ಬೆಂಗಳೂರು: ರಾಜ್ಯದ ವಿದ್ಯುತ್ ಪರಿಸ್ಥಿತಿಯ ಕುರಿತು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ವಿದ್ಯುತ್ಗೆ ಈ ಬಾರಿ ಬೇಡಿಕೆ ಇದೆ. ಈ ವರ್ಷ ಮಳೆಯ ಕೊರತೆ ಉಂಟಾಗಿದೆ. ಈ ವರ್ಷ ಒನ್ ಟು ಡಬಲ್ ಇಂಧನಕ್ಕೆ ಬೇಡಿಕೆ ಜಾಸ್ತಿಯಾಗಿದೆ. ನಮಗೆ ಮುಖ್ಯಮಂತ್ರಿಗಳು ಸಾಕಷ್ಟು ಬೆಂಬಲ ನೀಡಿದ್ದಾರೆ ಎಂದು ಸಚಿವ ಕೆಜೆ ಜಾರ್ಜ್ ಹೇಳಿದರು. https://ainlivenews.com/another-victim-of-bescoms-negligence-cm-dcm-energy-minister-directly-responsible-for-death-of-mother-daughte/ ನಗರದಲ್ಲಿ ಮಾತನಾಡಿದ ಅವರು, ವಿದ್ಯುತ್ ಖರೀದಿ ಮಾಡಲು ಹಣಬಿಡುಗಡೆ ಮಾಡಿದ್ದಾರೆ. ಪಂಚಾಬ್ ಮತ್ತು ಯುಪಿಯಿಂದ ವಿದ್ಯುತ್ ಖರೀದಿಗೆ ಮುಂದಾಗುತ್ತಿದ್ದೇವೆ. ಜನವರಿ ತನಕ ವಿದ್ಯುತ್ಗೆ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಯಾರಿಗೂ ಸಮಸ್ಯೆಯಾಗದಂತೆ ಕ್ರಮ ತೆಗದುಕೊಳ್ಳುತ್ತೇವೆ ಎಂದು ಸಚಿವ ಕೆಜೆ ಜಾರ್ಜ್ ತಿಳಿಸಿದರು.
Author: AIN Author
ತುಮಕೂರು: ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ದಣಿದಿದ್ದ ರಾಹುಲ್ ಗಾಂಧಿಗೆ (Rahul Gandhi) ಸೌತೆಕಾಯಿ (Cucumber) ನೀಡಿ ದಣಿವಾರಿಸಿದ್ದ ಅಜ್ಜಿಯೊಬ್ಬರು (Old Woman) ನಿಧನವಾಗಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಚಿಕ್ಕನಾಯಕನಹಳ್ಳಿಯ (Chikkanayakanahalli) ಶಾರದಮ್ಮ (78) ನಿಧನರಾದ ಅಜ್ಜಿ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ 2022ರ ಅಕ್ಟೋಬರ್ನಲ್ಲಿ ಚಿಕ್ಕನಾಯಕನಹಳ್ಳಿ ಮಾರ್ಗವಾಗಿ ಭಾರತ್ ಜೋಡೋ ಯಾತ್ರೆ ಹೊರಟಿದ್ದ ಸಂದರ್ಭ ರಾಹುಲ್ ಗಾಂಧಿಗೆ ಫುಟ್ಪಾತ್ ವ್ಯಾಪಾರಿಯಾಗಿದ್ದ ಈ ಅಜ್ಜಿ ಸೌತೆಕಾಯಿಯನ್ನು ನೀಡಿ ದಣಿವಾರಿಸಿದ್ದರು. ಇಷ್ಟು ಮಾತ್ರವಲ್ಲದೇ ರಾಹುಲ್ ಗಾಂಧಿ ಬಳಿ ಇಂದಿರಾಗಾಂಧಿಯನ್ನು ಶಾರದಮ್ಮ ಹೊಗಳಿದ್ದರು. ಅನಾರೋಗ್ಯದ ಹಿನ್ನೆಲೆ ಶಾರದಮ್ಮ ನಿಧನರಾಗಿದ್ದಾರೆ.
ಬೆಂಗಳೂರು: ದೊಡ್ಡ ದೊಡ್ಡ ಬಂಗಲೆಗಳನ್ನೇ ಟಾರ್ಗೆಟ್ ಮಾಡಿ ಕೆಜಿ ಕೆಜಿ ಚಿನ್ನ (Gold) ದೋಚುತ್ತಿದ್ದ (Theft) ಖತರ್ನಾಕ್ ಕಳ್ಳನನ್ನು ಗೋವಿಂದರಾಜನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಬೆಂಗಳೂರಿನ (Bengaluru) ಸೆಲೆಬ್ರಿಟಿ ಮನೆಗಳ್ಳ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ (Escape Karthik) ಅರೆಸ್ಟ್ ಆಗಿದ್ದಾನೆ. ಆರೋಪಿ ಬಳಿಯಿಂದ ಬರೋಬ್ಬರಿ 1 ಕೆಜಿ 200 ಗ್ರಾಂ ಕದ್ದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತನ ವಿರುದ್ಧ ಬೆಂಗಳೂರಿನಲ್ಲಿ 83 ಕ್ಕೂ ಹೆಚ್ಚು ಮನೆಗಳ್ಳತನ ಕೇಸ್ಗಳಿವೆ. ನಗರ ಮಾತ್ರವಲ್ಲದೆ ಕರ್ನಾಟಕದ ಬೇರೆ ಭಾಗಗಳಲ್ಲಿಯೂ ಕಳ್ಳತನದ ಆರೋಪವಿದೆ. ಕೊಳಚೆ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಚಿನ್ನ: ಎಸ್ಕೇಪ್ ಕಾರ್ತಿಕ್ ಮನೆಯೊಂದರಲ್ಲಿ ಮುಕ್ಕಾಲು ಕೆಜಿ ಚಿನ್ನವನ್ನು ಕದ್ದು ತನ್ನ ಗರ್ಲ್ಫ್ರೆಂಡ್ ಜೊತೆ ಗೋವಾದ ಕ್ಯಸಿನೋಗೆ ಹೊರಟಿದ್ದ. ಆದರೆ ರೈಲು ತಡವಾಗಿದ್ದರಿಂದ ಕದ್ದಿದ್ದ ಚಿನ್ನವನ್ನು ಅಡವಿಡಲಾಗದೇ ಖತರ್ನಾಕ್ ಪ್ಲ್ಯಾನ್ ಮಾಡಿ ಕೊಳಚೆ ಪ್ರದೇಶದಲ್ಲಿ ಹೂತಿಟ್ಟು ಎಸ್ಕೇಪ್ ಆಗಿದ್ದ. ಓಕಳಿಪುರಂನಲ್ಲಿ ರೈಲ್ವೆ ಕಾಲೋನಿಯಲ್ಲಿ ಮೂತ್ರ ವಿಸರ್ಜನೆಗೆಂದು ಹೋಗಿದ್ದ ಕಾರ್ತಿಕ್ ಯಾರೂ ಓಡಾಡದ ಕೊಳಚೆ ಜಾಗದಲ್ಲಿ 2 ಅಡಿ ಗುಂಡಿ ತೆಗೆದು…
ಹೈದರಾಬಾದ್: ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕಾಗಿ (Telangana Campaign) ಹಣ ಸಂಗ್ರಹಿಸಲು ಕರ್ನಾಟಕದ ಜನರಿಂದ ಹಣ ಲೂಟಿ ಮಾಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರವು ಕರ್ನಾಟಕದ ಜನರ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂದು ತೆಲಂಗಾಣ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ (Kishan Reddy) ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹೈದರಾಬಾದ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಿಶನ್ ರೆಡ್ಡಿ, ʻʻಕೆಸಿಆರ್ ಕೋ ಹಟಾವೋ, ತೆಲಂಗಾಣ ಕೋ ಬಚಾವೋ, ಬಿಜೆಪಿ ಕೋ ಜಿತಾವೋʼʼ ಎಂದು ಘೋಷವಾಕ್ಯ ಮೊಳಗಿಸಿದ್ದಾರೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರಂತಹ ಹಲವು ಹಿರಿಯ ನಾಯಕರು ತೆಲಂಗಾಣದಲ್ಲಿ ಕಾಂಗ್ರೆಸ್ (Congress) ಪರ ವ್ಯಾಪಕ ಚುನಾವಣಾ ಪ್ರಚಾರ ನಡೆಸಿದ ಬಳಿಕ ಈ ಆರೋಪಗಳು ಕೇಳಿಬಂದಿವೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ 5 ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದಿತು. ಆದ್ರೆ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸುತ್ತಿಲ್ಲ. ಕರ್ನಾಟಕದಲ್ಲಿರುವ ಪ್ರತಿಯೊಂದು ವರ್ಗದ ಜನರೂ ಕೂಡ ಕಾಂಗ್ರೆಸ್ಗೆ ವಿರುದ್ಧವಾಗಿದ್ದಾರೆ.…
ಬೆಂಗಳೂರು : ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.́ https://ainlivenews.com/another-victim-of-bescoms-negligence-cm-dcm-energy-minister-directly-responsible-for-death-of-mother-daughte/ ಬರಪರಿಹಾರದ ಕಾಮಗಾರಿಗಳಿಗೆ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಸುಮಾರು 800 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಮೇವು ಸೇರಿದಂತೆ ಇತರೆ ಬರಪರಿಹಾರ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತದೆ. ಕೇಂದ್ರಸರ್ಕಾರಕ್ಕೆ ಬರಪರಿಹಾರ ಕೋರಿ ಮನವಿ ಸಲ್ಲಿಸಿದ್ದರೂ, ಅಲ್ಲಿಂದ ಯಾವುದೇ ರೀತಿಯ ಪರಿಹಾರ ಇನ್ನೂ ತಲುಪಿಲ್ಲ ಎಂದು ತಿಳಿಸಿದರು. ನವದೆಹಲಿಯಿಂದ ಪಕ್ಷದ ವರಿಷ್ಠರಾದ ರಣದೀಪ್ ಸುರ್ಜೆವಾಲ ಅವರು ಬೆಂಗಳೂರಿಗೆ ಆಗಮಿಸಿದ್ದು, ಅವರ ನೇತೃತ್ವದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಮೊದಲನೇ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡಲಾಗುವುದು ಎಂದರು.
ಬಿಗ್ ಬಾಸ್ ಮನೆ (Bigg Boss Kannada) ಇದೀಗ ರಣರಂಗವಾಗಿದೆ. 6 ವಾರ ಪೂರೈಸಿ 7ನೇ ವಾರಕ್ಕೆ ಕಾಲಿಟ್ಟಿರೋ ಬೆನ್ನಲ್ಲೇ ನಾಮಿನೇಷನ್ ಬಿಸಿ ತಟ್ಟಿದೆ. ಈ ಬಾರಿ 9 ಸ್ಪರ್ಧಿಗಳು ಎಲಿಮಿನೇಷನ್ ಹಾಟ್ ಸೀಟ್ನಲ್ಲಿದ್ದಾರೆ. ಡಬಲ್ ಎಲಿಮಿನೇಷನ್ ನಂತರ ಈ ವಾರಾಂತ್ಯ ಯಾರಿಗೆ ಗೇಟ್ ಪಾಸ್ ಸಿಗಲಿದೆ ಎಂಬುದೇ ಹೊಸ ಟ್ವಿಸ್ಟ್. ದೊಡ್ಮನೆಯಲ್ಲಿ ಈಗ ಆಟದ ಬಿಸಿ ಹೆಚ್ಚಾಗಿದೆ. ಇಶಾನಿ ಮತ್ತು ಭಾಗ್ಯಶ್ರೀ ಎಲಿಮಿನೇಷನ್ನಿಂದ ಮನೆಮಂದಿಗೆ ಡಬಲ್ ಶಾಕ್ ಆಗಿದೆ. ಈ ಬೆನ್ನಲ್ಲೇ 7ನೇ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲೂ ಜಟಾಪಟಿ ನಡೆದಿದೆ. ಈ ವಾರ ನಮ್ರತಾ ಗೌಡ, ನೀತು, ಡ್ರೋನ್ ಪ್ರತಾಪ್, ಸಿರಿ, ವಿನಯ್, ಸಂಗೀತಾ ಶೃಂಗೇರಿ, ಸ್ನೇಹಿತ್, ತನಿಷಾ, ತುಕಾಲಿ ಸಂತೋಷ್ ಅವರು ನಾಮೀನೇಟ್ ಆಗಿದ್ದಾರೆ. ಬಿಗ್ ಬಾಸ್ (Bigg Boss Kannada) ಆಟ ಪ್ರಾರಂಭವಾದ ದಿನದಿಂದ ಕಾರ್ತಿಕ್ ಸದಾ ನಾಮಿನೇಷನ್ ಹಾಟ್ ಸೀಟ್ನಲ್ಲಿ ಇರುತ್ತಿದ್ದರು. ಈ ಬಾರಿ ಮನೆಯ ಕ್ಯಾಪ್ಟನ್ ಆಗಿರೋದ್ರಿಂದ ನಾಮಿನೇಷನ್ ಕತ್ತಿಯಿಂದ ಮಿಸ್ ಆಗಿದ್ದಾರೆ. ಇದೀಗ…
ಆರು ವಾರಗಳನ್ನು ಕಳೆದು ಏಳನೇ ವಾರದಲ್ಲಿರುವ ಬಿಗ್ಬಾಸ್ (Bigg Boss Kannada) ಮನೆಯಲ್ಲಿ ‘ಕಾಂಪಿಟೇಷನ್ ಹೀಟ್’ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಿಸಿ ಈಗ ಸ್ಪರ್ಧಿಗಳ ತಲೆಬೋಳಿಸಿಕೊಳ್ಳುವವರೆಗೂ ಮುಟ್ಟಿದೆ. JioCinema ಬಿಡುಗಡೆ ಮಾಡಿರುವ ಪ್ರೊಮೋದಲ್ಲಿ ಕಾರ್ತಿಕ್ ಮತ್ತು ತುಕಾಲಿ ಸಂತೋಷ್ ಅವರ ತಲೆಯಲ್ಲಿ ಬೋಳಿಸುತ್ತಿರುವ ದೃಶ್ಯ ಜಾಹೀರಾಗಿದೆ. ಮನೆಯನ್ನು ‘ಗಜಕೇಸರಿ’ ಮತ್ತು ‘ಸಂಪತ್ತಿಗೆ ಸವಾಲ್’ ಎಂಬ ಎರಡು ತಂಡಗಳನ್ನಾಗಿ ವಿಭಾಗಿಸಲಾಗಿದೆ. ‘ಗಜಕೇಸರಿ’ ತಂಡದಲ್ಲಿ ವಿನಯ್, ನಮ್ರತಾ, ಸಂಗೀತಾ (Sangeetha), ಸ್ನೇಹಿತ್, ಸಿರಿ, ಪ್ರತಾಪ್ ಇದ್ದಾರೆ. ‘ಸಂಪತ್ತಿಗೆ ಸವಾಲ್ ತಂಡದಲ್ಲಿ, ‘ಮೈಕಲ್, ನೀತು, ತನಿಷಾ, ವರ್ತೂರು, ಕಾರ್ತಿಕ್ ಮತ್ತು ತುಕಾಲಿ ಸಂತೋಷ್ (Tukali Santu) ಇದ್ದಾರೆ. ಈ ತಂಡಗಳಿಗೆ ಬಿಗ್ಬಾಸ್ ಎದುರಾಳಿ ತಂಡಕ್ಕೆ ಒಂದಾದ ಮೇಲೆ ಒಂದರಂತೆ ಸವಾಲ್ ಹಾಕುವ ಟಾಸ್ಕ್ ಅನ್ನು ನೀಡಿದ್ದಾರೆ. ಅದರ ಭಾಗವಾಗಿ ಸಂಗೀತಾ, ತನ್ನ ಎದುರಾಳಿ ತಂಡದಲ್ಲಿರುವ ಕಾರ್ತಿಕ್ ಮತ್ತು ತುಕಾಲಿ ಅವರು ತಲೆಯನ್ನು ಕ್ಲೀನ್ ಶೇವ್ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದಕ್ಕೆ ವಿರೋಧವೂ ವ್ಯಕ್ತವಾಗಿದೆ. ನಂತರದ…
ಹೊಸಬರ ಸಿನಿಮಾ ‘ರಿಚ್ಚಿ’ (Ritchie) ಮೊನ್ನೆ ಮೊನ್ನೆಯಷ್ಟೇ ತನ್ನ ಹಾಡುಗಳನ್ನು ಬಿಡುಗಡೆ ಮಾಡಿತ್ತು. ಕುನಾಲ್ ಗಾಂಜಾವಾಲ್ ಈ ಸಿನಿಮಾಗಾಗಿ ಮತ್ತೆ ಕನ್ನಡಕ್ಕೆ ಬಂದಿದ್ದರು. ಒಂದೊಳ್ಳೆ ಹಾಡು ಹೇಳಿದ್ದರು. ನಗನಗ್ತಾ ಶೂಟಿಂಗ್ ಮುಗಿಸಿ, ಸಿನಿಮಾ ರಿಲೀಸ್ ಗೆ ರೆಡಿ ಮಾಡಿಕೊಳ್ಳುತ್ತಿದ್ದ ತಂಡಕ್ಕೆ ಈಗೊಂದು ಶಾಕಿಂಗ್ ನ್ಯೂಸ್ ಬಂದಿದೆ. ರಿಚ್ಚಿ ಸಿನಿಮಾದ ನಾಯಕ, ನಿರ್ಮಾಪಕ, ನಿರ್ದೇಶಕ ರಿಚ್ಚಿ ವಿರುದ್ಧ ಸಿನಿಮಾದ ನಾಯಕಿ ಪೊಲೀಸ್ (police) ಠಾಣೆ ಮೆಟ್ಟಿಲು ಏರಿದ್ದಾರೆ. ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಈ ಇಬ್ಬರ ನಡುವೆ ಜಗಳ ನಡೆದಿದ್ದು, ನಟಿ ರೆಮೋಲಾ (Remola) ಹಾಗೂ ನಟಿಯ ತಾಯಿ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ರಿಚ್ಚಿ ವಿರುದ್ಧ ದೂರು (complaint) ದಾಖಲಿಸಿದ್ದಾರೆ. ತನ್ನದೇ ಹೆಸರನ್ನು ಸಿನಿಮಾದ ಟೈಟಲ್ ಆಗಿಸಿ, ಹಲವು ಜವಾಬ್ದಾರಿಗಳನ್ನು ಹೊತ್ತಿದ್ದಾರೆ ರಿಚ್ಚಿ. ಈ ಸಿನಿಮಾಗೆ ಕಿರುತೆರೆ ನಟಿ ರೆಮೋಲಾ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಸಂಭಾವನೆಯಾಗಿ ಎರಡು ಲಕ್ಷ ರೂಪಾಯಿಯ ಚೆಕ್ ಅನ್ನೂ ನೀಡಿದ್ದಾರೆ. ಆದರೆ, ಕಾಲ್ ಶೀಟ್ ವಿಚಾರವಾಗಿ ಇಬ್ಬರ ಮಧ್ಯ…
ಜೈಪುರ: ಕಾಂಗ್ರೆಸ್ ಆಡಳಿತದಲ್ಲಿರುವ ರಾಜಸ್ಥಾನದಲ್ಲಿ (Rajasthan) ಅಭಿವೃದ್ಧಿ ಕುಂಠಿತವಾಗಿದೆ. ಅಲ್ಲದೇ ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯವನ್ನು ಸಂಘರ್ಷಕ್ಕೆ ಎಳೆಯಲಾಗಿದ್ದು, ಜನರಲ್ಲಿ ಸಂಘರ್ಷ ಮತ್ತು ಭಯೋತ್ಪಾದನೆಯ ಮನಸ್ಥಿತಿ ಹೆಚ್ಚಾಗಿದೆ. ಊಹೆಗೂ ನಿಲುಕದ ಹಿಂಸಾಚಾರ ಘಟನೆಗಳು ಈ ನೆಲದಲ್ಲಿ ನಡೆದಿವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆತಂಕ ವ್ಯಕ್ತಪಡಿಸಿದ್ದಾರೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆ (Rajasthan Assembly Elections) ಹಿನ್ನೆಲೆ ಪಾಲಿ ನಗರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ಮೋದಿ, ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು (Congress Party) ಭ್ರಷ್ಟಾಚಾರ ಮತ್ತು ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ. ಕುಟುಂಬ ರಾಜಕಾರಣದ ರಾಜಕೀಯವೇ ಅವರಿಗೆ ಸರ್ವಸ್ವವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’ (Goodchari). ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಕೆ ಕಂಡಿತ್ತು. ಈ ಚಿತ್ರದ ಸೀಕ್ವೆಲ್ ಬರ್ತಿರೋದು ಗೊತ್ತೇ ಇದೆ. ಈಗಾಗಲೇ ರಿಲೀಸ್ ಆಗಿದ್ದ ‘ಗೂಢಚಾರಿ 2’ ಫಸ್ಟ್ ಲುಕ್ ಬರೀ ಸದ್ದು ಮಾಡಿತ್ತು. ಇದೀಗ ಚಿತ್ರತಂಡ ನಾಯಕಿಯನ್ನು ಪರಿಚಯಿಸಿದೆ. ಗೂಢಚಾರಿ-2 ಸಿನಿಮಾಗೆ ನಾಯಕಿ ಸಿಕ್ಕಿದ್ದಾರೆ. ಪ್ರತಿಭಾನ್ವಿತ ನಟಿ ಬನಿತಾ ಸಂಧು ಶೇಶ್ (Banita Sandhu), ಅಡಿವಿ ಶೇಷ್ (Advi Shesh)ಗೆ ಜೋಡಿಯಾಗಿ ನಟಿಸುತ್ತಿದ್ದಾಳೆ. ಅಕ್ಟೋಬರ್, ಸರ್ದಾರ್ ಉದಾಮ್, ಆದಿತ್ಯ ವರ್ಮಾ ಸೇರಿದಂತೆ ಹಲವು ಹಿಂದಿ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿದ್ದು, ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಬನಿತಾ, ಇದು ನನ್ನ ಮೊದಲ ಪ್ಯಾನ್ ಇಂಡಿಯಾ ಸಿನಿಮಾ. ವಿಷನರಿ ತಂಡದ ಜೊತೆ…