ಬಿಗ್ ಬಾಸ್ ಮನೆಯೊಳಗೆ ಹೋದಾಗಿನಿಂದಲೂ ವಿನಯ್ ಮತ್ತು ಪ್ರತಾಪ್ ಮಧ್ಯ ಶೀತಲಸಮರ ನಡೆಯುತ್ತಲೇ ಇತ್ತು. ಅದು ಕೆಲವೊಮ್ಮೆ ಮಾತಿನ ಚಕಮಕಿಗೂ ಇಳಿದಿದ್ದಿದೆ. ಪ್ರತಾಪ್ ಅವರನ್ನು ಅವಕಾಶ ಸಿಕ್ಕಾಗೆಲ್ಲ ಟೀಕಿಸುತ್ತಿದ್ದ, ತೆಗಳುತ್ತಿದ್ದ ವಿನಯ್ ಇದೀಗ ಅವರನ್ನು ಹೊಗಳುತ್ತಿದ್ದಾರೆ. ‘ನಿನ್ನ ಬಗ್ಗೆ ಗೌರವ ಹೆಚ್ಚಾಗಿದೆ’ ಅನ್ನುತ್ತಿದ್ದಾರೆ. ಹಾಗಾದರೆ ಅಂಥದ್ದೇನು ಬದಲಾವಣೆಯಾಗಿದೆ? ಇದು ಮನಸಾಳದಿಂದ ಹುಟ್ಟಿಕೊಂಡ ಮೆಚ್ಚುಗೆಯಾ ಅಥವಾ ಹೊಸದೊಂದು ಗೇಮ್ ಗೆ ಮುನ್ನುಡಿಯಾ? ಅರ್ಥ ಮಾಡಿಕೊಳ್ಳುವುದು ಕಷ್ಟವೇ.ಆದರೆ ಪ್ರತಾಪ್ ಅವರಿಗೆ ಇದು ಕಷ್ಟವೇನಲ್ಲ. ಮೊದಲಿನಿಂದಲೂ ಚಾಣಾಕ್ಷತನದಿಂದಲೇ ಎಲ್ಲರನ್ನೂ ತೂಗಿಸಿಕೊಂಡು ಬಂದಿರುವ ಅವರು, ಈಗ ವಿನಯ್ ಮತ್ತು ಅವರ ತಂಡದಿಂದ ಬಂದಿರುವ ಪ್ರಶಂಸೆಗೆ ಹೇಗೆ ಪ್ರತಿಕ್ರಿಯಿಸುತ್ತಾರೆ? ಕಾಯ್ದು ನೋಡೋಣ.
Author: AIN Author
ಬೆಂಗಳೂರು:- ಬೀದಿನಾಯಿ ಕಚ್ಚಿ ಸತ್ತರೆ 5 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 5 ಸಾವಿರ ರೂ. ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಹೈಕೋರ್ಟ್ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 2023ರ ಅ.6ರಂದು ಸಭೆ ನಡೆಸಲಾಗಿದೆ. ನಾಯಿ ದಾಳಿಯಿಂದ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಜೀವ ಕಳೆದುಕೊಂಡವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವ ಕುರಿತು ರ್ಚಚಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಂದಿನ 4 ವಾರಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿತು. ಪ್ರಾಣಿ ಪೋಷಣೆ, ಲಸಿಕಾ ವಿಧಾನ ಮತ್ತು ಇನ್ನಿತರ ಶ್ವಾನ ಸಂಬಂಧಿ ವಿಷಯಗಳನ್ನು ಪ್ರತಿಯೊಬ್ಬರೂ ತಿಳಿದಿರಬೇಕಿದೆ. ಸರ್ಕಾರವು ಶ್ವಾನಗಳ ಕುರಿತು ಜಾಹೀರಾತು, ಕಿರುಚಿತ್ರಗಳನ್ನು ಚಿತ್ರಮಂದಿರಗಳಲ್ಲಿ…
ಐಸಿಸಿ ಏಕದಿನ ವಿಶ್ವಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಬಲಿಷ್ಠ ಟೀಂ ಇಂಡಿಯಾ, ನ್ಯೂಜಿಲೆಂಡ್ ತಂಡಗಳು ಮುಖಾಮುಖಿ ಆಗಿತ್ತು. ಶತಕೋಟಿ ಭಾರತೀಯರಿಗೆ ಈ ದಿನ ಎಂದೆಂದಿಗು ಮರೆಯಲು ಆಗಲ್ಲ. ಯಾಕಂದ್ರೆ ಒಂದು ಕಡೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ ನಿರ್ಮಾಣ ಮಾಡಿದ್ದ ದಾಖಲೆ ಇಂದು ಮುರಿದು ಹೋಗಿದೆ. ಇನ್ನೊಂದೆಡೆ ತೆಂಡೂಲ್ಕರ್ ನಿರ್ಮಿಸಿದ್ದ ದಾಖಲೆ ಭಾರತೀಯನೇ ಮುರಿದಿದ್ದಾನೆ. ಹೀಗೆ ಎಷ್ಟೋ ಜನರ ಡೈರಿಯಲ್ಲಿ 15 ನವೆಂಬರ್ 2023 ಅಚ್ಚಳಿಯದೆ ಉಳಿಯಲಿದೆ. ಇದಕ್ಕೆಲ್ಲಾ ಕಾರಣ ಮಾನ್ಯ ಕೊಹ್ಲಿ. ವಿರಾಟ್ ಕೊಹ್ಲಿ ಅಂದ್ರೆ ಮಾಸ್, ವಿರಾಟ್ ಕೊಹ್ಲಿ ಅಂದ್ರೆ ಕ್ಲಾಸ್.. ಹೀಗೆ ಎಲ್ಲದಕ್ಕೂ ಈ ನಮ್ಮ ಕೊಹ್ಲಿಯವರೆ ಮಾದರಿ. ಇಂತಿಪ್ಪ ಕೊಹ್ಲಿ ಮೊನ್ನೆ ಮೊನ್ನೆ ತಾನೆ ಏಕದಿನ ಕ್ರಿಕೆಟ್ ಅಖಾಡದಲ್ಲಿ ತಮ್ಮ 48ನೇ ಶತಕ ಬಾರಿಸಿದ್ದರು. ಆಗಲೇ ಎಲ್ಲರಿಗೂ ಗೊತ್ತಾಗಿದ್ದು, ಸಚಿನ್ ಅವರ ದಾಖಲೆಯನ್ನ ಕೊಹ್ಲಿ ಇದೇ ವಿಶ್ವಕಪ್ ಅಖಾಡದಲ್ಲಿ ಮುರಿಯುತ್ತಾರೆ ಅಂತಾ. ಈ ನಂಬಿಕೆಯನ್ನು ವಿರಾಟ್ ಕೊಹ್ಲಿ ಸುಳ್ಳು ಮಾಡಲಿಲ್ಲ. ಅದರಲ್ಲೂ 05…
ಅಮೆರಿಕ: 2008ರಲ್ಲಿ ಮುಂಬೈ ಮೇಲೆ ಪಾಕ್ ಉಗ್ರರು ದಾಳಿ ನಡೆಸಿದ ಹೊರತಾಗಿಯೂ ಆ ದೇಶದ ಅಂದಿನ ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಯಾವುದೇ ಪ್ರತಿಕಾರದ ಕ್ರಮ ಕೈಗೊಂಡಿರಲಿಲ್ಲ. ಹಮಾಸ್ ವಿರುದ್ಧವೂ ಇಸ್ರೇಲ್ ಇಂಥದ್ದೇ ನಿಲುವು ಪ್ರದರ್ಶಿಸಬಹುದಿತ್ತು ಎಂದು ಅಮೆರಿಕದ ಖ್ಯಾತ ಲೇಖಕ ಥಾಮಸ್ ಫ್ರೈಡ್ಮನ್ ಹೇಳಿದ್ದಾರೆ. ಹಮಾಸ್- ಇಸ್ರೇಲ್ ಯುದ್ಧದ ಕುರಿತು ಥಾಮಸ್ ಬರೆದಿರುವ ಲೇಖನ ‘ದಿ ನ್ಯೂಯಾರ್ಕ್ ಟೈಮ್ಸ್’ನಲ್ಲಿ ಪ್ರಕಟವಾಗಿದ್ದು, ಈ ಲೇಖನದಲ್ಲಿ ಮೇಲಿನ ತಮ್ಮ ಅಭಿಪ್ರಾಯವನ್ನು ಅವರು ಹೇಳಿದ್ದಾರೆ. ‘ನಾನು ಇಸ್ರೇಲ್- ಹಮಾಸ್ ಯುದ್ಧವನ್ನು ನೋಡುತ್ತಿದ್ದೇನೆ. ಈ ವೇಳೆ ನನ್ನ ನೆಚ್ಚಿನ ವಿಶ್ವನಾಯಕರಲ್ಲಿ ಒಬ್ಬರಾದ ಮನಮೋಹನ್ ಸಿಂಗ್ ಬಗ್ಗೆ ನಾನು ಯೋಚಿಸುತ್ತಿದ್ದೇನೆ. https://ainlivenews.com/joint_pain_suprem_ray_treatment_reiki/ 10 ಜನ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಭಾರತದೊಳಗೆ ನುಸುಳಿ ಮುಂಬೈನಲ್ಲಿ 160ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದಾಗ ಮನಮೋಹನ್ ಅವರು ಪಾಕಿಸ್ತಾನ ಅಥವಾ ಉಗ್ರರ ವಿರುದ್ಧ ಯಾವುದೇ ಪ್ರತಿಕಾರ ತೀರಿಸಿಕೊಳ್ಳಲಿಲ್ಲ. ಇದು ಆಗ ಸರಿಯಾದ ನಿರ್ಧಾರವಾಗಿತ್ತು’ ಎಂದಿದ್ದಾರೆ.
ಬೆಂಗಳೂರು:- ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದ ವಿಜಯೇಂದ್ರ ಅವರು ಇದೇವೇಳೆ ಭಾರತ ಮಾತೆ, ಜಗನ್ನಾಥ ರಾವ್ ಜೋಷಿ ಮತ್ತಿತರ ಪ್ರಮುಖರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಆದರೆ, ವಲಸಿಗ ಬಿಜೆಪಿಗರಾದ ರಮೇಶ್ ಜಾರಕಿಹೊಳಿ ಅಂಡ್ ಟೀಮ್ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರ ಕಾರ್ಯಕ್ರಮಕ್ಕೆ ಗೈರಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹೌದು, ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರ ಆಯ್ಕೆಗೆ ಬಿಜೆಪಿ ಹಿರಿಯ ನಾಯಕರು ಅಸಮಾಧಾನಗೊಂಡಿದ್ದು, ಹಲವು ನಾಯಕರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಸಿದ್ದಾರೆ. ಇನ್ನೂ ಮಾಜಿ ಸಚಿವರಾದ ಸಿ ಟಿ ರವಿ, ವಿ ಸೋಮಣ್ಣ ಅಸಮಾಧಾನಗೊಂಡಿದ್ರೆ, ಇತ್ತ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮೌನಕ್ಕೆ ಜಾರಿದ್ದಾರೆ. ಅಲ್ಲದೇ ಮೂಲ ಬಿಜೆಪಿಗರು ಹಾಗೂ ವಲಸಿಗ ಬಿಜೆಪಿಗರ ನಡುವೆ ಸಾಕಷ್ಟು ಮನಸ್ತಾಪಕ್ಕೆ ಕಾರಣವಾಗಿದೆ. ಈಗಾಗಲೇ ಮೂಲ ಬಿಜೆಪಿ ಸೇರ್ಪಡೆಯಾದ 17 ಜನ…
ಬೆಂಗಳೂರು:- ಬುಧವಾರ ಮುಂಬೈನ ವಾಂಖೆಡೆಯಲ್ಲಿ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸದೆಬಡಿದು 70 ರನ್ ಗಳಿಂದ ಗೆಲುವು ಸಾಧಿಸಿರುವ ಭಾರತ ತಂಡಕ್ಕೆ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಅವರು ಶುಭ ಹಾರೈಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಶರವಣ ಅವರು, ಎಂತಹ ಸೊಗಸಾದ ಪಂದ್ಯ!. ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಫೈನಲ್ಗೆ ಲಗ್ಗೆ ಇಟ್ಟಿದೆ. ಇದು ತುಂಬಾ ಖುಷಿ ಹಾಗೂ ಹೆಮ್ಮೆಯ ವಿಚಾರ. ಫೈನಲ್ ಗೆ ಲಗ್ಗೆ ಇಟ್ಟ ಭಾರತ ತಂಡಕ್ಕೆ ನನ್ನ ಶುಭ ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇನ್ನೂ ಮುಂಬೈನ ವಾಂಖೆಡೆಯಲ್ಲಿ ನಿನ್ನೆ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 70 ರನ್ ಗಳ ಅಂತರದಿಂದ ಗೆಲುವು ಸಾಧಿಸಿದ್ದು, ಫೈನಲ್ ಗೆ ಲಗ್ಗೆ ಇಟ್ಟಿದೆ.
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅವರ ಆಟಕ್ಕೆ ಹಾಗೂ ಅವರ ಫಿಟ್ನೆಸ್ ಗೆ ಎಲ್ಲರೂ ಫಿದಾ ಆಗುವುದು ಸಹಜ. ಆದರೆ ಅವರ ಫಿಟ್ನೆಸ್ ಸೀಕ್ರೆಟ್ ಏನು!? ಎಂಬುವ ಪ್ರಶ್ನೆ ಎಲ್ಲರಲ್ಲೂ ಇದೆ. ಸೆಂಚುರಿ, ಡಬಲ್ ಸೆಂಚುರಿ ಬಾರಿಸುವ ಕೊಹ್ಲಿ ಇಷ್ಟೊಂದು ಫಿಟ್ ಆಗಿರೋದಕ್ಕೆ, ಅವರ ಆಹಾರ ಕ್ರಮ ಮುಖ್ಯ ಕಾರಣ. ಹಾಗಿದ್ರೆ ಅವರ ಡಯಟ್ ಹೇಗಿರುತ್ತೆ ಅನ್ನೋದನ್ನು ನೋಡೋಣ ಬನ್ನಿ. ಖ್ಯಾತ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ, ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ತಮ್ಮ ಫಿಟ್ನೆಸ್ (Fitness), ಡಯಟ್ (Diet) ಬಗ್ಗೆ ಮಾತನಾಡಿದ್ದಾರೆ. ಪೌಷ್ಠಿಕಾಂಶ (Proteins), ಹೈಡ್ರೇಶನ್ (Hydration) ಮತ್ತು ಜೀವಸತ್ವಗಳ (Vitamins) ವಿಷಯದಲ್ಲಿ ಸರಿಯಾದ ಸಮತೋಲನವನ್ನು (Balanced Diet) ಕಾಯ್ದುಕೊಂಡು ಆಹಾರ ಸೇವಿಸುತ್ತಾರಂತೆ. ಕೊಹ್ಲಿ ತಮ್ಮ ಆಹಾರದಲ್ಲಿ ಪುನರಾವರ್ತನೆ (food repetation) ಮಾಡುತ್ತಲೇ ಇರುತ್ತಾರೆ. ಅವರು ತಿಂಗಳವರೆಗೆ ಒಂದೇ ಆಹಾರ ತಿನ್ನುತ್ತಾರಂತೆ. ಅವರ ಪ್ರಕಾರ, ಈ ಪುನರಾವರ್ತನೆಯು ಪೌಷ್ಠಿಕಾಂಶ ಆಹಾರ…
ಟಿ. ದಾಸರಹಳ್ಳಿ: ಸಹಕಾರತತ್ವದತ್ತ ಹೆಚ್ಚು ಕ್ರೆಡಿಟ್ ಕೋ ಅಪರೇಟಿವ್ ಸಂಘಗಳು ಮುಖಮಾಡಿ, ಎಲ್ಲಾ ಸದಸ್ಯರಿಗೆ ಆರ್ಥಿಕ ಸ್ವಾವಲಂಬನೆಗೆ ಹೆಚ್ಚು ಗಮನಹರಿಸಬೇಕೆಂದು ಮಾಜಿ ಸಚಿವ, ಶಾಸಕ ಎಸ್.ಟಿ. ಸೋಮಶೇಖರ್ ಅಭಿಪ್ರಾಯಪಟ್ಟರು. ದಾಸರಹಳ್ಳಿ ಸಮೀಪದ, ದೊಡ್ಡಬಿದರಕಲ್ಲು ಬಳಿಯ ಕರೀಓಬನಹಳ್ಳಿಯಲ್ಲಿನ ಸುವರ್ಣ ಅಭ್ಯುದಯ ಸೌಹರ್ದ ಕ್ರೇಡಿಟ್.ಕೋ.ಅಪರೇಟಿವ್ ಸೊಸೈಟಿಯ ಎರಡನೇ ವರ್ಷದ ವಾರ್ಷಿಕೋತ್ಸವ ಹಾಗೂ ಧನಲಕ್ಷ್ಮೀ ಪೂಜೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಬಡಾವಣೆ ನಿವಾಸಿಗಳು ಮತ್ತು ಸೊಸೈಟಿಯ ನಿರ್ದೇಶಕ ಹನುಮಂತಯ್ಯ, ಬಡಾವಣೆ ನಿವಾಸಿಗಳಿಗೆ ಕಾವೇರಿ ನೀರು ಒದಗಿಸುವಂತೆ ಮನವಿ ಮಾಡಿದ್ದಾರೆ, ಸರಕಾರಕ್ಕೆ ಮನವಿ ಸಲ್ಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇನೆ, ನನ್ನ ಯಶವಂತಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಗುರಿ, ಸಹಕಾರ ಇಲಾಖೆಯ ಎಲ್ಲಾ ತತ್ವಗಳನ್ನು ಅಳವಡಿಸಿಕೊಂಡು, ಬಡಾವಣೆಯ ಅಭ್ಯುದಯಕ್ಕೆ ಶ್ರಮಿಸಿ ಎಂದು ಕರೆ ನೀಡಿದರು. ನಿರ್ದೇಶಕ ಹನುಮಂತಯ್ಯ ಮಾತನಾಡಿ ಸಾಮೂಹಿಕ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಪಾಲ್ಗೊಂಡಿದ್ದು, ಇಡೀ ಸೊಸೈಟಿ ಆಡಳಿತ ಮಂಡಳಿಗೆ ಸಂತಸ ತಂದಿದೆ, ಈಗಾಗಲೇ ಬಡಾವಣೆಗೆ ಸಿ.ಎಂ.ಸಿ. ನೀರು ಇದ್ದರು, ನೀರಿನ…
ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಎಲ್ಪಿಜಿ ಸಿಲಿಂಡರ್ ಹೊಂದುವುದು ಅನಿವಾರ್ಯವಾಗಿದೆ. ಆದರೆ ಕೆಲವೊಮ್ಮೆ ಗ್ಯಾಸ್ ಲೀಕ್ ಆದ ವಾಸನೆ ಬರುತ್ತದೆ. ಗ್ಯಾಸ್ ಸಿಲಿಂಡರ್ ಸ್ಫೋಟವಾಗಬಹುದು ಎಂದು ಭಯಭೀತರಾಗುತ್ತೇವೆ. ಈ ಸಮಯದಲ್ಲಿ ಏನು ಮಾಡಬೇಕೆಂದು ತಿಳಿಯುವುದಿಲ್ಲ. ದುರಂತದಿಂದ ತಪ್ಪಿಸಿಕೊಳ್ಳಲು ಮತ್ತು ನಿಮ್ಮ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಕೆಳಗಿನ ಹಂತಗಳನ್ನು ಫಾಲೋ ಮಾಡಿ.. ಗ್ಯಾಸ್ ಲೀಕ್ ಆದ ವಾಸನೆ ಬರುತ್ತಿದೆಯೆಂದಾದರೆ ಗಾಬರಿ ಆಗಬೇಡಿ. ಭಯಭೀತರಾದರೆ ತಕ್ಷಣಕ್ಕೆ ಯಾವುದೇ ಉಪಾಯಗಳು ಹೊಳೆಯುವುದಿಲ್ಲ. ಆತಂಕ ಪಡದಂತೆ ನಿಮ್ಮ ಮನೆಯ ಇತರ ಸದಸ್ಯರಿಗೂ ತಿಳಿಸಿ. ನಿಮ್ಮ ಮನೆಯಲ್ಲಿ ಯಾವುದೇ ಬೆಂಕಿ, ಅದು ಎಷ್ಟೇ ಚಿಕ್ಕದಾಗಿದ್ದರೂ ಅದನ್ನು ನಂದಿಸಿ. ಅದು ದೇವರ ದೀಪ ಆಗಿದ್ದರೂ ನಂದಿದಿ. ಅಗರಬತ್ತಿ ಕಡ್ಡಿಗಳನ್ನು ಸಹ ನಂದಿಸಿ. ಯಾವುದೇ ಕಾರಣಕ್ಕೂ ಬೆಂಕಿ ಕಡ್ಡಿ ಸಹಿತ ಕೊರೆಯಬೇಡಿ. ಗ್ಯಾಸ್ ರೆಗ್ಯುಲೇಟರ್ ಆಫ್ ಮಾಡಿ. ನಂತರ ಸಿಲಿಂಡರ್ಗೆ ಸೇಫ್ಟಿ ಕ್ಯಾಪ್ ಹಾಕಿ. ನಿಮ್ಮ ಮನೆಯ ಎಲ್ಲಾ ಬಾಗಿಲುಗಳು ಮತ್ತು ಕಿಟಕಿಗಳನ್ನು ತಕ್ಷಣವೇ ತೆರೆಯಿರಿ ಇದರಿಂದ ಅನಿಲವು ಹೊರಬರುತ್ತದೆ. ಗ್ಯಾಸ್ ಬೇಗ…
ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಜನನ ಹಾಗೂ ಮರಣ ದೈವಾನುಗ್ರಹ ಹಾಗೆಯೇ ಮೂಲ ನಕ್ಷತ್ರದಲ್ಲಿ ಹೆಣ್ಣಾಗಲಿ ಗಂಡಾಗಲಿ ಜನನವಾದರೆ ಅವರವರ ಶಕ್ತಿ ಅನುಸಾರವಾಗಿ ದೋಷ ನಿವಾರಣೆ ಪೂಜಾ ಮಾಡಿಸಿಕೊಳ್ಳಬೇಕು. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ದೋಷ ಅಂಟುವುದು ಎಂಬುದರ ಬಗ್ಗೆ ಮಾಹಿತಿ ನೋಡೋಣ. (1) ಮೂಲ ನಕ್ಷತ್ರದಲ್ಲಿ ಜನಿಸಿದರೆ ತಂದೆಗೆ ಸಮಸ್ಯೆಗೆ ಒಳಗಾಗುವ ಸಂಭವ. (2) ಮೂಲಾ ನಕ್ಷತ್ರದಲ್ಲಿ 4ನೇ ಚರಣದಲ್ಲಿ ಜನಿಸಿದರೆ ಯಾವುದೇ ದೋಷ ಇರುವುದಿಲ್ಲ. ಇದಕ್ಕಾಗಿ…