ಬೆಂಗಳೂರು:- ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಇಂಧನ ಇಲಾಖೆ ಅಮಾನತು ಮಾಡಿದ್ದು, ಮೃತರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಈ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯಿಸಿ, ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEE ಯನ್ನು ಅಮಾನತುಗೊಳಿಸಲಾಗಿದೆ ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.
Author: AIN Author
ಬೆಂಗಳೂರು:- ತಾಯಿ, ಮಗು ಸಜೀವ ದಹನ ಪ್ರಕರಣ ಸಂಬಂಧ ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್ ಮಾಡಲಾಗಿದೆ. ಕಾರ್ಯನಿರ್ವಾಹಕ ಅಭಿಯಂತರ ಶ್ರೀರಾಮ್, ಸಹಾಯಕ ಕಾರ್ಯನಿರ್ವಕ ಅಭಿಯಂತರ ಸುಬ್ರಹ್ಮಣ್ಯ, ವೈಟ್ ಫೀಲ್ಡ್ ವಿಭಾಗದ ಸಹಾಯಕ ಅಭಿಯಂತರ ಚೇತನ್, ವೈಟ್ ಫೀಲ್ಡ್ ವಿಭಾಗದ ಕಿರಿಯ ಅಭಿಯಂತರ ರಾಜಣ್ಣ, ಸ್ಟೇಷನ್ ಆಪರೇಟರ್ ಮಂಜುನಾಥ್ ಬಂಧಿತರಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ. ಬೆಂಗಳೂರಿನ ವೈಟ್ಫೀಲ್ಡ್ನ ಕಾಡುಗೋಡಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಎರಡು ಅಮಾಯಕ ಜೀವಗಳು ಬಲಿಯಾಗಿದ್ದವು. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಸೌಂದರ್ಯ (23) ಮತ್ತು 9 ತಿಂಗಳ ಮಗು ಲೀಲಾ ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದರು.
ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಅವರ ಶತಕದ ನೆರವಿನಿಂದ ಆತಿಥೇಯ ಭಾರತ ವಿರುದ್ಧ ಭರ್ಜರಿ ಜಯ ದಾಖಲಿಸಿದ ಆಸ್ಟ್ರೇಲಿಯಾ 6ನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಭಾರತ ನೀಡಿದ 241 ರನ್ಗಳ ಸಾಧಾರಣ ಗುರಿ ಬೆನ್ನತ್ತಿದ ಆಸಿಸ್ ಕೇವಲ 43 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 241 ರನ್ ಗಳಿಸುವ ಮೂಲಕ 6 ವಿಕೆಟ್ಗಳ ಅಂತರದಲ್ಲಿ ಸುಲಭವಾಗಿ ಗುರಿ ಮುಟ್ಟಿತು. ಕೇವಲ 47 ರನ್ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡ ಸಂಕಷ್ಟಕ್ಕೆ ಸಿಲುಕಿದ ಆಸಿಸ್ಗೆ ಟ್ರಾವಿಸ್ ಹೆಡ್ ಆಪತ್ಭಾಂದವರಾದರು. ನಿರ್ಣಾಯಕ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ ಹೆಡ್, ಆಸಿಸ್ಗೆ ಸುಲಭ ಗೆಲುವು ತಂದುಕೊಟ್ಟರು. ಭಾರತೀಯ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಹೆಡ್, ಅಕ್ಷರಶಃ ಅಮೋಘ ಆಟವಾಡಿದರು. ಲಬುಶೇನ್ ಸಾಥ್ ಹೆಡ್ ಜತೆಗೆ ಮಾರ್ನಸ್ ಲಬುಶೇನ್ ಉತ್ತಮ ಸಾಥ್ ನೀಡಿದರು. ಈ ಜೋಡಿ ನಿರ್ಣಾಯಕ ಪಂದ್ಯದಲ್ಲಿ 192 ರನ್ಗಳ ಅಮೋಘ ಜತೆಯಾಟವಾಡಿದರು. ತಾಳ್ಮೆಯ ಆಟವಾಡಿದ ಲಬುಶೇನ್ 110 ಎಸೆತಗಳಲ್ಲಿ 4…
ಬೆಂಗಳೂರು:- ಕುಮಾರಣ್ಣ ಬುದ್ಧಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾನು ನೀಲಿ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೆ ಎಂದು ಆರೋಪ ಮಾಡಿರುವ ಕುಮಾರಣ್ಣ ಬುದ್ಧಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಎಂದರು. ನಾನು ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಟೂರಿಂಗ್ ಟಾಕೀಸ್ ಗಳನ್ನು ಇಟ್ಟಿದ್ದೇ. ಒಂದಲ್ಲ ಮೂರ್ನಾಲ್ಕು ಕಡೆ ಟೆಂಟ್ಗಳನ್ನು ಇಟ್ಟಿದ್ದೆ. ದೊಡ್ಡಆಲಹಳ್ಳಿ, ಹಾರೋಬೆಲೆ, ಕೋಡಿಹಳ್ಳಿಗಳಲ್ಲಿ ನಡೆಸುತ್ತಿದ್ದೆ. ಹುಣಸೇಹಳ್ಳಿಯಲ್ಲಿ ಈಗಲೂ ಟೆಂಟ್ ಇದೆ. ಈ ಊರುಗಳಿಗೆ ಹೋಗಿ ಮಾದ್ಯಮದವರೇ ಸಮೀಕ್ಷೆ ನಡೆಸಿ, ನಾನು ಯಾವ ಚಿತ್ರಗಳ ಪ್ರದರ್ಶನ ಮಾಡಿಸುತ್ತಿದ್ದೆ ಎಂದು ಜನರ ಬಳಿ ಕೇಳಿ. ಕುಮಾರಸ್ವಾಮಿ ಅವರಿಗೆ ನೀವೆ ಉತ್ತರಿಸಿ ಎಂದರು. ಕುಮಾರಸ್ವಾಮಿ ಪದೇ, ಪದ ನಿಮ್ಮ ಮೇಲೆ ಸರಣಿ ಆರೋಪಗಳನ್ನು ಮಾಡುತ್ತಿರುವುದರ ಹಿಂದಿನ ಕಾರಣವೇನು ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ‘ಅವರು ದೊಡ್ಡವರು, ಏನೇ ಹೇಳಿದರು ನಾವು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ಅವರು ಬಳಸುತ್ತಾರೆ ಎಂದು ನಾನು ಏಕವಚನ ಬಳಸುವುದಿಲ್ಲ. ಅದು ಅವರ ಸಂಸ್ಕೃತಿ.…
ವಿಜಯಪುರ:-ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ತಿಕೋಟಾ ತಾಲೂಕಿನಲ್ಲಿ ಅತೀ ಹೆಚ್ಚು ಪಂಚಮಸಾಲಿ ಸಮಾಜದವರು ಇರುವ ಗ್ರಾಮವೆಂದರೆ ಅದು ಕನಮಡಿ ಗ್ರಾಮ, ಇಲ್ಲಿಯೇ ಪಂಚಮಸಾಲಿ ಸಮಾಜದ ಮೀಸಲಾತಿ ಹಕ್ಕೊತ್ತಾಯ ಬೃಹತ್ ಸಮಾವೇಶ ಮಾಡಲಿದ್ದೇವೆ” ಎಂದರು. “ರಾಣಿ ಚೆನ್ನಮ್ಮ ಅವರ ಜಯಂತ್ಯುತ್ಸವ ಮಾಡಬೇಕೆಂದು ಸಮಾಜದ ಬಾಂಧವರು ಆಲೋಚನೆ ಮಾಡಿರುವುದರಿಂದ ನವೆಂಬರ್ 21ರಂದು ಬೆಳಗ್ಗೆ 11 ಗಂಟೆಗೆ ಚೆನ್ನಮ್ಮನ ಭಾವಚಿತ್ರದ ಭವ್ಯವಾದ ರ್ಯಾಲಿ ಮೂಲಕ, ಕನಮಡಿ ಮತ್ತು ವಿಜಯಪುರ ನೂತನ ರಾಜ್ಯ ಹೆದ್ದಾರಿಯಲ್ಲಿ 30 ನಿಮಿಷ ರಸ್ತೆ ಬಂದ್ ಮಾಡುತ್ತೇವೆ. ಈ ವೇಳೆ ಇಷ್ಟಲಿಂಗ ಪೂಜೆ ಜೊತೆ ಹೋರಾಟ ಮಾಡಿ, ಪಕ್ಕದಲ್ಲಿರುವ ಧರಿದೇವರ ಪ್ರೌಢಶಾಲೆ ಆವರಣದಲ್ಲಿ ಬೃಹತ್ ಸಮಾವೇಶವನ್ನು ಮಾಡಲಾಗುತ್ತದೆ. ಈ ಮೂಲಕ ತಿಕೋಟಾದಲ್ಲಿಯೂ ಸಮಾಜ ಜಾಗೃತಿಗೊಳಿಸುವ ಕೆಲಸ ಮಾಡಬೇಕೆಂದು ಸಮಾಜದ ಮುಖಂಡರೆಲ್ಲಾ ಸೇರಿ ಆಲೋಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ” ಎಂದು ತಿಳಿಸಿದರು ಬರುವ ಚಲಿಗಾಲದ…
ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ODI ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲಿ ಆಸಿಸ್ ವಿರುದ್ಧ ಭಾರತ ಹೀನಾಯ ಸೋಲು ಕಂಡಿದೆ. ಮೊದಲು ಟಾಸ್ ಗೆದ್ದ ಆಸ್ಟ್ರೇಲಿಯಾ ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಅದರನ್ವಯ ಬ್ಯಾಟಿಂಗ್ ಗೆ ಬಂದ ಭಾರತ ಆರಂಭದಲ್ಲೇ ಆಘಾತ ಅನುಭವಿಸಿತು. ಆಸ್ಟ್ರೇಲಿಯಾ ತಂಡದ ಬೌಲರ್ ಗಳ ದಾಳಿಗೆ ಅಕ್ಷರಸಹ ನಲುಗಿ ಹೋಗಿತ್ತು. ಅದರನ್ವಯ 50 ಓವರ್ ಗಳಲ್ಲಿ 10 ವಿಕೆಟ್ ಗಳ ನಷ್ಟಕ್ಕೆ ಕೇವಲ 240 ಸುಲಭದ ಗುರಿ ನೀಡಿತ್ತು. ಭಾರತ ತಂಡ ನೀಡಿದ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 43 ಓವರ್ ಗಳಲ್ಲಿ 4 ವಿಕೆಟ್ ಗಳ ನಷ್ಟಕ್ಕೆ 241 ರನ್ ಗಳಿಸುವ ಮೂಲಕ ಗೆದ್ದು ಬೀಗಿದೆ. ಈ ಮೂಲಕ ಭಾರತ ತಂಡದ ಅಭಿಮಾನಿಗಳ ಆಸೆ ನುಚ್ಚು ನೂರಾಗಿದೆ. ಕಳೆದ ಹತ್ತು ಪಂದ್ಯಗಳಲ್ಲಿ ಚೆನ್ನಾಗಿ ಆರ್ಭಟಿಸಿದ್ದ ಟೀಮ್ ಇಂಡಿಯಾ ಕೊನೆಯ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿರುವುದು ಅಭಿಮಾನಿಗಳಲ್ಲಿ ಬೇಸರ ತರಿಸಿದೆ.
ಬಾಗಲಕೋಟೆ:- ನಾವು ಆಪರೇಷನ್ ಹಸ್ತ ಮಾಡುವುದಿಲ್ಲ, ಜ.26ರವರೆಗೆ ಕಾದು ನೋಡಿ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಸೇರ್ಪಡೆಗೆ ಹಲವು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಂಪರ್ಕದಲ್ಲಿದ್ದಾರೆ. ಯಾರು ಬರಲಿದ್ದಾರೆ ಎಂಬುದಕ್ಕೆ ಜ.26ರವರೆಗೆ ಕಾದು ನೋಡಿ ಎಂದರು. ಆಪರೇಷನ್ ಹಸ್ತ ಮಾಡುವುದಿಲ್ಲ. ಅವರೇ ನಮ್ಮ ಪಕ್ಷದ ತತ್ವ, ಸಿದ್ದಾಂತ ಮೆಚ್ಚಿ ಬರಲಿದ್ದಾರೆ. ಕರೆದುಕೊಂಡು ಬಂದ ಮೇಲೆ ಸೂಕ್ತ ಸ್ಥಾನಮಾನ ಕೊಡಬೇಕಾಗುತ್ತದೆ. ಸೇರ್ಪಡೆ ಮಾಡಿಕೊಳ್ಳಲು ಯಾವುದೇ ಅವಸರ ಮಾಡುವುದಿಲ್ಲ ಎಂದರು. ಬಿಜೆಪಿ, ಜೆಡಿಎಸ್ ನಾಯಕರು ತಮ್ಮ ಶಾಸಕರು ಹಾಗೂ ಮುಖಂಡರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಐದು ವರ್ಷ ಸರ್ಕಾರ ಸುಭದ್ರವಾಗಿರಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರಿದ್ದಾರೆ. ಈಗ ಬಿಜೆಪಿ ಅಧ್ಯಕ್ಷರಾಗಿರುವವರು ಶಿವಮೊಗ್ಗ, ಮೈಸೂರಿಗೆ ಸೀಮಿತವಾದವರು. ಅವರ ಪ್ರಭಾವ ಇಲ್ಲಿಲ್ಲ. ಬಿಜೆಪಿಗೆ ಲಿಂಗಾಯತರನ್ನು ಅದ್ಯಕ್ಷರನ್ನಾಗಿ ಮಾಡಿದ್ದೇವೆ ಎಂಬುದರ ಲಾಭ ದೊರೆಯುವುದಿಲ್ಲ ಎಂದು ಹೇಳಿದರು. ಅಧ್ಯಕ್ಷರ ನೇಮಕಾತಿಯ ಬಗ್ಗೆ ಬಿಜೆಪಿಯಲ್ಲಿ…
ಬೆಂಗಳೂರು:- ಕುಂಬಾರ್ ಪೇಟೆ ,ಡಿಎಸ್ ಲೇನ್ ,ಎಸ್ ಪಿ ರೋಡ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪ್ಲಾಸ್ಟಿಕ್ ಗೋದಾಮುಗೆ ಬೆಂಕಿ ತಗುಲಿದೆ. ಮಕ್ಕಳ ಆಟದ ಸಾಮಾನು,ಎಲೆಕ್ಟ್ರಾನಿಕ್ ವಸ್ತು ಇರೋ ಗೋಡೌನ್ ಇದಾಗಿದ್ದು, ಮೂರು ಹಾಗೂ ನಾಲ್ಕನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪ್ಲಾಸ್ಟಿಕ್ ಗೋದಾಮುಗೆ ಬೆಂಕಿ ತಗುಲಿರೋ ಶಂಕೆ ವ್ಯಕ್ತವಾಗಿದ್ದು, ಮೂರು ಹಾಗೂ ನಾಲ್ಕನೇ ಮಹಡಿಯಲ್ಲಿ ದಟ್ಟ ಹೊಗೆ ಹಾಗೂ ಬೆಂಕಿ ದತ್ತವಾಗಿದೆ. ಸ್ಥಳದಲ್ಲಿ ೫ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆ.ಆರ್ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ರಾಮನಗರ:-ದರ್ಗಾದಲ್ಲಿ ಪ್ರಸಾದ ಎಂದು ನೀಡಿದ ಸಿಹಿ ಪದಾರ್ಥ ತಿಂದು ೨೦ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ರಾಮನಗರದ ಎಂ.ಜಿ.ರಸ್ತೆಯಲ್ಲಿರುವ ಪಿಎಸ್ವಿ ದರ್ಗಾದಲ್ಲಿ ಜರುಗಿದೆ. ದರ್ಗಾದಲ್ಲಿ ನಡೆಯುತ್ತಿದ್ದ ಗಂಧಮಹೋತ್ಸವದ ವೇಳೆ ಸಿಹಿ ಹಂಚಿಕೆ ಮಾಡಲಾಗಿತ್ತು. ಈ ಸಿಹಿಯನ್ನು ೭೦ಕ್ಕೂ ಹೆಚ್ಚು ಮಂದಿ ಸೇವನೆ ಮಾಡಿದರು. ಕೂಡಲೇ ಸಿಹಿ ತಿಂದಿದ್ದ ವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಕೂಡಲೇ ವಾಂತಿಮಾಡಿಕೊಂಡು ೨೦ ಮಂದಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕೂಡಲೇ ವಿಷಯ ತಿಳಿದ ಅಧಿಕಾರಿಗಳು, ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಬರ್ ಖದೀಮರ ಕಾಟ ಜೋರಾಗಿದೆ. ಅದರ ಭಾಗವಾಗಿ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ವೈದ್ಯ ಮತ್ತು ಇಬ್ಬರು ಸಾಫ್ಟ್ವೇರ್ ಎಂಜಿನಿಯರ್ಗಳಿಗೆ ಸೈಬರ್ ಅಪರಾಧಿಗಳು 63 ಲಕ್ಷ ರೂಪಾಯಿಗಳನ್ನು ವಂಚಿಸಿದ ಪ್ರಕರಣಗಳು ಬೆಳಕಿಗೆ ಬಂದಿವೆ. ಕೋರಮಂಗಲದ ನಿವಾಸಿಯಾಗಿರುವ ವೈದ್ಯೆ ಗುರುವಾರ ಆಗ್ನೇಯ ಸೈಬರ್ ಕ್ರೈಂ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಕೊರಿಯರ್ ಕಂಪನಿಯೊಂದರ ಕಾರ್ಯನಿರ್ವಾಹಕ ಎಂದು ಹೇಳಿಕೊಂಡು ಅಪರಿಚಿತ ವ್ಯಕ್ತಿಯಿಂದ ತನಗೆ ಕರೆ ಬಂದಿದ್ದು, ತನ್ನ ಹೆಸರಿನಲ್ಲಿ ನಿಷೇಧಿತ ವಸ್ತುಗಳ ಪಾರ್ಸೆಲ್ ಇದೆ ಎಂದು ತಿಳಿಸಿದ್ದಾರೆ. ಬಳಿಕ ಅಪ್ಲಿಕೇಶನ್ವೊಂದನ್ನು ಡೌನ್ಲೋಡ್ ಮಾಡಲು ಹೇಳಿದರು. ಆಘಾತಕ್ಕೊಳಗಾದ ಅವರು, ಕರೆ ಮಾಡಿದ ಆರೋಪವನ್ನು ನಿರಾಕರಿಸಲು ಪ್ರಯತ್ನಿಸಿದರು. ಈ ವೇಳೆ ಸೈಬರ್ ವಂಚಕರು ಆಕೆಯ ಬ್ಯಾಂಕ್ ಖಾತೆಗಳನ್ನು ಕ್ರಾಸ್ ಚೆಕ್ ಮಾಡುವ ನೆಪದಲ್ಲಿ ವಿವರಗಳನ್ನು ಪಡೆದುಕೊಂಡು 7.6 ಲಕ್ಷ ವರ್ಗಾಯಿಸಿದ್ದಾರೆ. ತನ್ನ ಖಾತೆಯಿಂದ ಹಣ ಕಡಿತಗೊಂಡ ಬಗ್ಗೆ ಮೆಸೇಜ್ ಬಂದಾಕ್ಷಣವೇ ಅಪರಿಚಿತ ವ್ಯಕ್ತಿಯನ್ನು ಸಂಪರ್ಕಿಸಲು ಯತ್ನಿಸಿದಾಗ ಸಾಧ್ಯವಾಗಲಿಲ್ಲ. ಈ ವೇಳೆ ತಾನು…