಟೀಲ್ ಪತ್ರ ಬರೆದಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿ.ಆರ್ ಪಾಟೀಲ್ ನಮಗೆಲ್ಲಾ ಹಿರಿಯ ನಾಯಕರು. ಅವರ ಮೇಲೆ ಅಪಾರ ಗೌರವ ನಮಗಿದೆ. ಅವರು ಸಜ್ಜನ ರಾಜಕಾರಣಿ. ತತ್ವ ಸಿದ್ದಾಂತದ ಮೇಲೆ ರಾಜಕಾರಣ ಮಾಡಿದವರು. ನಾನು ಚಿಕ್ಕವನಿಂದ ಅವರನ್ನ ನೋಡಿದ್ದೇನೆ. ಅವರ ನೋವನ್ನ ಅವರು ಹೇಳಿಕೊಂಡಿದ್ದಾರೆ. ಅವರ ಮೇಲೆ ಯಾರಾದರೂ ಆರೋಪ ಮಾಡಿದರೆ ಜನ ಒಪ್ಪಲ್ಲ ಎಂದರು. https://ainlivenews.com/big-relief-for-dks-check-out-dcms-first-reaction-here/ ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪಗಳು ಸಹಜ. ಬಿಆರ್ ಪಾಟೀಲ್ ಸೂಕ್ಷ್ಮ ಸ್ವಭಾವದವರುಹೀಗಾಗಿ ಎಮೋಷನಲ್ ಆಗಿ ಈ ರೀತಿ ಪತ್ರ ಬರೆದಿರಬಹುದು. ನಾನು ಆ ಪತ್ರ ನೋಡಿಲ್ಲ. ಸಿಎಂ ಅವರು ಬಿಆರ್ ಪಾಟೀಲ್ ಜೊತೆ ಮಾತಾಡ್ತಾರೆ. ಅವರ ಘನತೆಗೆ ಧಕ್ಕೆ ಬಾರದಂತೆ ತನಿಖೆ ಮಾಡಿಸುತ್ತಾರೆ ಎಂದರು. ಇದೇ ವೇಳೆ ಬಿಆರ್…
ವಿಜಯನಗರ: ಆಟ ಆಡುವಾಗ ಆಯತಪ್ಪಿ ನೀರಿನ ತೊಟ್ಟಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ವಿಸ್ಮೀತ( 3) ಮೃತಪಟ್ಟ ಬಾಲಕಿಯಾಗಿದ್ದು,. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದಲ್ಲಿ ಈ ದುರ್ಘಟನೆ ನಡೆದಿದೆ. https://ainlivenews.com/do-you-know-which-are-the-most-visited-websites-by-indians/ ನಾಗರಾಜ್ ಮತ್ತು ಕಾವೇರಿ ದಂಪತಿಯ ಮಗಳಾದ ವಿಸ್ಮೀತಾ ಆಟವಾಡುತ್ತಾ ನೀರಿನ ತೊಟ್ಟಿ ಬಳಿ ಬಂದಿದ್ದಾಳೆ. ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾಳೆ. ಕೂಡ್ಲಿಗಿ ಶಾಸಕ ಎನ್.ಟಿ ಶ್ರೀನಿವಾಸ್ ಮೃತ ಬಾಲಕಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಬೆಂಗಳೂರು: ಯಾರು ಯಾರು ಏನು ಮಾತನಾಡಿದ್ದಾರೆ ಎಲ್ಲ ನಮ್ರತೆಯಿಂದ ನೋಡ್ತಿದ್ದೇನೆ, ನೋಡಿದ್ದೇನೆ. ಸೂಕ್ತ ಸಮಯದಲ್ಲಿ ಅದಕ್ಕೆಲ್ಲ ಉತ್ತರ ಕೊಡ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shiva Kumar) ಹೇಳಿದ್ದಾರೆ. ಕೋರ್ಟ್ ಆದೇಶದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಸಿದ ಅವರು, ಯಾರು ಯಾರು ಏನು ಮಾತನಾಡಿದ್ದಾರೆ ಎಲ್ಲ ನಮ್ರತೆಯಿಂದ ನೋಡ್ತಿದ್ದೇನೆ, ನೋಡಿದ್ದೇನೆ. ಸೂಕ್ತ ಸಮಯದಲ್ಲಿ ಅದಕ್ಕೆಲ್ಲ ಉತ್ತರ ಕೊಡ್ತೇನೆ. ನಾನೇನು ತಪ್ಪು ಮಾಡಿಲ್ಲ. ನಾನು ಮಾಡಿದ್ದೆಲ್ಲ ಪಾರ್ಟಿ ಸಲುವಾಗಿ ಮಾಡಿದ ಕೆಲಸ. ಪಕ್ಷಕ್ಕೋಸ್ಕರ ನಾನು ಕೆಲಸ ಮಾಡಿದ್ದು. ಸಾಕಷ್ಟು ಅನುಭವಿಸಿದ್ದೇನೆ. ಮುಂದೆಯೂ ಕೂಡ ತೊಂದರೆ ಕೊಡ್ತೀನಿ ಅಂದ್ರೆ ಅದನ್ನು ನೋಡಲು ಭಗವಂತ ಇದ್ದಾನೆ. ನನಗೆ ತೊಂದರೆ ಕೊಟ್ಟಿದ್ದಕ್ಕೆ ಏನಾಯ್ತು ಅಂತ ರಾಜ್ಯದ ಜನರೇ ನೋಡಿದ್ದಾರೆ. ನನ್ನ ಪರವಾಗಿ ನಿಂತ ಎಲ್ಲರಿಗೂ ಕೋಟಿ ವಂದನೆ ಅಂತ ತಿಳಿಸಿದರು. https://ainlivenews.com/big-big-relief-for-dk-high-court-has-withdrawn-the-appeal-and-considered-the-appeal/ ಅಕ್ರಮ ಆಸ್ತಿ ಗಳಿಕೆ (Disproportionate Assets Case) ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿಗೆ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ವಾದ- ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು…
ಬೆಂಗಳೂರು : ಚೀನಾದಲ್ಲಿ ಕೊರೊನಾ ನಂತರ ಇದೀಗ ಮೈಕೋಪ್ಲಾಸ್ಮಾ ನ್ಯುಮೋನಿಯಾ ಹಾಗೂ ಇನ್ನುಯೆಂಝಾ ವೈರಸ್ ತೀವ್ರವಾಗಿ ಹರಡಿದ್ದು, ಈ ಸಂಬಂಧ ಆರೋಗ್ಯ ಇಲಾಖೆಯಿಂದ ರಾಜ್ಯಕ್ಕೆ ಹೊಸ ನಿಯಮಾವಳಿಗಳು ಬಂದಿವೆ. ಇದರ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಮೊನ್ನೆನೇ ತಾಂತ್ರಿಕ ಸಲಹಾ ಸಮಿತಿ ಇಂದ ಸಭೆ ಆಗಿತ್ತು ಹಾಗಾಗಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದ ಸಮಿತಿ ಇನ್ನು ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಅರೋಗ್ಯ ಇಲಾಖೆ https://ainlivenews.com/big-big-relief-for-dk-high-court-has-withdrawn-the-appeal-and-considered-the-appeal/ ಗೈಡ್ ಲೈನ್ಸ್ ಎಲ್ಲಾ ಜಿಲ್ಲಾ DHO ಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ILI ಹಾಗೂ SARI ಪ್ರಕರಣಗಳನ್ನು ವರದಿಯನ್ನು ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು ಸೊಂಕೀತರ ಚಿಕಿತ್ಸೆ ಗೆ ಅಗತ್ಯ ಓಷಧಿಗಳು ಹಾಗೂ PPE ಕಿಟ್ ಏನ್ 95 ಮಾಸ್ಕ್ ಕೋವಿಡ್ ಪರೀಕ್ಷಾ ಕಿಟ್ ಸ್ಟಾಕ್ ಇಡಬೇಕು ವೈದ್ಯಕೀಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ತುರ್ತು ವೈದ್ಯಕೀಯ ಪರಿಸ್ಥಿತಿ ಸರಿಯಾಗಿ ಇಡಬೇಕು ಆಕ್ಸಿಜನ್ ಬೆಡ್ ವೆಂಟಿಲೆಟರ್ ಆಂಬುಲೆನ್ಸ್…
ಕೋಲಾರ: ತಂದೆ-ತಾಯಿಯನ್ನು ನೋಡೋದಕ್ಕೆ ಆಗದಿದ್ದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿಯೊಬ್ಬ ವಸತಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಇಲಿ ಪಾಶಾಣ ಹಾಕಿದ್ದಾನೆ. ಈ ನೀರು ಕುಡಿದ ಮೂವರು ವಿದ್ಯಾರ್ಥಿಗಳು ಅಸ್ವಸ್ಥ ರಾಗಿದ್ದಾರೆ. ಬಂಗಾರಪೇಟೆ ತಾಲ್ಲೂಕು ಡೊಡ್ಡಪೊನ್ನಾಂಡಹಳ್ಳಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಂಬತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿಯೊಬ್ಬ ಪೋಷಕರಿಂದ ದೂರವಿದ್ದುದಕ್ಕೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ. ಆತನ ತಂದೆ ತಾಯಿ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, https://ainlivenews.com/do-you-know-which-are-the-most-visited-websites-by-indians/ ಮಗ ಚೆನ್ನಾಗಿ ಓದಲಿ ಅನ್ನೋ ಕಾರಣಕ್ಕೆ ವಸತಿ ಶಾಲೆಗೆ ಸೇರಿಸಿದ್ದರು. ಆದ್ರೆ ತಂದೆ-ತಾಯಿಯಿಂದ ದೂರವಿದ್ದುದರಿಂದ ಆತ ಖಿನ್ನತೆಗೆ ಒಳಗಾಗಿದ್ದ. ಶಾಲೆಗೆ ರಜೆ ಸಿಕ್ಕರೆ ಮನೆಗೆ ಹೋಗಬಹುದು ಎಂದು ಲೆಕ್ಕಚಾರ ಹಾಕಿದ್ದ. ಏನು ಮಾಡಿದರೆ ಶಾಲೆಗೆ ರಜೆ ಕೊಡಬಹುದು ಎಂದು ಯೋಚಿಸಿದ ಆತ, ಟ್ಯಾಂಕ್ಗೆ ಇಲಿ ಪಾಶಾಣ ಹಾಕಿದ್ದಾನೆ. ವಿದ್ಯಾರ್ಥಿಗಳಿಗೆ ತೊಂದರೆಯಾದರೆ ರಜೆ ಕೊಡುತ್ತಾರೆ. ಆಗ ಕೆಲ ದಿನ ಮನೆಗೆ ಹೋಗಬಹುದು. ತಂದೆ-ತಾಯಿಯನ್ನು ನೋಡಬಹುದು ಅನ್ನೋ ಆಸೆ ಅವನದಾಗಿತ್ತು. ಆದ್ರೆ…
ಬೆಂಗಳೂರು: ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಆ ಮೂಲಕ ಡಿ.ಕೆ.ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ವಿಚಾರಣೆಯನ್ನು ಬುಧವಾರ ಹೈಕೋರ್ಟ್ ಸಿಜೆ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ ಎಂದು ಕೋರ್ಟ್ ತಿಳಿಸಿತು.
ಬೆಂಗಳೂರು: ನಿಗಮ-ಮಂಡಳಿಯಲ್ಲಿ (Corporation Board) ಮೊದಲ ಬಾರಿ ಶಾಸಕರಾದವರು ಮತ್ತು ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಪಡೆದವರಿಗೆ ಸ್ಥಾನ ಕೊಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಸಿಎಂ, ಸುರ್ಜೇವಾಲ ಹಾಗೂ ನಾನು ಎಲ್ಲರೂ ಚರ್ಚೆ ಮಾಡಿ ಪಟ್ಟಿ ಅಂತಿಮ ಮಾಡಿದ್ದೇವೆ. ಸುರ್ಜೇವಾಲ (Randeep Surjewala) ಹೈಕಮಾಂಡ್ ಬಳಿ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಇವತ್ತು ಚುನಾವಣೆ ಪ್ರಚಾರ ಮುಗಿಯುತ್ತದೆ. ಆದಷ್ಟು ಬೇಗ ಪಟ್ಟಿ ಬಿಡುಗಡೆ ಆಗುತ್ತದೆ ಎಂದರು. ಮೊದಲ ಬಾರಿ ಶಾಸಕರಾದವರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ಇಲ್ಲ. ಅದೇ ರೀತಿ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ತೆಗೆದುಕೊಂಡು ಸ್ಪರ್ಧೆ ಮಾಡಿದವರಿಗೂ ನಿಗಮ-ಮಂಡಳಿ ಸ್ಥಾನ ಇಲ್ಲ ಎಂದರು. ಮೊದಲ ಹಂತದಲ್ಲಿ ಶಾಸಕರಿಗೆ ಕೊಡಲಾಗುತ್ತದೆ. ಕಾರ್ಯಕರ್ತರಿಗೆ ಎರಡನೇ ಹಂತದಲ್ಲಿ ಸ್ಥಾನ ಕೊಡುತ್ತೇವೆ ಎಂದು ತಿಳಿಸಿದರು.