Author: AIN Author

ಸ್ವತಂತ್ರ ಪ್ಯಾಲೆಸ್ತೀನ್​ ಎಂಬ ಬರಹವುಳ್ಳ ಟೀ ಶರ್ಟ್​ ಧರಿಸಿದ ವ್ಯಕ್ತಿಯೊಬ್ಬ ಪಂದ್ಯ ವೇಳೆ ಕ್ರೀಡಾಂಗಣಕ್ಕೆ ನುಸುಳಿ ವಿರಾಟ್​ ಕೊಹ್ಲಿ ಅವರನ್ನು ಅಪ್ಪಿಕೊಳ್ಳಲು ಯತ್ನಿಸುವ ಮೂಲಕ ಆತಂಕದ ವಾತಾವರಣವನ್ನು ಸೃಷ್ಟಿಸಿದರು. ವಿಶ್ವಕಪ್​ ಫೈನಲ್ ಪಂದ್ಯದ ವೇಳೆ ಭದ್ರತಾ ಉಲ್ಲಂಘನೆ ವರದಿಯಾಗಿದೆ. ಕೆಂಪು ಬಣ್ಣದ ಶಾರ್ಟ್ಸ್ ಧರಿಸಿದ್ದ ವ್ಯಕ್ತಿ ತಾನು ಧರಿಸಿದ್ದ ಟೀ ಶರ್ಟ್ಸ್​ ಮುಂಭಾಗದಲ್ಲಿ ಪ್ಯಾಲೆಸ್ತೀನ್ ಮೇಲಿನ ಬಾಂಬ್​ ದಾಳಿ ನಿಲ್ಲಿಸಿ ಮತ್ತು ಹಿಂಭಾಗದಲ್ಲಿ ಸ್ವತಂತ್ರ ಪ್ಯಾಲೆಸ್ತೀನ್ ಎಂಬ ಸಂದೇಶ ಹೊಂದಿದ್ದರು. ಅಲ್ಲೆ, ಪ್ಯಾಲೆಸ್ತೀನ್​ ಬಣ್ಣದ ಫೇಸ್​ ಮಾಸ್ಕ್​ ಸಹ ಧರಿಸಿದ್ದರು. ಅ.7ರಂದು 5 ಸಾವಿರ ರಾಕೆಟ್​ಗಳಿಂದ ಇಸ್ರೇಲ್​ ಮೇಲೆ ಪ್ಯಾಲೆಸ್ತೀನ್​ನ ಹಮಾಸ್​ ಉಗ್ರರು ದಿಢೀರನೇ ದಾಳಿ ಮಾಡಿರುವುದಕ್ಕೆ ಪ್ರತಿಯಾಗಿ ಇಸ್ರೇಲ್​ ಸೇನೆ ಪ್ರತೀಕಾರವನ್ನು ತೀರಿಸಿಕೊಳ್ಳುತ್ತಿದ್ದು, ಇಸ್ರೇಲ್​ ಮತ್ತು ಹಮಾಸ್​ ನಡುವಿನ ಯುದ್ಧ ಆರಂಭವಾಗಿ ಒಂದೂವರೆ ತಿಂಗಳ ಸಮೀಪಕ್ಕೆ ಬಂದಿದೆ. ಪ್ಯಾಲೆಸ್ತೀನ್​ನಲ್ಲಿ ಹಮಾಸ್​ ಹೊರತುಪಡಿಸಿ ಸಾಮಾನ್ಯ ನಾಗರಿಕರ ಮೇಲಿನ ದಾಳಿಯ ವಿರುದ್ಧ ಜಗತ್ತಿನಾದ್ಯಂತ ಭಾರೀ ಖಂಡನೆಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಗಮನ ಸೆಳೆಯಲು…

Read More

ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ದತೆ ನಡೆದಿದೆ. ನಂದಿ ಚಲನಚಿತ್ರ ಪ್ರಶಸ್ತಿ-2023ರ ಕರ್ಟನ್ ರೈಸ್ ಗೆ ಕಿಚ್ಚ ಸುದೀಪ್ ಚಾಲನೆ ನೀಡಿ ಹೊಸ ಪ್ರಶಸ್ತಿ ಸಮಾರಂಭಕ್ಕೆ ಶುಭ ಹಾರೈಸಿದರು. ಕಿಚ್ಚ ಸುದೀಪ್ ಮಾತನಾಡಿ, ‌ಸಂಸ್ಥಾಪಕರಿಗೆ ಒಳ್ಳೆದಾಗಲಿ. ಅವಾರ್ಡ್ಸ್ ಕಾರ್ಯಕ್ರಮಕ್ಕೆ ಹೋಗುವುದು ಬಿಟ್ಟು 2003-2004 ಕೊನೆ.‌ಆ ಬಳಿಕ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಹೋಗೇ ಇಲ್ಲ. ಅದಕ್ಕೆ ಬೇರೆ ಇತಿಹಾಸವಿದೆ. ‌ಆದರೆ ಇಲ್ಲಿ ಆ ಅವಾರ್ಡ್ಸ್ ಮಹತ್ವ ಬೇರೆ ಕಲಾವಿದರಿಗೆ ಆಗಲಿ. ಎಲ್ಲರಿಗೂ ಎಷ್ಟು ಮುಖ್ಯ ಎನ್ನುವುದನ್ನು ನೋಡಿದ್ದೇನೆ. ನನ್ನ ಮನವಿ ಏನೆಂದರೆ ಯಾರಿಗೆ ಹೋಗಬೇಕು ಅವರಿಗೆ ಹೋಗಲಿ. ಮಿಕ್ಕಿದವರೆಲ್ಲಾ ದುಡ್ಡು ಮಾಡುತ್ತಿದ್ದಾರೆ. ಅವಾರ್ಡ್, ದುಡ್ಡು ಅಂತಾ ನೋಡಿದಾಗ ಪ್ರಶಸ್ತಿ ಬಿಟ್ಟು ದುಡ್ಡಿಗೆ ಕೈ ಹಾಕುವವರು ಇದ್ದಾರೆ. ಪ್ರಶಸ್ತಿಗೆ ಗೌರವ ಕೊಟ್ಟು ಅದಕ್ಕಾಗಿ ಬಾಳಿ ಬದುಕುವವರಿಗೆ ಅವರಿಗೆ ನೀಡಿ. ನಂದಿ ಬಹಳ ಶ್ರೇಷ್ಠ. ಅದರ ಹೆಸರಲ್ಲಿ ನಡೆಸುತ್ತೀರಾ ಎಂದರೆ ಅಷ್ಟೇ ಶುದ್ಧವಾಗಿ ಇರಲಿ. ಕರ್ನಾಟಕದಲ್ಲಿ…

Read More

ನವದೆಹಲಿ: ನಾಳೆಯಿಂದ ರಾಷ್ಟ್ರಪತಿ ಮುರ್ಮು ಅವರು, 3 ದಿನಗಳ ಕಾಲ ಒಡಿಶಾ, ಆಂಧ್ರಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ.20-22ರವರೆಗೆ ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ಭಾನುವಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. ನ.20ರಂದು ಮುರ್ಮು ಅವರು, ‘ಒಡಿಶಾದ ಬರಿಪದದಲ್ಲಿ ಅಖಿಲ ಭಾರತ ಸಂತಾಲಿ ಲೇಖಕರ ಸಂಘದ 36ನೇ ವಾರ್ಷಿಕ ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ. ಅದೇ ದಿನ ಅವರು ಕುಲಿಯಾನದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಸಹ ಉದ್ಘಾಟಿಸಲಿದ್ದಾರೆ’ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ನ.21 ರಂದು ಪಹಾದ್‌ಪುರ ಗ್ರಾಮದಲ್ಲಿ ಕೌಶಲ್ಯ ತರಬೇತಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ತರುವಾಯ ಬದಂಪಹಾರ್ ರೈಲು ನಿಲ್ದಾಣಕ್ಕೆ ಭೇಟಿ ಅಲ್ಲಿ ಅವರು ಮೂರು ಹೊಸ ರೈಲು(ಬದಂಪಹಾರ್- ಟಾಟಾನಗರ, ಬದಂಪಹಾರ್-ರೂರ್ಕೆಲಾ ಎಕ್ಸ್‌ಪ್ರೆಸ್ ಮತ್ತು ಬದಂಪಹಾರ್-ಶಾಲಿಮಾರ್ ಎಕ್ಸ್‌ಪ್ರೆಸ್) ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಅವರು ಬದಂಪಹಾರ್-ಶಾಲಿಮಾರ್ ಎಕ್ಸ್‌ಪ್ರೆಸ್‌ನಲ್ಲಿ ಬದಂಪಹಾರ್‌ನಿಂದ ರೈರಂಗಪುರಕ್ಕೆ ಪ್ರಯಾಣಿಸುತ್ತಾರೆ. ಅದೇ ದಿನ ಸಂಜೆ ಬುರ್ಲಾದ ವೀರ್…

Read More

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಶ್ವಕಪ್ ಕೊನೆಯ ಲೀಗ್ ಪಂದ್ಯದಲ್ಲಿ 241 ರನ್​ಗಳ ಸಾಧಾರಣ ಗುರಿ ಬೆನ್ನತ್ತಿರುವ ಆಸ್ಟ್ರೇಲಿಯಾ ಕೇವಲ 43 ರನ್​ಗಳಿಗೆ ಪ್ರಮುಖ 3 ವಿಕೆಟ್​ ಕಳೆದುಕೊಳ್ಳುವ ಮೂಲಕ ಭಾರೀ ಸಂಕಷ್ಟಕ್ಕೆ ಸಿಲುಕಿದೆ. ಇನ್ನೆರೆಡು ವಿಕೆಟ್​ ಬೇಗ ಉರುಳಿದರೆ, ಭಾರತದ ಪಾಲಿಗೆ ವಿಜಯಲಕ್ಷ್ಮೀ ಸುಲಭವಾಗಿ ಒಲಿಯಲಿದ್ದಾಳೆ. ಮೊಹಮ್ಮದ್​ ಶಮಿ ಮತ್ತು ಜಸ್​ಪ್ರೀತ್​ ಬುಮ್ರಾ ತಮ್ಮ ಬೌಲಿಂಗ್​ನಲ್ಲಿ ಕಮಾಲ್​ ಮಾಡುತ್ತಿದ್ದು, ಆಸಿಸ್​ ಪಡೆಗೆ ಬಹುದೊಡ್ಡ ಸವಾಲಾಗಿದ್ದಾರೆ. ತಂಡದ ಮೊತ್ತ 16 ರನ್​ ಇದ್ದಾಗ 7 ರನ್​ ಗಳಿಸಿದ್ದ ಡೇವಿಡ್​ ವಾರ್ನರ್​ ಮೊಹಮ್ಮದ್​ ಶಮಿ ಓವರ್​ನಲ್ಲಿ ಕೊಹ್ಲಿಗೆ ಕ್ಯಾಚಿತ್ತು ನಿರ್ಗಮಿಸುವ ಮೂಲಕ ಆರಂಭಿಕ ಆಘಾತ ನೀಡಿದರು. ಇದರ ಬೆನ್ನಲ್ಲೇ ನಾನೇನು ಕಮ್ಮಿ ಎನ್ನುವಂತೆ ನಿರ್ಣಾಯಕ ಪಂದ್ಯದಲ್ಲಿ ಮಾರಕ ಬೌಲಿಂಗ್​ ದಾಳಿ ಮಾಡಿದ ಬುಮ್ರಾ, ಮಿಚೆಲ್​ ಮಾರ್ಷ್​ (15) ಮತ್ತು ಸ್ಟೀವ್​ ಸ್ಮಿತ್​ (4) ಅವರನ್ನು ಬಂದಷ್ಟೇ ವೇಗವಾಗಿ ಪೆವಿಲಿಯನ್​ ಅಟ್ಟಿದರು. ಕೇವಲ 43 ರನ್​ಗೆ ಪ್ರಮುಖ 3 ವಿಕೆಟ್​ ಕಳೆದುಕೊಳ್ಳುವ ಮೂಲಕ ಆಸಿಸ್​…

Read More

ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿರೋಧ ಪಕ್ಷದ ನಾಯಕನನ್ನು ಬಿಎಸ್​ ಯಡಿಯೂರಪ್ಪ ಬಣದ ನಾಯಕರಿಗೆ ನೀಡಿದ್ದು, ಯತ್ನಾಳ್ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ಕೆಂಡಾಮಂಡಲರಾಗಿದ್ದಾರೆ. ಇನ್ನು ಯತ್ನಾಳ್ ಅಸಮಾಧಾನದ ಬಗ್ಗೆ ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಯತ್ನಾಳ್ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗುತ್ತಿದೆ. ಅವರ ಅಭಿಪ್ರಾಯವನ್ನ ಹೇಳಲು ಸ್ವತಂತ್ರರಿದ್ದಾರೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಅವರವರ ಅಭಿಪ್ರಾಯಗಳು ಇರುತ್ತೆ. ಎಲ್ಲರ ಅಭಿಪ್ರಾಯದ ಮೇರೆಗೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪರೋಕ್ಷವಾಗಿ ಯತ್ನಾಳ್​ಗೆ ಟಾಂಗ್ ಕೊಟ್ಟರು. ಯತ್ನಾಳ್ ಜೀ ಕೆಲವು ನೋವಿನಿಂದ ಹೇಳಿದ್ದಾರೆ. ಕೆಲವು ಸಮಸ್ಯೆಗಳನ್ನ ಹೇಳಿಕೊಂಡಿರಬಹುದು. ಎಲ್ಲವನ್ನು ಹಿರಿಯರು ಕುಳಿತು ಸಮಾಲೋಚನೆ ಮಾಡಿ ಉತ್ತರ ಕಂಡುಕೊಳ್ಳುತ್ತೇವೆ ಎಂದು ಹೇಳಿದರು. ಇನ್ನು ಇದೇ ವೇಳೆ ವಿಪಕ್ಷ ನಾಯಕ ಆರ್ ಅಶೋಕ್ ಅಸಮರ್ಥರೆಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ದು, ಯಾರ ಸಾಮರ್ಥ್ಯ ಏನು ಎಂದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ತೀರ್ಮಾನ ಮಾಡುತ್ತಾರೆ. ಅದನ್ನ…

Read More

ಬೆಂಗಳೂರು:- ನಗರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನಿಮ್ಹಾನ್ಸ್ ನಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 34 ನ್ಯೂರೋಲಜಿಸ್ಟ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 20, 2023 ಅಂದರೆ ನಾಳೆ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂಡಿ, ಡಿಎಮ್​, ಡಿಎನ್​ಬಿ ಪೂರ್ಣಗೊಳಿಸಿರಬೇಕು. ವಯೋಮಿತಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 60 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ಮಾಸಿಕ ₹ 75,000-1,50,000 ಉದ್ಯೋಗದ ಸ್ಥಳ: ಕರ್ನಾಟಕ ಆಯ್ಕೆ ಪ್ರಕ್ರಿಯೆ: ಲಿಖಿತ…

Read More

ಮೈಸೂರು:- ಸಿಎಂ ಕುಟುಂಬವನ್ನು ಸಿಲುಕಿಸಬೇಕೆಂಬ ಪ್ರಯತ್ನವನ್ನು ಹೆಚ್ ಡಿ ಕುಮಾರಸ್ವಾಮಿ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. ತಂದೆಯವರ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಏನೂ ಆರೋಪ ಮಾಡಲು ಆಗುತ್ತಿಲ್ಲ. ಹೀಗಾಗಿ ಕುಟುಂಬದವರನ್ನ ಹಣೆಯುವ ಪ್ರಯತ್ನವನ್ನು ಇವರು ಮೊದಲಿನಿಂದಲೂ ಮಾಡುತ್ತಿದ್ದಾರೆ. ಯಾವುದರಲ್ಲದರೂ ಸಿಎಂ ಕುಟುಂಬವನ್ನು ಸಿಲುಕಿಸಬೇಕೆಂಬ ಪ್ರಯತ್ನ ನಡೆಯುತ್ತಿದೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. ವರ್ಗಾವಣೆ ಪ್ರಕ್ರಿಯೆಗೆ ದಂಧೆ ಬಣ್ಣ ಕಟ್ಟುವುದಾದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ನಡೆದ ವರ್ಗಾವಣೆಗಳೆಲ್ಲಾ ದಂಧೆಯೇ? ಅವರು ಹಣ ಪಡೆದೇ ವರ್ಗಾವಣೆ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು. ಇನ್ಸ್‌ಪೆಕ್ಟರ್‌ ವಿವೇಕಾನಂದ ಯಾರು ಎಂಬುದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದ ಟ್ರಾನ್ಸರ್ ಎಲ್ಲಿಗೆ ಆಗಿದೆ. ಆ ಕ್ಷೇತ್ರದ ವ್ಯಾಪ್ತಿ ಯಾವುದು. ಅದರ ಬಗ್ಗೆ ಕ್ಷೇತ್ರದ ಶಾಸಕರನ್ನ ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧ. ನಮ್ಮ ಕ್ಷೇತ್ರದಲ್ಲಿ ಒಬ್ಬರು ಬಿಇಒ ವಿವೇಕಾನಂದ ಇದ್ದಾರೆ. ಇವತ್ತಿನ ವರ್ಗಾವಣೆ ಹೆಸರು ನನಗೆ ಗೊತ್ತಿಲ್ಲ ಎಂದರು.…

Read More

ಬೆಂಗಳೂರು:- ಸಚಿವ ಜಮೀರ್‌ ಅಹ್ಮದ್‌ ವಿರುದ್ಧ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ತೊಡೆತಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅವರಿಗೆ ಅವರ ಧರ್ಮದ ಬಗ್ಗೆ ಅಷ್ಟು ಅಭಿಮಾನ ಇದೆ. ನಮ್ಮ ಧರ್ಮದ ಧರ್ಮಾಭಿಮಾನಕ್ಕೆ ನಾನು ಭಯಪಡುತ್ತೀನಾ. ಹಾಕುವ ಸಮಯ ಬಂದರೆ ದತ್ತಮಾಲೆ ಹಾಕುತ್ತೇನೆ ಎಂದರು. ದತ್ತಮಾಲೆ ಯಾಕೆ ಹಾಕಬಾರದು? ದೇವರ ಕಾರ್ಯಕ್ರಮ ಹಾಕುವ ಸಮಯ ಬಂದರಡ ಹಾಕುತ್ತೇನೆ. ಕಾನೂನು ಬಾಹಿರವಾಗಿ ಯಾವುದನ್ನೂ ಮಾಡುವುದಿಲ್ಲ. ನಮ್ಮ ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ ಎಂದು ಹೇಳಿದರು. ಕರೆಂಟ್ ಕಳ್ಳತನದ ಆರೋಪದ ಬಗ್ಗೆ ಮಾತನಾಡಿದ ಅವರು, ನೀವು ದರೋಡೆ ಮಾಡಿಕೊಂಡು ಕೂತಿದ್ದೀರಾ. ಕೂಲಿ ಮಾಡುವವನು ತಿಳಿಯದೇ ಮಾಡಿದ್ದಾನೆ. ನನಗೆ ಗೊತ್ತಿಲ್ಲ ಅನ್ನಬಹುದಿತ್ತು, ನಾನು ಹಾಗೆ ಹೇಳಿಲ್ಲ. ಶೋಭಾ ಅಪಾರ್ಟ್‌ಮೆಂಟ್‌ ಕಟ್ಟಿದ್ದಾರೆ. ರಾಜೇಂದ್ರ ಚೋಳನ್ ಅದೇ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ. ಅದಕ್ಕೆ ಆರು ತಿಂಗಳು ಎಷ್ಟು ಬಿಲ್ ಬಂದಿದೆ ಕೇಳಿ. ಆತ ಬೆಸ್ಕಾಂ ಎಂ.ಡಿ ಆಗಿದ್ದ, ಅದಕ್ಕೆ ಬಿಲ್ ಎಷ್ಟು ಬಂತು ಎಂದು ಪ್ರಶ್ನಿಸಿದರು. ಇನ್ನು ಉಪ…

Read More

ಬೆಂಗಳೂರು:- ಕುಮಾರಸ್ವಾಮಿ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್​ಗಳನ್ನೂ ಮಾಡಿದರೂ, ಅವುಗಳಿಗೆ ಉತ್ತರಿಸುವ ಅವಶ್ಯಕತೆಯಿಲ್ಲ. ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೂ ಹೇಳಿದಂತೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದರು. ಭಾರತ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಕ್ರಿಕೆಟ್ ಪೈನಲ್ ಪಂದ್ಯದ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಶುಭ ಕೋರಿದ ಮುಖ್ಯಮಂತ್ರಿಗಳು, ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಈ ಬಾರಿಯ ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದರು.

Read More

ಬೆಂಗಳೂರು:- ಸಚಿವ ಸತೀಶ್ ಜಾರಕಿಹೊಳಿ ವಿದೇಶಕ್ಕೆ ಹಾರಿದ್ದು, ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ಕರ್ನಾಟಕ ಉಪಮುಖ್ಯಮಂತ್ರಿ & ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಮತ್ತು ಜಾರಕಿಹೊಳಿ ಬ್ರದರ್ಸ್ ಮಧ್ಯೆ ಮುನಿಸು ಇದೆ ಎಂಬುದು ಹಳೇ ಆರೋಪ. ಆದರೆ ಈ ಮುನಿಸು ಇದೀಗ ಜ್ವಾಲೆಯ ರೂಪ ಪಡೆದಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಅದರಲ್ಲೂ ಕೆಲ ದಿನಗಳ ಹಿಂದಷ್ಟೆ, ಇಂತಹದ್ದೇ ಬೆಳವಣಿಗೆ ನಡೆದು ಅದೇ ಸಮಯದಲ್ಲಿ ಖುದ್ದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸತೀಶ್ ಜಾರಕಿಹೊಳಿ ಅವರನ್ನು ಮೀಟ್ ಮಾಡಿ ಮಾತುಕತೆ ನಡೆಸಿದ್ದರು. ಆದರೆ ಈಗ ಮತ್ತೊಮ್ಮೆ ಸತೀಶ್ ಜಾರಕಿಹೊಳಿ ವಿಮಾನ ಏರಿ ತಮ್ಮ ಬೆಂಬಲಿಗರ ಜೊತೆ ವಿದೇಶಕ್ಕೆ ಹಾರಿದ್ದಾರೆ. ಲೋಕೋಪಯೊಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆಪ್ತರ ಜೊತೆಯಲ್ಲಿ ವಿದೇಶಕ್ಕೆ ತೆರಳಿದ್ದಾರೆ. ಅವರ ಈ ನಡೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೂ ಕಾರಣವಾಗಿದೆ. ಅಲ್ದೆ ಕಾಂಗ್ರೆಸ್ ಒಳಗೆ ಅಸಮಾಧಾನದ ಹೊಗೆ ಆವರಿಸಿದೆ ಎನ್ನುವ ಆರೋಪ ಮತ್ತೊಮ್ಮೆ ಕೇಳಿಬಂದಿದೆ.…

Read More