ಬೆಂಗಳೂರು:- ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಸಮಸ್ಯೆ ಇಲ್ಲ. ನಿರ್ವಹಣೆಗಾಗಿ ರಾಜ್ಯದಲ್ಲಿನ ಕೆಲವು ವಿದ್ಯುತ್ ಘಟಕಗಳನ್ನು ಮುಂಗಾರು ಸಮಯದಲ್ಲಿ ಮುಚ್ಚಲಾಗಿತ್ತು. ಹೀಗಾಗಿ ಅಲ್ಪಕಾಲದ ಪವರ್ ಕಟ್ ಉಂಟಾಗಿತ್ತು. ಆದರೆ ಈ ಕೊರತೆಯನ್ನು ನಾವು ನೀಗಿಸಿದ್ದೇವೆ. ರೈತರು ಬೇಡಿಕೆ ಇಟ್ಟಾಗೆಲ್ಲಾ ನಾವು ಅವರಿಗೆ ವಿದ್ಯುತ್ ಪೂರೈಕೆ ಮಾಡಿದ್ದೇವೆ. ಈಗ ಯಾವುದೇ ದೂರುಗಳಿಲ್ಲ. 5ರಿಂದ 10 ದಿನಗಳ ಕಾಲ ಮಾತ್ರ ವಿದ್ಯುತ್ ಕೊರತೆ ಉಂಟಾಗಿತ್ತು. ಆದರೆ ಅನಾವಶ್ಯಕವಾಗಿ ಈ ಬಗ್ಗೆ ರಾಜಕೀಯ ಮಾಡಲಾಗುತ್ತಿದೆ ಎಂದು ಹೇಳಿದರು. ಇದೇ ವೇಳೆ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ವಿದ್ಯುತ್ ಕೊರತೆ ನೀಗಿಸಲು ಹೆಚ್ಚಿನ ಘಟಕಗಳ ಸ್ಥಾಪನೆ ಮಾಡಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.
Author: AIN Author
ಹಿಂಗಾರು ಕೈಕೊಟ್ಟಿದ್ದರೂ ಒಂದಷ್ಟು ಕೆರೆಗಳಲ್ಲಿ ನೀರಿರುವುದರಿಂದ ಮತ್ಸ್ಯ ಕೃಷಿ ತೃಪ್ತಿದಾಯಕವಾಗಿದ್ದು, ಈವರೆವಿಗೆ 36.87 ಲಕ್ಷ ಮೀನು ಮರಿಗಳನ್ನು ನಾನಾ ಕೆರೆಗಳಲ್ಲಿ ಬಿತ್ತನೆ ಮಾಡಲಾಗಿದೆ. ಮೀನುಗಾರಿಕೆಯನ್ನೇ ನಂಬಿ ಸಾವಿರಾರು ಮಂದಿ ಜೀವನ ನಡೆಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಮೀನಿಗೂ ಸಾಕಷ್ಟು ಬೇಡಿಕೆ ಇದೆ. ಅದಕ್ಕೆ ಪೂರಕವಾಗಿ ಜಿಲ್ಲೆಯಲ್ಲಿ ಈ ಬಾರಿ ಗುರಿಯಷ್ಟು ಸಾಧನೆ ಆಗದಿದ್ದರೂ ಮತ್ಸ್ಯ ಬಿತ್ತನೆ ತೃಪ್ತಿಕರವಾಗಿದೆ. ‘ಕನಿಷ್ಠ 4 ರಿಂದ 5 ಅಡಿ ನೀರು ಇರುವ ಹಾಗೂ ಅದೇ ಮಟ್ಟದಲ್ಲಿ 8 ತಿಂಗಳು ಕಾಲ ನೀರು ನಿಲ್ಲುವ ಕೆರೆಗಳಲ್ಲಿ ಮೀನುಮರಿಗಳ ಬಿತ್ತನೆಯನ್ನು ಮಾಡಲಾಗುತ್ತದೆ. 4 ಅಡಿಯೂ ನೀರಿಲ್ಲದ ಕೆರೆಗಳಲ್ಲಿ ಮೀನು ಬಿತ್ತನೆ ಮಾಡಿದರೆ ಪ್ರಯೋಜನವಿಲ್ಲ. ಅಲ್ಲದೇ ಬಿತ್ತನೆ ನಂತರ ಮೂರ್ನಾಲ್ಕು ತಿಂಗಳಲ್ಲಿ ಕೆರೆಯಲ್ಲಿನ ನೀರು ಬತ್ತಿ ಹೋದರೂ ಮೀನು ಬೆಳವಣಿಗೆ ಸಾಧ್ಯವಿಲ್ಲ. ಆದ್ದರಿಂದ ಕನಿಷ್ಠ 8 ತಿಂಗಳ ಕಾಲ 5 ಅಡಿ ಮೇಲ್ಪಟ್ಟು ನೀರು ನಿಲ್ಲುವಂತಹ ಕೆರೆಗಳನ್ನೇ ಮೀನು ಕೃಷಿಗೆ ಆಯ್ಕೆ ಮಾಡಲಾಗುತ್ತದೆ,” ಎನ್ನುತ್ತಾರೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳು. ಮೀನುಗಾರಿಕೆ ಇಲಾಖೆಯು ಜಿಲ್ಲೆಯಲ್ಲಿ…
ಡಿಸೆಂಬರ್ 4ರಿಂದ 8ರವರೆಗೆ ಸರ್ಕಾರಿ ಬ್ಯಾಂಕುಗಳು ಹಾಗೂ ಮತ್ತು ಡಿಸೆಂಬರ್ 11ರಂದು ಖಾಸಗಿ ಬ್ಯಾಂಕುಗಳ ಉದ್ಯೋಗಿಗಳು ಮುಷ್ಕರ ನಡೆಸುತ್ತಿದ್ದಾರೆ. ಸರ್ಕಾರಿ ಬ್ಯಾಂಕುಗಳು ಬೇರೆ ಬೇರೆ ದಿನಗಳಲ್ಲಿ ಬೇರೆ ಬೇರೆ ಬ್ಯಾಂಕುಗಳು ಮುಷ್ಕರ ನಡೆಸಿವೆ. ಎಲ್ಲಾ ಖಾಸಗಿ ಬ್ಯಾಂಕುಗಳ ಉದ್ಯೋಗಿಗಳು ಒಂದೇ ದಿನ ಮುಷ್ಕರ ನಡೆಸಲಿದ್ದಾರೆ. ಯಾವ್ಯಾವ ದಿನ ಯಾವ ಬ್ಯಾಂಕುಗಳಲ್ಲಿ ಮುಷ್ಕರ, ವಿವರ ಈ ಕೆಳಗಿದೆ: ಡಿಸೆಂಬರ್ 4: ಪಂಜಾಬ್ ನ್ಯಾಷನಲ್ ಬ್ಯಾಂಕ್, ಸಿಂಧ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡಿಸೆಂಬರ್ 5: ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ ಡಿಸೆಂಬರ್ 6: ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಡಿಸೆಂಬರ್ 7: ಇಂಡಿಯನ್ ಬ್ಯಾಂಕ್, ಯುಕೋ ಬ್ಯಾಂಕ್ ಡಿಸೆಂಬರ್ 8: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ ಡಿಸೆಂಬರ್ 11: ಎಲ್ಲಾ ಖಾಸಗಿ ಬ್ಯಾಂಕುಗಳು
‘ಬಾಹುಬಲಿ’ (Bahubali) ಕಟ್ಟಪ್ಪನ ಹಳೇ ಲವ್ ಸ್ಟೋರಿಗೆ ಈಗ ಜೀವ ಬಂದಿದೆ. ಅದೆಲ್ಲಿಯ ಕಟ್ಟಪ್ಪ ಅದೆಲ್ಲಿಯ ನಮಿತಾ? ಇಬ್ಬರಿಗೂ ಪ್ರೇಮಾಂಕುರ ಆಗಿದ್ದೆಲ್ಲಿ? ಇನ್ನೇನು ಮದುವೆ ಆಗಿಬಿಟ್ಟಿರು ಎನ್ನುವಾಗ ಅಡ್ಡಗಾಲು ಹಾಕಿದ ಇನ್ನೊಬ್ಬ ನಟ ಯಾರು? ಬ್ರೇಕಪ್ ಬಗ್ಗೆ ಇಲ್ಲಿದೆ ಮಾಹಿತಿ. ಬಣ್ಣದ ಲೋಕದಲ್ಲಿ ಯಾರ ಜೊತೆಯಾದರೂ ಎಲ್ಲಿ ಬೇಕಾದರೂ ಪ್ರೀತಿ ಉಕ್ಕುತ್ತದೆ. ಅದನ್ನು ಪ್ರೀತಿ ಅಂತೀರೋ. ಆಕರ್ಷಣೆ ಅಂತೀರೊ ನಿಮಗೆ ಬಿಟ್ಟಿದ್ದು. ಒಟ್ಟಿನಲ್ಲಿ ಆ ಹಸಿ ಬಿಸಿ ಏನೊ ಒಂದನ್ನು ತಂದು ಗಂಡು ಹೆಣ್ಣನ್ನು ಜಂಟಿ ಮಾಡುತ್ತದೆ. ಅದಕ್ಕೆ ಸಾಕ್ಷಿ ಬಾಹುಬಲಿಯ ಕಟ್ಟಪ್ಪ ಅಲಿಯಾಸ್ ಸತ್ಯರಾಜ್ (Sathyaraj) ಹಾಗೂ ಹಾಟ್ ಕ್ವೀನ್ ನಮಿತಾ. ಇಬ್ಬರೂ ಆ ಕಾಲದಲ್ಲಿ ಅದು ಹೇಗೊ ಜಂಟಿಯಾಗಿ ಕುಂಟಾಬಿಲ್ಲೆ ಆಡಲು ತಯಾರಾಗಿದ್ದರು. ಸತ್ಯರಾಜ್ ಮದುವೆ ಆಗಲು ಸಜ್ಜಾಗಿದ್ದರು. ಆದರೆ ಶರತ್ಕುಮಾರ್ ಅಡ್ಡಗಾಲು ಹಾಕಿದರು. ಸತ್ಯರಾಜ್ಗೆ ಅದಾಗಲೇ ಮದುವೆಯಾಗಿತ್ತು. ಮಕ್ಕಳೂ ಇದ್ದರು. ಆದರೆ ಮನಸಿನ ಬಿಸಿ ಕೇಳಬೇಕಲ್ಲವೆ? ನಮಿತಾ ಬಲೆಗೆ ಬಿದ್ದರು. ಇನ್ನೇನು ಮದುವೆ ಆಗಬೇಕೆನ್ನುವಾಗಲೇ ನಟ ಶರತ್ಕುಮಾರ್…
ಗೋವಾ (Goa) ಸರ್ಕಾರ, ಎಂಟರ್ ಟೈನ್ಮೆಂಟ್ ಸೊಸೈಟಿ ಆಫ್ ಗೋವಾ ಮತ್ತು ಎನ್.ಎಫ್.ಡಿ.ಸಿ ಇಂಡಿಯಾ ಜಂಟಿಯಾಗಿ ಗೋವಾದ ಪಣಜಿಯಲ್ಲಿ ಆಯೋಜಿಸಿರುವ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (Chirotsava) (IFFI) ಕನ್ನಡದ ‘ದಿ ಗ್ರೇ ಗೇಮ್ಸ್’ ಚಿತ್ರ ಆಯ್ಕೆಯಾಗಿದೆ. ವಿಜಯ್ ರಾಘವೇಂದ್ರ, ಭಾವನಾ ರಾವ್, ಶ್ರುತಿ ಪ್ರಕಾಶ್, ಅಪರ್ಣ ವಸ್ತಾರೆ, ಜೈ ಮುಂತಾದವರು ನಟಿಸಿರುವ ಈ ಚಿತ್ರವನ್ನು ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಗಂಗಾಧರ್ ಸಾಲಿಮಠ್ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆಗೆ ಸಿದ್ಧವಾಗಿರುವ ‘ಗ್ರೇ ಗೇಮ್ಸ್’ (Gray Games) ಚಿತ್ರವು ಗೋವಾದ ಅಂತಾರಾಷ್ಟ್ರೀಯ ಚಿತ್ರೋತ್ಸವದ ‘ರೆಡ್ ಕಾರ್ಪೆಟ್ ಗಾಲ ಪ್ರೀಮಿಯರ್’ ವಿಭಾಗದಡಿ ಮೊದಲ ಪ್ರದರ್ಶನ ಕಾಣುತ್ತಿದೆ. ಈ ವಿಭಾಗದಲ್ಲಿ ಭಾರತದ ಹಲವು ಚಿತ್ರಗಳು ಪ್ರೀಮಿಯರ್ ಆಗುತ್ತಿದ್ದು, ಈ ಪೈಕಿ ಕನ್ನಡದ ‘ದಿ ಗ್ರೇ ಗೇಮ್ಸ್’ ಸಹ ಒಂದಾಗಿರುವುದು ವಿಶೇಷ. ಮೆಟಾವರ್ಸ್ ಮತ್ತು ಆನ್ಲೈನ್ ಗೇಮಿಂಗ್ ವೈಷಮ್ಯದ ಹಿನ್ನೆಲೆಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ (Vijay Raghavendra) ಸೈಕಾಲಜಿಸ್ಟ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಭಾವನಾ ರಾವ್…
ಸಿಡ್ನಿ: ವಿಶ್ವಕಪ್ 2023 (World Cup 2023) ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ ಗೆದ್ದು ಬೀಗಿತ್ತು. ಇದೀಗ ತಂಡದ ಕೆಲವರು ಅವರವರ ತಾಯ್ನಾಡಿಗೆ ವಾಪಸ್ಸಾಗುತ್ತಿದ್ದಾರೆ. ಅಂತೆಯೇ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಕೂಡ ಸಿಡ್ನಿ ಏರ್ಪೋರ್ಟ್ ಗೆ (Sidney Airport) ಬಂದಿಳಿದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಹೌದು. ನಿನ್ನೆ ಬೆಳಗ್ಗೆ ಕಮ್ಮಿನ್ಸ್ (Pat Cummins) ಅವರು ಸಿಡ್ನಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇದನ್ನು Andrew McGlashan of ESPNcricinfo ಅವರು ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾಗೆ ಅಪ್ಲೋಡ್ ಮಾಡಿದ್ದಾರೆ. ಅಲ್ಲದೆ “ಪ್ಯಾಟ್ ಕಮ್ಮಿನ್ಸ್ ವಿಶ್ವಕಪ್ ವಿಜೇತ ನಾಯಕನಾಗಿ ತವರಿಗೆ ಮರಳಿದ್ದಾರೆ” ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಳ್ಳಲಾಗಿದೆ. ಈ ವೀಡಿಯೋ ನೋಡಿದ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ ವಿಡಿಯೋದಲ್ಲೇನಿದೆ..?: ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಸೀಸ್ ತಂಡದ ನಾಯಕ ಕಮ್ಮಿನ್ಸ್ ಅವರು ತಮ್ಮ ಲಗ್ಗೇಜ್ಗಳನ್ನು ಸ್ವತಃ ತಾವೇ ವ್ಹೀಲಿಂಗ್ ಮಾಡಿಕೊಂಡು ಹೋಗುತ್ತಿರುವುದನ್ನು ನಾವು ವೀಡಿಯೋದಲ್ಲಿ ಕಾಣಬಹುದಾಗಿದೆ. ಅಲ್ಲದೆ ಹೀಗೆ…
ಬೆಂಗಳೂರು:- ಲಂಚ ಪಡೆಯುತ್ತಿದ್ದ ಬೆಸ್ಕಾಂ ಚೀಫ್ ಜನರಲ್ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆಡ್ಹ್ಯಾಂಡ್ ಆಗಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಮುಖ್ಯ ವ್ಯವಸ್ಥಾಪಕ ಮತ್ತು ಅವರ ಚಾಲಕನನ್ನು ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ನಾಗರಾಜ್ ಎಂಎಲ್ ಅವರು ತಮ್ಮ ಚಾಲಕ ಮುರಳಿಕೃಷ್ಣ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಕಮರ್ಷಿಯಲ್ ಎಲೆಕ್ಟ್ರಿಕಲ್ ಸಪ್ಲೈನಿಂದ ಇಂಡಸ್ಟ್ರಿಯಲ್ ಎಲೆಕ್ಟ್ರಿಕಲ್ ಸಪ್ಲೈಗೆ ಬದಲಾವಣೆ ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಗುತ್ತಿಗೆದಾರರಿಂದ ನಾಗರಾಜ್ 7.5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ನಾಗರಾಜ್ ಲಂಚದ ಬೇಡಿಕೆಯಿಟ್ಟಿದ್ದ ಪ್ರತಾಪ್ ಎಂಬ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮತ್ತು ಸಹಾಯಕ ಎಂಜಿನಿಯರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಕೈಗಾರಿಕಾ ಯೋಜನೆಗೆ ಅನುಮೋದನೆ ನೀಡಲು ಎಇಇ ನವೀನ್ ತೋಟಗಂಟಿ ಮತ್ತು ಎಇ ಮಲ್ಲಾಪುರ ಜಿಎಚ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ
ಆರೋರೂಟ್ ಪುಡಿಯು ಬಿಳಿ ಬಣ್ಣದಿಂದ ಕೂಡಿದ್ದು ಕಾರ್ನ್ಪ್ಲೋರ್ನಂತೆ ಕಾಣುತ್ತದೆ. ಆರೋರೂಟ್ ಪುಡಿಯು ಪೌಷ್ಟಿಕಾಂಶದ ವಿಷಯದಲ್ಲಿ ಹೆಚ್ಚಿನ ಸ್ಥಾನವನ್ನು ಹೊಂದಿದೆ. ಸಾಮಾನ್ಯವಾಗಿ ನಾವು ಕಾರ್ನ್ಫ್ಲೋರ್ನ್ನು ಸೂಪ್, ಗ್ರೇವಿಗಳನ್ನು ದಪ್ಪಗಾಗಿಸಲು ಬಳಸುತ್ತೇವೆ. ಆರೋರೂಟ್ ಪುಡಿಯು ಕಾರ್ನ್ಫ್ಲೋರ್ಗೆ ಪರ್ಯಾಯವಾಗಿದೆ. ಆರೋರೂಟ್ ಪುಡಿಯು ಸಾಕಷ್ಟು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ಮೃದುವಾದ, ನಯವಾದ ಚರ್ಮ ಆರೋರೂಟ್ ಪಿಷ್ಟವನ್ನು ಹೆಚ್ಚಾಗಿ ಟಾಲ್ಕಮ್ ಪೌಡರ್ ಮತ್ತು ಮಾಯಿಶ್ಚರೈಸರ್ಗಳಲ್ಲಿ ಬಳಸಲಾಗುತ್ತದೆ. ಇದು ಟಾಲ್ಕಮ್ ಪೌಡರ್ ಮತ್ತು ಲೋಷನ್ಗಳಲ್ಲಿನ ಸಕ್ರಿಯ ಪದಾರ್ಥಗಳನ್ನು ಚರ್ಮದ ಮೇಲಿನ ಹಂತಗಳಿಗೆ ತೂರಿಕೊಳ್ಳಲು ಅನುವು ಮಾಡಿಕೊಡುತ್ತದೆ. ಏಕೆಂದರೆ ಇದು ತೇವಾಂಶವನ್ನು ಹೀರಿಕೊಳ್ಳುವ ಗುಣಗಳನ್ನು ಹೊಂದಿದ್ದು ಅದು ನಿಮ್ಮ ಚರ್ಮವನ್ನು ಮೃದುವಾಗಿ ಮತ್ತು ಕೋಮಲವಾಗಿ ಇರಿಸುತ್ತದೆ ಶಿಶುಗಳಿಗೆ ಒಳ್ಳೆಯದು ಆರೋರೂಟ್ ಅನೇಕ ಅಗತ್ಯ ಪೋಷಕಾಂಶಗಳ ಹೀರಿಕೊಳ್ಳುವಿಕೆಯ ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಶಿಶುಗಳಲ್ಲಿ ಆರೋಗ್ಯಕರ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಇದು ಎದೆ ಹಾಲಿಗೆ ಪರ್ಯಾಯವಾಗಿದೆ. ಅಲ್ಲದೆ, ಅನೇಕ ಆರೋರೂಟ್ ತಿಂಡಿಗಳು ಶಿಶುಗಳಲ್ಲಿ ಅತಿಸಾರ, ಬ್ರಾಂಕೈಟಿಸ್ ಮತ್ತು ಕೆಮ್ಮನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.…
ಮಹಾರಾಷ್ಟ್ರ: ತನ್ನ ಲಿವ್ – ಇನ್ ಸಂಗಾತಿಯನ್ನು ಕೊಲೆ ಮಾಡಿ ಸೂಟ್ ಕೇಸ್ನಲ್ಲಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. 21 ವರ್ಷ ವಯಸ್ಸಿನ ಆರೋಪಿ ತನ್ನ ಪ್ರಿಯತಮೆಯನ್ನು ಕೊಂದು ಆಕೆಯ ದೇಹವನ್ನು ಸೂಟ್ ಕೇಸ್ನಲ್ಲಿ ತುಂಬಿ ಮುಂಬೈನ ಕುರ್ಲಾ ಪ್ರದೇಶದಲ್ಲಿ ಇರುವ ಸಿಎಸ್ಟಿ – ಎಲ್ಬಿಸ್ ಮಾರ್ಗ್ನ ನಿರ್ಮಾಣ ಹಂತದ ಕಟ್ಟಡ ಪ್ರದೇಶದಲ್ಲಿ ಎಸೆದು ಹೋಗಿದ್ದ. ಕೊಲೆ ಮಾಡಿದ ಬಳಿಕ ಒಡಿಶಾದ ತನ್ನ ಹುಟ್ಟೂರಿಗೆ ಪರಾರಿಯಾಗುವ ಪ್ರಯತ್ನದಲ್ಲಿದ್ದ ಆರೋಪಿ ಅಕ್ಸರ್ ಮನೋಜ್ ಬರ್ಲಾನನ್ನು ಪೊಲೀಸರು ಥಾಣೆ ರೈಲು ನಿಲ್ದಾಣದಲ್ಲಿ ಬಂಧನ ಮಾಡಿದ್ದಾರೆ. ಮೃತ ಮಹಿಳೆಯನ್ನು 25 ವರ್ಷ ವಯಸ್ಸಿನ ಪ್ರತಿಮಾ ಕಿಸ್ಪಟ್ಟಾ ಎಂದು ಗುರ್ತಿಸಲಾಗಿದೆ. ಈಕೆ ಕೂಡಾ ಒಡಿಶಾ ರಾಜ್ಯದವರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆಯ ಮೃತ ದೇಹ ಸೂಟ್ ಕೇಸ್ ಒಂದರಲ್ಲಿ ಪತ್ತೆಯಾದ ಕೂಡಲೇ ಪೊಲೀಸರು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ಫೋಟೋ ರವಾನಿಸಿದರು. ಆದಷ್ಟು ಬೇಗ ಮಹಿಳೆಯ ಗುರುತು…
ಕೆಪಿಎಸ್ಸಿ ಮೂಲಕ ಸದ್ಯದಲ್ಲೇ 3000 ಸರ್ಕಾರಿ ಹುದ್ದೆಗೆ ಅಧಿಸೂಚನೆ ಬಿಡುಗಡೆ ಆಗಲಿದೆ ಎಂಬುದನ್ನು ಹುದ್ದೆಗಳ ವಿವರ ಸಹಿತ ವಿಕ’ದಲ್ಲಿ ಇತ್ತೀಚೆಗೆ ತಿಳಿಸಲಾಗಿತ್ತು. ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹ ವಿವಿಧ ಇಲಾಖೆಗಳ ಹುದ್ದೆಗಳಿಗೆ ಅತಿ ಶೀಘ್ರದಲ್ಲೇ ನೇಮಕ ಅಧಿಸೂಚನೆ ಹೊರಡಿಸುವ ಕುರಿತ ಮಾಹಿತಿ ಹೊರಬಿದ್ದಿದೆ. ಹೌದು, ಕೆಇಎ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದೆ. ಸಾರಿಗೆ ಇಲಾಖೆ, ಪಶು ವೈದ್ಯಕೀಯ ಇಲಾಖೆ, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್ಜಿಯುಹೆಚ್ಎಸ್), ನಗರಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಂದಾಜು 400 ಕ್ಕೂ ಹೆಚ್ಚು ಪೋಸ್ಟ್ಗಳಿಗೆ ಡಿಸೆಂಬರ್ ಮೊದಲ ವಾರವೇ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ದೊರೆತಿದೆ. 455 ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳಿಗೂ ಸಹ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಅಧಿಸೂಚಿಸಿ, ನೇಮಕ ಪ್ರಕ್ರಿಯೆ ನಡೆಸಲಿದೆ. ವಿವಿಧ ಇಲಾಖೆಗಳ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ವಿವಿಧ ವಿಭಾಗಗಳ ಇಂಜಿನಿಯರ್, ಆಪ್ತ ಸಹಾಯಕ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.