Author: AIN Author

ಬೆಂಗಳೂರು:- ವಿ.ಸೋಮಣ್ಣ ಕಾಂಗ್ರೆಸ್ ಸೇರಿದರೆ ನಮ್ಮದೇನು ತಕರಾರಿಲ್ಲ ಎಂದು ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಾಜಿ ಸವಿವ ವಿ. ಸೋಮಣ್ಣ ಕಾಂಗ್ರೆಸ್ ಸೇರಿದರೆ ನಮ್ಮದೇನು ತಕರಾರು ಇಲ್ಲ. ಅವರು ಬಂದ್ರೆ ನಾವು ಸ್ವಾಗತ ಮಾಡುತ್ತೇವೆ. ಏನು ಬೆಳವಣಿಗೆ ಆಗುತ್ತಿದೆ ಎಂದು ಗೊತ್ತಿಲ್ಲ. ಸೋಮಣ್ಣ ಅವರು ಬಿಜೆಪಿ ಪ್ರಭಾವಿ ಮುಖಂಡರಾಗಿದ್ದಾರೆ. ಅವರು ಕಾಂಗ್ರೆಸ್​ಗೆ ಬಂದರೆ ಸ್ವಾಗತ ಮಾಡುತ್ತೇವೆ. ರಾಜಕೀಯ ರಂಗದಲ್ಲಿ ಅವರದ್ದೇ ಆದ ಶಕ್ತಿ ಇರುತ್ತದೆ ಎಂದು ತಿಳಿಸಿದರು. ಪುತ್ತೂರಿನಲ್ಲಿ ಬಜರಂಗದಳದವರ ಗಡಿಪಾರು ಮಾಡಲು ನೋಟಿಸ್ ನೀಡಲಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು, ಯಾರೂ ಸಹ ಕಾನೂನನ್ನು ಹೊರತು ಪಡಿಸಿ ಕೆಲಸ ಮಾಡಲಾಗಲ್ಲ. ಇಲಾಖೆಯಲ್ಲಿ ಬೇರೇನೂ ಕೆಲಸ ಮಾಡಲಾಗಲ್ಲ. ಬಜರಂಗದಳದವರಾಗಲಿ, ಬೇರೆಯವರೇ ಇರಲಿ, ಸಂಘ – ಸಂಸ್ಥೆಗಳಿರಲಿ ಹಾಗೂ ವೈಯಕ್ತಿಕವೇ ಇರಲಿ ಕಾನೂನಿನ ಚೌಕಟ್ಟಿನಲ್ಲಿ ಇದ್ದರೆ ನಮ್ಮ ಸಹಕಾರ ‌ಇರುತ್ತದೆ. ಪೊಲೀಸ್ ಇಲಾಖೆ ಇರೋದು ಯಾಕೆ? ಎಂದು ಪ್ರಶ್ನಿಸಿದರು. ಪೊಲೀಸ್​ ಇರುವುದು ಕಾನೂನು ವಿರುದ್ಧ ಇರುವವರ ಮೇಲೆ ಕ್ರಮ…

Read More

ಬೆಂಗಳೂರು:- ಲುಲು ಮಾಲ್ ಜಮೀನಿನ ಕುರಿತು ಕುಮಾರಸ್ವಾಮಿ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಏನೇನು ಪಟ್ಟಿ ಕೊಡ್ತಾರೆ, ಅದಕ್ಕೆ ಲೆಕ್ಕ ಕೊಡೋಣ. ತಪ್ಪು ಮಾಡಿದ್ದರೆ ಬೇಕಾದರೆ ಗಲ್ಲಿಗೆ ಹಾಕಲಿ ಎಂದರು. ಜನರೇ ಅವರಿಗೆ ಉತ್ತರ ಕೊಟ್ಟಿದ್ದಾರೆ. ಅವರ ಮಾತು, ಆಚಾರ, ವಿಚಾರಕ್ಕೆ ಉತ್ತರ ನೀಡಿದ್ದಾರೆ. ಇನ್ನೂ ಏನು ಬೇಕಾದರೂ ನಾನು ಉತ್ತರ ಕೊಡುತ್ತೇನೆ. ನಾನು ಮಾಲ್​ ಕಟ್ಟಿರುವ ಜಾಗ ಕೇಂದ್ರ ಸರ್ಕಾರ ಒಂದು ಸಂಸ್ಥೆಯದ್ದು. ಅವರು ದಾಖಲೆ ಮಾಡಿ ಟೆಂಡರ್ ಹಾಕಿದ್ದಾರೆ. ಅದನ್ನು ನಮ್ಮ ಸ್ನೇಹಿತರು ತೆಗೆದುಕೊಂಡಿದ್ದರು. ಅದನ್ನು ನಾನು ಅವರ ಬಳಿ ತೆಗೆದುಕೊಂಡಿದ್ದೇನೆ. ಏನಾದರೂ ತಪ್ಪು ಮಾಡಿದ್ದರೆ ಬೇಕಾದರೆ ಗಲ್ಲಿಗೆ ಹಾಕಲಿ. ಅವರಿಗೆ ಇನ್ನೂ ಗೊತ್ತಿಲ್ಲ. ಅವರ ತಂದೆ 10-15 ವರ್ಷದ ಹಿಂದೆಯೇ ತನಿಖೆ ಮಾಡಿಸಿದ್ದಾರೆ” ಎಂದರು ಎಲ್ಲದಕ್ಕೂ ನಾನು ರೆಡಿ ಇದ್ದೇನೆ. ಈ ಬ್ಲಾಕ್​ಮೇಲ್​ಗೆ ನಾನು ಹೆದರಲ್ಲ. ಅವರಿಗೆ ಏನು ದಾಖಲೆ ಬೇಕೋ…

Read More

ಹಾಸನ: ಹಾಸನ ಜಿಲ್ಲಾ ಪಂಚಾಯತ್​ ಹೊಯ್ಸಳ ಸಭಾಂಗಣದಲ್ಲಿ ಇಂದು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿದ್ದು, ಕಂದಾಯ ಸಚಿವ ಕಷ್ಣ ಭೈರೇಗೌಡ ನೇತೃತ್ವದಲ್ಲಿ ನಡೆಯುತ್ತಿದೆ. https://ainlivenews.com/what-happens-if-tea-coffee-is-given-to-children/ ಫಾರಂ ನಂ.53 ಅರ್ಜಿಗಳು ವಿಲೇವಾರಿ ಮಾಡದ ಅರಕಲಗೂಡು ತಹಶೀಲ್ದಾರ್ ಬಸವರಾಜು ಹಾಗೂ ಬೇಲೂರು ತಹಶಿಲ್ದಾರ್ ಮಮತಾ ವಿರುದ್ದ ಸಚಿವ ಕೃಷ್ಣಭೈರೇಗೌಡ ಗರಂ ಆಗಿದ್ದಾರೆ. ಇಷ್ಟೊಂದು ಅರ್ಜಿಗಳು ಪೆಂಡಿಂಗ್ ಇರಲು ಕಾರಣ ಏನು ಎಂದು ಸಭೆಯಲ್ಲಿ ತಹಶಿಲ್ದಾರ್​ಗೆ ಪ್ರಶ್ನಿಸಿದ್ದಾರೆ.

Read More

ಬೆಂಗಳೂರು: ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನಾಡಿನ ಪ್ರಾತಃಸ್ಮರಣೀಯರು. ಅವರ ಪ್ರಗತಿಪರ ಆಡಳಿತವನ್ನು ಕಂಡು ಮಹಾತ್ಮಾ ಗಾಂಧೀಜಿಯವರು ನಾಲ್ವಡಿ ಅವರನ್ನು ‘ರಾಜರ್ಷಿ’ ಎಂದು ಕರೆದರು. ಮೈಸೂರು ಸಂಸ್ಥಾನವನ್ನು ‘ರಾಮರಾಜ್ಯ’ ಎಂದಿದ್ದರು ಅವರ ಆಳ್ವಿಕೆಯ ಅವಧಿಯಲ್ಲಿಯೇ ಆಗಿರುವ ಸಮಾಜ ಮುಖಿ ಕಾರ್ಯಗಳು ಇಂದಿಗೂ ಪ್ರಾಶಸ್ತವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಹಮ್ಮಿಕೊಂಡ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಹಾಗೂ ವಿಶ್ರಾಂತ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಿ. ಶಿವಲಿಂಗೇಗೌಡ ಅವರು ಅನುವಾದಿಸಿದ ಮೂಲ ʻಖಲ್ಹೀಲ್ ಗಿಬ್ರಾನ್ʼ ಅವರ ಕೃತಿ ʻಮುರಿದ ರೆಕ್ಕೆಗಳುʼ ಪುಸ್ತಕ ಬಿಡುಗೆಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. https://ainlivenews.com/what-happens-if-tea-coffee-is-given-to-children/ ಕನ್ನಡ ಸಾಹಿತ್ಯ ಪರಿಷತ್ತು ಸಮಸ್ತ ಕನ್ನಡಿಗರ ಹೆಮ್ಮೆಯ ವಿಶ್ವಾಸಾರ್ಹ ಸಂಸ್ಥೆ. ಕನ್ನಡಿಗರ ವಿಶ್ವಾಸದ ಪ್ರತೀಕವಾಗಿ ನಮ್ಮಲ್ಲಿ ಇಂದು ೨೧೦೦ಕ್ಕೂ ಹೆಚ್ಚು ದತ್ತಿ…

Read More

ಹುಬ್ಬಳ್ಳಿ : ತಾಲೂಕಿನ ಬು. ಅರಳೀಕಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಉಪಾಧ್ಯಕ್ಷ ಲಿಂಗರಾಜ ಮೆಣಸಿನಕಾಯಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಭಾರತಿ ಮುಧೋಳ, ಬೀಮರಾಜ ಭೈರಪ್ಪನವರ, ಆರೋಗ್ಯ ನಿರೀಕ್ಷಣಾ ಅಧಿಕಾರಿ ವಿದ್ಯಾರಾಣಿ ಹಿರೇಮಠ, ತಾಲೂಕಾ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ಮಾಂತೇಶ ಕುರ್ತಕೋಟಿ, ಆಶಾ ಕಾರ್ಯಕರ್ತೆಯರಾದ ಪುಷ್ಪಾ ಬಡಿಗೇರ ನಿರ್ಮಲಾ ಬಡಿಗೇರ ನಿಲವ್ವ ಹಡಪದ ಸೇರಿದಂತೆ ಅಂಗವಿಕಲರು, ಆರೋಗ್ಯ ಸಿಬ್ಬಂದಿ ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಹುಬ್ಬಳ್ಳಿ ನ.17: ಅಂಗವಿಕಲರು ರೋಗವನ್ನು ತಪಾಸಣೆ ಮಾಡಿಸಿಕೊಂಡು ಸೂಕ್ತ ವೈದ್ಯಕೀಯ ಸೌಲಭ್ಯ ಪಡೆದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿ ಡಾ. ಹುಲಗಣ್ಣ ಇಂಜಗನವರ ಹೇಳಿದರು. ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ತಾಲೂಕ ಪಂಚಾಯತಿ ಹುಬ್ಬಳ್ಳಿ, ಗ್ರಾಮ ಪಂಚಾಯತಿ ಅದರಗುಂಚಿ ಇವರ ಸಹಯೋಗದಲ್ಲಿ ಗ್ರಾಮದ ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿವರವನ್ನು ಆಯೋಜಿಸಿ ಅವರು, ಮಾತನಾಡಿದರು. ಖಾಯಿಲೆಗಳು ವಿಪರೀತವಾಗಿ ಹರಡುತ್ತಿರುವುದರಿಂದ ಅಂಗವಿಕಲರು ಅರೋಗ್ಯ ರಕ್ಷಿಸಿಕೊಳ್ಳುವುದು ಪ್ರಮುಖ ಅದ್ಯತೆಯಾಗಿರುತ್ತದೆ. ಆದ್ದರಿಂದ ಅಂಗವಿಕಲರು ಅರೋಗ್ಯ ತಪಾಸಣೆ ಮಾಡಿಕೊಂಡು ಆರೋಗ್ಯ ಬಗ್ಗೆ ಕಾಳಜಿ ವಹಿಸಬೇಕು ಎಂದರು. ತಾಲೂಕ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ಮಹಾಂತೇಶ ಕುರ್ತಕೋಟಿ ಮಾತನಾಡಿ, ಗ್ರಾಮದ ಎಲ್ಲ ವಿಕಲಚೇತನರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ಬಿಪಿ ಶುಗರ್ ರಕ್ತಹೀನತೆ ಟಿಬಿ ರೋಗಗಳ ಬಗ್ಗೆ ತಪಾಸಣೆಯನ್ನು ಮಾಡಲಾಯಿತು. ಸದರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ 60 ವಿಕಲಚೇತನರು ಭಾಗವಹಿಸಿ ಸದರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಮೆಹರುಬಿ…

Read More

ಬಳ್ಳಾರಿ: ಸ್ಪಾಂಜ್ ಐರನ್ ಕಾರ್ಖಾನೆ ಬಂದ್ʼಗೆ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಳ್ಳಾರಿಯ ಡಿಸಿ ಕಛೇರಿ ಮುಂದೆ ಗ್ರಾಮಸ್ಥರು ಮತ್ತು ರೈತರಿಂದ ಪ್ರತಿಭಟನೆ ನಡೆಸಲಾಗಿದ್ದು, ಸಂಡೂರಿನ ರಣಜಿತ್‌‌ಪುರ್ ಗ್ರಾಮದ ಬಳಿ ಇರೋ ಸ್ವಾಂಜ್ ಐರನ್ ಪ್ಯಾಕ್ಟರಿಯಲ್ಲಿ ಕಾರ್ಖಾನೆಯಿಂದ ವಿಷಕಾರಿ ಅನಿಲ ಸೋರಿಕೆಯಿಂದ ಗ್ರಾಮಸ್ಥರ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಬೆಳೆದ ಬೆಳೆಗಳ ಮೇಲೆ ಧೂಳಿನ ರಾಶಿಯಿಂದ ರೋಷಿ ಹೋಗಿರುವ ಗ್ರಾಮಸ್ಥರು, ಹಲವು ಸಮಸ್ಯೆಗಳಿಗೆ ಕಾರಣವಾಗಿರುವ ರಣಜಿತ್ಪುರ್ ಸ್ಪಂಜ್ ಅಂಡ್ಯ್ ಐರನ್ ಫ್ಯಾಕ್ಟರಿಯಾಗಿದ್ದು, ಪರಿಸರ ಹಾನಿ ಮಾಡ್ತಿರೋ ಐರನ್ ಪ್ಯಾಕ್ಟರಿ ಬಂದ್‌ಗೆ ಆಗ್ರಹಿಸಿದ್ದಾರೆ. ಡಿಸಿ ಕಛೇರಿ ಮುಂದೆ ಗ್ರಾಮಸ್ಥರ ಧರಣಿ, ಸ್ಪಾಂಜ್ ಐರನ್ ಕಾರ್ಖಾನೆ ಶಾಶ್ವತವಾಗಿ ಮುಚ್ಚುವಂತೆ ಜಿಲ್ಲಾಡಳಿತದ ಮೇಲೆ ಒತ್ತಡ ಏರಲಾಗಿದ್ದು, ನೂರಾರು  ಸಂಖ್ಯೆಯ ರೈತರು ಮತ್ತು ಗ್ರಾಮಸ್ಥರು ಬಳ್ಳಾರಿ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

Read More

ಬಾಗಲಕೋಟೆ: ಕಳೆದೈದು ವರ್ಷಗಳಿಂದ ನಡೆಯುತ್ತಿರುವ ಬೆಳಗಾವಿ-ಬಾಗಲಕೋಟೆ ಜಿಲ್ಲೆ ಬೆಸುಗೆ ಮಾಡುವಲ್ಲಿ ಮಹತ್ತರ ಯೋಜನೆಯಾಗಿರುವ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಜಾಕವೆಲ್‌ನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಮಹಿಷವಾಡಗಿ ಸೇತುವೆ ಕಾಮಗಾರಿಯ ವಿಳಂಬನೀತಿಗೆ ಜನತೆ ಆಕ್ರೋಶಗೊಂಡಿದ್ದು, ಶುಕ್ರವಾರ ಅಧಿಕಾರಿಗಳ ಸಭೆಯು ಕೊಂಚ ನಿರಾಳತೆ ತೋರುವಲ್ಲಿ ಕಾರಣವಾಗಿದೆ. ಕೇವಲ ಒಂದು ಕಿ.ಮೀ.ನಷ್ಟು ಸೇತುವೆ ನಿರ್ಮಾಣಕ್ಕೆ ಐದಾರು ವರ್ಷಗಳಿಂದ ವಿಳಂಬವಾಗುತ್ತಿರುವ ಬಗ್ಗೆ ತಾಲೂಕಿನ ಜನತೆಗೆ ಯಕ್ಷ ಪ್ರಶ್ನೆಯಾಗಿ ಕಾಡುತ್ತಿದ್ದರೆ, ಅಧಿಕಾರಿಗಳ ನಿರ್ಲಕ್ಷö್ಯವಂತು ಹೇಳತೀರದು. ಸೇತುವೆ ವೀಕ್ಷಣೆ ನಡೆಸಿ ಇಂದು ನಡೆದ ಮಹತ್ವದ ಸಭೆಯಲ್ಲಿ ನೀರಾವರಿ ಇಲಾಖೆ ಅಧೀಕ್ಷಕ ಅಭಿಯಂತರ ಸುಭಾಷ ಮಾತನಾಡಿ ಭೂ ಪರಿಹಾರದಲ್ಲಿ ರೈತರಿಗೆ ಕಡಿಮೆ ಹಣ ಒದಗಿಸುತ್ತಿರುವದಾಗಿ ರೈತರು ವಿರೋಧಿಸಿದ್ದಾರೆ. ತಿಳುವಳಿಕೆ ನೋಟಿಸ್ ನೀಡಿದಾಗ್ಯೂ ಪಡೆಯದ ಕಾರಣ ಭೂಸ್ವಾಧೀನ ಅನಿವಾರ್ಯವಾಗಿದ್ದು, ಶೀಘ್ರವೇ ಕಾರ್ಯ ನಡೆಯಲಿದೆ ಎಂದರು.  ಈ ಕಾರ್ಯ ಪ್ರಕ್ರಿಯೆಗೊಂಡ ಕೆಲವೇ ದಿನಗಳಲ್ಲಿ ಸೇತುವೆ ಎರಡೂ ಬದಿಯಲ್ಲಿ ರಸ್ತೆ ನಿರ್ಮಾಣ ನಡೆಸಲಾಗುವದು. ಈಗಾಗಲೇ ಸೇತುವೆ ಕಾರ್ಯ ಶೇ.೫೦ ರಷ್ಟು ಮುಕ್ತಾಯಗೊಂಡಿದೆ.…

Read More

ಮೈಸೂರು: ಭಾರತೀಯ ಅಂಚೆ ಇಲಾಖೆ ಮೈಸೂರು ವಿಭಾಗದವರು ಭಗವಾನ್ ಮಹಾವೀರರ ವಿಶೇಷವಾದ ಅಂಚೆ ಕಾರ್ಡ್ ಹಾಗೂ ನಿರ್ವಾಣ ಮಹೋತ್ಸವದ ವಿಶೇಷವಾದ ಮುದ್ರೆಯನ್ನು ಹೊರತಂದರು.  ಮೈಸೂರಿನ ಭಾರತೀಯ ಅಂಚೆ ಕಚೇರಿಗಳ ಸೀನಿಯರ್ ಸೂಪರಿಂಟೆಂಡೆಂಟ್ ಆದ ಐಪಿಎಸ್ ಅಧಿಕಾರಿ ಡಾ.ಎಂಜಲ್ ರಾಜ್ ಅವರು ಬಿಡುಗಡೆಗೊಳಿಸಿದರು. ಮೈಸೂರು ಅರಮೆನಯಲ್ಲಿ ನಡೆದ ಈ ಕಾಠ್ಯಕ್ರವು ಮೈಸೂರು ರಾಜವಮಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರು ಅವರ ಉಪಸ್ಥಿತಿಯಲ್ಲಿ ನಡೆಯಿತು. ಸಮಾರಂಭ ನಡೆಯಿತು. ಅಂಚೆ ಕಾರ್ಡ್ ಹಾಗೂ ಮುದ್ರೆಯ ಪ್ರವರ್ತಕರಾದ ಯುವರಾಜ್ ಜೈನ್ ಹಾಗೂ ರಶ್ಮಿತಾ ಜೈನ್, ಎಕ್ಸಲೆಂಟ್ ಶಿಕ್ಷಣ ಸಂಸ್ಥೆ, ಮೂಡುಬಿದಿರೆ, https://ainlivenews.com/what-happens-if-tea-coffee-is-given-to-children/ ವಿಕಾಸ್ ಜೈನ್, ಕಾರಾಧಕ್ಷರು, ಭಾರತೀಯ ಜೈನ ತೀರ್ಥ ಸಂರಕ್ಷಿಣಿ ಮಹಾಸಭಾ, ಬಿಹಾರ, ಮಹಾವೀರ ಕುಂದೂರ್, ಅಧ್ಯಕ್ಷರು, ಸಂಸ್ಕಾರ ವಿದ್ಯಾಲಯ, ಹುಬ್ಬಳ್ಳಿ ಇವರುಗಳು ಹಾಗೂ ಮೈಸೂರು ಅಂಚೆ ವಿಭಾಗದ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Read More

ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್​ ವಿಪಕ್ಷ ನಾಯಕರ ನೇಮಕಾತಿ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು (ನ.17) ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಹೈಕಮಾಂಡ್ ವೀಕ್ಷಕರು ವಿಪಕ್ಷ ನಾಯಕರ ಹೆಸರು ಘೋಷಣೆ ಮಾಡಲಿದ್ದಾರೆ. ವಿಧಾನಸಭೆಗೆ ಒಕ್ಕಲಿಗ ಮತ್ತು ವಿಧಾನ ಪರಿಷತ್​ಗೆ ಹಿಂದುಳಿದ ವರ್ಗಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ. ವಿಧಾನಸಭೆಗೆ ರೇಸ್​ನಲ್ಲಿ ಶಾಸಕರಾದ ಆರ್. ಅಶೋಕ್, ಡಾ. ಅಶ್ವಥ್ ನಾರಾಯಣ ಮತ್ತು ಅರಗ ಜ್ಞಾನೇಂದ್ರ ಹೆಸರು ಇದೆ. ವಿಧಾನ ಪರಿಷರ್​ಗೆ ಕೋಟ ಶ್ರೀನಿವಾಸ ಪೂಜಾರಿ, ತೇಜಸ್ವಿನಿ ಗೌಡ, ಛಲವಾದಿ ನಾರಾಯಣಸ್ವಾಮಿ ಮತ್ತು ಭಾರತಿ ಶೆಟ್ಟಿ ಹೆಸರು ಒಬಿಸಿ ಕೋಟದಲ್ಲಿ ಸುನಿಲ್ ಕುಮಾರ್ ರೇಸ್​ನಲ್ಲಿದ್ದಾರೆ. ಬಹುತೇಕ ಆರ್. ಅಶೋಕ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ವಿಪಕ್ಷ ನಾಯಕರಾಗಿ ಆಯ್ಕೆ ಸಾಧ್ಯತೆ ಇದೆ. ಬಿಜೆಪಿ ಶಾಸಕಾಂಗ ಸಭೆಗೆ ಹೈಕಮಾಂಡ್ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ‌ ಸೀತಾರಾಮನ್ ಆಗಮಿಸುತ್ತಿದ್ದಾರೆ.

Read More