ಬೆಳಗಾವಿ-ಬಾಗಲಕೋಟೆ ಜಿಲ್ಲೆ ಬೆಸುಗೆ ಮಾಡುವಲ್ಲಿ ಮಹತ್ತರ ಯೋಜನೆಯಾಗಿರುವ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯ ಜಾಕವೆಲ್ನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ರಬಕವಿ ಮಹಿಷವಾಡಗಿ ಬ್ಯಾರೇಜ್ ಕಾಮಗಾರಿ ತಾತ್ಕಾಲಿಕ ಸ್ಥಗಿತಗೊಂಡು ಅಸ್ತಿ ಪಂಜರದಂತೆ ಬ್ಯಾರೇಜ್ ಅನಾಥವಾಗಿ ನಿಂತಿರುವದು ಬೇಸರ ತರುವಲ್ಲಿ ಕಾರಣವಾಗಿತ್ತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಿರೀಕ್ಷಣಾ ಮಂದಿರದಲ್ಲಿ ನಾಳೆ ರಬಕವಿ ಮಹಿಷವಾಡಗಿ ಬ್ರಿಡ್ಜ್ ಕಾಮಗಾರಿ ವೀಕ್ಷಣೆಗೆ ಬೆಂಗಳೂರಿನ ಪಿಡಬ್ಲ್ಯೂಡಿ ತಂಡ ಭೇಟಿ ನೀಡಲಿದೆ, ಅದರ ಕುರಿತು ಪೂರ್ವಭಾವಿ ಸಭೆ ನಡೆಯಿತು. 2018 ರಲ್ಲಿ ಅಂದಿನ ಸಚಿವೆ ಉಮಾಶ್ರೀಯವರು 30. 26 ಕೋಟಿ ರೂ.ಗಳಷ್ಟು ಟೆಂಡರ್ ಕಾಮಗಾರಿ ಮೂಲಕ ನಾಗಾರ್ಜುನ ಕನಸ್ಟ್ರಕ್ಸನ್ಸ್ ಕಂಪನಿಗೆ ನೀಡಿತ್ತು. ಕಳೆದ ಐದು ವರ್ಷಗಳಲ್ಲಿ ಕೇವಲ ಶೇ.25 ರಷ್ಟು ಮಾತ್ರ ಕಾಮಗಾರಿ ನಡೆದಿದೆ. ಇದಕ್ಕೆ ಪೂರಕವಾಗಿ 2021 ರಲ್ಲಿ ಕಾಮಗಾರಿಗೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ಶಾಸಕ ಸಿದ್ದು ಸವದಿ ಈ ಟೆಂಡರ್ ಕಾಮಗಾರಿಯನ್ನು 10 ಕೋಟಿ ರೂ.ಗಳವರೆಗೆ ಹೆಚ್ಚಳಗೊಳಿಸುವ ಮೂಲಕ ಕಾಮಗಾರಿ…
Author: AIN Author
ಹುಬ್ಬಳ್ಳಿ: ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು ಐದು ರಾಜ್ಯಗಳಲ್ಲಿ 80 ವರ್ಷ ವಯಸ್ಸಿ ದಾಟಿದವರಿಗೂ ಟಿಕೆಟ್ ಕೊಟ್ಟಿದ್ದು, ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು ಬಂದಿರಲಿಲ್ಲ. ವೀಕ್ಷಕರು ಸಹ ಬಂದಿರಲಿಲ್ಲ ರಾಜ್ಯ ಬಿಜೆಪಿ ಪರಿಸ್ಥಿತಿಗೆ ಇದೇ ಸಾಕ್ಷಿ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರೋದು ಅವರಿಗೆ ಬಿಟ್ಟ ವಿಚಾರ ಎಂದ ಅವರು, ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕಿತ್ತು, ವಿಜಯೇಂದ್ರರನ್ನು ಮಾಡಿದ್ದಾರೆಆದರೆ ರಾಜ್ಯಾಧ್ಯಕ್ಷ ಸ್ಥಾನಕಾಂಕ್ಷಿಗಳು ಯಾರೂ ಪದಗ್ರಹಣಕ್ಕೆ ಹೋಗಲಿಲ್ಲ. ಒಮ್ಮೆ ನೇಮಕವಾದ ಮೇಲೆ ಎಲ್ಲರೂ ಕೂಡಿ ಕೆಲಸ ಮಾಡಬೇಕೆಂಬ ಮನೋಭಾವ ಬರಬೇಕಿತ್ತುಹೀಗಾಗಿ ಬಿಜೆಪಿಯ ಒಳ ಜಗಳ ಎಲ್ಲಿಗೆ ಹೋಗಿ ಮುಟ್ಟುತ್ತೋ ಗೊತ್ತಿಲ್ಲ ಎಲ್ಲವನ್ನು ಕಾದು ನೋಡಿ, ಮುಂದೆ ನಿಮಗೆ ಗೊತ್ತಾಗುತ್ತೆ ಬಿಜೆಪಿಯಲ್ಲಿ ಹಿರಿಯರನ್ನು ದೂರವಿಡುವ ಕೆಲಸ…
ಹುಬ್ಬಳ್ಳಿ: ಭಾರತದ ನೆಲದಲ್ಲಿ ನಡೆಯುತ್ತಿರುವ ವಿಶ್ವಕಸಪ್ ಕ್ರಿಕೆಟ್ ಪಂದ್ಯಾವಳಿಯ್ಲಿ ಭಾರತದ ಕ್ರಿಕೆಟ್ ತಂಡ ಸತತ 9 ಪಂದ್ಯಗಳಲ್ಲಿ ಜಯ ಸಾಧಿಸಿ ವಿಶ್ವಕಪ್ ಫನಲ್ ಪ್ರವೇಶಿಸಿದ್ದು, ಭಾರತ ತಂಡದ ಆಟಗರಾರ ಸಂಘಟಿತ ಹೋರಾಟಕ್ಕೆ ಸಿಕ್ಕ ದೊಡ್ಡ ಜಯವಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಅಭಿನಂದಿಸಿದ್ದಾರೆ. https://ainlivenews.com/joint_pain_suprem_ray_treatment_reiki/ ಬುಧವಾರ ಮುಂಬೈನ ವಾಂಕಡೆ ಮೈದಾನದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹಿಲಿಯ ದಾಖಲೆಯ 50ನೇ ಶತಕ ಮತ್ತು ಶ್ರೇಯಸ್ ಅಯ್ಯರ್ ಅವರ ಶತಕದ ನೆರವಿನಿಂದ ಬೃಹತ್ ಮೊತ್ತ ಪೇರಿಸಿ, ಮೊಹಮ್ಮದ ಶಮಿಯ ಕರಾರುವಕ್ಕ ದಾಳಿಯಿಂದ ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಜಯಗಳಿಸಿದ್ದು ಶ್ಲಾಘನೀಯ. ವಿಶ್ವಕಪ್ನ ಅಂತಿಮ ಪಂದ್ಯ ಗೆದ್ದುಕೊಂಡು ಮೂರನೇ ಬಾರಿಗೆ ವಿಶ್ವಕಪ್ಪ ಕಿರಿಟ ಮುಡಿಗೇರಿಸಿಕೊಳ್ಳಲಿ ಎಂದು ಭಾರತೀಯ ಕ್ರಿಕೆಟ್ ತಂಡಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಶುಭ ಕೋರಿದ್ದಾರೆ.
ವಿಜಯಪುರ: ಲಿಸ್ಟ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್ ವಿಚಾರವಾಗಿ ವಿಜಯಪುರದಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ನನಗೆ ಆ ಬಗ್ಗೆ ಗೊತ್ತಿಲ್ಲ, ಸತ್ಯಾಸತ್ಯತೆ ತಿಳಿದುಕೊಂಡು ಮಾತನಾಡುತ್ತೇನೆ. ವಿಡಿಯೋ ಮಾಧ್ಯಮದವರದ್ದು, ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಬಂದಿದೆ. ಈ ಹಿಂದೆ ನಂದೇ ಧ್ವನಿಯನ್ನು ಮಹಾರಾಷ್ಟ್ರದ ಒಬ್ಬ ಮಿಮಿಕ್ರಿ ಮಾಡಿದ್ದ. ಆಗ ಆತನನ್ನು ಅರೆಸ್ಟ್ ಮಾಡಿಸಿದ್ದೆವು. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಬಂದಿದೆ, ಬದಲಾವಣೆ ಮಾಡಬಹುದು ಎಂದರು. ಇನ್ನೂ ಬಿಜೆಪಿ ಹಾಗೂ ಜೆಡಿಎಸ್ನಿಂದ ಮಾಜಿ ಶಾಸಕರು ಹಾಗೂ ಮುಖಂಡರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ಬಿಜೆಪಿಯಿಂದ ಹಾಗೂ ಜೆಡಿಎಸ್ನಿಂದಲೂ ಕಾಂಗ್ರೆಸ್ಗೆ ಬರುತ್ತಾರೆ. ಕಾದುನೋಡಿ ಲೋಕಸಭಾ ಚುನಾವಣೆ ವೇಳೆಗೆ ಎಲ್ಲಾ ಸ್ವಚ್ಛವಾಗುರುತ್ತದೆ ಎಂದರು. ಬಹಳಷ್ಟು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದಾಗ ಅಂಕಿ ಸಂಖ್ಯೆ ಬಗ್ಗೆ ಮಾಹಿತಿ ನೀಡಿ ಎಂದು ಮಾಧ್ಯಮದವರು ಕೇಳಿದರು. ಇದಕ್ಕೆ ಎಂಬಿ ಪಾಟೀಲರು, ಬಹಳಷ್ಟು ಜನರು ಎಂದು ಹೇಳುತ್ತೇವೆ ಎಷ್ಟು ಬೇಕಾದಷ್ಟು ಬರೆದುಕೊಳ್ಳಿ ಎಂದರು.
ಬೆಂಗಳೂರು: ನಗರದ ಬನಶಂಕರಿಯಲ್ಲಿಂದು ಅನಧಿಕೃತ ಬೀದಿ ಬದಿ ಅಂಗಡಿಗಳ ತೆರವು ಕಾರ್ಯಾಚರಣೆ ಬೆಳಿಗ್ಗೆ 9 ಗಂಟೆಯ ನಂತರ ಆರಂಭವಾಗಲಿದೆ. ಬನಶಂಕರಿ ಕಾಂಪ್ಲೆಕ್ಸ್ ಸುತ್ತಮುತ್ತ ನಡೆಯಲಿರುವ ಕಾರ್ಯಾಚರಣೆ ಇದಾಗಿದೆ. ಈಗಾಗಲೇ ಅಧಿಕಾರಿಗಳು ಲಿಸ್ಟ್ ತಯಾರಿಸಿದ್ದಾರೆ. ಮಾರ್ಷಲ್ಸ್ ಸೂಪರ್ ವೈಸರ್ ಸೋಮಶೇಖರ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ನೋಟಿಸ್ ನೀಡಿದರೂ ಅಂಗಡಿ ತೆರವು ಮಾಡದ ಹಿನ್ನಲೆ ಅಂಗಡಿಗಳ ತೆರವು ಮಾಡಲು ಬಿಬಿಎಂಪಿ ಮುಂದಾಗಿದೆ.
ಮಂಡ್ಯ: ಪ್ರೊಫೆಸರ್ ಒಬ್ಬ ಆಸ್ತಿ ಆಸೆಗಾಗಿ ತನ್ನ ಪತ್ನಿಯನ್ನು (Wife) ಕೊಲೆಗೈದ ಘಟನೆ ಇಲ್ಲಿನ (Mandya) ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಕೊಲೆಗೈದ ಬಳಿಕ ಸಹಜ ಸಾವೆಂದು ನಾಟಕವಾಡಿ ಈಗ ಪೊಲೀಸರ (Police) ಅತಿಥಿಯಾಗಿದ್ದಾನೆ. ಕೊಲೆಯಾದ ಮಹಿಳೆಯನ್ನು ಎಸ್.ಶೃತಿ (32) ಎಂದು ಗುರುತಿಸಲಾಗಿದೆ. ಹತ್ಯೆಗೀಡಾದವಳ ಪತಿ ಟಿ.ಎನ್.ಸೋಮಶೇಖರ್ (41) ಹಣದ ದಾಹಕ್ಕೆ ಬಿದ್ದು, ಮಲಗಿದ್ದ ಪತ್ನಿಯನ್ನು ದಿಂಬು ಹಾಗೂ ಬೆಡ್ ಶೀಟ್ನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ. ಶೃತಿಯ ತಂದೆ, ತಾಯಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತ ಪಟ್ಟಿದ್ದರು. ಆಕೆಯ ತಂಗಿ 2018ರಲ್ಲಿ ಅಪಘಾತದಲ್ಲಿ ಸಾವಿಗೀಡಾಗಿದ್ದಳು. ಇದಾದ ಬಳಿಕ ಆಕೆಯ ಹೆಸರಿಗೆ 10 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಆಸ್ತಿ ಸೇರಿತ್ತು. ಮೈಸೂರಿನ ಪ್ರಮುಖ ನಗರಗಳಲ್ಲಿದ್ದ ಕಮರ್ಷಿಯಲ್ ಕಟ್ಟಡಗಳು, ಮನೆ ಹಾಗೂ ಸೈಟ್ಗಳು ಶೃತಿಯ ಹೆಸರಲ್ಲಿತ್ತು. ಆ ಆಸ್ತಿಯನ್ನು ಮಾರಿ ಬೇರೆಡೆ ಆಸ್ತಿ ಕೊಳ್ಳಲು ಶೃತಿಗೆ ಆರೋಪಿ ಪತಿ ಒತ್ತಾಯಿಸುತ್ತಿದ್ದ. ಪತಿಯ ಆಸ್ತಿ ಮಾರಾಟ ವಿಚಾರಕ್ಕೆ ಪತ್ನಿ ನಿರಾಕರಿಸಿದ್ದಾಳೆ. ಇದೇ ವಿಚಾರಕ್ಕೆ ಇಬ್ಬರ ನಡುವೆ…
ಮಂಡ್ಯ: ಸೋಶಿಯಲ್ ಮೀಡಿಯಾದಲ್ಲಿ ಅನ್ಯಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಸ್ವಾಮಿ ಎಂಬ ಯುವಕನನ್ನು ಮಂಡ್ಯ ಜಿಲ್ಲೆಯ ಮದ್ದೂರು ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಕೋಮುಸೌಹಾರ್ದ ಕದಡುವ ಯತ್ನ ಆರೋಪದಡಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಇನ್ನು ಇದನ್ನು ಖಂಡಿಸಿ ಮದ್ದೂರು ಪೊಲೀಸ್ ಠಾಣೆಯ ಎದುರು ಭಜರಂಗದಳದಿಂದ ಧರಣಿ ಶುರು ಮಾಡಿದ್ದಾರೆ. https://ainlivenews.com/joint_pain_suprem_ray_treatment_reiki/
ಬೆಂಗಳೂರು: ಪುತ್ರ ಯತೀಂದ್ರ ತಂದೆ ಸಿದ್ದರಾಮಯ್ಯನವರ ಜೊತೆ ಮಾತನಾಡಿದಾಗ ಕೇಳಿ ಬಂದ ಮಹದೇವ್ ಅವರು ಮುಖ್ಯಮಂತ್ರಿಯವರ ಹತ್ತಿರ ಸಂಬಂಧಿ ಆಗಿದ್ದಾರೆ. ಮೂಲತಃ ಸಬ್ ರಿಜಿಸ್ಟ್ರಾರ್ ಆಗಿರುವ ಮಹದೇವ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜನೆ ಆಗಿದ್ದಾರೆ. ಮಹದೇವ ಅವರು ಯತೀಂದ್ರ ಅವರ ಆಪ್ತರಾಗಿದ್ದು, ಸಿದ್ದರಾಮಯ್ಯ ಸಿಎಂ ಆಗುತ್ತಿದ್ದಂತೆ ಸಬ್ ರಿಜಿಸ್ಟ್ರಾರ್ ಮಹದೇವ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಯತೀಂದ್ರ ಅವರು ನೇಮಿಸಿದ್ದಾರೆ ಎನ್ನಲಾಗುತ್ತಿದೆ. ಈಗ ಮಹದೇವ್ ಎಂದು ಕರೆಯಲಾಗುತ್ತಿದ್ದರೂ ಅವರ ಮೂಲ ಹೆಸರು ಮಾದೇ ಸ್ವಾಮಿ. ಏನಿದು ವಿವಾದ? ಬುಧವಾರ ಯತೀಂದ್ರ ಅವರು ವರುಣ (Varuna) ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು. ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ…
ಟಾಲಿವುಡ್ ನಟ ವಿಶ್ವಕ್ ಸೇನ್ ಅವರು ಸಿನಿಮಾವೊಂದರ ಶೂಟಿಂಗ್ ವೇಳೆ ಸೆಟ್ನಲ್ಲಿ ಲಾರಿಯಿಂದ ಕೆಳಗೆ ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಆ ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ವಿಶ್ವಕ್ ಸೇನ್ ಅವರು ‘ಗ್ಯಾಂಗ್ಸ್ ಆಫ್ ಗೋದಾವರಿ ಆ್ಯಕ್ಷನ್ ಭರಿತ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗಾಗಿಯೇ ಲಾರಿ ಬಳಸಿ ಆ್ಯಕ್ಷನ್ ದೃಶ್ಯವನ್ನ ಚಿತ್ರೀಕರಿಸಲು ಯೋಜನೆ ಮಾಡಲಾಗಿತ್ತು. ವಿಶ್ವಕ್ ಲಾರಿ ಮೇಲೆ ನಿಂತು ಮಾಡುವ ಸ್ಟಂಟ್ ಶೂಟಿಂಗ್ ವೇಳೆ ಈ ಅವಘಡ ನಡೆದಿದೆ. ಈ ದೃಶ್ಯಕ್ಕೆ ತಾಲೀಮು ಮಾಡುವ ಸಂದರ್ಭದಲ್ಲಿ ಲಾರಿ ಮೇಲಿಂದ ಕೆಳಗೆ ಬಿದ್ದು ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ವಿಶ್ವಕ್ ಸೇನ್ ಸುದ್ದಿ ವೈರಲ್ ಆಗ್ತಿದ್ದಂತೆ ನಿರ್ಮಾಣ ಸಂಸ್ಥೆ ಈ ಬಗ್ಗೆ ಪ್ರತಿಕ್ರಿಯಿಸಿ, ವಿಶ್ವಕ್ ಚಿತ್ರೀಕರಣ ಸಮಯದಲ್ಲಿ ಪೆಟ್ಟಾಗಿದ್ದು ನಿಜ. ಆದರೆ ಇದಾಗಿ ಕೆಲವು ದಿನಗಳಾಗಿವೆ. ಸೂಕ್ತ ಚಿಕಿತ್ಸೆ ಬಳಿಕ ಅವರು ಇದೀಗ ಗುಣಮುಖರಾಗಿದ್ದಾರೆ. ಮತ್ತೆ ಚಿತ್ರೀಕರಣಕ್ಕೆ ಅವರು ಬಂದಿದ್ದಾರೆ ಎಂದು ತಿಳಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ಗೋದಾವರಿ’…
ಕನ್ನಡದ ಯುವ ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್ (Vasuki Vaibhav) ಇಂದು ವೈವಾಹಿಕ (Marriage) ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ, ರಂಗಭೂಮಿ ಕಲಾವಿದೆ ಬೃಂದಾ (Brunda) ಜೊತೆ ಇಂದು ಅವರು ಸಪ್ತಪದಿ ತುಳಿದಿದ್ದಾರೆ. ನಟ ಸಿಹಿ ಕಹಿ ಸೇರಿದಂತೆ ಹಲವು ಕಲಾವಿದರು, ಎರಡು ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಮದುವೆ ವಿಚಾರವನ್ನು ವಾಸುಕಿ ಗುಟ್ಟಾಗಿದ್ದರು. ಅಚಾನಕ್ಕಾಗಿ ನಟಿ ತಾರಾ ಈ ವಿಷಯವನ್ನು ಹೇಳಿಕೊಂಡಿದ್ದರು. ಟಗರು ಪಲ್ಯ ಸಿನಿಮಾದಲ್ಲಿ ವಾಸುಕಿ ಮದುವೆ ಆಗುವ ಗಂಡಿನ ಪಾತ್ರ ಮಾಡಿದ್ದರು. ಈ ಕುರಿತಾಗಿ ಮಾತನಾಡುತ್ತಾ ನಟಿ ತಾರಾ ಅತೀ ಶೀಘ್ರದಲ್ಲೇ ವಾಸುಕಿ ಮದುವೆ (Marriage) ಆಗುತ್ತಿರುವ ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ಹಲವು ತಿಂಗಳ ಹಿಂದೆಯೇ ವಾಸುಕಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ವಿಷಯ ಹರಿದಾಡುತ್ತಿತ್ತು. ಬಹುಕಾಲದ ಗೆಳೆತಿಯೊಂದಿಗೆ ಅವರು ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾದಂತೆ ಕಾಣುತ್ತಿದೆ. ಇಂದು ವಾಸುಕಿ ಸಪ್ತಪದಿ ತುಳಿಯಲಿದ್ದಾರೆ. ಮದುವೆ ಕುರಿತಂತೆ ವಾಸುಕಿ ಒಪ್ಪಿಕೊಂಡಿದ್ದರು. ತಾರಾ…