ತುಮಕೂರಿನಲ್ಲಿ ಸೋಮಣ್ಣ ಸ್ಪರ್ಧೆ ವಿಚಾರ ಬಗ್ಗೆ ಸಿದ್ದಗಂಗಾ ಮಠದಲ್ಲಿ ಸಂಸದ ಜಿಎಸ್ ಬಸವರಾಜ್ ಪ್ರತಿಕ್ರಿಯೆ ನೀಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೋಮಣ್ಣರಿಗೆ ಟಿಕೆಟ್ ನೀಡಿದ್ರೆ ಶಿರಾಸಾ ವಹಿಸಿ ಮಾಡ್ತಿವಿ ಅವರು ಇಲ್ಲಿ ಎರಡು ಬಾರಿ ಜಿಲ್ಲಾ ಮಂತ್ರಿಗಳು ಆಗಿದ್ದವರು ದೇವೆಗೌಡರ ವಿರುದ್ಧ ನನ್ನ ಚುನಾವಣೆಯಲ್ಲಿ ಉಸ್ತುವಾರಿ ಆಗಿದ್ದರು ನೂರಕ್ಕೆ ನೂರು ನನ್ನ ಭವಿಷ್ಯ ಅವರ ಮೇಲಿತ್ತು.ನನ್ನ ಗೆಲ್ಲಿಸಿದ್ರು.. ಸೋಮಣ್ಣ ಪರ ಟಿಕೆಟ್ ನೀಡಿ ಅಂತಾ ನೀವು ಕೇಳ್ತಿರಾ ಎಂಬ ಪ್ರಶ್ನೆ ಗೆ ಬಸವರಾಜ್ ಉತ್ತರ.. ಪ್ರಜಾಪ್ರಭುತ್ವದಲ್ಲಿ ನಾನೇನು ಕುರುಡಾನಾ..? ಅವರು ಕೇಳಿದಾಗ ಏನ್ ಹೇಳಬೇಕು ಅದು ಉತ್ತರ ಕೊಡ್ತಿನಿ https://ainlivenews.com/laser-therapy-soukhy-robotic-ortho-care/ ಹಾಗೆ ಡಿ.7 ರಂದು ಸೋಮಣ್ಣ ದೆಹಲಿಗೆ ತೆರಳುವ ವಿಚಾರ ಬಗ್ಗೆನೂ ಮಾತನಾಡಿ ನಾನು ಸಹ ದೆಹಲಿಯಲ್ಲಿ ಇರ್ತಿನಿ ಪಾರ್ಲಿಮೆಂಟ್ ಇರುತ್ತದೆ ಪಾರ್ಟಿ ಯಾರಿಗೆ ಟಿಕೆಟ್ ಕೊಡ್ತಾರೋ ಅವರಿಗೆ ಮಾಡ್ತಿವಿ ಸೋಮಣ್ಣ ಪರ ಬ್ಯಾಟ್ ಬಿಸೋದು ಗಿಸೋದು ಏನ್ ಅಲ್ಲ ದೆಹಲಿಗೆ ಹೋಗಿ ನಾನು ಇವರಿಗೆ ಸೀಟ್ ಕೊಡಿ ಅಂದ್ರೆ…
Author: AIN Author
ತುಮಕೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಹತಾಶೆ, ಬಿಜೆಪಿ ರಾಜ್ಯಾಧ್ಯಕ್ಷ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಇಂದು (ಶನಿವಾರ) ಸಿದ್ದಗಂಗಾ ಮಠಕ್ಕೆ (Siddaganga Matt) ತೆರಳಿ ಶ್ರೀಗಳನ್ನು ಭೇಟಿಯಾದರು. ಶ್ರೀಗಳ ಮುಂದೆ ಸೋಮಣ್ಣ (V.Somanna) ಚುನಾವಣಾ ಸೋಲಿನ ನೋವು ತೋಡಿಕೊಂಡರು. https://ainlivenews.com/laser-therapy-soukhy-robotic-ortho-care/ ಸೋಲಿನ ಬೇಸರವನ್ನು ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಬಳಿ ಹಂಚಿಕೊಂಡಿದ್ದಾರೆ. “ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧವಾಯ್ತು. ಕೇಂದ್ರ ಗೃಹ ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು. ಎರಡು ಗಂಟೆ ಮನೆಯಲ್ಲಿ ಕುಳಿತುಕೊಂಡಿದ್ದರು, ಆಗಲ್ಲ ಅಂತಾ ಹೇಳಿದ್ದೆ. ಪ್ರಧಾನಿ ಮೋದಿಯವರು ದೆಹಲಿಗೆ ಕರೆಸಿ ನೀನು ಸ್ಪರ್ಧೆ ಮಾಡು ಅಂದರು, ಏನ್ಮಾಡಲಿ” ಎಂದು ಬೇಸರ ವ್ಯಕ್ತಪಡಿಸಿದರು. ಈ ಮೂಲಕ ತಾವು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾರಣವೇನು ಎಂಬುವುದರ ಹಿಂದಿನ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಟು ಎ ಮೀಸಲಾತಿ ನೀಡಲು ಸರ್ಕಾರ ಮಲಗಿದೆ ಬಡದಿಬ್ಬಿಸಲು ಹೋರಾಟ ನಮಗೆ ಅನಿವಾರ್ಯವಾಗಿದೆ. ಪ್ರಪ್ರಥಮ ಬಾರಿಗೆ ರಬಕವಿ ಬನಹಟ್ಟಿ ತಾಲೂಕಿನಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮ ೧೯೯ ಜಯಂತಿ ಆಚರಣೆ ಮತ್ತು ಟು ಎ ಮೀಸಲಾತಿ ಪಡೆಯುವುದಕ್ಕೆ ಚಳವಳಿ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದೇವೆ ಮತ್ತು ಡಿಸೆಂಬರ್ದಲ್ಲಿ ನಡೆಯುವ ಬೆಳಗಾವಿ ಚಳಿಗಾಲ ಅಧಿವೇಶನದ ಮುಂದೆ ಇರುವ ಪ್ರಮುಖ ಹೆದ್ದಾರಿ ರಸ್ತೆಯ ಮೇಲೆ ಇಷ್ಟಲಿಂಗ ಪೂಜೆ ಮಾಡುವುದರ ಮುಖಾಂತರ ಸರ್ಕಾರವನ್ನು ಗಮನಸೆಳೆಯಲು ದಿನಾಂಕವನ್ನು ಅತಿ ಶೀಘ್ರದಲ್ಲಿ ಪ್ರಕಟಿಸುತ್ತೇವೆ ಎಂದು ಪ್ರಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಕೂಡಲಸಂಗಮ ಹೇಳಿದರು ಲಿಂಗಾಯತ ಪಂಚಮಸಾಲಿ ಸಮುದಾಯದವರು ಒಗ್ಗಟಿನಿಂದ ಪ್ರದರ್ಶನ ಮಾಡಿದರೆ ಸರ್ಕಾರ ಕಣ್ಣು ತೆರೆದು ನಮಗೆ ಟು ಎ ಮೀಸಲಾತಿ ನೀಡುತ್ತದೆ. ನಮ್ಮ ಹಕ್ಕನ್ನು ನಾವು ಪಡೆದುಕೊಳ್ಳಲು ಹೋರಾಟ ಅನಿವಾರ್ಯ. …
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನಂದನವನ ಲೇಔಟ್ನ ನಿವಾಸದಲ್ಲಿ ಆರ್.ಅಶೋಕ್ ಅವರು ಹುತಾತ್ಮ ಯೋಧ ಪ್ರಾಂಜಲ್ ಅಂತಿಮ ದರ್ಶನ ಪಡೆದರು. ವೀರ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಕರ್ನಾಟಕದ ಹೆಮ್ಮೆ ಎಂದು ಅಂತಿಮ ದರ್ಶನ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ದೇಶಕ್ಕಾಗಿ ಧೈರ್ಯ, ಶೌರ್ಯದಿಂದ ಎಂ.ವಿ.ಪ್ರಾಂಜಲ್ ಹೋರಾಡಿದ್ದಾರೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪುಣ್ಯ ಪುತ್ರ. ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಂತಿಮ ದರ್ಶನ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. https://ainlivenews.com/laser-therapy-soukhy-robotic-ortho-care/ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ವೀರ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತಿಮ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್ನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು, ಮಕ್ಕಳು ಸೇರಿ ನೂರಾರು ಜನರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಹುಬ್ಬಳ್ಳಿ : ಜಿಯೋ ಕರ್ನಾಟಕದ 54 ಪಟ್ಟಣಗಳಲ್ಲಿ ಗೃಹ ಮನರಂಜನೆ, ಸ್ಮಾರ್ಟ್ ಹೋಮ್ ಸೇವೆಗಳು ಮತ್ತು ಹೈಸ್ಪೀಡ್ ಬ್ರಾಡ್ಗಾಗಾಗಿ ಅದರ ಸಂಯೋಜಿತ ಎಂಡ್-ಟು-ಎಂಡ್ ಪರಿಹಾರವಾದ ಜಿಯೋ ಏರ್ ಪೈಬರ್ ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿತು. ಹುಬ್ಬಳ್ಳಿ, ಧಾರವಾಡ ಮತ್ತು ಬೆಳಗಾವಿ ಸೇರಿ ಕರ್ನಾಟಕದ 54 ಪಟ್ಟಣಗಳಲ್ಲಿ ಜಿಯೋ ಏರ್ಫೈಬರ್ನ ಸೇವೆಲಭ್ಯವಿದೆ. ಈ ಸೇವೆಯನ್ನು ಸೆಪ್ಟೆಂಬರ್ 19 ರಂದು ರಾಷ್ಟ್ರವ್ಯಾಪಿ ಬಿಡುಗಡೆ ಮಾಡಲಾಗಿತ್ತು.ಈ ಮೂಲಕ ದೇಶಾದ್ಯಂತ ಸಮುದಾಯಗಳಿಗೆ ಅತ್ಯಾಧುನಿಕ ಸಂಪರ್ಕ ಪರಿಹಾರಗಳನ್ನು ಒದಗಿಸುವ ಜಿಯೋದ ಬದ್ಧತೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. https://ainlivenews.com/laser-therapy-soukhy-robotic-ortho-care/ ಜಿಯೋಏರ್ ಫೈಬರ್ ಯೋಜನೆಯು 599 ರೂ.ಗೆ 30 ಎಂಬಿಪಿಎಸ್ ವೇಗದಲ್ಲಿ ಅನಿಯಮಿತ ಡೇಟಾವನ್ನು ನೀಡುತ್ತದೆ. ಅಲ್ಲದೆ, 899 ರೂ ಮತ್ತು ರೂ 1199 ರೂ. ಗೆ 100 ಎಂಬಿಪಿಎಸ್ ವೇಗದ ಯೋಜನೆಗಳು ಲಭ್ಯವಿದೆ. 599 ರೂ ಮತ್ತು 899 ರೂ ಯೋಜನೆಗಳೊಂದಿಗೆ 14 ಓಟಿಟಿ ಅಪ್ಲಿಕೇಶನ್ಗಳು ಲಭ್ಯವಿದ್ದರೆ, 1199 ರೂ ಯೋಜನೆಯು ನೆಟ್ ಫ್ಲೆಕ್ಸ್ , ಅಮೆಜಾನ್ ಪ್ರೈಮ್ ಮತ್ತು ಜಿಯೋ ಸಿನಿಮಾ…
ಹೈದರಾಬಾದ್: ತೆಲಂಗಾಣದಲ್ಲಿ (Telangana) ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ 30 ನಿಮಿಷದಲ್ಲಿ ಹೈದರಾಬಾದ್ ಅನ್ನು ‘ಭಾಗ್ಯನಗರ್’ (Bhagya Nagar) ಎಂದು ಮರುನಾಮಕರಣ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಹೇಳಿಕೆಯೊಂದನ್ನು ನೀಡಿದ್ದಾರೆ. https://ainlivenews.com/rescue-operation-of-41-workers-trapped-in-tunnel-delayed/ ಹೈದರಾಬಾದ್ನಲ್ಲಿ ಚುನಾವಣಾ ಪ್ರಚಾರದಲ್ಲಿನ (Election Rally) ತಮ್ಮ ಭಾಷಣದ ವೇಳೆ ಈ ಮಾತನ್ನು ಹೇಳಿದ್ದಾರೆ. ಹೈದರಾಬಾದ್ ಹೆಸರನ್ನು ಭಾಗ್ಯನಗರ್ ಎಂಬುದಾಗಿ ಮರುನಾಮಕರಣ ಮಾಡಬೇಕು ಎಂಬುದಾಗಿ ನಾನು ಅಂದುಕೊಂಡಿದ್ದೇನೆ. ಅದರಂತೆ ಬಿಜೆಪಿ (BJP) ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಮರುನಾಮಕರಣ ಮಾಡುತ್ತೇನೆ. ಇದನ್ನು ಯಾರೂ ಕೂಡ ವಿರೋಧಿಸುವ ಧೈರ್ಯ ಮಾಡಲ್ಲ ಎಂದರು. ಕೆಲವು ವಿಷಯಗಳು ಅಸಾಧ್ಯವೆಂದು ತೋರುತ್ತದೆ. ಓಲ್ಡ್ ಸಿಟಿಗೆ ಮೆಟ್ರೋ ರೈಲು ವ್ಯವಸ್ಥೆ ಕಲ್ಪಿಸಬಹುದೇ? ಕೆಲವು ಜನರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗುತ್ತದೆಯೇ?, ಇನ್ನೂ ಕೆಲವರು ಬಹಿರಂಗವಾಗಿ ಪೊಲೀಸರಿಗೆ ಬೆದರಿಕೆ ಹಾಕಿದಾಗ ನಾವು ಅದನ್ನು ತಡೆಯಬಹುದೇ? ಎಂದು ಇತ್ತೀಚೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಕ್ಬರುದ್ದೀನ್ ಓವೈಸಿ ಅವರನ್ನು…
ಡೆಹ್ರಾಡೂನ್: ಉತ್ತರಾಖಂಡದ (Uttarakhand) ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ (Silkyara Tunnel) ಕುಸಿತದಲ್ಲಿ ಸಿಲುಕಿರುವ 41 ಮಂದಿ ಕಾರ್ಮಿಕರನ್ನು ಹೊರ ತರುವ ರಕ್ಷಣಾ ಕಾರ್ಯಾಚರಣೆ (Rescue Operation) ಮತ್ತಷ್ಟು ವಿಳಂಬವಾಗಿದೆ. https://ainlivenews.com/laser-therapy-soukhy-robotic-ortho-care/ ಡ್ರೀಲಿಂಗ್ ಮಷಿನ್ನಲ್ಲಿ ಪದೇ ಪದೇ ದೋಷ ಕಂಡು ಬರುತ್ತಿರುವ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಯನ್ನು ನಿಲ್ಲಿಸಲಾಯಿತು. ಡ್ರಿಲ್ಲಿಂಗ್ ಮಷಿನ್ ನಲ್ಲಿ ಕಂಡು ಬಂದಿರುವ ತಾಂತ್ರಿಕ ಸಮಸ್ಯೆಯನ್ನು ಪತ್ತೆ ಹಚ್ಚಿ ಸರಿಪಡಿಸಲು ವಿಶೇಷ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ. ಯಂತ್ರವನ್ನು ಸರಿಪಡಿಸಿದ ಬಳಿಕ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರು ಪರಿಸ್ಥಿತಿ ಮೇಲ್ವಿಚಾರಣೆ ಮಾಡಿ ಕೊನೆಯ ಹಂತದ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತ ಗತಿಯಲ್ಲಿ ಮತ್ತು ಸಂಪೂರ್ಣ ಎಚ್ಚರಿಕೆಯಿಂದ ನಡೆಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಯಂತ್ರವು ಇಲ್ಲಿಯವರೆಗೆ 46.8-ಮೀಟರ್ ಕೊರೆದಿದ್ದು, ಒಟ್ಟು 57-ಮೀಟರ್ ಕೊರೆದು ಪೈಪ್ ಗಳನ್ನು ಹಾಕುವ ಮೂಲಕ ಪ್ರತ್ಯೇಕ ದಾರಿಯನ್ನು ನಿರ್ಮಿಸಬೇಕಿದೆ. ಯಂತ್ರಕ್ಕೆ ಕಬ್ಬಿಣ ಕವಚ ಅಡ್ಡಿಯಾಗಿದ್ದು ಅದನ್ನು ಕೊರೆಯಲಾಗದ ಯಂತ್ರ ಕೆಟ್ಟು ನಿಲ್ಲುತ್ತಿದೆ.
ಧಾರವಾಡ: ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ (Electric Shock) 16 ವರ್ಷದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ ನಗರದ (Dharwad City) ಮದಿಹಾಳ ಸಿದ್ದರಾಮ ಕಾಲೊನಿಯಲ್ಲಿ ನಡೆದಿದೆ. ಶ್ರೇಯಸ್ ಸಿನ್ನೂರ (16) ಮೃತ ಬಾಲಕ. ತನ್ನ ಮನೆಯ ಹಿಂದೆ ಕ್ರಿಕೆಟ್ (Cricket) ಆಡಲು ಹೋಗಿದ್ದು, ಆಟದ ವೇಳೆ ಬಾಲ್ ಹಿಡಿಯಲು ಹೋದಾಗ ಶ್ರೇಯಸ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ. https://ainlivenews.com/laser-therapy-soukhy-robotic-ortho-care/ ಶ್ರೇಯಸ್ ತನ್ನ ಪೋಷಕರಿಗೆ ಒಬ್ಬನೇ ಮಗನಾಗಿದ್ದ. ಧಾರವಾಡ ರಾಜೀವ್ ಗಾಂಧಿ ಶಾಲೆಯಲ್ಲಿ SSLC ಓದುತಿದ್ದ. ಸಂಜೆ ಶಾಲೆಯಿಂದ ಬಂದ ಮಗ ಮನೆಯಲ್ಲಿ ಕುಳಿತಾಗ ಗೆಳೆಯ ಆಟಕ್ಕೆ ಕರೆದಿದ್ದಾನೆ. ತಮ್ಮ ಮನೆಯ ಹಿಂದೆ ಕಾಮಗಾರಿ ಪ್ರಗತಿಯಲ್ಲಿದ್ದ ಕಟ್ಟದ ಬಳಿ ಕ್ರಿಕೆಟ್ ಆಡಲು ಹೋದ ಶ್ರೇಯಸ್ಗೆ 10 ನಿಮಿಷದಲ್ಲಿ ಕರೆಂಟ್ ಶಾಕ್ಗೆ ತಗುಲಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೂಡಲೇ ಮಗನನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಪ್ರಯೋಜನವಾಗಲಿಲ್ಲ ಎಂದು ಮೃತ ಬಾಲಕನ ತಂದೆ ಅಶೋಕ್ ತಿಳಿಸಿದ್ದಾರೆ
ರಾಯಚೂರು : ಜಿಲ್ಲೆ ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದಲ್ಲಿ ಸಾಲಬಾಧೆಯಿಂದ ಬೇಸತ್ತು ಜಮೀನಿನಲ್ಲೇ ರೈತ ನೇಣಿಗೆ ಶರಣಾದ ಘಟನೆ ನಡೆದಿದೆ. https://ainlivenews.com/laser-therapy-soukhy-robotic-ortho-care/ ತನ್ನ ಜಮೀನಿನಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಚೆಂದಪ್ಪ(60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರಗಾಲದಿಂದ 3 ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ನಾಶವಾಗಿತ್ತು. ರೈತ ಚೆಂದಪ್ಪ ಬ್ಯಾಂಕ್, ಖಾಸಗಿಯವರಿಂದ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು.
ತುಮಕೂರು: ತುಮಕೂರಿನ ಕ್ಯಾತ್ಸಂದ್ರ ಬಳಿಯಿರುವ ಸಿದ್ಧಗಂಗಾ ಮಠಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿದ್ದು ಡಾ.ಶಿವಕುಮಾರಶ್ರೀಗಳ ಗದ್ದುಗೆ ದರ್ಶನ ಪಡೆದರು. ನಗರ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ. ಪತ್ನಿ ಶೈಲಜಾ ಜೊತೆ ಮಠಕ್ಕೆ ಆಗಮಿಸಿರುವ ವಿ.ಸೋಮಣ್ಣ. ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಬಳಿ ವಿ.ಸೋಮಣ್ಣ ಬೇಸರವ್ಯಕ್ತಪಡಿಸಿದ್ದಾರೆ. ‘ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧ’ ‘ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು’ 2 ಗಂಟೆ ಮನೆಯಲ್ಲಿ ಕುಳಿತುಕೊಂಡಿದ್ರು, ಆಗಲ್ಲ ಅಂತಾ ಹೇಳಿದ್ದೆ. ಪ್ರಧಾನಿ ದೆಹಲಿಗೆ ಕರೆಸಿ ನೀನು ಸ್ಪರ್ಧೆ ಮಾಡು ಅಂದ್ರು, ಎಂದು ಸಿದ್ದಲಿಂಗ ಸ್ವಾಮೀಜಿ ಎದುರು ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.