ತಮಿಳಿನ ಖ್ಯಾತ ಖಳನಟ ಮನ್ಸೂರ್ ಅಲಿಖಾನ್ ಮತ್ತೆ ಕಲಾವಿದರ ವಿರುದ್ಧ ಸಿಡಿದೆದ್ದಿದ್ದಾರೆ. ದಕ್ಷಿಣದ ಹೆಸರಾಂತ ತಾರೆ ತ್ರಿಷಾ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ್ದ ಮನ್ಸೂರ್ ಮೇಲೆ ಕಲಾವಿದರು ಮತ್ತು ತಂತ್ರಜ್ಞರು ಮುಗಿ ಬಿದ್ದಿದ್ದರು. ಅದರಲ್ಲೂ ಖ್ಯಾತ ನಟ ಚಿರಂಜೀವಿ (Chiranjeevi), ತ್ರಿಷಾ ಮತ್ತು ಖುಷ್ಬೂ (Khushboo) ಪ್ರತಿಕ್ರಿಯೆ ನೀಡಿದ್ದರು. ಮನ್ಸೂರ್ ವಿರುದ್ಧ ದೂರು ಕೂಡ ನೀಡಲಾಗಿತ್ತು. ಆ ನಂತರ ಮನ್ಸೂರ್ ಕ್ಷಮೆ ಕೂಡ ಕೇಳಿದ್ದರು. ಅಲ್ಲಿಗೆ ಪ್ರಕರಣ ಸುಖಾಂತ್ಯವಾಗಿದೆ ಎಂದು ನಂಬಲಾಗಿತ್ತು. ಆದರೆ, ಮನ್ಸೂರ್ ಅಲಿಖಾನ್ ಮತ್ತೆ ಆ ಮೂವರು ಕಲಾವಿದರ ವಿರುದ್ಧ ಸಿಡಿದೆದ್ದಿದ್ದಾರೆ. ತಮ್ಮ ಮೇಲೆ ಸಲ್ಲದ ಆರೋಪ ಮಾಡಿರುವ ಚಿರಂಜೀವಿ, ತ್ರಿಷಾ ಮತ್ತು ಖುಷ್ಬೂ ವಿರುದ್ಧ ಮಾನನಷ್ಟ ಮೊಕದ್ದಮೆ (Defamation Suit) ಹೂಡುವುದಾಗಿ ಅವರು ತಿಳಿಸಿದ್ದಾರೆ. ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು.…
Author: AIN Author
ತಂತ್ರಜ್ಞಾನ ದುರ್ಬಳಕೆಯಿಂದ ರಶ್ಮಿಕಾ ಮಂದಣ್ಣ (Rashmika Mandanna) ಡೀಪ್ಫೇಕ್ (Deepafake) ವಿಡಿಯೋ ಸಖತ್ ವೈರಲ್ ಆಗಿತ್ತು. ಇದೀಗ ಆಲಿಯಾ ಭಟ್ಗೂ ಅದೇ ಕಂಟಕ ಎದುರಾಗಿದೆ. ಬೇರೆ ಯಾರದ್ದೋ ಮಹಿಳೆಯ ದೇಹಕ್ಕೆ ಆಲಿಯಾ ಮುಖವನ್ನ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಡೀಪ್ಫೇಕ್ ವಿಡಿಯೋ ವೈರಲ್ ಆದ ಬೆನ್ನಲೇ ಸೈಬರ್ ಕ್ರೈಂ ತಂಡ ಕಠಿಣ ಕ್ರಮ ಕೈಗೊಂಡರೂ ಕೂಡ ಮತ್ತೆ ಕಿಡಿಗೇಡಿಗಳಿಂದ ಕಾಟ ಶುರುವಾಗಿದೆ. ಈ ಸೋಷಿಯಲ್ ಮೀಡಿಯಾದಲ್ಲಿ ಅರೆ ಬರೆ ಬಟ್ಟೆಯಲ್ಲಿ ಸಖತ್ ಹಾಟ್ ಕಾಣಿಸಿಕೊಂಡಿರುವ ಯುವತಿಯ ದೇಹಕ್ಕೆ ಆಲಿಯಾ (Aliaa Bhatt) ಮುಖ ಅಂಟಿಸಿ ವೈರಲ್ ಮಾಡಿದ್ದಾರೆ. ಈ ಹಿಂದೆಯೂ ಕೂಡ ರಶ್ಮಿಕಾ ಡೀಪ್ಫೇಕ್ ವಿಡಿಯೋ ವೈರಲ್ ಆದಾಗ ಅಮಿತಾಭ್ ಬಚ್ಚನ್ ಸೇರಿದಂತೆ ಹಲವರು ಕಲಾವಿದರು ರಶ್ಮಿಕಾ ಪರ ಧ್ವನಿಯೆತ್ತಿದ್ದರು. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆ ಆಗಲೇಬೇಕೆಂದು ಅನೇಕರು ಮನವಿ ಮಾಡಿದ್ದರು.
ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾತಿ ಗಣತಿ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆಯಬೇಕು. ಅದರಲ್ಲಿ ಇರುವ ನ್ಯೂನತೆ ಹೊರಗಾಕುವ ಪ್ರಯತ್ನ ಮಾಡಬೇಕು. ಎಲ್ಲಾ ವರ್ಗದ ಪ್ರಮುಖರನ್ನು ಕರೆದು ಮಾತನಾಡುವ ಅವಶ್ಯಕತೆಯಿದೆ. ಡಿಸಿಎಂ ಡಿಕೆಶಿ ಅವರು ಸಹಿ ಮಾಡಿದ್ದು ದೊಡ್ಡ ಅಪರಾಧ ಅಲ್ಲ. ರಾಜ್ಯ ಬಿಜೆಪಿ ರಿಪೇರಿ ಮಾಡಲಾಗದಷ್ಟು ಪರಿಸ್ಥಿತಿ ದುಸ್ಥಿತಿ ತಲುಪಿದೆ. ಯಾರೇ ಅಧ್ಯಕ್ಷರಾದರು ಅದನ್ನು ರಿಪೇರಿ ಮಾಡಲಾಗದು ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. https://ainlivenews.com/visa-free-entry-for-indians-to-malaysia-from-now-on/ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅರವಿಂದ್ ಲಿಂಬಾವಳಿ, ಸೋಮಣ್ಣ ಸೇರಿದಂತೆ ಹಲವರು ಅಸಮಾಧಾನ ಧ್ವನಿ ಎತ್ತಿದ್ದಾರೆ. ಧ್ವನಿ ಎತ್ತಿದವರ ಮನೆಗೆ ಹೋಗಿ ಬಂದ್ರೆ ಎಲ್ಲಾ ಸರಿ ಆಗಲ್ಲ. ಬಿಜೆಪಿ ಕಾರ್ಯಕರ್ತರು ನನ್ನ ಬಳಿ ನೋವು ಹೊರ ಹಾಕುತ್ತಿದ್ದಾರೆ. ನಮ್ಮದು ಲೀಡರ್ ಲೆಸ್ ಪಾರ್ಟಿ ಅಂತ ಅಳಲು ತೋಡಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ. ಬಿಜೆಪಿ ಈಡಿ ಮತ್ತು ಐಟಿ ಮೂಲಕ ರಾಜಕೀಯ ಮಾಡುತ್ತಿದೆ. ವಿಪಕ್ಷಗಳು ಇರಲೇ…
ಟಾಸ್ಕ್ ಆಡುತ್ತಿದ್ದಾಗ ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಅವಘಡ ಸಂಭವಿಸಿದೆ. ಈ ಕಾರಣದಿಂದಾಗಿ ಸ್ಟ್ರಾಂಗ್ ಕಂಟೆಸ್ಟೆಂಟ್ ಆಗಿರುವ ತನಿಷಾ ಕುಪ್ಪಂಡ (Tanisha Kuppanda) ಮನೆಯಿಂದ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಟಾಸ್ಕ್ ಆಡುವಾಗ ಅವರಿಗೆ ಬಲವಾದ ಪೆಟ್ಟು ಬಿದ್ದಿದ್ದು, ಚಿಕಿತ್ಸೆಗಾಗಿ (Treatment) ಅವರನ್ನು ಮನೆಯಿಂದ ಕಳುಹಿಸಲಾಗಿದೆ ಎನ್ನುವ ಮಾಹಿತಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಡ್ರೋನ್ ತಂಡದಲ್ಲಿ ಪವಿ, ತುಕಾಲಿ, ನಮ್ರತಾ, ವರ್ತೂರು, ಸಿರಿ, ಆಟ ಆಡಿದ್ರೆ, ಮೈಕಲ್ ಟೀಮ್ನಲ್ಲಿ ತನಿಷಾ, ವಿನಯ್, ಸ್ನೇಹಿತ್, ಸಂಗೀತಾ, ಅವಿನಾಶ್ ಶೆಟ್ಟಿ ತಂಡವಾಗಿ ರೂಪುಗೊಂಡಿದ್ದಾರೆ. ಎರಡು ತಂಡ ಟಾಸ್ಕ್ವೊಂದರಲ್ಲಿ ಆಟ ಆಡುವಾಗ ತನಿಷಾ ಕಾಲಿಗೆ ಪೆಟ್ಟಾಗಿದ್ದು, ತುಂಬಾ ನೋವಿನಿಂದ ಒದ್ದಾಡಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗೆ ಕಳುಹಿಸಲಾಗಿದೆ. ಬಿಗ್ ಬಾಸ್ ಟೀಮ್ ಕಡೆಯಿಂದ ಬಂದು ತನಿಷಾ ಅವರನ್ನು ಚಿಕಿತ್ಸೆಗಾಗಿ ಹೊರ ಕರೆದುಕೊಂಡು ಹೋಗಿದ್ದಾರೆ. ಸಣ್ಣ ಪುಟ್ಟ ಏಟಾಗಿದ್ದರೆ ಆದಷ್ಟು ಬೇಗ ಬಿಗ್ ಬಾಸ್ಗೆ ಬರಲಿದ್ದಾರೆ. ಹೆಚ್ಚಿನ ಚಿಕಿತ್ಸೆ ಬೇಕಿದ್ರೆ ಮತ್ತೆ ಬಿಗ್ ಬಾಸ್ಗೆ ಬರೋದು…
ಈ ಹಿಂದೆ ನಿಶ್ಚಾತಾರ್ಥ ಮುರಿದು ಬಿದ್ದ ಕಾರಣದಿಂದಾಗಿ ಮದುವೆಯನ್ನೇ (Wedding) ಮರೆತಿದ್ದ ಪೂಜಾ ಗಾಂಧಿ (Pooja Gandhi), ಇದೀಗ ಎಲ್ಲ ಕಹಿ ಘಟನೆಗಳನ್ನು ಮರೆತು ಮತ್ತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ರಂಗದಿಂದಲೂ ದೂರವಿರುವ ಪೂಜಾ, ಕನ್ನಡ ಕಲಿಕೆಯ ಕಾರಣದಿಂದಾಗಿ ಸಖತ್ ಸುದ್ದಿಯಾಗಿದ್ದರು. ಇದೀಗ ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಗೆ ಬಂದಿದ್ದಾರೆ. ಮಳೆ ಹುಡುಗಿ ಎಂದೇ ಖ್ಯಾತಿಯ ಆಗಿರುವ ಪೂಜಾ ಗಾಂಧಿ ಇಂದು ಮದುವೆ ಆಗುತ್ತಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಆಪ್ತರು ಹೇಳುವಂತೆ ಇಂದು ಉದ್ಯಮಿ ಜೊತೆ ಅವರು ಮಂತ್ರ ಮಾಂಗಲ್ಯ (Mantra Mangalya)ಮಾದರಿಯಲ್ಲಿ ಮದುವೆ ಆಗುತ್ತಿದ್ದಾರೆ ಎನ್ನಲಾಗಿತ್ತು. ಅದೀಗ ಎಲ್ಲವೂ ನಿಜವಾಗಿದೆ. ಸ್ವತಃ ಪೂಜಾ ಗಾಂಧಿಯವರೆ ಮಾಧ್ಯಮಗಳಿಗೆ ತಮ್ಮ ಮದುವೆ ಕುರಿತಾಗಿ ಪತ್ರ ಬರೆದಿದ್ದಾರೆ ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ (Vijay Ghorpade) ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್…
ಬಳ್ಳಾರಿ:- ಜಿಲ್ಲೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಬರ ಪರಿಶೀಲನೆ ಮಾಡಿದ್ದಾರೆ. ಜಿಲ್ಲೆಯ ಸಂಡೂರು ತಾಲ್ಲೂಕಿನ ಕೋಡಾಲು ಹಾಗೂ ರಾಜಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಬರ ಪರಿಶೀಲನೆ ಮಾಡಿದ್ದಾರೆ. ಹತ್ತಿ, ನವಣೆ ಮತ್ತು ಸಜ್ಜೆ ಜಮೀನುಗಳಿಗೆ ಸಚಿವರು ಭೇಟಿ ನೀಡಿದ್ದು, ಮಳೆ ಇಲ್ಲದೆ ಅನಾವೃಷ್ಠಿಯಿಂದ ಹಾಳಾಗಿರುವ ಬೆಳೆ ಹಾನಿ ಪರಿಶೀಲನೆ ಮಾಡಿದ್ದಾರೆ. ಸಂಡೂರು ತಾಲ್ಲೂಕಿನ ಕೋಡಾಲು ಗ್ರಾಮ ವ್ಯಾಪ್ತಿಯ ರೈತ ಮಾರೆಪ್ಪನ ನವಣೆ, ಹತ್ತಿ ಬೆಳೆ ವೀಕ್ಷಣೆ ಮಾಡಿದ್ದಾರೆ. ಇದೇ ವೇಳೆ ಬೆಳೆ ಹಾನಿ ಕುರಿತು ಅಧಿಕಾರಿಗಳು ಹಾಗೂ ರೈತರಿಂದ ಸಚಿವರು ಮಾಹಿತಿ ಪಡೆದಿದ್ದಾರೆ. ಫೂಟ್ಸ್ ಐಡಿಯಲ್ಲಿ ರೈತರು ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನನ್ನು ನೋಂದಣಿ ಮಾಡಿಸಿಕೊಳ್ಳಲು ಸಲಹೆ ನೀಡಿದ್ದಾರೆ. ಇದರಿಂದ ಬರ ಪರಿಹಾರ ನೀಡಲು ಅನುಕೂಲವಾಗಲಿದೆ. ಈಗಾಗಲೇ ರಾಜ್ಯದ ಬರ ಪರಿಸ್ಥಿತಿಯ ಕುರಿತು ಕೇಂದ್ರದ ಕೃಷಿ ಸಚಿವರ ಜೊತೆ ಸಭೆ ನಡೆಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ತಿಂಗಳ ಅಂತ್ಯದಲ್ಲಿ ಕೇಂದ್ರ ಸರ್ಕಾರವು ಬರ…
ಹಾವೇರಿ:- 536ನೇ ಕನಕ ಜಯಂತ್ಯೋತ್ಸವ ಹಿನ್ನೆಲೆ ಇಂದು CM ಕಾಗಿನಲೆಗೆ ಭೇಟಿ ಹಿನ್ನೆಲೆ ಶ್ರೀಕ್ಷೇತ್ರ ಕಾಗಿನಲೆ ಗ್ರಾಮದಲ್ಲಿ ಫುಲ್ ಟೈಟ್ ಸೆಕ್ಯೂರಿಟಿ ನೀಡಲಾಗಿದೆ. CM ಸಿದ್ದರಾಮಯ್ಯ ಅವರು, ಕನಕ ಜಯಂತ್ಯೋತ್ಸದ ಉದ್ಘಾಟನೆ ಮಾಡಲಿದ್ದಾರೆ. ಕನಕದಾಸರ ನೆಲದಲ್ಲಿ ಬೃಹತ್ ಕನಕ ವೇದಿಕೆ ಸಜ್ಜಾಗಿದೆ. ವೇದಿಕೆ ಮುಂಭಾಗದಲ್ಲಿ ಸಾವಿರಾರೂ ಜನರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಅದ್ದೂರಿ ಕನಕ ಜಯಂತ್ಯೋತ್ಸಕ್ಕೆ ಲಕ್ಷಾಂತರು ಭಕ್ತರು ಆಗಮಿಸೋ ಸಾಧ್ಯತೆ ಇದ್ದು, ಈ ಹಿನ್ನಲೆ ಅಹಿತಕರ ನಡೆಯದಂತೆ ಖಾಕಿ ಸರ್ಪಗಾವಲು ಮಾಡಲಾಗಿದೆ. ಜಿಲ್ಲಾಡಳಿತದಿಂದ 700 ಅಧೀಕ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ಮದ್ದೂರು:- ಆರ್.ಅಶೋಕ್ ಒಬ್ಬ ಬೋಗಸ್ ಮನುಷ್ಯ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ದ ಕೈ ಶಾಸಕ ಕದಲೂರು ಉದಯ್ ವಾಗ್ದಾಳಿ ಮಾಡಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಉದಯ್, ನಾನು ಹೊಸದಾಗಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನಾನು ತಿಳಿದುಕೊಳ್ಳಬೇಕಾದದ್ದು ಬಹಳಷ್ಟು ಇದೆ. ಶಾಸಕನ ಕೆಲಸ ಏನೆಂದು ತಿಳಿದುಕೊಂಡು ಒಂದಷ್ಟು ಜನಗಳ ಸೇವೆ ಮಾಡೋಣಾ. ಆನಂತರ ಟಿಕಾಕಾರರಿಗೆ ಉತ್ತರಿಸೋಣ ಎಂದರು. ನಿಗಮ ಮಂಡಳಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಪೈಪೋಟಿ ವಿಚಾರವಾಗಿ ಮಾತನಾಡಿ, ನಮ್ಮಲ್ಲಿ ಯಾವುದೇ ರೀತಿಯಾದಂತಹ ಭಿನ್ನಾಭಿಪ್ರಾಯ ಇಲ್ಲ. ಡಿಕೆ ಶಿವಕುಮಾರ್ ಕೂಡ ನಮ್ಮ ನಾಯಕರೇ, ಸಿದ್ದರಾಮಯ್ಯ ಕೂಡ ನಮ್ಮ ಮುಖ್ಯಮಂತ್ರಿಗಳೇ. ಎಲ್ಲವನ್ನ ಸಮಾಧಾನವಾಗಿ ಸಮನಾಗಿ ಎಲ್ಲರಿಗೂ ಹಂಚುತ್ತಾರೆ. ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಹಿರಿಯತನ ಸೇವೆ ಆಧರಿಸಿ ನಿಗಮ ಮಂಡಳಿ ಸ್ಥಾನ ಕೊಡ್ತಾರೆ. ನಾನು ಯಾವುದೇ ನಿಗಮ ಮಂಡಳಿಯ ಆಕಾಂಕ್ಷಿಯಲ್ಲ. ನಾನು ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದರು. ಸಿಎಂ ಸಿದ್ದರಾಮಯ್ಯ ಜನತಾದರ್ಶನವನ್ನ ಆರ್.ಅಶೋಕ್ ಟೀಕಿಸಿದ ವಿಚಾರವಾಗಿ ಮಾತನಾಡಿ, ಅಶೋಕ್ ಒಬ್ಬ ಬೋಗಸ್…
ವಿಜಯಪುರ:- ಅಯ್ಯಪ್ಪ ಸ್ವಾಮಿ ಬಗ್ಗೆ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಪ್ರಕರಣ ನಡೆದಿದೆ. ಈ ಹಿಂದೆ ಇಂತಹದ್ದೇ ಪ್ರಕರಣದಲ್ಲಿ ಜೈಲು ಸೇರಿದ್ದ ಈತ ಮತ್ತೆ ಅದೇ ಚಾಳಿ ಮುಂದುವರಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಯ್ಯಪ್ಪ ಮಾಲಾಧಾರಿಗಳು ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಗೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಿಂದಗಿಯ ಜಗದೀಶ್ ಕಲಬುರ್ಗಿ ಎಂಬಾತ ತನ್ನ ಫೇಸ್ಬುಕ್ ಖಾತೆಯಲ್ಲಿ ಅಯ್ಯಪ್ಪ ಸ್ವಾಮಿ ಹುಟ್ಟಿನ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ. ಸದ್ಯ, ಅಯ್ಯಪ್ಪ ಸ್ವಾಮಿ ಬಗ್ಗೆ ಅಪಮಾನ ಮಾಡಿದ ಆರೋಪಿ ಜಗದೀಶ ಕಲಬುರ್ಗಿ ವಿರುದ್ಧ ಆಕ್ರೋಶಗೊಂಡಿರುವ ಮಾಲಾಧಾರಿಗಳು ಸಿಂದಗಿ ಪೊಲೀಸ್ ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಅಲ್ಲದೆ, ಅಯ್ಯಪ್ಪ ಸ್ವಾಮೀ ಹುಟ್ಟಿನ ಬಗ್ಗೆ ಅವಮಾನಕಾರಿಯಾಗಿ ಪೋಸ್ಟ್ ಮಾಡಿರುವ ಜಗದೀಶ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀ ಧರ್ಮಶಾಸ್ತ್ರ ಸೇವಾ ಸಮೀತಿಯಿಂದ ದೂರು ನೀಡಿದ್ದಾರೆ
ಹಾವೇರಿ: ಕನಕ ಜಯಂತ್ಯೋತ್ಸವ (Kanaka Jayanthi) ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಹಾವೇರಿ (Haveri) ಜಿಲ್ಲೆಗೆ ಭೇಟಿ ನೀಡಲಿದ್ದು, ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಹೆಚ್ಎಎಲ್ (HAL) ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ. ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಯತ್ತ (Hubballi) ಸಿಎಂ ತೆರಳಲಿದ್ದು, ಹುಬ್ಬಳ್ಳಿಯಿಂದ 12:10ಕ್ಕೆ ಕಾಗಿನೆಲೆ (Kaginele) ಹೆಲಿಪ್ಯಾಡ್ಗೆ ಬಂದಿಳಿಯಲಿದ್ದಾರೆ. ನಂತರ 1:45ಕ್ಕೆ 536ನೇ ಕನಕ ಜಯಂತ್ಯೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 2 ಗಂಟೆಗೆ ಕದರಮಂಡಲಗಿ ಗ್ರಾಮದ ನೂತನ ಶಾಲಾ ಕಟ್ಟಡ ಉದ್ಘಾಟನೆಯಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ಸುಮಾರು 3:30ಕ್ಕೆ ರಸ್ತೆ ಮಾರ್ಗವಾಗಿ ಕದರಮಂಡಲಗಿಯಿಂದ ಕಾಗಿನೆಲೆ ಹೆಲಿಪ್ಯಾಡ್ ಮೂಲಕ ಹುಬ್ಬಳ್ಳಿಯತ್ತ ತೆರಳಲಿದ್ದು, ಸಂಜೆ 4:45ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿನತ್ತ ಸಿಎಂ ಪ್ರಯಾಣ ಬೆಳೆಸಲಿದ್ದಾರೆ. https://ainlivenews.com/visa-free-entry-for-indians-to-malaysia-from-now-on/ ಕಾಗಿನೆಲೆಗೆ ಸಿಎಂ ಭೇಟಿ ಹಿನ್ನೆಲೆ ಕಾಗಿನಲೆ ಗ್ರಾಮದಲ್ಲಿ ಫುಲ್ ಟೈಟ್ ಸೆಕ್ಯೂರಿಟಿ ನಿಯೋಜಿಸಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕನಕ ಜಯಂತ್ಯೋತ್ಸವ ಉದ್ಘಾಟನೆ ಮಾಡಲಿದ್ದು, ಕನಕದಾಸರ…