ಬೆಂಗಳೂರು: ಬಿಜೆಪಿ- ಜೆಡಿಎಸ್ ಲೋಕಸಭಾ ಮೈತ್ರಿಯ ನಂತರ ಎರಡೂ ಪಕ್ಷಗಳಲ್ಲಿ ಆದ ರಾಜಕೀಯ ಕ್ಷಿಪ್ರ ಬೆಳವಣಿಗೆಗಳು ಭಾರೀ ತಲ್ಲಣವನ್ನೇ ಸೃಷ್ಠಿಸಿವೆ. ಅಸಮಾಧಾನ, ಆಂತರಿಕೆ ಭಿನ್ನಮತ, ಆಪರೇಷನ್ ಹಸ್ತ ಮಧ್ಯೆ ಉಭಯ ಪಕ್ಷದ ನಾಯಕರಿಗೆ ತಲೆನೋವು ತಂದೊಡ್ಡಿದೆ. ಈ ಅಸಮಾಧಾನ ಶಮನಕ್ಕೆ ಎರಡೂ ಪಕ್ಷದ ರಾಜ್ಯಾಧ್ಯಕ್ಷರು ಮುಂದಾಗಿದ್ದು ಮೈತ್ರಿಯನ್ನ ಸರಿದಾರಿಗೆ ತರಲು ಜೋಡೆತ್ತುಗಳಾಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಕುಮಾರಸ್ವಾಮಿ- ವಿಜಯೇಂದ್ರ ಭೇಟಿಯ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ……. 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ನಾಯಕರು ಕಮಲ-ದಳ ಮೈತ್ರಿಯನ್ನು ಮಾಡಿಕೊಂಡಿದ್ದಾರೆ. ಈ ಮೈತ್ರಿಗೆ ಉಭಯ ಪಕ್ಷಗಳಲ್ಲೂ ಅಸಮಾಧಾನ ಸ್ಪೋಟಗೊಂಡಿದೆ ಕೆಲ ನಾಯಕರು ನಮಗೆ ಹೇಳದೆ ಮೈತ್ರಿ ಮಾಡಿಕೊಂಡಿದ್ದಾರೆ ಅಂತ ಮುನಿಸಿಕೊಂಡಿದ್ರೆ, ಕೆಲವರು ಪಕ್ಷದೊಳಗಿನ ಲೆಕ್ಕಾಚಾರ, ಜಾತಿ ಸಮೀಕರಣ, ಸ್ಥಳೀಯ ಲೆಕ್ಕಾಚಾರಗಳಿಂದಾಗಿ ಮೈತ್ರಿ ವಿರೋಧಿಸ್ತಿದ್ದಾರೆ. ಅದ್ರಲ್ಲು ಪ್ರಮುಖವಾಗಿ ಈಗಾಗ್ಲೆ ಜೆಡಿಎಸ್ ನ ಇಬ್ಬರು ಮಾಜಿ ಶಾಸಕರು ಮೈತ್ರಿ ವಿರೋಧಿಸಿ ಹೊರೆ ಇಳಿಸಿ ಹಸ್ತ ಹಿಡಿದಿದ್ದಾರೆ. ಈ ಮಧ್ಯೆ ಎಲ್ಲಾ ಅಸಮಾಧಾನ, ಭಿನ್ನಮತಗಳನ್ನು ಸರಿಪಡಿಸಿ ಚುನಾವಣೆ…
Author: AIN Author
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಸೋಮವಾರ ತಿರುಪತಿ (Tirupati) ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ (Venkateshwara Swamy Temple) ಭೇಟಿ ನೀಡಿದ್ದು, 140 ಕೋಟಿ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು. ದೇವಾಲಯದ ಭೇಟಿ ಕುರಿತು ಪ್ರಧಾನಿ ಎಕ್ಸ್ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ದೇಗುಲಕ್ಕೆ ಎರಡು ದಿನಗಳ ಭೇಟಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವೆಂಕಟೇಶ್ವರನ ಸನ್ನಿಧಿಗೆ ಆಗಮಿಸಿದರು. ಮೋದಿ ಭಾನುವಾರ ರಾತ್ರಿ ತಿರುಮಲದಲ್ಲಿ ತಂಗಿದ್ದರು. ಸೋಮವಾರ ಮುಂಜಾನೆ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. https://ainlivenews.com/upi-id-with-no-transaction-for-1-year-upi-number-de-activate-reason/#google_vignette ತಿರುಪತಿ ವಿಮಾನ ನಿಲ್ದಾಣದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ಮೋದಿ ಆಗಮನಕ್ಕೆ ಒಂದೆರಡು ಗಂಟೆಗಳ ಮೊದಲು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅವರನ್ನು ಸ್ವಾಗತಿಸಿದರು. ಗವರ್ನರ್ ಅಬ್ದುಲ್ ನಜೀರ್ ಅವರು ಪ್ರಧಾನಿ ಮೋದಿಯವರೊಂದಿಗೆ ತಿರುಪತಿಗೆ ಹೋದರೆ, ಮುಖ್ಯಮಂತ್ರಿ ಜಗನ್ ಆರತಕ್ಷತೆಯ ನಂತರ…
ಬೆಂಗಳೂರು: ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹೊಸ ಸಮರ ಸಾರಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರು ಚಲೋ ನಡೆಸಲು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ಇಂದು ಬೆಳಗ್ಗೆ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಲು ಚಲೋಗೆ ಕರೆ ನೀಡಲಾಗಿದೆ. https://ainlivenews.com/another-victim-of-bescoms-negligence-cm-dcm-energy-minister-directly-responsible-for-death-of-mother-daughte/ ಕರ್ನಾಟಕ ರಾಜ್ಯದಲ್ಲಿ ಬರೋಬ್ಬರಿ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರು ಇದ್ದಾರೆ. ಸರ್ಕಾರದಿಂದ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರಿಗೆ ಗೌರವ ಧನ ಹೆಸರಲ್ಲಿ ಶೋಷಣೆ ಮಾಡುತ್ತಿದೆ. ಇವರಿಗೆ ಯಾವುದೇ ರೀತಿಯ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬೇಡಿಕೆಗಳು ಏನೇನು…? ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕಿಯರಿಗೆ ಕನಿಷ್ಠ 21,000 ವೇತನ ನೀಡಬೇಕು ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ ಮಾಡಬೇಕು ಎಲ್ಲಾ ಮಿನಿ ಅಂಗನವಾಡಿ ಕೇಂದ್ರಗಳನ್ನ…
ಬೆಂಗಳೂರು: ಮಾಲ್, ಮೆಟ್ರೋ ಸೇರಿದಂತೆ ಹಲವೆಡೆ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದ್ದು ಬೆಂಗಳೂರಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬುದು ಕಾತರಿಯಾಗಿದೆ. ಈ ನಿಟ್ಟಿನಲ್ಲಿ BMTC ಟ್ರಾನ್ಸ್ಪೋರ್ಟ್ ಅನ್ನು ಸೇಫ್ ಟ್ರಾನ್ಸ್ಪೋರ್ಟ್ ಮಾಡಲು ಹೊರಟಿದೆ. https://ainlivenews.com/laser-therapy-soukhy-robotic-ortho-care/ ಇತ್ತಿಚಿನ ದಿನಗಳಲ್ಲಿ ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿವೆ. ಈ ನಿಟ್ಟಿನಲ್ಲಿ ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಒತ್ತು ಕೊಡುತ್ತಿದೆ. ಪಬ್ಲಿಕ್ ಟ್ರಾನ್ಸ್ಪೋರ್ಟ್ ಅನ್ನು ಸೇಫ್ ಟ್ರಾನ್ಸ್ಪೋರ್ಟ್ ಮಾಡುವುದಾಗಿ ಬಿಎಂಟಿಸಿ ಎಂಡಿ ಸತ್ಯವತಿ ಹೆಜ್ಜೆ ಇಟ್ಟಿದ್ದಾರೆ. ಮಹಿಳೆಯರು ಬಸ್ನಲ್ಲಿ ಪ್ರಯಾಣಿಸುವಾಗ ಏನಾದರೂ ತೊಂದರೆಯಾದರೆ, ಬಸ್ ಸೀಟ್ ಪಕ್ಕದಲ್ಲೇ ಇರೋ ಪ್ಯಾನಿಕ್ ಬಟನ್ ಕ್ಲಿಕ್ ಮಾಡಬಹುದು. ಈ ಬಟನ್ ಕ್ಲಿಕ್ ಮಾಡಿದ ತಕ್ಷಣ ಈ ಅಲರ್ಟ್ ಬಿಎಂಟಿಸಿ ಕಂಟ್ರೋಲ್ ರೂಮ್ಗೆ ಬರುತ್ತದೆ. ಜೊತೆಗೆ ಸಾರಥಿಗೆ ಲೋಕೇಶನ್ ಹೋಗುತ್ತದೆ. ಆ ಲೋಕೇಷನ್ನಲ್ಲೇ ಬಿಎಂಟಿಸಿ ಟೀಮ್ ಬರುತ್ತದೆ.
ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಕ್ಯಾಬಿನೆಟ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಕೇಸ್ ವಿಥ್ಡ್ರಾ ಮಾಡಿದ್ದನ್ನು ನೋಡಿದರೆ ಬಹಳ ಸ್ಪಷ್ಟವಾಗಿ ಗೊತ್ತಾಗುತ್ತದೆ ಸರ್ಕಾರ ನಡೆಸುತ್ತಿರೋರು ಸಿದ್ದರಾಮಯ್ಯ ಅಲ್ಲ ಡಿಕೆ ಶಿವಕುಮಾರ್ ಅಂತ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಹೇಳಿಕೆ ನೀಡಿದ್ದಾರೆ. ಡಿಸಿಎಂ ಡಿಕೆಶಿ ಮೇಲೆ ಸಿಬಿಐ ಕೇಸ್ (CBI Case) ಪ್ರಸ್ತಾವನೆ ವಾಪಸ್ ವಿಚಾರವಾಗಿ ಬಾಗಲಕೋಟೆಯಲ್ಲಿ ಮಾತನಾಡಿದ ನಿರಾಣಿ, ಡಿಕೆ ಶಿವಕುಮಾರ್ ಅವರು ರಾಜಕೀಯವಾಗಿ ಹಿರಿಯರು. ಸಾಕಷ್ಟು ಏಳು ಬೀಳು ನೋಡಿದಂತವರು. ಈಗಾಗಲೇ ಈ ಕೇಸ್ ಕೋರ್ಟ್ನಲ್ಲಿ ತನಿಖೆ ಹಂತದಲ್ಲಿರುವಾಗ ಅದನ್ನು ಏಕಾಏಕಿಯಾಗಿ ಹೆದರಿಕೆಯಿಂದ ಸೋಲಾಗುತ್ತದೆ ಎಂಬ ಭಾವನೆಯಿಂದ ಕ್ಯಾಬಿನೆಟ್ನಲ್ಲಿ ವಿಥ್ ಡ್ರಾ ಮಾಡಿದ್ದಾರೆ. ಇದು ಶೋಭೆ ತರುವಂತದ್ದಲ್ಲ ಎಂದು ಹೇಳಿದರು. https://ainlivenews.com/upi-id-with-no-transaction-for-1-year-upi-number-de-activate-reason/#google_vignette ಸಿದ್ದರಾಮಯ್ಯ ಅವರ ಬಗ್ಗೆ ಕರ್ನಾಟಕದಲ್ಲಿ ಅವರದ್ದೇ ಆದ ಘನತೆ ಗೌರವವಿತ್ತು. ಅವರು ಕಾನೂನಿಗೆ ತಲೆ ಬಾಗುತ್ತಾರೆ. ಕಾನೂನಿಗೆ ಹೆಚ್ಚು ಗೌರವ ಕೊಡುತ್ತಾರೆ ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಸಿದ್ದರಾಮಯ್ಯ ಅವರು…
ಬಿಗ್ ಬಾಸ್ ಮನೆಗೆ (Bigg Boss Kannada 10) ಬಂದ ಮೇಲೆ ಮೈಕಲ್ ಕನ್ನಡ ಮತ್ತಷ್ಟು ಕಲಿತು ಮಾತನಾಡುವ ಪ್ರಯತ್ನ ಮಾಡುತ್ತಿದ್ದಾರೆ. ಕನ್ನಡ ಗೊತ್ತಿದ್ದೂ ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುವವರಿಗೆ ಸುದೀಪ್ ಹೇಳಿ, ಮೈಕಲ್ಗಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಗೆ ಚಪ್ಪಾಳೆ ನೀಡಿದ್ದಾರೆ. ಮೈಕಲ್ ಪ್ರಯತ್ನಕ್ಕೆ ಕಿಚ್ಚ (Sudeep) ಬೆನ್ನು ತಟ್ಟಿದ್ದಾರೆ. ದೊಡ್ಮನೆಯಲ್ಲಿ ಕೋಪ ಬಂದಾಗ, ಅಪ್ಪಟ ಕನ್ನಡ ಮಾತಾನಾಡುವವರ ಬಾಯಲ್ಲೇ ಇಂಗ್ಲಿಷ್ ಬಂದುಬಿಡುತ್ತದೆ. ಆದರೆ ಮೊನ್ನೆ ಆದ ಗಲಾಟೆಯಯಲ್ಲಿ ನೀವು ಕೋಪದಲ್ಲಿದ್ರೂ ಕೂಡ ಹುಡುಕಿ ಕನ್ನಡ ಪದಗಳಲ್ಲೇ ಎದುರಾಳಿಗೆ ಉತ್ತರ ಕೊಡ್ತಾ ಇದ್ರಿ, ಅದಕ್ಕಾಗಿ ನಾನು ನಿಮ್ಮನ್ನು ಪ್ರಶಂಸಿಸುತ್ತೇನೆ. Opportunist ಅನ್ನೋ ಪದಕ್ಕೆ ಅರ್ಥ ಏನೆಂದು ತಿಳಿದುಕೊಂಡು ಕೊನೆಗೆ ಅವಕಾಶವಾದಿ ಅಂತ ಹೇಳಿದ್ದಕ್ಕೆ ಸುದೀಪ್ ಭೇಷ್ ಎಂದಿದ್ದಾರೆ. ದೊಡ್ಮನೆಯಲ್ಲಿ ಕೋಪ ಬಂದಾಗ, ಅಪ್ಪಟ ಕನ್ನಡ ಮಾತಾನಾಡುವವರ ಬಾಯಲ್ಲೇ ಇಂಗ್ಲಿಷ್ ಬಂದುಬಿಡುತ್ತದೆ. ಆದರೆ ಮೊನ್ನೆ ಆದ ಗಲಾಟೆಯಯಲ್ಲಿ ನೀವು ಕೋಪದಲ್ಲಿದ್ರೂ ಕೂಡ ಹುಡುಕಿ ಕನ್ನಡ ಪದಗಳಲ್ಲೇ ಎದುರಾಳಿಗೆ ಉತ್ತರ ಕೊಡ್ತಾ ಇದ್ರಿ, ಅದಕ್ಕಾಗಿ…
ಧಾರವಾಡ : ಜಮ್ಮು – ಕಾಶ್ಮೀರದಲ್ಲಿ ಉಗ್ರರೊಂದಿಗೆ ಹೋರಾಡಿ ವೀರ ಮರಣಹೊಂದಿದ ಯೋಧರಿಗೆ ಶ್ರದ್ಧಾಂಜಲಿ ಸಭೆಯನ್ನು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿಯ ಕಾರ್ಗಿಲ್ ವಿಜಯ ಸ್ತೂಪದಲ್ಲಿ ಹಮ್ಮಿಕೊಳ್ಳಲಾಗಿತ್ತು . ಉತ್ತರ ಕರ್ನಾಟಕ ಸೈನಿಕರ ಕಲ್ಯಾಣ ಸಮಿತಿ, ಮಾಜಿ ಸೈನಿಕರ ಬಳಗದ ಸದಸ್ಯರು ಹಾಗೂ ಸಾರ್ವಜನಿಕರು ಹುತಾತ್ಮ ಯೋಧರ ಭಾವಚಿತ್ರಕ್ಕೆ ಹಾಗೂ ಕಾರ್ಗಿಲ್ ವಿಜಯ ಸ್ತೂಪಕ್ಕೆ ಪುಷ್ಪ ನಮನ ಸಲ್ಲಿಸಿದರು. https://ainlivenews.com/upi-id-with-no-transaction-for-1-year-upi-number-de-activate-reason/#google_vignette ಶ್ರದ್ಧಾಂಜಲಿ ಸಭೆಯಲ್ಲಿ ಮಡಿದ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಒಂದು ನಿಮಿಷ ಮೌನ ಆಚರಿಸಿ, ಪೊಲೀಸ್ ವಾದ್ಯ ತುಕಡಿಗಳು ವಾದ್ಯ ನುಡಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು.
ದೊಡ್ಡಬಳ್ಳಾಪುರ : ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯಾವಳಿಯನ್ನ ಬಾರ್ ನಲ್ಲಿ ನೋಡುತ್ತಿದ್ದ ವೇಳೆ, ಯುವಕನ ನಡುವೆ ಜಗಳವಾಗಿದೆ, ಯುವಕರ ನಡುವಿನ ಜಗಳವನ್ನ ಸ್ನೇಹಿತನೊಬ್ಬ ಸುಮ್ಮನಾಗಿಸಿದ್ದ, ಅದೇ ವ್ಯಕ್ತಿಯನ್ನ ರಾಜಿ ಸಂಧಾನಕ್ಕೆ ಕರೆದಿದ್ದಾಗ, ಆತ ಬರದೆ ಇದ್ದಾಗ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡಿಸಿ ಪರಾರಿಯಾಗಿದ್ದರು, ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನ ಬಂಧಿಸುವಲ್ಲಿ ದೊಡ್ಡಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಅರೆಗುಡ್ಡದಹಳ್ಳಿ ಗ್ರಾಮದ 26 ವರ್ಷದ ಯುವಕ ಪೃಥ್ವಿರಾಜ್ ಹಲ್ಲೆಗೆ ತುತ್ತಾಗಿದ್ದ, ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದಿದ್ದ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಚಿಕಿತ್ಸೆಯ ನಂತರ ಚೇತರಸಿಕೊಂಡಿದ್ದಾನೆ, ಹಲ್ಲೆ ನಡೆಸಿದ ಉಲ್ಲಾಸ್, ಮಧು ಸೇರಿದಂತೆ ಆತನ ಸ್ನೇಹಿತರು ಪರಾರಿಯಾಗಿದ್ದರು, ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸರು ಆರೋಪಿಗಳನ್ನ ಬೆನ್ನತ್ತಿದ್ದರು, ಉಲ್ಲಾಸ್ ಮತ್ತು ಮಧುನನ್ನ ಪೊಲೀಸರು ಬಂಧಿಸಿದ್ದು ಮತ್ತಿಬ್ಬರು ಆರೋಪಿಗಳ ಪತ್ತೆಗಾಗಿ ಬಲೆ ಬಿಸಿದ್ದಾರೆ. https://ainlivenews.com/upi-id-with-no-transaction-for-1-year-upi-number-de-activate-reason/ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ನಡೆದ ಜಗಳವನ್ನ ಬಿಡಿಸಿ ಬಂದಿದ್ದ ಪೃಥ್ವಿರಾಜ್ ತನ್ನ ಪಾಡಿಗೆ ಸುಮ್ಮನಿದ್ದ, ನವೆಂಬರ್ 22ರ ಸಂಜೆ ರೈಲ್ವೆ ಸ್ಟೇಷನ್…
ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ರೂಪೇಶ್ ಶೆಟ್ಟಿ (Roopesh Shetty) ವಿನ್ನರ್ ಆಗಿ ಗೆದ್ದು ಬೀಗಿದ್ದರು. ಇದೀಗ ತುಳು, ಕನ್ನಡ ಸಿನಿಮಾಗಳಲ್ಲಿ ರೂಪೇಶ್ ಬ್ಯುಸಿಯಾಗಿದ್ದಾರೆ. ‘ಅಧಿಪತ್ರ’ ಚಿತ್ರದ ಶೂಟಿಂಗ್ನಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರದಲ್ಲಿನ ರೂಪೇಶ್ ಲುಕ್ ಹೇಗಿದೆ. ಇದೀಗ ರಿವೀಲ್ ಆಗಿದೆ. ಬಿಗ್ ಬಾಸ್ ಗೆದ್ದ ಮೇಲೆ ಹಲವು ಸಿನಿಮಾಗಳನ್ನ ರೂಪೇಶ್ ಶೆಟ್ಟಿ ಒಪ್ಪಿಕೊಂಡಿದ್ದಾರೆ. ‘ಅಧಿಪತ್ರ’ ಚಿತ್ರದಲ್ಲಿ ರೂಪೇಶ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೂಲಿಂಗ್ ಗ್ಲಾಸ್ ಧರಿಸಿ ಬೈಕ್ ಮೇಲೆ ಕುಳಿತು ಖಡಕ್ ಆಗಿ ಕ್ಯಾಮೆರಾ ಕಣ್ಣಿಗೆ ರೂಪೇಶ್ ಪೋಸ್ ನೀಡಿದ್ದಾರೆ. ಚಹನ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ಅಧಿಪತ್ರ ಚಿತ್ರದಲ್ಲಿ ಹೀರೋ ರೂಪೇಶ್ ಶೆಟ್ಟಿಗೆ ನಾಯಕಿಯಾಗಿ ಜಾಹ್ನವಿ ನಟಿಸುತ್ತಿದ್ದಾರೆ. ಬೃಹತಿ ಎಂಬ ಪಾತ್ರಕ್ಕೆ ಗಿಚ್ಚಿ ಗಿಲಿ ಗಿಲಿ ನಟಿ ಬಣ್ಣ ಹಚ್ಚಿದ್ದಾರೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ
ದೊಡ್ಮನೆಯಲ್ಲಿ ಆಟ (Bigg Boss Kannada 10) 8ನೇ ವಾರಕ್ಕೆ ಕಾಲಿಟ್ಟಿದೆ. 5 ಎಲಿಮಿನೇಟ್ ಆಗಿ 12 ಸ್ಪರ್ಧಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಪ್ರತಿ ವಾರಾಂತ್ಯ ಬಂದು ಸುದೀಪ್, ಸ್ಪರ್ಧಿಗಳ ಕಿವಿ ಹಿಂಡುತ್ತಾರೆ. ಹೀಗಿರುವಾಗ, ಬಿಗ್ ಮನೆಗೆ ಕಾಲಿಟ್ಟ ದಿನದಿಂದ ಪ್ರತಾಪ್ ಕೆಲ ಸ್ಪರ್ಧಿಗಳಿಂದ ಹೆಜ್ಜೆ ಹೆಜ್ಜೆಗೂ ಟಾರ್ಗೆಟ್ ಆಗುತ್ತಲೇ ಬಂದಿದ್ದಾರೆ. ಇದೀಗ ಬಾತ್ರೂಮ್ ವಿಚಾರವಾಗಿ ಡ್ರೋನ್ ಪ್ರತಾಪ್ಗೆ (Drone Prathap) ಬೆದರಿಸಿದ್ದ ಸ್ನೇಹಿತ್ಗೆ ಸುದೀಪ್ (Kichcha Sudeep) ಸ್ಪೆಷಲ್ ಕ್ಲಾಸ್ ಮಾಡಿದ್ದಾರೆ. ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ತಿರೋ ದೊಡ್ಮನೆ ಆಟ ಮತ್ತಷ್ಟು ಟಫ್ ಆಗ್ತಿದೆ. ಹೀಗಿರುವಾಗ ಸ್ನೇಹಿತ್ (Snehith Gowda) ಆಟ ಮತ್ತು ಸ್ಪರ್ಧಿಗಳ ಜೊತೆ ವರ್ತಿಸುವ ರೀತಿಯನ್ನ ಖಂಡಿಸಿದ ಸುದೀಪ್ ತಿದ್ದಿ ಬುದ್ಧಿ ಹೇಳಿದ್ದಾರೆ. ಬಾತ್ರೂಮ್ ಬಿಟ್ಟು ಕೊಡುವ ವಿಷ್ಯದಲ್ಲಿ ಸ್ನೇಹಿತ್ ನಡೆದುಕೊಂಡ ರೀತಿಗೆ ತರಾಟೆ ತೆಗೆದುಕೊಂಡಿದ್ದಾರೆ ಶುಕ್ರವಾರದ ಎಪಿಸೋಡ್ನಲ್ಲಿ ಬಾತ್ರೂಂಗೆ ಹೋಗಲು ಬಂದ ಡ್ರೋನ್ ಪ್ರತಾಪ್ ಅನ್ನು ಅಲ್ಲೇ ಇದ್ದ ಸ್ನೇಹಿತ್ ಉದ್ದೇಶಪೂರ್ವಕವಾಗಿ ತಡೆದಿದ್ದರು. ಆಗಿದ್ದಿಷ್ಟು…