ಬೆಂಗಳೂರು:- ಮಧು ಬಂಗಾರಪ್ಪ ಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಎಂಬ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೋಸ್ಟ್ ಮಾಡಲಾಗಿದೆ. ಅಲ್ಲದೆ, ಸಾವಿರಾರು ಕೋಟಿ ಹಗರಣ ನಡೆಸಿದ್ದನ್ನು ಮುಂದಿಟ್ಟುಕೊಂಡು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಅಣಕಿಸಿ ಪೋಸ್ಟ್ ಮಾಡಲಾಗಿದೆ. ಫೇಸ್ಬುಕ್ ಗ್ರೂಪ್ ಡಿಪಿಯಲ್ಲಿ ಮಧು ಬಂಗಾರಪ್ಪ ಪೋಟೋ ಇದ್ದು, 58 ಸಾವಿರ ಫಾಲೋವರ್ಗಳಿದ್ದಾರೆ. ಈ ಪೇಸ್ಬುಕ್ ಗ್ರೂಪ್ ಅನ್ನು ಕುಂದಾಪುರ ವಿರಾಟ ಹೆಸರಿನ ಪೇಸ್ಬುಕ್ ಬಳಕೆದಾರರು ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಅಣಕಿಸುವ ಪೋಸ್ಟ್ನಲ್ಲಿ “ಯೇ ಹೈ ಅಚ್ಚೇ ದಿನ್, ದೇಶವನ್ನು ನುಂಗಿ ನೀರು ಕುಡಿದಿದ್ದ ಕಾಂಗ್ರೇಸ್. ಬಹಳ ಜನ ಅಚ್ಚೇ ದಿನ್ ಎಲ್ಲಿ ಅಂತ ಕೇಳಿದ್ದರು. ಇದು ಅಚ್ಚೇ ದಿನ್ ನೋಡಿ ಖುಷಿ ಪಡಿ ಎಂದು ಬರೆದುಕೊಳ್ಳಲಾಗಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಜಿ.ಡಿ ಮಂಜುನಾಥ್ ಎಂಬವರು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು…
Author: AIN Author
ಮಂಡ್ಯ:- ಬಿಜೆಪಿ ನಾಯಕರು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಮರೆತೇ ಬಿಟ್ಟರಾ? ಹೀಗೊಂದು ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಬಿಜೆಪಿ ನಾಯಕರು ಇತ್ತೀಚೆಗಿನ ದಿನಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಜತೆಗೆ ರಾಜಕೀಯಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಗಳನ್ನು ನೀಡುತ್ತಿಲ್ಲ. ಇದೆಲ್ಲವನ್ನು ಗಮನಿಸಿದರೆ ಚುನಾವಣೆ ಮುನ್ನವೇ ಬೇಡವಾದರಾ? ಎಂಬ ಸಂಶಯ ಕಾಡಲಾರಂಭಿಸಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡ ಸುಮಲತಾ ಅವರಿಗೆ ಯಾವುದೇ ರಾಜಕೀಯ ಪಕ್ಷ ಅನಿವಾರ್ಯವಲ್ಲ. ಆದರೆ ಕಳೆದ ಚುನಾವಣೆಗೂ ಈ ಬಾರಿ ನಡೆಯಲಿರುವ ಚುನಾವಣೆಗೆ ಬಹಳಷ್ಟು ವ್ಯತ್ಯಾಸಗಳಿರುವುದರಿಂದ ಮತ್ತು ಸದ್ಯ ಅವರನ್ನು ಮತದಾರರು ಕೂಡ ರಾಜಕಾರಣಿಯನ್ನಾಗಿಯೇ ನೋಡುವುದರಿಂದ, ಹಿಂದಿನ ಅನುಕಂಪ ಈ ಬಾರಿ ದೊರೆಯುವುದು ದೂರದ ಮಾತಾಗಿದೆ. ಜೆಡಿಎಸ್ ನೊಂದಿಗಿನ ಮೈತ್ರಿ ಬಳಿಕದ ಬೆಳವಣಿಗೆಗಳು ಸುಮಲತಾ ಅವರಿಗೆ ಪೂರಕನಾ? ಮಾರಕನಾ? ಎಂಬುದು ಈಗ ಎಲ್ಲರ ಮುಂದಿರುವ ಕುತೂಹಲವಾಗಿದೆ. ಈ ಹಿಂದೆಯೇ ನಾನು ರಾಜಕೀಯ ಬಿಡುತ್ತೇನೆ ಆದರೆ ಸ್ವಾಭಿಮಾನ ಬಿಡಲ್ಲ. ನಾನು ಮಂಡ್ಯದವಳು ಮಂಡ್ಯದಲ್ಲಿಯೇ ಇರುತ್ತೇನೆ. ಇಲ್ಲಿಯೇ…
ಗದಗ:- ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ CBI ತನಿಖೆ ವಾಪಸ್ ವಿಚಾರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಡಿಸಿಎಂ ಡಿಕೆಶಿ ಕೇಸ್ ವಿಚಾರದ ಸಂಪುಟ ತೆಗೆದುಕೊಂಡ ನಿರ್ಧಾರ ಸರಿಯಾಗಿದೆ. ಹಿಂದಿನ ಸರ್ಕಾರ ಕಾನೂನು ಬಾಹಿರವಾಗಿ ತನಿಖೆಗೆ ಕೊಟ್ಟಿತ್ತು. ಕಾನೂನಿನ ಪ್ರಕಾರ ಸರಿಯಾಗಿ ಇರಲಿಲ್ಲ. ಸಂಪುಟ ನಿರ್ಣಯದ ಆದೇಶ ಹೊರಡಿಸಿದ ನಂತರ ಸೂಕ್ತ ಮಾಹಿತಿ ಸಿಗಲಿದೆ.. ಸ್ಪೀಕರ ಅನುಮತಿ ಇರಲಿಲ್ಲ, ಅಡ್ವೆಕೆಟ್ ಜನರಲ್ ಅಭಿಪ್ರಾಯದಂತಿಲ್ಲ.ಲಿಖಿತ ಆದೇಶ ಇರಲಿಲ್ಲ.. ಇವೆಲ್ಲ ಕಾನೂನು ಬಾಹೀರ ಹೆಜ್ಜೆಗಳು. ಹೀಗಾಗಿ ಆಗಿನ ಸರ್ಕಾರದ ನಿರ್ಣಯವನ್ನ ಸಂಪುಟ ತಿರಸ್ಕಾರ ಮಾಡಿದೆ.ಕೋರ್ಟ್ ನಲ್ಲಿ ಇರುವಾಗ ಮಾಡ್ಬಾರ್ದು ಅಂತಾ ನಿರ್ಬಂಧ ಇಲ್ಲ. ಸಚಿವ ಸಂಪುಟ ತನ್ನ ವ್ಯಾಪ್ತಿಯಲ್ಲಿ ಏನ್ ನಿರ್ಣಯ ಮಾಡ್ಬಹುದಿತ್ತೊ ಆ ನಿರ್ಣಯ ಮಾಡಿದೆ ಎಂದರು ಲೋಕಸಭೆ ಚುನಾವಣೆಗೆ ಹಿರಿಯ ಸಚಿವರನ್ನ ಕಣಕ್ಕಿಳಿಸುವ ವಿಚಾರವಾಗಿ ಮಾತನಾಡಿ, ನನ್ನ ಹೆಸರು ಪ್ರಸ್ತಾಪವಾಗಿರುವ ವಿಚಾರ ಗೊತ್ತಿಲ್ಲ.. ಹೈಕಮಾಂಡ್ ನಿರ್ಣಯವನ್ನ ಎಲ್ಲ ಕಾರ್ಯಕರ್ತರು ಕೇಳಬೇಕಾಗುತ್ತದೆ.…
ಕೋಲಾರ:- ವಾಮಾಚಾರಕ್ಕಾಗಿ ಮೃತದೇಹ ಹೊರ ತೆಗೆದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಹೆಬ್ಬಟ ಕ್ರಾಸ್ ನಲ್ಲಿ ಜರುಗಿದೆ. ಕಳೆದ 20 ದಿನಗಳ ಹಿಂದೆ, ಮೂರುವರೆ ವರ್ಷದ ಮಗುವಿನೊಂದಿಗೆ ತಾಯಿ ಮೆಹದಿ ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿನ ನಂತರ, ಹೆಬ್ಬಟ ಕ್ರಾಸ್ ನ ಸ್ಮಶಾನದಲ್ಲಿ ಸಂಸ್ಕಾರ ಮಾಡಲಾಗಿತ್ತು. ನವೆಂಬರ್ 19 ರಂದು ಮಗುವಿನ ಶವ ಹೊರತೆಗೆದು ಕೂದಲು ಹಾಗು ಮಗು ಧರಿಸಿದ್ದ ಬಟ್ಟೆ ತೆಗೆದುಕೊಂಡಿರುವ ಆರೋಪ ಕೇಳಿ ಬಂದಿದೆ. ಮೃತ ಹಮಿದ ಪೋಷಕರಿಂದ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ಹಮಿದ ಪತಿ ಶೊಯಬ್ ಸೂಚನೆಯಂತೆ, ಮಗುವಿನ ಶವ ಹೊರ ತೆಗೆದು ಕೃತ್ಯ ಆರೋಪ ಮಾಡಲಾಗಿದೆ. ಸ್ಮಶಾನಕ್ಕೆ ತೆರಳಿ, ಶವ ಹೊರತೆಗೆದಿದ್ದಾರೆಂದು ಶ್ರೀರಾಮ್ ಹಾಗು ನಾರಾಯಣಸ್ವಾಮಿ ಎನ್ನುವರ ವಿರುದ್ದ ಪ್ರಕರಣ ದಾಖಲಾಗಿದೆ. ನವೆಂಬರ್ 19 ರಂದು ಬೆಳ್ಳಂ ಬೆಳಗ್ಗೆ ಇಬ್ಬರು ಸ್ಮಶಾನಕ್ಕೆ ತೆರಳಿ, ತಡವಾಗಿ ವಾಪಾಸ್ ಆಗಿದ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಾಮಾಚಾರ ಮಾಡಲೆಂದು ಮಗುವಿನ ಮೃತದೇಹ ಹೊರಗೆದಿರುವ ಆರೋಪ ಕೇಳಿ…
ಬೆಂಗಳೂರು:- BBMP ನರ್ಸರಿ ಶಾಲಾ ಕಟ್ಟಡ ಕುಸಿತದ ಬಗ್ಗೆ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಗುತ್ತಿಗೆದಾರರ ವಿರುದ್ಧ ಕಾನೂನು ಅಡಿಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ ಮಧು ಬಂಗಾರಪ್ಪ, ಯಾವ ರೀತಿಯಲ್ಲಿ ಕಟ್ಟಡ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಸಂಪೂರ್ಣ ಮಾಹಿತಿ ತೆಗೆದುಕೊಳ್ಳುತ್ತೇನೆ ಎಂದರು. ಯಾರಿಗಾದರೂ ಅನಾಹುತವಾದಾಗ ಪರಿಹಾರ ನೀಡುತ್ತೇವೆ, ಇದುವೇ ಪರಿಹಾರ ಅಲ್ಲ. ಇಂತಹ ಸಂದರ್ಭ ಮರುಕಳಿಸದಂತೆ ನೋಡಿ ಕೊಳ್ಳಬೇಕು. ಸಾರ್ವಜನಿಕರ ಯಾವುದೇ ಕಟ್ಟಡವಾಗಲಿ ಜವಾಬ್ದಾರಿ ತೆಗೆದುಕೊಳ್ಳಬೇಕು. ಕಟ್ಟಡಗಳು ಶಿಥಿಲಗೊಂಡಿದ್ದರೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಮಕ್ಕಳ ಸುರಕ್ಷತೆ ಬಗ್ಗೆ ಮೊದಲು ನೋಡಬೇಕು, ನಂತರ ಶಿಕ್ಷಣ ಎಂದರು. ಶಾಲಾ ಕಾಲೇಜು ಕಟ್ಟಡಗಳ ನಿರ್ಮಾಣವನ್ನ ಸರ್ಕಾರದಿಂದ ನಿಲ್ಲಿಸಲಾಗಿತ್ತು. ಕಟ್ಟಡ ಕಾಮಗಾರಿಗಳನ್ನ ಹೊಸ ಸರ್ಕಾರ ಬಂದ ತಕ್ಷಣ ನಿಲ್ಲಿಸಲಾಗಿತ್ತು. ಆದರೆ ಇವಾಗ ಹಣ ಬಿಡುಗಡೆ ಮಾಡಲಾಗಿದೆ. ಇವಾಗ ಯಾವುದೇ ಸಮಸ್ಯೆ ಇಲ್ಲ, 8500 ಕಟ್ಟಡಗಳ ಕಾಮಗಾರಿ ಕೆಲಸ ಆರಂಭವಾಗಿದೆ. ಇಂತಹ ಹೇಳಿಕೆಗಳು ವಿರೋಧ ಪಕ್ಷಗಳಿಂದ ಬರುವುದು ಸಹಜ ಎಂದರು.…
ನವದೆಹಲಿ:- ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿದೇಶ ಪ್ರಯಾಣಕ್ಕೆ ಡಿಕೆಶಿ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ದೆಹಲಿ ನ್ಯಾಯಾಲಯದ ತೆಗೆದುಹಾಕಿದ್ದು, ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದೆ. ಡಿಕೆಶಿ ಸಲ್ಲಿಸಿದ ಅರ್ಜಿಯ ಮೇರೆಗೆ ನವೆಂಬರ್ 29ರಿಂದ ಡಿಸೆಂಬರ್ 3 ರವರೆಗೆ ದುಬೈಗೆ ಪ್ರಯಾಣಿಸಲು ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅನುಮತಿ ನೀಡಿದ್ದಾರೆ. ದುಬೈನಲ್ಲಿ ನಡೆಯಲಿರುವ ಮುಂಬರುವ COP28 ಗೆ ಹಾಜರಾಗಲು COP28 ನಿಯೋಜಿತ ಅಧ್ಯಕ್ಷ ಡಾ ಸುಲ್ತಾನ್ ಅಹ್ಮದ್ ಅಲ್ ಜಾಬರ್ ಹಾಗೂ ವಿಶ್ವ ಸಂಸ್ಥೆಯ ಮಹಾ ಪ್ರಧಾನಕಾರ್ಯದರ್ಶಿ ಸೆಕ್ರೆಟರಿ ಜನರಲ್ ಅವರ ಹವಾಮಾನ ಮಹತ್ವಾಕಾಂಕ್ಷೆ ಮತ್ತು ಪರಿಹಾರದ ವಿಶೇಷ ರಾಯಭಾರಿ ಮೈಕೆಲ್ ಆರ್ ಬ್ಲೂಮ್ಬರ್ಗ್ ಆಹ್ವಾನಿಸಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಇದು ವಿಶ್ವಸಂಸ್ಥೆಯು ಆಯೋಜಿಸುವ ವಾರ್ಷಿಕ ಅಂತಾರಾಷ್ಟ್ರೀಯ ಹವಾಮಾನ ಶೃಂಗಸಭೆಯಾಗಿದೆ. ಭಾರತದ ಸಂವಿಧಾನದ 21ನೇ ವಿಧಿಯ ಪ್ರಕಾರ ವಿದೇಶಕ್ಕೆ ಪ್ರಯಾಣಿಸುವ ಹಕ್ಕು ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ ಎಂಬುದು ಕಾನೂನಿನ ಸ್ಥಿರವಾದ ತತ್ವವಾಗಿದೆ. ಆದರೂ, ಇಂತಹ ಹಕ್ಕು ಅನಿಯಂತ್ರಿತವೇನಲ್ಲ. ಸಮಂಜಸವಾದ ನಿರ್ಬಂಧವನ್ನು ಇದರ ಮೇಲೆ…
ಬೆಂಗಳೂರು:- ಇಂದು ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ‘ಜನತಾ ದರ್ಶನ’ವನ್ನು ನಡೆಸಿದರು. 2 ತಿಂಗಳ ಹಿಂದೆಯೇ ನಡೆಯಬೇಕಿದ್ದ ‘ಜನತಾ ದರ್ಶನ’ ತಡವಾಗಿ ನಡೆದರೂ ಯಶಸ್ವಿಯಾಗಿ ಪೂರ್ಣವಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಹಿತಿಯನ್ನ ನೀಡಿದ್ದು, ಎಲ್ಲ ಜಿಲ್ಲಾ ಸಚಿವರಿಗೆ ಪತ್ರ ಬರೆದಿದ್ದೆ ಜಿಲ್ಲೆಗಳಲ್ಲಿ ಜನತಾ ಸ್ಪಂದನ ಕಾರ್ಯಕ್ರಮ ಮಾಡಿ ನನಗೆ ವರದಿ ಸಲ್ಲಿಸಲು ತಿಳಿಸಲಾಗಿತ್ತು. ಕೆಲವು ಜಿಲ್ಲೆಗಳಿಂದ ಮಾತ್ರ ವರದಿ ಬಂದಿದ್ದು ಉಳಿದ ಜಿಲ್ಲೆಗಳಿಂದ ವರದಿ ಬಂದಿಲ್ಲ ಇದನ್ನ ಸಹಿಸಲು ಆಗಲ್ಲ ಎಂದಿದ್ದಾರೆ ಸಿಎಂ. ಅನೇಕ ಸಮಸ್ಯೆಗೆ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ನೀಡಲು ಸಾಧ್ಯ. ಆದ್ರೆ ಕೆಲ ಅರ್ಜಿಗಳು ಕೂಡಲೇ ತೀರ್ಮಾನ ಆಗಲ್ಲ, ಸಮಯ ಅಗತ್ಯ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು. ಇಲ್ಲವಾದ್ರೆ ಅದು ಬೆಳೆಯುತ್ತ ಹೋಗುತ್ತದೆ. ಇಂದು ಬಂದಿರುವ ಅರ್ಜಿಗಳಲ್ಲಿ ಬಹುತೇಕ ಕಂದಾಯ, ಪೊಲೀಸ್ ಇಲಾಖೆ, ಗೃಹಲಕ್ಷ್ಮಿ ಯೋಜನೆ, ಬಿಬಿಎಂಪಿ, ಪಿಂಚಣಿ, ಗ್ರಾಚ್ಯುಟಿ ಇತ್ಯರ್ಥ ಸೇರಿದಂತೆ ವಸತಿ, ಉದ್ಯೋಗಕ್ಕೆ ಸಂಬಂಧಿಸಿದೆ ಎಂದಿದ್ದಾರೆ ಸಿಎಂ. ವಿಶೇಷವಾಗಿ ಜಿಲ್ಲಾಧಿಕಾರಿಗಳು…
ಗಂಗಾವತಿ:- ತಾಕತ್ ಇದ್ರೆ ನಾಗೇಂದ್ರ ಮೇಲಿನ ಕೇಸ್ ವಾಪಸ್ ಪಡೆಯಿರಿ ಎಂದು ಸಿಎಂಗೆ ಗಾಲಿ ಜನಾರ್ಧನ್ ರೆಡ್ಡಿ ಚಾಲೆಂಜ್ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ದ್ವೇಷದ ಕಾರಣಕ್ಕಾಗಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಿ.ಕೆ.ಶಿವಕುಮಾರ್ ಮೇಲೆ ಸಿಬಿಐ ಮನವಿ ಹಿನ್ನೆಲೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕೇಸ್ ಹಾಕಲು ಪರವಾನಿಗೆ ನೀಡಿದ್ದರಿಂದ ಈಗ ರಾಜ್ಯ ಸರಕಾರದ ಪರವಾನಿಗೆ ವಾಪಸ್ ಪಡೆಯಲಾಗಿದೆ ಎಂದು ಸಿದ್ದರಾಮಯ್ಯ ಸೇರಿ ಸರಕಾರದ ಸಚಿವರು ಪದೇ ಪದೇ ಹೇಳಿಕೆ ಕೊಡುತ್ತಿದ್ದಾರೆ. ಮಾತೆತ್ತಿದರೆ ಅಹಿಂದ ವರ್ಗದ ಹಿತರಕ್ಷಕರೆಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಿಂದ ವಾಲ್ಮೀಕಿ ಜನಾಂಗದ ನಾಯಕ ಹಾಗೂ ಸಚಿವ ಬಿ.ನಾಗೇಂದ್ರ ಮತ್ತು ನನ್ನ ಮೇಲೆ ಸಿಬಿಐ ಕೇಸ್ ಹಾಕಲು ಪರವಾನಿಗೆ ನೀಡಿದ್ದನ್ನು ಕೂಡಲೇ ವಾಪಸ್ ಪಡೆದು ಅಹಿಂದ ಹಿತ ರಕ್ಷಕ ಎಂದು ಸಾಬೀತು ಮಾಡಲಿ” ಎಂದರು. ನಾಗೇಂದ್ರ ಅವರ ಮೇಲೆ ಹಾಕಿರುವ ಕೇಸ್ ವಾಪಸ್ ಪಡೆಯುತ್ತಿರಾ ಅಥವಾ ಅವರನ್ನು ಸಚಿವ ಸಂಪುಟ ದಿಂದ ತೆಗೆದುಹಾಕುತ್ತಿರಾ ಎನ್ನುವ ಕುರಿತು ಸಿಎಂ ಸಿದ್ದರಾಮಯ್ಯ ಅವರು…
ಬೆಂಗಳೂರು:- ಗ್ಯಾರಂಟಿಯ ಅರೆಬರೆ ಜಾರಿಯಿಂದ ಬೊಕ್ಕಸ ಖಾಲಿ ಆಗಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಗ್ಯಾರೆಂಟಿ ಜಾರಿಯಿಂದ ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದ್ದು ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಎಂದರು. ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರುವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ತೋರಿಸುತ್ತಿದ್ದಾರೆ. ಇದು ಸಂವೇದನಾ ರಹಿತ ಎಡಬಿಡಂಗಿ ಸರ್ಕಾರ ಎಂದರು ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದು ಟೀಕಿಸಿದರು. ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಮೊದಲು ರಾಜ್ಯ ಸರ್ಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಿ. ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಮೊದಲು ರೈತರ ಸಂಕಷ್ಟಕ್ಕೆ ಧಾವಿಸಿದ್ದೆವು. ಎನ್ಡಿಆರ್ಎ ಮಾರ್ಗಸೂಚಿಗಿಂತ…
ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟನ್ಸ್ ತೊರೆದು ಮುಂಬೈ ಇಂಡಿಯನ್ಸ್ ತಂಡಕ್ಕೆ ವಾಪಸ್ಸಾಗಿರುವುದು ಅಧಿಕೃತವಾಗಿದೆ. ತವರಿಗೆ ಹಾರ್ದಿಕ್ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಖಚಿತಪಡಿಸಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹಾರ್ದಿಕ್, ಅನೇಕ ಅದ್ಭುತ ನೆನಪುಗಳನ್ನು ಮರಳಿ ತಂದಿದೆ. ಮುಂಬೈ, ವಾಂಖೆಡೆ, ಪಲ್ಟನ್ಗೆ ಮರಳಿ ಬಂದಿರುವುದು ನನಗೆ ಒಳ್ಳೆಯದೆನಿಸುತ್ತಿದೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಮುಂಬೈ ಇಂಡಿಯನ್ಸ್ ತಂಡಕ್ಕೆ ಐಪಿಎಲ್ ಹರಾಜಿನಲ್ಲಿ 10 ಲಕ್ಷ ರೂಪಾಯಿಗೆ ಬಿಕರಿಯಾದ ಹಳೆಯ ವಿಡಿಯೋವನ್ನು ಹಾರ್ದಿಕ್ ಹಂಚಿಕೊಂಡಿದ್ದಾರೆ.