ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತದೆ. ಇರಿಸಲು ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ. https://ainlivenews.com/gas-cylinder-blast-burned-tea-shop/ ಆಹಾರಗಳು ನಮ್ಮ ಆರೋಗ್ಯದ ನೇರ ಅಂಶವಾಗಿದೆ. ನಮ್ಮ ದಿನನಿತ್ಯದ ಆಹಾರದಲ್ಲಿ ನಿಯಮಿತವಾಗಿ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿದರೆ, ದೇಹಕ್ಕೆ ಅಗತ್ಯವಿರುವ ಹೆಚ್ಚಿನ ಪೋಷಕಾಂಶಗಳು ಸುಲಭವಾಗಿ ಸಿಗುತ್ತವೆ.. ಮಧುಮೇಹಿಗಳಿಗೆ ಆ ಹಣ್ಣು ತಿನ್ನಬಾರದು ಈ ಹಣ್ಣು ತಿನ್ನಬಾರದು ಎಂದು ಗೊಂದಲಗಳನ್ನು ಸೃಷ್ಟಿಸುವ ಬದಲಿಗೆ ಈ ಸ್ಟಾರ್ ಪ್ರೂಟ್ನ್ನು ತಿನ್ನಲು ಕೊಡಿ ಏಕೆಂದರೇ ಈ ಹಣ್ಣು ದಿವೌಷಧಿ ಎಂದರೇ ತಪ್ಪಾಗುವುದಿಲ್ಲ.. ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಈ ಸ್ಟಾರ್ ಹಣ್ಣಿನ ಚರ್ಮವನ್ನು ಸಹ ತಿನ್ನಬಹುದು. ರುಚಿಯಲ್ಲಿ ಸ್ವಲ್ಪ ಕಹಿಯಾಗಿದ್ದರೂ ಅನೇಕ ರೋಗಗಳನ್ನು ತಡೆಯುವ ಶಕ್ತಿ ಹೊಂದಿದೆ. ಮಧುಮೇಹಿಗಳಿಗೆ ಉತ್ತಮವಾದ ಹಣ್ಣು ಕೆಲವು ಪೌಷ್ಟಿಕಾಂಶ-ದಟ್ಟವಾದ ಅಂಶಗಳನ್ನು ಒಳಗೊಂಡಿರುವುದಿಲ್ಲ.…
Author: AIN Author
ಬಲ್ಗೇರಿಯಾದ ಇವರ ಬಗ್ಗೆ ನಮ್ಮಲ್ಲಿ ಅನೇಕರಿಗೆ ತಿಳಿದಿರಬೇಕು. 12 ವರ್ಷಗಳ ಕಾಲ ಸಾಮಾನ್ಯ ಜೀವನವನ್ನು ನಡೆಸಿದ ನಂತರ, ಅವರು ಭವಿಷ್ಯ ನುಡಿಯುವಲ್ಲಿ ಪರಿಣಿತರಾದರು ಮತ್ತು ಬಾಬಾ ವಂಗಾ ಎಂದು ಪ್ರಸಿದ್ಧರಾದರು. ಬಲ್ಗೇರಿಯಾದ ಭವಿಷ್ಯವಾದಿ ಬಾಬಾ ವಂಗಾ ಅವರ ಹೆಚ್ಚಿನ ಭವಿಷ್ಯವಾಣಿಗಳು ನಿಜವಾಗಿವೆ. https://ainlivenews.com/gas-cylinder-blast-burned-tea-shop/ ಬಾಬಾ ವಂಗಾ ಅವರು ಬಲ್ಗೇರಿಯಾದ ದೃಷ್ಟಿಹೀನ ಮಹಿಳೆ. ಅವಳು 1911 ರಲ್ಲಿ ಜನಿಸಿದಳು, ಮತ್ತು 12 ವರ್ಷಗಳ ಸಾಮಾನ್ಯ ಮನುಷ್ಯನ ಜೀವನವನ್ನು ನಡೆಸಿದ ನಂತರ, ಅವಳು ಪ್ರವಾದಿಯಾದಳು. ಹಾಗೆಯೇ ಅವರು 1996 ರಲ್ಲಿ ನಿಧನರಾದರು. ಆದರೆ ಜನರು ಅವರ ಭವಿಷ್ಯವಾಣಿಗಳು ನಿಜವಾಗುವುದನ್ನು ನೋಡಿದರು. ಇನ್ನೂ ಬಾಬಾ ವಂಗಾ ಅವರ ಭವಿಷ್ಯದ ಪ್ರಕಾರ, ಮೇಷ, ಕುಂಭ, ವೃಷಭ, ಕರ್ಕ ಮತ್ತು ಸಿಂಹ ರಾಶಿಯವರು 2025 ರಲ್ಲಿ ಅಪಾರ ಸಂಪತ್ತನ್ನು ಗಳಿಸುತ್ತಾರೆ. ಈ ರಾಶಿಚಕ್ರ ಚಿಹ್ನೆಗಳು ಕಠಿಣ ಪರಿಶ್ರಮ, ಸೃಜನಶೀಲತೆ ಮತ್ತು ಬುದ್ಧಿವಂತಿಕೆಯ ಮೂಲಕ ಆರ್ಥಿಕ ಯಶಸ್ಸನ್ನು ಸಾಧಿಸುತ್ತವೆ ಬಲ್ಗೇರಿಯಾದ ಆಧ್ಯಾತ್ಮಿಕ ಪ್ರವಾದಿ ಬಾಬಾ ವಂಗಾ (1911-1996) ತನ್ನ ಭವಿಷ್ಯವಾಣಿಗಳಿಂದ…
ಬೆಂಗಳೂರು:- ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಪೈಕಿ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಇದರಡಿಯಲ್ಲಿ ಪ್ರತಿ ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಾಕಲಾಗುತ್ತಿದೆ. https://ainlivenews.com/nirani-sugars-company-fired-45-employees/ ಇನ್ನೂ ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ. ಪುರುಷರ ಮೇಲೀನ ಮಹಿಳೆಯರ ಅವಲಂಬನೆ ಕಮ್ಮಿ ಆಗುತ್ತಿದೆ. ಗ್ರಾಮೀಣ ಭಾಗದ ಆರ್ಥಿಕತೆ ವೃದ್ಧಿಸುತ್ತಿದೆ ಎಂಬಿತ್ಯಾದಿ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಇವೆಲ್ಲದರ ನಡುವೆ ಅಪಾತ್ರರಿಗೂ ಗೃಹಲಕ್ಷ್ಮೀ ಯೋಜನೆ ಹಣ ಹೋಗುತ್ತಿದೆ ಎನ್ನುವ ಟೀಕೆಗಳೂ ಕೇಳಿಬರುತ್ತಿದ್ದು ಅಂಥವರನ್ನು ಗುರುತಿಸಿ ಕೈಬಿಡುವ ಕೆಲಸ ನಡೆಯುತ್ತಿದೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಈಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಅಷ್ಟು ಮಾತ್ರವಲ್ಲ ವಿದೇಶಗಳಲ್ಲೂ ಕೂಡ ವ್ಯಾಪಕವಾದ ಮೆಚ್ಚುಗೆ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಈ ಯೋಜನೆ ನಿಜಕ್ಕೂ ಅರ್ಹರಿಗೆ ಸಿಗಬೇಕು ಎನ್ನುವುದು ಸರ್ಕಾರದ ನಿಲುವು ಇದೇ ದೃಷ್ಟಿಯಿಂದ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅಂಥವರನ್ನು ಯೋಜನೆಯಿಂದ ಕೈಬಿಡುವ ಕೆಲಸ ಶುರುವಾಗಿದೆ ಎನ್ನಲಾಗುತ್ತಿದೆ.…
ಬೆಂಗಳೂರು:- ಕ್ಯೂಆರ್ ಸಿಸ್ಟಮ್ ಮೂಲಕ ಟಿಕೆಟ್ ಪೇಮೆಂಟ್ ನೀಡುವ ವ್ಯವಸ್ಥೆ ಜಾರಿ ಮಾಡಿದೆ. ಈ ಕ್ಯೂಆರ್ ಕೋಡ್ ಸಿಸ್ಟಮ್ಗೆ ಬಿಎಂಟಿಸಿ ಪ್ರಯಾಣಿಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. https://ainlivenews.com/the-governments-treasury-is-completely-empty-by-guarantee-n-ravikumar/ ಒಂದು ದಿನಕ್ಕೆ ಕ್ಯೂಆರ್ ಕೋಡ್ ಮೂಲಕ ಬಿಎಂಟಿಸಿಗೆ ಒಂದು ಕೋಟಿ ರೂ. ಆದಾಯ ಗಳಿಸುತ್ತಿದೆ. ಆನ್ಲೈನ್ ಕ್ಯೂಆರ್ ಕೋಡ್ ಮೂಲಕ ಬಿಎಂಟಿಸಿ ಫೆಬ್ರವರಿ 1-16ರವರೆಗೆ 16 ಕೋಟಿ ರೂ. ಆದಾಯ ಪಡೆದಿದೆ. ಕೋವಿಡ್ ನಂತರ 2021ರಿಂದ ಬಿಎಂಟಿಸಿ ಬಸ್ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ ಮಾಡಿದ್ದು, ವಾಯುವಜ್ರ ಹಾಗೂ ವಜ್ರ ಬಸ್ಗಳ ಪ್ರಯಾಣಿಕರು ಹೆಚ್ಚು ಡಿಜಿಟಲ್ ಪೇಮೆಂಟ್ ಬಳಸುತ್ತಿದ್ದಾರೆ. 2024ರಲ್ಲಿ ಕ್ಯೂಆರ್ ಕೋಡ್ನಿಂದ 100 ಕೋಟಿ ರೂ. ಆದಾಯ ಬಂದಿದೆ. ಈ ಬಗ್ಗೆ ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ ರೆಡ್ಡಿ ಮಾತನಾಡಿ, ಇತ್ತೀಚೆಗೆ ಜನವರಿ 5ರಿಂದ ಬಸ್ ದರ ಏರಿಕೆಯಾದಾಗಿನಿಂದ ಚಿಲ್ಲರೆ ಸಮಸ್ಯೆ ತಪ್ಪಿಸಲು ಹೆಚ್ಚು ಜನ ಡಿಜಿಟಲ್ ಪೇಮೆಂಟ್ ಗೆ ಮೊರೆ ಹೋಗಿದ್ದಾರೆ. ಇದ್ರಿಂದ ಕಂಡಕ್ಟರ್ & ಪ್ರಯಾಣಿಕರು ಇಬ್ಬರೂ ನಿರಾಳವಾಗಿದ್ದಾರೆ.ಕ್ಯೂ…
ಬೆಂಗಳೂರು:- ಗ್ಯಾರಂಟಿಯಿಂದ ಸರಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ ಎಂದು ಎನ್ ರವಿಕುಮಾರ್ ಹೇಳಿದ್ದಾರೆ. https://ainlivenews.com/emergency-works-power-cut-in-these-areas-of-bangalore-today/ ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ. ಈಗ ಹಾಲಿನ ದರವನ್ನು ಪ್ರತಿ ಲೀಟರಿಗೆ 5 ರೂ. ಹೆಚ್ಚಿಸುವುದಾಗಿ ಸರಕಾರ ಹೇಳುತ್ತಿದೆ. ಯಾವಾಗ ಮಾಡುತ್ತಾರೋ ಗೊತ್ತಿಲ್ಲ; ಕೇಂದ್ರದಿಂದ 5 ಕೆಜಿ ಅಕ್ಕಿ ಸಿಗುತ್ತಿದೆ. ಆದರೆ, ರಾಜ್ಯ ಸರಕಾರದ 5 ಕೆಜಿ ಪಡಿತರ ಅಕ್ಕಿ ಸಂಬಂಧ ಫಲಾನುಭವಿಯ ಖಾತೆಗೆ ಹಣ ವರ್ಗಾಯಿಸಿಲ್ಲ ಎಂದು ಮಾಹಿತಿ ಇರುವುದಾಗಿ ತಿಳಿಸಿದರು. ಹೈಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಶಿಕ್ಷಕರಾಗಿ ದುಡಿಯುವವರಿಗೆ ಐದಾರು ತಿಂಗಳಿಂದ ವೇತನ ಕೊಡುತ್ತಿಲ್ಲ; ಮೆಟ್ರೋ ದರ ಹೆಚ್ಚಿಸಿದ್ದು, ಹಾಲು, ವಿದ್ಯುತ್ ದರ ಏರಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಎರಡನೇ ಅವಧಿಯ ಆಡಳಿತ ಸಂಪೂರ್ಣವಾಗಿ ನೆಲಕಚ್ಚಿ ಹೋಗಿದೆ ಎಂದು ಟೀಕಿಸಿದರು. ಗ್ಯಾರಂಟಿ ಸರಿಯಾಗಿ ಅನುಷ್ಠಾನಗೊಳಿಸುತ್ತಿಲ್ಲ; ಈ ಸರಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ರವಿಕುಮಾರ್ ಆರೋಪಿಸಿದರು.
ಬೆಂಗಳೂರು:- ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. https://ainlivenews.com/nirani-sugars-company-fired-45-employees/ 220/66/11 ಕೆ.ವಿ ಎನ್.ಆರ್.ಎಸ್ ಸ್ಟೇಷನ್ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಕೆಳಕಂಡ ಭಾಗಗಳಲ್ಲಿ ಕರೆಂಟ್ ಕಟ್ಟಾಗಲಿದ್ದು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಪ್ರಕಟಣೆಯಲ್ಲಿ ಬೆಸ್ಕಾಂ ಮನವಿ ಮಾಡಿದೆ. ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ 2ನೆ ಬ್ಲಾಕ್ ಮತ್ತು 6ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದಿರಾನಗರ, ಶಂಕರಮಠ, ಬ್ರೀಗೆಡ್ ಅಪಾರ್ಟ್ಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ,…
ಮಂಡ್ಯ:- 45 ನೌಕರರನ್ನು ವಜಾ ಮಾಡಿದ ಹಿನ್ನೆಲೆ ನಿರಾಣಿ ಶುಗರ್ಸ್ ಕಂಪನಿಯ ನೌಕರ ಚಿಮಿನಿ ಏರಿದ ಘಟನೆ ಜರುಗಿದೆ. ಕಂಪನಿಯ ನಿರ್ಧಾರ ಖಂಡಿಸಿ ಕಾರ್ಖಾನೆಯ ಚಿಮಿನಿ ಏರಿರುವ ಕಾರ್ಮಿಕ ಮತ್ತೆ ಕೆಲಸಕ್ಕೆ ಸೇರಿಕೊಳ್ಳುವಂತೆ ವಿನೂತನ ಪ್ರತಿಭಟನೆ ಮಾಡ್ತಿದ್ದಾನೆ. ಆತನನ್ನು ಕೆಳಗಿಳಿಸಲು ಅಧಿಕಾರಿಗಳು ಹಾಗೂ ಕಾರ್ಖಾನೆ ಸಿಬ್ಬಂದಿ ಹರಸಾಹಸ ಪಡ್ತಿದ್ದಾರೆ. https://ainlivenews.com/gas-cylinder-blast-burned-tea-shop/ ಚಿಮಿನಿ ಏರಿ ಕುಳಿತ ವ್ಯಕ್ತಿ, ಆ ವ್ಯಕ್ತಿ ಕೆಳಗಿಳಿಸಲು ಪ್ರಯತ್ನಿಸುತ್ತಿರುವ ಜನರು. ಈ ದೃಶ್ಯ ಕಂಡು ಬಂದದ್ದು, ಮಂಡ್ಯದ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ. ಕೆಲಸದಿಂದ ವಜಾಗೊಳಿಸಿದ್ರು ಅನ್ನೋ ಕಾರಣಕ್ಕೆ ಚಿಮಿನಿ ಏರಿದ್ದ ನೊಂದ ಕಾರ್ಮಿಕ ರಾಮಕೃಷ್ಣ ಆಡಳಿತ ಮಂಡಳಿಯ ನಿರ್ಧಾರವನ್ನು ವಿನೂತನವಾಗಿ ಖಂಡಿಸಿದ್ರು. ಅಂದಹಾಗೇ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಒಂದು ಕಾಲದಲ್ಲಿ ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಗಳಲ್ಲಿ ಒಂದಾಗಿತ್ತು. ಕಳೆದ 5 ವರ್ಷಗಳ ಹಿಂದೆ ಅಂದಿನ ಸರ್ಕಾರ ನಷ್ಟದ ಕಾರಣ ಹೇಳಿ ಮುರುಗೇಶ್ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್ ಸಂಸ್ಥೆಗೆ 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಿತ್ತು.…
ದೊಡ್ಡಬಳ್ಳಾಪುರ:- ಟೀ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟವಾದ ಪರಿಣಾಮ ಟೀ ಅಂಗಡಿ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಡಿಕ್ರಾಸ್ ಬಳಿಯ ರಾಜಶ್ರೀ ಕಂಫರ್ಟ್ ಪಕ್ಕದಲ್ಲಿ ಜರುಗಿದೆ. https://ainlivenews.com/udayagiri-police-station-riot-case/ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೂಡಲೇ ಮಾಹಿತಿ ಆಧರಿಸಿ ಅಗ್ನಿಶಾಮಕ ಸಿಬ್ಬಂದಿ, ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಮೈಸೂರು:- ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಗಲಭೆ ಕೇಸ್ ಗೆ ಸಂಬಧಪಟ್ಟಂತೆ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ. https://ainlivenews.com/rcb-delhi-face-off-in-an-exciting-match-bengaluru-win-the-2nd-match/ ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಕೆಸರೆರಚಾಟ ಮುಂದುವರಿದಿದೆ. ಈ ನಡುವೆ ಮಹತ್ವದ ಬೆಳವಣಿಗೆ ನಡೆದಿದ್ದು, ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿ ಸತೀಶ್ಗೆ ಮೈಸೂರು ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸರೋಜಾ ಅವರು ಆದೇಶ ಪ್ರಕಟಿಸಿದ್ದಾರೆ. ಆರೋಪಿ ಸತೀಶ್ ಪರ ವಕೀಲ ಹ.ಮಾ ಭಾಸ್ಕರ್ ವಾದ ಮಂಡಿಸಿದ್ದರು.
ವಡೋದರಾದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಕಳೆದ ವರ್ಷದ ಫೈನಲಿಸ್ಟ್ಗಳಾದ ಈ ಎರಡು ತಂಡಗಳ ನಡುವಿನ ಪಂದ್ಯದ ಮೇಲೆ ಭಾರಿ ನಿರೀಕ್ಷೆಯಿದೆ. ಆರ್ಸಿಬಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಎರಡೂ ತಂಡಗಳು ತಮ್ಮ ಆಡುವ ಬಳಗದಲ್ಲಿ ಬದಲಾವಣೆಗಳನ್ನು ಮಾಡಿವೆ. https://ainlivenews.com/kolar-e-khata-campaign-in-the-municipal-council-kottur-manjunath/ 2025ರ ಮಹಿಳಾ ಪ್ರೀಮಿಯರ್ ಲೀಗ್ 4ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಆಗಿವೆ. ಕಳೆದ ಬಾರಿ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಆರ್ಸಿಬಿ ಮಣಿಸಿ ಕಪ್ ಗೆದ್ದಿತ್ತು. ಈ ಮೂಲಕ ಆರ್ಸಿಬಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈಗ ಅದೇ ತಂಡದ ವಿರುದ್ಧ ಲೀಗ್ ಹಂತದ ಪಂದ್ಯದಲ್ಲಿ ಆರ್ಸಿಬಿ ಕಣಕ್ಕಿಳಿಯುತ್ತಿದೆ. ಟಾಸ್ ಗೆದ್ದ ಆರ್ಸಿಬಿ ನಾಯಕಿ ಸ್ಮೃತಿ ಮಂದಾನ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫಸ್ಟ್ ಬ್ಯಾಟಿಂಗ್ಗೆ ಇಳಿದಿದೆ ಆರ್ಸಿಬಿ ಪ್ಲೇಯಿಂಗ್ ಎಲೆವೆನ್ನಲ್ಲಿ…