ಬೆಂಗಳೂರು:- ಕುಂಬಳಗೋಡು ಪೊಲೀಸ್ ಠಾಣೆ ನೂತನ ಕಟ್ಟಡವನ್ನು ಗೃಹ ಸಚಿವ ಜಿ ಪರಮೇಶ್ವರ್ ಅವರು ಬುಧವಾರ ಉದ್ಘಾಟನೆ ಮಾಡಿದರು. ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಅವರು ಮುಖ್ಯ ಅತಿಥಿಯಾಗಿ ಭಾಗಿಯಾಗಿದರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಇನ್ನೂ ಈ ಪೊಲೀಸ್ ಠಾಣೆಯ ನೂತನ ಕಟ್ಟಡದಲ್ಲಿ ಮಹಿಳಾ ಪೊಲೀಸರಿಗೆ ಪ್ರತ್ಯೇಕ ಶೌಚಗೃಹ, ವಿಶ್ರಾಂತಿ ಗೃಹ, ರಾತ್ರಿ ಉಳಿಯಲು ಕೊಠಡಿ ಇರುವುದು ವಿಶೇಷವಾಗಿದೆ. ದೂರುದಾರರು ಮತ್ತು ಸಾರ್ವಜನಿಕರು ಠಾಣೆಗೆ ಬಂದಾಗ ಅವರಿಗೆ ಕೂರಲು ಸ್ಥಳ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಒದಗಿಸಲಾಗಿದೆ. ಹಳೆಯ ಕೇಸ್ಗಳಿಗೆ ಸಂಬಂಧಿಸಿದ ರೆಕಾರ್ಡ್, ಜಪ್ತಿ ಮಾಡಿದ ವಸ್ತುಗಳ, ಸಶಸಗಳ ಸಂಗ್ರಹ ಸೇರಿದಂತೆ ಪ್ರತಿಯೊಂದು ವಿಭಾಗಕ್ಕೂ ಪ್ರತ್ಯೇಕ ಕೊಠಡಿ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ್, ಡಿಜಿಪಿ ಡಾ.ಕೆ. ರಾಮಚಂದ್ರ ರಾವ್, ಐಜಿಪಿ ಡಾ.ಬಿ. ಆರ್. ರವಿಕಾಂತೇಗೌಡ, ಜಿಲ್ಲಾ…
Author: AIN Author
ಕಳೆದ ಒಂದು ವರ್ಷದಿಂದ ಸುದ್ದಿ ಮಾಡುತ್ತಿದೆ. ಅವರ್ ಬಿಟ್ ಇವರ್ ಬಿಟ್ ಇನ್ಯಾರ್ ಎನ್ನುವ ಹಂತಕ್ಕೆ ಬಂದು ಹೋಗಿ ಬಹಳ ತಿಂಗಳಾದವು. ಈಗ ನಿರ್ದೇಶಕರು ಪಕ್ಕಾ ಆಗಿದ್ದಾರೆ. ಸಕಲ ತಂತ್ರಜ್ಞರೂ ಯುದ್ಧಕ್ಕೆ ಹೊರಡಲು ಸಿದ್ದರಾಗಿದ್ದಾರೆ. ಕ್ಯಾಮೆರಾ ಆನ್ ಆಗಲು ಚಡಪಡಿಸುತ್ತಿದೆ. ಇಷ್ಟಿದ್ದರೂ ಹೀಗಿದ್ದರೂ ಯಶ್ (Yash) ಮಾತ್ರ ಇನ್ ಸೈಲೆಂಟ್ ಮೋಡ್. ದಸರಾ ಹೊತ್ತಿಗೆ ಹೊಸ ಸಿನಿಮಾ ಘೋಷಣೆ ಎನ್ನಲಾಗಿತ್ತು. ಅದು ಹೋಯಿತು. ದೀಪಾವಳಿಗೆ ಪಕ್ಕಾ ಎಂದರು. ಇಲ್ಲ…ಅದಕ್ಕೂ ಕಲ್ಲು ಬಿದ್ದಿದೆ. ಭಕ್ತಗಣ ಕೊತಕೊತ ಕುದಿಯುತ್ತಿದೆ. ಯಾವಾಗ ಸಿನಿಮಾ ಎನ್ನುತ್ತಾ ಧರಣಿ ಮಾಡಲು ಸಜ್ಜಾಗಿದೆ. ದೀಪಾವಳಿ (Deepavali) ಹಬ್ಬಕ್ಕೆ ಟೈಟಲ್ ಅನೌನ್ಸ್ಮೆಂಟ್ ಫಿಕ್ಸ್ ಆಗಿದ್ದು ನಿಜವಾ ಅಥವಾ ಅವರವರೇ ಅಂದುಕೊಂಡಿದ್ದಾ ಎಲ್ಲವೂ ನಿಗೂಢ. ಈಗಾಗಲೇ ಕತೆ, ಚಿತ್ರಕತೆ, ಸಂಭಾಷಣೆ ಸಹಿತ ಸಕಲವೂ ಪೇಪರ್ ಮೇಲೆ ಬಂದು ಕುಳಿತಿದೆ. ಅದಕ್ಕೆ ಆಕ್ಷನ್ ಕಟ್ ಹೇಳಲು ಮಲಯಾಳಂ ನಿರ್ದೇಶಕಿ ಗೀತು ಮೋಹನ್ದಾಸ್ ತಯಾರಾಗಿದ್ದಾರೆ. ಮೊಟ್ಟ ಮೊದಲ ಬಾರಿಗೆ ಕಮರ್ಶಿಯಲ್ ಸಿನಿಮಾ, ಅದೂ ಯಶ್ ಜೊತೆ…
ಪಾಟ್ನಾ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹರಿದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಸಚಿವರೊಬ್ಬರು ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬಿಹಾರದ ಜಮುಯಿ ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ನಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಹತ್ಯೆ ಮಾಡಲಾಯಿತು. ಘಟನೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಬಿಹಾರ ಸಚಿವ ಚಂದ್ರಶೇಖರ್, ಇಂತಹ ಘಟನೆಗಳು ಹೊಸದೇನಲ್ಲ. ಇವುಗಳು ನಡೆಯುತ್ತಲೇ ಇರುತ್ತವೆ. ಈ ಹಿಂದೆಯೂ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಇಂತಹ ಘಟನೆಗಳು ನಡೆದಿವೆ ಎಂದು ಹೇಳಿಕೆ ನೀಡಿದ್ದಾರೆ. ಪ್ರಕರಣದ ಆರೋಪಿಗಳಿಗೆ ಕಾನೂನಿನ ಪ್ರಕಾರ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದ್ದಾರೆ. https://ainlivenews.com/are-we-stupid-to-believe-hd-kumaraswamys-words-dcm-question/ ಜಮುಯಿಯ ಮಹುಲಿಯಾ ತಾಂಡ್ ಗ್ರಾಮದಲ್ಲಿ ಈ ಹತ್ಯೆ ಘಟನೆ ನಡೆದಿದೆ. ಮೃತರನ್ನು ಪ್ರಭಾತ್ ರಂಜನ್ ಎಂದು ಗುರುತಿಸಲಾಗಿದ್ದು, ಸಿವಾನ್ ಜಿಲ್ಲೆಯ ನಿವಾಸಿಯಾಗಿದ್ದಾರೆ. ಗರ್ಹಿ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿದ್ದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟೊತ್ತಿಗಾಗಲೇ…
ದೊಡ್ಡಬಳ್ಳಾಪುರ: ಬಯಲಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕಿಯ ಮೇಲೆ ಬೀದಿನಾಯಿ ದಾಳಿ ಮಾಡಿದ್ದು, ಬಾಲಕಿಯ ಕುತ್ತಿಗೆಗೆ ಬಾಯಾಕಿದೆ, ಬೆನ್ನಿನ ಮೇಲೆ ಎರಗಿ ಬಿದ್ದಿದೆ, ಅದೃಷ್ಟವಶಾತ್ ಸಂಬಂಧಿಕರು ಅದೇ ಸಮಯಕ್ಕೆ ಅಲ್ಲಿಗೆ ಬಂದಿದ್ದು ಬಾಲಕಿ ಪ್ರಾಣಾಪಾಯದಿಂದ ಪಾರಾಗಾಗಲು ಸಾಧ್ಯವಾಗಿದೆ. ದೊಡ್ಡಬಳ್ಳಾಪುರ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದ್ದು, ರಾಜೀವ್ ರವರ ನಾಲ್ಕು ವರ್ಷದ ಮಗಳು ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ, ಬಯಲಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಸ್ವೀಕೃತಿ ಮನೆಯತ್ತ ಬರುತ್ತಿದ್ದಳು, ಈ ವೇಳೆ ಬೀದಿನಾಯೊಂದು ಪುಟ್ಟ ಬಾಲಕಿಯ ಮೇಲೆ ಎರಗಿದೆ, ಆಕೆಯ ಕುತ್ತಿಗೆ ಭಾಗಕ್ಕೆ ಬಾಯಾಕಿದೆ, ಬೆನ್ನಿನ ಮೇಲೆ ಬಲವಾಗಿ ಪರಚಿದೆ, ಬಾಲಕಿಯ ಅದೃಷ್ಟಕ್ಕೆ ಅದೇ ಸಮಯಕ್ಕೆ ಸಂಬಂಧಿಕರೊಬ್ಬರು ಅಲ್ಲಿಗೆ ಬಂದಿದ್ದಾರೆ, ನಾಯಿಯಿಂದ ಬಾಲಕಿಯ ರಕ್ಷಣೆ ಮಾಡಿದ್ದಾರೆ, ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಭಾಗಕ್ಕೆ ಬಾಯಾಕಿದ್ರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು…
ವಾಟ್ಸಾಪ್ ಇತ್ತೀಚೆಗೆ ಹೊಸ ಗೌಪ್ಯತೆ ವೈಶಿಷ್ಟ್ಯನ್ನು ಹೊರತಂದಿದೆ. ಅದೇ ಐಪಿ ಪ್ರೊಟೆಕ್ಷನ್ ಫೀಚರ್. ಈ ಫೀಚರ್ ವಾಟ್ಸಾಪ್ ಕರೆಯಲ್ಲಿ ಇರುವ ಇತರರಿಗೆ ನಿಮ್ಮ ಐಪಿ ವಿಳಾಸವನ್ನು ಮರೆ ಮಾಚುತ್ತದೆ. ಈ ವೈಶಿಷ್ಟ್ಯ ಸಕ್ರಿಯವಾಗಿದ್ದಾಗ, ನಿಮ್ಮ ಕರೆಗಳನ್ನು ನೇರವಾಗಿ ಡಿವೈಸ್ ಬದಲಾಗಿ ವಾಟ್ಸಾಪ್ ಸರ್ವರ್ಗಳ ಮೂಲಕ ಕಳುಹಿಸಲಾಗುತ್ತದೆ. ಇದರಿಂದ ನಿಮ್ಮ ಸ್ಥಳವನ್ನು ಟ್ರ್ಯಾಕ್ ಮಾಡಲು ಇತರರಿಗೆ ಹೆಚ್ಚು ಕಷ್ಟಕರವಾಗಿಸುತ್ತದೆ. ಪ್ರಸ್ತುತ ಈ ವೈಶಿಷ್ಟ್ಯ ಸೀಮಿತ ಬಳಕೆದಾರರಿಗೆ ಮಾತ್ರ ಲಭ್ಯವಿದ್ದು, ಶೀಘ್ರದಲ್ಲೇ ಎಲ್ಲರಿಗೂ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ವಾಟ್ಸಾಪ್ ಕರೆಯಲ್ಲಿ ಇತರರು ಭಾಗವಹಿಸುವವರಿಂದ ನಿಮ್ಮ ಐಪಿ ವಿಳಾಸವನ್ನು ಮರೆಮಾಡುವ ಮೂಲಕ ಇದು ನಿಮ್ಮ ಗೌಪ್ಯತೆಯನ್ನು ರಕ್ಷಿಸುತ್ತದೆ. ಇದು ನಿಮ್ಮ ಸ್ಥಳವನ್ನು ಟ್ರ್ಯಾಕ್ ಮಾಡಲು ಇತರರಿಗೆ ಹೆಚ್ಚು ಕಷ್ಟಕರವಾಗಿಸುತ್ತದೆ. ನಿಮ್ಮ ವಾಟ್ಸಾಪ್ ಕರೆಗಳ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ ನಿಮಗೆ ಚೆನ್ನಾಗಿ ತಿಳಿದಿಲ್ಲದ ಜನರಿಗೆ ನೀವು ಕರೆಗಳನ್ನು ಮಾಡುತ್ತಿದ್ದರೆ ಅಥವಾ ನಿಮ್ಮ ಗೌಪ್ಯತೆಯ ಬಗ್ಗೆ ನೀವು ಕಾಳಜಿ ವಹಿಸುತ್ತಿದ್ದರೆ ಇದು ವಿಶೇಷವಾಗಿ ಮುಖ್ಯವಾದ ವೈಶಿಷ್ಟ್ಯವಾಗಿದೆ. ವಾಟ್ಸಾಪ್ನ…
ದಕ್ಷಿಣದ ಖ್ಯಾತ ನಟಿ ತಮನ್ನಾ (Tamannaah) ಮತ್ತು ಬಾಲಿವುಡ್ ನಟ ವಿಜಯ್ ವರ್ಮಾ (Vijay Varma) ಲವ್ವಿಡವ್ವಿ ವಿಚಾರ ಗುಟ್ಟಿನ ಸಂಗತಿಯೇನೂ ಅಲ್ಲ. ಇಬ್ಬರೂ ಒಟ್ಟೊಟ್ಟಿಗೆ ಪ್ರವಾಸ ಮಾಡುತ್ತಿದ್ದಾರೆ, ಹಲವಾರು ಪ್ರಾಜೆಕ್ಟ್ ಗಳಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಇದೀಗ ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲು ನಿರ್ಧರಿಸಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. 2024 ಫೆಬ್ರವರಿಯಲ್ಲಿ ಅವರು ಮದುವೆ (Marriage) ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಮದುವೆ ವಿಚಾರವನ್ನು ಈ ಜೋಡಿ ಅಧಿಕೃತವಾಗಿ ಹೇಳದೇ ಇದ್ದರೂ, ಮಾಧ್ಯಮಗಳ ಜೊತೆ ಮಾತನಾಡಿರುವ ವಿಜಯ್ ವರ್ಮಾ, ‘ನನಗೆ ತಮನ್ನಾ ಮೇಲೆ ಮತ್ತಷ್ಟು ಪ್ರೀತಿಯಾಗಿದೆ (Love). ಹೆಚ್ಚೆಚ್ಚು ಪ್ರೀತಿ ಮೂಡುತ್ತಿದೆ’ ಎಂದು ಹೇಳುವ ಮೂಲಕ ತಮ್ಮಿಬ್ಬರ ನಡುವಿನ ಡೇಟಿಂಗ್ ಅನ್ನು ಖಚಿತ ಪಡಿಸಿದ್ದಾರೆ. ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ವರ್ಮಾ ಜೊತೆ ತಮನ್ನಾ ಲಿಪ್ ಲಾಕ್ ಮಾಡಿಕೊಂಡ ವೀಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ (Dating) ವಿಚಾರವನ್ನು ತಳ್ಳಿ…
ಬೆಂಗಳೂರು:- ರಾಜ್ಯ ಬಿಜೆಪಿಯ ನೊಗ ಹೊತ್ತ ಬಿ.ವೈ.ವಿಜಯೇಂದ್ರ ಮೊದಲ ದಿನದಿಂದಲೇ ತಮ್ಮ ಕಾರ್ಯಶೈಲಿಯನ್ನು ನಾಡಿಗೆ ಪರಿಚಯಿಸಿದರು. ರಾಜ್ಯಾಧ್ಯಕ್ಷ ಸ್ಥಾನ ವಹಿಸಿಕೊಂಡ ಬಳಿಕ ಮಾತನಾಡಿದ ವಿಜಯೇಂದ್ರ, ರಾಷ್ಟ್ರೀಯ ನಾಯಕರು, ಸಂಘ ಪರಿವಾರದ ಪ್ರಮುಖರು, ಕಾರ್ಯಕರ್ತರು ಇಟ್ಟ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ. ಎಲ್ಲ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸೋಲಿನ ಕಹಿ ಒಪ್ಪಿಕೊಂಡು ಮುಂದಿನ ಜಯಕ್ಕೆ ಹೋರಾಡುತ್ತೇನೆ. ಆ ಜಾತಿ ಈ ಜಾತಿ ಎನ್ನದೇ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ, ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಾಗುತ್ತೇನೆ ಎಂದು ತಿಳಿಸಿ, ಎಲ್ಲರನ್ನೂ ಒಳಗೊಳ್ಳುವ ನಾಯಕನಾಗಲು ಸಹಕಾರ ಯಾಚಿಸಿದರು. ರಾಜ್ಯದಲ್ಲಿ ಭೀಕರ ಬರಗಾಲ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಹರಿಹಾಯ್ದರು. ನಾವೇನು ಆಪರೇಷನ್ ಕಮಲ ಮಾಡಲ್ಲ. ಆಡಳಿತ ಪಕ್ಷದ ಶಾಸಕರೇ ರಸ್ತೆಯಲ್ಲಿ ಓಡಾಡದ ಸ್ಥಿತಿ ನಿರ್ವಣವಾಗಿದೆ. ಶಾಸಕರಿಗೆ ಯಾವುದೇ ಅನುದಾನ ಸಿಗುತ್ತಿಲ್ಲ. ದುಷ್ಟ ಸರ್ಕಾರಕ್ಕೆ ಜನರೇ ಪಾಠ ಕಲಿಸುತ್ತಾರೆ ಎಂದರು. ಉಪ ಚುನಾವಣೆಗಳಲ್ಲಿ ತಮ್ಮ ಸಾಮರ್ಥ್ಯ ತೋರಿಸಿ ರಾಷ್ಟ್ರೀಯ ನಾಯಕರ ಗಮನ ಸೆಳೆದಿದ್ದ ಬಿ.ವೈ ವಿಜಯೇಂದ್ರ ಮುಂದೆ ಬೆಟ್ಟದಷ್ಟು…
ಕ್ಯಾನ್ಬೆರಾ: ಆಸ್ಟ್ರೇಲಿಯಾದಲ್ಲಿ (Australia) ನಡೆದ ಗೋಲ್ಡ್ ಕೋಸ್ಟ್ನ ಪ್ರೀಮಿಯರ್ ಲೀಗ್ನಲ್ಲಿ (Gold Coast’s Premier League) 3ನೇ ಡಿವಿಷನ್ ಕ್ಲಬ್ ಕ್ರಿಕೆಟಿಗನೊಬ್ಬ ಒಂದೇ ಓವರ್ನಲ್ಲಿ 6 ವಿಕೆಟ್ ಕಿತ್ತು ಹಲವು ದಾಖಲೆಗಳನ್ನ ಉಡೀಸ್ ಮಾಡಿದ್ದಾರೆ. 3ನೇ ಡಿವಿಷನ್ ಕ್ಲಬ್ ಕ್ರಿಕೆಟಿಗ ಡಿಸ್ಟ್ರಿಕ್ಟ್ ಕ್ರಿಕೆಟ್ ಕ್ಲಬ್ನ ನಾಯಕ ಗರೆಥ್ ಮಾರ್ಗನ್ 6 ವಿಕೆಟ್ ಪಡೆದು ಸಾಧನೆ ಮಾಡಿದ್ದಾರೆ. ಗೋಲ್ಡ್ ಕೋಸ್ಟ್ ಲೀಗ್ನಲ್ಲಿ ಸರ್ಫರ್ಸ್ ಪ್ಯಾರಡೈಸ್ ಸಿಸಿ (Surfers Paradise CC) ವಿರುದ್ಧ ನಡೆದ ಪಂದ್ಯದಲ್ಲಿ ಡಿಸ್ಟ್ರಿಕ್ ಕ್ರಿಕೆಟ್ ಕ್ಲಬ್ ರೋಚಕ 4 ರನ್ಗಳ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ. 40 ಓವರ್ಗಳ ಪಂದ್ಯ ಇದಾಗಿತ್ತು. ಎದುರಾಳಿ ತಂಡ ನೀಡಿದ 178 ರನ್ಗಳ ಗುರಿ ಬೆನ್ನತ್ತಿದ್ದ ಪ್ಯಾರಡೈಸ್ ಸಿಸಿ 39 ಓವರ್ಗಳಲ್ಲಿ 174 ರನ್ ಕಲೆಹಾಕಿ, 4 ವಿಕೆಟ್ ಕಳೆದುಕೊಂಡಿತ್ತು. ಕೊನೆಯ ಓವರ್ನಲ್ಲಿ ಗೆಲುವಿಗೆ 4 ರನ್ಗಳ ಅಗತ್ಯವಿತ್ತು. ಈ ವೇಳೆ ಬೌಲಿಂಗ್ನಲ್ಲಿ ಚಾಣಾಕ್ಷತೆ ಪ್ರದರ್ಶಿಸಿದ ಮಾರ್ಗನ್ ಒಂದೇ ಓವರ್ನಲ್ಲಿ 6 ವಿಕೆಟ್ಗಳನ್ನ ಕಬಳಿಸಿದರು. ಈ ಮೂಲಕ…
ಕೊಪ್ಪಳ :- BYV ರಾಜ್ಯಾಧ್ಯಕ್ಷರಾಗಿದಕ್ಕೆ ಖುಷಿಯೂ ಇಲ್ಲ, ಬೇಸರವೂ ಇಲ್ಲ ಸಮಚಿತ್ತದಲ್ಲಿರುವೆ ಎಂದು ಸಿ.ಟಿ.ರವಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಖುಷಿ ಅಂತನೂ ಅಲ್ಲ. ಬೇಸರ ಅಂತನೂ ಅಲ್ಲ. ಸಮಚಿತ್ತದಲ್ಲಿ ಇದ್ದೇನೆ ಎಂದು ಹೇಳಬಹುದು. ಬಂದಿದ್ದನ್ನು ಸ್ವೀಕರಿಸುವ ಅಭ್ಯಾಸ ನನಗಿದೆ. ಈ ಹುದ್ದೆ ನನಗೇ ಸಿಗಬೇಕಿತ್ತು ಎನ್ನುವ ನಿರೀಕ್ಷೆಯಲ್ಲಿ ನಾನೇನೂ ಇರಲಿಲ್ಲ. ಹಾಗಾಗಿಯೇ ನಾನು ಅದಕ್ಕಾಗಿ ಯಾವುದೇ ರೀತಿಯ ಪ್ರಯತ್ನ ಮಾಡಿಲ್ಲ. ರಾಜಕೀಯದಲ್ಲಿದ್ದವರು ಪ್ರಯತ್ನ ಮಾಡುವುದಿಲ್ಲ ಎಂದರೆ ಯಾರೂ ನಂಬುವುದಿಲ್ಲ. ಆದರೆ, ಇದು ಸತ್ಯ. ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಅಧಿಕಾರವಲ್ಲ, ಒಂದು ಜವಾಬ್ದಾರಿ ಎಂಬ ಮಾತನ್ನು ಮೊದಲೇ ಹೇಳಿದ್ದೆ. ಅದನ್ನು ಪಕ್ಷದ ದೊಡ್ಡವರು ಕುಳಿತು ತಿರ್ಮಾನಿಸುವಂಥದ್ದು. ಹಿಂದೆಯೂ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ, ಮುಖ್ಯಮಂತ್ರಿ ಹುದ್ದೆ ಬದಲಾವಣೆ ವೇಳೆಯೂ ನನ್ನ ಹೆಸರು ಕೇಳಿಬಂದಿತ್ತು. ರಾಜ್ಯಾಧ್ಯಕ್ಷ ಹುದ್ದೆಗೆ ನನ್ನ ಹೆಸರು ಕೇಳಿಬಂದಿದ್ದು ಇದೇ ಮೊದಲೇನಲ್ಲ. ಮೂರು ಬಾರಿ ಪ್ರಸ್ತಾಪವಾಗಿತ್ತು. ಆ ಸ್ಥಾನವನ್ನು ವಹಿಸಿಕೊಳ್ಳುವ ಯೋಗ್ಯತೆ ಇದೆ ಎಂಬ ರೀತಿಯಲ್ಲಿ ನನ್ನ ಹೆಸರು ಪ್ರಸ್ತಾಪವಾಗಿದ್ದಕ್ಕೆ ಸಂತೋಷಪಡುತ್ತೇನೆ.…
ಯಾದಗಿರಿ: ಅಕಾಲಿಕ ಮಳೆಗೆ ವಡಗೇರಾ ತಾಲೂಕಿನ ಗುರುಸಣಗಿ ಗ್ರಾಮದಲ್ಲಿ ನೂರಾರು ಎಕರೆ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಕಳೆದ 4 ದಿನಗಳಿಂದ ಸುರಿದ ಮಳೆಗೆ ನೂರಾರು ಎಕರೆ ಭತ್ತ ನೆಲಸಮವಾಗಿದೆ. ಬರಗಾಲದ ಮಧ್ಯೆಯೂ ರೈತರು ನದಿ ನೀರು ಬಳಸಿ ಭತ್ತ ಬೆಳೆದಿದ್ದರು. ನಾಲ್ಕೈದು ದಿನಗಳ ಬಳಿಕ ಭತ್ತ ಕಟಾವು ಮಾಡುತ್ತಿದ್ದರು. ಇದೀಗ ಬೆಳೆ ನಾಶವಾಗಿದ್ದು, ಇದೀಗ ರೈತರ ಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.