Author: AIN Author

ಬೆಂಗಳೂರು: ಲಗ್ಗೆರೆ  ಬಳಿ ಸುಮಾರು 30 ಕಾರುಗಳ  ಗಾಜನ್ನು ಪುಡಿ ಮಾಡಿದ್ದ ಆರು ಜನ ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು (Police) ಬಂಧಿಸಿದ್ದಾರೆ ಏರಿಯಾದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಕಿಡಿಗೇಡಿಗಳ ಗುಂಪು ಮುಖವಾಡ ಧರಿಸಿ ಬೈಕ್‍ನಲ್ಲಿ ಬಂದು ರಾಡ್ ಮತ್ತು ಲಾಂಗ್‍ನಿಂದ ಕಾರಿನ ಗಾಜನ್ನು ಪುಡಿಗೈದಿದ್ದರು. ಬಳಿಕ ಜನ ಹೊರಗೆ ಬರುತ್ತಿದ್ದಂತೆ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದರು. ಬಂಧಿತ ಆರೋಪಿಗಳನ್ನು ಕಳ್ಳ ಮಣಿ ಹಾಗೂ ರಾಬರಿ ಸೋಮನ ಗ್ಯಾಂಗ್‍ನ ಸಹಚರರು ಎಂದು ತಿಳಿದು ಬಂದಿದೆ ಆರೋಪಿಗಳು ಗಾಂಜಾ ಹಾಗು ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಕೃತ್ಯದ ಬಳಿಕ ಆರೋಪಿಗಳು ಬೇರೆ ಬೇರೆಯಾಗಿ ತಲೆ ಮರೆಸಿಕೊಂಡಿದ್ದರು. ಘಟನೆ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಶಾಸಕ ಮುನಿರತ್ನ ಅವರು ಭೇಟಿ ನೀಡಿ ಪರಿಶೀಲಿಸಿದ್ದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ…

Read More

ಬೆಂಗಳೂರು: ಯತೀಂದ್ರ ಅವರು ಮಾತನಾಡಿದ್ದು ಸಿಎಸ್​ಆರ್ ಫಂಡ್ ಬಗ್ಗೆ ಎಂದು ಸಿಎಂ ಮತ್ತು ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯದ CSR ಫಂಡಿದ್ದೋ? ವರುಣ ಕ್ಷೇತ್ರದ್ದೋ? ಎಂದು ಕೇಳಿದ್ದಾರೆ. ಸಿಎಸ್​ಆರ್ ಫಂಡ್ ಆಗಿದ್ದರೆ ವರುಣ ಕ್ಷೇತ್ರದ ಬಿಇಓ ಕಳಿಸಿರಬೇಕಲ್ಲ. ಮೈಸೂರು ಡಿಡಿಪಿಐ ಲಿಸ್ಟ್ ಇರಬೇಕಲ್ಲ ಹೊರಗೆ ಇಡಿ ಅದನ್ನ. ಪಾಪ ಸಿಎಂ ಕಚೇರಿಗೆ ಬಂದು ಅದನ್ನ ಮಗನಿಗೆ ಕೇಳಿಕೊಂಡು ಮಾಡಬೇಕಾ? ಇಷ್ಟು ಭಂಡತನ ಬೇಡ. ಹಿಂದೆ ನಿಮ್ಮ ಪ್ರಾಮಾಣಿಕತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಈಗ ಹಳೆಯ ಸಿದ್ದರಾಮಯ್ಯ ಅಲ್ಲ ಅಂತ ನಿಮ್ಮವರೇ ಹೇಳುತ್ತಿದ್ದಾರೆ ಎಂದರು.

Read More

ಖ್ಯಾತ ನಟಿ ರಶ್ಮಿಕಾ ಮಂದಣ್ಣ  ಡೀಪ್‌ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ (Rakshit Shetty) ಪ್ರತಿಕ್ರಿಯೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್ ವೊಂದರ ಜೊತೆ ಮಾತನಾಡಿರುವ ಅವರು, ‘ಯಾವ ನಟಿಯದ್ದೂ ಹಾಗೆ ಆಗಬಾರದು. ಇಂತಹ ಪ್ರಕರಣಗಳಿಗೆ ಸರಕಾರ ಬೇಗ ಸ್ಪಂದಿಸಿ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ರಕ್ಷಿತ್ ಶೆಟ್ಟಿ ಮಾತನಾಡಿದ್ದಾರೆ. ವಿಡಿಯೋ ವೈರಲ್ ಆಗುವ ಮುಂಚೆಯೇ ಕ್ರಮಕ್ಕೆ ಮುಂದಾಗಬೇಕು ಎಂದು ರಕ್ಷಿತ್ ಪ್ರತಿಕ್ರಿಯೆ ನೀಡಿದ್ದಾರೆ. ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ವೈರಲ್ ಆಗಿದೆ. ಈ ಹಿಂದೆಯೂ ಇವರ ಇಂಥದ್ದೇ ವಿಡಿಯೋ ಶೇರ್ ಆಗಿ ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿಡಿಯೋ ಕುರಿತು ದೂರು ದಾಖಲಾಗಿದ್ದರೂ, ದುರುಳರು ಅಂಜದೇ ಮತ್ತೊಂದು  ಡೀಪ್‌ಫೇಕ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಕುರಿತು ಅನೇಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ (Deepfake) ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆದೆಹಲಿ ಪೊಲೀಸರು ಕಳೆದ ಶುಕ್ರವಾರ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಶೇಷ…

Read More

ಬೆಂಗಳೂರು: ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ  ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ. https://ainlivenews.com/it-raid-on-food-industries-in-bangalore/ ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ.ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜೊತೆ ಮಾತನಾಡಿದ್ದರು. ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಕುಮಾರಸ್ವಾಮಿ ಅವರು ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ. ಕುಮಾರಸ್ವಾಮಿಯವರು ರಾಜಕೀಯಕ್ಕೆ…

Read More

ತೆಲುಗಿನ ಬಿಗ್ ಬಾಸ್‌ಗೆ (Bigg Boss Telugu 7) ಕನ್ನಡದ ‘ಅಗ್ನಿಸಾಕ್ಷಿ’ (Agnisakshi) ನಟಿ ಶೋಭಾ ಶೆಟ್ಟಿ (Shobha Shetty) ಎಂಟ್ರಿ ಕೊಟ್ಟಿರೋದು ಎಲ್ಲರಿಗೂ ಗೊತ್ತೆ ಇದೆ. ನಾಗಾರ್ಜುನ ಅಕ್ಕಿನೇನಿ ನಿರೂಪಣೆಯಲ್ಲಿ ಶೋ ಮುನ್ನುಗ್ಗುತ್ತಿದೆ. ಇದೀಗ ತೆಲುಗಿನ ಬಿಗ್ ಬಾಸ್ ಮನೆಯಲ್ಲಿ ಕನ್ನಡದ ಕಲರವ ಶುರುವಾಗಿದೆ. ಕನ್ನಡದ ಕಂಪು ತೆಲುಗು ವೇದಿಕೆಯಲ್ಲಿ ಪಸರಿಸುತ್ತಿರೋದು ಕನ್ನಡಿಗರಿಗೆ ಖುಷಿ ಕೊಟ್ಟಿದೆ ಈ ಬಾರಿ ವಾರಾಂತ್ಯದಲ್ಲಿ ಬಿಗ್‌ಬಾಸ್ ಮನೆಯೊಳಗೆ ಇರುವ ಸದಸ್ಯರನ್ನು ಮಾತನಾಡಿಸಲು ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲಾಗಿತ್ತು. ಆಗ ಶೋಭಾ ಅವರ ತಂದೆ ಮಗಳ ಜೊತೆ ಮಾತನಾಡಿದಾಗ, ಶೋಭಾ ಅವರು, ಕನ್ನಡದಲ್ಲೇ ಮಾತನಾಡಿದ್ರು. ಬಳಿಕ ಪ್ರಿಯಾಂಕಾ ಜೈನ್ (Priyanka Jain) ಜೊತೆ ಮಾತನಾಡಿ, ಅವರು ಕೂಡ ಕನ್ನಡದವರು ಎಂದರು. ಆಗ ಪ್ರಿಯಾಂಕಾ, ನಿಮ್ಮನ್ನು ನೋಡಿದರೆ ನನ್ನ ಅಪ್ಪನ ನೆನಪಾಗುತ್ತದೆ ಎಂದರು. ಬಳಿಕ ಶೋಭಾ ತಂದೆ ಎಲ್ಲರಿಗೂ ಶುಭಾಶಯ ಹೇಳಿದ್ದರು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ತೆಲುಗು ಬಿಗ್‌ಬಾಸ್‌ನಲ್ಲಿಯೂ ಕನ್ನಡ ಮಾತನಾಡಿದ್ದಕ್ಕೆ ಕನ್ನಡದ ಪ್ರೇಕ್ಷಕರು ಮೆಚ್ಚುಗೆ…

Read More

ವರ್ತೂರು ಸಂತೋಷ್ ಮದುವೆ ಆಗಿರುವ ಪ್ರಸಂಗ ಮನೆ ಹೊರಗೆ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದ್ರೆ, ಇತ್ತ ಮನೆಯೊಳಗೆ ತನಿಷಾ- ಸಂತೋಷ್ ಲವ್ವಿ ಡವ್ವಿ ಜೋರಾಗಿ ನಡೆಯುತ್ತಿದೆ. ನಮ್ಮಿಬ್ಬರ ನಡುವೆ ಅಂತಹದ್ದೇನು ಇಲ್ಲ ಕಣ್ರೋ ಅಂದ್ರು ನಮ್ರತಾ ಬಿಟ್ಟು ಬಿಡದೇ ವರ್ತೂರು ಸಂತೋಷ್ (Varthur Santhosh) ಹೆಸರು ಹೇಳಿ ತನಿಷಾರ (Tanisha Kuppanda) ಕಾಲೆಳೆದಿದ್ದಾರೆ. ದೊಡ್ಮನೆಗೆ ನಿನ್ನೆ ಸಂತೋಷ್ ಅವರ ತಾಯಿ ಎಂಟ್ರಿ ಕೊಟ್ಟಿದ್ದರು. ಆಗ ಬಿಗ್ ಬಾಸ್ ಮನೆಯಿಂದ ಹೊರ ಹೋಗ್ತೀನಿ ಎಂದು ಪಟ್ಟು ಹಿಡಿದಿದ್ದ ಸಂತೋಷ್‌ಗೆ ಬುದ್ಧಿ ಹೇಳಿ ಮನವಿ ಮಾಡಿದ್ದರು. ಈ ವೇಳೆ, ಅವರ ಸಂಭಾಷನೆ ಕೇಳಿ ನಮ್ರತಾ (Namratha Gowda) ಅಚ್ಚರಿ ಪಟ್ಟಿದ್ದಾರೆ. ಯಾವ ಭಾಷೆ ಇದು ಅರ್ಥನೇ ಆಗ್ತಿಲ್ಲ ಕೇಳೋಕೆ ವಿಚಿತ್ರವಾಗಿದೆ ಎಂದು ತನಿಷಾ ಬಳಿ ಹೇಳಿದ್ದಾರೆ. ಅದಕ್ಕೆ ತನಿಷಾ, ಅದು ಅವರ ಆಡು ಭಾಷೆ ಕನ್ನಡ, ತೆಲುಗು, ತಮಿಳು ಮಿಕ್ಸ್ ಆಗಿದೆ ಎಂದಿದ್ದಾರೆ. ಅದಕ್ಕೆ ಅದು ಅರ್ಥವೇ ಆಗೋದಿಲ್ಲ ಎಂದು ಮಾತನಾಡಿದ್ದಾರೆ. ಅದಕ್ಕೆ, ಹೀಗಾದ್ರೆ ಮುಂದೆ…

Read More

ಬೆಂಗಳೂರು: ಲಿಸ್ಟ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್​ ವಿಚಾರವಾಗಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ನನಗೆ ಆ ಬಗ್ಗೆ ಗೊತ್ತಿಲ್ಲ, ಸತ್ಯಾಸತ್ಯತೆ ತಿಳಿದುಕೊಂಡು ಮಾತನಾಡುತ್ತೇನೆ. ವಿಡಿಯೋ ಮಾಧ್ಯಮದವರದ್ದು, ಆರ್ಟಿಫಿಷಿಯಲ್ ಇಂಟಲಿಜೆನ್ಸ್​ ಬಂದಿದೆ. ಈ ಹಿಂದೆ ನಂದೇ ಧ್ವನಿಯನ್ನು ಮಹಾರಾಷ್ಟ್ರದ ಒಬ್ಬ ಮಿಮಿಕ್ರಿ ಮಾಡಿದ್ದ. ಆಗ ಆತನನ್ನು ಅರೆಸ್ಟ್ ಮಾಡಿಸಿದ್ದೆವು. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಬಂದಿದೆ, ಬದಲಾವಣೆ ಮಾಡಬಹುದು ಎಂದರು. https://ainlivenews.com/what-did-cm-siddaramaiah-say-about-his-son/ ಬಿಜೆಪಿ ಹಾಗೂ ಜೆಡಿಎಸ್​ನಿಂದ ಮಾಜಿ ಶಾಸಕರು ಹಾಗೂ ಮುಖಂಡರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ಬಿಜೆಪಿಯಿಂದ ಹಾಗೂ ಜೆಡಿಎಸ್​​ನಿಂದಲೂ ಕಾಂಗ್ರೆಸ್​ಗೆ ಬರುತ್ತಾರೆ. ಕಾದುನೋಡಿ ಲೋಕಸಭಾ ಚುನಾವಣೆ ವೇಳೆಗೆ ಎಲ್ಲಾ ಸ್ವಚ್ಛವಾಗುರುತ್ತದೆ ಎಂದರು. ಬಹಳಷ್ಟು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದಾಗ ಅಂಕಿ ಸಂಖ್ಯೆ ಬಗ್ಗೆ ಮಾಹಿತಿ ನೀಡಿ ಎಂದು ಮಾಧ್ಯಮದವರು ಕೇಳಿದರು. ಇದಕ್ಕೆ ಎಂಬಿ ಪಾಟೀಲರು, ಬಹಳಷ್ಟು ಜನರು ಎಂದು ಹೇಳುತ್ತೇವೆ ಎಷ್ಟು ಬೇಕಾದಷ್ಟು ಬರೆದುಕೊಳ್ಳಿ ಎಂದರು.

Read More

ಧಾರವಾಡ : ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕನ್ನಡಪ್ರಭ ಹುಬ್ಬಳ್ಳಿ ಬ್ಯೂರೋ ಮುಖ್ಯಸ್ಥ ಮಲ್ಲಿಕಾರ್ಜುನ ಸಿದ್ದನಣ್ಣವರ ಭಾಗವಹಿಸಿ ಮಾತನಾಡಿ, ಪತ್ರಿಕೋದ್ಯಮ ಮೌಲ್ಯಗಳನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು, ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ನವ ಮಾದ್ಯಮಗಳು ಬಹಳಷ್ಟು ವೇಗವಾಗಿ ಸುದ್ದಿ ಜನರಿಗೆ ತಲುಪಿಸುತ್ತವೆ. ಆದರೆ ಪತ್ರಿಕೆಗಳು ಪೈಪೋಟಿ ಮಧ್ಯೆ ನೈಜತೆಯನ್ನು ಪ್ರತಿಪಾದಿಸಿ ಜನ ಮನ್ನಣೆ ಪಡೆದುಕೊಂಡಿವೆ. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪಬ್ಲಿಕ್ ಟಿವಿ ಧಾರವಾಡ ಜಿಲ್ಲಾ ವರದಿಗಾರ ಜಾವೇದ್ ಅಧೋನಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸವಾಲುಗಳು ಬಹಳಷ್ಟಿದೆ. ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ ಎಲ್ಲವನ್ನೂ ಧನಾತ್ಮಕವಾಗಿ ಪರಿಗಣಿಸಬೇಕು ಸುದ್ದಿಗಳಿಗೆ ಹೊಸ ರೂಪ ನೀಡುವ ಜೊತೆಗೆ ಜನರಿಗೆ ಮುಟ್ಟುವಂತೆ ಸುದ್ದಿ ಮಾಡುವ ಕಲೆಯನ್ನು ಯುವ ಪತ್ರಕರ್ತರು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್ ಎಮ್…

Read More

ಕಲಬುರಗಿ: ಈಗಾಗಲೇ 10 ಮ್ಯಾಚ್ ಗೆದ್ದಿರೋ ಟೀಂ ಇಂಡಿಯಾ ಇದೀಗ ಫೈನಲ್ ಮ್ಯಾಚ್ ಆಡಲು ರೆಡಿಯಾಗಿದ್ದು 11 ಅಂದ್ರೆ ವಿಕ್ಟರಿ ಹೀಗಾಗಿ ಕಪ್ ನಮ್ದೆ ಅಂತ ಮಾಜಿ ಸಚಿವ ಶ್ರೀರಾಮುಲು ಹೇಳಿದ್ರು. ಕಲಬುರಗಿಯಲ್ಲಿಂದು ಮಾತನಾಡಿದ ಶ್ರೀರಾಮುಲು ಒಂದನೇ ಬೌಲರ್ ಒಂದನೇ ಬ್ಯಾಟ್ಸಮನ್ ಹಿಡಿದು 11ನೇ ಆಟಗಾರರವರೆಗೂ ಫುಲ್ ಫಾಮಲ್ಲಿದ್ದಾರೆ.. ನಾನು ಎಷ್ಟು ವರ್ಷಗಳಿಂದ ಮ್ಯಾಚ್ ನೋಡ್ತಿದ್ದೇನೆ ಈತರ ನೋಡೇ ಇಲ್ಲ. ಎಲ್ಲ ಮ್ಯಾಚ್ ಗೆದ್ದಿದ್ದಾರೆ ಫೈನಲ್ ಸಹ ಖಂಡಿತ ಗೆಲ್ತಾರೆ ಅಂತ ಹೇಳಿದ್ರು..ಒಟ್ಟಾರೆ ಈ ಬಾರಿ ವಲ್ಡ್ ಕಪ್ ನಮ್ಮದೇ ಅಂದ್ರು..

Read More

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀಗೆ ಜಾಮೀನು ಸಿಕ್ಕಿದ್ದು, ಇದೀಗ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ‌ ಬಿಡುಗಡೆಯಾಗಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಈ ಪ್ರಕರಣ ಬಗ್ಗೆ ನಾನು ಮಾತನಾಡುವುದಿಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ವಕೀಲರು ಹೇಳ್ತಾರೆ, ಮೌನವಾಗಿರುವುದೇ ಒಳ್ಳೆಯದು ಎಂದು ಹೇಳಿದ್ದಾರೆ.

Read More