ಧಾರವಾಡ- ನರೇಗಾ ಯೋಜನೆಯ ಬಾಕಿ ಹಣ ಬಿಡುಗಡೆ ಹಾಗೂ ಬರ ಪರಿಹಾರ ಕಾಮಗಾರಿ ಜಾರಿ ಮಾಡಲು ಅಗ್ರಹಿಸಿ, ಧಾರವಾಡದಲ್ಲಿ ಪ್ರತಿಭಟನೆ ನಡೆಸಿ ಕೃಷಿ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ, ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ರಾಜ್ಯದಲ್ಲಿ ಜನತೆ ಬರಗಾಲದಿಂದ ತತ್ತರಿಸಿ ಹೋಗಿದ್ದಾರೆ. ಗ್ರಾಮೀಣ ಭಾಗದ ಜನರು ಕೆಲಸ ಕಾರ್ಯಗಳಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ರಾಜ್ಯ ಸಚಿವರು ಪಂಚ ರಾಜ್ಯ ಚುನಾವಣೆಗಳಲ್ಲಿ ಬ್ಯೂಸಿಯಾಗಿದ್ದಾರೆ. ಆದರೆ ತಮ್ಮ ರಾಜ್ಯದಲ್ಲಿನಜನರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಾಳಜಿ ಇಲ್ಲದಂತಾಗಿದೆ. ಬರಗಾದಿಂದಾಗಿ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ದಿನದಿಂದ ದಿನಕ್ಲೆ ಕಡಿಮೆಯಾಗುತ್ತಿವೆ. ಇದರಿಂದ ಕೃಷಿ ಕಾರ್ಮಿಕರು ಪರದಾಡುತ್ತಿದ್ಧಾರೆ. ಈ ಕೂಡಲೇ ರಾಜ್ಯ ಸರ್ಕಾರ ಬರಗಾಲ ಪರಿಹಾರ ಕಾಮಗಾರಿಯನ್ನು ಜಾರಿ ಮಾಡಬೇಕು, ಜೊತೆಗೆ ನರೇಗಾ ಯೋಜನೆಯ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು. ಸರ್ಕಾರಿ ಆಸ್ಪತ್ರೆಗಳ ಶುಲ್ಕ…
Author: AIN Author
ದಾವಣಗೆರೆ: ಕೀಟನಾಶಕ ಸೇವಿಸಿ ಸಾವು- ಬದುಕಿನೊಂದಿಗೆ ಹೋರಾಟ ನಡೆಸುತ್ತಿದ್ದ ಮದ್ಯ ವ್ಯಸನಿಯೊಬ್ಬನನ್ನು ಜಿಲ್ಲಾಸ್ಪತ್ರೆಗೆ ಸೇರಿಸುವ ಮೂಲಕ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾನವೀಯತೆ ಮೆರೆದಿದ್ದಾರೆ. ತಾಲೂಕಿನ ಅಣಬೇರು ಗ್ರಾಮದ ಮದ್ಯ ವ್ಯಸನಿ ರೇವಣಸಿದ್ದಪ್ಪ(40) ಎಂಬ ವ್ಯಕ್ತಿ ಎಂದಿನಂತೆ ಗುರುವಾರ ಮದ್ಯ ಸೇವನೆ ಮಾಡಿದ್ದಾನೆ. ಕುಡಿದ ಮತ್ತಿನಲ್ಲಿ ಕಳೆನಾಶಕ ಔಷಧಿಯನ್ನು ಸೇವಿಸಿದ್ದಾರೆ. ಇದನ್ನು ಗಮನಿಸಿದ ಕುಟುಂಬದವರು ಆಸ್ಪತ್ರೆಗೆ ಸೇರಿಸಲು ಆಂಬ್ಯುಲೆನ್ಸ್ ಗೆ ಫೋನ್ ಮಾಡಲು ತಡಕಾಡುವ ವೇಳೆಗೆ ರಾಮಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅದೇ ಗ್ರಾಮದ ಮಾರ್ಗದಲ್ಲಿ ಬರುತ್ತಿದ್ದ ಶಾಸಕ ಕೆ.ಎಸ್.ಬಸವಂತಪ್ಪ , ವಿಷಯ ತಿಳಿದ ಕೂಡಲೇ ವಿಷ ಕುಡಿದ ವ್ಯಕ್ತಿಯನ್ನು ತನ್ನ ಕಾರಿನಲ್ಲಿಯೇ ಚಿಗಟೇರಿ ಸಾರ್ವಜನಿಕ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಬಂದ ಶಾಸಕರು ಕಳೆನಾಶಕ ಸೇವಿಸಿ ಒದ್ದಾಡುತ್ತಿದ್ದ ಮದ್ಯ ವ್ಯಸನಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಆತನ ಪ್ರಾಣ ಕಾಪಾಡಲು ನೆರವಾಗಿದ್ದಾರೆ. ಇದೇ ಸಂದರ್ಭದಲ್ಲಿ ಆ ವ್ಯಕ್ತಿಯ ಕುಟುಂಬ ಸದಸ್ಯರು ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಧನ್ಯವಾದ…
ಬೆಂಗಳೂರು :- ನಗರ ಸಂಚಾರ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ನಂಬರ್ ಪ್ಲೇಟ್ಗಳ ದುರ್ಬಳಕೆ ಮಾಡಿಕೊಂಡು ಸಂಚಾರಿ ನಿಯಮ ಉಲ್ಲಂಘನೆ ಮಾಡುವವರನ್ನು ನಿಯಂತ್ರಿಸಲು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಕಣ್ಗಾವಲು ಹೆಚ್ಚಿಸಲು ಮತ್ತು ಸಂಚಾರ ಉಲ್ಲಂಘಿಸುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಮತ್ತು ಅವರ ವಿರುದ್ಧ ಕ್ರಮವನ್ನು ಕೈಗೊಳ್ಳಲು ನಗರದಾದ್ಯಂತ ಎಐ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲು ಪ್ರಾರಂಭಿಸಿದ್ದರು. ಆದರೆ ಬೆಂಗಳೂರಿನ ಹಲವಾರು ಸ್ಥಳಗಳಲ್ಲಿ ಇಂತಹ ಕ್ಯಾಮೆರಾಗಳನ್ನು ಅಳವಡಿಸಿದ ನಂತರ ಹಲವಾರು ವಾಹನ ಮಾಲೀಕರು ಸಿಕ್ಕಿಬೀಳುವುದನ್ನು ತಪ್ಪಿಸಲು ತಮ್ಮ ನಂಬರ್ ಪ್ಲೇಟ್ಗಳನ್ನು ಬದಲಾಯಿಸಲು ಪ್ರಾರಂಭಿಸಿದರು. ಅಂತಹ ವಾಹನಗಳ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಿದ ಪೊಲೀಸರು ತಪ್ಪಿತಸ್ಥ ವಾಹನ ಚಾಲಕರ ವಿರುದ್ಧ ಕ್ರಮ ಕೈಗೊಂಡು ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಿದರು. ಕಠಿಣ ಕ್ರಮಗಳ ಹೊರತಾಗಿಯೂ ಕೆಲವು ಚಾಲಕಿ ಸವಾರರು ಕಣ್ಗಾವಲು ಕ್ಯಾಮೆರಾಗಳನ್ನು ತಪ್ಪಿಸಿಕೊಳ್ಳಲು ನಂಬರ್ ಪ್ಲೇಟ್ಗಳನ್ನು ಮುಚ್ಚಿಕೊಂಡು ಓಡಾಡುತ್ತಿದ್ದರು. ಇಲ್ಲವೇ ಉದ್ದೇಶಪೂರ್ವಕವಾಗಿ ಅವುಗಳ ಮೇಲೆ ಮಸಿ ಬಳೆದುಕೊಂಡು…
ಬೆಂಗಳೂರು:-ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಕುಡಿಯುವ ನೀರು,ಜಾನುವಾರುಗಳ ಮೇವಿನ ನಿರ್ವಹಣೆಯ ಜವಾಬ್ದಾರಿಯನ್ನು ಶಾಸಕರ ಅಧ್ಯಕ್ಷತೆಯ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಗಳಿಗೆ ವಹಿಸಲು ಸಚಿವ ಸಂಪುಟದ ಉಪ ಸಮಿತಿ ತೀರ್ಮಾನಿಸಿದೆ . ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆದ ನೈಸರ್ಗಿಕ ವಿಕೋಪಗಳ ನಿರ್ವಣೆ ಪರಾಮರ್ಶೆಗೆ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಹಲವು ಪ್ರಮುಖ ವಿಷಯಗಳನ್ನು ಚರ್ಚಿಸಿ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿಯಲ್ಲಿ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ,ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕಾ ಖರ್ಗೆ, ಸಹಕಾರ ಸಚಿವರಾದ ಕೆ.ಎನ್ ರಾಜಣ್ಣ ಭಾಗವಹಿಸಿ ಹಲವು ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು ಪ್ರತಿ ತಾಲೂಕಿನಲ್ಲಿ ಟಾಸ್ಕ್ ಫೋರ್ಸ್ ಕುಡಿಯುವ ನೀರಿನ ಕೊರತೆ ಇರುವ ಗ್ರಾಮಗಳನ್ನು ಗುರುತಿಸಿ ಟ್ಯಾಕರ್ ಅಥವಾ ಖಾಸಗಿ ಕೊಳವೆ ಬಾವಿ ಬಾಡಿಗೆ ಪಡೆದು ಯಾವುದೇ ಲೋಪಗಳಾಗದಂತೆ ನೀರು ಪೂರೈಸಬೇಕೆಂದು ಸಭೆಯಲ್ಲಿ ತೀರ್ಮಾನಸಿಲಾಯಿತು. ಜಿಲ್ಲಾಧಿಕಾರಿಗಳ ಬಳಿ ಲಭ್ಯವಿರುವ…
ಬೆಂಗಳೂರು:- ಬಿ.ವೈ.ವಿಜಯೇಂದ್ರ ಅವರಿಗಿಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹತ್ತು ಪಟ್ಟು ಸ್ಟ್ರಾಂಗ್ ಇದ್ದಾರೆ ಎಂದು ಮೊಹಮ್ಮದ್ ನಲಪಾಡ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅವರನ್ನು ಒಂದು ಬಾರಿ ಮುಟ್ಟಿದ್ದಕ್ಕೆ ಬಿಜೆಪಿ 66ಕ್ಕೆ ಇಳಿದಿದೆ. ಇನ್ನು ಮುಂದೆ ಅವರ ಹತ್ತಿರಕ್ಕೆ ಬಂದರೂ 33ಕ್ಕೆ ಬಿಜೆಪಿಯವರು ಹೊರಟು ಹೋಗುತ್ತಾರೆ’ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹೇಳಿದರು. ಬಿ.ವೈ.ವಿಜಯೇಂದ್ರ ಅವರು ಯುವ ಘಟಕದ ಅಧ್ಯಕ್ಷರಾಗಿದ್ದರೆ ಸಂತೋಷವಾಗುತ್ತಿತ್ತು. ಅವರ ಸಮಯ ಚೆನ್ನಾಗಿದೆ, ಅವರು ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹೇಳಿದರು. ಸಿಎಂ ಪುತ್ರ ಯತೀಂದ್ರ ಅವರು ‘ಶ್ಯಾಡೋ ಸಿಎಂ’ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರು ಹೇಗೆ ಆಡಳಿತ ಮಾಡುತ್ತಿದ್ದಾರೆ ನೀವೇ ನೋಡಿದ್ದೀರಿ. 2013ರಿಂದ 2018ರವರೆಗೆ ಹೇಗೆ ಉತ್ತಮ ಆಡಳಿತ ನೀಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ‘ಶ್ಯಾಡೋ ಸಿಎಂ’ ಯಾವುದೂ ಇಲ್ಲ. ಇದು ಕೆಲವರ ಆರೋಪವಷ್ಟೆ ಎಂದು ಉತ್ತರಿಸಿದರು.
ವಿಶ್ವಕಪ್ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯದ ಬಿಗಿ ದಾಳಿಗೆ ನಲುಗಿ ಭಾರೀ ಆಘಾತಕ್ಕೆ ಸಿಲುಕಿತಾದರೂ ಆಪದ್ಬಾಂಧವನಂತೆ ಡೇವಿಡ್ ಮಿಲ್ಲರ್ ಅವರು ಶತಕ ಸಿಡಿಸಿ ತಂಡ ಇನ್ನೂರರ ಗಡಿ ದಾಟಲು ನೆರವಾದರು. 24 ರನ್ ಆಗುವಷ್ಟರಲ್ಲಿ 4 ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಮುಳುಗುವ ಹಂತಕ್ಕೆ ಸಿಲುಕಿದ ದಕ್ಷಿಣ ಆಫ್ರಿಕಾ ತಂಡ ಬ್ಯಾಟ್ಸ್ ಮ್ಯಾನ್ ಗಳ ದಂಡೇ ಇರುವ ಆಸ್ಟ್ರೇಲಿಯಕ್ಕೆ 213 ರನ್ ಗಳ ಸಾಧಾರಣ ಗುರಿ ಮುಂದಿಟ್ಟಿದೆ. ನಾಯಕ ಟೆಂಬಾ ಬವುಮಾ(0), ಕ್ವಿಂಟನ್ ಡಿ ಕಾಕ್(3) , ಐಡೆನ್ ಮಾರ್ಕ್ರಾಮ್(10), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್(6) ಅವರು ಬೇಗನೆ ನಿರ್ಗಮಿಸಿದರು. ಆಬಳಿಕ ಅಮೋಘ ಆಟವಾಡಿದ ಮಿಲ್ಲರ್ ಕೊನೆಯವರೆಗೂ ಕ್ರೀಸ್ ನಲ್ಲಿದ್ದು, ಶತಕದ ಸಂಭ್ರಮಾಚರಣೆ ಮಾಡಿ ನಿರ್ಗಮಿಸಿದರು. 116 ಎಸೆತಗಳಿಂದ 101 ರನ್ ಗಳಿಸಿದರು. 8ಬೌಂಡರಿ ಮತ್ತು 5 ಆಕರ್ಷಕ ಸಿಕ್ಸರ್ ಸಿಡಿಸಿದರು. ಮಿಲ್ಲರ್ ಗೆ ಸಾಥ್ ನೀಡಿದ ಹೆನ್ರಿಕ್ ಕ್ಲಾಸೆನ್…
ಬೆಂಗಳೂರು:- ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ನಾನೂ ಆಕಾಂಕ್ಷಿ, ನಾಳೆಯೇ ಹೆಸರು ಪ್ರಕಟವಾಗಲಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಆಯ್ಕೆ ಆಗಿ ಒಂದು ವಾರ ಕಳೆದಿದೆ. ಇದರ ಬೆನ್ನಲ್ಲೇ ಈವರೆಗೆ ಖಾಲಿ ಉಳಿದಿರುವ ಪ್ರತಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ನಡೆದಿದೆ.”ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ನಾಳೆ ಪ್ರತಿಪಕ್ಷ ನಾಯಕರ ಆಯ್ಕೆಯಾಗಲಿದೆ. ನನ್ನನ್ನೂ ಸೇರಿ ನಾಲ್ಕೈದು ಜನ ಆಕಾಂಕ್ಷಿಗಳಿದ್ದೇವೆ. ಪಕ್ಷ ಯಾರಿಗೇ ಅವಕಾಶ ನೀಡಿದರೂ ನಾನು ಸ್ವಾಗತ ಮಾಡುತ್ತೇನೆ. ಅವರಿಗೆ ಸಂಪೂರ್ಣ ಸಹಕಾರವನ್ನೂ ನೀಡುತ್ತೇನೆ ಎಂದರು. ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಪಕ್ಷ ಯಾರನ್ನು ತೀರ್ಮಾನ ಮಾಡುತ್ತದೋ ಅವರಿಗೆ ಒಲಿಯುತ್ತದೆ. ನಾವಂತೂ ಅರ್ಜಿ ಹಾಕಿಲ್ಲ. ಅರ್ಜಿ ಹಾಕುವ ಸಂಸ್ಕೃತಿಯೂ ನಮ್ಮಲ್ಲಿ ಇಲ್ಲ. ಪಕ್ಷ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರನ್ನು ಘೋಷಣೆ ಮಾಡಿದೆ. ಪ್ರತಿಪಕ್ಷ ನಾಯಕ ಸ್ಥಾನ ಕೂಡಾ ಪ್ರಮುಖ…
ಬೆಂಗಳೂರು:-ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸುಮ್ಮನೆ ಪ್ರಚಾರ ಮಾಡಿ ನಮ್ಮ ಹುಡುಗನನ್ನು ನಾಯಕನನ್ನಾಗಿ ಬೆಳೆಸುತ್ತಿದ್ದಾರೆ. ಆರೋಪ ಮಾಡಲಿ ಬಿಡಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆಯ ಜವಾಬ್ದಾರಿ ತೆಗೆದುಕೊಂಡು ತಮ್ಮ ಕ್ಷೇತ್ರದ ಶಾಲೆಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ನಾನು ಬೆಳಗ್ಗೆಯೇ ಆ ವಿಡಿಯೋ ನೋಡಿದೆ. ವರ್ಗಾವಣೆ ದಂಧೆ ಎನ್ನಲು ಅವರು ಯಾವ ಅಧಿಕಾರಿ, ಯಾವ ಹುದ್ದೆ ಎಂದು ಉಲ್ಲೇಖವನ್ನೇ ಮಾಡಿಲ್ಲವಲ್ಲ. ಮಾಜಿ ಶಾಸಕರಾಗಿ ಯತೀಂದ್ರ ಅವರು ಒಂದು ವೇಳೆ ತಮ್ಮ ಕ್ಷೇತ್ರಕ್ಕೆ ಬೇಕಾದ 4-5 ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಕೊಂಡರೆ ಅದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು. ಬಿಜೆಪಿ – ಜೆಡಿಎಸ್ ಅವರಿಗೆ ಮಾಡಲು ಕೆಲಸವಿಲ್ಲ. ಯತೀಂದ್ರ ಅವರು ಆಶ್ರಯ ಸಮಿತಿ ಅಧ್ಯಕ್ಷರು. ಒಂದಷ್ಟು ಶಾಲೆಗಳಿಗೆ ಸಿಎಸ್ಆರ್ ಅನುದಾನದ ಅಡಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ವಿವೇಕಾನಂದ ಅಥವಾ ಮಹದೇವಪ್ಪ ಎನ್ನುವ ಅಧಿಕಾರಿಗೆ ಶಾಲೆಗಳನ್ನು ಗುರುತಿಸುವ ಜವಾಬ್ದಾರಿ ನೀಡಿದ್ದಾರೆ. ಯಾರೋ ಒಂದಷ್ಟು ಶಾಲೆಗಳ ಹೆಸರನ್ನು ಬದಲಾಯಿಸಿದ…
ಬೆಂಗಳೂರು:- ವರ್ಗಾವಣೆ ದಂಧೆ ಮಾಡುತ್ತಿರುವ ಸಿಎಂ ಪುತ್ರ, ಶಾಸಕ ಡಾ.ಯತೀಂದ್ರರನ್ನು ತಕ್ಷಣ ಬಂಧಿಸಬೇಕು ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜನರಲ್ ಪವರ್ ಆಫ್ ಅಟಾರ್ನಿ ಸರ್ಕಾರ ಇದೆ. ರಾಜ್ಯದಲ್ಲಿ ಸಿದ್ದರಾಮಯ್ಯರು ಅಧಿಕಾರ ಮಾಡುತ್ತಿಲ್ಲ. ಜಿಪಿಎ ಹೊಂದಿದ ಡಾ. ಯತೀಂದ್ರರು ಅಧಿಕಾರ ಮಾಡುತ್ತಿದ್ದಾರೆ. ಎಲ್ಲ ತೀರ್ಮಾನಗಳನ್ನು ಯತೀಂದ್ರರೇ ತೆಗೆದುಕೊಳ್ಳುತ್ತಾರೆ. ಕಾನೂನಿನಲ್ಲಿ ಇಂತಹ ವರ್ತನೆಗೆ ಅವಕಾಶ ಇಲ್ಲ ಎಂದರು. ಪ್ರಮಾಣವಚನಕ್ಕೆ ವಿರುದ್ಧವಾಗಿ ಡಾ.ಯತೀಂದ್ರರಿಂದ ಅಧಿಕಾರ ನಡೆದಿದೆ. ಸಿದ್ದರಾಮಯ್ಯನವರು 25 ವರ್ಷಗಳ ಹಿಂದಿನ ವ್ಯಕ್ತಿ ಆಗಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತಾರೆ. ಪರಿವರ್ತಿತ ಸಿದ್ದರಾಮಯ್ಯ ಆಗಿದ್ದರೆ ಭಂಡತನದಿಂದ ಹೀಗೇ ನಡೆದುಕೊಳ್ಳುತ್ತಾರೆ ಎಂದು ದೂರಿದರು. ಇದೆಲ್ಲ ಕಾರಣಗಳಿಂದ ಸಿದ್ದರಾಮಯ್ಯನವರು ತಕ್ಷಣ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯನವರ ವಿಡಿಯೋವೊಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ರಾಜ್ಯದ ಜನರು ನೋಡುತ್ತಿದ್ದಾರೆ. ಈಗ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಿಂದೆ ವಿರೋಧ ಪಕ್ಷದಲ್ಲಿ ಇದ್ದಾಗ…
ಬೆಂಗಳೂರು:- ಕುಮಾರಸ್ವಾಮಿ ಆರೋಪ ನಿಜವಾಗಿದ್ದರೆ ರಾಜೀನಾಮೆ ಕೊಡಲು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ವರ್ಗಾವಣೆ ಅಥವಾ ಹಣದ ಬಗ್ಗೆಯಾಗಲಿ ಮಾತನಾಡಿಲ್ಲ ಎಂದರು. ಒಎಸ್ಡಿ ಮಹದೇವ್ ಅವರಿಗೆ ಅಕ್ರಮವಾಗಿ ಬಡ್ತಿ ನೀಡಿ ಇಟ್ಟುಕೊಳ್ಳಲಾಗಿದೆ ಎಂಬ ಬಗ್ಗೆ ಉತ್ತರಿಸಿ ಮಹದೇವ್ ಅವರು ನಮ್ಮೂರಿನವರೇ, ಉಪನೋಂದಣಾಧಿಕಾರಿಯಾಗಿದ್ದಾರೆ. ಅವರನ್ನು ನಮ್ಮ ಕಚೇರಿಗೆ ತೆಗೆದುಕೊಳ್ಳಲಾಗಿದೆ. ಅದರಲ್ಲಿ ತಪ್ಪೇನು ಎಂದರು. ವೀಡಿಯೋದಲ್ಲಿ ಹಣದ ಬಗ್ಗೆ ಮಾತನಾಡಿದ್ದಾರೆಯೇ? ಅಥವಾ ವರ್ಗಾವಣೆಯ ಬಗ್ಗೆ ಮಾತನಾಡಿದ್ದಾರೆಯೇ ಎಂದು ಪ್ರಶ್ನಿಸಿದರು. ಅದನ್ನು ವರ್ಗಾವಣೆಗೆ ತಳಕು ಹಾಕಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇಂದಿನವರೆಗೆ ಒಂದು ವರ್ಗಾವಣೆಗೆ ಹಣ ಪಡೆದಿದ್ದೇನೆ ಎಂದು ನಿರೂಪಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಪುನರುಚ್ಚರಿಸಿದರು. ಆಶ್ರಯ ಸಮಿತಿ ಅಧ್ಯಕ್ಷರು ಹಾಗೂ ಕೆಡಿಪಿ ಸದಸ್ಯರಾಗಿರುವ ಹಾಗೂ ಕ್ಷೇತ್ರವನ್ನು ನೋಡಿಕೊಳ್ಳುತ್ತಿರುವ ಯತೀಂದ್ರ ನನ್ನ ಬಳಿ ಮಾತನಾಡಿ ಸಿಎಸ್ಆರ್ ನಿಧಿಯ ಕುರಿತು ಪ್ರಶ್ನಿಸಿದಾಗ ಪಟ್ಟಿಯನ್ನು ಮಹದೇವಪ್ಪ ಅವರಿಗೆ ನೀಡಲಾಗಿದೆ ಎಂದು ತಿಳಿಸಿದೆ. ಕುಮಾರಸ್ವಾಮಿ…