Author: AIN Author

ಬೆಂಗಳೂರು ಹವಾಮಾನ ಕ್ರಿಯೆ ಮತ್ತು ಸ್ಥಿತಿಸ್ಥಾಪಕತ್ವ ಯೋಜನೆಯ(BCAP) ವರದಿಯನ್ನು ವರ್ಲ್ಡ್ ರಿಸೋರ್ಸ್ ಇನ್ ಸ್ಟಿಟ್ಯೂಟ್(WRI) ಇಂಡಿಯಾ ಪ್ರಸ್ತುತಪಡಿಸುತ್ತಿದ್ದು, ಇಂದು ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್ ರವರು ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಬಿಡುಗಡೆಗೊಳಿಸಿದರು. ಬೆಂಗಳೂರು ಹವಾಮಾನ ಕ್ರಿಯೆ ಮತ್ತು ಸ್ಥಿತಿಸ್ಥಾಪಕತ್ವ ಯೋಜನೆಯ(BCAP) ವರದಿಯನ್ನು ಬಿಡುಗಡೆಗೊಳಿಸಲಾಯಿತು.2050ರ ವೇಳೆಗೆ ತಟಸ್ಥ ಇಂಗಾಲ ಮತ್ತು ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಹೊಂದುವ ಗುರಿಯೊಂದಿಗೆ ಸುರಕ್ಷಿತ, ಆರೋಗ್ಯಕರ ಮತ್ತು ಹೆಚ್ಚು ನ್ಯಾಯಸಮ್ಮತ ನಗರಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಾರ್ಗಸೂಚಿಯನ್ನು ರಚಿಸುತ್ತಿದೆ. 2050ರ ವೇಳೆಗೆ ತಟಸ್ಥ ಇಂಗಾಲವನ್ನು ಸಾಧಿಸುವ ದೃಷ್ಟಿಯಿಂದ ಇಂದು ಬೆಂಗಳೂರು ಹವಾಮಾನ ಕ್ರಿಯೆ ಮತ್ತು ಸ್ಥಿತಿಸ್ಥಾಪಕತ್ವ ಯೋಜನೆಯನ್ನು(BCAP) ಪ್ರಾರಂಭಿಸಿದೆ. ಈ ಯೋಜನೆಯು ಬೆಂಗಳೂರು ವಿಶ್ವದಲ್ಲಿನ ಕೆಲವೇ ನಗರಗಳಲ್ಲಿ ಒಂದಾಗಿ ಇರುವಂತೆ ಮತ್ತು ಜಾಗತಿಕ ಗುಣಮಟ್ಟದ ಹವಾಮಾನ ಕ್ರಿಯಾ ಯೋಜನೆಯನ್ನು ಹೊಂದಿರುವ ಭಾರತದ ಮೂರನೇ ನಗರವಾಗಿರುವಂತೆ ಮಾಡಿದೆ. ನಗರದ ಸಿ40 ನಗರಗಳ ಬದ್ಧತೆಯ ಭಾಗವಾಗಿ, ಬೆಂಗಳೂರು ಹಸಿರುಮನೆ ಅನಿಲ(GHG) ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಮತ್ತು…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಜನಸ್ಪಂದನ ಹೆಸರಿನಲ್ಲಿ ಜನತಾದರ್ಶನ (Janatadarshan) ನಡೆಸುತ್ತಿದ್ದು, ಮೊದಲಿಗೆ ವಿಶೇಷ ಚೇತನರ ಮತ್ತು ಹಿರಿಯ ನಾಗರಿಕರ ಅಹವಾಲನ್ನು (Report) ಸ್ವೀಕರಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನವನ್ನು ಆಯೋಜಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ರೈತರು, ಮಹಿಳೆಯರು ಜನತಾ ದರ್ಶನಕ್ಕೆ ಆಗಮಿಸಿದ್ದು, ಸಿಎಂ ಜನತಾದರ್ಶನಕ್ಕೆ ಬಿಗಿ ಪೊಲೀಸ್ ಕಾವಲು ನೇಮಿಸಲಾಗಿದೆ. ಅಹವಾಲು ಸ್ವೀಕಾರ ಮತ್ತು ಪರಿಶೀಲನೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಇತರೇ ಸಹಾಯಕ ಸಿಬ್ಬಂದಿ ಸೇರಿ ಒಟ್ಟು 1,000 ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯದಲ್ಲಿ ಹಾಜರಿದ್ದಾರೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ನಡೆಯುತ್ತಿರುವ ಮೊದಲ ಪೂರ್ಣಾವಧಿ ಜನತಾ ದರ್ಶನ ಇದಾಗಿದೆ. ಜನತಾ ದರ್ಶನದಲ್ಲಿ 20 ಕೌಂಟರ್‌ಗಳು ಹಾಗೂ ನೂರಕ್ಕೂ ಹೆಚ್ಚು ಅಧಿಕಾರಿಗಳ ಉಪಸ್ಥಿತಿಯಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಪ್ರತ್ಯೇಕ ಎರಡು ಕೌಂಟರ್‌ಗಳನ್ನು ಮೀಸಲಿರಿಸಲಾಗಿದೆ. ಅಹವಾಲುಗಳ ದಾಖಲೀಕರಣಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಲವು ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ವೀಕರಿಸಿದ…

Read More

ಧಾರವಾಡ: ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕನೋರ್ವನಿಗೆ ನಾಗರಹಾವು ಕಚ್ಚಿ ಸಾವನಪ್ಪಿರುವ ಘಟನೆ ಧಾರವಾಡದ ಹೆಬ್ಬಳ್ಳಿಯಲ್ಲಿ ನಡೆದಿದೆ.  ಅರುಣ ಬಡಿಗೇರ (9) ಎಂಬ ಬಾಲಕನೇ ಸಾವನ್ನಪ್ಪಿರುವ ಬಾಲಕನಾಗಿದ್ದಾನೆ. ಕಳೆದ ದಿನ ಮನೆಯ ಪಕ್ಕದಲ್ಲೇ ಆಟವಾಡುತ್ತಿದ್ದ ಸಂದರ್ಭದಲ್ಲಿ ಹಾವು ಬಾಲಕನಿಗೆ ಹಾವು ಕಚ್ಚಿದೆ. ಕೂಡಲೇ ಆತನನ್ನು ಚಿಕಿತ್ಸೆಗಾಗಿ ಕಿಮ್ಸ್‌ಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಅರುಣ ಇಂದು ಅಸುನೀಗಿದ್ದಾನೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

Read More

ಬೆಂಗಳೂರು: ಪಕ್ಷದ ನಾಯಕ ಛಾಯಾ ಮುಖ್ಯ ಮಂತ್ರಿ ಇದ್ದಂತೆ ಘನತೆಯಿಂದ ಮಾತನಾಡಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬರದ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯುತ್ ಖರೀದಿ ದುಪ್ಪಟ್ಟು ಮಾಡಲಾಗಿದೆ. ಬಹಳ ಕಷ್ಟ ಅನ್ನುವ ಪರಿಸ್ಥಿತಿ ಈಗ ಇಲ್ಲ. ಭಾಗ್ಯಗಳನ್ನು ಕೊಟ್ಟಿದ್ದೇವೆ ಎಂಬ ನೆಪದಲ್ಲಿ ಜನರಿಗೆ ಬೇರೆ ಸವಲತ್ತುಗಳನ್ನು ಕೊಡುವುದನ್ನು ನಿಲ್ಲಿಸುವುದಿಲ್ಲ ಎಂದರು. https://ainlivenews.com/v-somanna-congress-entry-rumour-mla-krishnappa-warned-kai-leaders/ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದೇವೆ’ ಎಂದರು. ಹುಚ್ಚು ಕೆಲಸ ಬಿಡಿ: ‘ಸರ್ಕಾರ ಬೀಳಿಸುತ್ತೇವೆ ಅನ್ನೋದು, ಅನಗತ್ಯ ಟೀಕೆ ಮಾಡುವುದು ಬಿಟ್ಟು ವಿರೋಧ ಪಕ್ಷದವರು ಭಾಗ್ಯಗಳ ಲಾಭವ ಸಿಗದ ಫಲಾನುಭವಿಗಳ ಗುರುತಿಸಿ ಅವರಿಗೆ ಕೊಡಿಸುವ ಕೆಲಸ ಮೊದಲು ಮಾಡಲಿ ಎಂದರು. ವಿರೋಧ ಪಕ್ಷದ ನಾಯಕ ಛಾಯಾ ಮುಖ್ಯಮಂತ್ರಿ ಇದ್ದಂತೆ. ಹೀಗಾಗಿ ಆರ್.ಅಶೋಕ್ ಅವರು ಘನತೆಯಿಂದ ಮಾತಾಡಬೇಕು. ಸರ್ಕಾರ ಬೀಳಿಸುವ ಯೋಚನೆ, ಹುಚ್ಚು ಕೆಲಸ ಬಿಡಿ ಎಂದು ಸಲಹೆ ನೀಡಿದರು.

Read More

ಬೆಂಗಳೂರು: ನನ್ನನ್ನ ಸೋಲಿಸಲು ಬೆಂಗಳೂರು ಗ್ರಾಮಾಂತರದಲ್ಲಿ ತೀರ್ಮಾನ ಮಾಡಬೇಕಾಗಿರೋದು ಕ್ಷೇತ್ರದ ಜನ. ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಅಲ್ಲ ಅಂತ ಸಂಸದ ಡಿ.ಕೆಸುರೇಶ್ (DK Suresh) ಅವರು ತಿರುಗೇಟು ಕೊಟ್ಟಿದ್ದಾರೆ. https://ainlivenews.com/s-there-a-transfer-racket-going-on-in-the-state-explosive-audio-of-the-leader-of-kai-goes-viral/ ಕುಮಾರಸ್ವಾಮಿ-ವಿಜಯೇಂದ್ರ (BY Vijayendra) ಭೇಟಿ ವಿಚಾರ ಹಾಗೂ 28ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ (Congress) ಸೋಲಿಸುತ್ತೇವೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರಕ್ಕೆ ಸುರೇಶ್ ಪ್ರತಿಕ್ರಿಯೆ ನೀಡಿದರು. ಅವರಿಬ್ಬರಿಗೂ ಒಳ್ಳೆಯದಾಗಲಿ. ಅವರಿಬ್ಬರೇ ನನ್ನನ್ನ ಸೊಲಿಸೋಕೆ ಆಗುತ್ತಾ. ನನ್ನನ್ನ ಸೋಲಿಸೋಕೆ ಕ್ಷೇತ್ರದ ಜನ ತೀರ್ಮಾನ ಮಾಡಬೇಕು. ನನ್ನ ಕ್ಷೇತ್ರದ 24 ಲಕ್ಷ ಜನರು ಈ ಬಗ್ಗೆ ತೀರ್ಮಾನ ಮಾಡಬೇಕು ಅಂತ ಕುಮಾರಸ್ವಾಮಿ-ವಿಜಯೇಂದ್ರಗೆ ಡಿ.ಕೆ ಸುರೇಶ್ ತಿರುಗೇಟು ಕೊಟ್ರು. ಬೆಂಗಳೂರು ಉತ್ತರದಲ್ಲಿ ಡಿ.ಕೆ ಸುರೇಶ್ ಸ್ಪರ್ಧೆ ಮಾಡೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ನಾನು ತೀರ್ಮಾನ ಮಾಡೋದು ಅಲ್ಲ. ನಾನು ಎಲ್ಲಿ ನಿಂತುಕೊಳ್ಳಬೇಕು ಅಂತ ತೀರ್ಮಾನ ಮಾಡೋದು ಹೈಕಮಾಂಡ್. ಹೈಕಮಾಂಡ್ ಎಲ್ಲಿ ನಿಲ್ಲು ಅಂತ ಹೇಳುತ್ತೋ ಅಲ್ಲಿ ನಿಲ್ಲುತ್ತೇನೆ.…

Read More

ನವದೆಹಲಿ : ಚಳಿಗಾಲದ ಸಂಸತ್ ಅಧಿವೇಶನವೂ (Parliament Session) ಡಿಸೆಂಬರ್ 4ರಿಂದ ಆರಂಭಗೊಂಡು 22ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಲಾಯದಿಂದ ಮಾಹಿತಿ ಲಭ್ಯವಾಗಿದೆ. ಇದಕ್ಕೂ ಮುನ್ನ ಡಿಸೆಂಬರ್ 2 ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಸುಗಮ ಕಲಾಪಕ್ಕಾಗಿ ಪ್ರತಿಪಕ್ಷಗಳ ಜೊತೆಗೆ ಮಾತುಕತೆ ನಡೆಯಲಿದೆ. ಡಿಸೆಂಬರ್ ಮೂರರಂದು ಪ್ರತಿಪಕ್ಷಗಳ ಸಭೆ ನಡೆಯಬೇಕಿತ್ತು ಅಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆ ಒಂದು ದಿನ ಮುನ್ನ ಅಂದರೆ ಡಿಸೆಂಬರ್ 2 ರಂದು ಸಭೆ ನಡೆಸಲು ನಿರ್ಧರಿಸಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಮಾಹಿತಿಯನ್ನು ಖಚಿತಪಡಿಸಿದ್ದಾರೆ. https://ainlivenews.com/golden-opportunity-to-work-in-banking-sector-there-are-8283-vacancies-in-sbi/ ಈ ಬಾರಿಯ ಅಧಿವೇಶನದಲ್ಲಿ ಮಹತ್ವದ IPC, CrPC ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸಲು ಬಯಸುವ ಮೂರು ಪ್ರಮುಖ ಮಸೂದೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬಹುದು ಎನ್ನಲಾಗಿದೆ. ಈ ಮಸೂದೆಗಳನ್ನು ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು ಪರಿಶೀಲಿಸುತ್ತಿದೆ. ಹೊಸ ಮಸೂದೆಗಳನ್ನು ಶೀಘ್ರದಲ್ಲೇ ಅಂಗೀಕರಿಸುವ ಸಾಧ್ಯತೆ ಇದೆ.  ಈಗಾಗಲೇ ಲೋಕಸಭೆಯಲ್ಲಿ (Loksabhe) ಇಂಡಿಯನ್…

Read More

ಹುಬ್ಬಳ್ಳಿ:- ಡಿಕೆಶಿ ಸಿಬಿಐ ಪ್ರಕರಣ ಹಿಂಪಡೆಯುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.  ಈ ಸಂಬಂಧ ಮಾತನಾಡಿದ ಅವರು,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿರುವ ಪ್ರಕರಣವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ವಾಪಸ್‌ ಪಡೆಯಲು ನಿರ್ಧರಿಸಿರುವುದು ಸರಿಯಲ್ಲ. ಶಿವಕುಮಾರ ವಿರುದ್ಧ 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲು ನಿರ್ಧರಿಸಿರುವುದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. https://ainlivenews.com/golden-opportunity-to-work-in-banking-sector-there-are-8283-vacancies-in-sbi/ ದೇಶದಲ್ಲಿ ನಾಯಾಂಗ ವ್ಯವಸ್ಥೆಯಿದೆ. ಸರ್ಕಾರದ ನಿರ್ಣಯಗಳ ವಿರುದ್ಧವಾಗಿಯೂ ನ್ಯಾಯಾಲಯಗಳು ತೀರ್ಪು ನೀಡಿವೆ. ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಸ್ವತಂತ್ರವಾಗಿದ್ದು, ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿವೆ. ದೋಷಾರೋಪ ಪಟ್ಟಿ ಸಲ್ಲಿಸುವ ಹಂತದಲ್ಲಿ ಈ ರೀತಿ ವಾಪಸ್ ಪಡೆದಿರುವುದು ಸರಿಯಲ್ಲ. ಸಂಬಂಧಿಸಿದ ಏಜೆನ್ಸಿಗಳು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಸಚಿವ ಸಂಪುಟದ‌ ಈ‌ ನಿರ್ಧಾರವನ್ನು ನ್ಯಾಯಾಲಯ ತಿರಸ್ಕರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read More

ಬೆಂಗಳೂರು: ಕರಾವಳಿ ತುಳು ಕೂಟದಿಂದ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ ನಮ್ಮ ಕಂಬಳಕ್ಕೆ ಸಾವಿರಾರು ಜನರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಕೂಟದ ಅಂತಿಮ ಫಲಿತಾಂಶವೂ ಕೂಡ ಹೊರಬಿದ್ದಿದೆ. ಕಂಬಳ ನೋಡಲು ಕರಾವಳಿ ಪೂಜಾ ಹೆಗಡೆ, ರಕ್ಷಿತ್ ಶೆಟ್ಟಿ, ರಮೇಶ್ ಅರವಿಂದ್, ಉಪೇಂದ್ರ ಸೇರಿದಂತೆ ಹಲವರು ಕಂಬಳ ಕಣ್ಣುಂಬಿಕೊಂಡರು. ಕಂಬಳದ ಫೈನಲ್ ಫಲಿತಾಂಶ ಹೀಗಿದೆ ಬೆಂಗಳೂರು “ರಾಜ ಮಹಾರಾಜ” ಜೋಡುಕರೆ ಕಂಬಳ ಕೂಟದ ಕನೆಹಲಗೆ, ಅಡ್ಡಹಲಗೆ, ಹಗ್ಗ ಹಿರಿಯ, ನೇಗಿಲು ಹಿರಿಯ, ಹಗ್ಗ ಕಿರಿಯ, ನೇಗಿಲು ಕಿರಿಯ ವಿಭಾಗಗಲ್ಲಿ ಒಟ್ಟು 159 ಕೋಣಗಳ ಜೊತೆ ಸ್ಪರ್ಧಿಸಿದ್ದವು.  ಕಂಬಳದಲ್ಲಿ ಗೆದ್ದ -ಜೋಡಿಗೆ ಮೊದಲ ಬಹುಮಾನವಾಗಿ 16ಗ್ರಾಂ ಚಿನ್ನದ ಪದಕ ಹಾಗೂ ಒಂದು ಲಕ್ಷ ನಗದು, ಎರಡನೇ ಸ್ಥಾನಕ್ಕೆ 8 ಗ್ರಾಂ ಚಿನ್ನದ ಪದಕ ಹಾಗೂ 50 ಸಾವಿರ ನಗದು, ಮೂರನೇ ಸ್ಥಾನಕ್ಕೆ 4 ಗ್ರಾಂ ಚಿನ್ನ ಮತ್ತು 25 ಸಾವಿರ ಹಣವನ್ನು ವಿಭಾಗಾವಾರ ನೀಡಲಾಯಿತು. ಹಗ್ಗ ಹಿರಿಯ: ಪ್ರಥಮ:…

Read More

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ (First Look) ರಿಲಿಸ್ ಆಗಿದೆ. ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಅಚ್ಚರಿ ಮೂಡಿಸುವಷ್ಟು ಕಂಡಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವ ಪೋಸ್ಟರ್ ನಾನಾ ಚರ್ಚೆಗಳನ್ನು ಹುಟ್ಟು ಹಾಕುವಂತಿದೆ. ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ  (Kantara Chapter 1) ಇಂದು ಮುಹೂರ್ತ ನಡೆದಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಿತ್ರತಂಡ ವಿಶೇಷ ಪೂಜೆಯನ್ನ ಮಾಡಿಸಲಿದೆ. ಉದ್ಭವಮೂರ್ತಿ ವಿನಾಯಕ ದೇವರಿಗೆ ಮೂಡು ಗಣಪತಿ ಸೇವೆ, ತ್ರಿಕಾಲ ಸೇವೆ, ಅನ್ನದಾನ ನಡೆಯಲಿದೆ. ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಬಣ್ಣ ಬಣ್ಣದ ಹೂವಿನಿಂದ ಸಿಂಗಾರ ಮಾಡಲಾಗಿದೆ. ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿವೆ. ಸಿನಿಮಾ ಟೀಮ್ ಅಧಿಕೃತವಾಗಿ ಯಾವುದೇ ಮಾಹಿತಿ ಸಿಗದೇ ಇದ್ದರೂ, ಬಲ್ಲ ಮೂಲಗಳು ಮಾಹಿತಿಯನ್ನು ಹೊರ ಹಾಕುತ್ತಲೇ ಇವೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಹಿಟ್ ಆದ ನಂತರ ಹಲವು ಭಾಷೆಗಳಲ್ಲಿ ಅದನ್ನು ಡಬ್ ಮಾಡಲಾಯಿತು. ಆದರೆ, ಕಾಂತಾರ 2 ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆಯಂತೆ. ಹಾಗಾಗಿ ಅದ್ಧೂರಿ ಮೇಕಿಂಗ್ ಕೂಡ ಇರಲಿದೆಯಂತೆ.

Read More

ಕಲಬುರಗಿ: ಗಣೇಶನ ಕಟ್ಟೆ ಕಟ್ಟುವ ವಿಚಾರ ವಿಕೋಪಕ್ಕೆ ತಿರುಗಿ ಎರಡು ಕೋಮಿನ ನಡುವೆ ಗಲಾಟೆಯಾದ ಘಟನೆ ಕಲಬುರಗಿಯ ಅಂಕಲಗಿಯಲ್ಲಿ ನಡೆದಿದೆ.. ಒಂದು ಗುಂಪು ಕಟ್ಟೆ ಕಟ್ಟಲು ಮುಂದಾದಾಗ ಮತ್ತೊಂದು ಕೋಮಿನ ಗುಂಪು ಕಿರಿಕ್ ಮಾಡಿದೆ.ಈ ವೇಳೆ ಎರಡೂ ಗುಂಪುಗಳು ಹೊಡೆದಾಡಿಕೊಂಡಿವೆ.. ಎರಡು ತಿಂಗಳ ಹಿಂದಷ್ಟೇ ಇದೇ ವಿಚಾರ ವಿವಾದವಾದಾಗ ಜೇವರ್ಗಿ ತಹಸೀಲ್ದಾರ್ ಬಂದು ಸರ್ವೆ ಮಾಡಿ ಪಂಚಾಯ್ತಿ ಜಾಗ ಅಂತ ಹೇಳಿದ್ರು.ಆಗ ಎರಡೂ ಕಡೆಯವರು ಸಮ್ಮತಿ ಸಹ ಸೂಚಿಸಿದ್ರು..ಆದ್ರೆ ಇದೀಗ ಮತ್ತೆ ಗಲಾಟೆಯಾಗಿದ್ದು ಪೋಲೀಸರು ಪರಿಶೀಲನೆ ನಡೆಸಿದ್ದಾರೆ…

Read More