ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಮರೋಹಳ್ಳಿ, ತೊಣಚಿನಕುಪ್ಪೆ, ಭುವನೇಶ್ವರಿ ನಗರ, ಬೂದಿಹಾಳ್, ಬೊಮ್ಮನಹಳ್ಳಿ, ವೀರನಂಜಿಪುರ, ಕಾಚನಹಳ್ಳಿ, ಬೀಚನಹಳ್ಳಿ, ಪಾಪಭೋವಿಪಾಳ್ಯ, ಎರಮಂಚನಹಳ್ಳಿ, ಬೈರನಹಳ್ಳಿ, ಹೊಸೂರು, ಮಿಂಡಾಪುರ, ಎಸ್ಜೆಎಂ ನಗರ, ಎಸ್ಎಂಕೆ ನಗರ, ಬಾಬು ಜಗಜೀವನ ನಗರ, ರಾಜನಗರ, ವಿಜಯನಗರ, ದೇವರಾಜನಗರ ಮತ್ತು ಇತರ ಪ್ರದೇಶಗಳು. , ಎಸ್ಪಿ ಕಚೇರಿ, ಆರ್ಟಿಒ ಕಚೇರಿ, ಕೊಣನೂರು, ಚಿಕ್ಕೇನಹಳ್ಳಿ, ಬಿ ಜಿ ಹಳ್ಳಿ, ತೊಡ್ರನಾಳ್, ಟಿ ನುಲೇನೂರು, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆ.ಟಿ.ಎನ್.ಹಳ್ಳಿ, ಪಿಲಾಲಿ ಮತ್ತು ರಂಗನಾಥಪುರ. ರಾಮರಾಯನ ಪಾಳ್ಯ, ಬಿಟಿಎಸ್ ಮಿಲ್, ಕನ್ನಮಂಗಲ, ಕನ್ನಮಂಗಲ ಗೇಟ್, ನಾಗೇನಹಳ್ಳಿ, ಕೆಂಜಿಗಾನಹಳ್ಳಿ, ಕಮ್ಮಸಂದ್ರ, ಎಲ್ಲದಹಳ್ಳಿ, ತಿಮ್ಮಸಂದ್ರ, ವೊಡ್ಡಿಗೆರೆ, ಆಲೇನಹಳ್ಳಿ, ಬಿಲಂಕೋಟೆ ಏರಿಯಾ, ಹೊಸಹಳ್ಳಿ, ಹನುಮಂತಪುರ, ಕುಳ್ಳುವನಹಳ್ಳಿ, ಲಕ್ಕೇನಹಳ್ಳಿ, ಜಿರಾಮಪ್ಪನನಹಳ್ಳಿ, ಜಿರಾಮಪ್ಪನಹಳ್ಳಿ ದೊಡ್ಡೇರಿ d ಇಂಡಸ್ಟ್ರಿ, Sk ಸ್ಟೀಲ್ ಕೈಗಾರಿಕೆ, ಯಡೇಹಳ್ಳಿ, ಭಾರತೀಪುರ, ಕೆ ಜಿ ಶ್ರೀನಿವಾಸಪುರ, ಕೆಂಗಲ್ಕೆಂಪೋಹಳ್ಳಿ, ಬಿಲ್ಲನಕೋಟೆ, ಹೊಸಹಳ್ಳಿ, ಹನುಮಂತಪುರ, ಕುಳ್ಳುವನಹಳ್ಳಿ, ಲಕ್ಕೇನಹಳ್ಳಿ, ದೊಡ್ಡೇರಿ,…
Author: AIN Author
ಬೆಂಗಳೂರು:- ಸೋಮಣ್ಣ ಫೋನ್ ರಿಸೀವ್ ಮಾಡ್ತಿಲ್ಲ, ಇನ್ನೇನೂ ಮಾಡಕ್ಕಾಗಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪಕ್ಷದಿಂದ ಅನ್ಯಾಯ ಆಗಿದೆ ಎಂದು ಹೇಳಿಕೊಳ್ಳುತ್ತಿರುವ ವಿ.ಸೋಮಣ್ಣ ಅವರನ್ನು ಫೋನ್ನಲ್ಲಿ ಸಂಪರ್ಕಿಸಲು ಪ್ರಯತ್ನ ನಡೆಸುತ್ತಿದ್ದೇನೆ. ಅವರು ಫೋನ್ ರಿಸೀವ್ ಮಾಡುತ್ತಿಲ್ಲ. ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ. ಬರಲಿಲ್ಲ ಅಂದರೆ ಏನು ಮಾಡಲು ಆಗುತ್ತದೆ?-ಹೀಗೆಂದು ಹೇಳಿದ್ದಾರೆ. ವಿ. ಸೋಮಣ್ಣ ಅವರು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ ತಮಗೆ ಪಕ್ಷದಿಂದ ಅನ್ಯಾಯ ಆಗಿದೆ ಎಂದು ಸ್ವಾಮೀಜಿಗಳ ಬಳಿ ನೋವು ತೋಡಿಕೊಂಡಿದ್ದರು. ತಾನು ಗೋವಿಂದರಾಜ ಕ್ಷೇತ್ರದಿಂದ ಸ್ಪರ್ಧೆ ಮಾಡದೆ ಘೋರ ಅಪರಾಧ ಮಾಡಿದೆ. ಅಮಿತ್ ಶಾ ಮತ್ತು ನರೇಂದ್ರ ಮೋದಿ ಅವರು ತನ್ನನ್ನು ಬಲವಂತದಿಂದ ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಮಾಡಿದರು ಎಂದು ಕಣ್ಣೀರು ಹಾಕಿದ್ದರು. ಮಾಧ್ಯಮದ ಮಂದಿ ಈ ಬಗ್ಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಪ್ರಶ್ನಿಸಿದಾಗ, ಸೋಮಣ್ಣ ಅವರು ಮಾತನಾಡಿದ್ದನ್ನು ನಾನು ನೋಡಿದ್ದೇನೆ. ಅವರ…
ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ ವಿಚಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ‘ಬಿಜೆಪಿ ಪಾರ್ಟಿ(BJP Party)ಯನ್ನು ಒಬ್ಬ ರಾಮುಲು ಮಾತ್ರ ಕಟ್ಟಿಲ್ಲ. ರಾಜ್ಯದಲ್ಲಿರುವ ಕೊಟ್ಯಾಂತರ ಕಾರ್ಯಕರ್ತರ ಶ್ರಮದಿಂದ ಇವತ್ತು ಇಷ್ಟು ದೊಡ್ಡ ಪಾರ್ಟಿ ಆಗಿ ಬೆಳೆದಿದೆ. ಇಂತಹ ಸಂಧರ್ಭದಲ್ಲಿ ಯಾರನ್ನೂ ಸೇರಬೇಡ ಎನ್ನಲು ನನಗೆ ಅಧಿಕಾರ ಇಲ್ಲ. ನೂರು ಅಲ್ಲ, ಸಾವಿರ ಜನ ಬಂದ್ರೂ ನಮ್ಮ ಪಾರ್ಟಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಸರ್ವಾಧಿಕಾರ ಇದೆ. ಹೀಗಾಗಿ ನನ್ನ ಅಭ್ಯಂತರವಿಲ್ಲ ಎಂದರು. ಎಲ್ಲರೂ ಸೇರಿದ್ರೆ ಮತ್ತೆ ಗೆಲುವು ಸಾಧ್ಯ ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ನಾನು ಜೀವನದಲ್ಲಿ ಯಾವತ್ತೂ ದ್ವೇಷ ಹಾಗೂ ಅಸೂಹೆ ರಾಜಕಾರಣ ಮಾಡಿಲ್ಲ. ಯಾರೇ ಬಂದರೂ ಪಾರ್ಟಿಗೆ ಅನುಕೂಲ ಆಗಲಿ ಎಂದು ಬಯಸುವೆ. ಯಾರಾದರೂ ಬರುತ್ತಾರೆ ಎಂದರೆ ಬೇಡ ಎನ್ನುವುದಕ್ಕೆ ನಾನು ಯಾರು?, ಪಾರ್ಟಿಯಲ್ಲಿ ಕೆಲಸ ಮಾಡುವ ಸಮಯದಲ್ಲಿ ನನ್ನ ವೈಯಕ್ತಿಕ ತೀರ್ಮಾನ, ಅಭಿಪ್ರಾಯ ಇರಲ್ಲ. ಪಾರ್ಟಿ ತೀರ್ಮಾನ ಏನಿರುತ್ತದೆ, ಅದಕ್ಕೆ ನಾವು…
ಡಿಸೆಂಬರ್ನಲ್ಲಿ ನಡೆಯಲಿರುವ ಈ ವರ್ಷದ ಐಪಿಎಲ್ ಹರಾಜಿಗೂ ಮುನ್ನ ಹಾರ್ದಿಕ್ ಪಾಂಡ್ಯ ಐದು ಬಾರಿ ಐಪಿಎಲ್ ವಿಜೇತ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಲು ಕುರಿತು ವರದಿಯಾಗಿದೆ. ಐಪಿಎಲ್ ಫ್ರಾಂಚೈಸಿಗಳು ಆಟಗಾರರನ್ನು ವಿನಿಮಯ ಮಾಡಿಕೊಳ್ಳುವ ಟ್ರೇಡಿಂಗ್ ವಿಂಡೋ ಮುಗಿಯಲು ಇನ್ನೊಂದು ದಿನ ಬಾಕಿ ಇರುವಂತೆಯೇ ಹಾರ್ದಿಕ್ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ಗೆ ಮರಳಲಿದ್ದಾರೆ ಎಂಬ ವರದಿಗಳಿವೆ. ಆದರೆ ಈ ಬಗ್ಗೆ ಗುಜರಾತ್ ಟೈಟಾನ್ಸ್ ಅಥವಾ ಮುಂಬೈ ಇಂಡಿಯನ್ಸ್ ಯಾವುದೇ ಹೇಳಿಕೆ ನೀಡಿಲ್ಲ. ಆಟಗಾರರನ್ನು ಬದಲಿಸಲು ಫ್ರಾಂಚೈಸಿಗಳಿಗೆ ಭಾನುವಾರದವರೆಗೆ ಅವಕಾಶವಿದೆ. ಅಲ್ಲಿಯವರೆಗೆ ಈ ಬಗ್ಗೆ ಸ್ಪಷ್ಟತೆ ಸಿಗುವ ಸಾಧ್ಯತೆ ಇಲ್ಲದಂತಾಗಿದೆ. ಪಾಂಡ್ಯ ಏಳು ವರ್ಷಗಳ ಕಾಲ ಮುಂಬೈ ಇಂಡಿಯನ್ಸ್ ಪರ ಆಡಿರುವುದು ಗಮನಾರ್ಹ. 2022ರ ಸೀಸನ್ಗೂ ಮುನ್ನ ಮುಂಬೈ ತಂಡದ ಪರ ಆಡುತ್ತಿದ್ದ ಪಾಂಡ್ಯರನ್ನು ತಮ್ಮೆ ತಂಡಕ್ಕೆ ಕರೆತಂದ ಗುಜರಾತ್ ಟೈಟಾನ್ಸ್, ನಾಯಕತ್ವ ಪಟ್ಟವನ್ನು ನೀಡಿತು. ಹಾರ್ದಿಕ್ ನಾಯಕತ್ವದಲ್ಲಿ ಗುಜರಾತ್ ಸತತ ಎರಡು ವರ್ಷಗಳ ಫೈನಲ್ ತಲುಪಿದೆ. ಮೊದಲ ವರ್ಷ…
ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಕಿಡಿ ಕಾರಿದರು. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಡಿಕೆಶಿಗೆ ಒಂದು ನ್ಯಾಯ, ಸಚಿವ ನಾಗೇಂದ್ರಗೆ ಒಂದು ನ್ಯಾಯ ಸಿಕ್ಕಿದೆ. ಇದೇ ಸಿದ್ದರಾಮಯ್ಯ ಹಿಂದೆ ನಾಗೇಂದ್ರ ವಿರುದ್ಧ 8-10 ಕೇಸ್ ಗಳಲ್ಲಿ ತನಿಖೆಗೆ ಅನುಮತಿ ಕೊಟ್ಟಿದ್ರು. ನಾಗೇಂದ್ರರನ್ನು ಈಗ ಅವರದ್ದೇ ಸಂಪುಟದಲ್ಲಿ ಸಿದ್ದರಾಮಯ್ಯ ಸಚಿವ ಮಾಡಿದ್ದಾರೆ. ಆದರೆ ನಾಗೇಂದ್ರ 8-10 ಪ್ರಕರಣಗಳಲ್ಲಿ ಈಗಲೂ ತನಿಖೆ ಎದುರಿಸುತ್ತಿದ್ದಾರೆ. ಅವರ ವಿರುದ್ಧ ಚಾರ್ಜ್ ಶೀಟ್ ಸಹ ಹಾಕಲಾಗಿದೆ. ಡಿಕೆಶಿ ವಿರುದ್ಧ ಸಿಬಿಐ ಅನುಮತಿ ವಾಪಸ್ ಪಡೆದ ಸಿದ್ದರಾಮಯ್ಯ ನಾಗೇಂದ್ರ ವಿರುದ್ಧದ ಪ್ರಕರಣಗಳಲ್ಲೂ ಅನುಮತಿ ವಾಪಸ್ ಪಡೆಯಲಿ. ಸಿದ್ದರಾಮಯ್ಯ ಡಿಕೆಶಿಗೆ ಒಂದು ನ್ಯಾಯ – ನಾಗೇಂದ್ರ ಗೆ ಒಂದು ನ್ಯಾಯ ಕೊಡಬಾರದು. ನಾಗೇಂದ್ರ ವಿರುದ್ಧ ಇರುವ ಪ್ರಕರಣಗಳಲ್ಲಿ ತನಿಖೆಗೆ ಕೊಟ್ಟಿರುವ ಅನುಮತಿಗಳನ್ನು ವಾಪಸ್ ಪಡೆಯಲಿ ಎಂದು ಸವಾಲು ಹಾಕಿದರು. ಕೆಆರ್ಪಿಪಿ ಪಕ್ಷ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡ್ತಿದ್ದೇವೆ. ನಾನು ಪ್ರತೀ…
ಹುಬ್ಬಳ್ಳಿ :- ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕಕ್ಕೆ ವಿ ಸೋಮಣ್ಣ ಬೇಸರ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪಕ್ಷದಲ್ಲಿ ಅತೃಪ್ತಿ ಏನೇ ಇರಲಿ, ಬಹಿರಂಗ ಚರ್ಚೆ ಸಲ್ಲದು. ಮಾಜಿ ಸಚಿವ ಸೋಮಣ್ಣ ಬಂಡಾಯದ ಕುರಿತು ಹಾಗೂ ವಿಜಯೇಂದ್ರ ನೇಮಕದ ನಂತರ ಸೋಮಣ್ಣ ಅತೃಪ್ತಿಯ ಬಗ್ಗೆ ನನಗೆ ಮಾಹಿತಿ ಇಲ್ಲ. ಅದು ಏನೇ ಇದ್ದರೂ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಹೇಳಿದರು. ಸೋಮಣ್ಣ ಹೈಕಮಾಂಡ್ ಗೆ ದೂರು ನೀಡುತ್ತಿರುವ ಕುರಿತು ಮಾಹಿತಿ ಇಲ್ಲ. ನಿಮ್ಮ ಕುಂದು ಕೊರತೆಗಳು ಏನೇ ಇರಲಿ ಅದನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ಗಮನಕ್ಕೆ ತರಲಿ ಅಥವಾ ಇತರ ರಾಷ್ಟ್ರೀಯ ನಾಯಕರಿಗೆ ಮಾಹಿತಿ ನೀಡಲಿ. ಮಾಧ್ಯಮದ ಮೂಲಕ ಇದನ್ನು ಚರ್ಚಿಸುವುದು ಒಳ್ಳೆಯದಲ್ಲ ಎಂದರು. ಸೋಮಣ್ಣ ಪ್ರಮುಖ ನಾಯಕರು ವೈಯಕ್ತಿಕವಾಗಿಯೂ ಆತ್ಮೀಯರಾಗಿದ್ದು, ಅವರ ಜೊತೆ ಮಾತಾಡ್ತೇನೆ ಎಂದ ಅವರು, ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನ ಆಯ್ಕೆವಿಚಾರದಲ್ಲಿ ಉತ್ತರ ಕರ್ನಾಟಕ ಕಡೆಗಣನೆ ವಿಚಾರವಾಗಿ ಮಾತನಾಡಿದ…
ಬೆಂಗಳೂರು:- ಡಿಕೆಶಿ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆದ ವಿಚಾರಕ್ಕೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಡಿಕೆ ಶಿವಕುಮಾರ ವಿರುದ್ಧದ ಸಿಬಿಐ ಕೇಸ್ ವಾಪಾಸ್ ಪಡೆಯುವ ಸಂಪುಟ ನಿರ್ಣಯ ವಿಚಾರದಲ್ಲಿ ನಮ್ಮ ಸರ್ಕಾರ ಸಿಬಿಐಗೆ ವಹಿಸಿರುವುದರಲ್ಲಿ ಯಾವುದೇ ರೀತಿ ಕಾನೂನು ಉಲ್ಲಂಘನೆ ಆಗಿಲ್ಲ. ಹಾಗೇನಾದ್ರೂ ಆಗಿದ್ದರೆ ನ್ಯಾಯಾಲಯದಲ್ಲಿ ಇವರು ವಾದ ಮಾಡಬೇಕಿತ್ತಲ್ಲ ಎಂದರು. ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ವರ್ತಿಸುತ್ತಿದೆ. ಈ ವಿಚಾರದಲ್ಲಿ ತಪ್ಪು ಆಗಿದ್ದರೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಬೇಕಿತ್ತು. ಆಗ ಏಕೆ ನ್ಯಾಯಾಲಯಕ್ಕೆ ಹೋಗಿಲ್ಲ? ನಾವು ಅಧಿಕಾರದಲ್ಲಿದ್ದಾಗ ಎಲ್ಲವೂ ಕಾನೂನು ಪ್ರಕಾರವಾಗಿ ಕೆಲಸ ಮಾಡಿದ್ದೇವೆ. ನಾವು ಕಾನೂನು ಉಲ್ಲಂಘನೆ ಮಾಡಿದ್ದರೆ ನ್ಯಾಯಾಲಯ ಅದನ್ನು ಐದೇ ನಿಮಿಷದಲ್ಲಿ ತಿರಸ್ಕಾರ ಮಾಡುತ್ತಿತ್ತು. ಈ ಹಿಂದೆಯೂ ಹಲವು ಸಿಬಿಐ ಕೇಸ್ ಗಳನ್ನು ಬೇರೆ ಬೇರೆ ಸರ್ಕಾರಗಳು ಹಿಂದೆ ಪಡೆಯಲು ಪ್ರಯತ್ನಿಸಿ ವಿಫಲವಾಗಿವೆ ಹಾಗಾಗಿ ಈ ವಿಚಾರದಲ್ಲೂ ಸಿಬಿಐ ತನಿಖೆಯೇ ಮುಂದುವರಿಯುತ್ತದೆ.ಸತ್ಯಕ್ಕೆ,…
ಗುಳೇದಗುಡ್ಡ :- ಪ್ರಧಾನಿ ಮೋದಿಗೆ ತಾಯಿ ಕರುಳು ಇಲ್ಲ ಎಂದು ಸಚಿವ ತಿಮ್ಮಾಪೂರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರೈತ ತೊಂದರೆಗೊಳಗಾದಾಗ ದೇಶದ ಪ್ರಧಾನಿ ಅವರ ಪರವಾಗಿರಬೇಕು. ದೇಶದ ಪ್ರಧಾನಿಗೆ ತಾಯಿಕರುಳ ಇರಬೇಕು. ಆದರೆ, ನಮ್ಮ ಪ್ರಧಾನಿ ಚುನಾವಣೆ ರಾಜಕಾರಣದಲ್ಲಿ ಬ್ಯುಜಿಯಾಗಿದ್ದು, ಪಕ್ಷಪಾತ ಧೋರಣೆ ತೋರುತ್ತಿರುವುದು ಬಹಳ ದುದೈವದ ಸಂಗತಿಯಾಗಿದೆ ಎಂದರು. ರಾಜ್ಯ ಬರದಿಂದ ತತ್ತರಿಸಿದೆ. ರಾಜ್ಯ ಸರ್ಕಾರ ಬರ ಪರಿಹಾರ ಕೇಳಲು ಹೋದರೆ ಪ್ರಧಾನಿ ಕೈಗೆ ಸಿಗುತ್ತಿಲ್ಲ. ಸಂಕಷ್ಟ ಕಾಲದಲ್ಲೂ ಅವರು ರಾಜಕೀಯ ಮಾಡುತ್ತಿದ್ದಾರೆ. ಒಬ್ಬ ಪ್ರಧಾನಿಯಾಗಿದ್ದರೂ ಕೂಡ ಕಾರ್ಪೋರೇಷನ್ ಚುನಾವಣೆ ಪ್ರಚಾರದಲ್ಲೂ ಅವರು ಭಾಗವಹಿಸುತ್ತಾರೆ. ಇಂಥ ಪ್ರಧಾನಿಯನ್ನು ನಾವು ನೋಡಿರಲೇ ಇಲ್ಲ. ನಮ್ಮ ಸರ್ಕಾರ ಕೇಂದ್ರದ ಬಳಿ ಭಿಕ್ಷೆ ಕೇಳುತ್ತಿಲ್ಲ. ನಮಗೆ ಬರಬೇಕಾದ ನ್ಯಾಯಯುತ ಪರಿಹಾರವನ್ನು ನಾವು ಕೇಳುತ್ತಿದ್ದೇವೆ. ಅವರು ಹೆಚ್ಚಿನ ಪರಿಹಾರ ಕೊಡುವದಂತೂ ದೂರದ ಮಾತು. ನಮಗೆ ಕೊಡುಬೇಕಾದ ಪರಿಹಾರವನ್ನಾದರೂ ಕೊಡಬೇಕಲ್ಲವೇ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದಾರೆ. ಆದರೆ, ಯಾವೊಬ್ಬ ಸಂಸದರು ಪ್ರಧಾನಿ…
ವಿಜಯಪುರ:- ಕರ್ನಾಟಕದ ಹಿಂದೂಗಳು ಒಗ್ಗಟ್ಟಾಗುವಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ ನೀಡಿದರು. ಈ ಸಂಬಂಧ ವಿಜಯಪುರದಲ್ಲಿ ಮಾತನಾಡಿದ ಅವರು, ವಿಜಯಪುರದಲ್ಲಿ ಹಿಂದೂಗಳ ಒಗ್ಗಟ್ಟಾಗಿದ್ದಾರೆ. ಅದೇ ತರ ಸಮಸ್ತ ಕರ್ನಾಟಕದ ಹಿಂದೂಗಳು ಒಗ್ಗಟ್ಟಾಗುವಂತೆ ಕರೆ ನೀಡಿದರು. ಪಾಕಿಸ್ತಾನ ಭಾರತದ ಮೇಲೆ ಯುದ್ಧ ಮಾಡಿದ್ರೆ ಪಾಕಿಸ್ತಾನಕ್ಕೆ ಬೆಂಬಲ ನೀಡುವಂತೆ ಓವೈಸಿ ಭಾಷಣ ಮಾಡ್ತಾರೆ. 15 ನಿಮಿಷ ಪೊಲೀಸರು ಸುಮ್ನಿದ್ರೆ ಹಿಂದೂಗಳನ್ನು ಖತಮ್ ಮಾಡುತ್ತೇವೆ ಎಂದು ಭಾಷಣ ಮಾಡಿದ್ದಾರೆ. ಮುಂದೆ ಸಂದರ್ಭ ಬಂದರೆ ಅದರಂತೆ ಮಾಡ್ತಾರೆ. ಅದಕ್ಕಾಗಿ ಸಮಸ್ತ ಹಿಂದೂಗಳು ಒಗ್ಗಟ್ಟಾಗಿರಬೇಕು. ವಿಜಯಪುರದಲ್ಲಿ ಹಿಂದೂಗಳು ಒಗ್ಗಟ್ಟಾಗಿದ್ದಾರೆ. ಅದರಂತೆ ಕರ್ನಾಟಕದಲ್ಲೂ ಒಗ್ಗಟ್ಟಾಗುವಂತೆ ಕರೆ ನೀಡಿದರು. ಇನ್ನು ಕಾಂಗ್ರೆಸ್ ಗ್ಯಾರಂಟಿ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಯತ್ನಾಳ್, ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಸ್ಕೀಂಗಳು ಬೋಗಸ್ ಸ್ಕೀಂಗಳು ಎಂದು ಲೇವಡಿ ಮಾಡಿದರು ಮುಂದುವರಿದು, ಪ್ರತಿ ಕುಟುಂಬಕ್ಕೂ 200 ಯುನಿಟ್ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದ್ರು. ಆದರೆ ಇದರಿಂದ ಜನತೆಗೆ ಅನುಕೂಲ ಆಗುವ ಬದಲು ಸಮಸ್ಯೆಯೇ ಆಗಿದೆ. ಚುನಾವಣೆಗೆ ಮೊದಲು…
ಬೆಂಗಳೂರು:- ನ.29ರಿಂದ ಡಿ.1ರವರೆಗೆ ಬೆಂಗಳೂರು ಟೆಕ್ ಸಮಿಟ್ ನಡೆಯಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅರಮನೆ ಮೈದಾನದಲ್ಲಿ ನವೆಂಬರ್ 29ರಿಂದ ಡಿಸೆಂಬರ್ 1ರ ವರೆಗೆ ಬೆಂಗಳೂರು ಟೆಕ್ ಸಮಿಟ್ ನಡೆಯಲಿದೆ ಎಂದರು. ಬಂಡವಾಳ ಹೂಡಿಕೆ ಹಾಗೂ ಆರ್ಥಿಕತೆ ಪ್ರಗತಿ ಹಾಗೂ ಉದ್ಯೋಗ ಸೃಷ್ಟಿಗೆ ಸಮ್ಮಿಟ್ ನಿಂದ ಉಪಯೋಗವಾಗಲಿದೆ. ಟೆಕ್ ಸಮ್ಮಿಟ್ ನ 26ನೇ ಆವೃತಿ ಇಲ್ಲಿ ಆಯೋಜನೆ ಮಾಡಿದ್ದು, ಮುಂದಿನ ಮೂರು ವರ್ಷಗಳಿಗೂ ಇದೇ ಥೀಮ್ ಇರಲಿದೆ. ಅದರ ದಿನಾಂಕಗಳನ್ನೂ ನಿಗದಿ ಮಾಡಲಾಗಿದೆ. ಅಂತರಾಷ್ಟ್ರೀಯ ಪಾಲುದಾರಿಕೆ ಸಲುವಾಗಿ ಈ ಪ್ರಯತ್ನ ಮಾಡಲಾಗಿದೆ. ಇನ್ನೋವೇಷನ್ ಇಂಡಿಯಾ ಇಂಪ್ಯಾಕ್ಟ್ ಫಾರ್ ವರ್ಲ್ಡ್ , ಬ್ರೇಕಿಂಗ್ ಬೌಂಡ್ರೀಸ್, ಅನ್ನೋದು ನಮ್ಮ ಥೀಮ್ ಆಗಿದೆ ಎಂದಿದ್ದಾರೆ.