Author: AIN Author

ಸಿದ್ಧಾಪುರ:- ಜಹೀರ್ ಅಹ್ಮದ್‌ ಹೇಳಿಕೆ ಖಂಡನೀಯ ಎಂದು ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದ ಸಚಿವ ಜಹೀರ್ ಅಹ್ಮದ್ ತೆಲಂಗಾಣದ ಚುನಾವಣಾ ಪ್ರಚಾರದ ಭಾಷಣದಲ್ಲಿ ಸಾಂವಿಧಾನಿಕ ಸ್ಥಾನವಾದ ಸ್ಪೀಕರ್ ಹುದ್ದೆಗೆ ಧರ್ಮ ಮತ್ತು ಜಾತಿಯ ಭಾವನೆ ಮೂಡಿಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಸಾಂವಿಧಾನಿಕ ಹುದ್ದೆಯ ಗೌರವಕ್ಕೆ ಧಕ್ಕೆ ತಂದಿರುವ ಸಚಿವ ಜಹೀರ್ ಅಹ್ಮದ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಮತ್ತು ಸಭಾಧ್ಯಕ್ಷ ಯು.ಟಿ ಖಾದರ್ ಅವರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು ಸಿದ್ದರಾಮಯ್ಯ ಅವರು ಈ ಹೇಳಿಕೆಯ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದರು. ಕಾಂಗ್ರೆಸ್ ಪಕ್ಷ ನೂತನ ಶಿಕ್ಷಣ ನೀತಿಯನ್ನು ರದ್ದುಗೊಳಿಸಿ, ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದೆ. ಇದು ಪೂರ್ವಾಪರ ಚಿಂತನೆ ಇಲ್ಲದೆ, ತಜ್ಞರ ಸಲಹೆ ಪಡೆಯದೆ ಏಕಾಏಕಿ ಪಡೆದ ನಿರ್ಧಾರವಾಗಿದೆ. ಇದರಿಂದ ಶಿಕ್ಷಣದಲ್ಲಿ ಗೊಂದಲ ಉಂಟಾಗುತ್ತಿದ್ದು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಸಿದ್ಧರಾಮಯ್ಯ ಅವರು ಎಡಪಂಥೀಯರ ಕೈಗೊಂಬೆಯಾಗಿ…

Read More

ಯಲಹಂಕ: ಬೆಂಗಳೂರು ಉತ್ತರ ತಾಲ್ಲೂಕು ಯಲಹಂಕ ವಿಧಾನಸಭಾ ಕ್ಷೇತ್ರ ದಾಸನಪುರ ಹೋಬಳಿಯ ತುಮಕೂರು ರಸ್ತೆ ಮಾದನಾಯಕನಹಳ್ಳಿ ಯಿಂದ ಕಡಬಗೆರೆ ಮತ್ತು ಕಾಚೋಹಳ್ಳಿ ಮಾರ್ಗವಾಗಿ ಸುಮಾರು 700 ಎಲ್ಇಡಿ ಲೈಟ್ಗಳನ್ನು ಎರಡು ಹೈ ಮಾಸ್ಕ್ ಲೈಟ್ ಗಳಿಗೆ ಶಾಸಕ ಎಸ್. ಆರ್.ವಿಶ್ವನಾಥ್ ಚಾಲನೆ ನೀಡಿದರು ನಂತರ ಮಾತನಾಡಿದ ಅವರು, ತುಮಕೂರು ಮುಖ್ಯ ರಸ್ತೆ ಮಾದನಾಯಕನಹಳ್ಳಿ ಯಿಂದ ಕಡಬಗೆರೆ ಮತ್ತು ಕಾಚೋಹಳ್ಳಿ ಮಾರ್ಗವಾಗಿ ಸುಮಾರು 700 ಎಲ್ ಇ ಡಿ ಲೈಟ್ಗಳು ಎರಡು ಹೈ ಮಾಸ್ಕ್ ಲೈಟ್ಗಳನ್ನು ಉದ್ಘಾಟನೆ ಮಾಡಿದ್ದು ಈ ಹಿಂದೆ ಬಿಡಿಎ ಇಂದ ರಸ್ತೆ ಅಗಲೀಕರಣ ಮಾಡಿದ್ದೇವೆ ಬಹಳ ಸುಂದರವಾಗಿ ಈ ರಸ್ತೆ ಯಾಗಿದೆ ಸಾಕಷ್ಟು ಜನಗಳಿಗೆ ಅನುಕೂಲವಾಗಿದೆ,ರಸ್ತೆ ಅಗಲೀಕರಣಕ್ಕೆ ಸಹಕರಿಸಿದ ಮಾಲೀಕರಿಗೆ ಧನ್ಯವಾದಗಳು, ಹಾಗೆ ಈ ಬಾಗದಲ್ಲಿ ರಾತ್ರಿ ವೇಳೆ ಸಾಕಷ್ಟು ಜನ ಓಡಾಡುತ್ತಿದ್ದು ಕತ್ತಲಿತ್ತು ಜನರು ಲೈಟ್ ಗಾಗಿ ಮನವಿ ಮಾಡಿದ್ದರು ನಂತರ ಟೆಂಡರ್ ಮಾಡಿ ಕಾಮಗಾರಿ ಇಂದು ಮುಗಿದಿದ್ದು ಇಂದು ಇದಕ್ಕೆ ಚಾಲನೆ ನೀಡಿದ್ದೇವೆ ಈ ಒಂದು…

Read More

ಹುಬ್ಬಳ್ಳಿ:- ಮುಂದಿನ ತಿಂಗಳಿಂದ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯದ ಜೊತೆಗೆ ರಾಗಿ ಮಾಲ್ಟ್ ಅಥವಾ ಗಂಜಿ ಭಾಗ್ಯ ಯೋಜನೆಯನ್ನು ಪ್ರಕಟಿಸಿರುವ ರಾಜ್ಯ ಸರ್ಕಾರದ ಮುಖ್ಯ ಮಂತ್ರಿಗಳಿಗೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಿ.ರಾಜ್ಯ ಘಟಕ ಹುಬ್ಬಳ್ಳಿ ಇದರ ರಾಜ್ಯಾಧ್ಯಕ್ಷ ಅಶೋಕ.ಎಮ್.ಸಜ್ಜನ.ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ ರಾಜ್ಯ ಕಾರ್ಯಾಧ್ಯಕ್ಷರಾದ ಶರಣಪ್ಪಗೌಡ್ರ.ಆರ್.ಕೆ.ಎಮ್.ವಿ.ಕುಸುಮಾ.ರಾಜ್ಯ ಗೌರವಾಧ್ಯಕ್ಷರಾದ ಎಲ್.ಆಯ್.ಲಕ್ಕಮನವರ.ಶಿಸ್ತು ಸಮಿತಿ ಅಧ್ಯಕ್ಷ ಹನುಮಂತಪ್ಪ ಮೇಟಿ. ಹಾಗೂ ರಾಜ್ಯ ಜಿಲ್ಲೆ ತಾಲೂಕಾ ಹಂತದ ಪದಾಧಿಕಾರಿಗಳು ಸ್ವಾಗತಿಸಿ ಹರ್ಷವ್ಯಕ್ತಪಡಿಸಿದ್ದಾರೆ. ಸಿರಿಧಾನ್ಯಯುಕ್ತ ಆಹಾರವನ್ನು ವಾರದಲ್ಲಿ ಒಂದೆರಡು ದಿನಗಳಾದರೂ ಶಾಲಾ ವಿದ್ಯಾರ್ಥಿಗಳಿಗೆ ನೀಡಬೇಕೆಂದು ನಮ್ಮ ಸಂಘವು ಬಹುಬ ದಿನಗಳಿಂದ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುತ್ತಾ ಬಂದಿದ್ದೆವು.ಈಗ ನೂತನ ಸರ್ಕಾರ ಮಕ್ಕಳ ಆಹಾರ ಪದ್ಧತಿಯಲ್ಲಿ ಪೌಷ್ಟಿಕಾಂಶ ನಾರಿನಾಂಶ ಸರಳ ಜೀರ್ಣ ಕ್ರಿಯೆ ಹೊಂದಿರುವ ರಾಗಿ ಮಾಲ್ಟ್ ಅತ್ಯಂತ ಅನುಕೂಲಕರವಾಗಿದೆ.ಮುಂಬರುವ ದಿನಗಳಲ್ಲಿ ಹಂತ ಹಂತವಾಗಿ ಸರದಿ ಪ್ರಕಾರ ಎಲ್ಲಾ…

Read More

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಾಜ್ಯದ ಜೆಡಿಎಸ್‌ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಸಂವಿಧಾನ ಹಾಗೂ ನಿಯಮಗಳ ಅಡಿಯಲ್ಲಿ ಶಿಸ್ತು ಉಲ್ಲಂಘನೆ ಮಾಡಿದ ಕಾರಣದಿಂದ ಇಬ್ರಾಹಿಂ ಅವರನ್ನು ಸಸ್ಪಂಡ್‌ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ. ಇಬ್ರಾಹಿಂ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರು ಸಂಪೂರ್ಣ ನಿಷ್ಕ್ರಿಯರಾಗಿದ್ದರು. ಸಂಘಟನೆ ಬಲವರ್ಧನೆಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿರುವುದಿಲ್ಲ, ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಪಕ್ಷದ ನಿರ್ಣಯವನ್ನು ಅವರು ಸ್ಪಷ್ಟವಾಗಿ ಉಲ್ಲಂಘನೆ ಮಾಡಿರುತ್ತಾರೆ ಎಂದು ಅವರು ಹೇಳಿದ್ದಾರೆ. ಅಮಾನತು ಹಿನ್ನೆಲೆ: ಪಕ್ಷದ…

Read More

ಕಲಬುರಗಿ :ಈ ಕಾಂಗ್ರೆಸ್ ಸರ್ಕಾರ ಬಂದು ಏಳು ತಿಂಗಳು ಕಳೆಯುತ್ತಾ ಬರುತ್ತಿದೆ ಆದರೆ ಇಲ್ಲಿಯವರೆಗೆ ಒಂದೇ ಒಂದು ಹೊಸ ಪಡಿತರ ಚೀಟಿ ನೀಡಿಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗು ಸೇಡಂ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತಲ್ಕೂರ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ತೆಲ್ಕೂರ್ ಹೊಸ ಪಡಿತರ ಚೀಟಿ ಪಡೆಯಬೇಕು ಎಂದು ರಾಜ್ಯದಲ್ಲಿ ಲಕ್ಷಾಂತರ ಜನರು ಅರ್ಜಿ ಸಲ್ಲಿಸಿದ್ದಾರೆ. ಎಲ್ಲಿ ಬಡವರಿಗೆ ಅನ್ನಭಾಗ್ಯದ ಹಣ ಹಾಗೂ ಗೃಹಲಕ್ಷ್ಮಿ ಹಣ ನೀಡಬೇಕಾಗಿ ಬರುತ್ತದೆ ಎನ್ನುವ ಭಯದಲ್ಲಿ ಸುಮಾರು 2ಲಕ್ಷ 95 ಸಾವಿರ ಕುಟುಂಬಗಳಿಗೆ ಪಡಿತರ ಚೀಟಿ ನೀಡದೇ ಬಾಕಿ ಉಳಿಸಿಕೊಂಡಂತೆ ಕಾಣುತ್ತಿದೆ ಅಂತ ಆರೋಪಿಸಿದ್ದಾರೆ…

Read More

ಬೆಂಗಳೂರು:- ನರೇಗಾ ಯೋಜನೆಯಲ್ಲಿ ಮಾನವ ದಿನಗಳನ್ನ ಹೆಚ್ಚಿಸಲು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬರಗಾಲವಿರುವ ಕಾರಣ ನರೇಗಾ ಯೋಜನೆಯ ಮಾನವ ದಿನಗಳನ್ನು 100 ದಿನಗಳ ಬದಲು 150 ದಿನಗಳಿಗೆ ಏರಿಕೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದರು. ಕನಕಪುರ ತಾಲೂಕಿನಲ್ಲಿ ಪ್ರತಿ ರೈತರಿಗೂ ನರೇಗಾ ಯೋಜನೆಯ ಲಾಭ ದೊರೆಯುವಂತೆ ಮಾಡಿದ್ದೇನೆ. ಸಾಕಷ್ಟು ಜನ ರೈತರು ಕೊಟ್ಟಿಗೆ ಸೇರಿದಂತೆ ಸಾಕಷ್ಟು ಅನುಕೂಲ ಮಾಡಿಕೊಂಡಿದ್ದಾರೆ. ಇದರಿಂದ ಬಿಜೆಪಿ ಸರ್ಕಾರ ನಮ್ಮ ತಾಲೂಕಿಗೆ ಉತ್ತಮವಾಗಿ ನರೇಗಾ ಯೋಜನೆ ಬಳಸಿಕೊಂಡ ತಾಲೂಕು ಎಂದು ವಿಧಿಯಿಲ್ಲದೇ ಪ್ರಶಸ್ತಿ ನೀಡಬೇಕಾಯಿತು” ಎಂದರು. ನಾನು ರಾಜ್ಯದ ಎಲ್ಲ ಸಂಸದರಿಗೆ ಮತ್ತು ರೈತರ ಮಕ್ಕಳು ಎಂದು ಹೇಳಿಕೊಂಡು ಬಿಜೆಪಿ ಜೊತೆ ಸೇರಿರುವವರ ಬಳಿ ಕೈ ಮುಗಿದು ಕೇಳುತ್ತೇನೆ, ಇಡೀ ರಾಜ್ಯದ ಇತಿಹಾಸದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಕ್ಕೆ ತುತ್ತಾಗಿವೆ. ನರೇಗಾ ಯೋಜನೆ ಪ್ರಕಾರ ಬರಗಾಲ ಬಂದಾಗ ಮಾನವ ದಿನಗಳನ್ನು…

Read More

ಪೀಣ್ಯ ದಾಸರಹಳ್ಳಿ‌: ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯ  ಅಕಾಡೆಮಿ ಹಾಗೂ ಇಚ್ಚಾ ಫೌಂಡೇಶನ್ ಸಹಯೋಗದೊಂದಿಗೆ ತಮಿಳುನಾಡಿನ ಹೊಸೂರು ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಸಮಾರಂಭ ಜರುಗಿತು. ಮ್ಯೆಸೂರಿನ ಅರ್.ಭಾಗ್ಯ ಅವರ ಸಂಘಟನಾ ಕೌಶಲ್ಯ ಹಾಗೂ ಸಮಾಜ ಸೇವೆ ಮತ್ತು ವರ್ಷಿತಾ ಸೇವಾ ಪೌಂಡೇಶನ್ ಸಂಸ್ಥೆ ಕರುನಾಡ ರಕ್ಷಣಾ ಪರಿಷತ್ ಯಲ್ಲಿನ ಸೇವೆ ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಈ ವೇಳೆ ಮಾತನಾಡಿದ ಅವರು ‘ನನ್ನ ಸ್ನೇಹಿತರ ಹಾಗೂ ಹಿತೈಷಿಗಳ ಸಹಕಾರದಿಂದ ನಾನು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದು, ಈ ನನ್ನ ಸೇವೆ ಮುತ್ತು ಸಂಘಟನೆಯಲ್ಲಿನ ಕಾರ್ಯಗಳನ್ನು ಹಾಗೂ ಸೇವೆಯನ್ನು ಗುರುತಿಸಿ ವಿವಿಧ ಆಯಾಮಗಳನ್ನ ಮಾಡಿ ಸಮಾಜದಲ್ಲಿನ ಹೋರೆ ಕೋರೆಗಳನ್ನು ತಿದ್ದುವ ಕಾರ್ಯವನ್ನು ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿಯವರು ನನಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದ್ದು ತುಂಬಾ ಖುಷಿಯಾಗಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಬಡವರಿಗೆ ಹಾಗೂ ಕಾರ್ಮಿಕರಿಗೆ ಸಹಾಯ…

Read More

ಚಿತ್ರದುರ್ಗ:- ರಾಜ್ಯದಲ್ಲಿ 15 ಸಾವಿರ ಹುದ್ದೆ ಖಾಲಿ ಇದ್ದು, ಭರ್ತಿ ಮಾಡುವ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, PSI ಹಗರಣದಿಂದ ಗೊಂದಲ ಉಂಟಾಗಿದ್ದು. ಮರು ಪರೀಕ್ಷೆಗೆ ಈಗಾಗಲೇ ಸಿದ್ದತೆ ನಡೆದಿದೆ. 1000 PSI ಹಂತ ಹಂತವಾಗಿ ನೇಮಕಕ್ಕೆ ಸರ್ಕಾರ ಸಿದ್ದವಿದೆ. 3000 ಸಾವಿರ ಪೊಲೀಸ್ ಪೇದೆ ಹುದ್ದೆಗೆ ನೇಮಕಾತಿಗೆ ತಯಾರಿ ನಡೆಸುತ್ತಿದ್ದೇವೆ. DCRE ಸೆಲ್ ಗಳಿಗೆ ನಾವು ದೂರು ಸ್ವೀಕರಿಸಲು ಅಧಿಕಾರ ನೀಡಿದ್ದೇವೆ ಎಂದರು. ಇನ್ನೂ ಮುರುಘಾ ಶ್ರೀ ಕೇಸ್ ವಿಚಾರವಾಗಿ ಮಾತನಾಡಿ, ಕೋರ್ಟ್ ಆದೇಶ ಏನೂ ಬಂದಿದೆ, ಚಾಚು ತಪ್ಪದೇ ಪಾಲಿಸುತ್ತೇವೆ. ಕೋರ್ಟ್ ನಲ್ಲಿ ವಿಷಯ ಇರುವುದರಿಂದ ಕೋರ್ಟ್ ಆದೇಶದಂತೆ ನಡೆದುಕೊಳ್ಳುತ್ತೇವೆ ಎಂದರು. CM ಪಟಾಲಂ ನನ್ನ ಕಳ್ಳನಾಗಿ ಮಾಡುತ್ತಿದ್ದಾರೆ ಎಂಬ HDK ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಆಗಿ ಎರಡು ಬಾರಿ HDK ಕೆಲಸ ಮಾಡಿದ್ದಾರೆ. ಟೀಕೆ ಟಿಪ್ಪಣಿ ಮಾಡಲಿ ನಾವು ಬೇಡ ಎಂದು ಹೇಳಲ್ಲ. ಸಲಹೆ ಬೇಕು…

Read More

ಗದಗ: ಕುಡಿದ ಮತ್ತಿನಲ್ಲಿ ತಂದೆಯೇ ಹಸುಗೂಸನ್ನು ಹೊತ್ತು ತಂದು ಅಮಾನವೀಯವಾಗಿ ವರ್ತಿಸಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಕಳೆದ ಒಂದು ವಾರದ ಹಿಂದೆ ಗದುಗಿನ ಖಾಸಗಿ ಆಸ್ಪತ್ರೆಯಲ್ಲಿ ಮಗು ಜನಿಸಿತ್ತು. ಮಗುವಿನ ತಾಯಿ ಗದಗ ತಾಲೂಕಿನ ಡಂಬಳ ಗ್ರಾಮ ಮತ್ತು ತಂದೆ ಸವಣೂರ ತಾಲೂಕಿನ ಕೃಷ್ಣಾಪುರದವರಾಗಿದ್ದು ಇಬ್ಬರೂ ಪ್ರೇಮ ವಿವಾಹವಾಗಿದ್ದು. ಯಾವುದೋ ಕಾರಣಕ್ಕೆ ಗಂಡ ಹೆಂಡತಿಯ ನಡುವೆ ಮನಸ್ಥಾಪ ಆಗಿ ಗಂಡ ಹಸುಗೂಸನ್ನು ಎತ್ತಿಕೊಂಡು ಗದಗದಿಂದ ತನ್ನೂರಿಗೆ ಹೋಗುವಾಗ ಲಕ್ಷೇಶ್ವರ ಪಟ್ಟಣಕ್ಕೆ ಬಂದಿದ್ದಾನೆ. ಲಕ್ಷೇಶ್ವರ ಬಸ್ ನಿಲ್ದಾಣದಲ್ಲಿ ವೃದ್ಧೆಯೋರ್ವರ ಕೈಯಲ್ಲಿ ಕೂಸನ್ನು ಕೊಟ್ಟು ಮದ್ಯ ಕುಡಿಯಲು ಹೋಗಿದ್ದನಂತೆ. ಈ ವೇಳೆ ತಾನು ಹೋಗುವ ಬಸ್ ಬಂದ ಹಿನ್ನಲೆ ವೃದ್ಧೆ ಕೂಸನ್ನು ಅಲ್ಲಿಯೇ ಬಿಟ್ಟು ಬಸ್ ಹತ್ತಿದ್ದಾಳೆ. ವಾಪಸ್ ಬಂದ ಪಾಪಿ ತಂದೆ ಕೂಸನ್ನು ಎತ್ತಿಕೊಂಡು ಹಸುಗೂಸಿನ ಪ್ರಜ್ಞೆಯೂ ಇಲ್ಲದೇ ರಸ್ತೆಯುದ್ದಕ್ಕೂ ಜೋತಾಡಿಸಿದ್ದಾನೆ. ತಾಯಿಯಿಂದ ಬೇರ್ಪಟ್ಟ ಕೂಸು ಹಸಿವು, ನೋವಿನಿಂದ ಕಿರಚಾಡಿದೆ. ಇದನ್ನು ಕಂಡು ಮಕ್ಕಳ ಕಳ್ಳನೆಂದು ಭಾವಿಸಿದ ಸಾರ್ವಜನಿಕರು…

Read More

ಬಳ್ಳಾರಿ:- ದಸರಾ ಹಾಗೂ ದೀಪಾವಳಿ ನೆಪದಲ್ಲಿ ಇಲಾಖೆ ಹೆಸರಿನಲ್ಲಿ ಅಗ್ನಿಶಾಮಕ ದಳದ ನೌಕರ ಎಂ.ಪ್ರಭಾಕರ್ ಸ್ವಾಮಿ ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಪ್ರತಿ ಅಂಗಡಿಗೆ ತೆರಳಿ ಹಣ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹಬ್ಬದ ನೆಪದಲ್ಲಿ ಪೆಟ್ರೋಲ್ ಬಂಕ್, ರಸಗೊಬ್ಬರ, ಮದ್ಯದಂಗಡಿ ಸೇರಿದಂತೆ ವಿವಿಧ ಕಡೆ 500 ರಿಂದ 1000 ರೂ.ವರೆಗೆ ಚಂದಾ ವಸೂಲಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಕುರಿತು ಠಾಣೆಯ ಅಗ್ನಿಶಾಮಕ ವಾಹನ ಚಾಲಕ ಶಾಂತಪ್ಪ ಅವರು, ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕೈಗೊಂಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಹೀಗಾಗಿ ಶಾಂತಪ್ಪ ಸೇರಿದಂತೆ ಕೆಲ ಸಿಬ್ಬಂದಿಯು, ಪ್ರಭಾಕರ್ ಸ್ವಾಮಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಮಹಾ ನಿರ್ದೇಶಕರು ಹಾಗೂ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

Read More