ಜಾನುವಾರುಗಳಲ್ಲಿ ಕಂಡು ಬರುವ ರಕ್ತಹೀನತೆ ಸಮಸ್ಯೆಯನ್ನು ಕಂಡು ಹಿಡಿಯುವುದು ಹೇಗೆ? ಇದರ ಲಕ್ಷಣಗಳೇನು? ಇದಕ್ಕೆ ಸೂಕ್ತ ಚಿಕಿತ್ಸಾ ವಿಧಾನಗಳು ಯಾವುವು? ಇಲ್ಲಿದೆ ವಿವರ. ಏನಿದು ರಕ್ತ ಹೀನತೆ? : ರಕ್ತಹೀನತೆ ಎಂದರೆ ರಕ್ತದಲ್ಲಿ ಕೆಂಪು ರಕ್ತ ಕಣದ ಗಣನೀಯ ಕುಸಿತ ಮತ್ತು ಹಿಮೋಗ್ಲೋಬಿನ್ ಅಂಶ ಕಡಿಮೆಯಾಗುವುದು. ಕೆಂಪು ರಕ್ತ ಕಣದ ಸಂಖ್ಯೆಯಲ್ಲಿ ಗಣನೀಯ ಇಳಿತ, ಹಿಮೋಗ್ಲೋಬಿನ್ ಸಾಂದ್ರತೆಯ ಕುಸಿತ ಅಥವಾ ಕೆಂಪು ಕೋಶ ದ್ರವ್ಯರಾಶಿಯಲ್ಲಿನ ಸಂಪೂರ್ಣ ಇಳಿಕೆ ಎಂದು ವ್ಯಾಖ್ಯಾನಿಸಬಹುದು. ರಕ್ತದಲ್ಲಿ ಹಿಮೊಗ್ಲೋಬಿನ್ ಪ್ರಮಾಣ ಶೇ: 10-14 ಇರಬೇಕು. ಇದು ಶೇ 8 ಕ್ಕಿಂತ ಕಡಿಮೆಯಾದಾಗ ರಕ್ತಹೀನತೆ ಎನ್ನಬಹುದು. ಕೆಂಪು ರಕ್ತಕಣಗಳು ಅಸ್ಥಿಮಜ್ಜೆಯಲ್ಲಿ ಉತ್ಪಾದನೆಯಾಗುತ್ತವೆ. ಪ್ರತಿ ಸೆಕೆಂಡಿಗೆ 2.5 ಮಿಲಿಯನ್ ರಕ್ತಕಣಗಳು ಶರೀರದಲ್ಲಿ ಉತ್ಪಾದನೆಯಾಗುತ್ತವೆ. ಒಂದು ಕೆಂಪು ರಕ್ತ ಕಣದ ಜೀವಿತಾವಧಿ 3 ತಿಂಗಳುಗಳು. ಕೆಂಪು ರಕ್ತಕಣಗಳು ತಟ್ಟೆಯಾಕಾರದ ಚಿಕ್ಕ ಜೀವಕೋಶಗಳು. ಇವುಗಳಿಗೆ ಜೀವಕೋಶ ಕೇಂದ್ರವಿರುವುದಿಲ್ಲ. ಇವುಗಳ ಬಹುಮುಖ್ಯ ಭಾಗವೆಂದರೆ ರಕ್ತಕಣಕ್ಕೆ ಕೆಂಪು ಬಣ್ಣ ತರುವ ಹಿಮೊಗ್ಲೋಬಿನ್. ಇದಕ್ಕೆ ಆಮ್ಲಜನಕವನ್ನು ಶ್ವಾಸಕೋಶದಿಂದ ಹೀರಿಟ್ಟುಕೊಂಡು…
Author: AIN Author
ನವದೆಹಲಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಅಚ್ಚರಿಯ ಘಟನೆ ನಡೆದಿದ್ದು, ಶಿಕ್ಷಿಕಿಯೊಬ್ಬರು ತನ್ನ ವಿದ್ಯಾರ್ಥಿಗೆ ನಡುರಾತ್ರಿಯಲ್ಲಿ ಅಶ್ಲೀಲ ಮೆಸೇಜ್ ಕಳಿಸಿದ್ದು ಮಾತ್ರವಲ್ಲದೆ, ತನ್ನೊಂದಿಗೆ ಸೆಕ್ಸ್ನಲ್ಲಿ ಭಾಗಿಯಾಗುವಂತೆ ಒತ್ತಾಯಿಸಿದ್ದಾರೆ. ಉನ್ನಾವೋ ಮೂಲದ ವಿದ್ಯಾರ್ಥಿ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದಾರೆ. ಅದರ ಬೆನ್ನಲ್ಲಿಯೇ ವಿದ್ಯಾರ್ಥಿಯ ಪೋಷಕರು ಪೊಲೀಸ್ ಠಾಣೆಗೆ ತೆರಳು ದೂರು ದಾಲಿಸಿದ್ದಾರೆ. ತನ್ನ ಮಗನಿಗೆ ಶಿಕ್ಷಕಿ ನಡು ರಾತ್ರಿಯ ಸಮಯದಲ್ಲಿ ಅಶ್ಲೀಲ ಸಂದೇಶಗಳನ್ನು ಕಳಿಸುತ್ತಾರೆ. ಅಷ್ಟೇ ಅಲ್ಲದೆ, ಶಿಕ್ಷಕಿಯ ಪತಿ ಮತ್ತು ಸಹೋದರ ಕೂಡ ಇದೇ ಶಾಲೆಯಲ್ಲಿ ನಿಯೋಜನೆಗೊಂಡಿದ್ದು, ಮೂವರೂ ಸೇರಿ ವಿದ್ಯಾರ್ಥಿಯನ್ನು ಬೇರೆ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ಹೇಳಿದ್ದಾರೆ. ಕಾನ್ಪುರದ ಕಂಟೋನ್ಮೆಂಟ್ ಪ್ರದೇಶದ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ತಂದೆ ಶಾಲೆಯ ಶಿಕ್ಷೆಯ ವಿರುದ್ಧವೇ ಇಂಥದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. https://ainlivenews.com/shooting-in-metro-also-from-now-on-bmrcl-green-signal/ ವಿದ್ಯಾರ್ಥಿಯ ತಂದೆ ಕಂಟೋನ್ಮೆಂಟ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಅನ್ವಯ, ಆರೋಪಿಯಾಗಿರುವ ಶಿಕ್ಷಕಿ, ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ನನ್ನ ಮಗನ…
ಮೈಸೂರು : ಹುಣಸೂರು ತಾಲೂಕು ಚಿಕ್ಕಹುಣಸೂರಿನ ಆಜಾದ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರೂ ಒಂದೇ ಕೊಠಡಿ ಇರುವ ಕಾರಣಕ್ಕೆ ಜಗುಲಿ ಮೇಲೆ ಪಾಠ ಪ್ರವಚನ ಕೇಳುವ ದುಸ್ಥಿತಿ ಎದುರಾಗಿದೆ. ಮೂಲಭೂತ ಸೌಕರ್ಯದಿಂದ ವಂಚಿತರಾಗಿರುವ ಈ ಸರ್ಕಾರಿ ಶಾಲಾ ಮಕ್ಕಳು ಪಾಠ ಪ್ರವಚನಕ್ಕೆ ಜಗುಲಿ ಆಶ್ರಯ ಪಡೆಯುವಂತಾಗಿದೆ. ಒಂದರಿಂದ ಏಳನೇ ತರಗತಿವರೆಗೂ ಇದ್ದರೂ ಸೂಕ್ತ ತರಗತಿಗಳಿಲ್ಲ. ಶಾಲೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಏಳು ತರಗತಿಗಳಿಗೆ ಇರುವುದು ಒಂದೇ ಕೊಠಡಿಯಾಗಿದೆ. ಮಕ್ಕಳು ಶಾಲೆಯ ಹೊರ ಆವರಣದ ಜಗುಲಿ ಮೇಲೆ ಕೂತು ಪಾಠ ಕೇಳುವಂತಾಗಿದೆ. ಇನ್ನು ಶಾಲೆಗೆ ಆಟದ ಮೈದಾನ ಮರೀಚೆಕೆಯಾಗಿದೆ. ಶಾಲೆಯ ಮುಂಭಾಗದಲ್ಲಿ ಹರಿಯುವ ಚರಂಡಿ ನೀರು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಮಳೆ ಬಂದರಂತೂ ಮಕ್ಕಳ ಸ್ಥಿತಿ ಅದೋ ಗತಿ ಇಳಿಯುತ್ತದೆ. ಈ ಶಾಲೆಗೆ 25 ಗುಂಟೆ ಜಮೀನು ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ 2021 ರಲ್ಲೇ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಹುಣಸೂರು ತಹಸೀಲ್ದಾರ್…
ಚಳಿಗಾಲ ಅಥವಾ ಮಳೆಗಾಲದಲ್ಲಿ ಒಂದು ಕೈಯಲ್ಲಿ ಟೀ ಅಥವಾ ಕಾಫಿ ಕಪ್, ಮತ್ತೊಂದು ಕೈಯಲ್ಲಿ ನಿಮಗೆ ಇಷ್ಟವಾದ ಈರುಳ್ಳಿ ಬೊಂಡ, ಮೆಣಸಿನಕಾಯಿ ಬಜ್ಜಿ, ಕಡ್ಲೆ ಬೇಳೆ ವಡೆಯೋ ಇಟ್ಟುಕೊಂಡು ತಿನ್ನುತ್ತಿದ್ದರೆ ಸ್ವರ್ಗಕ್ಕೆ ಮೂರೇ ಗೇಣು ಎನಿಸಿಬಿಡುತ್ತದೆ. ಇಂತಹ ಪದಾರ್ಥಗಳನ್ನು ಕ್ಷಣಾರ್ಧದಲ್ಲಿ ತಯಾರಿಸಿಬಿಟ್ಟರೆ ಇನ್ನು ಉತ್ತಮವಾಗಿರುತ್ತದೆ. ಆರಾಮದಾಯಕವಾದ ಬೆಚ್ಚಗಿನ ಅನುಭವ ನೀಡುವ ತ್ವರಿತ ರುಚಿಕರವಾದ ತಿಂಡಿಯನ್ನು ಯಾರು ಇಷ್ಟಪಡುವುದಿಲ್ಲ ಹೇಳಿ. ಹಾಗಾದ್ರೆ ಕ್ಷಣಾರ್ಧದಲ್ಲಿ ಮಾಡುವ ಮನೆಯವರೆಲ್ಲರಿಗೂ ಇಷ್ಟವಾಗುವ ಕಡಲೆ ಬೇಳೆ ನಡೆ ಮಾಡುವುದು ಹೇಗೆ ಎಂಬುದನ್ನು ನೋಡೋಣ. ಬೇಕಾಗುವ ಪದಾರ್ಥಗಳು ಮಾಡುವ ವಿಧಾನ ಕಡಲೆಬೇಳೆಯನ್ನು ನೀರಿನಲ್ಲಿ 2-4 ಗಂಟೆಗಳ ಕಾಲ ನೆನೆಹಾಕಬೇಕು. ನಂತರ ನೆಂದ ಕಡಲೆಬೇಳೆಯನ್ನು ನೀರು ಹಾಕದೆ ತರಿತರಿಯಾಗಿ ರುಬ್ಬಿಕೊಳ್ಳಬೇಕು. ಈ ರುಬ್ಬಿದ ಕಡಲೆಬೇಳೆಗೆ ಸಣ್ಣಗೆ ಹೆಚ್ಚಿಕೊಂಡ ಈರುಳ್ಳಿ, ಹಸಿಮೆಣಸಿನಕಾಯಿ, ಶುಂಠಿ-ಬೆಳ್ಳುಳ್ಳು ಪೇಸ್ಟ್, ಚಕ್ಕೆ ಪುಡಿ, ಕೊತ್ತಂಬರಿ ಸೊಪ್ಪು, ಪುದೀನ, ಸಬ್ಬಕ್ಕಿ ಸೊಪ್ಪು, ಉಪ್ಪು, ತೆಂಗಿನ ತುರಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಬೇಕು. ಒಲೆಯ ಮೇಲೆ ಬಾಣಲೆಯಿಟ್ಟು ಎಣ್ಣೆ ಹಾಕಿ ಚೆನ್ನಾಗಿ…
ಶ್ವಾಸಕೋಶದ ಕ್ಯಾನ್ಸರ್ ಹಾನಿಕರವಲ್ಲದ ಅಥವಾ ಮಾರಣಾಂತಿಕ ಸ್ವಭಾವದ್ದಾಗಿರಬಹುದು. ನಾವು ಅಂಕಿಅಂಶಗಳನ್ನು ನೋಡಿದರೆ, ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ನ ಪ್ರಮಾಣವು 16 ಪುರುಷರಲ್ಲಿ 1 ಮತ್ತು 17 ಮಹಿಳೆಯರಲ್ಲಿ 1 ಆಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಇತ್ತೀಚೆಗೆ ವಾಯು ಮಾಲಿನ್ಯ ಮತ್ತು ಶ್ವಾಸಕೋಶದ ಕ್ಯಾನ್ಸರ್ ನಡುವಿನ ಆತಂಕಕಾರಿ ಸಂಬಂಧದ ಬಗ್ಗೆ ವರದಿಗಳನ್ನು ಬಿಡುಗಡೆ ಮಾಡಿದೆ. ವಾಯು ಮಾಲಿನ್ಯದ ಮಟ್ಟಗಳು ಹೆಚ್ಚಿರುವ ಪ್ರದೇಶಗಳಲ್ಲಿ, ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳಲ್ಲಿ 30% ಹೆಚ್ಚಳ ದಾಖಲಾಗಿದೆ. ಧೂಮಪಾನವು ಶ್ವಾಸಕೋಶದ ಕ್ಯಾನ್ಸರ್ಗೆ ಇನ್ನೂ ಪ್ರಮುಖ ಕಾರಣವಾಗಿದ್ದರೂ, ವಾಯು ಮಾಲಿನ್ಯವು ಈ ಮಾರಣಾಂತಿಕ ರೋಗವನ್ನು ಉತ್ತೇಜಿಸುವ ಪ್ರಮುಖ ಅಂಶವಾಗಿ ವೇಗವಾಗಿ ಹೊರಹೊಮ್ಮುತ್ತಿದೆ. ಕಳೆದ ಕೆಲವು ವರ್ಷಗಳಿಂದ, ದೆಹಲಿ ಎನ್ಸಿಆರ್ ಪ್ರದೇಶದಲ್ಲಿ ವರ್ಷದ ಅಂತ್ಯದ ವೇಳೆಗೆ ಮಾಲಿನ್ಯದ ಮಟ್ಟವು ಹೆಚ್ಚಾಗುತ್ತದೆ. ಪಟಾಕಿಗಳನ್ನು ಸುಡುವುದು, ಕೋಲು ಸುಡುವುದು, ಕಟ್ಟಡ ನಿರ್ಮಾಣದ ಧೂಳು ಮತ್ತು ಮುಖ್ಯವಾಗಿ ವಾಹನಗಳಿಂದ ಬರುವ ಹೊಗೆಯಿಂದ ಇದು ಸಂಭವಿಸುತ್ತದೆ. ಚಳಿಗಾಲದಲ್ಲಿ ಕಡಿಮೆ ತಾಪಮಾನ ಮತ್ತು ಮಂಜಿನ ಉಪಸ್ಥಿತಿಯು ಕಣಗಳು ಮತ್ತು ಮಾಲಿನ್ಯವು…
ಬೀಜಿಂಗ್: ವ್ಯಕ್ತಿಯೊಬ್ಬರು ತಮ್ಮ ಎರಡು ವರ್ಷಗಳ ಮಗಳೊಂದಿಗೆ ಪ್ರತಿದಿನ ಸಮಾಧಿಯಲ್ಲಿ ಮಲಗುತ್ತಾರೆ. ದಿನದಲ್ಲಿ ಸಮಯ ಸಿಕ್ಕರೂ ಕೂಡ ಅವರ ಸಮಾಧಿಯಲ್ಲಿಯೇ ಆಟ ಆಡ್ತಾರೆ. ಝಾಂಗ್ ಲೀಯೆಂಗ್ ಮತ್ತು ಡೇಂಗ್ ದಂಪತಿಯ ಮುದ್ದಾದ ಮಗಳು ದೊಡ್ಡ ಕಾಯಿಲೆಯಿಂದ ಬಳಲುತ್ತಿದ್ದು, ಆಕೆ ದೊಡ್ಡವಳಾದ ಮೇಲೆ ತನಗಿರುವ ರೋಗದಿಂದ ಭಯ ಪಡಬಾರದೆಂದು ಈ ರೀತಿ ಮಾಡಲಾಗ್ತಿದೆ ಎಂದು ಬಾಲಕಿ ತಂದೆ ಝಾಂಗ್ ಹೇಳ್ತಾರೆ. ಮಗಳು ದೊಡ್ಡವಳಾದ ಮೇಲೆ ಸಾವಿನ ಭಯದಿಂದ ದೂರವಿದ್ದು, ಮುಂದೊಂದು ದಿನ ತಾನು ಏಕಾಂಗಿಯಾಗಿ ಇಲ್ಲಿರಬೇಕಾಗುತ್ತದೆ ಎಂಬುದನ್ನು ಮನವರಿಕೆ ಮಾಡಿಸಲು ತಂದೆ ಈ ರೀತಿ ಮಾಡ್ತಾಯಿದ್ದಾರೆ. ಹೀಗಾಗಿ ಝಾಂಗ್ ಮನೆಯ ಆವರಣದಲ್ಲಿ ಸಮಾಧಿ ತೋಡಿದ್ದು ಪ್ರತಿದಿನ ಅಲ್ಲಿಯೇ ಮಗಳ ಜೊತೆ ಮಲಗಲು ಆರಂಭಿಸಿದ್ದಾರೆ. https://ainlivenews.com/miley-is-the-new-president-of-argentina-who-talks-to-a-dead-dog/ ಇನ್ನೂ ಝಾಂಗ್ ಮಗಳಿಗೆ ಚಿಕಿತ್ಸೆ ಕೊಡಿಸಲು ಆರ್ಥಿಕವಾಗಿ ದುರ್ಬಲರಾಗಿದ್ದು, ಚಿಕಿತ್ಸೆಯ ಹಣಕ್ಕಾಗಿ ಕಷ್ಟಪಡುತ್ತಿದ್ದಾರೆ. ಕಷ್ಟದ ನಡುವೆಯೂ ಮಗಳಿಗೆ ಮಾನಸಿಕವಾಗಿ ದೃಢ ಪಡಿಸುತ್ತಿದ್ದಾರೆ. ವೈದ್ಯರು ಝಾಂಗ್ ಅವ್ರಿಗೆ ಸಲಹೆ ನೀಡಿದ್ದು, ಮುಂದೆ ತಾಯಿ ಗರ್ಭ ಧರಿಸಿ ಹೆರಿಗೆ ಸಮಯದಲ್ಲಿ ದೊರಕುವ…
ಹುಬ್ಬಳ್ಳಿ: ‘ಪ್ರಸ್ತುತ ದಿನಗಳಲ್ಲಿ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುವವರ ಸಂಖ್ಯೆ, ಆತ್ಮಹತ್ಯೆ ಪ್ರಕರಣಗಳು ಹೆಚ್ಚು ತ್ತಿವೆ. ಸಂಗೀತ ಆಲಿಸುವುದರಿಂದ ಒತ್ತಡ ನಿವಾರಣೆಯಾಗುತ್ತದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಅರ್ಜುನಸಾ ನಾಕೋಡ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಕ್ಷಮತಾ ಸೇವಾ ಸಂಸ್ಥೆ ಹಾಗೂ ಸ್ವರ್ಣ ಗ್ರೂಪ್ ಆಫ್ ಕಂಪನಿ ವತಿಯಿಂದ ಏರ್ಪಡಿಸಿದ್ದ ಅರ್ಜುನಸಾ ನಾಕೋಡ ಸಂಗೀತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಹುಬ್ಬಳ್ಳಿ–ಧಾರವಾಡ ಅನೇಕ ಸಂಗೀತ ದಿಗ್ಗಜರನ್ನು ನಾಡಿಗೆ ನೀಡಿದೆ. ಅರ್ಜುನಸಾ ನಾಕೋಡ ಅವರು ಹಲವು ಶಿಷ್ಯರನ್ನು ತಯಾರು ಮಾಡಿದ್ದಾರೆ. ಸಂಗೀತ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ’ ಎಂದರು. ‘ಅರ್ಜುನಸಾ ನಾಕೋಡ ಅವರು ಪೈಲ್ವಾನ್, ನಾಟಕಕಾರರೂ ಆಗಿದ್ದರೂ. ಹರಿಕತೆ ಹೇಳುತ್ತಿದ್ದರು. ಅವರದ್ದು ಬಹುಮುಖಿ ವ್ಯಕ್ತಿತ್ವ. ಗ್ವಾಲಿಯರ್ ಘರಾಣಾದಲ್ಲೂ ಅವರು ಖ್ಯಾತಿ ಗಳಿಸಿದ್ದರು’ ಎಂದು ಹೇಳಿದರು. ‘ಭಾರತೀಯ ಸಂಗೀತಕ್ಕೆ ವಿಶಿಷ್ಟ ಶಕ್ತಿ ಇದೆ. ಸಂಗೀತ ಕ್ಷೇತ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಹೊಸ ಪ್ರತಿಭೆಗಳು ಬರುತ್ತಿರುವುದು ಉತ್ತಮ ಬೆಳವಣಿಗೆ’ ಎಂದರು.…
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ನಮ್ಮ-ಕಂಬಳ’ಕ್ಕೆ ಭಾನುವಾರ ತೆರೆ ಬಿದ್ದಿದೆ. “ಕಾಂತಾರ’ ಚಿತ್ರದಲ್ಲಿ ಓಡಿದ್ದ ಕೋಣ ಚಿನ್ನದ ಪದಕ ಪಡೆದುಕೊಂಡಿತು. ಬೊಳಂಬಳ್ಳಿ ಪರಮೇಶ್ವರ್ ಭಟ್ಟ ಅವರ ಅಪ್ಪು ಕುಟ್ಟಿ 6.5 ಕೋಲು ನೀರು ಚಿಮ್ಮಿಸಿ ಕೆನೆಹಲಗೆ ವಿಭಾಗದಲ್ಲಿ ಮೊದಲ ಚಿನ್ನದ ಪದಕ ಪಡೆದಿದೆ. ಇನ್ಮುಂದೆ ಮುಂಬಯಿಯಲ್ಲೂ ಆಯೋಜಿಸುವ ಚಿಂತನೆ ವ್ಯಕ್ತವಾಗಿದೆ. ಜತೆಗೆ ಪ್ರೀಮಿಯರ್ ಲೀಗ್ನಂತೆ ಕಂಬಳದ ಲೀಗ್ ನಡೆಸುವ ಮುನ್ಸೂಚನೆ ಮೇಲ್ಮೋಟಕ್ಕೆ ಕಂಡ ಬರುತ್ತಿದೆ. ಕಂಬಳ ಆಯೋಜನೆ ಬಗ್ಗೆ ಮಾಹಿತಿಯನ್ನು ಸಂಬಂಧಪಟ್ಟವರು ಪಡೆದುಕೊಂಡಿದ್ದಾರೆ. ಕಂಬಳವನ್ನು ರಜಾದಿನಗಳಲ್ಲಿ ಹಮ್ಮಿಕೊಂಡ ಕಾರಣ 8 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿ ಸಂಭ್ರಮಿಸಿದರು. ಕೊನೆಯ ದಿನದ ಕಂಬಳದಲ್ಲಿ ಎಲ್ಲಿ ನೋಡಿದರೂ ಜನರ ದಂಡು, ನೂಕು ನುಗ್ಗಲು, ಜಾತ್ರೆಯ ವಾತಾವರಣ ವಿಶೇಷವಾಗಿತ್ತು. ಕಂಬಳದಲ್ಲಿ ಕೋಣಗಳು ಓಡುವುದು ಎಷ್ಟು ಮುಖ್ಯವೋ ವೀಕ್ಷಕ ವಿವರಣೆ ಕೂಡ ಅಷ್ಟೇ ಮುಖ್ಯ. ಈ ಬಾರಿ ಬೆಂಗಳೂರು ಕಂಬಳಕ್ಕೆ ಕರಾವಳಿಯಿಂದ 30 ಮಂದಿ ವೀಕ್ಷಕ ವಿವರಣೆಗಾರರ ತಂಡ ಕೆಲಸ ಮಾಡಿತ್ತು.…
ಚಳಿಗಾಲ ಬಂತೆದ್ರೆ ಡ್ರೈ ಸ್ಕಿನ್ ಸಮಸ್ಯೆ ಇದ್ದಿದ್ದೇ. ಮುಖ, ಕೈ-ಕಾಲಿನ ತೇವಾಂಶ ಕಡಿಮೆಯಾಗೋದಲ್ಲದೆ ಕಪ್ಪಾಗಿ ಕಾಣುತ್ತದೆ. ಕೂದಲು ಒಣಗಿದಂತಾಗಿ ಹುಲ್ಲಿನಂತೆ ಕಾಣುತ್ತೆ. ಇನ್ನು ಪಾದದ ಬಿರಕುನ ಸಮಸ್ಯೆ ಹೇಳೊದೇ ಬೇಡ. ಈಗಾಗಲೇ ಚಳಿಗಾಲ ಶುರುವಾಗಿರೋದ್ರಿಂದ ಇನ್ನೂ ಮೂರ್ನಾಲ್ಕು ತಿಂಗಳು ಈ ಎಲ್ಲಾ ಸಮಸ್ಯೆಗಳು ಕಾಮನ್. ಇದರಿಂದ ಸ್ವಲ್ಪ ರಿಲೀಫ್ ಪಡೆಯೋಕೆ ಈ ಟಿಪ್ಟ್ ಟ್ರೈ ಮಾಡಿ. 1. ತುಟಿಗೆ ಇರಲಿ ಆರೈಕೆ ಚಳಿಗಾಲದಲ್ಲಿ ಮೊದಲು ಎದುರಾಗೋ ಸಮಸ್ಯೆಯೇ ತುಟಿ ಒಡೆಯುವುದು, ಅಥವಾ ಕಪ್ಪಾಗುವುದು. ಪ್ರತಿನಿತ್ಯ ಲಿಪ್ ಬಾಮ್ ಹಚ್ಚಿದ್ರೂ ಚಳಿಗಾಲದಲ್ಲಿ ಹೆಚ್ಚಿನ ಕೇರ್ ಮಾಡಿಕೊಳ್ಳಬೇಕಾಗುತ್ತೆ. ಹೀಗಾಗಿ ಯಾವಾಗ್ಲೂ ಲಿಪ್ ಬಾಮ್ ಜೊತೆಯಲ್ಲಿರಲಿ. ರಾತ್ರಿ ಮಲಗುವಾಗ ಮರೆಯದೇ ಲಿಪ್ ಬಾಮ್ ಅಥವಾ ವ್ಯಾಸಲೀನ್ ಹಚ್ಚಿ ಮಲಗಿ. ತುಟಿ ತುಂಬಾ ಒಡೆದಿದ್ದು, ಕಪ್ಪಾಗಿದ್ದರೆ ಗ್ಲಿಸರಿನ್ ಅಥವಾ ಬದಾಮಿ ಎಣ್ಣೆ/ ಆಲೀವ್ ಎಣ್ಣೆ ಹಚ್ಚಿ ಮಲಗಿ. ಮೂರು ದಿನಗಳಿಗೊಮ್ಮೆ ಸ್ಕ್ರಬ್ ಮಾಡಿ. ವ್ಯಾಸಲೀನ್ಗೆ ಸ್ವಲ್ಪ ಸಕ್ಕರೆ ಬೆರೆಸಿ ತುಟಿಯ ಮೇಲೆ ನಿಧಾನವಾಗಿ ಉಜ್ಜಿ ಸ್ಕ್ರಬ್ ಮಾಡಬಹುದು.…
ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟಾಂಗ್ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜನರ ತೆರಿಗೆ ಖರ್ಚು ಮಾಡಿ ಜಾಹಿರಾತು ನೀಡ್ತಿದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು ಹೇಳುತ್ತಿದ್ದಾರೆ. ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು ಕುಮಾರಸ್ವಾಮಿ ಹೇಳಿದರು.