Author: AIN Author

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನಂದನವನ ಲೇಔಟ್​​ನ ನಿವಾಸದಲ್ಲಿ ಆರ್.ಅಶೋಕ್ ಅವರು ಹುತಾತ್ಮ ಯೋಧ ಪ್ರಾಂಜಲ್​ ಅಂತಿಮ ದರ್ಶನ ಪಡೆದರು. ವೀರ ಯೋಧ ಕ್ಯಾಪ್ಟನ್​ ಎಂ.ವಿ.ಪ್ರಾಂಜಲ್​ ಕರ್ನಾಟಕದ ಹೆಮ್ಮೆ ಎಂದು ಅಂತಿಮ ದರ್ಶನ ಬಳಿಕ ವಿಪಕ್ಷ ನಾಯಕ ಆರ್​.ಅಶೋಕ್ ಹೇಳಿದರು. ದೇಶಕ್ಕಾಗಿ ಧೈರ್ಯ, ಶೌರ್ಯದಿಂದ ಎಂ.ವಿ.ಪ್ರಾಂಜಲ್ ಹೋರಾಡಿದ್ದಾರೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪುಣ್ಯ ಪುತ್ರ. ವೀರಯೋಧ ಕ್ಯಾಪ್ಟನ್​ ಎಂ.ವಿ.ಪ್ರಾಂಜಲ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಂತಿಮ ದರ್ಶನ ಬಳಿಕ ವಿಪಕ್ಷ ನಾಯಕ ಆರ್​.ಅಶೋಕ್ ಹೇಳಿದರು. https://ainlivenews.com/laser-therapy-soukhy-robotic-ortho-care/ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ವೀರ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತಿಮ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್​​ನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು, ಮಕ್ಕಳು ಸೇರಿ ನೂರಾರು ಜನರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

Read More

ಹುಬ್ಬಳ್ಳಿ : ಜಿಯೋ ಕರ್ನಾಟಕದ 54 ಪಟ್ಟಣಗಳಲ್ಲಿ ಗೃಹ ಮನರಂಜನೆ, ಸ್ಮಾರ್ಟ್ ಹೋಮ್ ಸೇವೆಗಳು ಮತ್ತು ಹೈಸ್ಪೀಡ್ ಬ್ರಾಡ್ಗಾಗಾಗಿ ಅದರ ಸಂಯೋಜಿತ ಎಂಡ್-ಟು-ಎಂಡ್ ಪರಿಹಾರವಾದ ಜಿಯೋ ಏರ್ ಪೈಬರ್ ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿತು. ಹುಬ್ಬಳ್ಳಿ, ಧಾರವಾಡ ಮತ್ತು ಬೆಳಗಾವಿ ಸೇರಿ ಕರ್ನಾಟಕದ 54 ಪಟ್ಟಣಗಳಲ್ಲಿ ಜಿಯೋ ಏರ್ಫೈಬರ್ನ ಸೇವೆಲಭ್ಯವಿದೆ. ಈ ಸೇವೆಯನ್ನು ಸೆಪ್ಟೆಂಬರ್ 19 ರಂದು ರಾಷ್ಟ್ರವ್ಯಾಪಿ ಬಿಡುಗಡೆ ಮಾಡಲಾಗಿತ್ತು.ಈ ಮೂಲಕ ದೇಶಾದ್ಯಂತ ಸಮುದಾಯಗಳಿಗೆ ಅತ್ಯಾಧುನಿಕ ಸಂಪರ್ಕ ಪರಿಹಾರಗಳನ್ನು ಒದಗಿಸುವ ಜಿಯೋದ ಬದ್ಧತೆಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. https://ainlivenews.com/laser-therapy-soukhy-robotic-ortho-care/ ಜಿಯೋಏರ್ ಫೈಬರ್ ಯೋಜನೆಯು 599 ರೂ.ಗೆ 30 ಎಂಬಿಪಿಎಸ್ ವೇಗದಲ್ಲಿ ಅನಿಯಮಿತ ಡೇಟಾವನ್ನು ನೀಡುತ್ತದೆ. ಅಲ್ಲದೆ, 899 ರೂ ಮತ್ತು ರೂ 1199 ರೂ. ಗೆ 100 ಎಂಬಿಪಿಎಸ್ ವೇಗದ ಯೋಜನೆಗಳು ಲಭ್ಯವಿದೆ. 599 ರೂ ಮತ್ತು 899 ರೂ ಯೋಜನೆಗಳೊಂದಿಗೆ 14 ಓಟಿಟಿ ಅಪ್ಲಿಕೇಶನ್ಗಳು ಲಭ್ಯವಿದ್ದರೆ, 1199 ರೂ ಯೋಜನೆಯು ನೆಟ್ ಫ್ಲೆಕ್ಸ್ , ಅಮೆಜಾನ್ ಪ್ರೈಮ್ ಮತ್ತು ಜಿಯೋ ಸಿನಿಮಾ…

Read More

ಹೈದರಾಬಾದ್: ತೆಲಂಗಾಣದಲ್ಲಿ (Telangana) ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ 30 ನಿಮಿಷದಲ್ಲಿ ಹೈದರಾಬಾದ್ ಅನ್ನು ‘ಭಾಗ್ಯನಗರ್’ (Bhagya Nagar) ಎಂದು ಮರುನಾಮಕರಣ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಹೇಳಿಕೆಯೊಂದನ್ನು ನೀಡಿದ್ದಾರೆ. https://ainlivenews.com/rescue-operation-of-41-workers-trapped-in-tunnel-delayed/ ಹೈದರಾಬಾದ್‍ನಲ್ಲಿ ಚುನಾವಣಾ ಪ್ರಚಾರದಲ್ಲಿನ (Election Rally) ತಮ್ಮ ಭಾಷಣದ ವೇಳೆ ಈ ಮಾತನ್ನು ಹೇಳಿದ್ದಾರೆ. ಹೈದರಾಬಾದ್ ಹೆಸರನ್ನು ಭಾಗ್ಯನಗರ್ ಎಂಬುದಾಗಿ ಮರುನಾಮಕರಣ ಮಾಡಬೇಕು ಎಂಬುದಾಗಿ ನಾನು ಅಂದುಕೊಂಡಿದ್ದೇನೆ. ಅದರಂತೆ ಬಿಜೆಪಿ (BJP) ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಮರುನಾಮಕರಣ ಮಾಡುತ್ತೇನೆ. ಇದನ್ನು ಯಾರೂ ಕೂಡ ವಿರೋಧಿಸುವ ಧೈರ್ಯ ಮಾಡಲ್ಲ ಎಂದರು. ಕೆಲವು ವಿಷಯಗಳು ಅಸಾಧ್ಯವೆಂದು ತೋರುತ್ತದೆ. ಓಲ್ಡ್ ಸಿಟಿಗೆ ಮೆಟ್ರೋ ರೈಲು ವ್ಯವಸ್ಥೆ ಕಲ್ಪಿಸಬಹುದೇ? ಕೆಲವು ಜನರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗುತ್ತದೆಯೇ?, ಇನ್ನೂ ಕೆಲವರು ಬಹಿರಂಗವಾಗಿ ಪೊಲೀಸರಿಗೆ ಬೆದರಿಕೆ ಹಾಕಿದಾಗ ನಾವು ಅದನ್ನು ತಡೆಯಬಹುದೇ? ಎಂದು ಇತ್ತೀಚೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಕ್ಬರುದ್ದೀನ್ ಓವೈಸಿ ಅವರನ್ನು…

Read More

ಡೆಹ್ರಾಡೂನ್: ಉತ್ತರಾಖಂಡದ (Uttarakhand)  ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ (Silkyara Tunnel) ಕುಸಿತದಲ್ಲಿ ಸಿಲುಕಿರುವ 41 ಮಂದಿ ಕಾರ್ಮಿಕರನ್ನು ಹೊರ ತರುವ ರಕ್ಷಣಾ ಕಾರ್ಯಾಚರಣೆ (Rescue  Operation) ಮತ್ತಷ್ಟು ವಿಳಂಬವಾಗಿದೆ. https://ainlivenews.com/laser-therapy-soukhy-robotic-ortho-care/ ಡ್ರೀಲಿಂಗ್ ಮಷಿನ್‍ನಲ್ಲಿ ಪದೇ ಪದೇ ದೋಷ ಕಂಡು ಬರುತ್ತಿರುವ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಯನ್ನು ನಿಲ್ಲಿಸಲಾಯಿತು. ಡ್ರಿಲ್ಲಿಂಗ್ ಮಷಿನ್ ನಲ್ಲಿ ಕಂಡು ಬಂದಿರುವ ತಾಂತ್ರಿಕ ಸಮಸ್ಯೆಯನ್ನು ಪತ್ತೆ ಹಚ್ಚಿ ಸರಿಪಡಿಸಲು ವಿಶೇಷ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ. ಯಂತ್ರವನ್ನು ಸರಿಪಡಿಸಿದ ಬಳಿಕ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರು ಪರಿಸ್ಥಿತಿ ಮೇಲ್ವಿಚಾರಣೆ ಮಾಡಿ ಕೊನೆಯ ಹಂತದ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತ ಗತಿಯಲ್ಲಿ ಮತ್ತು ಸಂಪೂರ್ಣ ಎಚ್ಚರಿಕೆಯಿಂದ ನಡೆಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಯಂತ್ರವು ಇಲ್ಲಿಯವರೆಗೆ 46.8-ಮೀಟರ್ ಕೊರೆದಿದ್ದು, ಒಟ್ಟು 57-ಮೀಟರ್ ಕೊರೆದು ಪೈಪ್ ಗಳನ್ನು ಹಾಕುವ ಮೂಲಕ ಪ್ರತ್ಯೇಕ ದಾರಿಯನ್ನು ನಿರ್ಮಿಸಬೇಕಿದೆ. ಯಂತ್ರಕ್ಕೆ ಕಬ್ಬಿಣ ಕವಚ ಅಡ್ಡಿಯಾಗಿದ್ದು ಅದನ್ನು ಕೊರೆಯಲಾಗದ ಯಂತ್ರ ಕೆಟ್ಟು ನಿಲ್ಲುತ್ತಿದೆ.

Read More

ಧಾರವಾಡ: ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ (Electric Shock) 16 ವರ್ಷದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ‌ ನಗರದ (Dharwad City) ಮದಿಹಾಳ ಸಿದ್ದರಾಮ ಕಾಲೊನಿಯಲ್ಲಿ ನಡೆದಿದೆ. ಶ್ರೇಯಸ್ ಸಿನ್ನೂರ (16) ಮೃತ ಬಾಲಕ. ತನ್ನ ಮನೆಯ ಹಿಂದೆ ಕ್ರಿಕೆಟ್ (Cricket) ಆಡಲು ಹೋಗಿದ್ದು, ಆಟದ ವೇಳೆ ಬಾಲ್ ಹಿಡಿಯಲು ಹೋದಾಗ ಶ್ರೇಯಸ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ. https://ainlivenews.com/laser-therapy-soukhy-robotic-ortho-care/ ಶ್ರೇಯಸ್ ತನ್ನ ಪೋಷಕರಿಗೆ ಒಬ್ಬನೇ ಮಗನಾಗಿದ್ದ. ಧಾರವಾಡ ರಾಜೀವ್‌ ಗಾಂಧಿ ಶಾಲೆಯಲ್ಲಿ SSLC ಓದುತಿದ್ದ. ಸಂಜೆ ಶಾಲೆಯಿಂದ ಬಂದ ಮಗ ಮನೆಯಲ್ಲಿ ಕುಳಿತಾಗ ಗೆಳೆಯ ಆಟಕ್ಕೆ ಕರೆದಿದ್ದಾನೆ. ತಮ್ಮ ಮನೆಯ ಹಿಂದೆ ಕಾಮಗಾರಿ ಪ್ರಗತಿಯಲ್ಲಿದ್ದ ಕಟ್ಟದ ಬಳಿ ಕ್ರಿಕೆಟ್‌ ಆಡಲು ಹೋದ ಶ್ರೇಯಸ್‌ಗೆ 10 ನಿಮಿಷದಲ್ಲಿ ಕರೆಂಟ್‌ ಶಾಕ್‌ಗೆ ತಗುಲಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೂಡಲೇ ಮಗನನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಪ್ರಯೋಜನವಾಗಲಿಲ್ಲ ಎಂದು ಮೃತ ಬಾಲಕನ ತಂದೆ ಅಶೋಕ್‌ ತಿಳಿಸಿದ್ದಾರೆ

Read More

ರಾಯಚೂರು : ಜಿಲ್ಲೆ ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದಲ್ಲಿ ಸಾಲಬಾಧೆಯಿಂದ ಬೇಸತ್ತು ಜಮೀನಿನಲ್ಲೇ ರೈತ ನೇಣಿಗೆ ಶರಣಾದ ಘಟನೆ ನಡೆದಿದೆ. https://ainlivenews.com/laser-therapy-soukhy-robotic-ortho-care/ ತನ್ನ ಜಮೀನಿನಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಚೆಂದಪ್ಪ(60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರಗಾಲದಿಂದ 3 ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ನಾಶವಾಗಿತ್ತು. ರೈತ ಚೆಂದಪ್ಪ ಬ್ಯಾಂಕ್, ಖಾಸಗಿಯವರಿಂದ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು.

Read More

ತುಮಕೂರು: ತುಮಕೂರಿನ ಕ್ಯಾತ್ಸಂದ್ರ ಬಳಿಯಿರುವ ಸಿದ್ಧಗಂಗಾ ಮಠಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿದ್ದು ಡಾ.ಶಿವಕುಮಾರಶ್ರೀಗಳ ಗದ್ದುಗೆ ದರ್ಶನ ಪಡೆದರು. ನಗರ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ. ಪತ್ನಿ ಶೈಲಜಾ ಜೊತೆ ಮಠಕ್ಕೆ ಆಗಮಿಸಿರುವ ವಿ.ಸೋಮಣ್ಣ. ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಬಳಿ ವಿ.ಸೋಮಣ್ಣ ಬೇಸರವ್ಯಕ್ತಪಡಿಸಿದ್ದಾರೆ. ‘ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧ’ ‘ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು’ 2 ಗಂಟೆ ಮನೆಯಲ್ಲಿ ಕುಳಿತುಕೊಂಡಿದ್ರು, ಆಗಲ್ಲ ಅಂತಾ ಹೇಳಿದ್ದೆ. ಪ್ರಧಾನಿ ದೆಹಲಿಗೆ ಕರೆಸಿ ನೀನು ಸ್ಪರ್ಧೆ ಮಾಡು ಅಂದ್ರು, ಎಂದು ಸಿದ್ದಲಿಂಗ ಸ್ವಾಮೀಜಿ ಎದುರು ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಹೆಚ್​ಎಎಲ್ ಏರ್​ಪೋರ್ಟ್​ಗೆ ಆಗಮಿಸಿದ್ದಾರೆ https://ainlivenews.com/laser-therapy-soukhy-robotic-ortho-care/ ಪ್ರಧಾನಿ ಮೋದಿ ಅವರನ್ನು ಡಿಜಿ&ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಡಿಸಿ ದಯಾನಂದ್, ಕಮಿಷನರ್ ದಯಾನಂದ್ ಸ್ವಾಗತಿಸಿದರು. HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ.

Read More

ಹುಬ್ಬಳ್ಳಿ: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಬಿಎಸ್‌ವೈ ಸಂಬಂಧಿ ಕುಂದಗೋಳ ಕ್ಷೇತ್ರದ ಮಾಜಿ ಶಾಸಕ ಚಿಕ್ಕನಗೌಡರ ಮರಳಿ ಬಿಜೆಪಿಗೆ ಹೋದ್ರಾ..? ಹೌದು,,, ​ರಾಜ್ಯ ಬಿಜೆಪಿ ಅಧ್ಯಕ್ಷ ವಿಜೇಯಂದ್ರ ಭೇಟಿಯಾದ ಎಸ್ ಐ ಚಿಕ್ಕನಗೌಡರ, ವಿಜೇಯಂದ್ರ ರಾಜ್ಯಾಧ್ಯಕ್ಷ ಆದ ನಂತರ ಅಭಿನಂದನೆ ಸಲ್ಲಿಸಿದ ಚಿಕ್ಕನಗೌಡ್ರ, ಕುಂದಗೋಳ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಎಸ್‌.ಐ. ಚಿಕ್ಕನಗೌಡರ, ಕೇಲ ದಿನಗಳ‌ ಹಿಂದೆ ತಮ್ಮ ಬೆಂಬಲಿಗರ ಜೊತೆ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದರು. ಸಧ್ಯ ಏಕಾಏಕಿ ವಿಜೇಯಂದ್ರ ಜೊತೆಗೆ ಕಾಣಿಸಿಕೊಂಡ ಚಿಕ್ಕನಗೌಡರ ಮತ್ತು ಹಿಂಬಾಲಕರು ಮರಳಿ ಮತ್ತೇ ಕಮಲ ಹಿಡಿತಾರಾ ಎಂಬ ಶಂಕೆ ಮೂಡಿದೆ.

Read More

ಕನ್ನಡ ಚಿತ್ರರಂಗದಲ್ಲಿ ಹೊಸಬರ ಅಬ್ಬರ ಜೋರಾಗಿದೆ. ಹಲವು ಹೊಸಬರು ಗುಣಮಟ್ಟದ, ಕಂಟೆಂಟ್ ವುಳ್ಳ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬರುತ್ತಿದ್ದಾರೆ. ದೊಡ್ಡ ಗೆಲುವು ಸಾಧಿಸದಿದ್ದರೂ ಪ್ರಶಂಸೆಯನ್ನು ಪಡೆದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ. ಹೊಸ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ ಸಿನಿಮಾ ಅಗ್ನಿ.. ಇತ್ತೀಚೆಗೆಷ್ಟೇ ಬೆಂಗಳೂರಿನ ಬಂಡೇ ಮಹಾಕಾಳಿ ಸನ್ನಿಧಿಯಲ್ಲಿ ಜರ್ನಿ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ. ನಿರ್ದೇಶಕ ಅಗ್ನಿ ಮಾತನಾಡಿ, 5 ಜನ ಸ್ನೇಹಿತರ ನಡುವೆ ನಡೆಯುವ ಕಥೆ. ಕಾಲೇಜ್ ನಂತರ ದಿನಗಳನ್ನು ಇಟ್ಟುಕೊಂಡು ಮಾಡಿರುವ ಸಿನಿಮಾ. ಹಾಸನ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದ್ದೇವೆ. ನಿರ್ದೇಶಕನಾಗಿ ನನಗೆ ಇದು ಮೊದಲ ಸಿನಿಮಾ. ನಿರೂಪಕನಿಂದ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಡುತ್ತಿದ್ದೇನೆ ಎಂದು ತಿಳಿಸಿದರು. ನಾಯಕ ದಿನಿ ಮಾತನಾಡಿ, ಅಗ್ನಿ ಅವರು ಕಥೆ ಹೇಳಿದರು. ಇಷ್ಟವಾಯ್ತು. ಸಿನಿಮಾ ಶುರುವಾದಾಗಿನಿಂದ ಅಂತ್ಯದವರೆಗೂ ಮನರಂಜನೆ ಸಿಗುತ್ತದೆ. ಕ್ಲೈಮ್ಯಾಕ್ಸ್ ನಲ್ಲಿ ಪ್ರತಿಯೊಬ್ಬರು ಕಣ್ಣೀರು ಬರುತ್ತದೆ. ಕ್ಲೈಮ್ಯಾಕ್ಸ್ ಗೂ…

Read More