ಬೆಂಗಳೂರು: ಬಿಜೆಪಿ ಜೊತೆ ಮೈತ್ರಿ ಬೆನ್ನಲ್ಲೇ ಜೆಡಿಎಸ್ ಪಕ್ಷವು ಹಿಂದುತ್ವ ಬಗ್ಗೆ ಒಲವು ತೋರಿದೆ. ಡಿ.6ರಂದು ಮಾಜಿ ಸಿಎಂ H.D.ಕುಮಾರಸ್ವಾಮಿ, ಪಕ್ಷದ ಶಾಸಕರಿಗೂ ದತ್ತಮಾಲೆ ಧರಿಸಲಿದ್ದಾರೆ. https://ainlivenews.com/probationary-psi-arrested-for-extorting-money-from-someone/ ಇನ್ನು, ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ HDK ಮಾತನಾಡಿ. ನಮ್ಮ ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ ಅವರಿಗೆ ಅವರ ಧರ್ಮದ ಬಗ್ಗೆ ಅಷ್ಟು ಅಭಿಮಾನ ಇದೆ. ಜಾತ್ಯತೀತತೆ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ಸಿಗರಿಗೆ ಯಾವ ಯೋಗ್ಯತೆ ಇದೆ. ನಮ್ಮ ಧರ್ಮದ ಧರ್ಮಾಭಿಮಾನಕ್ಕೆ ನಾನು ಭಯ ಪಡ್ತೀನಾ?. ಹಾಕೋ ಸಮಯ ಬಂದ್ರೆ ದತ್ತಮಾಲೆಯನ್ನ ಹಾಕ್ತೀನಿ ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
Author: AIN Author
ಚಿತ್ರದುರ್ಗ: 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಗಳ ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಚಿತ್ರದುರ್ಗದ ಮುರುಘಾಶ್ರೀಗೆ ಇದೀಗ ಮತ್ತೆ ಬಂಧನದ ಭೀತಿ ಶುರುವಾಗಿದೆ. ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ ಅವರು ಕೋರ್ಟ್ಗೆ ಆಗಮಿಸಿದ್ದು, ಕೋರ್ಟ್ ಆದೇಶ ಪಡೆದುಕೊಳ್ಳಲಿದ್ದಾರೆ. ಬಳಿಕ ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀ ಅವರನ್ನು ಬಂಧಿಸುವ ಸಾಧ್ಯತೆಗಳಿವೆ. ಮತ್ತೊಂದೆಡೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಅರೆಸ್ಟ್ ವಾರೆಂಟ್ಅನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲು ಮುರುಘಾ ಶರಣರ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರು: ರೌಡಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ಅಕ್ರಮ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಂಪೂರ್ಣ ತ್ಯಜಿಸಬೇಕು ಎಂದು ಡಿವೈಎಸ್ಪಿ ಪಿ.ರವಿ ಹೇಳಿದರು. ನಗರದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರೌಡಿ ಶೀಟರ್ಗಳ ಪರೇಡ್ನಲ್ಲಿ ಎಚ್ಚರಿಕೆ ನೀಡಿದರು. ರೌಡಿಸಂ ಜೀವನವನ್ನು ಹಾಳು ಮಾಡುವುದಲ್ಲದೆ, ಜೀವನ ಪರ್ಯಂತ ರೌಡಿಶೀಟರ್ ಪಟ್ಟಕಟ್ಟಿಕೊಂಡು ಬದುಕಬೇಕಾಗುತ್ತದೆ. ಆದರೆ, ನೆಮ್ಮದಿ ಜೀವನಕ್ಕಾಗಿ ಕೂಲಿ ಕೆಲಸ ಮಾಡಿದರೂ ಪರವಾಗಿಲ್ಲ, ಕುಟುಂಬದೊಂದಿಗೆ ಖುಷಿಯಿಂದ ಜೀವನ ಸಾಗಿಸಬಹುದು, ರೌಡಿ ಚಟುವಟಿಕೆ, ಕಾನೂನು ಬಾಹಿರ ಕೆಲಸಗಳು, ಹೀಗೆ ಮುಂದುವರೆದರೆ, ಜಿಲ್ಲೆಯಿಂದಲೇ ಗಡಿಪಾರು ಮಾಡಲಾಗುವುದು. https://ainlivenews.com/cauvery-water-supply-to-110-villages-of-bangalore-is-impossible/ ಹತ್ತು ಇಪ್ಪತ್ತು ವರ್ಷಗಳಾದರೂ ರೌಡಿಶೀಟರ್ ಪಟ್ಟ ಹೋಗುವುದಿಲ್ಲ. ಕಳ್ಳತನ, ಕೊಲೆ, ದೌರ್ಜನ್ಯ ಮಾಡಿದರೆ, ತಪ್ಪಿಸಿಕೊಳ್ಳಲು ಆಗುವುದಿಲ್ಲ. ಕಾನೂನು ಬಿಗಿಯಾಗಿದೆ. ಕುಟುಂಸ್ಥರು ಗೌರವ ನೀಡುವಷ್ಟು, ರೀತಿಯಲ್ಲಿಯಾದರೂ ಜೀವನ ಮಾಡಿ, ಪೊಲೀಸರಿಗೆ ತಿಳಿಯದಂತೆ ಸ್ಥಳ, ಫೋನ್ ನಂಬರ್ ಬದಲಾವಣೆ ಮಾಡಬಾರದು. ಕಾನೂನಿಗೆ ಬೆಲೆಕೊಟ್ಟು ಸಮಾಜದಲ್ಲಿ ಒಳ್ಳೆಯವರಾಗಿ ಬದುಕಿ, ಮಾದರಿ ಜೀವನ ನಡೆಸಿದರೆ, ರೌಡಿಶೀಟರ್ ಬಂದ್ ಮಾಡಲಾಗುವುದು ಎಂದರು.…
ಬೆಂಗಳೂರು: ಮಹಾರಾಷ್ಟ್ರದ ನಾಸಿಕ, ಸೊಲ್ಲಾಪುರದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಳದಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ. ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆಯಿಂದಾಗಿ ಬೆಳೆಯೂ ಸರಿಯಾಗಿ ರೈತರ ಕೈ ಸೇರಿಲ್ಲ. ಇದೀಗ ದಿಢೀರ್ ಬೆಲೆ ಏರಿಕೆಯಿಂದ ಎಲ್ಲರೂ ಚಡಪಡಿಸುವಂತಾಗಿದೆ. ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆಯಾದರೆ ಕ್ವಿಂಟಾಲ್ಗೆ 8000 ರಿಂದ 9000 ರೂ.ಗೆ ಏರುವ ಸಾಧ್ಯತೆಯಿದೆ. ಇದರಿಂದಾಗಿ ಚಿಲ್ಲರೆ ವ್ಯಾಪಾರಿಗಳು ಕೆಜಿಗೆ 100 ರಿಂದ 120 ರೂ. ವರೆಗೆ ಮಾರಾಟ ಮಾಡುವ ಸಾಧ್ಯತೆ ಇದೆ ಎಂದು ಸಗಟು ವ್ಯಾಪಾರಿಗಳು ಅಭಿಪ್ರಾಯಪಡುತ್ತಿದ್ದಾರೆ. ದಿನಬಳಕೆ ವಸ್ತುಗಳು ಬೆಲೆ ಏರಿಕೆಯಿಂದಾಗಿ ಹೋಟೆಲ್ ಉದ್ಯಮ ಸಂಕಷ್ಟದಲ್ಲಿದ್ದು , ಇದೀಗ ಈರುಳ್ಳಿ ಬೆಲೆ ಏರಿಕೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹಾಗಾಗಿ ಬಹುತೇಕ ಗೃಹಣಿಯರು ಅಡುಗೆಯಲ್ಲಿಈರುಳ್ಳಿಯ ಬದಲು ಎಲೆಕೋಸು ಬಳಕೆ ಹೆಚ್ಚು ಮಾಡಿದ್ದಾರೆ. ಉತ್ತಪ್ಪ, ದೋಸೆ, ಪಲಾವ್, ಮಸಾಲಬಾತ್, ರಾಯಿತಾದಲ್ಲಿಈರುಳ್ಳಿ ಬಳಕೆ ಅನಿವಾರ್ಯವಾಗಿದೆ. ಆದರೆ ಈಗ ಈರುಳ್ಳಿಯ ದರ ಏರಿಕೆಯಾಗಿರುವುದರಿಂದ ಅದರ ಬಳಕೆ ಕಡಿಮೆಗೊಳಿಸುವದಕ್ಕೆ ಸರ್ಕಸ್ ಮಾಡುವಂತಾಗಿದೆ.
ವಿಭಿನ್ನ ಶೈಲಿಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಾಯಾನಗರಿ (Mayanagari) ಚಿತ್ರದ ಲಚ್ಚಿ ಲಚ್ಚಿ ಹಾಡಿನ (Song) ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೀಲ್ಸ್ ನಲ್ಲೇ ಫೇಮಸ್ ಆಗಿ, ಲಕ್ಷಾಂತರ ಫಾಲೋವರ್ಸ್ ಹೊಂದಿರುವ 5 ವರ್ಷದ ಮಗು ನಿಶಿತಾ ಕೈಲಿ ಲಚ್ಚಿ ಹಾಡನ್ನು ಬಿಡುಗಡೆಗೊಳಿಸಲಾಯಿತು ಅನೀಶ್ ತೇಜೇಶ್ವರ್ (Anish Tejeshwar), ತೇಜು ಹಾಗೂ ಶ್ರಾವ್ಯರಾವ್ (Shravya Rao) ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಶಂಕರ್ ಆರಾಧ್ಯ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರರಂಗದಲ್ಲಿ ನಡೆಯುವ ಒಂದಷ್ಟು ಸತ್ಯ ಘಟನೆಗಳನ್ನಿಟ್ಟುಕೊಂಡು ಶಂಕರ್ ಆರಾಧ್ಯ ಈ ಚಿತ್ರವನ್ನು ನಿರೂಪಿಸಿದ್ದಾರೆ. ಮಾಯಾನಗರಿ ಇದೀಗ ಬಿಡುಗಡೆಗೆ ಸಿದ್ದವಾಗಿದ್ದು ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿ ವೈರಲ್ ಆಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್, ಈ ಹಾಡು ನಮ್ಮ ಚಿತ್ರಕ್ಕೆ ಟ್ರಂಪ್ ಕಾರ್ಡ್ ಆಗುತ್ತೆ ಅಂತ ಕಲರ್ ಫುಲ್ ಆಗಿಯೇ ಶೂಟ್ ಮಾಡಿದ್ದೇವೆ. ಕಂಠೀರವ ಸ್ಟುಡಿಯೋ ಹಾಗೂ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ 6 ದಿನ…
ಹಾಸನ: ದೂರು ಕೊಟ್ಟ ಪತ್ನಿಗೆ ಪತಿ ಠಾಣೆಯಲ್ಲೇ ಇರಿದ ಘಟನೆಯೊಂದು ಹಾಸನದಲ್ಲಿ (Hassan) ನಡೆದಿದೆ. ಗಾಯಾಳು ಪತ್ನಿಯನ್ನು ಶಿಲ್ಪ ಎಂದು ಗುರುತಿಸಲಾಗಿದ್ದು, ಈಕೆಯ ಕೊಲೆಗೆ ಪತಿ ಹರೀಶ್ ಯತ್ನಿಸಿದ್ದಾನೆ. ಈ ಘಟನೆ ಹಾಸನದ ಮಹಿಳಾ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಆರು ವರ್ಷದ ಹಿಂದೆ ಮದುವೆಯಾಗಿದ್ದ ಶಿಲ್ಪಾ- ಹರೀಶ್, ಪರಸ್ಪರ ಅನುಮಾನದಿಂದ ಜಗಳ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಅಂತೆಯೇ ಗಂಡನಿಂದ ಕಿರುಕುಳ ಎಂದು ಶಿಲ್ಪಾ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. https://ainlivenews.com/geo-scientist-statue-murder-case-explosive-issue-comes-to-light-during-investigation/ ಪತ್ನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪತಿ ಹರೀಶ್ ನನ್ನು ಕರೆಸಿ ವಿಚಾರಣೆ ನಡೆಸುತ್ತಿದ್ದಾಗಲೇ ಹತ್ಯೆಗೆ ಯತ್ನ ನಡೆದಿದೆ. ಆದರೆ ಪೊಲೀಸರ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದತ ತಪ್ಪಿದೆ. ಚಾಕು ಕಿತ್ತುಕೊಂಡು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತ ಗಾಯಾಳು ಶಿಲ್ಪಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಪ್ಪಳ: ಗ್ಯಾರಂಟಿ ಯೋಜನೆಯನ್ನು ಪ್ರಧಾನಿ ಮೋದಿ ವಿರೋಧಿಸಿದ್ದರು. ಇದೀಗ ಪ್ರಧಾನಿ ಮೋದಿಯೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ ಎಂದು ಕೊಪ್ಪಳದಲ್ಲಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. https://ainlivenews.com/geo-scientist-statue-murder-case-explosive-issue-comes-to-light-during-investigation/ BJP ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗ್ಯಾರಂಟಿ ಜಾರಿ ಅಂತಿದ್ದಾರೆ. ಬಿಜೆಪಿ ಯಾವತ್ತೂ ನುಡಿದಂತೆ ನಡೆಯಲ್ಲ. ಬಿಜೆಪಿಯವರು ಏನೇ ಹೇಳಿದ್ರು ಕೂಡ ಜನರು ನಂಬುವುದಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಜನವರಿಗೂ ಕಾವೇರಿ ನೀರು ದೊರೆಯುವುದು ಅಸಾಧ್ಯವಾಗಿದ್ದು, ಇದರಿಂದ ಈ ಹಳ್ಳಿಗಳ ಜನರಿಗೆ ಇನ್ನಷ್ಟು ದಿನ ಕೊಳವೆಬಾವಿ ನೀರೇ ಗತಿಯಾಗಲಿದೆ. https://ainlivenews.com/big-shock-for-bangalore-residents-power-outage-for-three-days/ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ 5ನೇ ಹಂತದ ಯೋಜನೆಯನ್ನು 2024 ಜನವರಿಗೆ ಅನುಷ್ಠಾನಗೊಳಿಸುವುದಾಗಿ ಬೆಂಗಳೂರು ಜಲಮಂಡಳಿ ತಿಳಿಸಿತ್ತು. ಆದರೆ, ಇನ್ನೂ ಶೇ.20ರಷ್ಟು ಕೆಲಸಗಳು ಬಾಕಿಯಿರುವ ಕಾರಣ, ಇಲ್ಲಿನ ಜನರಿಗೆ ಕಾವೇರಿ ನೀರು ಸಿಗಲು ಮತ್ತಷ್ಟು ದಿನಗಳು ಕಾಯಬೇಕಿದೆ. 110 ಹಳ್ಳಿಗಳು ಬಿಬಿಎಂಪಿ ವ್ಯಾಪ್ತಿಗೆ ಸೇರಿ 15 ವರ್ಷಗಳಾಗಿವೆ. 2007ರಲ್ಲಿ 5 ವಲಯಗಳಾದ ಬೊಮ್ಮನಹಳ್ಳಿ ವಲಯಕ್ಕೆ 33, ಮಹದೇವಪುರಕ್ಕೆ 23, ರಾಜರಾಜೇಶ್ವರಿ ನಗರಕ್ಕೆ 17, ದಾಸರಹಳ್ಳಿಗೆ 11 ಮತ್ತು ಬ್ಯಾಟರಾಯನಪುರ ವಲಯಕ್ಕೆ 26 ಹಳ್ಳಿಗಳನ್ನು ಸೇರ್ಪಡೆ ಮಾಡಲಾಯಿತು. ಈ ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ 5ನೇ ಹಂತದ ಯೋಜನೆ ಆರಂಭವಾಗಿ ಐದು ವರ್ಷಗಳಾದರೂ ಕಾವೇರಿ ನೀರಿನ ಭಾಗ್ಯ ಮಾತ್ರ ಸಿಕ್ಕಿಲ್ಲ.
ಕೊಪ್ಪಳ: ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲಾ, ಎರಡೂ ಕೈ ತಟ್ಟಿದ್ರೆನೆ ಚಪ್ಪಾಳೆ ಆಗೋದು ಎಂದು ಕುಷ್ಟಗಿ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಅತ್ಯಾಚಾರ ನೆಡದಿದೆ ನ್ಯಾಯ ಕೊಡಿಸಿ ಎಂದು ಹೇಳಿದ ಸಂತ್ರಸ್ತೆಯ ಸಂಬಂಧಿಗೆ ಸಲಹೆ ನೀಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. https://ainlivenews.com/geo-scientist-statue-murder-case-explosive-issue-comes-to-light-during-investigation/ ಕುಷ್ಟಗಿ ತಾಲೂಕಿನ ಎಂ. ಗುಡದೂರು ಗ್ರಾಮದಲ್ಲಿ ಮಹಿಳೆಯ ಮೇಲೆ ಕಾಂಗ್ರೆಸ್ ಮುಖಂಡ ಅತ್ಯಾಚಾರ ಆರೋಪ ಕೇಳಿ ಬಂದಿದ್ದು ಕೇಸ್ ದಾಖಲಾದ್ರೂ ಕ್ರಮಕ್ಕೆ ಸಂಬಂಧಪಟ್ಟವರಿಂದ ಮೀನಾಮೇಷ. ಹೀಗಾಗಿ ಸಂತ್ರಸ್ಥ ಮಹಿಳೆಯ ಮಾವ ನ್ಯಾಯಕ್ಕೆ ಎಸ್ಪಿ, ಮಾಜಿ ಶಾಸಕರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಮಾಜಿ ಶಾಸಕ ಈ ರೀತಿ ಹೇಳಿರುವ ಆಡಿಯೋ ವೈರಲ್ ಆಗಿದೆ.
ಬೆಂಗಳೂರು: ಬಿಜೆಪಿ ಹೈಕಮಾಂಡ್ ಒಂದು ಬಾರಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೆ ಅದಕ್ಕೆ ಎಲ್ಲರೂ ಒಪ್ಪಬೇಕು ಅಂತ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅಸಾಮಾಧಾನಕ್ಕೆ ಮಾಜಿ ಸಚಿವ ಶ್ರೀರಾಮುಲು(Sriramulu) ತಿರುಗೇಟು ನೀಡಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿಪಕ್ಷ ಸ್ಥಾನ ಸಿಗದ ಹಿನ್ನೆಲೆ ಯತ್ನಾಳ್ ಬಹಿರಂಗ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದಲ್ಲಿ ಒಂದು ಬಾರಿ ರಾಜ್ಯಾಧ್ಯಕ್ಷರಾಗಿ ಘೋಷಣೆ ಮಾಡಿದ ನಂತರ ಮುಗೀತು. ಯತ್ನಾಳ್ ಅವರು ಹಿರಿಯ ನಾಯಕ. ಒಂದು ಬಾರಿ ಪಾರ್ಟಿ ನಿರ್ಧಾರ ಮಾಡಿದ ಮೇಲೆ ಎಲ್ಲವನ್ನು ಸರಿ ಮಾಡಿಕೊಂಡು ಹೋಗ್ತೀವಿ. ಪಕ್ಷ ಮುನ್ನಡೆಸಬೇಕು ಹೀಗಾಗಿ ಎಲ್ಲ ಸರಿ ಮಾಡಿಕೊಂಡು ಹೋಗ್ತೀವಿ ಎಂದರು. ಅಶೋಕ್ ವಿಪಕ್ಷ ನಾಯಕ ಆಗಿ ನೇಮಕ ಆದ್ರು. ವಿಜಯೇಂದ್ರ ಕಿರಿಯರು ಒಪ್ತೀನಿ. ಆದರೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಎಲ್ಲರು ಸಹಕಾರ ಸಪೋರ್ಟ್ ಮಾಡಿದ್ರೆ ಪಕ್ಷ ಕಟ್ಟಲು ಅನುಕೂಲ ಆಗುತ್ತೆ. ಪಾರ್ಟಿ ತೀರ್ಮಾನವೇ ಅಂತಿಮ ತೀರ್ಮಾನ. ಏನೇ ಅಸಮಾಧಾನ ಇದ್ದರೂ ಸರಿ ಮಾಡಿಕೊಂಡು ಹೋಗೋ ಕೆಲಸ…