Author: AIN Author

ಚಿಕ್ಕಮಗಳೂರು: ಪ್ರಿಯಾಂಕ್ ಖರ್ಗೆ ಕಲಿಯುವುದು ಬಹಳ ಇದೆ, ಹಗುರವಾದ ಮಾತುಗಳು ಬೇಡ ಎಂದು ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಇಲ್ಲಿಗೆ ಎಲ್ಲಾ ಶಾಸಕರು ಬರುತ್ತಾರೆ, ಎಲ್ಲದರ ಬಗ್ಗೆಯೂ ಮಾತುಕತೆ ನಡೆಯುತ್ತೆ. ಎಲ್ಲರೂ ಒಂದು ಕಡೆ ಸೇರಿ ಖುಷಿಯಿಂದ ಇರೋಣ ಅಂತಾ ಇಲ್ಲಿಗೆ ಬಂದಿದ್ದೇವೆ ಜೆಡಿಎಸ್‌ ಪಕ್ಷದಿಂದ ಯಾರೂ ಹೋಗಲ್ಲ. ನಾವೆಲ್ಲ ಒಗ್ಗಟ್ಟಿನಿಂದ ಇದ್ದೇವೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಹಳೇ ಮೈಸೂರು ಪ್ರಾಂತ್ಯದಲ್ಲಿ ಗಾಳ ಹಾಕುವ ಕೆಲಸ ನಡೆಯುತ್ತಿದೆ. ಆದರೆ ಯಾರೂ ಕಿವಿಗೊಡಲ್ಲ. ನಾವು ಎಚ್‌ಡಿ ದೇವೇಗೌಡರ ಕುಟುಂಬದ ಸದಸ್ಯರಿದ್ದಂತೆ. ಹೆಚ್ಡಿಕೆ, ದೇವೇಗೌಡರ ಬಗ್ಗೆ ಗೌರವವಿದೆ.  ನಾವ್ಯಾರೂ ಎಲ್ಲಿಗೂ ಹೋಗಲ್ಲ ಅಂತ ಎಲ್ಲರೂ ಮಾತು ಕೊಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದರು. ಎಚ್‌ಡಿ ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು ಅದಕ್ಕಾಗಿ ಸುಳ್ಳು ಆರೋಪ ಮಾಡುತ್ತಾರೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿರುವ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಅವರು, ದೇವೇಗೌಡರ ಕುಟುಂಬ ಸೋಲು-ಗೆಲುವನ್ನ ಸಮಾನವಾಗಿ ಸ್ವೀಕರಿಸ್ತಾರೆ. ಯಾರೇ ಆದರೂ ಸಣ್ಣತನದ ಹೇಳಿಕೆ ಕೊಡುವುದು ಒಳ್ಳೆಯದ್ದಲ್ಲ ಎಂದು ತಿರುಗೇಟು…

Read More

ಬೆಂಗಳೂರು:- ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳನೊಬ್ಬ ಇದ್ದು, ಎಲ್ಲರೂ ನಗನಾಣ್ಯ ಕಳ್ಳತನ ಮಾಡಿದ್ರೆ, ಈ ಕಳ್ಳನ ಟಾರ್ಗೆಟ್ ಮಾತ್ರ ಎಳನೀರು ಮಾತ್ರ. ಹೌದು, ನಗರದಲ್ಲಿ ಎಳನೀರು ಕಳ್ಳತನ ಮಾಡುತ್ತಿದ್ದ ಅಸಾಮಿಯನ್ನ ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಪೊಲೀಸರಿಂದ ಮೋಹನ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಕಳೆದ ಮೂರು ತಿಂಗಳಿಂದ ಮೋಹನ್ ಎಳನೀರು ಕಳ್ಳತನ ಮಾಡುತ್ತಿದ್ದ. ಎಳನೀರು ಕದಿಯಲೆಂದೆ ಕಾರಿನಲ್ಲಿ ಅರಾಮಿನ ಬರುತ್ತಿದ್ದ. ರಾತ್ರಿ ವೇಳೆ ರಸ್ತೆ ಬದಿಯ ಎಳನೀರು ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ. ಗಿರಿನಗರದ ಮಂಕುತಿಮ್ಮನ ಪಾರ್ಕ್ ಬಳಿ ಇತ್ತೀಚಿಗೆ ಎಳನೀರು ಕಳ್ಳತನ ಮಾಡಿದ್ದ. ರಾಜಣ್ಣ ಎಂಬುವರ 1150 ಎಳನೀರು ಆರೋಪಿ ಮೋಹನ್ ಕದ್ದಿದ್ದ. ಈ ಸಂಬಂಧ ಎಳನೀರು ವ್ಯಾಪಾರಿ ರಾಜಣ್ಣ ಗಿರಿನಗರ ಠಾಣೆಗೆ ದೂರು ನೀಡಿದ್ದ. ಸಿಸಿಟಿವಿಗಳ ಪರಿಶೀಲನೆ ನಡೆಸಿ ಪೊಲೀಸರು ಮೋಹನ್ ನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ ಎಳನೀರು ಸೇರಿ ಎಂಟು ಲಕ್ಷ ಮೌಲ್ಯದ ಒಂದು ಕಾರು, ರಾಯಲ್ ಎನ್ ಫೀಲ್ಡ್ ಬೈಕ್ ವಶಕ್ಕೆ ಪಡೆಯಲಾಗಿದೆ. ಪೊಲೀಸರ ತನಿಖೆ ವೇಳೆ ಎಳನೀರು ಕಳ್ಳನ…

Read More

ಕಲಬುರಗಿ : ಪ್ರಿಯಾಂಕ್ ಖರ್ಗೆ ಸಚಿವರಾದ ಬಳಿಕ ಕಲಬುರಗಿಯಲ್ಲಿ ಗೂಂಡಾಗಿರಿ ಪ್ರವೃತ್ತಿ ಹೆಚ್ಚಾಗಿದೆ ಎಂದು ಕಲಬುರಗಿಯಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಕಿಡಿಕಾರಿದರು. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಮೇಲೆ ಖರ್ಗೆ ಬೆಂಬಲಿಗರು ಮಾರಾಣಾಂತಿಕವಾಗಿ ಹಲ್ಲೆ ನಡೆಸಿರುವ ವಿಚಾರ ಸಂಬಂಧ ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದರು. ಚಿತ್ತಾಪುರದಲ್ಲಿ ಬಹಳಷ್ಟು ಅಕ್ರಮ ನಡೆಯುತ್ತಿದೆ ಅದಕ್ಕೆಲ್ಲ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಮ್ಮಕ್ಕಿದೆ‌. ಕಲಬುರಗಿಯಲ್ಲಿ ದುಷ್ಟಶಕ್ತಿಗಳ ಅಟ್ಟಹಾಸ ಮಿತಿಮೀರಿದೆ. ಪ್ರಜಾಪ್ರಭುತ್ವ ಕಗ್ಗೊಲೆಯಾಗಿ ಗೂಂಡಾ ಪ್ರಭುತ್ವ ಹೆಚ್ಚಾಗಿದೆ. ಅಕ್ರಮ ಮರಳು ಲಾರಿಗಳನ್ನು ಹಿಡಿದು  ಪೊಲೀಸ್ ಠಾಣೆಗೆ ಒಪ್ಪಿಸಿದ ಮಣಿಕಂಠ ಮೇಲೆ ರಾಬರಿ ಕೇಸ್ ಹಾಕಿದ್ದಾರೆ, ಆಸ್ಪತ್ರೆ ಶುಚಿತ್ವದ ಬಗ್ಗೆ ಪ್ರಶ್ನೆ ಮಾಡಿದ್ರೆ ಕರ್ತವ್ಯಕ್ಕೆ ಅಡ್ಡಿ ಆಂತಾ ಮಣಿಕಂಠ ಮೇಲೆ ಕೇಸ್ ಹಾಕುತ್ತಾರೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಹಾಗಾದ್ರೆ ಈ ಜಿಲ್ಲೆಯಲ್ಲಿ ಹೋರಾಟನೇ ಮಾಡಬಾರದಾ? ಪ್ರಿಯಾಂಕ ಖರ್ಗೆ ಅವರದ್ದು ಯಾವ ಸಂವಿಧಾನ ಇದೆ? ಇವರ ಅಕ್ರಮ, ಭ್ರಷ್ಟಾಚಾರ, ಅವ್ಯವಸ್ಥೆ ವಿರುದ್ಧ ಪ್ರಶ್ನಿಸಿದರೆ ಕ್ರಿಮಿನಲ್…

Read More

ಬೆಂಗಳೂರು:- ಅತ್ಯಾಚಾರಕ್ಕೆ ಒಳಾಗದ ಸಂತ್ರಸ್ತೆಯನ್ನೇ ಮದುವೆಯಾದ ಆರೋಪಿಯ ಕೇಸ್ ಅನ್ನು ಹೈಕೋರ್ಟ್ ರದ್ದು ಮಾಡಿದೆ. ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರ ಪೀಠ ಈ ಆದೇಶ ಮಾಡಿದೆ. ಅತ್ಯಾಚಾರ ಘಟನೆ ನಡೆದಾಗ ಸಂತ್ರಸ್ತೆಯು ಅಪ್ರಾಪ್ತೆಯಾಗಿದ್ದರು. ಸಂತ್ರಸ್ತೆ ಲೈಂಗಿಕ ಸಂಭೋಗಕ್ಕೆ ಗುರಿಯಾಗಿದ್ದಾಳೆ ಎಂಬುದಾಗಿ ವೈದ್ಯಕೀಯ ದಾಖಲೆಗಳು ಬಹಿರಂಗಪಡಿಸುತ್ತವೆ. ಇದೀಗ ವಿಚಾರಣೆಗೆ ಹಾಜರಾಗಿರುವ ಸಂತ್ರಸ್ತೆ, ಆರೋಪಿಯನ್ನು ಮದುವೆಯಾಗುವುದಾಗಿ ದೃಢೀಕರಿಸಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಮತ್ತೊಂದೆಡೆ ಆರೋಪಿ ಸಹ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ. ಅಲ್ಲದೆ, ವಿಚಾರಣಾ ನ್ಯಾಯಾಲಯದ ವಿಚಾರಣೆ ವೇಳೆ ಪ್ರಕರಣದ ಸಾಕ್ಷಿಯಾಗಿರುವ ಸಂತ್ರಸ್ತೆ ಪ್ರತಿಕೂಲ ಸಾಕ್ಷ್ಯ ನುಡಿದ್ದಾರೆ. ಪ್ರಾಸಿಕ್ಯೂಷನ್‌ನ್ನು ಬೆಂಬಲಿಸುವ ಯಾವೊಂದು ಸಾಕ್ಷ್ಯವನ್ನೂ ಪಾಟಿ ಸವಾಲಿನಲ್ಲಿ ಸಂತ್ರಸ್ತೆ ದಾಖಲಿಸಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆರೋಪಿ ವಿರುದ್ಧದ ಕ್ರಿಮಿನಲ್‌ ವಿಚಾರಣಾ ಪ್ರಕ್ರಿಯೆ ಮುಂದುವರಿದರೆ, ಆತ ಸೆರೆಮನೆ ವಾಸದಲ್ಲಿ ಮುಂದುವರಿಯಲಿದ್ದು, ಹೆಚ್ಚಿನ ಸಂಕಟ ಅನುಭವಿಸುತ್ತಾನೆ. ಜೊತೆಗೆ, ಸಂತ್ರಸ್ತೆಗೆ ನ್ಯಾಯ ಸಿಗುವುದಕ್ಕಿಂತ ಹೆಚ್ಚಿನ ದುಃಖ ಒದಗುತ್ತದೆ. ನ್ಯಾಯದಾನದೊಂದಿಗೆ ಪ್ರಕರಣ ಅಂತ್ಯವಾಗುವುದಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆ…

Read More

ಬೆಂಗಳೂರು:- ಇನ್ಮುಂದೆ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ತಾಜಾ ಮೀನು ಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಕೊಡುವುದು ಹಾಗೂ ಮನೆ ಬಾಗಿಲಿಗೆ ತಾಜಾ ಮೀನು ತಲುಪಿಸುವ ಉದ್ದೇಶದಿಂದ ಸರ್ಕಾರ ಮತ್ಸ್ಯವಾಹಿನಿ ವಾಹನ ಆರಂಭಿಸಿದೆ. ಸದ್ಯ 150 ವಾಹನ ಸೇವೆಯನ್ನು ಮೀನುಗಾರಿಕಾ ಇಲಾಖೆ ಆರಂಭಿಸಿದ್ದು, ಮುಂದೆ ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಈ 150 ಮತ್ಸ್ಯವಾಹಿನಿ ವಾಹನಗಳು ಬೆಂಗಳೂರು ನಗರದಲ್ಲಿ ಸಂಚರಿಸಲಿದ್ದು, ಬೆಳಗ್ಗೆ ತಾಜಾ ಮೀನು, ಸಂಜೆ ಮೀನು ಖಾದ್ಯಗಳ ಮಾರಾಟ ಮಾಡಲಾಗುತ್ತದೆ. ವಾಹನ ಭದ್ರತಾ ಠೇವಣಿ 2 ಲಕ್ಷ ರೂ ಹಾಗೂ ಮಾಸಿಕ 3000 ರೂ. ಬಾಡಿಗೆಯನ್ನು ರಾಜ್ಯ ಸರ್ಕಾರದಿಂದ ನೀಡಲಾಗುತ್ತದೆ. ಬ್ಯಾಟರಿ ಚಾಲಿತ ತ್ರಿಚಕ್ರ ವಾಹನದಲ್ಲಿ ಮೀನು ಖಾದ್ಯ ಮಾಡುವ ವ್ಯವಸ್ಥೆ ಕೂಡ ಇದ್ದು, ಮುಂದಿನ ದಿನಗಳಲ್ಲಿ ಉಳಿದ ಜಿಲ್ಲೆಗಳಿಗೆ 150 ವಾಹನಗಳನ್ನು ಸರ್ಕಾರ ವಿತರಿಸುವ ಸಾಧ್ಯತೆ ಇದೆ. ಇನ್ನು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ಮೀನು ನಮ್ಮ ಆಹಾರ ಸಂಸ್ಕೃತಿಯ ಪ್ರಮುಖ ಭಾಗ. ಅತ್ಯಂತ ಆರೋಗ್ಯಕಾರಿ…

Read More

ತೆಲಂಗಾಣ: ಪಂಚ ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಪ್ರಚಾರದ ಭರಾಟೆ ಜೋರಾಗಿದೆ. ತೆಲಂಗಾಣ ರಾಜ್ಯದ ಜಗ್ತಿಯಾಲ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ತೆಲಂಗಾಣ ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಶೇ. 4 ಮೀಸಲಾತಿಯನ್ನು ಪರಿಶಿಷ್ಟ ಜಾತಿ, https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಮರು ಹಂಚಿಕೆ ಮಾಡೋದಾಗಿ ಭರವಸೆ ನೀಡಿದ್ದಾರೆ.  ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಸಮುದಾಯಕ್ಕೆ ಮೀಸಲಾತಿ ಮರು ಹಂಚಿಕೆ ಮಾಡಬೇಕಿದೆ. ಹೀಗಾಗಿ, ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಲಾಗಿರುವ ಶೇ. 4 ಮೀಸಲಾತಿಯನ್ನು ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

Read More

ಬೆಂಗಳೂರು:- ನಿಗಮ- ಮಂಡಳಿ ನೇಮಕ ಕುರಿತು ಸುರ್ಜೆವಾಲ ಜೊತೆಗೆ ಸಭೆ ನಡೆದಿದ್ದು, ಸಭೆಯ ಬಳಿಕ DCM ಡಿಕೆಶಿ ಮಹತ್ವದ ಮಾಹಿತಿ ನೀಡಿದ್ದಾರೆ. ಪಕ್ಷದ ಸಂಘಟನೆ, ನಿಗಮ ಮಂಡಳಿ ನೇಮಕ ಸೇರಿದಂತೆ ಶಾಸಕರು ಹಾಗೂ ಕಾರ್ಯಕರ್ತರಿಗೆ ಅಧಿಕಾರ ನೀಡುವ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. ಶಾಸಕರಿಗೆ ಜವಾಬ್ದಾರಿ ನೀಡುವ ಬಗ್ಗೆ ಮೊದಲ ಸುತ್ತಿನ ಚರ್ಚೆ ಆಗಿದ್ದು, ಈಗಿನ ಪಟ್ಟಿಯನ್ನು ಕೇಂದ್ರ ನಾಯಕರು ಪರಿಶೀಲಿಸಲಿದ್ದಾರೆ. ನಂತರ ಎರಡನೇ ಸುತ್ತಿನ ಚರ್ಚೆ ಆಗಲಿದೆ.” ಈ ಪ್ರಕ್ರಿಯೆ ಪೂರ್ಣಗೊಳ್ಳಲು ಎಷ್ಟು ಸಮಯಾವಕಾಶ ಬೇಕು ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, “ಪಂಚರಾಜ್ಯ ಚುನಾವಣೆ ನಡೆಯುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ನಾನು ಪ್ರಚಾರಕ್ಕೆ ಹೋಗಬೇಕಿದೆ. ಆದಷ್ಟು ಬೇಗ ಈ ಪ್ರಕ್ರಿಯೆ ಮಾಡುತ್ತೇವೆ” ಎಂದರು. ಗೃಹಸಚಿವರು ಮುನಿಸಿಕೊಂಡಿದ್ದಾರೆ ಎಂಬ ಬಗ್ಗೆ ಚರ್ಚೆ ಆಗುತ್ತಿದೆಯಲ್ಲ ಎಂದು ಕೇಳಿದಾಗ, “ಗೃಹಸಚಿವರು ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು. ಬೆಳಗಾವಿಯಿಂದ ಬಂದು ಚರ್ಚೆ ಮಾಡಿದ್ದಾರೆ. ಯಾರು ಯಾಕೆ ಮುನಿಸಿಕೊಳ್ಳುತ್ತಾರೆ” ಎಂದು ಕೇಳಿದರು. ಲೋಕಸಭೆ ಚುನಾವಣೆ ಸಂಬಂಧದ…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಜನರೇ ನೀವು ಕಾವೇರಿ ನೀರನ್ನ ಕುಡಿಯುತ್ತಿದ್ದರೆ, ಈ ಸ್ಟೋರಿ ಮಿಸ್ ಮಾಡ್ದೆ ನೋಡಿ. ಕರುನಾಡಿನ ಜೀವನಾಡಿ ಎಂದ್ರೆ ಅದು ಕಾವೇರಿ. ಈ ಕಾವೇರಿ ನದಿಯನ್ನು ಕಲುಷಿತಗೊಳಿಸುವ ಕೆಲಸಕ್ಕೆ ಕೊಳ್ಳೇಗಾಲ ನಗರಸಭೆ ಮುಂದಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರಭಾಗದಲ್ಲಿರುವ ಒಳಚರಂಡಿ ಮತ್ತು ಕೊಳಚೆ ನೀರು ಶುದ್ದಿಕರಣ ಘಟಕದಲ್ಲಿ ನೀರು ಸರಿಯಾಗಿ ಶುದ್ಧೀಕರಣವಾಗ್ತಿಲ್ಲ. ಈ ಅಶುದ್ದ ನೀರನ್ನೂ ಕುಪ್ಪಂ ಕಾಲುವೆ ಮುಖಾಂತರ ಹರಿಯಬಿಡಲಾಗ್ತಿದೆ. ಈ ನೀರು ರೈತರ ಜಮೀನುಗಳಿಗಳಿಗಷ್ಟೇ ಅಲ್ಲದೇ ದಾಸನಪುರ,ಹರಳೆ ಗ್ರಾಮದ ಮೂಲಕ ನೇರವಾಗಿ ಕಾವೇರಿ ನದಿಯ ಒಡಲನ್ನು ಸೇರುತ್ತಿದೆ.ಕಾವೇರಿ ಜನರ ಜೀವನಾಡಿಯಾಗಿದ್ದು,ಕಾವೇರಿ ನದಿಯ ಪಾವಿತ್ರ್ಯತೆ ಕಾಪಾಡಬೇಕಾದ ಜನಪ್ರತಿನಿಧಿಗಳು,ಅಧಿಕಾರಿಗಳ ಬೇಜವಾಬ್ದಾರಿ,ನಿರ್ಲಕ್ಷ್ಯತನದಿಂದ ಕಾವೇರಿ ಮಲಿನವಾಗ್ತಿದ್ದಾಳೆಂದು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಇನ್ನು ಈ ಕಾವೇರಿ ನದಿ ಹಲವು ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಆಸರೆಯಾಗಿದೆ.ಪ್ರಮುಖವಾಗಿ ಮಂಡ್ಯ, ರಾಮನಗರ, ಬೆಂಗಳೂರು ಜಿಲ್ಲೆಗಳಿಗೆ ಈ ನೀರನ್ನೂ ಕುಡಿಯುವ ಉದ್ದೇಶದಿಂದ ಬಳಕೆ ಮಾಡಿಕೊಳ್ಳುತ್ತಿದ್ದಾರೆ.ಈಗಾಗ್ಲೇ ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿ ಕುಡಿಯುವ ನೀರಿಗಾಗಿ ನೆರೆ ರಾಜ್ಯ ತಮಿಳುನಾಡು…

Read More

ಬಾಗಲಕೋಟೆ: ಬಿಜೆಪಿಯ ಬಹಳಷ್ಟು ಅತೃಪ್ತ ನಾಯಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಇಲ್ಲಿ ಬಂದ ಮೇಲೆ ಅವರ ಸ್ಥಾನಮಾನದ ಬಗ್ಗೆಯೂ ಆಲೋಚನೆ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಲಕ್ಷ್ಮಣ್‌ ಸವದಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಬಾಗಲಕೋಟೆ ನಗರದಲ್ಲಿ ಮಾತನಾಡಿದ ಅವರು, ” ಅನೇಕ ಬಿಜೆಪಿ ನಾಯಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ, ಅವರ ಕ್ಷೇತ್ರದಲ್ಲಿ ಸಹಮತ ಇರುವ ಬಗ್ಗೆ ಚರ್ಚೆ ಮಾಡುತ್ತೇವೆ. ಬರುವವರನ್ನ ಕರೆತಂದಾಗ ಯಾರಿಗೂ ಅನ್ಯಾಯ ಮತ್ತು ತೊಂದರೆಯಾಗದಂತೆ ನೋಡಿಕೊಳ್ಳಬೇಕು ” ಎಂದರು. ಈಗ ಎಷ್ಟು ಜನ ತಮ್ಮ ಸಂಪರ್ಕದಲ್ಲಿದ್ದಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸವದಿ, ” ನಾವು ಗೋಲಿ ಹೊಡೆಯುವಾಗ ಎರಡು ರೀತಿಯಿಂದ ಹೊಡೆಯುತ್ತೇವೆ. ಒಂದು ಚರ್ರಿಗೋಲಿ ಅಂತ ಇರುತ್ತೇ ಅದು ಛಿದ್ರವಾಗಿರುತ್ತೇ, https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಅದು ಎಷ್ಟು ಮಂದಿಗೆ ಬಡಿಯುತ್ತೋ ಗೊತ್ತಿಲ್ಲ. ಫೈರಿಂಗ್ನಲ್ಲಿ ಎರಡು ರೀತಿ ಇರುತ್ತೇ, ಯಾವಾಗ ಯಾವ ಸಂದರ್ಭದಲ್ಲಿ ಯಾವ ಫೈರಿಂಗ್ ಹೊಡೆಯುತ್ತೇವೆ ಗೊತ್ತಿಲ್ಲ ಎಂದರು. ಫೈರಿಂಗ್ ಮಾಡೋದೆ ಫಿಕ್ಸಾ ಎಂಬ ಪ್ರಶ್ನೆಗೆ, ” ಇದು ನಮ್ಮ ಕರ್ತವ್ಯ,…

Read More

ಬೆಂಗಳೂರು:- ಜಾತಿ ಜನಗಣತಿ ವರದಿ ಬಿಡುಗಡೆಗೆ ಡಿಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವರದಿ ಬಿಡುಗಡೆಗೆ ತುದಿಗಾಲಿನಲ್ಲಿ ನಿಂತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಹೋದಲ್ಲಿ ಬಂದಲ್ಲಿ ಜಾತಿಜನಗಣತಿ ವರದಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಇದಕ್ಕೆ ಲಿಂಗಾಯತ ಸಮುದಾಯ ಮಾತ್ರವಲ್ಲದೆ, ಒಕ್ಕಲಿಗ ಸಮುದಾಯವೂ ವಿರೋಧ ವ್ಯಕ್ತಪಡಿಸುತ್ತಿದೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಿರುವ ವರದಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಡಿ.ಕೆ.ಶಿವಕುಮಾರ್‌ ಕೂಡ ಸಹಿ ಹಾಕಿದ್ದಾರೆ. ಗೃಹಸಚಿವ ಡಾ.ಜಿ.ಪರಮೇಶ್ವರ, ಸಚಿವರಾದ ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ವರದಿ ಜಾರಿಗೆ ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ ಹೇರುತ್ತಲೇ ಇದ್ದಾರೆ. ಆದರೆ, ವರದಿ ಬಿಡುಗಡೆಗೆ ಲಿಂಗಾಯತ ಸಮುದಾಯ ವಿರೋಧ ವ್ಯಕ್ತಪಡಿಸಿದೆ

Read More