ಬೆಂಗಳೂರು: ನಿಮ್ಮಬಳಿ ಅಡಮಾನ ಇಡಲು ಆಸ್ತಿ ಇದೆಯ.ಅಷ್ಟು ಸಾಕು ಸಾಲ ನಾವು ಕೊಡ್ತಿವಿ ಅಂತ ಲಕ್ಷ ಲಕ್ಷ ಸಾಲ ಕೊಡುವ ಬ್ಯಾಂಕ್ ಇರುತ್ವೆ.ಆದರೆ ಒಂದು ಕೈಲಿ ಸಾಲ ಕೊಟ್ಟು ಮತ್ತೊಂದು ಕೈಲಿ ಹಣ ದೋಚುವ ಬ್ಯಾಂಕ್ ಗಳು ಕೂಡ ಇವೆ.ಇಂತಹ ಬ್ಯಾಂಕ್ ನಿಂದ ಲಕ್ಷಾನುಗಟ್ಟಲೆ ಸಾಲ ಪಡೆದು ಕ್ಷಣದಲ್ಲೆ ಆ ಹಣವನ್ನ ಅದೇ ಬ್ಯಾಂಕ್ನವರು ಕಬಳಿಸ್ತಾರೆ.ಅಷ್ಟಕ್ಕೂ ಯಾವುದು ಆ ಖತರ್್ನಾಕ್ ಬ್ಯಾಂಕ್, ಇವರು ಮಾಡಿದ್ದೇನು ಅಂತ ತಿಳಿಬೇಕ ಈ ಸ್ಟೋರಿ ನೋಡಿ. ಇವರ ಹೆಸರು ಅಕ್ರಮ್ ಬೆಂಗಳೂರಿನ ಕದಿರೇನಹಳ್ಳಿ ನಿವಾಸಿ.ಅವಶ್ಯಕತೆಗಾಗಿ ತನ್ನ ಜಮೀನನ್ನು ಅಡವಿಟ್ಟು ಹತ್ತು ಲಕ್ಷ ಸಾಲ ಪಡೆಯಲು ಮುಂದಾಗಿದ್ದಾರೆ.ಅದರಂತೆ ಇವರಿಗೆ ಬ್ಯಾಂಕ್್ನಲ್ಲಿ ಹತ್ತು ಲಕ್ಷ ಸಾಲವು ದೊರೆತು,ಇವರ ಖಾತೆಗೆ ಜಮಾ ಆಗಿದೆ.ಆದರೆ ಜಮಾ ಆದ ಕೆಲವೆ ನಿಮಿಷಗಳಲ್ಲಿ ಹತ್ತು ಲಕ್ಷಗಳಲ್ಲಿ ಆರು ಲಕ್ಷದ ಐವತ್ತು ಸಾವಿರ ಹಣ ಶ್ರೀಧರ್ ಎನ್ನುವವರ ಖಾತೆಗೆ ವರ್ಗಾವಣೆ ಆಗಿದೆ.ಇದರಿಂದ ಆತಂಕಕ್ಜೆ ಒಳಗಾದ ಅಕ್ರಮ್ ಮರುದಿನವೆ ಬ್ಯಾಂಕ್ ಗೆ ತೆರಳಿ ವಿಚಾರಿಸಿದಿದ್ದಾರೆ. ಬ್ಯಾಂಕ್ ಸಿಬ್ಬಂದಿ…
Author: AIN Author
ಬೆಂಗಳೂರು: ಬೆಸ್ಕಾಂ ನಿರ್ಲಕ್ಷದ ಪರಿಣಾಮ ತಾಯಿ ಮತ್ತು ಪುಟ್ಟ ಕಂದಮ್ಮ ಎಲೆಕ್ಟ್ರಿಕ್ ವೈರ್ ಗೆ ಸಿಲುಕಿ, ಸಾರ್ವಜನಿಕರ ಮುಂದೆ ಉರಿದು ಬಿದ್ದ ಅಮಾನುಷ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಈ ಸರಕಾರದ ಮುಖ್ಯಸ್ಥರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಇಂಧನ ಸಚಿವ ಜಾರ್ಜ್ ಅವರೇ ಈ ಸಾವಿಗೆ ಕಾರಣ. ಆದ್ದರಿಂದ ಅವರ ಮೇಲೆ ಎಫ.ಐ.ಆರ್ ಹಾಕಬೇಕು ಎಂದು ವಿಧಾನಪರಿಷತ್ ಹಿರಿಯ ಸದಸ್ಯ, ಜೆಡಿಎಸ್ ಹಿರಿಯ ನಾಯಕ ಟಿ. ಎ.ಶರವಣ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಾರೋ ಮಾಡಿದ ಸಣ್ಣ ತಪ್ಪಿಗೆ, ಕುಮಾರಸ್ವಾಮಿ ಅವರನ್ನು ಹೊಣೆಗಾರರನ್ನಾಗಿ ಮಾಡಿ ವಿದ್ಯುತ್ ಕಳ್ಳತನದ ಆರೋಪ ಹಾಕಿ ದಂಡ ಕಟ್ಟಿಸಿಕೊಂಡ ಈ ಸರಕಾರ, ಹಾಡು ಹಗಲೇ ತಾಯಿ ಮತ್ತು ಪುಟ್ಟ ಕಂದಮ್ಮಗಳ ಸಾವಿಗೆ ಕಾರಣವಾಗಿದೆ. ಇದು ಅಕ್ಷಮ್ಯ ನಿರ್ಲಕ್ಷ. ಸರಕಾರವೇ ಮಾಡಿದ ಕೃತ್ಯ ಆಗಿದೆ. ಆದ್ದರಿಂದ ಸರಕಾರದ ಮುಖ್ಯಸ್ಥರು, ಮತ್ತು ಇಂಧನ ಸಚಿವರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು…
ರಾಮನಗರ: ಪೋಸ್ಟರ್ ಅಂಟಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಂಟಿಸಿಕೊಳ್ಳಲಿ ಯಾರು ಬೇಡ ಅಂತಾರೆ, ಏನೂ ಮಾಡಲು ಆಗಲ್ಲ. ನನಗೆ ಯಾರು ಏನೂ ಮಾಡೋಕಾಗಲ್ಲ. ಸರ್ಕಾರದ ತಪ್ಪುಗಳನ್ನ ಏಕಾಂಗಿಯಾಗಿ ಪ್ರಶ್ನೆ ಮಾಡುವುದು ಕುಮಾರಸ್ವಾಮಿ ಒಬ್ಬನೆ. ಎಲ್ಲರೂ ಮೌನಕ್ಕೆ ಶರಣಾಗಿದ್ದಾಗ ಅಕ್ರಮ ಸಂಪತ್ತು, ವರ್ಗಾವಣೆ ದಂಧೆ ಬಗ್ಗೆ ಧ್ವನಿ ಎತ್ತಿದ್ದು ನಾನು. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ನಾನು ಇಲ್ಲಿವರೆಗೂ ಏನು ಹೇಳಿದ್ದೇನೆ ಸರ್ಕಾರ ಒಂದಕ್ಕೂ ಉತ್ತರ ಕೊಟ್ಟಿಲ್ಲ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದರು. ಇನ್ನೂ ಬರದ ವಿಚಾರವಾಗಿ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ರೈತರಿಗೆ ಯಾವುದೇ ಪರಿಹಾರ ಹಣವನ್ನು ಇನ್ನೂ ಕೊಟ್ಟಿಲ್ಲ. ರಾಜ್ಯದಲ್ಲಿ ಈ ವರ್ಷದಲ್ಲಿ 33,700 ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿದರು.
ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಇಂದು ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ ಮುಸುಕಿನ ಜೋಳ ಬೆಳೆ ಹನಿ ಉಂಟಾಗಿರುವ ಸ್ಥಳ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿ, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. ನಂತರ ಮಾತನಾಡಿದ ಅವರು ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿ, ಕೇಂದ್ರಕ್ಕೆ ವರದಿ ಸಲ್ಲಿಸಿದೆ ಎಂದರು. ಇಂದಿನ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಕೇಂದ್ರ ಸರ್ಕಾರದ ಹಣ ಬಿಡುಗಡೆ ಮಾಡುವುದು ತಡವಾದರೆ, ರಾಜ್ಯ ಸರ್ಕಾರವೇ ರೈತರ ನೆರವಿಗೆ ನಿಲ್ಲಲಿದೆ ಎಂದರು. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 18 ಸಾವಿರ ಕೋಟಿ ಅನುದಾನ ಕೇಳಿದ್ದೇವೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದ ನಂತರ ಹಂತ ಹಂತವಾಗಿ ಪರಿಹಾರ ವಿತರಿಸುತ್ತೇವೆ ಎಂದರು. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ರೈತರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತದೆ. ಕೇಂದ್ರ ತಂಡ…
ಬೆಂಗಳೂರು: ಟಿವಿಯ ಪ್ರಸಾರವಾದ ದಿನವನ್ನು ಸಂಭ್ರಮಿಸುವ ಉದ್ದೇಶದಿಂದ ಪ್ರತಿವರ್ಷ ನವೆಂಬರ್ 21ರಂದು ವಿಶ್ವ ದೂರದರ್ಶನ ದಿನವನ್ನು ಆಚರಿಸಲಾಗುತ್ತದೆ. ಟಿವಿ ಎಂದು ಮನೆಮನೆಯ ಈ ಸ್ನೇಹಿತನನ್ನು ನೆನಪಿಸಿಕೊಳ್ಳುವ ಉದ್ದೇಶದಿಂದ ಪ್ರತಿವರ್ಷ ಪ್ರಪಂಚದಾದ್ಯಂತ ವಿಶ್ವ ದೂರದರ್ಶನ ದಿನ ಅಥವಾ ವರ್ಲ್ಡ್ ಟೆಲಿವಿಷನ್ ಡೇ ಆಚರಿಸಲಾಗುತ್ತದೆ. ಹಾಗಾದರೆ ಈ ದಿನದ ಆಚರಣೆಯ ಹಿಂದಿನ ಉದ್ದೇಶವೇನು ತಿಳಿಯಿರಿ. ಟಿವಿ ಮನೆಗಳಿಗೆ ಲಗ್ಗೆಯಿಟ್ಟಾಗ ಡೂಮ್ ಟಿವಿಗಳವು ಇದವು ನಂತರ ಕಾಲ ಕಳೆದಂತೆ ಎಲ್ಇಡಿ, ಎಲ್ಸಿಡಿ ಸ್ಮಾರ್ಟ್ ಟಿವಿಗಳ ಹವಾ ಶುರುವಾತ್ತು. ಡೂಮ್ ಟಿವಿಗೆ ಡಿಶ್, ಆಂಟೆನಾ ಅಳವಡಿಸಿ ಟಿವಿ ನೋಡುತ್ತಿದ್ದ ದಿನಗಳೇ ಬಲು ಸುಂದರ. ಟಿವಿ ಎಂಬ ಎಲೆಕ್ಟ್ರಾನಿಕ್ ಪರಿಕರವು ಎಲ್ಲ ವಯೋಮಾನದವರಿಗೂ ಮಾಹಿತಿ, ಮನೋರಂಜನೆ ಎಲ್ಲವನ್ನೂ ನೀಡುತ್ತದೆ. ಪುಟಾಣಿ ಮಕ್ಕಳಿಗೆ ಕಾರ್ಟೂನ್ಗಳು ಮನರಂಜಿಸುವ ಜೊತೆಗೆ ವಿವಿಧ ಕಾರ್ಯಕ್ರಮಗಳು, ನ್ಯೂಸ್, ಧಾರಾವಾಹಿಗಳು, ಸಿನಿಮಾಗಳು ಹೀಗೆ ಮಕ್ಕಳಿಂದ ವಯಸ್ಸಾದವರೆಗೂ ಟಿವಿ ಎಲ್ಲರ ಆಕರ್ಷಣೀಯ ಕೇಂದ್ರಬಿಂದುವಾಗಿರುತ್ತದೆ.ದೂರದರ್ಶನವು ಪ್ರಾರಂಭದ ದಿನಗಳಿಂದಲೂ ಸಾಕಷ್ಟು ಅಭಿವೃದ್ಧಿಗೆ ಹೆಸರಾಗಿದೆ. ಪ್ರಸ್ತುತ ಯುಗದಲ್ಲಿ ಇದು ಇನ್ನಷ್ಟು ಬದಲಾವಣೆ ಕಂಡಿದೆ. ‘…
ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಈ ರಾಜ್ಯದ ಜವಾಬ್ದಾರಿ ಹಾಗೂ ಜನರ ಸಮಸ್ಯೆ ಮುಖ್ಯ ಅಲ್ಲ. ಕುಮಾರಸ್ವಾಮಿ ಯಾವತ್ತು ಜನರ ಸಮಸ್ಯೆ ಬಗ್ಗೆ ಮಾತಾಡಿಲ್ಲ. ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೇ ಮಾತಾಡುತ್ತಿದ್ದಾರೆ. ಅವರ ರೀತಿ ಮಾತನಾಡುವುದು ಸರಿ ಅಂದರೇ ನಾನು ಅವರಪ್ಪನ ರೀತಿ ಮಾತಾಡುತ್ತೇನೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಅಂತ ದಾಖಲೆ ಬಿಡುಗಡೆ ಮಾಡಲಿ. ಅವರ ಬಳಿ ಇರುವ ಪೆನ್ ಡ್ರೈವ್ ಬಿಡುಗಡೆ ಮಾಡಲು. ಆದರೆ ಈಗ ಮಂತ್ರಿಗಳು ಕರೆ ಮಾಡಿ ಬಿಡುಗಡೆ ಮಾಡಬೇಡಿ ಅಂತಾ ಹೇಳಿದ್ದಾರೆ ಅಂತಾರೆ. ಅದ್ಯಾವ ಮಂತ್ರಿ ಅಂತಾ ಹೇಳಲಿ. ಅವರ ಹತ್ತಿರ ಇರುವುದು ಪೆನ್ ಡ್ರೈವ್ ಅಲ್ಲ ಪೆನ್ಸಿಲ್ ಡ್ರೈವ್, ಇರೋದು ಅಳಿಸಿ ಹೋಗಿದೆ ಎಂದು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಾಡಿದರು.
ಕಾರವಾರ: ಅನಂತ ಕುಮಾರ್ ಹೆಗಡೆಯವರ ಜತೆ ಉತ್ತಮ ಬಾಂಧವ್ಯವಿದ್ದು, ಅವರು ನನ್ನ ಸಹೋದರರಂತೆ. ಹೆಗಡೆಯವರು ಚುನಾವಣೆಗೆ ನಿಲ್ಲೋದಾದರೆ ನಾನು ಆಕಾಂಕ್ಷಿಯಲ್ಲ. ಅನಂತ ಕುಮಾರ್ ಹೆಗಡೆಯವರು ಚುನಾವಣೆಗೆ ನಿಲ್ಲದಿದ್ದರೆ ಮಾತ್ರ ನಾನು ಕೂಡಾ ಒಬ್ಬ ಚುನಾವಣಾ ಆಕಾಂಕ್ಷಿ. ದೇವೇಗೌಡರು, ಕುಮಾರಸ್ವಾಮಿ, ಪ್ರಧಾನಿ ಮೋದಿಯವರ ಅಭಿಮಾನಿಗಳು ನಮ್ಮ ಗೆಲ್ಲಿಸಿಯೇ ಗೆಲ್ಲಿಸುತ್ತಾರೆ. ಅವಕಾಶ ಸಿಕ್ಕರೆ ಉತ್ತರಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಖಂಡಿತಾ ಗೆಲ್ಲುತ್ತಾರೆ. ಜನರಿಗೆ ಬದಲಾವಣೆ ಬೇಕಿತ್ತು, https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಜೆಡಿಎಸ್ ಅಂದು ಬಿಜೆಪಿ ವಿರುದ್ಧ ಮಾತನಾಡಿದ್ದರಿಂದ ನಾನು ಕೂಡಾ ಬಿಜೆಪಿ ವಿರುದ್ಧವಿದ್ದೆ. ನನ್ನ ಕಾರ್ಯಕರ್ತರು ಬಿಜೆಪಿ ಜತೆಯಾಗಿ ನಿಲ್ಲಬೇಕೆಂದು ಹೇಳಿದ್ದರಿಂದ ಬೆಂಬಲಿಸುತ್ತಿದ್ದೇನೆ. ಪಕ್ಷದಲ್ಲಿ ವೈಯಕ್ತಿಕ ಬೇಧಭಾವ ಇರಬಹುದು. ಆದರೆ ಮೋದಿ ಮತ್ತೆ ಪ್ರಧಾನಿಯಾಗಲು ಯಾವ ತ್ಯಾಗಕ್ಕೂ ಸಿದ್ಧರಾಗಿದ್ದೇವೆ ಎಂದು ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಹೇಳಿದರು.
ಮಂಡ್ಯ: ಬಿಜೆಪಿಯಿಂದ ಮಾಜಿ ಸಚಿವ ನಾರಾಯಣಗೌಡ ಅಂತರ ಕಾಯ್ದುಕೊಳ್ಳುತ್ತಿರುವ ವಿಚಾರವಾಗಿ ಮಾತನಾಡಿದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ನಾರಾಯಣಗೌಡ ನಮ್ಮೊಂದಿಗೆ ಇದ್ದಾರೆ. ಚುನಾವಣೆಯಲ್ಲಿ ಸೋತ ನಂತರ ಒಂದಷ್ಟು ಸಮಯ ಬೇಕಾಗುತ್ತದೆ. ಒಳ್ಳೆಯ ಕೆಲಸ ಮಾಡಿದರೂ ಸಹ ನಾರಾಯಣಗೌಡಗೆ ಹಿನ್ನಡೆಯಾಗಿದೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಇದಕ್ಕಾಗಿ ನಾರಾಯಣಗೌಡ ಸ್ವಲ್ಪ ನೋವಿನಲ್ಲಿ ಇದ್ದಾರೆ. ಮೊನ್ನೆಯೂ ಅವರ ಜೊತೆ ಮಾತನಾಡಿದ್ದೇನೆ. ನಾನು ರಾಜ್ಯಾಧ್ಯಕ್ಷನಾದ ವೇಳೆ ಅವರು ಬಂದು ಆಶೀರ್ವಾದ ಮಾಡಿದ್ದಾರೆ. ನಾರಾಯಣಗೌಡ ಈ ಭಾಗದಲ್ಲಿ ನಮಗೆ ಶಕ್ತಿ, ಅವರನ್ನು ಉಳಿಸಿಕೊಳ್ಳುತ್ತೇವೆ ಎಂದರು.
ಬೆಂಗಳೂರು: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ದೀಪಾವಳಿ ವೇಳೆ ಬೆಲೆಏರಿಕೆ ಆಗಿರುವುದು ಚಿನ್ನಾಭರಣ ಪ್ರಿಯರಿಗೆ ಬೇಸರ ತರಿಸಿದೆ. ಬೆಲೆ ಹೆಚ್ಚಳವಾದರೂ ಬಂಗಾರದ ಖರೀದಿಗೆ ಹೆಚ್ಚಿನ ಜನ ಮುಂದಾಗುತ್ತಿದ್ದಾರೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,525 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 20ಕ್ಕೆ): 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,550 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,690 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ:…
ಧಾರವಾಡ: ಕಟ್ಟಡ ಕಾರ್ಮಿಕ ಮಕ್ಕಳ ಶಿಷ್ಯ ವೇತನದ ಹಿಂದಿನ ಮೊತ್ತ ಮುಂದುವರೆಸಲು ಹಾಗೂ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಖಾತ್ರಿಪಡಿಸಲು ಅಗ್ರಹಿಸಿ, ಧಾರವಾಡದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಎಐಡಿಎಸ್ಓ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಧಿಕ್ಲಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೇವಲಗ್ಯಾರಂಟಿಗಳ ಹೆಸರಿನಲ್ಲಿಯೇ ಕಾಲ ದೂಡುತ್ತಿದೆ. ವಿದ್ಯಾರ್ಥಿಗಳ ವೇತನ ಶಿಕ್ಷಣದ ಬಗ್ಗೆ ಯಾವುದೇ ಮೂತುವರ್ಜಿ ತೋರುತ್ತಿಲ್ಲ. ವಿದ್ಯಾರ್ಥಿಗಳ ಶಿಷ್ಯ ವೇತನ ಸಕಾಲಕ್ಕೆ ಬೀಡುಗಡೆ ಮಾಡುತ್ತಿಲ್ಲ. ಇದರ ಜೊತೆಗೆ ಕಟ್ಟಡ ಕಾರ್ಮಿಕ ಮಕ್ಕಳ ಶಿಷ್ಯ ವೇತನ ತಡೆಯಲು ನಿರ್ಧಾರ ಮಾಡಿತ್ತು,ಇದು ಎಷ್ಟರಮಟ್ಟಿಗೆ ಎಂದು ಪ್ರಶ್ನೆ ಮಾಡಿದರು. ವಿದ್ಯಾರ್ಥಿಗಳ ಹಿತ ಕಾಪಾಡಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗುತ್ತಿದೆ. ಈ ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ವೇತನ ಸಕಾಲಕ್ಕೆ ಸಿಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು, ಕಟ್ಟಡ ಕಾರ್ಮಿಕ…