ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ (Bengaluru Kambala) ನಡೆಯುತ್ತಿದೆ. ಕಂಬಳಕ್ಕಾಗಿ ಅರಮನೆ ಮೈದಾನ ಸಂಪೂರ್ಣವಾಗಿ ಸಿದ್ಧಗೊಂಡಿದೆ. ಇಂದು ಮತ್ತು ನಾಳೆ ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ (Anushka Shetty), ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ. https://ainlivenews.com/laser-therapy-soukhy-robotic-ortho-care/ ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್(Rishab Shetty), ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ. ನವೆಂಬರ್ 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಮಾಡಲಾಗಿದೆ. ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ…
Author: AIN Author
ನವದೆಹಲಿ: ಕೊರೋನಾಜನಕ ಚೀನಾದಲ್ಲಿ (China) ಮತ್ತೊಂದು ಡೆಡ್ಲಿ ವೈರಸ್ ಶುರುವಾಗಿದ್ದು, ಇತ್ತ ಕೇಂದ್ರ ಆರೋಗ್ಯ ಇಲಾಖೆಯು (Central Health Department) ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದೆ. https://ainlivenews.com/laser-therapy-soukhy-robotic-ortho-care/ ಚೀನಾದಲ್ಲಿ ಶಾಲೆಗೆ ತೆರಳ್ತಿರುವ ಮಕ್ಕಳಿಗೆ ಹೊಸ ವೈರಸ್ ಕಂಟಕವಾಗ್ತಿದೆ. ನ್ಯೂಮೋನಿಯಾ (Pneumonia) ಮಾದರಿಯ ಲಕ್ಷಣಗಳಿಂದ ದೊಡ್ಡ ಮಟ್ಟದಲ್ಲಿ ಮಕ್ಕಳು ಅನಾರೋಗ್ಯಕ್ಕೆ ಗುರಿ ಆಗ್ತಿದ್ದಾರೆ. ನೇರ ಶ್ವಾಸಕೋಶಕ್ಕೆ ವೈರಸ್ ಅಟ್ಯಾಕ್ ಆಗುತ್ತದೆ. ಇದರಿಂದ ಮಕ್ಕಳು ಉಸಿರಾಟದ ಸಮಸ್ಯೆಯಿಂದ ಬಳಲ್ತಿದ್ದಾರೆ. ಹೀಗಾಗಿ ಚೀನಾದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚೀನಾ ಆಸ್ಪತ್ರೆಗಳಲ್ಲಿ ಸೋಂಕಿತರೇ ತುಂಬಿದ್ದಾರೆ. ಇದು ವಿಶ್ವದ ಕಳವಳಕ್ಕೆ ಕಾರಣವಾಗಿದೆ. ಇದು ಕೊರೋನಾದಂತೆ ಹಬ್ಬಿದ್ರೆ ಏನು ಗತಿ ಎಂಬ ಆತಂಕ ಶುರುವಾಗಿದೆ. ಈ ಬಗ್ಗೆ ಭಾರತ ಸರ್ಕಾರ ಸ್ಪಂದಿಸಿದೆ. ಶ್ವಾಸಕೋಶ ಸಮಸ್ಯೆಗೆ ಸಂಬಂಧಿಸಿದ ವರದಿಗಳನ್ನು ಪರಿಶೀಲಿಸಲಾಗ್ತಿದೆ. ಚೀನಾದಲ್ಲಿ ವರದಿ ಆಗ್ತಿರುವ ಶ್ವಾಸಕೋಶ ಸೋಂಕು, ಎವಿಎನ್ ಇನ್ಫ್ಲೂಯೆಂಜಾಗಳಿಂದ ಭಾರತಕ್ಕೆ (India) ಅಪಾಯ ಕಡಿಮೆ ಇದೆ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಮಕ್ಕಳ ಶ್ವಾಸಕೋಶ ಅನಾರೋಗ್ಯಕ್ಕೆ ಸಂಬಂಧಿಸಿ ಸಾಧಾರಣ ಕಾರಣಗಳೇ ಗೋಚರಿಸ್ತಿವೆ.…
ಟೆಲ್ ಅವೀವ್: ಅಕ್ಟೋಬರ್ 7 ರಿಂದ ನಡೆಯುತ್ತಿರುವ ಇಸ್ರೇಲ್-ಹಮಾಸ್ ನಡುವಿನ ಭೀಕರ ಯುದ್ಧದಲ್ಲಿ (Israel Hamas War) ಮಹತ್ವದ ಬೆಳವಣಿಗೆ ಕಂಡುಬಂದಿದೆ. ಒತ್ತೆಯಾಳುಗಳ (Hostages) ಬಿಡುಗಡೆಗಾಗಿ ಕದನ ವಿರಾಮ ನಿರ್ಧಾರಕ್ಕೆ ಒಪ್ಪಂದ ಏರ್ಪಟ್ಟಿದ್ದು, ಕೆಲವೇ ಗಂಟೆಗಳಲ್ಲಿ ಕದನ ವಿರಾಮ ಘೋಷಣೆಯಾಗಲಿದೆ. ನಾಲ್ಕು ದಿನ ಕದನ ವಿರಾಮ ಘೋಷಣೆಯಾಗಲಿದ್ದು, ಒತ್ತೆಯಾಳುಗಳ ವಿನಿಮಯವೂ ನಡೆಯಲಿದೆ. ಒಟ್ಟು 4 ದಿನಗಳು ಕದನ ವಿರಾಮ ಇರಲಿದೆ. ಮೊದಲ ದಿನವೇ ಹಮಾಸ್ ಉಗ್ರರ ಗುಂಪು ಸೆರೆಹಿಡಿದಿದ್ದ 13 ಮಂದಿ ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮಧ್ಯವರ್ತಿ ಕತಾರ್ (Qatar) ಹೇಳಿದೆ. https://ainlivenews.com/miley-is-the-new-president-of-argentina-who-talks-to-a-dead-dog/ ಕತಾರ್ ವಿದೇಶಾಂಗ ಸಚಿವಾಲಯದ ಪ್ರಕಾರ, ಭಾರತೀಯ ಕಾಲಮಾನ ಬೆಳಗ್ಗೆ 10:30ರಿಂದಲೇ ಕದನ ವಿರಾಮ ಪ್ರಾರಂಭವಾಗಲಿದೆ. ಆದ್ರೆ ಹಮಾಸ್ ಸಂಜೆ 7:30ರ ನಂತರ ಒತ್ತೆಯಾಳುಗಳ ಮೊದಲ ಬ್ಯಾಚ್ ಅನ್ನು ಬಿಡುಗಡೆ ಮಾಡಲಿದೆ. ಒಂದೇ ಕುಟುಂಬದ ಮಹಿಳೆಯರು ಮತ್ತು ಮಕ್ಕಳನ್ನು ಒಳಗೊಂಡು 13 ಮಂದಿಯನ್ನು ಹಮಾಸ್ ಬಿಡುಗಡೆಗೊಳಿಸಲಿದೆ. ಒಪ್ಪಂದದ ಪ್ರಕಾರ 4 ದಿನಗಳಲ್ಲಿ ಒಟ್ಟು 50 ಮಂದಿಯನ್ನು…
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದ ಜಿಗಣಿಯ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಮೃತದೇಹ ಬೆಂಗಳೂರಿಗೆ (Bengaluru) ಆಗಮಿಸಿದೆ. ಹೆಚ್ಎಎಲ್ನಲ್ಲಿ (HAL) ಮೃತ ಯೋಧನ ಪಾರ್ಥಿವ ಶರೀರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್, ಸಚಿವ ಕೆ.ಜೆ ಜಾರ್ಜ್, ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಮುಂತಾದ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ಬುಧವಾರ ಹಾಗೂ ಗುರುವಾರದ ನಡುವೆ ರಜೌರಿಯಲ್ಲಿ ಉಗ್ರರು ಹಾಗೂ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಸಾವಿಗೀಡಾಗಿದ್ದರು. ಇದರಲ್ಲಿ ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಕೂಡ ಸೇರಿದ್ದಾರೆ. ಅವರ ಪಾರ್ಥಿವ ಶರೀರವನ್ನು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಸಮೀಪದ ನಂದನವನ ಬಡಾವಣೆಯ ನಿವಾಸಕ್ಕೆ ತರಲಾಗುತ್ತಿದೆ. ಜಮ್ಮು ಕಾಶ್ಮೀರದಿಂದ 11.30 ಕ್ಕೆ ವಿಶೇಷ ಸೇನೆಯ ವಿಮಾನದ ಮೂಲಕ ಪಾರ್ಥಿವ ಶರೀರವನ್ನು ಜಮ್ಮು ಕಾಶ್ಮೀರದಿಂದ ದೆಹಲಿಗೆ ತರಲಾಗಿತ್ತು. ಬಳಿಕ ದೆಹಲಿಯಿಂದ ಬೆಂಗಳೂರಿನ ಎಚ್ಎಎಲ್ಗೆ ತರಲಾಯಿತು.…
ಬೆಂಗಳೂರು: ಇತಿಹಾಸ ಪ್ರಸಿದ್ದ ಕರಾವಳಿ ಕಂಬಳಕ್ಕೆ (Karavali Kambala) ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ನಲ್ಲಿ (Palace Ground Bengaluru) ಕೌಂಟ್ಡೌನ್ ಶುರುವಾಗಿದೆ. ಶನಿವಾರ 2 ದಿನಗಳ ಕಾಲ ನಡೆಯುವ ರೋಚಕ ಕಂಬಳಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದೆ. ಕಂಬಳ ವೀಕ್ಷಣೆಗೆ ಲಕ್ಷಾಂತರ ಜನ ಬರುವ ನಿರೀಕ್ಷೆಯಿದ್ದು, ಹೆಬ್ಬಾಳ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗುವ ನಿರೀಕ್ಷೆ ಇದೆ. ಹೀಗಾಗಿ ಸಂಚಾರದಲ್ಲಿ ಟ್ರಾಫಿಕ್ ಪೊಲೀಸರು ಒಂದಷ್ಟು ಬದಲಾವಣೆ ಮಾಡಿದ್ದಾರೆ. https://ainlivenews.com/laser-therapy-soukhy-robotic-ortho-care/ ಬದಲಿ ಮಾರ್ಗ ಬಳಸಲು ಸೂಚನೆ ನೀಡಿದ್ದಾರೆ. ಕಂಬಳಕ್ಕೆ ಬರುವ ಸಾರ್ವಜನಿಕರ ವಾಹನಗಳಿಗೆ ಕೃಷ್ಣವಿಹಾರ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಿಬಿಡಿ ಕಡೆಯಿಂದ ಬರುವ ವಾಹನಗಳು ಮೇಖ್ರಿ ಸರ್ಕಲ್ ಬಳಿ ಯೂಟರ್ನ್ ಪಡೆದು ಕೃಷ್ಣವಿಹಾರ್ ತಲುಪುವುದು. ಬಳ್ಳಾರಿ ರಸ್ತೆಯಲ್ಲಿ ಬರುವ ವಾಹನಗಳು ಮೇಖ್ರಿ ಸರ್ಕಲ್ ಮೂಲಕ ಗೇಟ್ ನಂಬರ್ 1 ರಲ್ಲಿ ಅರಮನೆ ಮೈದಾನಕ್ಕೆ ಎಂಟ್ರಿಯಾಗಲಿದೆ. ಯಶವಂತಪುರ ಕಡೆಯಿಂದ ಬರುವ ವಾಹನಗಳು ಮೇಖ್ರಿ ಸರ್ಕಲ್ ನಲ್ಲಿ ಬಲ ತಿರುವು ಪಡೆದು ಅರಮನೆ ಮೈದಾನ ಎಂಟ್ರಿ. ಕ್ಯಾಬ್ ನಲ್ಲಿ ಬರುವ…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿಲಿದ್ದಾರೆ. ಹೆಚ್ಎಎಲ್ (HAL) ಸಂಸ್ಥೆಯ ಕಾರ್ಯಕ್ರಮ ನಿಮಿತ್ತ ಆಗಮಿಸುತ್ತಿರುವ ಪ್ರಧಾನಿಯವರು ಬೆಳಗ್ಗೆ 9:15ಕ್ಕೆ ಅಂತಾರಾಷ್ಟ್ರೀಯ ವಿಮಾ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಳಿಕ 9:30ರಿಂದ 12 ಗಂಟೆವರೆಗೆ ಹೆಚ್ಎಎಲ್ ಆವರಣದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. https://ainlivenews.com/laser-therapy-soukhy-robotic-ortho-care/ 12:15ಕ್ಕೆ ಭಾರತೀಯ ವಾಯುಸೇನೆ ವಿಮಾನದ ಮೂಲಕ ತೆಲಂಗಾಣಕ್ಕೆ (Telangana) ಪ್ರಯಾಣ ಬೆಳೆಸಲಿದ್ದು, ಅಲ್ಲಿನ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಪ್ರಧಾನಿಯವರ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಈಗಾಗಲೇ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಇತ್ತಿಚೆಗೆ ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬಂದಿದ್ದ ಮೋದಿಯವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪ್ರಧಾನಿಯವರು ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗದೇ ದೂರವಿರಿಸಿದ್ದರು.
ನ್ಯಾಷನಲ್ ಸ್ಟಾರ್ ಯಶ್ (Yash) ಅವರು ಯಶ್ 19 ಸಿನಿಮಾ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಅವರ ಮುಂದಿನ ಚಿತ್ರದ ಅಪ್ಡೇಟ್ಗಾಗಿ ಪ್ರೇಕ್ಷಕರು ಕಳೆದ ಒಂದೂವರೆ ವರ್ಷದಿಂದ ಕಾಯುತ್ತಿದ್ದಾರೆ. ಹೀಗಿರುವಾಗ ತಮ್ಮ ಮುಂದಿನ ಚಿತ್ರದ ಬಗ್ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಸಮಾರಂಭವೊಂದರಲ್ಲಿ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ, ನನಗೆ ನಿಮ್ಮ ಕಾತರ ಅರ್ಥವಾಗುತ್ತದೆ. ನನ್ನನ್ನು ದೊಡ್ಡದಾಗಿ ಬೆನ್ನುತಟ್ಟಿದ್ದೀರ. ಆದರೆ ನಾನು ಸುಮ್ಮನೆ ಕೂತಿಲ್ಲ. ನಾನು ರಿಲ್ಯಾಕ್ಸ್ ಆಗುತ್ತಿಲ್ಲ. ಬದಲಿಗೆ ದೊಡ್ಡ ಮಟ್ಟದ ಕೆಲಸಕ್ಕೆ ಸಿದ್ಧತೆ ಮಾಡಿಕೊಳ್ಳುತ್ತೇನೆ. ಸಾಧಾರಣವಾದ ಕೆಲಸ ಮಾಡಲು ನನಗೆ ಇಷ್ಟವಿಲ್ಲ, ಎಲ್ಲರೂ ಹೆಮ್ಮೆ ಪಡುವಂತಹ ಕೆಲಸವನ್ನೇ ಮಾಡುತ್ತೇನೆ ಎಂದು ಯಶ್ ಮಾತನಾಡಿದ್ದಾರೆ. ಖಂಡಿತಾ ಸಿನಿಮಾ ಬಗ್ಗೆ ಅಪ್ಡೇಟ್ ಕೊಡುತ್ತೀನಿ. ಎಲ್ಲ ಊಟ ರೆಡಿಯಾದ ಮೇಲೆ ಬಡಿಸಿದರೇನೆ ಚೆಂದ. ಅರ್ಧಂಬರ್ಧ ಅಡುಗೆ ಮಾಡಿ ಊಟಕ್ಕೆ ಕರೆಯುವುದು ಸರಿ ಹೋಗುವುದಿಲ್ಲ. ನೀವೆಲ್ಲರೂ ಹೆಮ್ಮೆ ಪಡುವಂತಹ ಕೆಲಸ ಮಾಡುತ್ತೀನಿ ಎಂದು ಯಶ್ ಖುಷಿಯಿಂದ ಮಾತನಾಡಿದ್ದಾರೆ.
ಹುಬ್ಬಳ್ಳಿ: ಹುಬ್ಬಳ್ಳಿ ಸಮೀಪದ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. https://ainlivenews.com/laser-therapy-soukhy-robotic-ortho-care/ ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ನಿಂಗಪ್ಪನ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದರು. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಿಗ್ ಮನೆಯ (Bigg Boss Kannada 10) ಮಾತಿನ ಮಲ್ಲಿ ನೀತು ವನಜಾಕ್ಷಿ (Neethu Vanajakshi) ಮತ್ತೆ 2ನೇ ಬಾರಿ ಕ್ಯಾಪ್ಟನ್ ಆಗಿ ಗೆದ್ದು ಬೀಗಿದ್ದಾರೆ. ಮೈಕಲ್ಗೆ ಠಕ್ಕರ್ ಕೊಟ್ಟು ಮತ್ತೆ ನೀತು ಮನೆಯ ಕ್ಯಾಪ್ಟನ್ ಆಗಿದ್ದಾರೆ. ನೀತು ಈ ಹಿಂದೆಯೂ ಒಂದು ಬಾರಿ ಕ್ಯಾಪ್ಟನ್ ಆಗಿದ್ದರು. ಈ ಮತ್ತೆ ಕ್ಯಾಪ್ಟನ್ ಆಗುವ ಅವಕಾಶ ದಕ್ಕಿದೆ. ಬಿಗ್ ಬಾಸ್ ಈ ಬಾರಿ 2 ತಂಡಗಳಾಗಿ ವಿಂಗಡಿಸಿದ್ದರು. ಗಜಕೇಸರಿ ಮತ್ತು ಸಂಪತ್ತಿಗೆ ಸವಾಲ್ ಎಂಬ ಮೈಕಲ್ ಮತ್ತು ಸಂಗೀತಾ ಕ್ಯಾಪ್ಟನ್ ಆಗಿದ್ದಾರೆ. ಬಿಗ್ ಬಾಸ್ ನೀಡಿರುವ ಹೆಚ್ಚಿನ ಟಾಸ್ಕ್ನಲ್ಲಿ ಸಂಪತ್ತಿಗೆ ಸವಾಲ್ ಅಂದರೆ ಮೈಕಲ್ ಟೀಮ್ ಗೆದ್ದು ಬೀಗಿತ್ತು. ಸಂಗೀತಾ ಟೀಮ್ ಈ ಬಾರಿ ಮಕಾಡೆ ಮಲಗಿತ್ತು. ಆ ನಂತರ ಮೈಕಲ್ ಟೀಮ್ನಲ್ಲಿಯೇ ಕ್ಯಾಪ್ಟನ್ಸಿಗಾಗಿ ಗುದ್ದಾಟ ನಡೆಯಿತು. ತನಿಷಾ, ನೀತು, ಮೈಕಲ್, ತುಕಾಲಿ ನಾಲ್ವರು ರೇಸ್ನಲ್ಲಿದ್ದರು. ಕಡೆಯದಾಗಿ ಟಾಸ್ಕ್ನಲ್ಲಿ ಮೈಕಲ್- ನೀತುಗೆ ಕಾಂಪಿಟೇಶನ್ ಶುರುವಾಯಿತು. ಆದರೆ ರಿಂಗ್ ಮಾಸ್ಟರ್ ಮೈಕಲ್ಗೆ ಚಮಕ್ ಕೊಟ್ಟು…
ಹಣ್ಣನ್ನು ತಿಂದ ತಕ್ಷಣ ನೀರು ಕುಡಿಯುವುದರಿಂದ ನಿಮ್ಮ ಆರೋಗ್ಯಕ್ಕೆ ಏನು ಹಾನಿಯಾಗಬಹುದು ಎಂಬುದನ್ನು ತಿಳಿದುಕೊಳ್ಳೋಣ. ನೀರು ಏಕೆ ಕುಡಿಯಬಾರದು ತಜ್ಞರ ಪ್ರಕಾರ, ಹಣ್ಣುಗಳು ಫ್ರಕ್ಟೋಸ್ ಅಂದರೆ ನೈಸರ್ಗಿಕ ಸಕ್ಕರೆಯನ್ನು ಹೊಂದಿರುತ್ತವೆ, ಆದ್ದರಿಂದ ನೀವು ಫ್ರಕ್ಟೋಸ್ ಹೊಂದಿರುವ ನೀರನ್ನು ಸೇವಿಸಿದರೆ ಅದು ಹೊಟ್ಟೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ, ಆದ್ದರಿಂದ ಹಣ್ಣುಗಳನ್ನು ತಿನ್ನುವ 1 ಗಂಟೆಯ ಮೊದಲು ಅಥವಾ 1 ಗಂಟೆಯ ನಂತರ ನೀರನ್ನು ಕುಡಿಯಿರಿ. ತಜ್ಞರ ಪ್ರಕಾರ, ಬಾಳೆಹಣ್ಣು ತಿಂದ ನಂತರ ನೀರು ಕುಡಿಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಏಕೆಂದರೆ ಬಾಳೆಹಣ್ಣುಗಳನ್ನು ತಿಂದ ನಂತರ ನೀರು ಕುಡಿಯುವುದು, ವಿಶೇಷವಾಗಿ ತಣ್ಣೀರು, ಡಿಸ್ಪೆಪ್ಸಿಯಾವನ್ನು ಉಂಟುಮಾಡಬಹುದು. ವಾಸ್ತವವಾಗಿ, ಬಾಳೆಹಣ್ಣು ಮತ್ತು ತಣ್ಣೀರಿನಲ್ಲಿ ಇರುವ ಗುಣಲಕ್ಷಣಗಳು ದೇಹದಲ್ಲಿ ಡಿಕ್ಕಿ ಹೊಡೆದು ಅಜೀರ್ಣವನ್ನು ಉಂಟುಮಾಡಬಹುದು. ಬಾಳೆಹಣ್ಣು ತಿಂದ ನಂತರ ಕನಿಷ್ಠ 15 ರಿಂದ 20 ನಿಮಿಷಗಳ ನಂತರ ಮಾತ್ರ ನೀರು ಕುಡಿಯಲು ಸಲಹೆ ನೀಡಲಾಗುತ್ತದೆ. ಪೇರಳೆ: ಪೇರಳೆಯನ್ನು ತಿಂದ ನಂತರ ಒಬ್ಬರಿಗೆ ತುಂಬಾ ಬಾಯಾರಿಕೆಯಾಗುವುದು, ತುಂಬಾ ಬಾಯಾರಿಕೆಯಾಗುತ್ತದೆ. ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ…