ಗೋವಾ (Goa) ಸರ್ಕಾರ, ಎಂಟರ್ ಟೈನ್ಮೆಂಟ್ ಸೊಸೈಟಿ ಆಫ್ ಗೋವಾ ಮತ್ತು ಎನ್.ಎಫ್.ಡಿ.ಸಿ ಇಂಡಿಯಾ ಜಂಟಿಯಾಗಿ ಗೋವಾದ ಪಣಜಿಯಲ್ಲಿ ಆಯೋಜಿಸಿರುವ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (Chirotsava) (IFFI) ಕನ್ನಡದ ‘ದಿ ಗ್ರೇ ಗೇಮ್ಸ್’ ಚಿತ್ರ ಆಯ್ಕೆಯಾಗಿದೆ. ವಿಜಯ್ ರಾಘವೇಂದ್ರ, ಭಾವನಾ ರಾವ್, ಶ್ರುತಿ ಪ್ರಕಾಶ್, ಅಪರ್ಣ ವಸ್ತಾರೆ, ಜೈ ಮುಂತಾದವರು ನಟಿಸಿರುವ ಈ ಚಿತ್ರವನ್ನು ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಗಂಗಾಧರ್ ಸಾಲಿಮಠ್ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆಗೆ ಸಿದ್ಧವಾಗಿರುವ ‘ಗ್ರೇ ಗೇಮ್ಸ್’ (Gray Games) ಚಿತ್ರವು ಗೋವಾದ ಅಂತಾರಾಷ್ಟ್ರೀಯ ಚಿತ್ರೋತ್ಸವದ ‘ರೆಡ್ ಕಾರ್ಪೆಟ್ ಗಾಲ ಪ್ರೀಮಿಯರ್’ ವಿಭಾಗದಡಿ ಮೊದಲ ಪ್ರದರ್ಶನ ಕಾಣುತ್ತಿದೆ. ಈ ವಿಭಾಗದಲ್ಲಿ ಭಾರತದ ಹಲವು ಚಿತ್ರಗಳು ಪ್ರೀಮಿಯರ್ ಆಗುತ್ತಿದ್ದು, ಈ ಪೈಕಿ ಕನ್ನಡದ ‘ದಿ ಗ್ರೇ ಗೇಮ್ಸ್’ ಸಹ ಒಂದಾಗಿರುವುದು ವಿಶೇಷ. ಮೆಟಾವರ್ಸ್ ಮತ್ತು ಆನ್ಲೈನ್ ಗೇಮಿಂಗ್ ವೈಷಮ್ಯದ ಹಿನ್ನೆಲೆಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ (Vijay Raghavendra) ಸೈಕಾಲಜಿಸ್ಟ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಭಾವನಾ ರಾವ್…
Author: AIN Author
ಸಿಡ್ನಿ: ವಿಶ್ವಕಪ್ 2023 (World Cup 2023) ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ ಗೆದ್ದು ಬೀಗಿತ್ತು. ಇದೀಗ ತಂಡದ ಕೆಲವರು ಅವರವರ ತಾಯ್ನಾಡಿಗೆ ವಾಪಸ್ಸಾಗುತ್ತಿದ್ದಾರೆ. ಅಂತೆಯೇ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಕೂಡ ಸಿಡ್ನಿ ಏರ್ಪೋರ್ಟ್ ಗೆ (Sidney Airport) ಬಂದಿಳಿದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಹೌದು. ನಿನ್ನೆ ಬೆಳಗ್ಗೆ ಕಮ್ಮಿನ್ಸ್ (Pat Cummins) ಅವರು ಸಿಡ್ನಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇದನ್ನು Andrew McGlashan of ESPNcricinfo ಅವರು ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾಗೆ ಅಪ್ಲೋಡ್ ಮಾಡಿದ್ದಾರೆ. ಅಲ್ಲದೆ “ಪ್ಯಾಟ್ ಕಮ್ಮಿನ್ಸ್ ವಿಶ್ವಕಪ್ ವಿಜೇತ ನಾಯಕನಾಗಿ ತವರಿಗೆ ಮರಳಿದ್ದಾರೆ” ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಳ್ಳಲಾಗಿದೆ. ಈ ವೀಡಿಯೋ ನೋಡಿದ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ ವಿಡಿಯೋದಲ್ಲೇನಿದೆ..?: ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಸೀಸ್ ತಂಡದ ನಾಯಕ ಕಮ್ಮಿನ್ಸ್ ಅವರು ತಮ್ಮ ಲಗ್ಗೇಜ್ಗಳನ್ನು ಸ್ವತಃ ತಾವೇ ವ್ಹೀಲಿಂಗ್ ಮಾಡಿಕೊಂಡು ಹೋಗುತ್ತಿರುವುದನ್ನು ನಾವು ವೀಡಿಯೋದಲ್ಲಿ ಕಾಣಬಹುದಾಗಿದೆ. ಅಲ್ಲದೆ ಹೀಗೆ…
ಬೆಂಗಳೂರು:- ಲಂಚ ಪಡೆಯುತ್ತಿದ್ದ ಬೆಸ್ಕಾಂ ಚೀಫ್ ಜನರಲ್ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೆಡ್ಹ್ಯಾಂಡ್ ಆಗಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಮುಖ್ಯ ವ್ಯವಸ್ಥಾಪಕ ಮತ್ತು ಅವರ ಚಾಲಕನನ್ನು ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ನಾಗರಾಜ್ ಎಂಎಲ್ ಅವರು ತಮ್ಮ ಚಾಲಕ ಮುರಳಿಕೃಷ್ಣ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಕಮರ್ಷಿಯಲ್ ಎಲೆಕ್ಟ್ರಿಕಲ್ ಸಪ್ಲೈನಿಂದ ಇಂಡಸ್ಟ್ರಿಯಲ್ ಎಲೆಕ್ಟ್ರಿಕಲ್ ಸಪ್ಲೈಗೆ ಬದಲಾವಣೆ ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಗುತ್ತಿಗೆದಾರರಿಂದ ನಾಗರಾಜ್ 7.5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ನಾಗರಾಜ್ ಲಂಚದ ಬೇಡಿಕೆಯಿಟ್ಟಿದ್ದ ಪ್ರತಾಪ್ ಎಂಬ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮತ್ತು ಸಹಾಯಕ ಎಂಜಿನಿಯರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಕೈಗಾರಿಕಾ ಯೋಜನೆಗೆ ಅನುಮೋದನೆ ನೀಡಲು ಎಇಇ ನವೀನ್ ತೋಟಗಂಟಿ ಮತ್ತು ಎಇ ಮಲ್ಲಾಪುರ ಜಿಎಚ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ
ಆರೋರೂಟ್ ಪುಡಿಯು ಬಿಳಿ ಬಣ್ಣದಿಂದ ಕೂಡಿದ್ದು ಕಾರ್ನ್ಪ್ಲೋರ್ನಂತೆ ಕಾಣುತ್ತದೆ. ಆರೋರೂಟ್ ಪುಡಿಯು ಪೌಷ್ಟಿಕಾಂಶದ ವಿಷಯದಲ್ಲಿ ಹೆಚ್ಚಿನ ಸ್ಥಾನವನ್ನು ಹೊಂದಿದೆ. ಸಾಮಾನ್ಯವಾಗಿ ನಾವು ಕಾರ್ನ್ಫ್ಲೋರ್ನ್ನು ಸೂಪ್, ಗ್ರೇವಿಗಳನ್ನು ದಪ್ಪಗಾಗಿಸಲು ಬಳಸುತ್ತೇವೆ. ಆರೋರೂಟ್ ಪುಡಿಯು ಕಾರ್ನ್ಫ್ಲೋರ್ಗೆ ಪರ್ಯಾಯವಾಗಿದೆ. ಆರೋರೂಟ್ ಪುಡಿಯು ಸಾಕಷ್ಟು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ಮೃದುವಾದ, ನಯವಾದ ಚರ್ಮ ಆರೋರೂಟ್ ಪಿಷ್ಟವನ್ನು ಹೆಚ್ಚಾಗಿ ಟಾಲ್ಕಮ್ ಪೌಡರ್ ಮತ್ತು ಮಾಯಿಶ್ಚರೈಸರ್ಗಳಲ್ಲಿ ಬಳಸಲಾಗುತ್ತದೆ. ಇದು ಟಾಲ್ಕಮ್ ಪೌಡರ್ ಮತ್ತು ಲೋಷನ್ಗಳಲ್ಲಿನ ಸಕ್ರಿಯ ಪದಾರ್ಥಗಳನ್ನು ಚರ್ಮದ ಮೇಲಿನ ಹಂತಗಳಿಗೆ ತೂರಿಕೊಳ್ಳಲು ಅನುವು ಮಾಡಿಕೊಡುತ್ತದೆ. ಏಕೆಂದರೆ ಇದು ತೇವಾಂಶವನ್ನು ಹೀರಿಕೊಳ್ಳುವ ಗುಣಗಳನ್ನು ಹೊಂದಿದ್ದು ಅದು ನಿಮ್ಮ ಚರ್ಮವನ್ನು ಮೃದುವಾಗಿ ಮತ್ತು ಕೋಮಲವಾಗಿ ಇರಿಸುತ್ತದೆ ಶಿಶುಗಳಿಗೆ ಒಳ್ಳೆಯದು ಆರೋರೂಟ್ ಅನೇಕ ಅಗತ್ಯ ಪೋಷಕಾಂಶಗಳ ಹೀರಿಕೊಳ್ಳುವಿಕೆಯ ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಶಿಶುಗಳಲ್ಲಿ ಆರೋಗ್ಯಕರ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಇದು ಎದೆ ಹಾಲಿಗೆ ಪರ್ಯಾಯವಾಗಿದೆ. ಅಲ್ಲದೆ, ಅನೇಕ ಆರೋರೂಟ್ ತಿಂಡಿಗಳು ಶಿಶುಗಳಲ್ಲಿ ಅತಿಸಾರ, ಬ್ರಾಂಕೈಟಿಸ್ ಮತ್ತು ಕೆಮ್ಮನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.…
ಮಹಾರಾಷ್ಟ್ರ: ತನ್ನ ಲಿವ್ – ಇನ್ ಸಂಗಾತಿಯನ್ನು ಕೊಲೆ ಮಾಡಿ ಸೂಟ್ ಕೇಸ್ನಲ್ಲಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. 21 ವರ್ಷ ವಯಸ್ಸಿನ ಆರೋಪಿ ತನ್ನ ಪ್ರಿಯತಮೆಯನ್ನು ಕೊಂದು ಆಕೆಯ ದೇಹವನ್ನು ಸೂಟ್ ಕೇಸ್ನಲ್ಲಿ ತುಂಬಿ ಮುಂಬೈನ ಕುರ್ಲಾ ಪ್ರದೇಶದಲ್ಲಿ ಇರುವ ಸಿಎಸ್ಟಿ – ಎಲ್ಬಿಸ್ ಮಾರ್ಗ್ನ ನಿರ್ಮಾಣ ಹಂತದ ಕಟ್ಟಡ ಪ್ರದೇಶದಲ್ಲಿ ಎಸೆದು ಹೋಗಿದ್ದ. ಕೊಲೆ ಮಾಡಿದ ಬಳಿಕ ಒಡಿಶಾದ ತನ್ನ ಹುಟ್ಟೂರಿಗೆ ಪರಾರಿಯಾಗುವ ಪ್ರಯತ್ನದಲ್ಲಿದ್ದ ಆರೋಪಿ ಅಕ್ಸರ್ ಮನೋಜ್ ಬರ್ಲಾನನ್ನು ಪೊಲೀಸರು ಥಾಣೆ ರೈಲು ನಿಲ್ದಾಣದಲ್ಲಿ ಬಂಧನ ಮಾಡಿದ್ದಾರೆ. ಮೃತ ಮಹಿಳೆಯನ್ನು 25 ವರ್ಷ ವಯಸ್ಸಿನ ಪ್ರತಿಮಾ ಕಿಸ್ಪಟ್ಟಾ ಎಂದು ಗುರ್ತಿಸಲಾಗಿದೆ. ಈಕೆ ಕೂಡಾ ಒಡಿಶಾ ರಾಜ್ಯದವರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆಯ ಮೃತ ದೇಹ ಸೂಟ್ ಕೇಸ್ ಒಂದರಲ್ಲಿ ಪತ್ತೆಯಾದ ಕೂಡಲೇ ಪೊಲೀಸರು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ಫೋಟೋ ರವಾನಿಸಿದರು. ಆದಷ್ಟು ಬೇಗ ಮಹಿಳೆಯ ಗುರುತು…
ಕೆಪಿಎಸ್ಸಿ ಮೂಲಕ ಸದ್ಯದಲ್ಲೇ 3000 ಸರ್ಕಾರಿ ಹುದ್ದೆಗೆ ಅಧಿಸೂಚನೆ ಬಿಡುಗಡೆ ಆಗಲಿದೆ ಎಂಬುದನ್ನು ಹುದ್ದೆಗಳ ವಿವರ ಸಹಿತ ವಿಕ’ದಲ್ಲಿ ಇತ್ತೀಚೆಗೆ ತಿಳಿಸಲಾಗಿತ್ತು. ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹ ವಿವಿಧ ಇಲಾಖೆಗಳ ಹುದ್ದೆಗಳಿಗೆ ಅತಿ ಶೀಘ್ರದಲ್ಲೇ ನೇಮಕ ಅಧಿಸೂಚನೆ ಹೊರಡಿಸುವ ಕುರಿತ ಮಾಹಿತಿ ಹೊರಬಿದ್ದಿದೆ. ಹೌದು, ಕೆಇಎ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದೆ. ಸಾರಿಗೆ ಇಲಾಖೆ, ಪಶು ವೈದ್ಯಕೀಯ ಇಲಾಖೆ, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್ಜಿಯುಹೆಚ್ಎಸ್), ನಗರಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಂದಾಜು 400 ಕ್ಕೂ ಹೆಚ್ಚು ಪೋಸ್ಟ್ಗಳಿಗೆ ಡಿಸೆಂಬರ್ ಮೊದಲ ವಾರವೇ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ದೊರೆತಿದೆ. 455 ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳಿಗೂ ಸಹ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಅಧಿಸೂಚಿಸಿ, ನೇಮಕ ಪ್ರಕ್ರಿಯೆ ನಡೆಸಲಿದೆ. ವಿವಿಧ ಇಲಾಖೆಗಳ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ವಿವಿಧ ವಿಭಾಗಗಳ ಇಂಜಿನಿಯರ್, ಆಪ್ತ ಸಹಾಯಕ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಬೆಂಗಳೂರು:- ಡಿಕೆಶಿ ವಿರುದ್ಧದ CBI ತನಿಖೆ ವಾಪಸ್ ವಿಚಾರವಾಗಿ ವಿಪಕ್ಷ ನಾಯಕ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ವಾಪಸ್ ಪ್ರಸ್ತಾವನೆ ವಿಚಾರ ‘ಪ್ರಕರಣ ಕೋರ್ಟ್ನಲ್ಲಿದೆ, ಇದು ಕಾನೂನಿಗೆ ವಿರುದ್ಧವಾದುದು. ‘ಸಿಬಿಐ ತನಿಖೆಗೆ ನೀಡಿರುವುದು ತಪ್ಪು ಎಂದು ಅಪೀಲು ಹೋಗಿದ್ದರು. ಕೋರ್ಟ್ನಿಂದ ತೀರ್ಪು ಬರುವ ಮೊದಲು ನಿರ್ಧಾರ ಸರಿಯಲ್ಲ. ಸರ್ಕಾರ ಬದಲಾದಾಗ ಎಲ್ಲರೂ ಹಾಗೆ ಮಾಡುತ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಬೆಂಗಳೂರು:- ಕರಾವಳಿ, ದಕ್ಷಿಣ ಒಳನಾಡಿಗೆ ಹೆಚ್ಚಿನ ಮಳೆಯ ಅಲರ್ಟ್ ಘೋಷಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಹವಮಾನ ಇಲಾಖೆ ತಜ್ಞ ಎ.ಪ್ರಸಾದ್ ಹೇಳಿದರು. ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಅಕ್ಟೋಬರ್ನಿಂದ ನವೆಂಬರ್ವೆರೆಗೆ 38 ಪ್ರತಿಶತದಷ್ಟು ಮಳೆ ಕೊರತೆಯಿದೆ. ಕರಾವಳಿ ಭಾಗದಲ್ಲಿ ಶೇಕಡಾ 14 ರಷ್ಟು, ಉತ್ತರ ಒಳನಾಡಿನಲ್ಲಿ ಶೇಕಡಾ 25ರಷ್ಟು ಮಳೆ ಕೊರತೆಯಿದೆ. ಇನ್ನು ಮೈಸೂರಿನಲ್ಲಿ ಈ ವರ್ಷ ವಾಡಿಕೆಗಿಂತ ಅತಿಹೆಚ್ಚು ಮಳೆಯಾದರೆ, ಬೆಂಗಳೂರಿನಲ್ಲೂ ಈ ಬಾರಿ ಅತಿ ಹೆಚ್ಚಿನ ಮಳೆಯಾಗಿದೆ. ಈ ನಗರದಲ್ಲಿ ಮೂರು ದಿನಗಳ ಕಾಲ ಮೋಡಕವಿದ ವಾತಾವರಣ ಇರಲಿದ್ದು, ರಾತ್ರಿ ವೇಳೆ ಗುಡುಗು-ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಜ್ಞ ಎ.ಪ್ರಸಾದ್ ಹೇಳಿದರು. ರಾಜ್ಯದಲ್ಲಿ ಮಳೆಯಿಲ್ಲದೆ ಕಂಗಾಲಾಗಿದ್ದವರಿಗೆ ಹಿಂಗಾರು ಮಳೆ ಕೈಹಿಡಿದಂತೆ ಕಾಣುತ್ತಿದೆ. ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ರೈತರು, ಹಿಂಗಾರು ಹಂಗಾಮಿನ ಬೆಳೆಗಳನ್ನು ಬೆಳೆಯುತ್ತಾರೆ. ಕಡಿಮೆ ಶ್ರಮ ಹಾಗೂ ಕಡಿಮೆ ನಿರ್ವಹಣೆ ಈ ಬೆಳೆಗೆ ಸಾಕಾಗಿರುತ್ತದೆ. ಈ ಬಾರಿ ಹಿಂಗಾರು ಮಳೆ ಕೂಡ ಕೈಕೊಡುವ ಲಕ್ಷಣವಿತ್ತು.…
ಬೆಂಗಳೂರು:- ಅರಣ್ಯ ಇಲಾಖೆಯು ಬೆಂಗಳೂರು ಜಿಲ್ಲೆಯ ಭಾಗಗಳಲ್ಲಿ ಕಾರ್ಯಾಚರಣೆ ನಡೆಸಲು ಚಿರತೆ ಕಾರ್ಯಪಡೆ ಹಾಗೂ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿರುವ ಒಂಬತ್ತು ಜಿಲ್ಲೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಲಭ್ಯವಿರುವ ಸಲಕರಣೆ, ಸಂಪನ್ಮೂಲ ಬಳಸಿಕೊಂಡು ಕೆಲಸ ಮಾಡಲು ಸೂಚಿಸಲಾಗಿದೆ. ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿರುವ ಜಿಲ್ಲೆಗಳಾದ ಕೋಲಾರ-ಗೀತಾಂಜಲಿ, ತುಮಕೂರು-ಸ್ಮಿತಾ ಬಿಜ್ಜೂರು, ಬೆಂಗಳೂರು ಗ್ರಾಮಾಂತರ-ವನಶ್ರೀ ವಿಪಿನ್ ಸಿಂಗ್, ರಾಮನಗರ-ಅನಿಲ್ಕುಮಾರ್ ರತನ್, ಹಾಸನ-ಕುಮಾರ್ ಪುಷ್ಕರ್, ಚಿಕ್ಕಮಗಳೂರು-ವಿಜಯ್ ಮೋಹನ್ರಾಜ್, ಮೈಸೂರು-ಸಾಸ್ವತಿ ಮಿಶ್ರಾ, ಚಾಮರಾಜನಗರ-ಬಿಶ್ವಜಿತ್ ಮಿಶ್ರಾ, ಕೊಡಗು-ಬ್ರಿಜೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ವಾರದಲ್ಲಿ ಮೂರು ದಿನ ಜಿಲ್ಲೆಗಳಿಗೆ ಭೇಟಿ ನೀಡಬೇಕು. ಜಿಲ್ಲಾಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಬೇಕು. ಸಂಘರ್ಷ ತಡೆಗೆ ಯೋಜನೆ ರೂಪಿಸಬೇಕು ಎಂದು ಸೂಚಿಸಲಾಗಿದೆ.
ಟೆಲ್ ಅವಿವ್: ಕಳೆದ ಆರು ವಾರಗಳಿಂದ ನಡೀತಿರೋ ಹಮಾಸ್-ಇಸ್ರೇಲ್ (Israel- Hamas) ಭೀಕರ ಯುದ್ಧದದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಒತ್ತೆಯಾಳುಗಳ ಬಿಡುಗಡೆಗಾಗಿ ಕದನವಿರಾಮಕ್ಕೆ ಅಂತಾರಾಷ್ಟ್ರೀಯ ಸಮುದಾಯ ನಡೆಸ್ತಿದ್ದ ಪ್ರಯತ್ನಕ್ಕೆ ಈಗ ಫಲ ಸಿಕ್ಕಿದೆ. 50 ಒತ್ತೆಯಾಳುಗಳ ಬಿಡುಗಡೆ ಸಂಬಂಧ ಇಸ್ರೇಲ್-ಹಮಾಸ್ ನಡ್ವೆ ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದಕ್ಕೆ ಇಸ್ರೇಲ್ ಸಂಪುಟ ಒಪ್ಪಿಗೆ ನೀಡಿದೆ. ಈ ಒಪ್ಪಂದದ ಭಾಗವಾಗಿ ಇಸ್ರೇಲ್ 4 ದಿನ ಪ್ಯಾಲಿಸ್ತೇನ್ ಮೇಲೆ ಯಾವುದೇ ರೀತಿಯ ದಾಳಿಯನ್ನು ಮಾಡಲ್ಲ. ಈ ಸಂದರ್ಭದಲ್ಲಿ 240 ಒತ್ತೆಯಾಳುಗಳ ಪೈಕಿ ಮಕ್ಕಳು, ಮಹಿಳೆಯರು ಸೇರಿ ಕನಿಷ್ಠ 50 ಮಂದಿಯನ್ನು ಹಮಾಸ್ ಬಿಡುಗಡೆ ಮಾಡಬೇಕಾಗುತ್ತದೆ. https://ainlivenews.com/housewifes-body-found-hanging-in-bangalore/ ಅತ್ತ ಇಸ್ರೇಲ್ ಕೂಡ ತಮ್ಮ ಜೈಲುಗಳಲ್ಲಿರೋ ಪ್ಯಾಲಿಸ್ತೇನ್ (Palestine) ಮಹಿಳೆಯರು, ಮಕ್ಕಳನ್ನು ಬಿಡುಗಡೆ ಮಾಡಲಿದೆ. ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಕರೆತರಬೇಕೆಂಬ ಕಾರಣಕ್ಕೆ ಕಠಿಣವಾದರೂ ಸರಿಯಾದ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ದಿನಕ್ಕೆ ಕನಿಷ್ಠ 10 ಒತ್ತೆಯಾಳುಗಳನ್ನು ರಿಲೀಸ್ ಮಾಡ್ತಿದ್ರೆ ಕದನ ವಿರಾಮ ವಿಸ್ತರಣೆಗೊಳ್ಳುತ್ತದೆ ಎಂದು ಇಸ್ರೇಲ್ ತಿಳಿಸಿದೆ. ಕದನ ವಿರಾಮ…