Author: AIN Author

ಬೆಂಗಳೂರು:- ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದ ವಿಜಯೇಂದ್ರ ಅವರು ಇದೇವೇಳೆ ಭಾರತ ಮಾತೆ, ಜಗನ್ನಾಥ ರಾವ್ ಜೋಷಿ ಮತ್ತಿತರ ಪ್ರಮುಖರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಆದರೆ, ವಲಸಿಗ ಬಿಜೆಪಿಗರಾದ ರಮೇಶ್‌ ಜಾರಕಿಹೊಳಿ ಅಂಡ್‌ ಟೀಮ್‌ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರ ಕಾರ್ಯಕ್ರಮಕ್ಕೆ ಗೈರಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹೌದು, ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರ ಆಯ್ಕೆಗೆ ಬಿಜೆಪಿ ಹಿರಿಯ ನಾಯಕರು ಅಸಮಾಧಾನಗೊಂಡಿದ್ದು, ಹಲವು ನಾಯಕರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಸಿದ್ದಾರೆ. ಇನ್ನೂ ಮಾಜಿ ಸಚಿವರಾದ ಸಿ ಟಿ ರವಿ, ವಿ ಸೋಮಣ್ಣ ಅಸಮಾಧಾನಗೊಂಡಿದ್ರೆ, ಇತ್ತ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಮೌನಕ್ಕೆ ಜಾರಿದ್ದಾರೆ. ಅಲ್ಲದೇ ಮೂಲ ಬಿಜೆಪಿಗರು ಹಾಗೂ ವಲಸಿಗ ಬಿಜೆಪಿಗರ ನಡುವೆ ಸಾಕಷ್ಟು ಮನಸ್ತಾಪಕ್ಕೆ ಕಾರಣವಾಗಿದೆ. ಈಗಾಗಲೇ ಮೂಲ ಬಿಜೆಪಿ ಸೇರ್ಪಡೆಯಾದ 17 ಜನ…

Read More

ಬೆಂಗಳೂರು:- ಬುಧವಾರ ಮುಂಬೈನ ವಾಂಖೆಡೆಯಲ್ಲಿ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸದೆಬಡಿದು 70 ರನ್ ಗಳಿಂದ ಗೆಲುವು ಸಾಧಿಸಿರುವ ಭಾರತ ತಂಡಕ್ಕೆ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಅವರು ಶುಭ ಹಾರೈಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಶರವಣ ಅವರು, ಎಂತಹ ಸೊಗಸಾದ ಪಂದ್ಯ!. ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದು ತುಂಬಾ ಖುಷಿ ಹಾಗೂ ಹೆಮ್ಮೆಯ ವಿಚಾರ. ಫೈನಲ್‌ ಗೆ ಲಗ್ಗೆ ಇಟ್ಟ ಭಾರತ ತಂಡಕ್ಕೆ ನನ್ನ ಶುಭ ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇನ್ನೂ ಮುಂಬೈನ ವಾಂಖೆಡೆಯಲ್ಲಿ ನಿನ್ನೆ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 70 ರನ್ ಗಳ ಅಂತರದಿಂದ ಗೆಲುವು ಸಾಧಿಸಿದ್ದು, ಫೈನಲ್ ಗೆ ಲಗ್ಗೆ ಇಟ್ಟಿದೆ.

Read More

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅವರ ಆಟಕ್ಕೆ ಹಾಗೂ ಅವರ ಫಿಟ್ನೆಸ್ ಗೆ ಎಲ್ಲರೂ ಫಿದಾ ಆಗುವುದು ಸಹಜ. ಆದರೆ ಅವರ ಫಿಟ್ನೆಸ್ ಸೀಕ್ರೆಟ್ ಏನು!? ಎಂಬುವ ಪ್ರಶ್ನೆ ಎಲ್ಲರಲ್ಲೂ ಇದೆ. ಸೆಂಚುರಿ, ಡಬಲ್ ಸೆಂಚುರಿ ಬಾರಿಸುವ ಕೊಹ್ಲಿ ಇಷ್ಟೊಂದು ಫಿಟ್ ಆಗಿರೋದಕ್ಕೆ, ಅವರ ಆಹಾರ ಕ್ರಮ ಮುಖ್ಯ ಕಾರಣ. ಹಾಗಿದ್ರೆ ಅವರ ಡಯಟ್ ಹೇಗಿರುತ್ತೆ ಅನ್ನೋದನ್ನು ನೋಡೋಣ ಬನ್ನಿ. ಖ್ಯಾತ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ, ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ತಮ್ಮ ಫಿಟ್ನೆಸ್ (Fitness), ಡಯಟ್ (Diet) ಬಗ್ಗೆ ಮಾತನಾಡಿದ್ದಾರೆ. ಪೌಷ್ಠಿಕಾಂಶ (Proteins), ಹೈಡ್ರೇಶನ್ (Hydration) ಮತ್ತು ಜೀವಸತ್ವಗಳ (Vitamins) ವಿಷಯದಲ್ಲಿ ಸರಿಯಾದ ಸಮತೋಲನವನ್ನು (Balanced Diet) ಕಾಯ್ದುಕೊಂಡು ಆಹಾರ ಸೇವಿಸುತ್ತಾರಂತೆ. ಕೊಹ್ಲಿ ತಮ್ಮ ಆಹಾರದಲ್ಲಿ ಪುನರಾವರ್ತನೆ (food repetation) ಮಾಡುತ್ತಲೇ ಇರುತ್ತಾರೆ. ಅವರು ತಿಂಗಳವರೆಗೆ ಒಂದೇ ಆಹಾರ ತಿನ್ನುತ್ತಾರಂತೆ. ಅವರ ಪ್ರಕಾರ, ಈ ಪುನರಾವರ್ತನೆಯು ಪೌಷ್ಠಿಕಾಂಶ ಆಹಾರ…

Read More

ಟಿ. ದಾಸರಹಳ್ಳಿ: ಸಹಕಾರತತ್ವದತ್ತ ಹೆಚ್ಚು ಕ್ರೆಡಿಟ್ ಕೋ ಅಪರೇಟಿವ್ ಸಂಘಗಳು ಮುಖಮಾಡಿ, ಎಲ್ಲಾ ಸದಸ್ಯರಿಗೆ ಆರ್ಥಿಕ ಸ್ವಾವಲಂಬನೆಗೆ ಹೆಚ್ಚು ಗಮನಹರಿಸಬೇಕೆಂದು ಮಾಜಿ ಸಚಿವ, ಶಾಸಕ ಎಸ್.ಟಿ. ಸೋಮಶೇಖರ್ ಅಭಿಪ್ರಾಯಪಟ್ಟರು. ದಾಸರಹಳ್ಳಿ ಸಮೀಪದ, ದೊಡ್ಡಬಿದರಕಲ್ಲು ಬಳಿಯ ಕರೀಓಬನಹಳ್ಳಿಯಲ್ಲಿನ ಸುವರ್ಣ ಅಭ್ಯುದಯ ಸೌಹರ್ದ ಕ್ರೇಡಿಟ್.ಕೋ.ಅಪರೇಟಿವ್ ಸೊಸೈಟಿಯ ಎರಡನೇ ವರ್ಷದ ವಾರ್ಷಿಕೋತ್ಸವ ಹಾಗೂ ಧನಲಕ್ಷ್ಮೀ ಪೂಜೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಬಡಾವಣೆ ನಿವಾಸಿಗಳು ಮತ್ತು ಸೊಸೈಟಿಯ ನಿರ್ದೇಶಕ ಹನುಮಂತಯ್ಯ, ಬಡಾವಣೆ ನಿವಾಸಿಗಳಿಗೆ ಕಾವೇರಿ ನೀರು ಒದಗಿಸುವಂತೆ ಮನವಿ ಮಾಡಿದ್ದಾರೆ, ಸರಕಾರಕ್ಕೆ ಮನವಿ ಸಲ್ಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇನೆ, ನನ್ನ ಯಶವಂತಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಗುರಿ, ಸಹಕಾರ ಇಲಾಖೆಯ ಎಲ್ಲಾ ತತ್ವಗಳನ್ನು ಅಳವಡಿಸಿಕೊಂಡು, ಬಡಾವಣೆಯ ಅಭ್ಯುದಯಕ್ಕೆ ಶ್ರಮಿಸಿ ಎಂದು ಕರೆ ನೀಡಿದರು. ನಿರ್ದೇಶಕ ಹನುಮಂತಯ್ಯ ಮಾತನಾಡಿ ಸಾಮೂಹಿಕ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಪಾಲ್ಗೊಂಡಿದ್ದು, ಇಡೀ ಸೊಸೈಟಿ ಆಡಳಿತ ಮಂಡಳಿಗೆ ಸಂತಸ ತಂದಿದೆ, ಈಗಾಗಲೇ ಬಡಾವಣೆಗೆ ಸಿ.ಎಂ.ಸಿ. ನೀರು ಇದ್ದರು, ನೀರಿನ…

Read More

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಎಲ್​ಪಿಜಿ ಸಿಲಿಂಡರ್​ ಹೊಂದುವುದು ಅನಿವಾರ್ಯವಾಗಿದೆ. ಆದರೆ ಕೆಲವೊಮ್ಮೆ ಗ್ಯಾಸ್​ ಲೀಕ್​ ಆದ ವಾಸನೆ ಬರುತ್ತದೆ. ಗ್ಯಾಸ್​ ಸಿಲಿಂಡರ್​ ಸ್ಫೋಟವಾಗಬಹುದು ಎಂದು ಭಯಭೀತರಾಗುತ್ತೇವೆ. ಈ ಸಮಯದಲ್ಲಿ ಏನು ಮಾಡಬೇಕೆಂದು ತಿಳಿಯುವುದಿಲ್ಲ. ದುರಂತದಿಂದ ತಪ್ಪಿಸಿಕೊಳ್ಳಲು ಮತ್ತು ನಿಮ್ಮ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಕೆಳಗಿನ ಹಂತಗಳನ್ನು ಫಾಲೋ ಮಾಡಿ.. ಗ್ಯಾಸ್​ ಲೀಕ್​ ಆದ ವಾಸನೆ ಬರುತ್ತಿದೆಯೆಂದಾದರೆ ಗಾಬರಿ ಆಗಬೇಡಿ. ಭಯಭೀತರಾದರೆ ತಕ್ಷಣಕ್ಕೆ ಯಾವುದೇ ಉಪಾಯಗಳು ಹೊಳೆಯುವುದಿಲ್ಲ. ಆತಂಕ ಪಡದಂತೆ ನಿಮ್ಮ ಮನೆಯ ಇತರ ಸದಸ್ಯರಿಗೂ ತಿಳಿಸಿ. ನಿಮ್ಮ ಮನೆಯಲ್ಲಿ ಯಾವುದೇ ಬೆಂಕಿ, ಅದು ಎಷ್ಟೇ ಚಿಕ್ಕದಾಗಿದ್ದರೂ ಅದನ್ನು ನಂದಿಸಿ. ಅದು ದೇವರ ದೀಪ ಆಗಿದ್ದರೂ ನಂದಿದಿ. ಅಗರಬತ್ತಿ ಕಡ್ಡಿಗಳನ್ನು ಸಹ ನಂದಿಸಿ. ಯಾವುದೇ ಕಾರಣಕ್ಕೂ ಬೆಂಕಿ ಕಡ್ಡಿ ಸಹಿತ ಕೊರೆಯಬೇಡಿ. ಗ್ಯಾಸ್​ ರೆಗ್ಯುಲೇಟರ್​ ಆಫ್​ ಮಾಡಿ. ನಂತರ ಸಿಲಿಂಡರ್​ಗೆ ಸೇಫ್ಟಿ ಕ್ಯಾಪ್​ ಹಾಕಿ. ನಿಮ್ಮ ಮನೆಯ ಎಲ್ಲಾ ಬಾಗಿಲುಗಳು ಮತ್ತು ಕಿಟಕಿಗಳನ್ನು ತಕ್ಷಣವೇ ತೆರೆಯಿರಿ ಇದರಿಂದ ಅನಿಲವು ಹೊರಬರುತ್ತದೆ. ಗ್ಯಾಸ್​ ಬೇಗ…

Read More

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ಜನನ ಹಾಗೂ ಮರಣ ದೈವಾನುಗ್ರಹ ಹಾಗೆಯೇ ಮೂಲ ನಕ್ಷತ್ರದಲ್ಲಿ ಹೆಣ್ಣಾಗಲಿ ಗಂಡಾಗಲಿ ಜನನವಾದರೆ ಅವರವರ ಶಕ್ತಿ ಅನುಸಾರವಾಗಿ ದೋಷ ನಿವಾರಣೆ ಪೂಜಾ ಮಾಡಿಸಿಕೊಳ್ಳಬೇಕು. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ದೋಷ ಅಂಟುವುದು ಎಂಬುದರ ಬಗ್ಗೆ ಮಾಹಿತಿ ನೋಡೋಣ. (1) ಮೂಲ ನಕ್ಷತ್ರದಲ್ಲಿ ಜನಿಸಿದರೆ ತಂದೆಗೆ ಸಮಸ್ಯೆಗೆ ಒಳಗಾಗುವ ಸಂಭವ. (2) ಮೂಲಾ ನಕ್ಷತ್ರದಲ್ಲಿ 4ನೇ ಚರಣದಲ್ಲಿ ಜನಿಸಿದರೆ ಯಾವುದೇ ದೋಷ ಇರುವುದಿಲ್ಲ. ಇದಕ್ಕಾಗಿ…

Read More

“ತಮ್ಮ ಜನ್ಮ ಜಾತಕದಲ್ಲಿ( ಕುಂಡಲಿ) ಸಂತಾನಯೋಗ ಫಲ ಮತ್ತು ಪರಿಹಾರ” ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಜೀವನದಲ್ಲಿ ಒಂದೇ ಒಂದು ಸಾರಿ ಮದುವೆ ಆಗುತ್ತದೆ. ಮದುವೆ ಕ್ಷಣದಿಂದ ತುಂಬಾ ಉಲ್ಲಾಸ ಜೀವನ ಮಾಡುತ್ತೀರಿ, ನಂತರ ಎರಡು ವರ್ಷ ,ಮೂರು ವರ್ಷ ಕಳೆದು ಹೋಗುತ್ತದೆ. ನಂತರ ನಿಮಗೆ ಮಕ್ಕಳಿಲ್ಲದ ಸಂಕಟ ಪ್ರಾರಂಭವಾಗುತ್ತದೆ. ಆಗ ನೀವು ಆ ದೇವರು ದರ್ಶನ, ವೈದ್ಯರ ಭೇಟಿ ಮಾಡಲು ಪ್ರಾರಂಭಿಸುತ್ತೀರಿ. ವೈದ್ಯರು ಕೆಲವು ವೈದ್ಯಕೀಯ ಪರೀಕ್ಷೆಗಳು ನಡೆಸುತ್ತಾರೆ . ಅದರಲ್ಲಿ ಯಾವುದೇ ತರಹದ ನ್ಯೂನ್ಯತೆ ಕಾಣುವುದಿಲ್ಲ . ಎಲ್ಲ ನಿಮ್ಮ ಆರೋಗ್ಯ ಚೆನ್ನಾಗಿದೆ ಹೌಷಧಿ ತಗೊಳ್ಳಿ ಅಂತ ಸಲಹೆ ನೀಡುತ್ತಾರೆ. ಆದ್ರೂ ನಿರಾಶೆ ಆಗುವ ಸಾಧ್ಯತೆ. ಆಗ ತಮಗೆ ಸಹಾಯಸ್ತ ನೀಡುವುದು ದೈವ ಭಾಗ್ಯ ಅದೇ ಜನ್ಮಜಾತಕ ಅಥವಾ ಜನ್ಮ ಕುಂಡಲಿ. ತಮ್ಮ ಜನ್ಮಕುಂಡಲಿ ಪರೀಕ್ಷಿಸಬೇಕು. ಅದರಲ್ಲಿ ಲಗ್ನದಿಂದ ಪಂಚಮ ಸ್ಥಾನ ನೋಡಿ ಸರಿಯಾಗಿ ಪರೀಕ್ಷಿಸಬೇಕು.ಪಂಚಮ ಸ್ಥಾನಕ್ಕೆ ಯಾರು ಅಧಿಪತಿ ಇದ್ದಾನೆ ,ಶುಭಗ್ರಹಗಳು…

Read More

ಜನ್ಮ ಕುಂಡಲಿಯಲ್ಲಿ ( ಜಾತಕ )ಯಾವ ಮನೆಯಲ್ಲಿ ಶನಿ ಸ್ವಾಮಿಇದ್ದರೆ ವಿವಾಹ ವಿಳಂಬಕ್ಕೆ ಕಾರಣ ವಾಗುತ್ತದೆ? ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕವಿಶ್ಲೇಷಣೆಗಾರರು ರಾಶಿಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ ಕೇಂದ್ರದಿಂದ ಸಪ್ತಮ ಸ್ಥಾನ ಶನಿ ಸ್ವಾಮಿ ಇದ್ದರೆ ಮದುವೆ ವಿಳಂಬಕ್ಕೆ ಶನಿಸ್ವಾಮಿಯೇ ಕಾರಣವಾಗುತ್ತಾನೆ. ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ತಮ್ಮ ಮದುವೆ ತಡವಾಗಿ ಅಂದರೆ ಮೂವತ್ತರ ಪ್ರಾಯದ ಮೇಲೆ ಕಂಕಣಬಲ ಕೂಡಿ ಬರುವ ಸಾಧ್ಯತೆ ಇದೆ. ಶನಿ ಸ್ವಾಮಿಯು ನಿಮಗೇನಾದರೂ ಒಲಿದರೆ ಚಿನ್ನದ ತಟ್ಟೆಯಲ್ಲಿ ಊಟ ಮಾಡಿಸುತ್ತಾನೆ, ಆದರೆ ಒಲಿಯದೆ ಹೋದರೆ ತಮಗೆ ದುಃಖ ನೀಡುತ್ತಾನೆ, ಕರ್ಮ ಕಾರನ್ನು ಆಗಿರುತ್ತಾನೆ , ಅಲ್ಪ ಆಯಸ್ಸು ಮತ್ತು ಕಂಟಕನಾಗಿರುತ್ತಾನೆ. ಶನಿ ಸ್ವಾಮಿಗೆ ತುಲಾ ರಾಶಿಯ ಉಚ್ಚ ಸ್ಥಾನವಾಗಿದ್ದು. ಮೇಷರಾಶಿ ನೀಚಸ್ಥಾನ ವಾಗಿರುತ್ತದೆ .ಇಲ್ಲಿ ಮೇಷ ರಾಶಿಗೆ ಅಧಿಪತಿ ಕುಜ. ಕುಜ ಮತ್ತು ಶನಿ ಶತ್ರು ಗ್ರಹಗಳು. ಜ್ಯೋತಿಷ್ಯಶಾಸ್ತ್ರದ…

Read More

ಸೂರ್ಯೋದಯ: 06.18 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ತದಿಗೆ 12:34 PM ತನಕ ನಂತರ ಚೌತಿ ನಕ್ಷತ್ರ: ಇವತ್ತು ಜೇಷ್ಠ 03:01 AM ತನಕ ನಂತರ ಮೂಲ ಯೋಗ: ಇವತ್ತು ಸುಕರ್ಮಾ10:00 AM ತನಕ ನಂತರ ಧೃತಿ ಕರಣ: ಇವತ್ತು ತೈತಲೆ 01:13 AM ತನಕ ನಂತರ ಗರಜ 12:34 PM ತನಕ ನಂತರ ವಣಿಜ 11:51 PM ತನಕ ನಂತರ ವಿಷ್ಟಿ ರಾಹು ಕಾಲ: 01:30 ನಿಂದ 03:00 ವರೆಗೂ ಯಮಗಂಡ: 06:00 ನಿಂದ 07:30 ವರೆಗೂ ಗುಳಿಕ ಕಾಲ: 09:00 ನಿಂದ 10:30 ವರೆಗೂ ಅಮೃತಕಾಲ: 08.04 PM to 09.38 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:38 ನಿಂದ ಮ.12:23 ವರೆಗೂ ಮೇಷ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಹೋದ್ಯೋಗಿಗಳಿಂದ ತೊಂದರೆ ಎದುರಿಸಿವಿರಿ, ರಾಜಕಾರಣಿಗಳಿಗೆ ಪದವಿಗ್ರಹಣ,…

Read More

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆದ ವಿಶ್ವಕಪ್ ಸೆಮಿಫೈನಲ್ ಮೊದಲ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲ್ಯಾಂಡ್ ವಿರುದ್ಧ 70 ರನ್ ಗಳಿಂದ ಗೆಲುವು ದಾಖಲಿಸಿದೆ. ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡ, ವಿರಾಟ್ ಕೊಹ್ಲಿ, ಶ್ರೇಯಸ್ ಅವರ ಉತ್ತಮ ಇನ್ನಿಂಗ್ಸ್ ನಿಂದ 50 ಓವರ್ ಗಳಲ್ಲಿ 4 ವಿಕೆಟ್ ಗಳ ನಷ್ಟಕ್ಕೆ 397 ರನ್ ಗಳಿಸಿ ಉತ್ತಮ ಟಾರ್ಗೆಟ್ ನೀಡಿತ್ತು. ಇದನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್ ತಂಡ, ಉತ್ತಮವಾಗಿಯೇ ಆರಂಭ ಮಾಡಿದರು ಕೂಡ ಭಾರತ ನೀಡಿದ ಗುರಿ ತಲುಪಲಾಗದೇ 48 ಓವರ್ ಗಳಲ್ಲಿ 10 ವಿಕೆಟ್ ಗಳ ನಷ್ಟಕ್ಕೆ 327 ರನ್ ಗಳಿಸಲಷ್ಟೇ ಶಕ್ತವಾಗಿದೆ. ಈ ಮೂಲಕ ಭಾರತ ತಂಡ 70 ರನ್ ಗಳಿಂದ ಗೆದ್ದು ಬೀಗಿದೆ. ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಉತ್ತಮ ಆರಂಭ ಪಡೆಯಿತು. 50 ಓವರ್ ಗಳಲ್ಲಿ4 ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿ ಬೃಹತ್ ಗುರಿಯನ್ನು ಕೇನ್ ವಿಲಿಯಮ್ಸನ್ ಪಡೆಯ ಮುಂದಿಟ್ಟಿತು.…

Read More