ಬೆಂಗಳೂರು:-545 ಮಂದಿ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಡಿಸೆಂಬರ್ ಒಳಗಾಗಿ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನ್ಯಾಯಾಲಯದಿಂದ ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ 545 ಮಂದಿ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಡಿಸೆಂಬರ್ ಒಳಗಾಗಿ ಭರ್ತಿ ಮಾಡಲಾಗುವುದು ಬಳಿಕ 402 ಪೋಲೀಸ್ ಸಬ್ ಇನ್ಸ್ಪೆಕ್ಟರ್ಗಳ ಹುದ್ದೆ ಭರ್ತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದರು. ಬಳಿಕ 600 ಪಿಎಸ್ಐ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ವಿವರಿಸಿದರು. ಒಟ್ಟಾರೆ 1547 ಪಿಎಸ್ಐ ಹುದ್ದೆಗಳನ್ನು ಮುಂದಿನ ಆರು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದ ಅವರು ಇಲಾಖೆಗೆ ಹದಿನೈದು ಸಾವಿರ ಕಾನ್ಸ್ಟೆಬಲ್ ಅಗತ್ಯವಿದ್ದು, ಮೊದಲು ಮೂರು ಸಾವಿರ ಕಾನ್ಸ್ಟೆಬಲ್ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೂ ಆದಷ್ಟು ಶೀಘ್ರವಾಗಿ ಚಾಲನೆ ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
Author: AIN Author
ಬೆಂಗಳೂರು:- ಸಚಿವ ಜಮೀರ್ ರನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸ್ಪೀಕರ್ ಸ್ಥಾನದಲ್ಲಿ ಕುಳಿತ ವ್ಯಕ್ತಿಗೆ ಒಂದು ಜಾತಿ, ಧರ್ಮದ ಬಣ್ಣ ಕೊಡುವ ಕೆಲಸ ಮಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕು. ಇಲ್ಲವಾದರೆ ಅವರು ಮುಂದಿನ ಅಧಿವೇಶನದಲ್ಲಿ ಹೇಗೆ ಪಾಲ್ಗೊಳ್ಳುತ್ತಾರೋ ನೋಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲು ಹಾಕಿದ್ದಾರೆ
ತುಮಕೂರು:- ನಗರದ ದೇವರಾಯಪಟ್ಟಣದಲ್ಲಿ ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 36 ವರ್ಷದ ಕಮಲೇಶ್ ಮೃತ ದುರ್ದೈವಿ. ನವೆಂಬರ್ 17ರಂದು ವಿಷ ಸೇವಿಸಿದ್ದರು, ಮಂಗಳವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನ.21 ಮತ್ತು 22ರಂದು ವಿವಾಹ ನಡೆಯಬೇಕಿತ್ತು. ಮದುವೆಗೆ ಒಂದು ದಿನ ಬಾಕಿ ಇರುವಾಗಲೇ ಮೃತಪಟ್ಟಿದ್ದಾರೆ. ಮೂರು ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿತ್ತು. ನಿಶ್ಚಿತಾರ್ಥದ ಸಮಯದಲ್ಲಿ ನೀಡಿದ್ದ ಉಂಗುರ ಕಳೆದುಕೊಂಡಿದ್ದರು. ಇದನ್ನು ಮನೆಯವರಿಗೆ ತಿಳಿಸಲು ಹೆದರಿ ವಿಷ ಸೇವಿಸಿದ್ದರು
ಬೆಂಗಳೂರು:- ಪ್ರಧಾನಿ ತವರು ರಾಜ್ಯ ಗುಜರಾತ್ ಮತ್ತು ದೇಶದಲ್ಲಿ ಏಕೆ ಅಪೌಷ್ಟಿಕತೆ ಹೆಚ್ಚುತ್ತಿದೆ ಎಂಬುದಕ್ಕೆ ಅವರೇ ಉತ್ತರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ ಮಾದರಿ ಎಂದು ಹೊಗಳುವವರು ಪ್ರಧಾನಿ ತವರು ರಾಜ್ಯದಲ್ಲಿ ಅಪೌಷ್ಟಿಕತೆ ಸೂಚ್ಯಂಕ ಏಕೆ ಹೆಚ್ಚುತ್ತಿದೆ ಎಂಬುದನ್ನು ತಿಳಿಸಬೇಕು ಮತ್ತು “ಇದು ಇಡೀ ದೇಶಕ್ಕೆ ಮಾದರಿಯಾಗಬಹುದೇ?” ಎಂದು ಸಿಎಂ ಪ್ರಶ್ನಿಸಿದರು. ಬಡತನ ಮತ್ತು ಅನಕ್ಷರತೆ ನಿರ್ಮೂಲನೆಯಾಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ ಎಂದರು. ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಮತ್ತು ಅದಕ್ಕೆ ಬೇಕಾದ ಹಣ ನೀಡಲು ಸರ್ಕಾರ ಸಿದ್ಧವಿದೆ ಎಂದರು
ಬೆಂಗಳೂರು:- ಹೋಗು ಅಂದರೆ ಹೋಗೋಕೆ ತಾಳಿ ಕಟ್ಟಿದ ಹೆಂಡತಿ ನಾನಲ್ಲ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಟಿ.ಎ.ಶರವಣ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಹಣ ತೆಗೆದುಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ಮಾಡಿ ಹೇಳಲಿ ಎಂದು ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸವಾಲು ಹಾಕಿದ್ದಾರೆ. ಅಲ್ಲದೆ, ಧೈರ್ಯ ಇದ್ದರೆ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಮ್ಮೆ ಗೆದ್ದು ಬರಲಿ ಎಂದರು. ಶರವಣ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಲು ಹಣ ತೆಗೆದುಕೊಂಡಿಲ್ಲ ಅಂತ ಮಗನ ತಲೆ ಮೇಲೆ ಕೈ ಇಟ್ಟು ಆಣೆ ಮಾಡ್ತೀರಾ ಕುಮಾರಸ್ವಾಮಿ ಅವರೇ. ಧೈರ್ಯ ಇದೆಯಾ ನಿಮಗೆ ಆಣೆ ಮಾಡೋಕೆ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ. ಅಶೋಕ್ ಪ್ರತಿಪಕ್ಷದ ನಾಯಕ. ಅವರ ಮುಂದೆ ಹೋಗಿ ನಿಲ್ಲುತ್ತೀರಾ? ಎರಡು ಸೀಟಿಗೋಸ್ಕರ ಅಮಿತ್ ಶಾ ಮುಂದೆ ದೇವೇಗೌಡ ಹೋಗಿ ನಿಂತುಕೊಳ್ಳಬೇಕಿತ್ತಾ? ತೆನೆ ಹೊತ್ತ ಮಹಿಳೆಯನ್ನು ಯಾರ ಯಾರ ಹತ್ತಿರ ಕರೆದುಕೊಂಡು…
ಬೆಂಗಳೂರು:- ಎಚ್ಡಿಕೆ ವಿರುದ್ಧ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಜೆಡಿಎಸ್ ದೂರು ನೀಡಿದೆ. ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಜೆಡಿಎಸ್ ಪಕ್ಷದಿಂದ ಬುಧವಾರ ದೂರು ನೀಡಲಾಯಿತು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಹಾಗೂ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ದಯಾನಂದ ಅವರಿಗೆ ದೂರು ನೀಡಿದರು. ಪೋಸ್ಟರ್ ಅಂಟಿಸುವಲ್ಲಿ ಪ್ರಮುಖ ಪಾತ್ರಧಾರಿಯಾದ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ವಿರುದ್ಧ ಪೊಲೀಸ್ ಕಮಿಷನರ್ಗೆ ದೂರು ನೀಡಲಾಗಿದ್ದು, ಜತೆಗೆ ಡಿ.ಎಸ್.ಕಾರ್ತಿಕ್ ಗೌಡ, ಎಚ್.ಡಿ.ದರ್ಶನ್ ಗೌಡ, ಅರ್ಜುನ್ ಡಿ.ಗೌಡ, ಸಂತೋಷ್ ಎಂಬುವವರ ವಿರುದ್ಧ ಆಯುಕ್ತರಿಗೆ ದೂರು, ನೀಡಿ ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಜೈಲಿಗೆ ಅಟ್ಟಬೇಕು ಎಂದು ಜೆಡಿಎಸ್ ಮುಖಂಡರು ಒತ್ತಾಯಿಸಿದರು. ಎಸ್.ಮನೋಹರ್ ಹಿಂದಿನಿಂದಲೂ ಇದೇ ರೀತಿಯಲ್ಲಿ ಕೀಳು ಅಭಿರುಚಿಯ ಪೋಸ್ಟರ್ಗಳನ್ನು ಅಂಟಿಸಿ ತೇಜೋವಧೆ ಮಾಡುವ ಚಾಳಿಯುಳ್ಳ ವ್ಯಕ್ತಿಯಾಗಿದ್ದು, ಆತನ ವಿರುದ್ಧ ಇಂತಹ ಅನೇಕ…
ಬೆಳಗಾವಿ:- ಹೊಂಡದಲ್ಲಿ ಬಿದ್ದು 12 ವರ್ಷದ ಬುದ್ಧಿಮಾಂದ್ಯ ಬಾಲಕ ಸಾವನ್ನಪ್ಪಿದ ಘಟನೆ ಜರುಗಿದೆ. ಅಥಣಿ ತಾಲೂಕಿನ ಮದಭಾವಿ ಗ್ರಾಮದ ಅಂಧ ಮಕ್ಕಳ ಶಾಲೆಯಾದ ಶಾರದಾದೇವಿ ಬುದ್ದಿ ಮಾಂದ್ಯ ಮಕ್ಕಳ ಶಾಲೆ ಹಾಗು ವಸತಿಯುತ ವಿಶೇಷ ಶಾಲೆಯ ಸುದೀಪ್ ತಮ್ಮಣ್ಣಿ ಮಾನೆ ಎಂಬ ಬಾಲಕ ಸಾವನಪ್ಪಿದಾನೆ ಎಂದು ತಿಳಿದು ಬಂದಿದೆ. ದಿನಾಂಕ 21/11/2023 ರಂದುದು ಮುಂಜಾನೆ ಹೊರಗೆ ಹೋದ ಬಾಲಕ ಮರಳಿ ಶಾಲೆಗೆ ಬಂದಿಲ್ಲ ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿಗಳು ಬಾಲಕನನ್ನು ಹುಡುಕಾಡಿದರು ಸಿಕ್ಕಿರುದಿಲ್ಲ. ಮರುದಿನ ಅಂದರೇ ದಿನಾಂಕ್ 22/11/2023 ರಾಂಡು ಶಾಲೆಯ ಸಮೀಪದಲ್ಲಿ ಇರುವ ಒಂದು ಬಾಳೆ ತೋಟದ ಹೊಂಡಲ್ಲಿ ಬಾಲಕ ಮೃತ್ಯುವಾಗಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಬೆಳಗಾವಿ:- ಇಟ್ಟಂಗಿ ಕಾರ್ಮಿಕರಿಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ & ಟೀಮ್ ನಿಂದ ಟಾರ್ಚರ್ ಕೊಡುತ್ತಿದ್ದಾರೆ. ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ವಿಠಲ್ ಹಲಗೇಕರ್ ಇಂದು ಪ್ರವಾಸಿಮಂದಿರದಲ್ಲಿ ನಮ್ಮ ನ್ಯೂಸ್ ಸಮೂಹದೊಂದಿಗೆ ಮಾತನಾಡಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಮತ್ತು ಬೆಂಬಲಿಗರು ಖಾನಾಪುರ ತಾಲ್ಲೂಕಿನಾದ್ಯಂತ ಇರುವ ಇಟ್ಟಂಗಿಗಳ ನಿರ್ಮಾಣ ಕಾರ್ಮಿಕರು ವಾಹನಗಳ ಮೂಲಕ ಮಣ್ಣು ತೆಗೆದುಕೊಂಡು ಹೋಗಲು ಅಧಿಕಾರಿಗಳ ಮೇಲೆ ಒತ್ತಡತಂದು ಪೊಲೀಸ್ ಮತ್ತು ಗಣಿ ಅಧಿಕಾರಿಗಳ ಮೂಲಕ ಒತ್ತಡ ತಂದು ವಾಹನಗಳನ್ನು ತಡೆಯುವುದು ಮಾಡುತ್ತಿದ್ದಾರೆ. ಇದರಿಂದ ಈ ಹಿಂದೆ ನಾವು ಎಂದು ಈ ರೀತಿ ಮಾಡಿಲ್ಲ, ಈಗ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅನವಶ್ಯಕವಾಗಿ ಖಾನಾಪುರ ತಾಲ್ಲೂಕು ಆಡಳಿತದಲ್ಲಿ ಮೂಗು ತೂರಿಸುವ ಕೆಲಸ ಮಾಡುತ್ತಿದ್ದಾರೆ ಸಂದರ್ಶನದಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು:- ರಾಜ್ಯದಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಆಗಿ ಪೋಸ್ಟಿಂಗ್ ಪಡೆಯಲು ಬಹಳಷ್ಟು ಜನರು ಜಿದ್ದಾಜಿದ್ದಿ ನಡೆಸುತ್ತಿರುತ್ತಾರೆ. ಆದರೆ, ಬೆಂಗಳೂರಿನ ರಾಜಾಜಿನಗರ ಕೇಂದ್ರ ಭಾಗದಲ್ಲಿಯೇ ಇರುವ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ತಿಂಗಳಿಂದ ಪೊಲೀಸ್ ಇನ್ಸ್ಪೆಕ್ಟರ್ ಇಲ್ಲದೇ ಅನಾಥವಾಗಿದೆ ಎನ್ನುವುದನ್ನು ಕೇಳಿದರೆ ಬೆಂಗಳೂರು ನಿವಾಸಿಗಳಿಗೆ ಸೋಜಿಗವಾಗುತ್ತದೆ. ಇನ್ನು ನಗರದ ಕೇಂದ್ರ ಭಾಗದಲ್ಲಿರುವ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣಗಳು ನಡೆಯುತ್ತಿದ್ದರೂ ಅವುಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಿ ವಿಲೇವಾರಿ ಮಾಡಲು ದಕ್ಷ ಅಧಿಕಾರಿಯೇ ಇಲ್ಲವೆಂದು ಹೇಳಲಾಗುತ್ತಿದೆ. ಇನ್ನು ಈ ಬಗ್ಗೆ ಶಾಸಕ ಎಸ್. ಸುರೇಶ್ ಕುಮಾರ್, ಈ ಬಗ್ಗೆ ಸರ್ಕಾರದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಹಾಗೂ ಎಡಿಜಿಪಿ ಅವರ ಬಳಿ ರಾಜಾಜಿನಗರ ಪೊಲೀಸ್ ಠಾಣೆಗೆ ಒಬ್ಬ ದಕ್ಷ ಪೊಲೀಸ್ ಅಧಿಕಾರಿಯನ್ನು ನಿಯೋಜನೆ ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಪತ್ರವೊಂದನ್ನು ಸಿದ್ಧಪಡಿಸಿ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್…
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಮಳೆ ದಾಖಲಾಗಿದ್ದು, ಮಧ್ಯಾಹ್ನವೇ ನಗರದ ವಿವಿಧ ಕಡೆಗಳಲ್ಲಿ ತೆಂಪರೆದಿದ್ದಾನೆ. ಕೆಂಗೇರಿ ಒಂದರಲ್ಲಿಯೇ 17 ಮಿಲಿ ಮೀಟರ್ ಮಳೆ ದಾಖಲಾಗಿದೆ. ನಗರದಲ್ಲಿ ಕೆಲವು ದಿನಗಳಿಂದ ಹಿಂಗಾರು ಮಳೆ ದುರ್ಬಲವಾಗಿದ್ದರಿಂದ ಆಗಾಗ ಚುರುಕು ಬಿಸಿಲು ದಾಖಲಾಗುತ್ತಿತ್ತು. ಇದನ್ನು ಹೊರತುಪಡಿಸಿದರೆ, ಅಷ್ಟಾಗಿ ಚಳಿಯಾಗಲಿ, ಅತ್ಯಧಿಕ ತಾಪಮಾನದ ವಾತಾವರಣ ಕಂಡು ಬಂದಿಲ್ಲ. ಬದಲಾದ ವಾತಾವರಣದಲ್ಲಿ ವಿದ್ಯಮಾನಗಳಿಂದ ಬುಧವಾರ ನಗರದಲ್ಲಿ ಒಂದೆರಡು ಕಡೆ ಜೋರು ಮಳೆ ಆಗಿದೆ. ಮಧ್ಯಾಹ್ನ ದಿಢೀರ್ ಮಬ್ಬು ವಾತಾವರಣ ಶುರುವಾಗಿ, 4 ಗಂಟೆ ಹೊತ್ತಿಗೆ ಜಿಟಿ ಜಿಟಿ ಮಳೆ ಆರಂಭವಾಯಿತು. ಜಯನಗರ, ಕೆಆರ್.ಪುರ, ವೈಟ್ ಫೀಲ್ಡ್, ಬೈಯಪ್ಪನಹಳ್ಳಿ, ಕಂಟೋನ್ಮೆಂಟ್, ಶಿವಾಜಿನಗರ, ಅಂಜನಾಪುರ, ವಸಂತ ನಗರ, ಪೀಣ್ಯ, ಸಿವಿ ರಾಮನ್ ನಗರ, ಬಸವನಗುಡಿ, ಕೊತ್ನೂರು, ಮಾರತ್ತಹಳ್ಳಿ, ಹೂಡಿ, ಮಹದೇವಪುರ, ಕೋರಮಂಗಲ, ಹೂಡಿ, ಮಹದೇವಪುರ, ವರ್ತೂರು, ಕಲ್ಯಾಣ ನಗರ, ಬನಶಂಕರಿ, ಕುಮಾರ ಸ್ವಾಮಿ ಬಡಾವಣೆ, ಬಿಇಎಲ್, ಉತ್ತರಹಳ್ಳಿ, ಕೆಂಗೇರಿ, ನಾಗರಭಾವಿ, ವಿಜಯನಗರ ಸೇರಿದಂತೆ ಅನೇಕ ಕಡೆಗಳಲ್ಲಿ ಮಳೆ ಬಿದ್ದಿದೆ. ಇಂದು…