ಧಾರವಾಡ: ನಾಳೆ ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವೆ 2023ರ ವಿಶ್ವಕಪ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ಉಭಯ ತಂಡಗಳಿಗೆ ಶುಭಾಶಯಗಳ ಮಾಹಾ ಪೂರವೆ ಹರಿದು ಬರುತ್ತಿದೆ. ಹಾಗೇ ಧಾರವಾಡದಲ್ಲೊಬ್ಬರು ಕಲಾವಿದ ಮಣ್ಣಿನಲ್ಲಿ 23 ಸೆ.ಮೀ. ಎತ್ತರದ ವಿಶ್ವಕಪ್ ಮಾಡುವ ಮೂಲಕ ವಿಶೇಷವಾಗಿ ಟೀಂ ಇಡೊಯಾಗೆ ಶುಭ ಹಾರೈಸಿದ್ದಾರೆ. ಧಾರವಾಡ ಪರಿಸರ ಸ್ನೇಹಿ ಕಲಾವಿದರಾದ ಮಂಜುನಾಥ ಹಿರೇಮಠ ಅವರು, 2023ರ ವಿಶ್ವಕಪ್ ಕದನದ ಹಿನ್ನೆಲೆ 23 ಸೆಂಟಿ ಮೀಟರ್ ಎತ್ತರದ ವಿಶ್ವಕಪ್ನ್ನು ಮಣ್ಣಿನಲ್ಲಿ ಸಿದ್ಧಪಡಿಸಿ ಗಮನ ಸೆಳೆಯುವುದಿದ್ದಾರೆ. ಇನ್ನೂ ಮಣ್ಣಿನನಲ್ಲಿ ಸಿದ್ಧವಾದ 23 ಸೆ.ಮಿ ಎತ್ತರದ ವಿಶ್ವಕಪ್ ಥೇಟ್ ವಿಶ್ವಕಪ್ನಂತೆಯೇ ಕಾಣಿತ್ತಿದ್ದು, ಗೆದ್ದು ಬಾ ಟೀಂ ಭಾರತ ಎಂದು ಹೇಳುವ ಮೂಲಕ ಭಾರತ ತಂಡವನ್ನು ಹಾರೈಸಿದ್ದಾರೆ. ಇನ್ನೂ ಮಂಜುನಾಥ ಹಿರೇಮಠ ಅವರು ವಿಶೇಷ ವ್ಯಕ್ತಿಗಳು ಹುಟ್ಟು ಹಬ್ಬ ಹಾಗೂ ದೇಶದ ವಿಶೇಷ ಸಾಧನೆಗಳು ನಡೆದಾಗ ತಮ್ಮ ಕೈ ಚಳಕದಿಂದಲೇ ವಿಶೇಷವಾಗಿ ಏನಾದರೂ ಒಂದು ಮಾಡಿ ಶುಭ ಹಾರೈಸಿತ್ತಲೇ ಬದಿದ್ದು, ಈಗ ವಿಶ್ವಕ್ನ್ನು…
Author: AIN Author
ಕಲಬುರಗಿ: ಇಂದಿನಿಂದ ಎರಡು ದಿನಗಳ ಕಾಲ ನಡೆಯುವ KEA ಪರೀಕ್ಷೆಯ ಬಂದೋಬಸ್ತ್ ಅತ್ಯಂತ ಬಿಗಿಯಾಗಿದೆ.. ಕಲಬುರಗಿಯಲ್ಲಿ ಸೆಕ್ಯೂರಿಟಿ ಜೋರಾಗಿದ್ದು ರೂಲ್ಸ್ ಅಂದ್ರೆ ಅಂತ KEA ಹಾಕಿದ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ..ತಾಳಿ ಕಾಲುಂಗುರ ಹೊರತು ಪಡಿಸಿ ಇನ್ಯಾವುದಕ್ಕೂ ಅವಕಾಶ ಇಲ್ಲದ ಕಾರಣ ಯುವತಿಯರು ಕಿವಿಯೋಲೆ ಬಿಚ್ಚಿ ಎಕ್ಸಾಂ ಬರೆಯಲು ಹೋದ್ರು.. ಇದೇವೇಳೆ ಯುವಕರಿಗೂ ಚಕಿಂಗ್ ಜೋರಾಗಿ ಮಾಡಲಾಗ್ತಿದೆ.. ಆಫ್ ಶರ್ಟ್ ತೊಟ್ರೂ ಅದರ ಮೇಲೆ ಕಂಪನಿಯ ಮೆಟಲ್ ರೂಪದ ಲೇಬಲ್ ಇದ್ರೂ ಅದನ್ನ ಕಟ್ ಮಾಡಿ ಪರೀಕ್ಷಾ ಕೇಂದ್ರಕ್ಕೆ ಬಿಡುವ ದೃಶ್ಯ ಎದ್ದು ಕಾಣುತಿತ್ತು.. ಎರಡು ದಿನಗಳ ಈ ಪರೀಕ್ಷೆಗೆ ಕಲಬುರಗಿಯಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನ ತೆರೆಯಲಾಗಿದೆ..
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕು ಕಚೇರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ ನೀಡಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ತೆರಳುವಾಗ ಮಾರ್ಗಮಧ್ಯೆ ದಿಢೀರ್ ಭೇಟಿ ನೀಡಿದ್ದು, ಕಂದಾಯ ಸಚಿವರ ದಿಢೀರ್ ಭೇಟಿ ಕಂಡು ಅಧಿಕಾರಿಗಳು ಕಕ್ಕಾಬಿಕ್ಕಿ ಆಗಿದ್ದಾರೆ. ಇದೇ ವೇಳೆ ಸಾರ್ವಜನಿಕರು ಸಾಲು ಸಾಲು ಸಮಸ್ಯೆ ಹೇಳಿಕೊಂಡಿದ್ದಾರೆ. ರೈತರೊಬ್ಬರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ದೂರು ನೀಡಲಾಗಿದೆ. ಜನರ ಎದುರೇ ಅಧಿಕಾರಿಗಳನ್ನು ಸಚಿವ ಕೃಷ್ಣಭೈರೇಗೌಡ ತರಾಟೆ ತೆಗೆದುಕೊಂಡಿದ್ದಾರೆ. ಅಧಿಕಾರಿಗೆ 5 ಬಾರಿ ನೋಟಿಸ್ ನೀಡಿದ್ದೇನೆ ಎಂದು ತಹಶೀಲ್ದಾರ್ ಹೇಳಿದ್ದು, 5 ಬಾರಿ ನೋಟಿಸ್ ನೀಡಿ ಇನ್ನೂ ಯಾಕೆ ಕಾಯ್ತಾ ಇದ್ದೀರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಅಹವಾಲು ಸ್ವೀಕರಿಸಿ ಹಾಸನಕ್ಕೆ ತೆರಳಿದ್ದಾರೆ.
ಬೆಂಗಳೂರು: ನಾಳೆ ಭಾರತ VS ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಮ್ಯಾಚ್ ಹಿನ್ನಲೆ ವಿಶ್ವಕಪ್ ನಲ್ಲಿ ಭಾರತ ಗೆಲವು ಸಾಧಿಸುವಂತೆ ಬಂಗಾರದಲ್ಲಿ ಟ್ರೋಫಿ ಸಿದ್ಧಪಡಿಸಿ ಬಂಗಾರದ ಅಂಗಡಿ ಮಾಲೀಕ ಶುಭ ಕೋರಿದ್ದಾರೆ. ಗಾಯತ್ರಿ ನಗರದ ಗೋಲ್ಡ್ ಸ್ಮಿತ್ ಕೈಯಲ್ಲಿ ಭಾರತ ಮೂರು ವಿಶ್ವಕಪ್ ಟ್ರೋಫಿ ಸಿದ್ದವಾಗಿದೆ. ಮೂರನೇ ವಿಶ್ವಕಪ್ ಟ್ರೋಫಿಗೆ ALL THE BEST INDIA ಅಂತಾ ಶುಭಾಷಯ ಕೋರಿದ್ದಾರೆ.
ಜನಪ್ರಿಯ ಕಾಮಿಡಿ ಶೋಗಳಾದ ಗಿಚ್ಚಿ ಗಿಲಿಗಿಲಿ (Gichchi Giligili), ಮಜಾ ಭಾರತ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಭಾಗಿಯಾಗಿದ್ದ ನಟಿ ಸುಷ್ಮಿತಾ (Sushmita) ಮತ್ತು ಜಗ್ಗಪ್ಪ (Jaggappa) ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಜೊತೆಯಾಗಿಯೇ ಹಲವಾರು ಶೋಗಳಲ್ಲಿ ಈ ಜೋಡಿ ಭಾಗಿಯಾಗಿದ್ದು, ವೇದಿಕೆಯ ಮೇಲೆ ಅನೇಕ ಬಾರಿ ಗಂಡ ಹೆಂಡತಿಯಾಗಿಯೇ ಪಾತ್ರ ನಿರ್ವಹಿಸಿದ್ದಾರೆ. ಹಲವು ದಿನಗಳಿಂದ ಜಗ್ಗಪ್ಪ ಮತ್ತು ಸುಷ್ಮಿತಾ ಲವ್ ಮಾಡುತ್ತಿದ್ದಾರೆ ಎನ್ನುವ ಗಾಸಿಪ್ ಇತ್ತು. ಆದರೆ, ಈ ಜೋಡಿ ಅದನ್ನು ಅಲ್ಲಗಳೆಯುತ್ತಲೇ ಬಂದರು ಕಾಮಿಡಿ ಶೋಗಳಲ್ಲಿ ಅನೇಕ ಬಾರಿ ಗಂಡ ಹೆಂಡತಿ ಪಾತ್ರ ಮಾಡುತ್ತಾ ಬಂದಿರುವುದರಿಂದ ಜನರು ಆ ರೀತಿಯಲ್ಲಿ ತಿಳಿದುಕೊಂಡಿದ್ದಾರೆ ಎಂದು ಪ್ರತಿಕ್ರಿಯಿಸಿದ್ದರು. ಆದರೆ, ಇದೀಗ ಜಗ್ಗಪ್ಪನ ಜೊತೆಯೇ ಸುಷ್ಮಿತಾ ಹಸೆ ಮಣೆ ಏರುತ್ತಿದ್ದಾರೆ. ನಿನ್ನೆ ಮೆಹಂದಿ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದ್ದು, ಆ ಫೋಟೋಗಳನ್ನು ಸುಷ್ಮಿತಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರು ಒಂದೇ ಬಣ್ಣದ ಉಡುಪಿನಲ್ಲಿ ಮಿಂಚಿದ್ದಾರೆ. ಮೆಹಂದಿ ಕಾರ್ಯಕ್ರಮಕ್ಕೆ ಅಚ್ಚುಕಟ್ಟಾಗಿ ನಡೆದಿದ್ದಕ್ಕೆ ಸುಷ್ಮಿತಾ ಧನ್ಯವಾದಗಳನ್ನು ತಿಳಿಸಿದ್ದಾರೆ.…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಕಸಂದ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ನೆಲದಡಿ ಮೆಟ್ರೊ ನಿಲ್ದಾಣದಿಂದ ಬಾಷ್ ಕ್ಯಾಂಪಸ್ಗೆ ನೇರ ಸಂಪರ್ಕ ಒದಗಿಸಲು ಬಿಎಂಆರ್ಸಿಎಲ್ ಮತ್ತು ಬಾಷ್ ಸಂಸ್ಥೆ ಒಪ್ಪಂದ ಮಾಡಿಕೊಂಡಿವೆ ಎನ್ನಲಾಗಿದೆ. https://ainlivenews.com/millions-of-crores-of-fraud-to-businessman-chaitra-kundapura-confessed-before-cbi/ ಮೆಟ್ರೊ ನಿಲ್ದಾಣದಿಂದ ಬಾಷ್ ಆವರಣಕ್ಕೆ ನೇರ ಸಂಪರ್ಕ ಒದಗಿಸಲು ಒಪ್ಪಂದ ಮಾಡಿಕೊಂಡಿರುವುದರಿಂದ ಬಾಷ್ ಸಂಸ್ಥೆಯ 1,200ಕ್ಕೂ ಅಧಿಕ ಉದ್ಯೋಗಿಗಳಿಗೆ ರಸ್ತೆ ದಾಟುವ ಪ್ರಯಾಸ ತಪ್ಪಲಿದೆ. 30 ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ನೆಲದಡಿ ಸಂಪರ್ಕ (70 ಅಡಿ ಉದ್ದ) ಕಾಮಗಾರಿಯನ್ನು ಬಿಎಂಆರ್ಸಿಎಲ್ ನಿರ್ವಹಿಸಲಿದೆ. ಅದರ ಅಂದಾಜು ವೆಚ್ಚ ₹ 30 ಕೋಟಿಯನ್ನು ಬಾಷ್ ಭರಿಸಲಿದೆ. ಕಾಳೇನ ಅಗ್ರಹಾರದಿಂದ ನಾಗವಾರವರೆಗಿನ ರೀಚ್-6 ಮೆಟ್ರೊ ಮಾರ್ಗದಲ್ಲಿ ಇದು ಮೊದಲ ಒಪ್ಪಂದವಾಗಿದ್ದು, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಮತ್ತು ಬಾಷ್ ಸಂಸ್ಥೆಯ ಹಿರಿಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ಮಯ್ಯ ಒಪ್ಪಂದಕ್ಕೆ ಸಹಿ ಹಾಕಿದರು ಎಂದು ಹೇಳಲಾಗಿತ್ತಿದೆ.
ಕನ್ನಡ ಕಿರುತೆರೆ ಲೋಕದಲ್ಲಿ ಜೀ ಕನ್ನಡ ಈಗಾಗ್ಲೇ ಹಲವು ವಿಭಿನ್ನ ಪ್ರಯತ್ನಗಳನ್ನಾ ಮಾಡುತ್ತಾ ಬಂದಿದೆ. ಕನ್ನಡದ ನಂಬರ್ 1 ಮನರಂಜನಾ ಚಾನೆಲ್ ಎಂಬ ಎಂಬ ಖ್ಯಾತಿಯನ್ನು ತನ್ನದಾಗಿಸಿಕೊಂಡಿದ್ದು, ಜೊತೆಗೆ ಜೀ5 ಒಟಿಟಿ ಮೂಲಕ ಒಳ್ಳೆ ಕಂಟೆಂಟ್ ಸಿನಿಮಾಗಳನ್ನು ಪ್ರಪಂಚದೆದುರು ತೆರೆದಿಡ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಭಿನ್ನ-ವಿಶೇಷ ಯೋಜನೆಗಳನ್ನು ಈ ಒಟಿಟಿ ಹಾಕಿಕೊಂಡಿದೆ. ಸದ್ಯ ಜೀ5 ಒಟಿಟಿಯಲ್ಲಿ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಧಮಾಕ ಎಬ್ಬಿಸ್ತಿದೆ. ಸಾಹಸ ಥ್ರಿಲ್ಲರ್ ಸಿನಿಮಾ ಘೋಸ್ಟ್ ಇದೇ ನವೆಂಬರ್ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಶಿವಣ್ಣನ ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿಲ್ಲದೆ ಇರುವವರು ಜೀ5 ಒಟಿಟಿಯಲ್ಲಿ ಕಣ್ತುಂಬಿಕೊಳ್ಳಬಹುದು. ಈಗಾಗಲೇ ನೋಡಿರುವವರು ಇನ್ನೊಮ್ಮೆ ಒಟಿಟಿಯಲ್ಲೂ ನೋಡಬಹುದು. ಸಿನಿಮಾ ಜೀ5ನಲ್ಲಿ ರಿಲೀಸ್ ಆಗಿರುವುದಕ್ಕೆ ಅದ್ದೂರಿಯಾಗಿ ಪ್ರಚಾರ ಮಾಡಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ ಹತ್ತು ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್ಅನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂಇಎಸ್ ಗ್ರೌಂಡ್ ನಲ್ಲಿ ಘೋಸ್ಟ್ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ.…
ವಾರಂಗಲ್: ” ತೆಲಂಗಾಣದ ವಿಧಾನಸಭೆ ಚುನಾವಣೆಯಲ್ಲಿ ಜನರು ತಮ್ಮ ಅಗಾಧ ಬೆಂಬಲದ ಮೂಲಕ ಕಾಂಗ್ರೆಸ್ ಬಿರುಗಾಳಿಯನ್ನು ಎಬ್ಬಿಸಲಿದ್ದಾರೆ. ಬಿಆರ್ಎಸ್ ಹೀನಾಯವಾಗಿ ಸೋಲು ಕಾಣಲಿದೆ. ಬದಲಿಗೆ ಕಾಂಗ್ರೆಸ್ ತನ್ನ ಬದ್ಧತೆಯಾಗಿರುವ ಒಬಿಸಿ ಸಮುದಾಯದ ಮೀಸಲು ಪ್ರಮಾಣವನ್ನು ಪಂಚಾಯಿತಿಗಳಲ್ಲಿ ಶೇ 23 ನಿಂದ ಶೇ 42ಕ್ಕೆ ಏರಿಕೆ ಮಾಡಲಿದೆ,” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಅವರು ಶುಕ್ರವಾರ ತೆಲಂಗಾಣದ ಪಿನಾಪಾಕ, ನರಸಂಪೇಟ್ನಲ್ಲಿ ಚುನಾವಣಾ ಪ್ರಚಾರ ರಾಲಿಗಳನ್ನು ನಡೆಸಿದರು. ಪಂಚಾಯಿತಿ ಮಟ್ಟದಲ್ಲಿ ಮೀಸಲು ಪ್ರಮಾಣ ಹೆಚ್ಚಳದಿಂದ ತೆಲಂಗಾಣದಲ್ಲಿ 24 ಸಾವಿರ ಹೊಸ ಪಂಚಾಯಿತಿ ನಾಯಕರ ಉದಯವಾಗಲಿದೆ. ಮುಖ್ಯವಾಗಿ ಆದಿವಾಸಿಗರಿಗೆ, ದಲಿತರಿಗೆ ರಾಜಕೀಯದಲ್ಲಿ ಸ್ಥಾನಮಾನ ಸಿಗಲಿದೆ. ರಾಜ್ಯದ ಆಡಳಿತಕ್ಕೆ ಹೊಸ ದಿಕ್ಕು ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. https://ainlivenews.com/how-to-make-hotel-style-palak-paneer-antira-here-it-is/ ತೆಲಂಗಾಣ ರಚನೆಯಾದಾಗ ಹಿದುಳಿದ ವರ್ಗಗಳು, ದಲಿತರು ಮತ್ತು ಆದಿವಾಸಿಗಳು ರಾಜಕಾರಣದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನುವ ಆಶಯ ಕಾಂಗ್ರೆಸ್ಗೆ ಇತ್ತು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮೊದಲು ಮಾಡುವ ಕೆಲಸವೇ ಜಾತಿ ಗಣತಿ…
ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಚೈತ್ರಾ (Chaitra) ತಪ್ಪೊಪ್ಪಿಗೆ ನೀಡಿದ್ದಾರೆ. ಸಿಸಿಬಿ ಎದುರು ಚೈತ್ರಾ ನೀಡಿದ ಸ್ವ-ಇಚ್ಛಾ ಹೇಳಿಕೆ ಏನು..?, ವಿಷದ ಬಾಟಲಿ ನಾಟಕದ ಬಗ್ಗೆ ಚೈತ್ರಾ ಹೇಳಿದ್ದೇನು..?, ಯಾರ್ಯಾರನ್ನ ಬಳಸಿಕೊಂಡು ಎಲ್ಲೆಲ್ಲಿ ಹಣ ವಸೂಲಿಗೆ ನಿಂತಿದ್ರು..?, ಡೀಲ್ ಮಾಡೋದಕ್ಕೆ ಸಿಮ್ ಖರೀದಿ ಮಾಡಿಸಿಕೊಟ್ಟಿದ್ದು ಯಾರು ಎಂಬುದರ ಇಂಚಿಂಚು ಮಾಹಿತಿ ಇಲ್ಲಿದೆ. ತಪ್ಪೊಪ್ಪಿಗೆ ಪ್ರತಿಯಲ್ಲಿ ಏನಿದೆ..?: 2018ರಲ್ಲಿ ಅಭಿನವ ಹಾಲಶ್ರೀಯನ್ನು (Halashree) ಭೇಟಿ ಮಾಡಿದ್ದೆ. ನನಗೂ ಬಿಜೆಪಿಯ ಕೆಲ ನಾಯಕರು ಗೊತ್ತಿದ್ರಿಂದ ಅಭಿನವ ಹಾಲಶ್ರೀ ನನಗೆ ಒಂದು ಮಾತು ಹೇಳಿದ್ರು. ಈಗಾಗಲೇ 10 ಜನರ ಪೈಕಿ 6 ಜನರಿಗೆ ಟಿಕೆಟ್ ಕೊಡಿಸಿದ್ರು. ಇನ್ನು 4 ಜನರಿಗೆ ಟಿಕೆಟ್ ಕೊಡಿಸ್ತೀನಿ ಅಂತ ಹೇಳಲಾಗಿತ್ತು. ಬಿಜೆಪಿಯ ಟಿಕೆಟ್ (BJP Ticket) ಯಾರಿಗಾದ್ರೂ ಬೇಕು ಅಂದ್ರೆ ನನಗೆ ಹೇಳಿ ಟಿಕೆಟ್ ಕೊಡಿಸ್ತೀನಿ ಅಂದಿದ್ರು. https://ainlivenews.com/vivekanandas-name-appears-in-the-police-transfer-list/ 2022ರಲ್ಲಿ ಪ್ರಸಾದ್ ಬೈಂದೂರು (Prasad Baindoor) ಮೂಲಕ ನನಗೆ ಗೋವಿಂದ ಬಾಬು ಪೂಜಾರಿ (Govinda…
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಬಿಬಿಎಂಪಿ ಪಾಲಿಕೆ ಹೊಸ ಯೋಜನೆಯೊಂದನ್ನು ರೂಪಿಸಿದ್ದು, ನಗರದಲ್ಲಿ ಲಾಲ್ಬಾಗ್, ಕಬ್ಬನ್ ಪಾರ್ಕ್ ಮಾದರಿಯಲ್ಲಿ ಮತ್ತೊಂದು ಸಸ್ಯಕಾಶಿ ತಲೆ ಎತ್ತಲಿದೆ. https://ainlivenews.com/this-time-the-world-cup-is-here-team-india-will-win-if-it-wins/ ಗಾರ್ಡನ್ ಸಿಟಿಯಲ್ಲಿ ಸುಮಾರು 150 ಎಕರೆ ವಿಸ್ತೀರ್ಣದ ಸಸ್ಯತೋಟ (Plantation) ನಿರ್ಮಿಸಲು ಬಿಬಿಎಂಪಿ ಪ್ಲಾನ್ ಮಾಡಿದೆ. ಈಗಾಗಲೇ ಸಸ್ಯಕಾಶಿ ನಿರ್ಮಾಣಕ್ಕೆ ಅರಣ್ಯ ಇಲಾಖೆ (Forest Department) ಬ್ಲೂ ಪ್ರಿಂಟ್ (Blue Print) ರೆಡಿ ಮಾಡಿದೆ. ಬೆಂಗಳೂರಿನ ಹೊರಭಾಗದಲ್ಲಿ ಸಸ್ಯಕಾಶಿ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ. ಯಲಹಂಕ (Yelahanka) ಬಳಿ ಬಿಬಿಎಂಪಿ 150 ಎಕರೆ ಜಾಗ ಗುರುತಿಸಿದ್ದು, ವಿಭಿನ್ನ, ವಿಶಿಷ್ಟ ರೀತಿಯಲ್ಲಿ ಸಸ್ಯಕಾಶಿ ನಿರ್ಮಾಣವಾಗಲಿದೆ ಸಸ್ಯಕಾಶಿಯಲ್ಲಿ ವಿವಿಧ ಬಗ್ಗೆಯ ಮರಗಳು, ಔಷಧೀಯ ಅಂಶವುಳ್ಳ ಸಸಿಗಳನ್ನು ನೆಟ್ಟು ಬೆಳೆಸಲಾಗುತ್ತದೆ. ಲಾಲ್ ಬಾಗ್, ಕಬ್ಬನ್ ಪಾರ್ಕ್ಗಿಂತ ವಿನೂತನವಾಗಿ ಸಸ್ಯಕಾಶಿ ನಿರ್ಮಾಣವಾಗಲಿದೆ. ಈ ಕುರಿತು ಈಗಾಗಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಡಿಕೆ ಶಿವಕುಮಾರ್ ಅವರಿಂದ ಅನುಮತಿ ಸಿಕ್ಕ ಕೂಡಲೇ ಸಸ್ಯಕಾಶಿ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗುತ್ತದೆ