Author: AIN Author

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿದ್ದಪಡಿಸಿರುವ ಜನತಾ ಜೀವವೈವಿಧ್ಯ ದಾಖಲಾತಿಯನ್ನು ಪುನರ್ವಿಮರ್ಶಿಸಿ ಸಲಹೆ ಸೂಚನೆಗಳನ್ನು ಸ್ವೀಕರಿಸಿ ನವೀಕರಿಸಲು ಜೀವವೈವಿಧ್ಯ ನಿರ್ವಹಣಾ ಸಮಿತಿಯ ಅಧ್ಯಕ್ಷರು ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್ ರವರು ಅಧಿಕಾರಿಗಳಿಗೆ ಸೂಚಿಸಿದರು. ಜೀವವೈವಿದ್ಯ ದಾಖಲಾತಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿ, ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀವವೈವಿದ್ಯ ಉಳಿಸುವ ಅಂಗವಾಗಿ ಯಾವ್ಯಾವು ಯಶಸ್ಸು ಕಂಡಿವೆ ಅದನ್ನು ದಾಖಲಿಸುವಂತಹ ಕೆಲಸವಾಗಬೇಕು. ಬೆಂಗಳೂರಿನಲ್ಲಿರುವ ಪಾರಂಪರಿಕವಾಗಿ ಇರುವಂತಹ ಜಾಗಗಳು, ಹಸಿರು ವನಗಳ ಬಗ್ಗೆ ಸಮಿಕ್ಷೆ ನಡೆಸಿ ವರದಿಸಲ್ಲಿಸಲು ಸೂಚಿಸಿದರು. ಕ್ರಮಬದ್ಧವಾಗಿ ಜೀವವೈವಿಧ್ಯ ನಿರ್ವಹಣೆಗೆ ಬೇಕಾಗುವ ಎಲ್ಲಾ ಅಗತ್ಯ ಸೌಲಭ್ಯವನ್ನು ಪಾಲಿಕೆ ಒದಗಿಸಲಿದೆ ಎಂದು ತಿಳಿಸಿದರು. ಜೀವವೈವಿಧ್ಯ ನಿರ್ವಹಣಾ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಮಾತನಾಡಿ, ನಗರದಲ್ಲಿ ಕೃಷಿ, ಅರಣ್ಯ ಹಾಗೂ ವನ್ಯಜೀವಿ ವಿಭಾಗದಲ್ಲಿ ಜೀವ ವೈವಿಧ್ಯ ನಿರ್ವಹಣೆ ಸಂಬಂಧಿಸಿದಂತೆ ಸಂಪೂರ್ಣ ದಾಖಲಾತಿ ತಯಾರಿಸಲು ಜೀವ ವೈವಿಧ್ಯ ನಿರ್ವಹಣಾ ಸಮತಿ ಸದಸ್ಯರಿಗೆ ಸೂಚಿಸಿದರು. ಕೃಷಿ…

Read More

ನವದೆಹಲಿ: ಇಸ್ರೇಲ್ (Israel) ಮತ್ತು ಪ್ಯಾಲೆಸ್ತೀನ್ (Palestine) ಬಂಡುಕೋರ ಸಂಘಟನೆ ಹಮಾಸ್ (Hamas) ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಅಪಾರ ಪ್ರಮಾಣದ ಸಾವು-ನೋವುಗಳು ಸಂಭವಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಖಂಡಿಸಿದ್ದಾರೆ. ವಾಯ್ಸ್ ಆಫ್ ದಿ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಹೊಸ ಸವಾಲುಗಳ ಕುರಿತು ಮಾತನಾಡಿ, ಭಾರತವು ಸಂಘರ್ಷದಲ್ಲಿ ಸಂಯಮವನ್ನು ಅನುಸರಿಸಿದೆ ಎಂದು ಹೇಳಿದರು. https://ainlivenews.com/what-happens-if-tea-coffee-is-given-to-children/ ನಾವು ಸಂವಾದ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡಿದ್ದೇವೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ನಾಗರಿಕರ ಸಾವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಪ್ಯಾಲೆಸ್ತೀನ್ ಅಧ್ಯಕ್ಷ ಮಹಮದ್ ಅಬ್ಬಾಸ್ ಅವರೊಂದಿಗಿನ ಮಾತುಕತೆಯ ನಂತರ ಭಾರತವು ಪ್ಯಾಲೆಸ್ತೀನಿಯರಿಗೆ ಮಾನವೀಯ ನೆರವು ಕಳುಹಿಸಿದೆ. ಇದು ಜಾಗತಿಕ ಒಳಿತಿಗಾಗಿ ಜಾಗತಿಕ ದಕ್ಷಿಣದ ದೇಶಗಳು ಒಂದಾಗಬೇಕಾದ ಸಮಯ ಎಂದು ಅವರು ತಿಳಿಸಿದರು. 

Read More

ಬೆಂಗಳೂರು: ಕೃಷಿ ಮೇಳದಲ್ಲಿ ಅತ್ಯಂತ ಸಂತೋಷದಿಂದ ಭಾಗಿಯಾಗಿದ್ದೇನೆ. ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ಕೃಷಿ ಮೇಳಕ್ಕೆ ಬರಲುದಕ್ಕೆ ಆಗಲ್ಲ ಅಂತ ಗುರವಾರ ಸಂಜೆ ಹೇಳಿದ್ದೆ. ಮೈಸೂರಿನ ಕಾರ್ಯಕ್ರಮಕ್ಕೆ ಮುಂದಕ್ಕೆ ಹಾಕಿಸಿ ಕೃಷಿಮೇಳಕ್ಕೆ ಬರುವಂತೆ ಕೃಷಿ ಸಚಿವರು ಒತ್ತಾಯಿಸಿದರು. https://ainlivenews.com/joint_pain_suprem_ray_treatment_reiki/ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಸ್ಥಾಪನೆಯಾದ ಮೊದಲ ವಿಶ್ವ ವಿದ್ಯಾಲಯ. ವಿಶ್ವವಿದ್ಯಾಲಯದಲ್ಲಿ ಏನೆಲ್ಲ ತಂತ್ರಜ್ಞಾನ ಇರುತ್ತೆ? ನೀರಿನ ಸಂರಕ್ಷಣೆ ಹೇಗೆ ? ಭೂಮಿ ಫಲವತತ್ತೆ ಕಾಪಾಡುವುದು ಹೇಗೆ ? ಎಂಬ ವಿಷಯವನ್ನ ತಿಳಿಸುವ ಕೆಲಸ ವಿಶ್ವವಿದ್ಯಾನಿಲಯ ಮಾಡುತ್ತೆ. ರಾಜ್ಯದ  ಹೆಚ್ಚಿನ ಜನರು ಕೃಷಿ ಮೇಲೆ ಅವಲಂಬಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಜಿಕೆವಿಕೆಯಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಚಾಲನೆ ಬಳಿಕ ಸಿಎಂ ಸಿದ್ದರಾಮಯ್ಯ ಹೊಸ ತಳಿಗಳ ಬಗ್ಗೆ ಮಾಹಿತಿ ಪಡೆದರು.  ಸಿಎಂ ಸಿದ್ದರಾಮಯ್ಯ ಅವರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸಾಥ್ ನೀಡಿದರು.

Read More

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ವಿಚಾರ ‘ನನಗೆ ಆ ಜವಾಬ್ದಾರಿ ಕೊಟ್ಟರೆ ಸಂತೋಷ ಎಂದು ಬೆಂಗಳೂರಿನಲ್ಲಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ‘ಕೊಡುವ ಸ್ಥಾನಕ್ಕೆ ಗೌರವ ಸಲ್ಲಿಸುವೆ, ಬೇರೆ ಯಾರಿಗೆ ಕೊಟ್ಟರೂ ಅವರೊಂದಿಗೆ ಸಹಕರಿಸಿಕೊಂಡು ಹೋಗುತ್ತೇವೆ. ನಮಗೆ ಪಕ್ಷ, ಸಿದ್ದಾಂತ ಮುಖ್ಯ. ಇಂದು ಸಂಜೆಯೇ ವಿಪಕ್ಷ ನಾಯಕರ ಆಯ್ಕೆ ಆಗಬಹುದು. ಅದಕ್ಕೂ ಮೊದಲು ಅವರು ಪ್ರಮುಖ ನಾಯಕರನ್ನು ಭೇಟಿಯಾಗಿ ವೈಯುಕ್ತಿಕ ಅಭಿಪ್ರಾಯ ಪಡೆಯುತ್ತಿದ್ದಾರೆ ಎಂದರು.

Read More

ಬೀದರ್: ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ನೇತೃತ್ವದಲ್ಲಿ ಜೆಡಿಎಸ್ ನಾಯಕರು ಬೀದರ್ ಜಿಲ್ಲೆಯ ವಿವಿಧೆಡೆಯ ರೈತರ ಜಮೀನುಗಳಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಿದರು. ಜಿಲ್ಲೆಯ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಮಠಾಣಾ ರೈತ ಸಂಪರ್ಕ ಕೇಂದ್ರ, ಬಗದಲ್ ರೈತ ಸಂಪರ್ಕ ಕೇಂದ್ರ, ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಜನವಾಡ ರೈತ ಸಂಪರ್ಕ ಕೇಂದ್ರ, ಔರಾದ ವಿಧಾನಸಭಾ ಕ್ಷೇತ್ರದ ದಾಬಕಾ ರೈತ ಸಂಪರ್ಕ ಕೇಂದ್ರ ಸೇರಿದಂತೆ ವಿವಿಧ ರೈತ ಸಂಪರ್ಕ ಕೇಂದ್ರಗಳ ಖಾಶೆಂಪುರ್, ಕಾಡವಾದ, ಬಗದಲ್ ತಾಂಡ, ಮರಕಲ್, ಮುರ್ಕಿ, ಚಿಕ್ಲಿ, ಗಣೇಶಪೂರ್ ಸೇರಿದಂತೆ ವಿವಿಧ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಮಳೆಯ ಕೊರತೆಯಿಂದ ಹಾಳಾದ ತೊಗರಿ ಸೇರಿದಂತೆ ವಿವಿಧ ಬೆಳಗಳನ್ನು ವೀಕ್ಷಿಸಿ, ರೈತರೊಂದಿಗೆ ಚರ್ಚಿಸಿದರು. ಪರಿಹಾರಕ್ಕೆ ಒತ್ತಾಯಿಸಿ ಶುಕ್ರವಾರ ಮುಖ್ಯಮಂತ್ರಿಗೆ ಮನವಿ: ಬಂಡೆಪ್ಪ ಖಾಶೆಂಪುರ್ ಜೆಡಿಎಸ್ ಪಕ್ಷದ ಪ್ರಮುಖರೊಂದಿಗೆ ಬೆಳೆ ವೀಕ್ಷಣೆ ನಡೆಸಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು, ಮಳೆಯ…

Read More

ಬೆಂಗಳೂರು: ತೆಲಂಗಾಣದಲ್ಲಿ ಚುನಾವಣೆ ಪ್ರಚಾರದ ವೇಳೆ ರಾಜ್ಯದ ಸಚಿವ ಜಮ್ಮೀರ್ ಅಹಮದ್​ ಖಾನ್​ ಬಿಜೆಪಿ ವಿರುದ್ದ ನೀಡಿದ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ‌ರಿಂದ ಖಂಡನೆ ವ್ಯಕ್ತಪಡಿಸಿದ್ದಾರೆ. https://ainlivenews.com/joint_pain_suprem_ray_treatment_reiki/ ಬೆಂಗಳೂರಲ್ಲಿ ಮಾತನಾಡಿದ ಅವರು, ಸಭಾಧ್ಯಕ್ಷ ಸ್ಥಾನದಲ್ಲಿರುವವರಿಗೆ ನಾವು ಗೌರವ ಕೊಡುತ್ತೇವೆ ಎಂದರೇ ಅದು ಆ ಸ್ಥಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಕೊಡುವಂತದ್ದು ಯಾವುದೇ ವ್ಯಕ್ತಿಗಲ್ಲ ಎಂದರು. ಜಮ್ಮೀರ್ ಅಹಮದ್ ಅವ್ರೇ, ನೀವು ಯಾವುದೋ ಒಂದು ಕೋಮಿನ ಜವಬ್ದಾರಿ ತಗೊಂಡಿಲ್ಲ. ಒಬ್ಬ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನೀವು ನಿಮ್ಮ ಅಂತರಾಳದ ಮಾತನ್ನು ಆಡಿದ್ದೀರಿ. ಈ ಹೇಳಿಕೆ ನಿಜಕ್ಕೂ ದುರದೃಷ್ಟಕರ. ಮತ್ತು ಇದನ್ನು ಖಂಡಿಸುತ್ತೇವೆ, ಇನ್ಮುಂದೆ ಈ ರೀತಿ ಮಾತಾಡದಂತೆ ಎಚ್ಚರಿಕೆ ವಹಿಸಿ ಅಂತಾ ಅವರು ಹೇಳಿದರು.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಪುತ್ರ ಯತೀಂದ್ರ ಪರ ಬ್ಯಾಟ್ ಬೀಸಿರುವ ಹೆಚ್​.ಡಿ. ರೇವಣ್ಣ ನಡೆ ಬಗ್ಗೆ ಮಾಜಿ ಸಿಎಂ ಹಾಗೂ ಸಹೋದರ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/joint_pain_suprem_ray_treatment_reiki/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರೇವಣ್ಣರಿಗೆ ಏನು ಗೊತ್ತಿದೆ? ಅವರಿಗೆ ಹೃದಯ ವೈಶಾಲ್ಯತೆ ಇದೆ, ನಾವು ಏನು ಮಾಡೋದು? ಎಂದು ಹೇಳಿದ್ದಾರೆ. ಬೆಳಗ್ಗೆ ಅಷ್ಟೊಂದು ಸುದ್ದಿಯಾಯ್ತ, ಮೂರು ಗಂಟೆಯವರೆಗೂ ಯಾಕೆ ದಾಖಲೆ ರಿಲೀಸ್ ಮಾಡಿಲ್ಲ. ಎರಡುವರೆ ಲಕ್ಷ ಸಿಎಸ್​ಆರ್ ಪಂಢ್ ತೆಗೆದುಕೊಳ್ಳುತ್ತಿರಾ? ನಾನು ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸುತ್ತೆನೆ. ಡುಬ್ಲಿಕೇಟ್ ಸಿಎಂಗೆ ಸಿಎಸ್​ಆರ್ ಪಂಡ್​ಗೆ ತುಂಬಾನೆ ಇಷ್ಟ(ಡಿಕೆಶಿಗೆ). ವಿವೇಕಾನಂದ ಅಂದ್ರೆ ಯಾರು ಅಂತಾರೆ, ಬಿಇಓ ಹೆಸರು ಗೊತ್ತಿಲ್ವಾ? ಎಂದು ಸಿಎಂ ಸಿದ್ದರಾಮಯ್ಯಗೆ ಚಾಟಿ ಬೀಸಿದ್ದಾರೆ.

Read More

ಬೆಂಗಳೂರು: ದೀಪಾವಳಿ ಅಂಗಡಿ ಕ್ಲೀನ್ ಮಾಡೋಕೆ ಹೇಳಿದ್ದ ಮಾಲಿಕ ಕ್ಲೀನ್ ನೆಪದಲ್ಲಿ ಅಂಗಡಿ ಯಲ್ಲಿ ಇದ್ದ ಚಿನ್ನಾಭರಣ ದೋಚಿದ್ದವರು ಬಂಧನವಾಗಿದೆ. ಕೆಲಸ ಮಾಡ್ತಿದ್ದ ಜ್ಯುವೆಲರಿ ಶಾಪ್ ನಲ್ಲಿ ಕಳ್ಳತನ ಮಾಡಿ ಪುರಾತನ ಕಾಲದ ಚಿನ್ನಾಭರಣ, ಹಾಗೂ ಹಳೇ ನಾಣ್ಯ ಹಾಗೂ ನೋಟುಗಳನ್ನ ಕದ್ದಿದ್ದ ಕಳ್ಳರನ್ನ ಹಲಸೂರು ಗೇಟ್ ಪೊಲೀಸ್ರು ಬಂಧಿಸಿದ್ದಾರೆ.ದೀಪಾವಳಿ ಹಬ್ಬಕ್ಕೆ ಕ್ಲೀನ್ ಅಂಗಡಿ ಕ್ಲೀನ್ ಮಾಡಲು ಮಾಲಿಕರು ಕೆಲಸದವರಿಗೆ ಹೇಳಿದ್ರು. https://ainlivenews.com/joint_pain_suprem_ray_treatment_reiki/ ಈ ವೇಳೆ ಕ್ಲೀನ್ ಮಾಡ್ತಿದ್ದೇವೆ ಎಂದು ಹೇಳಿ ಸಂಪೂರ್ಣವಾಗಿ ಅಂಗಡಿಯನ್ನೇದೋಚಿದ್ರು. ಹಲಸೂರು ಗೇಟ್ ಠಾಣ ವ್ಯಾಪ್ತಿಯ ಕಾಂಚನಾ ಜ್ಯುವೆಲರಿಯಲ್ಲಿ ಆರೋಪಿಗಳು ಕೆಲಸ ಮಾಡ್ತಿದ್ರು. ಅಂಗಡಿಯಲ್ಲಿಪುರಾತನ ಕಾಲದ ಚಿನ್ನಾಭರಣ ಹಾಗೂಹಣ ಕಳ್ಳತನ ಮಾಡಿದ್ರು. ಸದ್ಯ ಆರೋಪಿಗಳಾದ ಖೇತರಾಮ್, ಸುರೇಶ್ ನ ಬಂಧಿಸಿ ಅರೋಪಿಗಳಿಂದ 1ಕೆಜಿ, 624 ಗ್ರಾಂ ಚಿನ್ನ, 6.455 ಕೆಜಿ ಬೆಳ್ಳಿ , ಹಳೆಯ ಒಂದು ಮತ್ತು ಎರಡು ರೂಪಾಯಿ ನೋಟುಗಳು,ವಾಚ್ ಗಳು, ಹಳೆ ನಾಣ್ಯಗಳು ಮತ್ತು ದ್ವಿಚಕ್ರ ವಾಹನ ಸೀಜ್ ಮಾಡಿದ್ದಾರೆ.

Read More

ಬೆಂಗಳೂರು ಸೇರಿ ರಾಜ್ಯದ್ಯತ ವರ್ಲ್ ಕಪ್ ಟೂರ್ನಿಯಲ್ಲಿ ಬೆಟ್ಟಿಂಗ್ ನಡೆಸ್ತಿದ್ದ ಬುಕ್ಕಿಯನ್ನ ಸಿಸಿಬಿ ಹೆಡೆಮುರಿ ಕಟ್ಟಿದರೆ ಈ ಭಾರಿ ವರ್ಲ್ಡ್ ಕಪ್ ಹಬ್ಬ ಜೋರಾಗಿದ್ದು ವರ್ಲ್ಡ್ ಕಪ್ ಮ್ಯಾಚ್ ಗಳಲ್ಲಿ ಲಕ್ಷಲಕ್ಷ ಬೆಟ್ಟಿಂಗ್ ನಡೆಸ್ತಿದ್ದ ಬುಕ್ಕಿಯನ್ನ ಸಿಸಿಬಿ ಅಧಿಕಾರಿಗಳು ಲಾಕ್ ಮಾಡಿದ್ದಾರೆ. CCB killed the bookie who was betting in Bangalore! allexch.bet ಎಂಬ ಆ್ಯಪ್ ಮೂಲಕ ಬೆಟ್ಟಿಂಗ್ ನಡೆಸ್ತಿದ್ದ. ಬೆಂಗಳೂರು ಸೇರಿದಂತೆ ಹಲವೆಡೆ ಬೆಟ್ಟಿಂಗ್ ನಡೆಸ್ತಿದ್ದ. ಆರೋಪಿ ಪ್ರಕಾಶ್ ಶೆಟ್ಟಿ ಬೆಟ್ಟಿಂಗ್ ಆ್ಯಪ್ ನಿರ್ವಹಣೆ ಮಾಡಲು ಕಾರ್ಕಳ ಬಳಿಯ ಮನೆಯಲ್ಲಿ ವೆಬ್ ಸೈಟ್ ನಿರ್ವಹಣೆ ಮಾಡ್ತಿದ್ದ. ಈ ಆ್ಯಪ್ ನಿರ್ವಹಣೆ ಮಾಡಲು ಹೊರ ರಾಜ್ಯದಿಂದ ಟೆಕ್ಕಿಗಳನ್ನ ಕರೆತಂದು ಆ್ಯಪ್ ನಿರ್ವಹಣೆ ತರಬೇತಿ ಪಡೆಯುತ್ತಿದ್ದ. ಬೆಟ್ಟಿಂಗ್ ಗಾಗಿ ವಾಟ್ಸ್ ಅಪ್ ಗ್ರೂಪ್ ಮಾಡಿ ಯುವಕರನ್ನ ಬೆಟ್ಟಿಂಗ್ ಗೆ ಪ್ರೇರೆಪಿಸುತ್ತಿದ್ದ. ಸದ್ಯ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪ್ರಕಾಶ್ ಶೆಟ್ಟಿ ಅಂಡ್ ಟೀಮ್ ನ ಬಂಧಿಸಿ.ಬಂಧಿತನಿಂದ…

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್ (Kulgam) ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆ (Security Force) ಎನ್‌ಕೌಂಟರ್ (Encounter) ನಡೆಸಿದ್ದು, ಐವರು ಲಷ್ಕರ್ ಭಯೋತ್ಪಾದಕರನ್ನು (Lashkar Terrorists) ಹತ್ಯೆ ಮಾಡಲಾಗಿದೆ. ಐವರು ಭಯೋತ್ಪಾದಕರನ್ನು ಕುಲ್ಗಾಮ್ ಪೋಲೀಸ್, ಸೇನೆ ಮತ್ತು ಸಿಆರ್‌ಪಿಎಫ್ ತಟಸ್ಥಗೊಳಿಸಿದೆ. ಭಯೋತ್ಪಾದಕರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಭಯೋತ್ಪಾದಕರು ತಪ್ಪಿಸಿಕೊಳ್ಳದಂತೆ ಭದ್ರತಾ ಪಡೆ ಪ್ರದೇಶವನ್ನು ಸುತ್ತುವರೆದಿದೆ. ಕುಲ್ಗಾಮ್‌ನ ದಮ್ಹಾಲ್ ಹಂಜಿ ಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ ತಿಳಿಸಿದ್ದಾರೆ. https://ainlivenews.com/what-happens-if-tea-coffee-is-given-to-children/ ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ಭದ್ರತಾ ಪಡೆ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ…

Read More