Author: AIN Author

ಅಹಮದಾಬಾದ್ (Ahmedabad) ಅಂತರರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ (Chirotsava) ಬರಗೂರು ರಾಮಚಂದ್ರಪ್ಪ (Baraguru Ramachandrappa) ನಿರ್ದೇಶನದ ‘ಚಿಣ್ಣರ ಚಂದ್ರ’ (Chinnara Chandra) ಚಿತ್ರ ಅಧಿಕೃತವಾಗಿ ಆಯ್ಕೆಯಾಗಿದೆ. ಸ್ಪರ್ಧಾ ವಿಭಾಗದಲ್ಲಿ ಪ್ರವೇಶ ಪಡೆದಿದೆ. ಈ ಚಿತ್ರವು ಈಗಾಗಲೇ ಮೆಲ್ಬರ್ನ್ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿ ಸ್ಪರ್ಧೆಯ ಅಂತಿಮ ಹಂತ ತಲುಪಿದೆ. ಚಿಣ್ಣರ ಚಂದ್ರ ಚಿತ್ರವು ಶಿಕ್ಷಣದ ಮಹತ್ವವನ್ನು ಸಾದರ ಪಡಿಸುತ್ತಲೇ ಸಮಾಜದಲ್ಲಿ ಸದಭಿರುಚಿ, ಸೌಹಾರ್ದತೆ ಮತ್ತು ಸಮಾನತೆ ಅಗತ್ಯ ಎಂಬುದನ್ನೂ ಮಕ್ಕಳ ಮೂಲಕ ಅಭಿವ್ಯಕ್ತ ಪಡಿಸುತ್ತದೆ. ಜೊತೆಗೆ ಜನಪದ ಕಥೆಗಳು ಮಕ್ಕಳ ಮನಸ್ಸಿನ ಭಾಗವಾಗುವುದನ್ನು ಚಿತ್ರಿಸುತ್ತದೆ. ಬರಗೂರರ ಅಡಗೂಲಜ್ಜಿ ಎಂಬ ಕಾದಂಬರಿಯನ್ನು ಆಧರಿಸಿರುವ ಈ ಚಿತ್ರವನ್ನು ಜಿ.ಎಸ್ ಗೋವಿಂದರಾಜು (ರಾಜಶೇಖರ್) ನಿರ್ಮಿಸಿದ್ದಾರೆ. ತಾರಾಗಣದಲ್ಲಿ ಆಕಾಂಕ್ಷ್ ಬರಗೂರ್, ನಿಕ್ಷೇಪ, ಷಡ್ಜ, ಈಶಾನ್, ಅಭಿನವ್ ನಾಗ್, ಸುಂದರರಾಜ್, ರೇಖಾ, ವತ್ಸಲ ಮೋಹನ್, ರಾಧ ರಾಮಚಂದ್ರ, ರಾಘವ, ರಾಜಪ್ಪ ದಳವಾಯಿ, ಸುಂದರರಾಜ್ ಅರಸು, ವೆಂಕಟರಾಜು, ಹಂಸ ಮುಂತಾದವರಿದ್ದಾರೆ. ಸಂಕಲನಕಾರರಾಗಿ ಸುರೇಶ್ ಅರಸು, ಛಾಯಾಗ್ರಾಹಕರಾಗಿ ನಾಗರಾಜ್ ಆದವಾನಿ, ಸಂಗೀತ…

Read More

ನಾವು ಫೈನಲ್ ಪಂದ್ಯ ಉತ್ತಮವಾಗಿ ಆಡಿಲ್ಲ ಎಂದು ವಿಶ್ವಕಪ್ ಫೈನಲ್ ಪಂದ್ಯದ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮ ಪ್ರತಿಕ್ರಿಯೆ ನೀಡಿದ್ದಾರೆ. ಪಂದ್ಯದ ನಂತರ ಪ್ರಸ್ತುತಿ ಸಮಾರಂಭದಲ್ಲಿ ಮಾತನಾಡಿ” ನಾವು ಎಲ್ಲವನ್ನೂ ಪ್ರಯತ್ನಿಸಿದ್ದೇವೆ ಆದರೆ ಸಾಧ್ಯವಾಗಲಿಲ್ಲ. ಇನ್ನೂ 20-30 ರನ್‌ಗಳಿದ್ದರೆ ಚೆನ್ನಾಗಿರುತ್ತಿತ್ತು. ರಾಹುಲ್ ಮತ್ತು ಕೊಹ್ಲಿ ಉತ್ತಮ ಜತೆಯಾಟವನ್ನು ಹೊಂದಿದ್ದರು. ನಾವು 270-280 ಸ್ಕೋರ್ ನಿರೀಕ್ಷಿಸುತ್ತಿದ್ದೆವು. ಆದರೆ ನಾವು ವಿಕೆಟ್ ಕಳೆದುಕೊಳ್ಳುತ್ತಲೇ ಇದ್ದೆವು ಎಂದರು. ”ಸ್ಕೋರ್ ಬೋರ್ಡ್‌ನಲ್ಲಿ 240 ರನ್‌ಗಳನ್ನು ಹೊಂದಿರುವಾಗ, ವಿಕೆಟ್‌ಗಳನ್ನು ಪಡೆಯಬೇಕು. ಆದರೆ ಹೆಡ್ ಮತ್ತು ಲಬು ಶೇನ್ ಅವರು ದೊಡ್ಡ ಪಾಲುದಾರಿಕೆಯನ್ನು ಒಟ್ಟಿಗೆ ಸೇರಿಸಿದರು ಮತ್ತು ನಮ್ಮನ್ನು ಸಂಪೂರ್ಣವಾಗಿ ಆಟದಿಂದ ಹೊರಗಿಟ್ಟರು” ಎಂದರು.

Read More

ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಈ ಕ್ರಮಗಳನ್ನು ಕೈಗೊಂಡಿದೆ, ಈಗ ರೈತರ ಆದಾಯ ದ್ವಿಗುಣಗೊಳ್ಳಲಿದೆ, ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಎರಡು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ. ಅವರ ಆದಾಯವನ್ನು ಹೆಚ್ಚಿಸುತ್ತಿದೆ. ಆನ್‌ಲೈನ್ ಮಾರಾಟ ವೇದಿಕೆ ONDC ಯೊಂದಿಗೆ ರೈತರನ್ನು ಸಂಪರ್ಕಿಸಲು ಉಪಕ್ರಮವನ್ನು ತೆಗೆದುಕೊಳ್ಳಲಾಗಿದೆ. ಆದರೆ, ಉತ್ತಮ ಮಾಹಿತಿ ಮತ್ತು ಸಲಕರಣೆಗಳ ಲಭ್ಯತೆಗಾಗಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ದೇಶದ ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ಅವರ ಆದಾಯವನ್ನು ಹೆಚ್ಚಿಸುವ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ಎರಡು ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ರೈತರಿಗೆ ಕೃಷಿ ಉಪಕರಣಗಳನ್ನು ಖರೀದಿಸಲು ಪ್ರಧಾನಿ ಮೋದಿ 1.25 ಲಕ್ಷ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಿದ್ದಾರೆ. ಆದರೆ, ಸರ್ಕಾರವು ರೈತರನ್ನು ಡಿಜಿಟಲ್ ಇ-ಕಾಮರ್ಸ್‌ನೊಂದಿಗೆ ಸಂಪರ್ಕಿಸಲು ಪ್ರಾರಂಭಿಸಿದೆ. ಇದರಿಂದ ರೈತರ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಲಿದೆ. ಅದೇ ಸಮಯದಲ್ಲಿ ರೈತರಿಗೆ ಆಧುನಿಕ ಉಪಕರಣಗಳು, ಔಷಧಗಳು ಮತ್ತು ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲು ಪ್ಯಾಕ್‌ಗಳನ್ನು ಸಹ ಪ್ರಾರಂಭಿಸಲಾಗಿದೆ.

Read More

ಬೆಂಗಳೂರು:- ಅಜೇಯವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾಗೆ ವಿರೋಚಿತ ಸೋಲು ಎದುರಾಗಿದೆ. ಈ ಹಿನ್ನೆಲೆ ಪರಿಷತ್ ಸದಸ್ಯ ಟಿಎ ಶರವಣ ಟ್ವೀಟ್ ಮಾಡಿದ್ದು, ಸೋಲು – ಗೆಲುವು ಕ್ರೀಡೆಯಲ್ಲಿ ಮಾತ್ರವಲ್ಲ, ಜೀವನದಲ್ಲೂ ಸಾಮಾನ್ಯ. ನಮ್ಮವರು ಗೆದ್ದಾಗ ಸಂಭ್ರಮಿಸೋಣ, ಸೋತಾಗ ಮತ್ತೆ ಪುಟ್ಟಿದೇಳುವಂತೆ ಹುರಿದುಂಬಿಸೋಣ. ಪಂದ್ಯ ಗೆದ್ದ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಅಂತಿಮ ಪಂದ್ಯದಲ್ಲಿ ಎಡವಿದರೂ ವಿಶ್ವಕಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹೃದಯ ಗೆದ್ದ ಭಾರತ ತಂಡಕ್ಕೆ ವಿಶೇಷ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. https://twitter.com/SharavanaTa/status/1726301026465284235?t=k9PGxuzwTH2Jro2Ta6kOzQ&s=19 ಇನ್ನೂ ಗುಜರಾತ್​ನ ಅಹಮದಾಬಾದ್​ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ 2023ರ ವಿಶ್ವಕಪ್ ಪಂದ್ಯ ದಲ್ಲಿ 6ನೇ ಬಾರಿಗೆ ಆಸ್ಟ್ರೇಲಿಯಾ ತಂಡ ವಿಶ್ವ ಚಾಂಪಿಯನ್‌ ಆಗಿದೆ. ಆ ಮೂಲಕ ವಿಶ್ವಕಪ್ ಗೆಲ್ಲುವ ಟೀಂ ಇಂಡಿಯಾ ಕನಸು ಭಗ್ನವಾಗಿದೆ. ಅಜೇಯವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾಗೆ ವಿರೋಚಿತ ಸೋಲು ಎದುರಾಗಿದೆ.

Read More

ಅದಾನಿ ವಿಲ್ಮಾರ್ ಷೇರುಗಳು ಇಂದು ಬಾಷ್ಪಶೀಲ ವಹಿವಾಟಿನಲ್ಲಿ ಶೇ. ಅದಾನಿ ವಿಲ್ಮಾರ್ ಸ್ಟಾಕ್ ಬಿಎಸ್‌ಇಯಲ್ಲಿ ಹಿಂದಿನ ರೂ591.75 ರ ವಿರುದ್ಧ ರೂ 621.3 ರ ಇಂಟ್ರಾಡೇ ಗರಿಷ್ಠಕ್ಕೆ 5 ಶೇಕಡಾ ಏರಿಕೆಯಾಗಿದೆ. ಐದು ದಿನಗಳ ಸತತ ಕುಸಿತ ಕಂಡಿವೆ. ಅದಾನಿ ಸಮೂಹದ ಎಫ್‌ಎಂಸಿಜಿ ಕಂಪನಿ ಮತ್ತು ಫಾರ್ಚೂನ್ ಬ್ರಾಂಡ್ ಅಡಿಯಲ್ಲಿ ದಿನಸಿ ವಸ್ತುಗಳನ್ನು ಮಾರಾಟ ಮಾಡುವ ಅದಾನಿ ವಿಲ್ಮಾರ್‌ ಷೇರುಗಳು ಇತ್ತೀಚಿನ ದಿನಗಳಲ್ಲಿ ಭಾರೀ ಕುಸಿತ ಕಂಡಿವೆ. ಪ್ರಸ್ತುತ ಸುಮಾರು 38,390 ಕೋಟಿ ರೂ. ಮಾರುಕಟ್ಟೆ ಮೌಲ್ಯ ಹೊಂದಿರುವ ಅದಾನಿ ವಿಲ್ಮಾರ್ ಲಿ. ಷೇರುಗಳು ಇದೀಗ 52 ವಾರಗಳ ಕನಿಷ್ಠ ಮಟ್ಟ 293 ರೂ.ಗೆ ಕುಸಿದಿವೆ. ಷೇರುಗಳ 52 ವಾರಗಳ ಗರಿಷ್ಠ ಮಟ್ಟ 678 ರೂ. ಆಗಿದ್ದು, ಕಳೆದ ಒಂದು ತಿಂಗಳಲ್ಲಿ ಅದಾನಿ ವಿಲ್ಮಾರ್ ಷೇರುಗಳು ಶೇ. 14ರಷ್ಟು ಅಂದರೆ 47 ರೂ. ಇಳಿಕೆ ಕಂಡಿವೆ. ಕಳೆದ 6 ತಿಂಗಳಲ್ಲಿ ಅದಾನಿ ವಿಲ್ಮಾರ್ ಷೇರುಗಳು ಶೇ. 24ರಷ್ಟು ಕುಸಿದು ಹೂಡಿಕೆದಾರರಿಗೆ 92…

Read More

ಬ್ಯಾಂಕಾಕ್:- ಎಲ್‌-ನಿನೋದಿಂದಾಗಿ ಏಷ್ಯಾದಲ್ಲಿ ಕಬ್ಬು ಬೆಳೆಯಲ್ಲಿ ಕುಂಠಿತ ಉಂಟಾಗಿ, ಸಕ್ಕರೆ ಉತ್ಪಾದನೆ ಮೇಲೆ ಕರಿನೆರಳು ಬಿದ್ದಿದೆ. 2011ರಿಂದ ಈಚೆಗೆ ನಿಧಾನವಾಗಿ ಭಾರತ ಮತ್ತು ಥಾಯ್ಲೆಂಡ್‌ನ‌ಲ್ಲಿ ಮುನಿಸಿಕೊಂಡ ಮಳೆ, ಪ್ರತಿಕೂಲ ಹವಾಮಾನದಿಂದಾಗಿ ಕಬ್ಬು ಬೆಳೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಘಟನೆ ಪ್ರಸಕ್ತ ವಿತ್ತೀಯ ವರ್ಷದಲ್ಲಿ ಜಗತ್ತಿನ ಒಟ್ಟು ಸಕ್ಕರೆ ಉತ್ಪಾದನೆಯಲ್ಲಿ ಶೇ.2 ಇಳಿಕೆಯಾಗುವ ಮುನ್ಸೂಚನೆ ನೀಡಿದೆ. ಬೆಲೆ ಏರಿಕೆಯು ನೈಜೀರಿಯಾದಲ್ಲಿ ಬ್ರೆಡ್‌ ಉತ್ಪಾದಿಸುವ ಘಟಕಗಳ ಮೇಲೆ ಬರೆ ಎಳೆದಿದೆ. ಏಕೆಂದರೆ ಈ ರಾಷ್ಟ್ರದಲ್ಲಿ ಬ್ರೆಡ್‌ ಜನರ ಪ್ರಧಾನ ಆಹಾರ. ಗೋಧಿ ಹಿಟ್ಟು, ತರಕಾರಿಗಳಿಂದ ಸಿದ್ಧಗೊಳಿಸಿದ ಎಣ್ಣೆ, ಗೋಧಿ ಹುಡಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿರುವುದರಿಂದ ಅಲ್ಲಿನ ಬ್ರೆಡ್‌ ತಯಾರಿಕಾ ಘಟಕಗಳಲ್ಲಿ ಆತಂಕದ ಛಾಯೆ ಮೂಡಿದೆ. ಜಗತ್ತಿನ ಮಾರುಕಟ್ಟೆಗಳಲ್ಲಿ ಸಕ್ಕರೆಯ ಬೆಲೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ.

Read More

ಅಯ್ಯಪ್ಪ ದೇವರು ಜೀವಿಸಿದ ಶಬರಿಮಲೆಯಲ್ಲಿ ಅಯ್ಯಪ್ಪ ದೇವರ ಮಂದಿರವಿದೆ. ಇದು ವಿಶ್ವದ ಅತ್ಯಂತ ದೊಡ್ಡ ಯಾತ್ರೆಯ ಸ್ಥಳವಾಗಿದೆ ಮತ್ತು ಭಕ್ತಿಭಾವದಿಂದ ಅಯ್ಯಪ್ಪ ದೇವರನ್ನು ಪೂಜಿಸಿದರೆ ಭಕ್ತರು ಎಲ್ಲಾ ಇಷ್ಟಾರ್ಥಗಳು ಈಡೇರುತ್ತದೆ ಎಂದು ನಂಬಲಾಗಿದೆ. ಹೌದು  ವಿಶ್ವ ವಿಖ್ಯಾತ, ದೇವರ ನಾಡಿನ ಅಯ್ಯಪ್ಪ ಸ್ವಾಮಿ ದೇವಾಲಯವೇ ಒಂದು ವಿಸ್ಮಯ. ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂದು ದೀನವಾಗಿ ಕೂಗುತ್ತ ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆಯಾಗಿರುವ ಅಯ್ಯಪ್ಪ ಸ್ವಾಮಿಯನ್ನು ಕಾಣಲು ಇಲ್ಲಿಗೆ ಭಕ್ತರು ಒಂದು ಹೊತ್ತಿನ ಊಟ, ತಣ್ಣೀರು ಸ್ನಾನ, ಮಂಡಲ ವ್ರತ.. ಹೀಗೆ ಶ್ರದ್ಧಾ ಭಕ್ತಿಯಿಂದ ಮಡಿ ಮೈಲಿಗೆಯಲ್ಲಿ ಮಾಲೆ ಹಾಕಿ ಬರುತ್ತಾರೆ. ಆದ್ರೆ ಈ ದೇವಸ್ಥಾನಕ್ಕೆ ಹೆಣ್ಣು ಮಕ್ಕಳಿಗೆ ಪ್ರವೇಶವಿಲ್ಲ. ಬನ್ನಿ ಈ ದೇವಾಲಯದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ತಿಳಿಯಿರಿ. ಹರಿಹರ ಸುತ ಅಯ್ಯಪ್ಪ ಕೇರಳ ರಾಜ್ಯದ ಪತನಂತಿಟ್ಟ ಜಿಲ್ಲೆಯ ಪೆರುನಾಡ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೆಲೆ ನಿಂತಿರುವ ಅಯ್ಯಪ್ಪ ಸ್ವಾಮಿ ತನ್ನ ಅಪರೂಪದ ಮಹಾ ಪವಾಡದಿಂದ ಜಗತ್ ಪ್ರಸಿದ್ಧ. ಧಾರ್ಮಿಕ…

Read More

ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ, ಕಾಳುಗಳು ಆರೋಗ್ಯ ವೃದ್ಧಿಸುವಲ್ಲಿ ತುಂಬಾ ಉಪಯುಕ್ತ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಎಷ್ಟು ಲಾಭ ಎನ್ನುವುದು ಹಲವರಿಗೆ ಗೊತ್ತಿರಲ್ಲ. ಕಾಳುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ಅದನ್ನು ನೀರಲ್ಲಿ ನೆನಸಿಟ್ಟು, ಮೊಳಕೆ ಬಂದ ಮೇಲೆ ತಿಂದ್ರೆ ಅದರಲ್ಲಿ ಪೌಷ್ಟಿಕಾಂಶ ಜಾಸ್ತಿ ಇರುತ್ತದೆ. ಮೊಳಕೆ ಒಡೆದ ಕಾಳುಗಳನ್ನು ಬೇಯಿಸಿ ತಿನ್ನುವುದಕ್ಕಿಂದ ಹಸಿಯಾಗಿಯೇ ಸೇವಿಸುವುದು ಉತ್ತಮ. ಯಾಕೆಂದರೆ ಮೊಳಕೆ ಕಾಳುಗಳನ್ನು ಬೇಯಿಸಿದಾಗ ಅದರ ಪೌಷ್ಟಿಕತೆ ದೇಹಕ್ಕೆ ಸಿಗಲ್ಲ.…

Read More

ಬೆಂಗಳೂರು:- KRPP ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ್ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸರ್ವ ಯತ್ನಗಳು ಬಿಜೆಪಿಯಿಂದ ನಡೆಯುತ್ತಿವೆ. ಇತ್ತೀಚೆಗಷ್ಟೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ಚುನಾವಣೆಯಲ್ಲಿ ಗೆದ್ದ ಗಾಲಿ ಜನಾರ್ಧನ್ ರೆಡ್ಡಿ ಅವರನ್ನು ಪಕ್ಷಕ್ಕೆ ಕರೆತರುವ ಮೂಲಕ ಮುಂದಿನ ಚುನಾವಣೆಗಳಲ್ಲಿ ಸ್ಥಾನ ಕೈತಪ್ಪದಂತೆ ಬಿಜೆಪಿ ಯೋಚಿಸಿದೆ. ಇದರಿಂದ ಕಾಂಗ್ರೆಸ್‌ಗು ತಕ್ಕ ಉತ್ತರ ನೀಡಿದಂತಾಗುತ್ತದೆ ಎಂದು ಬಿಜೆಪಿ ಲೆಕ್ಕಾಚಾರ ಹಾಕಿದೆ. ಅಕ್ರಮ ಗಣಿಗಾರಿಕೆ ಹಿನ್ನೆಲೆಯಲ್ಲಿ ದಶಕದಿಂದಲೂ ರಾಜಕೀಯದಿಂದ ದೂರ ಉಳಿದಿದ್ದ ಗಾಲಿ ಜನಾರ್ಧನ್ ರೆಡ್ಡಿ ಇದೇ 2023ರ ಚುನಾವಣೆ ವೇಳೆ ಸ್ವಂತ ಪಕ್ಷ ಕೆಆರ್‌ಪಿಪಿ ಕಟ್ಟುವ ಮೂಲಕ ಕಲ್ಯಾಣ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳಿಗೆ ಠಕ್ಕರ್ ಕೊಟ್ಟಿದ್ದರು. ಇದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿಯಿಂದ ಸ್ಪರ್ಧಿಸಿ ಕೆಆರ್‌ಪಿಪಿಯಿಂದ ರೆಡ್ಡಿಯವರು ಮಾತ್ರವೇ ಗೆದ್ದರು. ಬಳ್ಳಾರಿ ನಗರ ಕ್ಷೇತ್ರದಿಂದ ಬಿಜೆಪಿಗೆ ವಿರುದ್ಧ ಪತ್ನ ಲಕ್ಷ್ಮೀ ಅರುಣಾ ಅವರನ್ನು ಅಖಾಡಕ್ಕಿಳಿಸಿ ಬಿಜೆಪಿಗೆ ಸೆಡ್ಡು ಹೊಡೆದಿದ್ದರು. ಇದೆಲ್ಲ ಗಮನಿಸಿರುವ ಬಿಜೆಪಿ ಮುಂದೆ…

Read More

ಬಿಗ್‌ಬಾಸ್‌ ಮನೆಯಿಂದ ಭಾಗ್ಯಶ್ರೀ ಔಟ್ ಆಗಿದ್ದಾರೆ. ತಮ್ಮ ಹೆಸರಿನಲ್ಲಿಯೇ ಭಾಗ್ಯವನ್ನು ಇರಿಸಿಕೊಂಡಿರುವ ಭಾಗ್ಯಶ್ರೀ ಅವರಿಗೆ ಬಿಗ್‌ಬಾಸ್‌ ಮನೆಯೊಳಗೂ ಅನೇಕ ಸಲ ಭಾಗ್ಯವೇ ಕೈ ಹಿಡಿದಿತ್ತು. ಮಾತು ಮಾತಿಗೂ ಕಣ್ಣೀರು ಸುರಿಸುವ ಅವರ ಸ್ವಭಾವದಿಂದ ಅಳುಮುಂಜಿಯಾಗಿ ಬಿಂಬಿತವಾಗಿದ್ದರೂ, ಅವರು ಇಷ್ಟು ವಾರಗಳ ಕಾಲ ಬಿಗ್‌ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದರು. ಹಾಗೆ ನೋಡಿದರೆ ಎರಡು ವಾರಗಳ ಹಿಂದೆಯೇ ಅವರು ಬಿಗ್‌ಬಾಸ್ ಮನೆಯಿಂದ ಹೊರಗೆ ಹೋಗಬೇಕಾಗಿತ್ತು. ಸುದೀಪ್‌ ಅವರು, ಭಾಗ್ಯಶ್ರೀ ಎಲಿಮಿನೇಟ್ ಆಗಿರುವ ಸಂಗತಿಯನ್ನು ಘೋಷಿಸಿದ್ದರು ಕೂಡ. ಆದರೆ ಬಿಗ್‌ಬಾಸ್ ಮನೆಯ ಬಾಗಿಲು ತೆರೆದಿರಲಿಲ್ಲ. ಆ ವಾರ ಹಬ್ಬದ ಕಾರಣಕ್ಕಾಗಿ ಯಾರನ್ನೂ ಎಲಿಮಿನೇಟ್ ಮಾಡದೇ ಉಳಿಸಿಕೊಂಡಿದ್ದರು ಬಿಗ್‌ಬಾಸ್. ಅದರ ಮುಂದಿನ ವಾರ ಪ್ರತಾಪ್‌ ಅವರು ಭಾಗ್ಯಶ್ರೀಯನ್ನು ನಾಮಿನೇಷನ್‌ ಪಟ್ಟಿಯಿಂದಲೇ ಪಾರುಮಾಡಿದ್ದರು. ಅದಾದ ಮೇಲೆ, ವರ್ತೂರು ಸಂತೋಷ್‌ ಅವರ ಕಾರಣದಿಂದ ಇನ್ನೊಂದು ವಾರ ಎಲಿಮಿನೇಷನ್‌ ನಡೆದಿರಲಿಲ್ಲ. ಈ ವಾರ ಡಬಲ್‌ ಎಲಿಮಿನೇಷನ್‌ನೊಂದಿಗೆ ಕಿಚ್ಚ ವೀಕೆಂಡ್ ಎಪಿಸೋಡಿಗೆ ಬಂದಿದ್ದರು. ಅದರ ಪ್ರಕಾರ ಶನಿವಾರದ ಪಂಚಾಯ್ತಿಯಲ್ಲಿ ಇಶಾನಿ ಅವರು ಎಲಿಮಿನೇಟ್ ಆಗಿದ್ದರು.…

Read More