ಕೊಲ್ಕತ್ತಾ: ಅಮ್ಮ ಮೊಬೈಲ್ ಫೋನ್ ಕಿತ್ತುಕೊಂಡಳು ಎಂದು ಕೋಪಗೊಂಡು 11ನೇ ತರಗತಿ ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಇದೇ ವಯಸ್ಸಿನ ಹುಡುಗಿಯೊಬ್ಬಳು ಓದುವ ಕಡೆ ಗಮನಹರಿಸುತ್ತಿಲ್ಲ ಅಂತ ಪೋಷಕರು ಬೈದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಜ್ಯೋತಿ ಶಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೊಬೈಲ್ ನಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದಾಳೆ ಅಂತ ಈಕೆಗೆ ತಾಯಿ ಬೈದಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. https://ainlivenews.com/miley-is-the-new-president-of-argentina-who-talks-to-a-dead-dog/ ಏನಿದು ಪ್ರಕರಣ?: ಜ್ಯೋತಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ಪೋಷಕರು ಫೋನ್ ಕೊಡಿಸಿದ್ದರು. ಆದರೆ ಜ್ಯೋತಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಾಲ ಕಳೆಯುತ್ತಿದ್ದಳು. ಇದರಿಂದ ಆತಂಕಗೊಂಡ ಜ್ಯೋತಿ ತಾಯಿ, ಮಗಳು ಕಲಿಯುವ ಕಡೆ ಗಮನ ಕೊಡುವ ಬದಲು ಫೆಸ್ಬುಕ್ ಗೆ ಅಂಟಿಕೊಂಡಿದ್ದಾಳೆ ಅಂತ ಕಳೆದ ಮೂರು ದಿನಗಳ ಹಿಂದೆ ಫೋನ್ ಕಿತ್ತುಕೊಂಡು ಬೈದಿದ್ದರು. ಆದರೂ ಈಕೆ ಓದಿನ ಕಡೆ ನಿರ್ಲಕ್ಷ್ಯ ತೋರಿದ್ದಳು. ಮತ್ತೆ ತಾಯಿ ಫೋನ್ ಕಿತ್ತುಕೊಂಡು ಬೈದಿದ್ದಾರೆ. ನಂತರ ಈಕೆ ರೂಮಿಗೆ ಹೋಗಿ ಫ್ಯಾನಿಗೆ ನೇಣು ಬಿಗಿದುಕೊಂಡು…
Author: AIN Author
ಸೌತೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ಹಲವರು ತಿಳಿದುಕೊಂಡಿರುತ್ತಾರೆ. ಕೆಲವರು ತಮ್ಮ ಡಯಟ್ಗೆಂದು ಸೌತೆಕಾಯಿ ತಿನ್ನುತ್ತಾರೆ. ಸೌತೆಕಾಯಿ ತಿನ್ನುವುದರಿಂದ ಒಳ್ಳೆಯದಾಗುತ್ತದೆ. ಸೌತೆಕಾಯಿ ಒಳ್ಳೆಯದು ಅಂತಾ ಹೆಚ್ಚಾಗಿ ಸೇವನೆ ಮಾಡಿದ್ರೆ ಅದು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಕೆಲವು ಜನರು ಡಯಟ್ ಎಂದು ದಿನಕ್ಕೆ 8 ರಿಂದ 10 ಸೌತೆಕಾಯಿ ತಿನ್ನುತ್ತಾರೆ. ಸೌತೆಕಾಯಿ ತಿನ್ನುವುದರಿಂದ ನಮ್ಮ ದೇಹಕ್ಕೆ ಒಳ್ಳೆಯದಾಗುತ್ತೆ. ಆದರೆ ಅವಶ್ಯಕ್ಕಿಂತ ಹೆಚ್ಚು ಸೌತೆಕಾಯಿ ತಿಂದರೆ ಅಮೃತವೂ ವಿಷವಾಗುತ್ತದೆ ಎನ್ನುವ ಗಾದೆ ಮಾತಿನಂತೆ ಸೌತೆಕಾಯಿ ಕೂಡ ವಿಷ ಆಗುತ್ತದೆ. ರಾತ್ರಿ ಸಮಯದಲ್ಲಿ ಎಂದಿಗೂ ಸೌತೆಕಾಯಿ ತಿನ್ನಬೇಡಿ. ಬೆಳಗ್ಗೆ ಹೊತ್ತು ಸೌತೆಕಾಯಿ ತಿಂದರೆ ನಿಮ್ಮ ದೇಹಕ್ಕೆ ಅಧಿಕ ಲಾಭವಾಗುತ್ತದೆ. ಮಧ್ಯಾಹ್ನ ತಿಂದರೆ ಸಾಮಾನ್ಯವಾಗಿ ಒಳ್ಳೆಯದಾಗುತ್ತದೆ. ಆದರೆ ರಾತ್ರಿ ಸೌತೆಕಾಯಿ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗುತ್ತದೆ. ಸೌತೆಕಾಯಿಯಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಕುಕುರ್ಬಿಟೈನ್ ಎಂಬ ವಿಷಕಾರಿ ಅಂಶವಿರುತ್ತದೆ. ನೀವು ಅವಶ್ಯಕ್ಕಿಂತ ಹೆಚ್ಚು ಸೌತೆಕಾಯಿ ತಿಂದರೆ ನಿಮ್ಮೆ ದೇಹದಲ್ಲಿ ಟಾಕ್ಸಿಕ್ ಅಂಶ ಸೇರುತ್ತದೆ. ಇದರಿಂದ ನಿಮ್ಮ…
ಹೈದರಾಬಾದ್:- ಸಿಬಿಐ ತನಿಖೆ ರದ್ದು ತೀರ್ಮಾನ ರಾಜ್ಯ ಸರ್ಕಾರದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೈದರಾಬಾದ್ ನಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಲೋಪದೋಷಗಳಿವೆ. ನನಗೆ ನಾನೇ ವಕೀಲನಾಗಲು ಬಯಸುವುದಿಲ್ಲ. ಅಂದು ನಾನು ಸಚಿವ ಸಂಪುಟ ಸಭೆಗೆ ಹಾಜರಾಗಿಲ್ಲ. ಅದು ಸರ್ಕಾರ ತೆಗೆದುಕೊಂಡ ನಿರ್ಧಾರ. ನನ್ನ ವಿರುದ್ಧದ ತನಿಖೆಗೆ ಯಾವುದೇ ಅನುಮತಿ ನೀಡಿದರೂ ಅದು ಅಸಿಂಧು ಎಂದು ನಾನು ಅರ್ಜಿ ಸಲ್ಲಿಸಿದ್ದೆ. ನನ್ನ ವಿರುದ್ಧ ತನಿಖೆಗೆ ಅಂದಿನ ಅಡ್ವೋಕೇಟ್ ಜನರಲ್ ಅನುಮತಿ ನೀಡಿದ್ದು ಸರಿಯಲ್ಲ. ಈಗಿನ ನಿರ್ಧಾರದ ಬಗ್ಗೆ ನಾನೇನೂ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು. ಇದು ಕಾಂಗ್ರೆಸ್ ಸರ್ಕಾರದ ಪಕ್ಷಪಾತಿ ನಿರ್ಧಾರ’ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ನಾನು ಏನೂ ತಪ್ಪು ಮಾಡಿಲ್ಲ. ಅಂದಿನ ಸರ್ಕಾರ ಕೈಗೊಂಡಿದ್ದು ರಾಜಕೀಯ ನಿರ್ಧಾರ. ಇಂದಿನ ಸರ್ಕಾರ ಕೈಗೊಂಡಿದ್ದು ಕಾನೂನಾತ್ಮಕ ನಿರ್ಧಾರ’ ಎಂದು ಸ್ಪಷ್ಟಪಡಿಸಿದರು.
ಹುಬ್ಬಳ್ಳಿ:- ನಟೋರಿಯಸ್ ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಿ ಬಂಧಿಸಲಾಗಿದೆ. ಬಂಧಿಸಲು ಹೋದ ಪೊಲೀಸರ ಮೇಲೆ ರೌಡಿಶೀಟರ್ ತಲ್ವಾರ್ ನಿಂದ ಬೀಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ರೌಡಿಶೀಟರ್ ಮೇಲೆ ಫೈಯರ್ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಫೈರ್ ಮಾಡಿದ್ದಾರೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಮಂಟೂರು ರಸ್ತೆಯಲ್ಲಿ ಸತೀಶ್ ಗೋನಾ ಮೇಲೆ ಫೈರಿಂಗ್ ಮಾಡಲಾಗಿದೆ. ಶಹರ ಠಾಣೆ ಇನ್ಸ್ಪೆಕ್ಟರ್ ರಫೀಕ್ ತಹಶಿಲ್ದಾರ ಫೈರ್ ಮಾಡಿದ್ದಾರೆ. ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ್ ಗೋನಾನನ್ನು ಪೊಲೀಸರು ಬಂಧಿಸಲು ಹೋದಾಗ ತಲ್ವಾರ್ ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ಪಿ.ಎಸ್.ಐ ವಿನೋದ್ ದೊಡ್ಡಲಿಂಗಣ್ಣವರ್ ಎಂಬವರಿಗೆ ಗಾಯಗಳಾಗಿವೆ. ಈ ವೇಳೆ ಆರೋಪಿ ಕಾಲಿಗೆ ಫೈರ್ ಮಾಡಿ, ಆರೋಪಿಯನ್ನು ಬಂಧಿಸಿದ್ದಾರೆ. ಮೂರು ಸುತ್ತು ಗುಂಡು ಹಾರಿಸಲಾಗಿದ್ದು, ಒಂದು ಗುಂಡು ಆರೋಪಿಯ ಕಾಲಿಗೆ ತಗುಲಿದೆ. ಕಾಲಿಗೆ ಗುಂಡು ತಾಗಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಕಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸ್ ಕಮೀಷನರ್ ಹುಬ್ಬಳ್ಳಿಯ ಕಿಮ್ಸ್…
ಕಳೆದ ನಾಲ್ಕೈದು ದಿನಗಳಿಂದ ಬಳ್ಳಾರಿ ಜಿಲ್ಲೆಯಲ್ಲಿ ಸುರಿದ ಮಳೆ, ಹಾಲಿ ಬೆಳೆಗೆ ಜೀವಕಳೆ ತಂದಿರುವ ಜತೆಗೆ ಹಿಂಗಾರು ಬಿತ್ತನೆಗೆ ಆಶಾದಾಯಕ ಎನಿಸಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಮೆಣಸಿನಕಾಯಿ, ತೊಗರಿ ಸೇರಿ ಬಹುತೇಕ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಸ್ಥಿತಿಯಲ್ಲಿದ್ದವು. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಬೆಳೆಗಳಿಗೆ ಸಹಕಾರಿಯಾಗಿದೆ. ತೇವಾಂಶ ಹೆಚ್ಚಳದಿಂದ ಬೆಳೆಗಳು ಪುನಃ ಚಿಗುರೊಡೆದು ನಳನಳಿಸುವಂತಾಗಿದೆ. ನಷ್ಟದ ಭೀತಿಯಲ್ಲಿದ್ದ ರೈತರಿಗೆ ಮಳೆ ಹೊಸ ಭರವಸೆ ಮೂಡಿಸಿದೆ. ನೀರಾವರಿ ಪ್ರದೇಶದಲ್ಲಿ 31,401 ಹೆಕ್ಟೇರ್ ಹಿಂಗಾರು ಬಿತ್ತನೆ ಗುರಿಯಲ್ಲಿ ಈವರೆಗೆ ಕೇವಲ 4,625 ಹೆಕ್ಟೇರ್, ಮಳೆಯಾಶ್ರಿತ ಪ್ರದೇಶದಲ್ಲಿ 47,253 ಹೆಕ್ಟೇರ್ ಗುರಿಯಲ್ಲಿ 2,681 ಹೆಕ್ಟೇರ್ ಮಾತ್ರ ಬಿತ್ತನೆಯಾಗಿದೆ. ಸದ್ಯ ಸುರಿಯುತ್ತಿರುವ ಮಳೆ, ಮೋಡ ಕವಿದ ವಾತಾವರಣದಿಂದ ಹಿಂಗಾರು ಬಿತ್ತನೆ ಚುರುಕು ಪಡೆಯುವ ಲಕ್ಷಣವಿದೆ. ಬಿತ್ತನೆಗೆ ಅನ್ನದಾತರು ಸಜ್ಜುಗೊಳ್ಳುತ್ತಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಒಟ್ಟು 71,216ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿಯಾಗಿದೆ. ಸಿರುಗುಪ್ಪ, ಕಂಪ್ಲಿ, ಬಳ್ಳಾರಿ ತಾಲೂಕು, ಸಂಡೂರು, ಕುರುಗೋಡು ಪ್ರದೇಶದಲ್ಲಿ ಭತ್ತದ ಬೆಳೆ ಬಹುತೇಕ ಕಟಾವು…
ಬೆಂಗಳೂರು:- ಡಿಕೆಶಿ ವಿರುದ್ಧ ತನಿಖೆಗೆ ಸ್ಪೀಕರ್ ಅನುಮತಿ ಬೇಕಿರಲಿಲ್ಲ ಎಂದು ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಚಾರದಲ್ಲಿ ಸಭಾಧ್ಯಕ್ಷ ಸ್ಥಾನದ ಕುರಿತು ಕಾಂಗ್ರೆಸ್ ಪ್ರಸ್ತಾಪಿಸಿರುವುದು ದುರ್ದೈವದ ಸಂಗತಿಯಾಗಿದ್ದು, ಸಿಬಿಐ ತನಿಖೆಗೆ ವಹಿಸಿರುವ ವಿಷಯ ಸಭ್ಯಾಧ್ಯಕ್ಷರ ವ್ಯಾಪ್ತಿಗೆ ಬರುವುದಿಲ್ಲ ಎಂದಕು. ಸಚಿವ ಸಂಪುಟ ಕೈಗೊಂಡಿರುವ ತೀರ್ಮಾನ ಸರಿಯಲ್ಲ. ಡಿ.ಕೆ.ಶಿವಕುಮಾರ್ ಬಗ್ಗೆ ಸಿಬಿಐ ತನಿಖೆ ಮುಂದುವರಿಯಬೇಕು. ಪ್ರಕರಣದಲ್ಲಿ ಸಭಾಧ್ಯಕ್ಷರ ಪಾತ್ರ ಏನೂ ಇಲ್ಲ. ಆದರೂ ಕಾಂಗ್ರೆಸ್ ಆ ಸ್ಥಾನ ಕುರಿತು ಹೇಳಿಕೆ ನೀಡಿದೆ ಎಂದರು. ಸಚಿವ ಸಂಪುಟದ ನಿರ್ಣಯವನ್ನು ಖಂಡಿಸುತ್ತೇನೆ ಮತ್ತು ಆ ನಿರ್ಣಯ ಕೈಗೊಳ್ಳಲು ಸಭಾಧ್ಯಕ್ಷ ಸ್ಥಾನವನ್ನು ಅವರು ಬಳಕೆ ಮಾಡಿಕೊಂಡಿರುವುದು ದುರ್ದೈವದ ಸಂಗತಿ. ಸಭಾಧ್ಯಕ್ಷರ ಅನುಮತಿಯ ವ್ಯಾಪ್ತಿಯಲ್ಲಿ ಬಾರದೆ ಇರುವ ವಿಷಯಕ್ಕೆ ಸಭಾಧ್ಯಕ್ಷರು ಅನುಮತಿ ಕೊಟ್ಟಿಲ್ಲ ಎಂಬ ಕಾರಣ ಹೇಳಿ ಸಚಿವ ಸಂಪುಟ ನಿರ್ಣಯ ಮಾಡಿದ್ದು ಕಾಂಗ್ರೆಸ್ ಸರ್ಕಾರದ ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು.
ವಾಷಿಂಗ್ಟನ್: ಮನೆಯಲ್ಲಿ ಜಿರಲೆ ಕಂಡ್ರೆ ಅದನ್ನ ಕಡ್ಡಿಯಲ್ಲೋ ಪೊರಕೆಯಲ್ಲೋ ಹಿಡಿದು ಹೊರಗೆಸೆಯುತ್ತಾರೆ. ಆದ್ರೆ ಹಾವು ಬಂದ್ರೆ ಹಾಗೆ ಮಾಡೋಕಾಗುತ್ತಾ? ಇಲ್ಲ ಅನ್ನೋದಾದ್ರೆ ಇಲ್ಲಿ ಕೇಳಿ, ಅಮೆರಿಕದಲ್ಲಿ ಮಹಿಳೆಯೊಬ್ಬರು ತಲೆದಿಂಬಿನ ಕವರ್ʼನಲ್ಲೇ ದೈತ್ಯ ಹಾಗೂ ಭಯಾನಕವಾದ ಹಾವನ್ನ ಹಿಡಿದು ಹೊರಗೆಸೆದಿದ್ದು, ಇದರ ವಿಡಿಯೋ ಈಗ ವೈರಲ್ ಆಗಿದೆ. ನಾನು ಮನೆಗೆ ಬಂದಾಗ 5-6 ಅಡಿ ಉದ್ದದ ಈ ಹಾವು ಕಾಣಿಸಿತು ಅಂತ ಟ್ಯಾಟೂ ಕಲಾವಿದೆಯಾಗಿರೋ ಸನ್ಶೈನ್ ಮ್ಯಾಕ್ಕರ್ರಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಈ ವಿಡಿಯೋವನ್ನ ಹಾಕಿದ್ದಾರೆ. ಮನೆಯ ಹಾಲ್ನಲ್ಲಿ ಇದ್ದ ಕಪ್ಪು ಬಣ್ಣದ ದೈತ್ಯ ಹಾವನ್ನು ಕಂಡು ಒಂದು ತಲೆದಿಂಬಿನ ಕವರ್ ತಂದು ಹಾವಿನ ಹಿಂದೆ ಹೋಗಿ ಅದನ್ನ ನಾಯಿಮರಿ ಹಿಡಿದಷ್ಟು ಸಲೀಸಾಗಿ ಹಿಡಿದಿದ್ದಾರೆ. ನಂತರ ಅದನ್ನ ತೆಗೆದುಕೊಂಡು ಹೋಗುವಾಗಲೂ ಅದರ ಮುಖ ಕವರ್ನಿಂದ ಹೊರಗೆ ಬಂದ್ರೆ ಕೈಯ್ಯಲ್ಲೇ ಅದನ್ನ ಒಳಗೆ ನೂಕಿದ್ದಾರೆ. https://www.facebook.com/sunshine.mccurry/videos/1537616829590134/?ref=embed_video&t=106 ನಂತರ ಹಾವನ್ನ ಮನೆಯಿಂದ ಹೊರಗೆ ಹೋಗಿ ಬಿಟ್ಟಿದ್ದಾರೆ. ಆ ಹಾವು ಅತ್ತಿತ್ತ ಹೋಗದಂತೆ ಬ್ರಿಡ್ಜ್ ಕೆಳಗೆ ಹರಿದು ಹೋಗುವವರೆಗೂ…
ಬೆಂಗಳೂರು:- ಚುನಾವಣೆಯಲ್ಲಿ ಸೋತು ಸೋಮಣ್ಣ ಮಾನಸಿಕವಾಗಿ ನೊಂದಿದ್ದಾರೆ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿಧಾನಸಭೆ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧಿಸಿ ಸೋಲನುಭವಿಸಿದ್ದಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಮಾನಸಿಕವಾಗಿ ನೊಂದಿರುವ ಹಿನ್ನೆಲೆಯಲ್ಲಿ ಬೇಸರದ ಮಾತುಗಳನ್ನಾಡಿದ್ದಾರೆ ಎಂದರು. ಸೋಮಣ್ಣ ತಮ್ಮ ಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದಾರೆ. ಹೀಗಾಗಿ ಅಸಮಾಧಾನದ ಮಾತುಗಳನ್ನಾಡಿದ್ದಾರೆ. ಅವರ ಮಾತನ್ನು ಒಪ್ಪುತ್ತೇನೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಸೋಲಾಗಿರುವುದಕ್ಕೆ ಅವರಿಗೆ ನೋವಾಗಿದೆ. ಒಳ್ಳೆಯ ರಾಜಕಾರಣಿಯಾಗಿ ಕೆಲಸ ನಿರ್ವಹಿಸಿದರು. ಸ್ವಕ್ಷೇತ್ರ ಬಿಟ್ಟು ಬೇರೆ ಕಡೆ ಹೋಗಿ ಸೋಲನುಭವಿಸಿದ್ದಕ್ಕೆ ನೋವು ತಂದಿದೆ ಎಂದರು. ಗೋವಿಂದರಾಜನಗರದಲ್ಲಿ ಸ್ಪರ್ಧಿಸಿದ್ದರೆ ಖಂಡಿತವಾಗಿಯೂ ಭಾರಿ ಅಂತರದಲ್ಲಿ ಗೆಲುವು ಸಾಧಿಸುತ್ತಿದ್ದರು. ಪಕ್ಷವು ತೀರ್ಮಾನಿಸಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ನೀಡಿತ್ತು. ಸೋಮಣ್ಣ ಅವರನ್ನು ಕೇಳಿಯೇ ಕಣಕ್ಕಿಳಿಸಲಾಗಿತ್ತು ಎಂದು ಹೇಳಿದರು.
ಹಾವೇರಿ:- ರಸ್ತೆ ಪಕ್ಕ ಚಿರತೆ ಪ್ರತ್ಯಕ್ಷಗೊಂಡ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ, ಚಳಿಗೇರಿಯ ಬಳಿ ಜರುಗಿದೆ. ಪಕ್ಕದಲ್ಲಿ ಚಿರತೆ ನಿಂತಿರುವುದನ್ನು ಕಾರಿನಲ್ಲಿ ಹೋಗುತ್ತಿದ್ದವರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ. ಸದ್ಯ ಚಿರತೆ ಕಾಣಿಸಿಕೊಂಡ ನಂತರ ವಾಹನ ಸವಾರರು ಭೀತಿಯಿಂದಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
ಲಖನೌ: 16 ವರ್ಷದ ಬಾಲಕಿಯೊಬ್ಬಳು ಶುಕ್ರವಾರ ತನ್ನ ತಾಯಿಗೆ ವಿಷ ಬೆರೆಸಿದ ಚಹಾ ನೀಡಿದ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದೆ. ಬಾಯ್ಫ್ರೆಂಡ್ನೊಂದಿಗೆ ತನ್ನ ಮಗಳ ಸಂಬಂಧವನ್ನು ವಿರೋಧಿಸಿ ಹುಡುಗನನ್ನು ಭೇಟಿಯಾಗದಂತೆ ತಾಯಿ ತಡೆದಿದ್ದೇ ಇದಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆದರೂ, ತಾಯಿ ಚಹಾ ಸೇವಿಸಿದ ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಾಗ ಬಾಲಕಿ ಗಾಬರಿಗೊಂಡು ನೆರೆಹೊರೆಯವರ ಸಹಾಯ ಕೇಳಿದ್ದಾಳೆ. ನಂತರ, ಸಂಗೀತಾ ಯಾದವ್ (48) ಎಂಬ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದೂ ಪೊಲೀಸರು ತಿಳಿಸಿದ್ದಾರೆ. ಮಾರುಕಟ್ಟೆಯಿಂದ ವಿಷ ತರುವಂತೆ ಬಾಲಕಿ ತನ್ನ ಗೆಳೆಯನಿಗೆ ಕೇಳಿದ್ದಳು ಎಂದೂ ಘಟನೆ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ರಾಯ್ ಬರೇಲಿಯ ಎಸ್ಪಿ ಅಲೋಕ್ ಪ್ರಿಯದರ್ಶಿನಿ ಅವರು ಐಪಿಸಿಯ ಸೆಕ್ಷನ್ 328 ಅಡಿಯಲ್ಲಿ ಹದಿಹರೆಯದ ಬಾಲಕಿ ಮತ್ತು ಆಕೆಯ ಗೆಳೆಯನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದೂ ತಿಳಿದುಬಂದಿದೆ. ಈ ಮಧ್ಯೆ, ಬಾಲಕಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ, ಆದರೆ…